Tag: Forest Officials

  • ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

    ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

    ಬಳ್ಳಾರಿ: ಬಿಸಿಲಿನ ಝಳಕ್ಕೆ ಕಾದು ಕೆಂಡವಾಗಿದ್ದ ತುಂಗಭದ್ರಾ ಡ್ಯಾಂ (Tungabhadra Dam) ಬಳಿಯ ಗುಡ್ಡದಲ್ಲಿ ಬುಧವಾರ ಸಂಜೆ ಬೆಂಕಿ (Fire) ಕಾಣಿಸಿಕೊಂಡಿದೆ.

    ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಹೆ 50ರ ಪಕ್ಕದಲ್ಲಿರೋ ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಗುಡ್ಡ ಧಗಧಗನೆ ಹೊತ್ತಿ ಉರಿದಿದೆ. ಇದನ್ನೂ ಓದಿ: ಹಾವೇರಿಯಿಂದ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಗುರುಸ್ವಾಮಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿರುವ ಅರಣ್ಯಾಧಿಕಾರಿಗಳು ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಅಥವಾ ಬಿಡಿ, ಸಿಗರೇಟ್ ಕಿಡಿ ಬಿದ್ದಿರಬಹುದೆಂದು ಶಂಕಿಸಿದ್ದಾರೆ. ಇದನ್ನೂ ಓದಿ: Amur Falcon | ಸೈಬೀರಿಯಾ To ಆಫ್ರಿಕಾ 22 ಸಾವಿರ ಕಿ.ಮೀ ಪ್ರಯಾಣ – ವಿಶೇಷ ಆಹಾರಕ್ಕೆ ಭಾರತದಲ್ಲಿ ನಿಲುಗಡೆ!

  • 30 ಲಕ್ಷ ರೂ. ಮೌಲ್ಯದ ಆನೆ ದಂತ ಸಾಗಿಸುತ್ತಿದ್ದ ಇಬ್ಬರ ಬಂಧನ

    30 ಲಕ್ಷ ರೂ. ಮೌಲ್ಯದ ಆನೆ ದಂತ ಸಾಗಿಸುತ್ತಿದ್ದ ಇಬ್ಬರ ಬಂಧನ

    – ಎರಡು ಆನೆ ದಂತ ವಶಕ್ಕೆ ಪಡೆದ ಅಧಿಕಾರಿಗಳು

    ಮಂಗಳೂರು: ಆನೆ ದಂತ ಕಳವು ಮಾಡಿ ಮಾರುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಪುತ್ತೂರು ಅರಣ್ಯ ಸಂಚಾರ ದಳವು ಇಬ್ಬರನ್ನು ಬಂಧಿಸಿದೆ.

    ಮಡಿಕೇರಿ ನಿವಾಸಿ ದಿನೇಶ್ ಹಾಗೂ ಸಕಲೇಶಪುರದ ನಿವಾಸಿ ಕುಮಾರ್ ಬಂಧಿತ ಆರೋಪಿಗಳು. ಪುತ್ತೂರು ಅರಣ್ಯ ಸಂಚಾರ ದಳದ ಅಧಿಕಾರಿಗಳು ಇಂದು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಬಂಧಿತರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಎರಡು ಆನೆಯ ದಂತಗಳನ್ನು ವಶಕ್ಕೆ ಪಡೆಯಲಾಗಿದೆ.

    ಆರೋಪಿಗಳು ಓಮ್ನಿ ಕಾರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪುದುಬೆಟ್ಟು ಪ್ರದೇಶದಲ್ಲಿ ಸಕಲೇಶಪುರದಿಂದ ಧರ್ಮಸ್ಥಳ ಮಾರ್ಗವಾಗಿ ಸಾಗುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು, ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 30 ಲಕ್ಷ ರೂ. ಬೆಲೆಬಾಳುವ ಎರಡು ಆನೆ ದಂತ ಪತ್ತೆಯಾಗಿವೆ.

