Tag: forest

  • ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್

    ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್

    ಧಾರವಾಡ: ಇತ್ತೀಚೆಗೆ ದೆಹಲಿಯಲ್ಲಿ (NewDelihi) ನಡೆದ ಭೀಕರ ಘಟನೆ ತಾಲಿಬಾನ್ (Taliban) ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಪಾಠ ಕಲಿಯಬೇಕು. ಪ್ರೀತಿ (Love) ಮಾಡುವಾಗ, ಡೇಟಿಂಗ್ (Dating) ಮಾಡುವಾಗ ವಿಚಾರ ಮಾಡಿ ಮಾಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಸಲಹೆ ನೀಡಿದ್ದಾರೆ.

    ಧಾರವಾಡದಲ್ಲಿಂದು (Darwad) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ (Live In RelationShip) ಗೆಳತಿಯನ್ನು 35 ಪೀಸ್‌ಗಳಾಗಿ ಮಾಡಿ ಹತ್ಯೆಮಾಡಿರುವ ಘಟನೆ ತಾಲಿಬಾನಿಗಳ (Taliban) ಕೃತ್ಯಕ್ಕಿಂತೂ ಕೆಟ್ಟದಾದದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ – ನ್ಯಾಯಧಿಕರಣ ರಚನೆಗೆ ಕೇಂದ್ರದ ಒಲವು

    ಲವ್ ಜಿಹಾದ್‌ಗೆ (Love Jihad) ಬಲಿಯಾಗುವ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ನಾನು 15 ವರ್ಷಗಳಿಂದಲೂ ಎಚ್ಚರಿಕೆ ಕೊಡುತ್ತಲೇ ಬಂದಿದ್ದೇನೆ. ಇಷ್ಟೆಲ್ಲಾ ಎಚ್ಚರಿಕೆ ಕೊಟ್ಟರೂ ದೆಹಲಿಯಲ್ಲಿ ನಡೆದ ಇದೊಂದು ಘಟನೆ ದೊಡ್ಡ ದುರಂತವೇ ಸರಿ ಎಂದಿದ್ದಾರೆ. ಇದನ್ನೂ ಓದಿ: ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್‌ ಅನುಮತಿ

    ಹಿಂದೂ ಹುಡುಗಿಯರು ಇದರಿಂದ ಎಚ್ಚರಿಕೆಯ ಪಾಠ ಕಲಿಯಬೇಕು, ಯಾರ ಜೊತೆ ಪ್ರೀತಿ ಮಾಡುತ್ತಿದ್ದೇನೆ, ಯಾರ ಜೊತೆ ಡೇಟಿಂಗ್ ಮಾಡುತ್ತಿದ್ದೇನೆ ಎಂಬ ಅರಿವಿರಬೇಕು. ದೆಹಲಿಯ ಘಟನೆಯ ನಂತರ ಆ ಯುವಕ ಮತ್ತೆ ನಾಲ್ಕು ಜನ ಹಿಂದೂ ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯೇ ಅಂತಿಮ, ಕೋರ್ಟ್ ಸಹ ವಿಳಂಬ ಮಾಡದೆ, ಒಂದೇ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಈ ಹಿಂದೆ ಎರಡು ಪ್ರಕರಣಗಳು ನಡೆದಿದ್ದವು. ಇದೀಗ ಚಿಕ್ಕಲಗೇರಿ ಎನ್ನುವ ಸಣ್ಣ ಬಡ ಕುಟುಂಬದ ಮೇಲೆ ಮತಾಂತರ ಆಗಿದೆ. ಪತಿ, ಪತ್ನಿಯರಿಗೆ ಜಗಳ ಹಚ್ಚಿ ಪತ್ನಿಯನ್ನು ಮತಾಂತರ ಮಾಡಿದ್ದಾರೆ. ಪತ್ನಿಯ ಮೂಲಕ ಗಂಡನಿಗೆ ಒತ್ತಾಯ ಮಾಡುವ ಪ್ರಕ್ರಿಯೆ ನಡೆದಿದೆ. ಈ ಜಗಳ ವಿಕೋಪಕ್ಕೆ ಹೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಮತ್ತೆ ಸಮರ ಸಾರಿದ ರಷ್ಯಾ – ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

    ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಈ ರೀತಿ ನಡೆಯುತ್ತಲೇ ಇದೆ. ಈ ನಿರ್ಲಕ್ಷ್ಯ ಸರ್ಕಾರದ್ದು, ಕೇವಲ ಕಾನೂನು ಮಾಡುವುದಲ್ಲ, ಅದನ್ನು ಜಾರಿ ಮಾಡಬೇಕು. ಕ್ರಿಶ್ಚಿಯನ್ ಮತಾಂತರ ಎನ್ನುವುದು ಬಹಳ ದೊಡ್ಡ ಗಂಡಾಂತರ, ಇದನ್ನು ತಡೆಯದೇ ಇದ್ದರೆ ದೇಶಕ್ಕೆ ದೊಡ್ಡ ಅಪಾಯ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅರಣ್ಯ ಇಲಾಖೆಗೆ ಸೆಡ್ಡು ಹೊಡೆದ ಕಾಡಾನೆ – ರೈಲ್ವೇ ತಡೆಗೋಡೆ ದಾಟಿ ಎಸ್ಕೇಪ್

