Tag: forest

  • ಪೊಲೀಸ್ ಜೀಪ್ ಏರಿದ ನಾಗರಾಜನ ರಕ್ಷಣೆ

    ಪೊಲೀಸ್ ಜೀಪ್ ಏರಿದ ನಾಗರಾಜನ ರಕ್ಷಣೆ

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವೃತ್ತನೀರಿಕ್ಷಕ ಎಂ.ಬಿ.ನವೀನ್ ಕುಮಾರ್ ಪೊಲೀಸ್ ಜೀಪಿನಲ್ಲಿ ಪತ್ತೆಯಾಗಿರುವ ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.

    ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಕರ್ತವ್ಯ ನಿಮಿತ್ತ ಹೊರ ಹೋಗಿ ಠಾಣೆಗೆ ವಾಪಾಸ್ಸಾಗುತ್ತಿದ್ದಾಗ ಬಸವಭವನದ ಬಳಿ ಬೈಕ್ ಸವಾರರೊಬ್ಬರು ಪೊಲೀಸ್ ಜೀಪಿನಲ್ಲಿ ಹಾವು ಇರೋದನ್ನ ಕಂಡಿದ್ದಾರೆ. ಕೂಡಲೇ ಪೊಲೀಸ್ ಜೀಪ್ ತಡೆದು ಸರ್ಕಲ್ ಇನ್ಸ್‍ಪೆಕ್ಟರ್‍ಗೆ ಮಾಹಿತಿ ನೀಡಿ ವಾಹನ ನಿಲ್ಲಿಸಿದ್ದಾರೆ.

    ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗರಕ್ಷಕ ಟೂಲ್ಸ್ ಬಾಕ್ಸ್ ಸೇರಿದ್ದ ಹಾವನ್ನ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಸೆರೆ ಸಿಕ್ಕ ಹಾವಿನ ಹೆಸರು ರಾಮಬಾಣದ ಹಾವು ಅಂತ ಕರೆಯಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಾವು ಎಲ್ಲಿ ಯಾವಾಗ ಪೊಲೀಸ್ ಜೀಪ್ ಏರಿತೋ ಏನೋ ಆದರೆ ಅದೃಷ್ಟವಶಾತ್ ಹಾವಿನಿಂದ ಪೊಲೀಸರಿಗೆ ಯಾವುದೇ ತೊಂದರೆಯಾಗಿಲ್ಲ.

  • ಹೋಮ್ ವರ್ಕ್ ಕಿರಿ ಕಿರಿ ತಪ್ಪಿಸಿಕೊಳ್ಳಲು ಅತ್ಯಾಚಾರದ ಕಥೆ ಹಣೆದ ವಿದ್ಯಾರ್ಥಿನಿ

    ಹೋಮ್ ವರ್ಕ್ ಕಿರಿ ಕಿರಿ ತಪ್ಪಿಸಿಕೊಳ್ಳಲು ಅತ್ಯಾಚಾರದ ಕಥೆ ಹಣೆದ ವಿದ್ಯಾರ್ಥಿನಿ

    ಕಾರವಾರ: ಶಾಲೆಯಲ್ಲಿ ಕೊಟ್ಟ ಹೋಮ್ ವರ್ಕ್ ನಿಂದ ತಪ್ಪಿಸಿಕೊಳ್ಳಲು ಪಾಲಕರ ಕಣ್ತಿಪ್ಪಿಸಿ ಕಾಡಿನಲ್ಲಿ ಅಡಗಿ ಕುಳಿ ವಿದ್ಯಾರ್ಥಿನಿ ಅತ್ಯಾಚಾರದ ನಾಟಕವಾಡಿದ್ದಾಳೆ. ವಿದ್ಯಾರ್ಥಿನಿಯ ಅಸಲಿಯತ್ತನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಬಯಲು ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ನಡೆದಿದೆ.

    ಹತ್ತನೇ ತರಗತಿ ಓದುತಿದ್ದ ವಿದ್ಯಾರ್ಥಿನಿ ಶಾಲೆಯಲ್ಲಿ ನೀಡಿದ ಹೋಮ್ ವರ್ಕ ಸರಿಯಾಗಿ ಮಾಡುವುದಿಲ್ಲ ಎಂದು ಮುಖ್ಯ ಶಿಕ್ಷಕರು ಪಾಲಕರಿಗೆ ದೂರು ನೀಡಿದ್ದರು. ಹೀಗಾಗಿ ವಿದ್ಯಾರ್ಥಿನಿಯನ್ನ ಪಾಲಕರು ತರಾಟೆ ತೆಗೆದುಕೊಂಡಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿನಿ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾಳೆ.