    ಬಂಧಿತ ದಿನೇಶ್ ಹಾಗೂ ಕುಮಾರ್ ಆನೆ ದಂತ ಹಾಗೂ ಅವುಗಳನ್ನು ಸಾಗಿಸಲು ಬಳಸಿದ ಮಾರುತಿ ಓಮ್ನಿ ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು, ಆನೆಗಳನ್ನು ಕೊಂದು ಅದರ ದಂತವನ್ನು ಕದ್ದು ಮಾರುತ್ತಿದ್ದ ಬಗ್ಗೆ ಒಪ್ಪಿಕೊಂಡಿದ್ದಾರೆ. ಈ ಹಿಂದೆಯೂ ಇದೇ ರೀತಿ ಆನೆ ದಂತಗಳನ್ನು ಮಾರಾಟ ಮಾಡಿರುವ ಶಂಕೆಯಿಂದ ಅಧಿಕಾರಿಗಳು ಮತ್ತಷ್ಟು ವಿಚಾರಣೆ ನಡೆಸಿದ್ದಾರೆ.

  • 8 ಜನರನ್ನು ಕೊಂದಿದ್ದ ಒಂಟಿ ಸಲಗ ಕೊನೆಗೂ ಸೆರೆ

    8 ಜನರನ್ನು ಕೊಂದಿದ್ದ ಒಂಟಿ ಸಲಗ ಕೊನೆಗೂ ಸೆರೆ

    ಬೆಂಗಳೂರು: ಕರ್ನಾಟಕ ತಮಿಳುನಾಡಿನಲ್ಲಿ ಎಂಟು ಜನರನ್ನು ಬಲಿ ಪಡೆದಿದ್ದ ನರಹಂತಕ ಒಂಟಿ ಸಲಗವನ್ನು ಅರಣ್ಯ ಇಲಾಖೆ ಸಿಬ್ಬಂದಿ ಕುಮ್ಕಿ ಆನೆಗಳ ಸಹಾಯದೊಂದಿಗೆ ಕೊನೆಗೆ ಸೆರೆಹಿಡಿದಿದ್ದಾರೆ.

    ಈ ಆನೆಯು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅರಣ್ಯ ಪ್ರದೇಶದ ಕಾಡಂಚಿನಲ್ಲಿ ಹಾವಳಿ ಇಡುತ್ತ ಇಬ್ಬರನ್ನು ಬಲಿಪಡೆದಿತ್ತು. ತಮಿಳುನಾಡಿನ ಅರಣದಲ್ಲಿ ಬಿಡು ಬಿಟ್ಟು ಹೊಸೂರು ಸುತ್ತಮುತ್ತ ಕಾದಂಚಿನ ಗ್ರಾಮಗಳಿಗೆ ನುಗ್ಗಿ ಬೆಳೆ ನಾಶ ಮಾಡಿತ್ತು. ಅಷ್ಟೇ ಅಲ್ಲದೇ ಅಲ್ಲಿಯೂ 6 ಜನರನ್ನು ಬಲಿ ಪಡೆದು ಜನರಲ್ಲಿ ಆತಂಕ ಮೂಡಿಸಿತ್ತು.

    ನರಹಂತಕ ಒಂಟಿ ಸಲಗ ಸೆರೆಗಾಗಿ ತಮಿಳುನಾಡು ಅರಣ್ಯ ಸಿಬ್ಬಂದಿ ಕುಮ್ಕಿ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿತ್ತು. ಪ್ಯಾರಾಂಡಪಲ್ಲಿ ಅರಣ್ಯ ಪ್ರದೇಶದಲ್ಲಿ ಒಂಟಿಸಲಗವನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆ ಸಿಬ್ಬಂದಿ, ಅರವಳಿಕೆ ನೀಡುವ ಮೂಲಕ ಸೆರೆ ಹಿಡಿದಿದ್ದಾರೆ. ಬಳಿಕ ಲಾರಿ ಹತ್ತಲು ನಿರಾಕರಿಸಿದ್ದ ಸಲಗವನ್ನು ಕುಮ್ಕಿ ಆನೆಗಳು ಬಲವಂತವಾಗಿ ನುಕುವ ಮೂಲಕ ಲಾರಿಗೆ ದೂಡಿದವು.