    ಅರಣ್ಯ ಇಲಾಖೆಗೆ ಸೆಡ್ಡು ಹೊಡೆದ ಕಾಡಾನೆ – ರೈಲ್ವೇ ತಡೆಗೋಡೆ ದಾಟಿ ಎಸ್ಕೇಪ್

    ರಾಮನಗರ: ಕಾಡಾನೆಗಳು ಕಾಡಿನಿಂದ ಹೊರಬರದಂತೆ ತಡೆಗಾಗಿ ಅರಣ್ಯ ಇಲಾಖೆ ನಿರ್ಮಿಸಿರುವ ಕಂಬಿ ತಡೆಗೋಡೆ ದಾಟುವ ಮೂಲಕ ಕಾಡಾನೆಯೊಂದು(Elephant) ಅರಣ್ಯ ಇಲಾಖೆಗೆ ಸೆಡ್ಡು ಹೊಡೆದಿದೆ.

    ಕನಕಪುರ(Kanakapura) ತಾಲೂಕು ಸಾತನೂರು ಹೋಬಳಿಯ ಹರಿಹರ ಚೆಕ್ ಪೋಸ್ಟ್ ಬಳಿ ಕಾಡಾನೆ ತಡೆಗೋಡೆ ದಾಟಿದೆ. ಬೂಹಳ್ಳಿ ಸರಹದ್ದಿನ ಅರಣ್ಯ(Forest) ಪ್ರದೇಶದ ಉದ್ದಕ್ಕೂ ಕಾಡಾನೆ ಹಾವಳಿ ತಡೆಗೆ ಕಂಬಿ ಅಳವಡಿಸಲಾಗಿದೆ. ಆದರೆ ಈ ಕಾಡಾನೆಯೊಂದು ಕಂಬಿ ದಾಟುವ ಪ್ರಯತ್ನದಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಬಾವಿಗೆ ಬಿದ್ದ ಒಂಟಿ ಸಲಗ – ಮೇಲಕ್ಕೆತ್ತಲು ಅರಣ್ಯಾಧಿಕಾರಿಗಳಿಂದ ಬಿಗ್ ಸರ್ಕಸ್

    ಕಾಡಾನೆ ಹೊರ ದಾಟುತ್ತಿರುವ ದೃಶ್ಯ ದನಗಳನ್ನು ಮೇಯಿಸುತ್ತಿದ್ದವರ ಮೊಬೈಲಿನಲ್ಲಿ ಸೆರೆಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯ ಭಯಾನಕ ಕೃತ್ಯಕ್ಕೆ ಅಮೆರಿಕದ ಥ್ರಿಲ್ಲರ್ `ಡೆಕ್ಸ್ಟರ್‌’ ಸ್ಫೂರ್ತಿ – ರೋಚಕ ಸತ್ಯ ಬಯಲು

    ದೆಹಲಿಯ ಭಯಾನಕ ಕೃತ್ಯಕ್ಕೆ ಅಮೆರಿಕದ ಥ್ರಿಲ್ಲರ್ `ಡೆಕ್ಸ್ಟರ್‌’ ಸ್ಫೂರ್ತಿ – ರೋಚಕ ಸತ್ಯ ಬಯಲು

    ನವದೆಹಲಿ: ಸಿನಿಮಾ (Cinema) ಜಗತ್ತು ಮಾಯಾವಿ ಇದ್ದಂತೆ, ಅದರಲ್ಲೂ ವಿದೇಶ ಸಿನಿಮಾಗಳು ಹೆಚ್ಚಾಗಿ ಅಪರಾಧ (Crime) ಕೃತ್ಯಗಳ ಆಧಾರಿವೇ ಆಗಿರುತ್ತವೆ. ಆದರೆ ಸಿನಿಮಾದ ಕೆಲವು ಥ್ರಿಲ್ಲರ್ ಸನ್ನಿವೇಶಗಳು ನೋಡುಗರ ಮೇಲೆ ಪ್ರಭಾವ ಬೀರುತ್ತವೆ. ದೆಹಲಿಯಲ್ಲಿ ನಡೆದಿರುವ ಕೊಲೆಗೂ ಅಂತಹದ್ದೇ ಸಿನಿಮಾವೊಂದು ಸ್ಫೂರ್ತಿಯಾಗಿದೆ ಅನ್ನೋದು ತನಿಖಾಧಿಕಾರಿಗಳಿಂದ (Police Investigation Officer) ತಿಳಿದುಬಂದಿದೆ.