    ಕೋಪಗೊಂಡ ವಿದ್ಯಾರ್ಥಿನಿ ಮನೆಯ ಹಿಂಭಾಗದಲ್ಲಿರುವ ಕಾಡಿನಲ್ಲಿ ಅವಿತು ಕುಳಿತಿದ್ದಳು. ಈ ವೇಳೆ ಮಗಳು ಕಾಣದಿದ್ದಾಗ ಪೋಷಕರು ಅಪಹರಣವಾಗಿರಬೇಕು ಎಂದು ಯಲ್ಲಾಪುರ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಈಕೆಗಾಗಿ ಮನೆಯ ಸುತ್ತಮುತ್ತ ಕಾಡಿನಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿನಿ ತಾನೇ ಕೈ ಕಾಲುಗಳಿಗೆ ಹಗ್ಗ ಸುತ್ತಿಕೊಂಡು ಅತ್ಯಾಚಾರದ ಕಥೆ ಹಣೆದಿದ್ದಾಳೆ.

    ವಿದ್ಯಾರ್ಥಿನಿಯನ್ನು ಠಾಣೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರವಾಗಿಲ್ಲ ಎಂದು ವರದಿ ಬಂದಿದೆ. ಈ ವೇಳೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ನಡೆಸಿದಾಗ ಈಕೆಯ ನಿಜವಾದ ಬಣ್ಣ ಬಯಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅರಣ್ಯ ಇಲಾಖೆಗೆ ಒಳಪಟ್ಟಿರುವ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕಂದಾಯ ಇಲಾಖೆಗೆ ಹಸ್ತಾಂತರ: ಲಿಂಬಾವಳಿ

    ಅರಣ್ಯ ಇಲಾಖೆಗೆ ಒಳಪಟ್ಟಿರುವ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕಂದಾಯ ಇಲಾಖೆಗೆ ಹಸ್ತಾಂತರ: ಲಿಂಬಾವಳಿ

    ಬೆಂಗಳೂರು: ಅರಣ್ಯ ಇಲಾಖೆಗೆ ಒಳಪಟ್ಟಿರುವ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಿದ್ದೇವೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆಯಿಂದಲೇ ಮಲೆನಾಡು ಭಾಗದ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಮಲೆನಾಡು ಭಾಗದ ಶಾಸಕರ ಸಭೆ ಕರೆದಿದ್ದೆ. ಮಲೆನಾಡು ಭಾಗದ ಅರಣ್ಯಕ್ಕೆ ಸಂಬಂಧಿಸಿದ ಸಭೆ ಕರೆಯುತ್ತೇನೆ ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಭರವಸೆ ಕೊಟ್ಟಿದ್ದೆ. ಅದರಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಜೆಡಿಎಸ್ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದ ಇಪ್ಪತ್ತು ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದರು.

    ಮಲೆನಾಡಿನ ಕೆಲವು ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಡೆತಡೆ ಕೂಡಾ ಇದೆ. ರಾಷ್ಟ್ರೀಯ ಅರಣ್ಯಕ್ಕೆ ಒಳಪಟ್ಟಿದ್ದರೆ ಕೇಂದ್ರದ ಅನುಮತಿ ಪಡೆಯಬೇಕು. ಇದು ರಾಜ್ಯದ ಪ್ರದೇಶವಾಗಿದ್ದರೆ ನಮ್ಮ ಅರಣ್ಯಾಧಿಕಾರಿಗೆ ಇದರ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಇದೆ ಎಂದರು.