    ಇದೇ ಒಂಟಿ ಸಲಗವನ್ನು ಕಳೆದ ವರ್ಷ ಬನ್ನೇರುಘಟ್ಟ ಸಿಬ್ಬಂದಿಯ ಸಹಾಯದೊಂದಿಗೆ ತಮಿಳುನಾಡು ಅರಣ್ಯ ಇಲಾಖೆ ಹಿಡಿದು ಹೊಗೇನೇಕಲ್ ಅರಣ್ಯ ಪ್ರದೇಶಕ್ಕೆ ಬಿಟ್ಟುಬಂದಿದ್ದರು. ಆದರೆ ಸಲಗ ಹಳ್ಳಿಗಳಲ್ಲಿ ಸುಲಭವಾಗಿ ಸಿಗುವ ಆಹಾರದ ಮೇಲೆ ಕಣ್ಣಿಟ್ಟು ಮತ್ತೆ ಇತ್ತ ಮುಖ ಮಾಡಿ 8 ಜನರನ್ನು ತುಳಿದು ಸಾಯಿಸಿತ್ತು. ಇದರಿಂದಾಗಿ ಅರಣ್ಯದಂಚಿನ ಗ್ರಾಮಸ್ಥರು ಆನೆಯನ್ನು ಹಿಡಿಯುವಂತೆ ಹಲವು ಬಾರಿ ಪ್ರತಿಭಟನೆ ನಡೆಸಿದ್ದರು. ಇದರ ಫಲವಾಗಿ ಇಂದು ತಮಿಳುನಾಡು ಅರಣ್ಯ ಇಲಾಖೆ ಸಲಗವನ್ನು ಹಿಡಿದಿದ್ದು ಮತ್ತೊಮ್ಮೆ ದೂರದ ಕಾಡಿನಲ್ಲಿ ಬಿಟ್ಟುಬರಲು ಒಯ್ದಿದ್ದೆ.

  • ಕಾಳಗದಲ್ಲಿ ಗಾಯಗೊಂಡಿದ್ದ ಚಿರತೆಯ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ

    ಕಾಳಗದಲ್ಲಿ ಗಾಯಗೊಂಡಿದ್ದ ಚಿರತೆಯ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ

    ಚಾಮರಾಜನಗರ: ಅರಣ್ಯದಲ್ಲಿ ಮತ್ತೊಂದು ಚಿರತೆಯೊಂದಿಗಿನ ಕಾಳಗದಲ್ಲಿ ಗಾಯಗೊಂಡಿದ್ದ ಚಿರತೆಯೊಂದು ಚಾಮರಾಜನಗರ ಸಮೀಪದ ಹೊನ್ನಳ್ಳಿ ಬಳಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿತ್ತು.

    ಕಳೆದ ನಾಲ್ಕೈದು ದಿನಗಳಿಂದ ಹೊನ್ನಳ್ಳಿ ಹೊರಭಾಗದ ಜಮೀನುಗಳಲ್ಲಿ ಅಡ್ಡಾಡುತ್ತಿದ್ದ ಈ ಚಿರತೆ ಸೋಮವಾರ ತೋಟವೊಂದರ ಮನೆಯ ಬಾಗಿಲಿನ ಬಳಿ ಮಲಗಿತ್ತು. ಬೆಳಗ್ಗೆ ಬಾಗಿಲು ತೆರೆದ ಮನೆಯವರು ಚಿರತೆ ನೋಡಿ ಗಾಬರಿಗೊಂಡು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

    ಚಾಮರಾಜನಗರದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಸ್ವಸ್ಥಗೊಂಡಿದ್ದ ಚಿರತೆಯನ್ನು ಹಗ್ಗದಿಂದ ಕಟ್ಟಿಹಾಕಿದರು. ಚಿರತೆಯ ತಲೆ ಭಾಗದಲ್ಲಿ ತೀವ್ರ ಗಾಯಗಳಾಗಿದ್ದು, ಸ್ಥಳೀಯವಾಗಿ ಅರಣ್ಯ ಇಲಾಖೆಯಲ್ಲಿ ಪಶುವೈದ್ಯರು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ಕೊಂಡೊಯ್ಯಲಾಯಿತು.