    ಹೌದು. ಅಮೆರಿಕದಲ್ಲಿ ತೆರೆಕಂಡಿದ್ದ ಕಾಲ್ಪನಿಕ ಕಥೆಗಳ ಆಧರಿತ ಸಿನಿಮಾ `ಡೆಕ್ಸ್ಟರ್‌’ (Dexter Movie) ಭಾರೀ ಸದ್ದು ಮಾಡಿತ್ತು. ಈ ಚಿತ್ರದಲ್ಲಿ ನಾಯಕ ವಿಧಿವಿಜ್ಞಾನ (Forensics Expert) ತಜ್ಞನಾಗಿರುತ್ತಾನೆ. ಚಾಣಾಕ್ಷನಾಗಿ ಸರಣಿ ಕೊಲೆಗಳನ್ನು ಮಾಡುತ್ತಾ, ಮತ್ತೊಂದೆಡೆ ಸಾಮಾನ್ಯನಾಗಿ ಜೀವನ ನಡೆಸುತ್ತಿರುತ್ತಾನೆ. ದೆಹಲಿಯ ಕೊಲೆ ಕೇಸ್‌ನಲ್ಲೂ ಇದೇ ರೀತಿಯಾಗಿದೆ. ಆರೋಪಿ ಅಫ್ತಾಬ್ ಬಾಣಸಿಗನಾಗಿದ್ದರಿಂದ ಮಾಂಸ ಕತ್ತರಿಸುವ ಕತ್ತಿ ಬಳಸುವಲ್ಲಿ ನಿಪುಣನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗೆಳತಿಯ ದೇಹವನ್ನು 35 ಪೀಸ್ ಮಾಡಿ, ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ!

    ದುರ್ವಾಸನೆ ತೆಡೆಯಲು ಅಗರಬತ್ತಿ ಹಚ್ಚುತ್ತಿದ್ದ: ಘಟನೆ ಬಳಿಕ ಮೈ ಜುಮ್ಮೆನ್ನಿಸುವ ಅನೇಕ ರೋಚಕ ಸತ್ಯಗಳು ಬೆಳಕಿಗೆ ಬರುತ್ತಿವೆ. ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ, ತನ್ನ ಗೆಳತಿಯನ್ನು ಕೊಂದ ಬಳಿಕ ಆಕೆಯ ದೇಹದ ದುರ್ವಾಸನೆ ಹೊರಗೆ ಬಾರದಂತೆ ತಡೆಯಲು ಯಾವಾಗಲೂ ಅಗರಬತ್ತಿ (ಗಂಧದಕಡ್ಡಿ) ಹಚ್ಚಿಡುತ್ತಿದ್ದ. ಆಕೆಯ ದೇಹವನ್ನು 35 ಪೀಸ್‌ಗಳಾಗಿ ಕತ್ತರಿ, ಅದನ್ನಿಡಲು 300 ಲೀಟರ್ ಸಾಮರ್ಥ್ಯದ ಹೊಸ ಫ್ರಿಡ್ಜ್ ಸಹ ಖರೀದಿಸಿದ್ದ. ಮುಖ್ಯವಾಗಿ ಕೊಲೆ ಮಾಡಲು ಇದೇ ರೀತಿ ಕೃತ್ಯಗಳನ್ನು ಎಸಗುವ ಅಮೆರಿಕದ ಡೆಕ್ಸ್ಟರ್‌ ಸಿನಿಮಾ ನೋಡಿ ಪ್ರೇರಣೆಗೊಂಡಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕಿ ಬೈದಿದ್ದಕ್ಕೆ ಡೆತ್‍ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

    ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ (Live in Relationship) ಗೆಳತಿಯ ಹತ್ಯೆ ನಡೆಸಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಬೇರೆ ಬೇರೆ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿರುವ ಭಯಾನಕ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಈ ಅಮಾನುಷ ಕೃತ್ಯ ಎಸಗಿದ 5 ತಿಂಗಳ ಬಳಿಕ ಕೊಲೆಗಡುಕನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ವಿರುದ್ಧ ಪ್ರಕರಣ (FIR) ದಾಖಲಿಸಲಾಗಿದ್ದು, ಐದು ದಿನ ಪೊಲೀಸ್ (Police) ವಿಚಾರಣೆಗೆ ಒಳಪಡಿಸಿದ್ದಾರೆ. ಕೊಲೆ ಆರೋಪಿ ವಿವಿಧ ಕಾಡುಗಳಲ್ಲಿ ಹೂತಿಟ್ಟಿದ್ದ ದೇಹದ ಕೆಲ ಭಾಗಗಳನ್ನು ಸಂಗ್ರಹಿಸಿದ್ದಾರೆ. ಆದರೆ ಅವು ಇದೇ ಯುವತಿಯ ದೇಹದ ಭಾಗವೆಂದು ಖಚಿತವಾಗಿ ಹೇಳಿಲ್ಲ. ಕೊಲೆಗೆ ಬಳಸಿದ್ದ ಕತ್ತಿ ಸಹ ಇನ್ನೂ ಪತ್ತೆಯಾಗಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಕಾಲು ಜಾರಿ ತೊಡಿಕಾನ ಜಲಪಾತಕ್ಕೆ ಬಿದ್ದು ಅರಣ್ಯ ವೀಕ್ಷಕ ಸಾವು

    ಕಾಲು ಜಾರಿ ತೊಡಿಕಾನ ಜಲಪಾತಕ್ಕೆ ಬಿದ್ದು ಅರಣ್ಯ ವೀಕ್ಷಕ ಸಾವು

    ಮಡಿಕೇರಿ: ಅರಣ್ಯ ವೀಕ್ಷಣೆ ಮಾಡಲು ಹೋದ ಸಂದರ್ಭ ಕಾಲು ಜಾರಿ ನೀರಿಗೆ ಬಿದ್ದು ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತೊಡಿಕಾನ‌(Thodikana) ಅರಣ್ಯ ಪ್ರದೇಶದಲ್ಲಿ‌‌ ನಡದಿದೆ.