    ಹಕ್ಕು ಪತ್ರ ವಿತರಣೆ : ಅರಣ್ಯ ವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡುವ ವ್ಯವಸ್ಥೆ ಯನ್ನು ಕಂದಾಯ ಇಲಾಖೆ ಜೊತೆಗೂಡಿ ಮಾಡುತ್ತೇವೆ ಎಂದು ತಿಳಿಸಿದರು. ಉತ್ತರ ಕನ್ನಡ ಭಾಗದಲ್ಲಿ ಈ ಸಮಸ್ಯೆ ಸ್ವಲ್ಪ ಹೆಚ್ಚಾಗಿದೆ. ಕೆಲವು ಅರಣ್ಯ ಗಳಲ್ಲಿ ಇರುವ ಗ್ರಾಮಗಳು ಕಾಡಿನಿಂದ ಹೊರಗೆ ಸ್ಥಳಾಂತರಿಸಲು ಹಣಕಾಸಿನ ಕೊರತೆ ಇದೆ ಎಂದ ಸಚಿವರು, ಸ್ಥಳಾಂತರಕ್ಕೆ ಅರಣ್ಯ ಗ್ರಾಮ ವಾಸಿಗಳು ಒಪ್ಪಿದ್ದಾರೆ. ಮುಂದಿನ ಬಜೆಟ್ ನಲ್ಲಿ ಹಣ ಮಂಜೂರಾದರೆ ಈ ಕಾರ್ಯವನ್ನು ಪೂರ್ಣ ಗೊಳಿಸಲಾಗುವುದು ಎಂದು ಹೇಳಿದರು.

    ಆನೆ ಕಾರಿಡಾರ್ : ಆನೆ ಮತ್ತು ಮಾನವ ನಡುವಿನ ಸಂಘರ್ಷ ಹೆಚ್ಚಾಗುತ್ತಿದೆ. ಸಾಕಷ್ಟು ಮಂದಿ ಇದರಿಂದ ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಲು ಆನೆ ಕಾರಿಡಾರ್ ಸುತ್ತ ರೈಲು ಕಂಬಿಗಳನ್ನು ಅಳವಡಿಸಲಾಗಿದೆ. ಪ್ರಾಯೋಗಿಕವಾಗಿ ಯಶಸ್ಸು ಕಂಡಿದ್ದೇವೆ. ಇದನ್ನು ಸಂಪೂರ್ಣವಾಗಿ ಮುಗಿಸುವ ನಿಟ್ಟಿನಲ್ಲಿ ಕೇಂದ್ರ ಅರಣ್ಯ ಸಚಿವ ಮತ್ತು ರೈಲ್ವೆ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

    ವರದಿಯನ್ನು ಒಪ್ಪಿಲ್ಲ : ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಒಪ್ಪಿಕೊಂಡಿಲ್ಲ. ಹಾಗಾಗಿ, ಅದರ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವ ಲಿಂಬಾವಳಿ ಸ್ಪಷ್ಟಪಡಿಸಿದರು.

  • ಜಮೀನಿಗೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಚಿರತೆ ದಾಳಿ

    ಜಮೀನಿಗೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಚಿರತೆ ದಾಳಿ

    – ಗ್ರಾಮಸ್ಥರಲ್ಲಿ ಆತಂಕ

    ಹಾಸನ: ಜಮೀನಿಗೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿ ಬೋವಿಕಾಲೋನಿಯಲ್ಲಿ ನಡೆದಿದೆ.

    ಕಿರಣ್ ಮತ್ತು ಚಂದ್ರಮ್ಮ ಚಿರತೆ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಅರಸೀಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಇಂದು ಬೆಳಗ್ಗೆ 7.30ರ ಸಮಯದಲ್ಲಿ ಜಾನುವಾರುಗಳೊಂದಿಗೆ ಜಮೀನಿಗೆ ತೆರಳುತ್ತಿದ್ದಾಗ ಚಿರತೆ ದಾಳಿ ಮಾಡಿದೆ. ಹಗಲು ವೇಳೆಯೇ ಚಿರತೆ ಕಾಣಿಸಿಕೊಂಡು ದಾಳಿ ನಡೆಸುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ದಾಳಿ ಮಾಡಿದ ಚಿರತೆಯ ಫೋಟೋವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಆದಷ್ಟು ಬೇಗ ಅರಣ್ಯ ಇಲಾಖೆ ಈ ಬಗ್ಗೆ ಗಮನಹರಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಜನರು ಆಗ್ರಹಿಸಿದ್ದಾರೆ.

    ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಮೇಲೆ ಚಿರತೆ ಕಾಣಿಸಿಕೊಂಡಿದೆ. ಈ ಭಾಗದಲ್ಲಿ ಬೆಟ್ಟಗಳು ಇರುವುದರಿಂದ ಚಿರತೆಗಳು ಇಲ್ಲಿ ಹೆಚ್ಚಾಗಿವೆ. ಈ ಹಿಂದೆ ರಾತ್ರಿ ವೇಳೆ ಪಟ್ಟಣದೊಳಗೆ ಬಂದು ನಾಯಿಯನ್ನು ಹೊತ್ತೊಯ್ದಿತ್ತು. ಅಲ್ಲದೆ ಮಠದ ಆವರಣದಲ್ಲೂ ಓಡಾಡಿ ಆತಂಕ ಸೃಷ್ಟಿಸಿತ್ತು. ಬೆಟ್ಟದ ತಪ್ಪಲಿನಲ್ಲಿ ಗ್ರಾಮಸ್ಥರು ಪ್ರತಿನಿತ್ಯ ದನಕರುಗಳನ್ನು ಮೇಯಿಸುತ್ತಾರೆ. ಈ ಬಗ್ಗೆ ಗಮನ ಹರಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

  • ಮೂಡಿಗೆರೆಯ ಗ್ರಾಮದಲ್ಲಿ ಒಂಟಿ ಸಲಗ ಓಡಾಟ – ಆತಂಕದಲ್ಲಿ ಸ್ಥಳೀಯರು

    ಮೂಡಿಗೆರೆಯ ಗ್ರಾಮದಲ್ಲಿ ಒಂಟಿ ಸಲಗ ಓಡಾಟ – ಆತಂಕದಲ್ಲಿ ಸ್ಥಳೀಯರು

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ-ಹೆಸಗೋಡು ಗ್ರಾಮಗಳ ಅಂಚಿನಲ್ಲಿ ಒಂಟಿ ಸಲಗ ಘೀಳಿಡುತ್ತಾ ನಡೆಯುತ್ತಿರುವುದನ್ನು ಕಂಡು ಹಳ್ಳಿಗರು ಆತಂಕದಲ್ಲಿ ಬದುಕುತ್ತಿದ್ದಾರೆ.

    ಗುತ್ತಿ, ಬೈರಾಪುರ, ಗೌಡಹಳ್ಳಿ, ಸಾರಗೋಡು, ಹೆಸಗೋಡು ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಆನೆ ಕಾಟ ಹೆಚ್ಚಾಗಿದೆ. ಎರಡ್ಮೂರು ಜನ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ನೂರಾರು ಜನ ಮನೆ-ತೋಟ-ಗದ್ದೆಗಳನ್ನ ಕಳೆದುಕೊಂಡಿದ್ದಾರೆ. ತೋಟ, ಗದ್ದೆಗಳಲ್ಲಿ ದಾಂಧಲೆ ಮಾಡುತ್ತಿದ್ದ ಒಂಟಿ ಸಲಗ ಇದೀಗ ಗ್ರಾಮದ ಅಂಚಿಗೂ ಕಾಲಿಟ್ಟಿರೋದು ಹಳ್ಳಿಗರಲ್ಲಿ ಆತಂಕವನ್ನುಂಟು ಮಾಡಿದೆ.

    ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಇಂದಿಗೂ ನಿಂತಿಲ್ಲ. ಮೂರ್ನಾಲ್ಕು ಕಾಡಾನೆಗಳ ಹಿಂಡು ತಾಲೂಕಿನ ಗ್ರಾಮೀಣ ಭಾಗದಲ್ಲಿ ದಾಳಿ ಮಾಡಿ ಕಾಫಿ, ಅಡಿಕೆ, ಮೆಣಸು, ಬಾಳೆ ಸೇರಿದಂತೆ ಅನೇಕ ಬೆಳೆಗಳನ್ನ ಹಾಳು ಮಾಡುತ್ತಿವೆ. ಜೀವ ಉಳಿಸಿಕೊಳ್ಳುತ್ತಿದ್ದ ಜನರಿಗೆ ಇದೀಗ ಆನೆಗಳು ಗ್ರಾಮದಂಚಿಗೆ ಬರುತ್ತಿರೋದು ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನ ಓಡಿಸಲು ಅಥವ ಹಿಡಿದು ಸ್ಥಳಾಂತರಿಸಲು ಮೀನಾಮೇಷ ಎಣಿಸುತ್ತಿದ್ದಾರೆ ಎಂಬ ಸ್ಥಳಿಯರ ಆರೋಪಕ್ಕೂ ದಶಕಗಳ ಇತಿಹಾಸವಿದೆ. ಸ್ಥಳಿಯರು ಆನೆಗಳು ಬಂದಿವೆ ಎಂದು ಫೋನ್ ಮಾಡಿದ ಬಹಳ ಹೊತ್ತಿನ ನಂತರ ಬರುವ ಅಧಿಕಾರಿಗಳು ಎರಡು ಪಟಾಕಿ ಸಿಡಿಸಿ ನಮ್ಮ ಕೈಗೆ ಪಟಾಕಿ ಕೊಟ್ಟು ಹೋಗುತ್ತಾರೆ.