  • ಕಾಡಾನೆ ಸೆರೆ ಹಿಡಿಯುವುದರಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿ

    ಕಾಡಾನೆ ಸೆರೆ ಹಿಡಿಯುವುದರಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿ

    ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಕಿತ್ತೆಗೆರೆ ಗ್ರಾಮದಲ್ಲಿ ಕಾಡಾನೆಯೊಂದನ್ನು ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

    ಕಳೆದ ಮೂರು ದಿನಗಳಿಂದ ಕಾಡಾನೆ ಸೆರೆಗೆ ಆಲೂರು ತಾಲೂಕಿನ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಿತ್ತೆಗೆರೆ ಗ್ರಾಮದ ಸಮೀಪ 15ಕ್ಕೂ ಹೆಚ್ಚು ಕಾಡಾನೆ ಹಿಂಡನ್ನು ಗುರುತಿಸಿ ಕಾರ್ಯಾಚರಣೆಗೆ ಚಾಲನೆ ನೀಡಲಾಗಿತ್ತು. ಹೆಚ್ಚು ಉಪಟಳ ನೀಡುತ್ತಿದ್ದ ಸುಮಾರು 30 ರಿಂದ 35 ವರ್ಷದೊಳಗಿನ ಗಂಡಾನೆಯೊಂದನ್ನು ಇದೀಗ ಸೆರೆ ಹಿಡಿಯಲಾಗಿದೆ.

    ಸಾಕಾನೆಗಳೊಂದಿಗೆ ಕಾರ್ಯಾಚರಣೆ ನಡೆಸುವ ಮೂಲಕ ಅರಣ್ಯ ಇಲಾಖೆ ಎರಡು ಆನೆಗಳನ್ನು ಹಿಡಿಯುವ ಕಾರ್ಯಾಚರಣೆ ಮುಂದಾಗಿದೆ. ಅರವಳಿಕೆ ನೀಡಿದ 25 ನಿಮಿಷಗಳಲ್ಲಿ ಯೋಗೇಶ್ ಎಂಬವರ ಕಾಫಿ ತೋಟದಲ್ಲಿ ಕಾಡಾನೆ ನೆಲಕ್ಕುರುಳಿತು. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಾಕಾನೆಗಳ ಸಹಕಾರದಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಈಗ ಸೆರೆಯಾಗಿರುವ ಆನೆಯನ್ನು 2 ಸಾಕಾನೆಗಳ ಜೊತೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಲ್ಲಿರುವ ಆನೆಧಾಮಕ್ಕೆ ಕಳುಹಿಸಿಕೊಡಲಾಗಿದೆ. ಎರಡು ದಿನಗಳ ನಂತರ ಮತ್ತೊಂದು ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗುವುದೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಡಿಯೋ: ಕೆಸರಿನಲ್ಲಿ ಬಿದ್ದ ಆನೆಮರಿಯನ್ನು ಹೆಗಲ ಮೇಲೆ ಹೊತ್ಕೊಂಡು ತಾಯಿ ಬಳಿ ಸೇರಿಸಿದ ಅರಣ್ಯ ಸಿಬ್ಬಂದಿ

    ವಿಡಿಯೋ: ಕೆಸರಿನಲ್ಲಿ ಬಿದ್ದ ಆನೆಮರಿಯನ್ನು ಹೆಗಲ ಮೇಲೆ ಹೊತ್ಕೊಂಡು ತಾಯಿ ಬಳಿ ಸೇರಿಸಿದ ಅರಣ್ಯ ಸಿಬ್ಬಂದಿ

    ಊಟಿ: ಅರಣ್ಯ ಸಿಬ್ಬಂದಿ ಕೆಸರಿನಲ್ಲಿ ಬಿದ್ದ ಆನೆಮರಿಯನ್ನು ರಕ್ಷಿಸಿ ನಂತರ ಹೆಗಲ ಮೇಲೆ ಹೊತ್ತುಕೊಂಡು ತಾಯಿಯ ಬಳಿ ಸೇರಿಸಿರುವ ಘಟನೆ ಊಟಿಯ ಮೆಟ್ಟುಪಾಳ್ಯಂನ ನೆಲ್ಲಿಮಲದಲ್ಲಿ ನಡೆದಿದೆ.