    ಭಾಗಮಂಡಲ(Bhagamandala) ಅರಣ್ಯ ವ್ಯಾಪ್ತಿಯ ತೊಡಿಕಾನದ ಸಿಪಿಟಿ 76ರಲ್ಲಿ ಘಟನೆ ನಡೆದಿದ್ದು, ಅರಣ್ಯ ವೀಕ್ಷಕ ಚಿನ್ನಪ್ಪ ಎಂ ಹೆಚ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರರಿಗೆ ಸಿಹಿ ಸುದ್ದಿ – 7ನೇ ವೇತನ ಆಯೋಗ ಜಾರಿ

    ಮಂಗಳವಾರ ಸಂಜೆ ಅರಣ್ಯದಲ್ಲಿ ಬೀಟ್‌ಗೆ ಹೋದ ಸಂದರ್ಭದಲ್ಲಿ ನೀರು ಕುಡಿಯಲು ಜಲಪಾತದ ಕಡೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಝರಿಯ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

    ಇಂದು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಘಟನೆ ಸಂಬಂಧಿಸಿದಂತೆ ಭಾಗಮಂಡಲ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಡಿನಲ್ಲಿ ಗ್ಯಾಂಗ್‌ರೇಪ್ – ಬೆತ್ತಲಾಗಿ ಓಡಿಬಂದ ಹುಡುಗಿಗೆ ಹುಚ್ಚಿಯೆಂದು ಕಲ್ಲೆಸೆದ ಜನ

    ಕಾಡಿನಲ್ಲಿ ಗ್ಯಾಂಗ್‌ರೇಪ್ – ಬೆತ್ತಲಾಗಿ ಓಡಿಬಂದ ಹುಡುಗಿಗೆ ಹುಚ್ಚಿಯೆಂದು ಕಲ್ಲೆಸೆದ ಜನ

    ಲಕ್ನೋ: ದಟ್ಟಕಾಡಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ (Gang Rape) ಒಳಗಾದ 15ರ ಹುಡುಗಿ ತಪ್ಪಿಸಿಕೊಂಡು ಬೆತ್ತಲಾಗಿಯೇ ಓಡಿ ಬಂದಿರುವ ಘಟನೆ ಉತ್ತರಪ್ರದೇಶದ (Uttar Pradesh) ಮೊರಾದಾಬಾದ್ ಬೆಳಕಿಗೆ ಬಂದಿದೆ.

    ಹುಡುಗಿ (Girl) ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಯೋಗಿತಾ ಭಯನಾ ಎಂಬವರು ತಮ್ಮ ಟ್ವೀಟ್ (Twitter) ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿದ್ದು, ಸುಮಾರು 12 ಲಕ್ಷ ಮಂದಿ ವೀಡಿಯೋ ನೋಡಿದ್ದಾರೆ. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್‌ಸ್ಟಾಗ್ರಾಮ್ ಬಳಕೆ ಸ್ಥಗಿತ

    ಇದೇ ಸೆಪ್ಟೆಂಬರ್ 1ರಂದು ಹುಡುಗಿ ಮೇಲೆ ಅತ್ಯಾಚಾರ ನಡೆದಿತ್ತು. ಸೆಪ್ಟೆಂಬರ್ 7ರಂದು ದೂರು ದಾಖಲಾದ 13 ದಿನಗಳ ನಂತರ ಪೊಲೀಸರು (Bojpuri District Police) ಮೊದಲ ಆರೋಪಿಯನ್ನಷ್ಟೇ ಬಂಧಿಸಿದ್ದಾರೆ.

    ಆರೋಪಿಗಳನ್ನು ನಿತಿನ್, ಕಪಿಲ್, ಅಜಯ್, ಇಮ್ರಾನ್, ನೌಶ ಅಲಿ ಎಂದು ಗುರುತಿಸಲಾಗಿದೆ. ಅದರಲ್ಲಿ ನೌಶ ಅಲಿ ಬಂಧಿತನಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: NIA ಮಿಡ್‌ನೈಟ್ ಆಪರೇಷನ್- ಬೆಂಗ್ಳೂರಿನಲ್ಲಿ ಶಂಕಿತ ಉಗ್ರ ಯಾಸಿರ್ ಅರೆಸ್ಟ್