    ಆನೆಗಳನ್ನ ಹಿಡಿದು ಸ್ಥಳಾಂತರಿಸುವುದಿಲ್ಲ. ಒಂದು ವಾರ-ಹದಿನೈದು ದಿನ ಬಳಿಕ ಮತ್ತೆ ಬರುತ್ತವೆ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಒಂಟಿ ಸಲಗ ಗ್ರಾಮದ ಅಂಚಿಗೆ ಬಂದಿರುವುದರಿಂದ ಹಳ್ಳಿಗರ ಆತಂಕ ಹೆಚ್ಚಾಗಿದ್ದು ಹೊಲ-ಗದ್ದೆ ತೋಟಗಳಿಗೆ ಕೆಲಸಕ್ಕೆ ಹೋಗಲು ಭಯಪಡುವ ಸ್ಥಿತಿ ನಿಮಾರ್ಣವಾಗಿದೆ. ಅರಣ್ಯ ಇಲಾಖೆ ಇತ್ತ ಗಮನ ಹರಿಸಿ ಆನೆ ಓಡಿಸುವ ಬದಲು ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

  • ವಿದ್ಯಾರ್ಥಿಯ ಜಸ್ಟ್ ಒಂದು ಫೋನ್ ಕಾಲ್ – ವ್ಯಕ್ತಿಗೆ ಬಿತ್ತು 62 ಸಾವಿರ ದಂಡ

    ವಿದ್ಯಾರ್ಥಿಯ ಜಸ್ಟ್ ಒಂದು ಫೋನ್ ಕಾಲ್ – ವ್ಯಕ್ತಿಗೆ ಬಿತ್ತು 62 ಸಾವಿರ ದಂಡ

    ಹೈದರಾಬಾದ್: ಹೊಸ ಮನೆ ನಿರ್ಮಾಣಕ್ಕೆ 40 ವರ್ಷಗಳಿಂದ ಬೆಳೆದು ನಿಂತಿರುವ ಮರ ಅಡ್ಡಿಯಾಗುತ್ತಿತ್ತು, ಎಂದು ಬೇವಿನ ಮರ ಕತ್ತರಿಸುತ್ತಿದ್ದ ವ್ಯಕ್ತಿಗೆ 62 ಸಾವಿರ ರೂಪಾಯಿ ದಂಡವನ್ನು ವಿಧಿಸಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಜಿ ಸಂತೋಷ್ ರೆಡ್ಡಿ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿಯನ್ನು ನೀಡದೆ ಮರಕತ್ತರಿಸಿದ್ದರು. ಮರ ಕತ್ತರಿಸುವುದನ್ನು ಗಮನಿಸಿದ ವಿದ್ಯಾರ್ಥಿಯೊಬ್ಬ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ತಿಳಿಸಿ ಮರ ಕಡಿಯುತ್ತಿದ್ದವರ ವಿರುದ್ಧ ದೂರು ನೀಡಿದ್ದ.

    ತಕ್ಷಣ ಜಾಗೃತರಾದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ವ್ಯಕ್ತಿ ಮರ ಕಡಿಯಲು ಅನುಮತಿಯನ್ನು ಪಡೆದಿರಲಿಲ್ಲ. ಹೀಗಾಗಿ 62,075 ರೂಪಾಯಿ ದಂಡವನ್ನು ವಿಧಿಸಿದ್ದಾರೆ. ಮರ ಕಡಿದವರ ವಿರುದ್ಧ ಕ್ರಮವನ್ನು ಕೈ ಗೊಂಡಿದ್ದಾರೆ.

    ಮರ ಕಡಿದ ವಿಷಯವನ್ನು ಸಂಬಂಧ ಪಟ್ಟ ಇಲಾಖೆಗೆ ತಿಳಿಸಿದ ಬಾಲಕನ ಜವಾಬ್ದಾರಿಯುತವಾಗಿ ವರ್ತಿಸಿದ್ದಕ್ಕೆ ಅರಣ್ಯ ಇಲಾಖೆ ಹಾಗೂ ಸುತ್ತಮುತ್ತಲಿನ ಜನರು ಅಭಿನಂದನೆ ಸಲ್ಲಿಸಿದ್ದಾರೆ.