    ವ್ಯಕ್ತಿಯೊಬ್ಬರು ಟ್ರಾಕ್ಟರ್ ನಲ್ಲಿ ಮೆಟ್ಟುಪಾಳ್ಯಂನಲ್ಲಿರುವ ವಾನಬದ್ರ ಕಾಳಿಯಮ್ಮ ದೇವಸ್ಥಾನದಿಂದ ತೆಕ್ಕಮ್ಮಪಟ್ಟಿಗೆ ಹೋಗುವಾಗ ಕಾಡೆನೆಯ ಗುಂಪು ರಸ್ತೆಯನ್ನು ತಡೆದಿತ್ತು. ಎಷ್ಟೇ ಹಾರ್ನ್ ಮಾಡಿದರೂ ಆನೆಗಳು ಅಲ್ಲಿಂದ ಕದಲಲಿಲ್ಲ. ಬದಲಿಗೆ ವ್ಯಕ್ತಿಯ ಮೇಲೆ ದಾಳಿಗೆ ಮುಂದಾಗಿದ್ದವು. ಹೀಗಾಗಿ ತಕ್ಷಣ ಅವರು ಅರಣ್ಯ ಅಧಿಕಾರಿಗಳನ್ನ ಸಂರ್ಪಕಿಸಿದರು. ನಂತರ ಪಟಾಕಿ ಹೊಡೆಯುವ ಮೂಲಕ ಆನೆಗಳನ್ನು ಕಾಡಿಗೆ ಕಳುಹಿಸಿದ್ದರು. ಆಗ ಆನೆಮರಿಯೊಂದು ಕೂಗಿಕೊಳ್ಳುತ್ತಿದ್ದುದು ಕೇಳಿಸಿತ್ತು. ಹತ್ತಿರದಲ್ಲಿದ್ದ ಕಾಲುವೆಯಲ್ಲಿ ಆನೆಮರಿ ಕೆಸರಿನಲ್ಲಿ ಸಿಲುಕಿಕೊಂಡು ತಾಯಿಯಿಂದ ಬೇರ್ಪಟ್ಟಿತ್ತು.

    ಆನೆಮರಿಯ ತಾಯಿ ರಸ್ತೆಯ ಇನ್ನೊಂದು ಬದಿಯಲ್ಲಿ ತನ್ನ ಮರಿಗಾಗಿ ಕಾಯುತ್ತಿದೆ ಎಂಬ ವಿಷಯ ತಿಳಿದ ತಕ್ಷಣ ಅರಣ್ಯ ಸಿಬ್ಬಂದಿ ಆನೆಮರಿಯನ್ನು ರಕ್ಷಣೆ ಮಾಡಿದ್ದರು. ನಂತರ ಆನೆಮರಿ ನಡೆಯಲಾಗದನ್ನು ಗಮನಿಸಿದ ಅಧಿಕಾರಿಯೊಬ್ಬರು ತನ್ನ ಹೆಗಲ ಮೇಲೆ ಹೊತ್ತುಕೊಂಡು ತಾಯಿಯ ಬಳಿ ಸೇರಿಸಿದ್ದಾರೆ.

    ಆದ್ರೆ ಆನೆಮರಿಗೆ ತನ್ನನ್ನು ಹೊತ್ತುಕೊಂಡು ಬಂದ ಸಿಬ್ಬಂದಿಯ ಮೇಲೆ ಪ್ರೀತಿಯಾಗಿ ಅವರ ಬಳಿಯೇ ಹಿಂದಿರುಗಿ ಬರುತ್ತಿತ್ತು. ಇದು ಎರಡೂ ದಿನಗಳ ಕಾಲ ನಡೆದಿದ್ದು, ಸಿಬ್ಬಂದಿ ಆನೆಮರಿಗೆ ಲ್ಯಾಕ್ಟೊಜೆನ್ ಗ್ಲೂಕೊಸ್ ಹಾಗೂ ಎಳನೀರು ನೀಡುತ್ತಿದ್ದರು. ನಂತರ ಗುರುವಾರ ಸಂಜೆ ತಾಯಿ ಆನೆ ಬಂದಿದ್ದು, ಮರಿಯನ್ನು ತಾಯಿಯ ಬಳಿ ಸೇರಿಸಿದ್ದಾರೆ. ತಾಯಿ ಹಾಗೂ ಮರಿಯಾನೆಯ ಪುರ್ನ ಮಿಲನದಿಂದ ಅರಣ್ಯ ಸಿಬ್ಬಂದಿ ಸಂತೋಷಪಟ್ಟಿದ್ದಾರೆ.