    ಏನಿದು ಘಟನೆ?
    ಇದೇ ತಿಂಗಳ ಸೆ.1ರಂದು ಹುಡುಗಿ ತನ್ನ ನೆರೆ ಊರಿನ ಜಾತ್ರೆ ನೋಡಲು ಸ್ನೇಹಿತೆಯೊಟ್ಟಿಗೆ ಹೋಗಿದ್ದಳು. ಸಂಜೆ 8 ಗಂಟೆ ಹೊತ್ತಿಗೆ ಆಕೆ ಒಬ್ಬಳೇ ವಾಪಸ್ ಮನೆಗೆ ಹೋಗುತ್ತಿದ್ದಾಗ, 2 ಬೈಕ್‌ಗಳಲ್ಲಿ (Bike) ಬಂದ ಐವರು ಕಾಮುಕರು ಹುಡುಗಿಯನ್ನು ಅಪಹರಣ (Kidnap) ಮಾಡಿಕೊಂಡು, ಸೈಯದ್‌ಪುರ್ ಖಾದರ್ ಏರಿಯಾದಲ್ಲಿರುವ ದಟ್ಟ ಕಾಡಿಗೆ (Forest) ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಬಳಿಕ ಬಟ್ಟೆ ಹರಿದು ಬೆತ್ತಲುಗೊಳಿಸಿದ್ದಾರೆ. ತೀವ್ರ ರಕ್ತಸ್ರಾವ ಆಗುತ್ತಿದ್ದ ಆಕೆ ಹೇಗೋ ತಪ್ಪಿಸಿಕೊಂಡು ಬೆತ್ತಲೆ ಸ್ಥಿತಿಯಲ್ಲೇ ಓಡಿ ಬಂದಿದ್ದಾಳೆ. ಹಾಗೇ ಅವಳು ಬೆತ್ತಲಾಗಿ ರಸ್ತೆ ಮೇಲೆ ಬರುತ್ತಿದ್ದಾಗ ಅನೇಕರು ಅವಳೊಬ್ಬ ಹುಚ್ಚಿ ಎಂದು ಭಾವಿಸಿ ಕಲ್ಲು ಎಸೆದಿದ್ದಾರೆ ಎಂದ ಹುಡುಗಿಯ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

    STOP RAPE

    ಮನೆಗೆ ಬೆತ್ತಲಾಗಿಯೇ ಓಡಿಬಂದ ಯುವತಿ ತನ್ನ ಅಕ್ಕನ ಬಳಿ ವಿಷಯ ಹೇಳಿಕೊಂಡಿದ್ದಾಳೆ. ಅದಾದ 6 ದಿನಗಳ ನಂತರ ಹುಡುಗಿ ಚಿಕ್ಕಪ್ಪ ರಾಮ್ ಅವತಾರ್ ಭೋಜ್‌ಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬ್ರೇಕ್‍ಅಪ್ ಮಾಡಿದ್ದಕ್ಕೆ ಪ್ರಿಯತಮೆಯ ನಗ್ನ ಫೋಟೋ ಲೀಕ್ ಮಾಡ್ದ

    ಸದ್ಯ ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಹುಡುಗಿ ಸ್ವಲ್ಪಮಟ್ಟಿಗೆ ಮಾನಸಿಕ ಅಸ್ವಸ್ಥೆ. ಆಕೆಯನ್ನು ವೈದ್ಯಕೀಯ ತಪಾಸಣಿಗೆ ಒಳಪಡಿಸಲಾಗಿದೆ. ಆದರೆ ಇನ್ನೂ ವರದಿ ಬಂದಿಲ್ಲ, ಅತ್ಯಾಚಾರ ಆಗಿದ್ದು ದೃಢಪಟ್ಟಿಲ್ಲ. ಹಾಗಿದ್ದಾಗ್ಯೂ ಒಬ್ಬಾತನನ್ನು ಅರೆಸ್ಟ್ ಮಾಡಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ವೈದ್ಯಕೀಯ ತಪಾಸಣೆ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪರೂಪದ ಬ್ಲ್ಯಾಕ್ ಟೈಗರ್ ಪತ್ತೆ – ವೀಡಿಯೋ ಕಂಡು ಬೆರಗಾದ ನೆಟ್ಟಿಗರು

    ಅಪರೂಪದ ಬ್ಲ್ಯಾಕ್ ಟೈಗರ್ ಪತ್ತೆ – ವೀಡಿಯೋ ಕಂಡು ಬೆರಗಾದ ನೆಟ್ಟಿಗರು

    ಭುವನೇಶ್ವರ್: ದೇಶದಲ್ಲಿ ರೋಚಕತೆಯಿಂದ ಕೂಡಿದ ರಾಷ್ಟ್ರೀಯ ಉದ್ಯಾನಗಳಿವೆ. ಸಾಕಷ್ಟು ಜೀವಿಗಳಿಗೆ ಈ ಅಭಯಾರಣ್ಯಗಳು ನೆಲೆಯಾಗಿವೆ. ಪ್ರಕೃತಿ ಪ್ರಿಯರಿಗೆ, ವನ್ಯಜೀವಿ ಪ್ರೇಮಿಗಳಿಗೆ ಇಂತಹ ತಾಣ ಸಹಜವಾಗಿಯೇ ಖುಷಿ ನೀಡುತ್ತದೆ, ಉಲ್ಲಾಸವನ್ನು ಹೆಚ್ಚು ಮಾಡುತ್ತದೆ. ಹುಲಿ, ಸಿಂಹಗಳ ಗಾಂಭೀರ್ಯದ ನೋಟ, ಕೋತಿಗಳ ತುಂಟಾಟ… ಹೀಗೆ ಕಣ್ಣಿಗೆ ರಸದೌತಣ ನೀಡುವಂತಹ ದೃಶ್ಯಗಳಿಗೆ ರಾಷ್ಟ್ರೀಯ ಉದ್ಯಾನವನದಲ್ಲಿ ಕೊರತೆ ಇಲ್ಲ. ಇಂತಹ ಅಪೂರ್ವ ತಾಣಗಳಲ್ಲಿ ಅಪರೂಪದ ಪ್ರಾಣಿಗಳು ಆಗಾಗ್ಗೆ ಕಣ್ಣಿಗೆ ಗೋಚರವಾಗುತ್ತಿರುತ್ತವೆ.