  • ಸಫಾರಿಯಲ್ಲಿ ಮೂರು ಹುಲಿಗಳ ದರ್ಬಾರ್ – ಮೊಬೈಲ್‍ನಲ್ಲಿ ಸೆರೆಹಿಡಿದ ಪ್ರವಾಸಿಗರು

    ಸಫಾರಿಯಲ್ಲಿ ಮೂರು ಹುಲಿಗಳ ದರ್ಬಾರ್ – ಮೊಬೈಲ್‍ನಲ್ಲಿ ಸೆರೆಹಿಡಿದ ಪ್ರವಾಸಿಗರು

    ಚಾಮರಾಜನಗರ: ಜಿಲ್ಲೆಯ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ವೇಳೆ ಮೂರು ಹುಲಿಗಳು ಒಟ್ಟಾಗಿ ಹೆಜ್ಜೆ ಹಾಕುತ್ತಿರುವ ವೀಡಿಯೋವನ್ನು ಪ್ರವಾಸಿಗರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

     

    ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಕೆ.ಗುಡಿ ಸಮೀಪದ ಆನೆಕೆರೆಯಲ್ಲಿ ಸಫಾರಿ ವೇಳೆ ಮೂರು ಹುಲಿಗಳ ದರ್ಶನದಿಂದ ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ. ಮೂರು ಹುಲಿಗಳನ್ನು ಒಟ್ಟಿಗೆ ನೋಡಿದ ಪ್ರವಾಸಿಗರು ಸಂತೋಷ ಪಟ್ಟಿದ್ದಾರೆ.

    ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಸಂತತಿ ಹೆಚ್ಚಾಗ್ತಿರೋ ಸಂಗತಿ ಹುಲಿಗಳ ದರ್ಶನದಿಂದ ತಿಳಿದು ಬಂದಿದೆ. ಕೆ.ಗುಡಿ ಸಫಾರಿ ರಸ್ತೆಯಲ್ಲಿ ರಾಜ ಗಾಂಭೀರ್ಯದಲ್ಲಿ ಮೂರು ಹುಲಿಗಳ ನಡಿಗೆ ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ.

  • ಬೆಟ್ಟಕ್ಕೆ ಬೆಂಕಿ – ಹೆದರಿ ಗ್ರಾಮಕ್ಕೆ ಬಂದ ಚಿರತೆ

    ಬೆಟ್ಟಕ್ಕೆ ಬೆಂಕಿ – ಹೆದರಿ ಗ್ರಾಮಕ್ಕೆ ಬಂದ ಚಿರತೆ

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಹಲವು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯದಲ್ಲಿದ್ದ ಚಿರತೆ, ಬೆಂಕಿಗೆ ಹೆದರಿ ಗ್ರಾಮವನ್ನು ಸೇರಿದ ಘಟನೆ ನಡೆದಿದೆ.

    ಶುಕ್ರವಾರ ರಾತ್ರಿ 9.30ರ ಸಮಯದಲ್ಲಿ ಬೆಟ್ಟಕ್ಕೆ ಬೆಂಕಿ ಇಟ್ಟಿರುವುದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದ ಕಾರಣ ಹಾಗೂ ಬೆಟ್ಟದಲ್ಲಿನ ಹುಲ್ಲು ಒಣಗಿರುವ ಕಾರಣ ತ್ವರಿತಗತಿಯಲ್ಲಿ ಬೆಂಕಿ ಇಡೀ ಬೆಟ್ಟ ವ್ಯಾಪಿಸಿದೆ ಎನ್ನಲಾಗುತ್ತಿದೆ. ಕಿಡಿಗೇಡಿಗಳ ಕೃತ್ಯದಿಂದ ಮರ ಗಿಡಗಳು ಬೆಂಕಿಗಾಹುತಿಯಾಗಿವೆ. ಬೆಟ್ಟಕ್ಕೆ ಬೆಂಕಿ ಬಿದ್ದಿರುವ ಹಿನ್ನೆಲೆ ಚಿರತೆ ಬೆಂಕಿಗೆ ಹೆದರಿ ಮಾಕಳಿ ಗ್ರಾಮದ ಬಳಿ ಬೀಡು ಬಿಟ್ಟಿದೆ.