    ಹೌದು.. ವನ್ಯ ಸಂಕುಲದಲ್ಲಿ ಹುಲಿ ಹೆಗ್ಗುರುತು. ಕಾಡಿಗೆ ಮಳೆ ಎಷ್ಟು ಮುಖ್ಯವೋ, ಕಾಡಿಗೆ ಹುಲಿಯು ಅಷ್ಟೇ ಮುಖ್ಯ. ಅನೇಕ ಕಾಡುಗಳಲ್ಲಿ ಕಂಡು ಬರುವ ಹುಲಿಗಳು ಸಹಜವಾಗಿ ಕೇಸರಿ ಬಣ್ಣದ, ಗಾಂಭೀರ್ಯದ ನೋಟದೊಂದಿಗೆ ನೋಡುಗರ ಕಣ್ಮನ ಸೆಳೆಯುತ್ತವೆ. ಈ ನಡುವೆ ಅಪರೂಪ ಎಂಬಂತೆ ಬಿಳಿ ಹುಲಿಗಳು ಇವೆ. ಇದನ್ನೂ ಓದಿ: ದುಬಾರಿ ಬೆಲೆಗೆ ತಮ್ಮ ಫ್ಲ್ಯಾಟ್ ಮಾರಿದ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್

    ಇಷ್ಟು ದಿನ ಕರಿ ಚಿರತೆಯಷ್ಟೇ ಕಣ್ಣಿಗೆ ಹಬ್ಬ ನೀಡುತ್ತಿದ್ದ ವನ್ಯ ಪ್ರಿಯರಿಗೆ ಮತ್ತೊಂದು ಸಂತೋಷದ ಸುದ್ದಿ ಸಿಕ್ಕಂತಾಗಿದೆ. ಅಪರೂಪದಲ್ಲೇ ಅಪರೂಪವಾದ ಕಪ್ಪು ಹುಲಿ (ಬ್ಲ್ಯಾಕ್ ಟೈಗರ್) ಭಾರತದ ಒಡಿಶಾದ ಕಾಡಿನಲ್ಲಿ ಪತ್ತೆಯಾಗಿದೆ. ಇದು ಕಾಡಿನಲ್ಲಿ ಸಫಾರಿಗೆ ಹೋದವರ ಕಣ್ಣಿಗೆ ಕಾಣುವುದು ಕೂಡ ವಿರಳಾತಿವಿರಳ ಎಂದು ವರದಿಯಾಗಿದೆ.

    ಇದೀಗ ಈ ಕಪ್ಪು ಹುಲಿ ಕಾಡಿನಲ್ಲಿಟ್ಟಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹಿರಿಯ ಐಎಫ್‌ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಹುಲಿ ದಿನದ ಪ್ರಯುಕ್ತ (ಜು.29) ಸೆರೆ ಹಿಡಿದಿದ್ದ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ- ಬೆಳಗಾವಿ ಜಿಲ್ಲೆಯಲ್ಲಿ ಆತಂಕ

    ಒಡಿಶಾದ `ಸಿಮ್ಲಿಪಾಲ್ ನ್ಯಾಷನಲ್ ಪಾರ್ಕ್’ನಲ್ಲಿ ಈ ಕಪ್ಪು ಹುಲಿಯ ಚಲನವಲನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕಪ್ಪು ಹುಲಿ ಪರಚುತ್ತಾ ಗಿಡ ಹತ್ತಲು ವಿಫಲ ಯತ್ನ ನಡೆಸುತ್ತದೆ. ಇಂತಹ ಅಪರೂಪದ ವೀಡಿಯೋ ಶೇರ್ ಮಾಡಿಕೊಂಡಿದ್ದಕ್ಕೆ ಅಧಿಕಾರಿಗೆ ವನ್ಯಜೀವಿ ಪ್ರಿಯರು ಧನ್ಯವಾದ ಸಲ್ಲಿಸಿದ್ದಾರೆ.

    2007ರಲ್ಲೇ ಈ ಕಪ್ಪು ಹುಲಿಯನ್ನು ಒಡಿಶಾದಲ್ಲಿ ಗುರುತಿಸಲಾಗಿತ್ತು. ಅಸಲಿಗೆ ಕಪ್ಪು ಹುಲಿ ಎನ್ನುವುದು ಇರುವುದಿಲ್ಲ. ಬದಲಿಗೆ ಅದರ ಆನುವಂಶಿಕ ಬೆಳವಣಿಗೆ ಆಧಾರದ ಮೇಲೆ ಚರ್ಮದ ಬಣ್ಣದಲ್ಲಿ ವ್ಯತ್ಯಾಸವಾಗಿರುತ್ತದೆ ಎಂಬುದಾಗಿ ವರದಿಯಾಗಿದೆ.