    ಶುಕ್ರವಾರ ರಾತ್ರಿ 9.45ರ ಸಮಯದಲ್ಲಿ ಗ್ರಾಮಕ್ಕೆ ನುಗ್ಗಿ ಮೂರು ಕೋಳಿಗಳನ್ನು ಹೊತ್ತೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾತ್ರಿಯಿಡಿ ಪಟಾಕಿ ಹೊಡೆದು, ತಮಟೆ ಸದ್ದು ಮಾಡುತ್ತಾ ಚಿರತೆ ಗ್ರಾಮಕ್ಕೆ ಬರದಂತೆ ಗ್ರಾಮಸ್ಥರು ಕಾವಲು ಕಾದಿದ್ದಾರೆ. ಇಂದು ಚಿರತೆ ಬಂಧನಕ್ಕೆ ಕ್ರಮಕೈಗೊಳ್ಳಲು ಮಾಕಳಿ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲು ಮುಂದಾಗಿದ್ದಾರೆ.

  • ಸೆಣಸಾಟದಲ್ಲಿ ಚಿರತೆ, ನಾಯಿ ಸಾವು

    ಸೆಣಸಾಟದಲ್ಲಿ ಚಿರತೆ, ನಾಯಿ ಸಾವು

    ಮಂಡ್ಯ: ಸೆಣಸಾಟದಲ್ಲಿ ಚಿರತೆ ಮತ್ತು ನಾಯಿಗಳೆರಡು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‍ಪೇಟೆ ತಾಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಕಳೆದ ರಾತ್ರಿ ಅಣ್ಣೆಚಾಕನಹಳ್ಳಿಯ ಹೊರವಲಯದಲ್ಲಿನ ಜಮೀನೊಂದರಲ್ಲಿ ಮಲಗಿದ್ದ ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಿದೆ. ಈ ವೇಳೆ ಚಿರತೆ ಮತ್ತು ನಾಯಿಯ ನಡುವೆ ಸೆಣಸಾಟ ನಡೆದಿದೆ. ಇದರಿಂದ ಚಿರತೆ ಮತ್ತು ನಾಯಿಗೆ ಗಂಭೀರವಾದ ಗಾಯಗಳಾಗಿವೆ.

    ಚಿರತೆ ಮತ್ತು ನಾಯಿ ಎರಡು ಪ್ರಾಣಿಗಳ ಸೆಣಸಾಟದಲ್ಲಿ ಸ್ಥಳದಲ್ಲಿ ಸಾವನ್ನಪ್ಪಿವೆ. ಬೆಳಗ್ಗೆ ಗ್ರಾಮಸ್ಥರು ಈ ದೃಶ್ಯ ನೋಡಿ ಅರಣ್ಯ ಇಲಾಖೆಯ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿದ್ದಾರೆ.

  • ವಿರುಪಾಪುರ ಗಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

    ವಿರುಪಾಪುರ ಗಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

    ಕೊಪ್ಪಳ: ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿಯಲ್ಲಿ ಎರಡು ವರ್ಷದ ಹೆಣ್ಣು ಚಿರತೆ ಮರಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

    ಕಳೆದ ಮೂರ್ನಾಲ್ಕು ತಿಂಗಳಿಂದ ಆನೆಗೊಂದಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಈಗಾಗಲೇ ಚಿರತೆ ದಾಳಿಗೆ ಇಬ್ಬರು ಯುವಕರು ಬಲಿಯಾಗಿದ್ದು,ಜನ-ಜಾನುವಾರುಗಳ ಮೇಲೂ ಚಿರತೆ ದಾಳಿ ಮಾಡಿ ಗಾಯಗೊಳಿಸಿತ್ತು.

    ಚಿರತೆ ಸೆರೆಹಿಡಿಯಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ ಅರಣ್ಯ ಇಲಾಖೆ ಕಳೆದ ಎರಡು ತಿಂಗಳಲ್ಲಿ ಆನೆಗೊಂದಿ ಭಾಗದಲ್ಲಿ ಮೂರು ಚಿರತೆಗಳನ್ನು ಸೆರೆಹಿಡಿದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

    ಚಿರತೆಗೆ ಅರವಳಿಕೆ ನೀಡಿ, ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಗೆ ಕಳುಹಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಜ್ ಮೇಟಿ ತಿಳಿಸಿದ್ದಾರೆ.