    Live Tv

    [brid partner=56869869 player=32851 video=960834 autoplay=true]

  • ಕಬ್ಬಿನ ಲಾರಿ ಅಡ್ಡಗಟ್ಟಿ ಕಬ್ಬು ತಿಂದ ಆನೆ, ಮರಿಯಾನೆ

    ಕಬ್ಬಿನ ಲಾರಿ ಅಡ್ಡಗಟ್ಟಿ ಕಬ್ಬು ತಿಂದ ಆನೆ, ಮರಿಯಾನೆ

    ಚಾಮರಾಜನಗರ: ಆನೆಗಳು ಬುದ್ಧಿವಂತ ಪ್ರಾಣಿಗಳು, ಅವುಗಳ ಜೀವನ ನೋಡುವುದೇ ಸುಂದರ ಅನುಭವ. ಇದೇ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲೂ ಆನೆಗಳ ಚಿನ್ನಾಟ, ಅವುಗಳ ತರಲೆ ತುಂಟಾಟದ ಅಪರೂಪದ ವೀಡಿಯೋಗಳೂ ಸದ್ದು ಮಾಡುತ್ತಿರುತ್ತವೆ.

    ಅದರಲ್ಲೂ ಮರಿಯಾನೆಯೊಂದಿಗೆ ಇದ್ದಾಗ ಕಾಣಸಿಗುವ ವೀಡಿಯೋಗಳು ಸಖತ್ ಖುಷಿ ಕೊಡುತ್ತವೆ. ಇಂತಹದ್ದೇ ಘಟನೆಯೊಂದು ಈಗ ಚಾಮರಾಜನಗರ-ತಮಿಳುನಾಡು ಗಡಿ ಆಸನೂರು ಬಳಿ ಘಟನೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ಮುಖ್ಯರಸ್ತೆಯಲ್ಲೇ ಕಬ್ಬಿನ ಲಾರಿಗಳ ಹಾಗೂ ವಾಹನಗಳ ಅಡ್ಡಗಟ್ಟಿರುವ ಆನೆಗಳು ಮಾರುದ್ದ ಸೊಂಡಿಲನ್ನು ಚಾಚಿ ಕಬ್ಬನ್ನು ಎಳೆದು ತಿನ್ನುತ್ತಿವೆ. ಆನೆಯೊಂದು ತನ್ನ ಮರಿಗೂ ಕಬ್ಬನ್ನು ಎಳೆದು ಕೊಡುತ್ತಿದೆ. ರಸ್ತೆ ಮಧ್ಯದಲ್ಲೇ ಈ ದೃಶ್ಯವನ್ನು ಕಂಡ ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್

    ಇದೇ ವೇಳೆ ಆನೆಗಳು ಹತ್ತಿರದಲ್ಲೇ ಇದ್ದರೂ ಪದೇ ಪದೇ ಹಾರ್ನ್ ಮಾಡುತ್ತಿದ್ದರಿಂದ ಕಿರಿಕಿರಿಯುಂಟಾಗಿ ಆನೆಗಳು ವಾಹನಗಳ ಮೇಲೆ ದಾಳಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಚೆಲುವ ಚಾಮರಾಜನಗರದ ರಾಯಭಾರಿಯಾಗಲು ರೆಡಿ ಎಂದ `ಗಾಜನೂರು ಗಂಡು’ ಶಿವರಾಜ್‌ಕುಮಾರ್

    ಚೆಲುವ ಚಾಮರಾಜನಗರದ ರಾಯಭಾರಿಯಾಗಲು ರೆಡಿ ಎಂದ `ಗಾಜನೂರು ಗಂಡು’ ಶಿವರಾಜ್‌ಕುಮಾರ್

    ಚಾಮರಾಜನಗರ: ಜಿಲ್ಲೆ, ಸಂಸ್ಕೃತಿ ಹಾಗೂ ಪ್ರಕೃತಿಯ ಅದ್ಬುತ ಸಮಾಗಮ ಚೆಲುವ ಚಾಮರಾಜನಗರ. ಇಲ್ಲಿನ ಪ್ರಾಕೃತಿಕ ಸೌಂದರ್ಯದೊಂದಿಗೆ ಪ್ರವಾಸಿಗರ ಆಕರ್ಷಣೆಯನ್ನೂ ಹೆಚ್ಚಿಸಲೆಂದೇ ನಟ ದಿ. ಪುನೀತ್ ರಾಜ್‌ಕುಮರ್ ಅವರನ್ನು ರಾಯಭಾರಿಯನ್ನಾಗಿ ಮಾಡಲಾಗಿತ್ತು. ಇದಕ್ಕಾಗಿ ಪುನೀತ್ ರಾಜ್‌ಕುಮಾರ್ ಸಂದೇಶವಿರುವ ಪ್ರಮೋಷನ್ ವೀಡಿಯೋವನ್ನು ಜಿಲ್ಲಾಡಳಿತ ಸಿದ್ಧ ಮಾಡಿತ್ತು. ಪುನೀತ್ ನಿಧನದ ಬಳಿಕ ಇದೀಗ ಡಾ.ರಾಜ್ ಕುಟುಂಬದ ಮತ್ತೊಬ್ಬರನ್ನೂ ಬ್ರ‍್ಯಾಂಡ್ ಅಂಬಾಸಿಡರ್ ಆಗಿ ಮಾಡುವಂತೆ ಕೂಗು ಎದ್ದಿದೆ.

    ಇದು ಪೂರ್ವ ಪಶ್ಚಿಮ ಘಟ್ಟಗಳ ಬೆಸುಗೆಯ ವಿಶಿಷ್ಟ ತಾಣವಾದ ಚಾಮರಾಜನಗರ ಜಿಲ್ಲೆ ಪಾಕೃತಿಕವಾಗಿ ಶ್ರೀಮಂತ ಜಿಲ್ಲೆ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸ್ವತ್ತು ಹೊಂದಿರುವ ಕೆಲವೇ ಜಿಲ್ಲೆಗಳ ಪೈಕಿ ಚಾಮರಾಜನಗರವೂ ಒಂದು ಬಂಡೀಪುರ, ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ, ಮಲೆಮಹದೇಶ್ವರ ವನ್ಯಧಾಮ, ಭರಚುಕ್ಕಿ ಜಲಪಾತ, ಹೊಗೇನಕಲ್ ಜಲಪಾತ, ಮಲೆಮಹದೇಶ್ವರಬೆಟ್ಟ, ತಮಿಳುನಾಡು ಗಡಿಯಲ್ಲಿರುವ ಪುಣಜನೂರು ಸೂಕ್ಷ್ಮ ಅರಣ್ಯ ಪ್ರದೇಶದಂತಹ ಪ್ರಾಕೃತಿಕ ಸೊಬಗನ್ನು ಹೊಂದಿದೆ. ಜನಪದ ಸಂಸ್ಕೃತಿಯನ್ನೂ ಇಂದಿಗೂ ಜೀವಂತವಾಗಿರಿಸಿಕೊಂಡಿದ್ದು, ಹತ್ತಾರು ಐತಿಹಾಸಿಕ ಹಾಗೂ ಪಾರಂಪರಿಕ ಸ್ಥಳಗಳನ್ನೂ ತನ್ನ ತೆಕ್ಕೆಯಲ್ಲಿಟ್ಟುಕೊಂಡಿದೆ. ಇದನ್ನೂ ಓದಿ: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಆಹಾರ ಬಿಲ್‌ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ – ಸೇರಿಸಿದ್ರೆ ಗ್ರಾಹಕರೇ ದೂರು ಕೊಡ್ಬೋದು

    ಜಿಲ್ಲಾಡಳಿತ `ಚೆಲುವ ಚಾಮರಾಜನಗರ’ ಎಂಬ ಜಿಲ್ಲಾ ಪ್ರವಾಸಿ ತಾಣಗಳ ಕೈಪಿಡಿ ಹೊರತಂದು, ಇದೀಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಚೆಲುವ ಚಾಮರಾಜನಗರದ ರಾಯಭಾರಿ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಸಂದೇಶ ಇರುವ ಪ್ರಮೋಷನ್ ವೀಡಿಯೋವೊಂದನ್ನು ಸಿದ್ದಪಡಿಸಿತ್ತು. ಆದ್ರೆ ಪುನೀತ್ ಅಕಾಲಿಕ ನಿಧನದಿಂದ ಈ ಯೋಜನೆ ಜಾರಿಗೆ ಹಿನ್ನಡೆಯಾಯಿತು. ಇದೀಗ ಮತ್ತೇ ಚಾಮರಾಜನಗರದಲ್ಲಿ ಡಾ.ರಾಜ್ ಕುಟುಂಬದ ಕುಡಿ ನಟ ಶಿವರಾಜ್ ಕುಮಾರ್ ಅವರನ್ನು ಚೆಲುವ ಚಾಮರಾಜನಗರ ರಾಯಭಾರಿ ಮಾಡುವಂತೆ ಅಭಿಮಾನಿಗಳಿಂದ ಕೂಗು ಎದ್ದಿದೆ. ಇದನ್ನೂ ಓದಿ: ಅಧಿಕಾರಿಗಳಿಂದಲೇ ದುರ್ಬಳಕೆ- ಕರ್ನಾಟಕ ಹೈಕೋರ್ಟ್ ಮೊರೆಹೋದ ಟ್ವಿಟ್ಟರ್

    ಇನ್ನೂ ಚಾಮರಾಜನಗರ ಡಾ.ರಾಜ್ ತವರೂರು. ತವರೂರಿನ ಋಣ ತೀರಿಸಲು ನಟ ಪುನೀತ್ ರಾಯಭಾರಿಯಾಗಲೂ ಮನಸ್ಸು ಮಾಡಿದರು. ಆದ್ರೆ ಅಕಾಲಿನ ನಿಧನದಿಂದ ಅವರ ಆಸೆಯೂ ಈಡೇರಲಿಲ್ಲ. ಇದೀಗ ಪುನೀತ್ ಬದಲು ಡಾ.ಶಿವರಾಜ್ ಕುಮಾರ್ ರಾಯಭಾರಿಯಾಗಲೂ ರೆಡಿ ಎಂದಿದ್ದಾರೆ. ಜಿಲ್ಲಾಡಳಿತ ಒಂದು ವೇಳೆ ಒಪ್ಪಿಗೆ ಕೊಟ್ರೆ ರಾಯಭಾರಿಯಾಗ್ತೀನಿ. ಅದು ನನ್ನ ಭಾಗ್ಯ. ನನ್ನ ತಮ್ಮನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.

    ಒಟ್ಟಿನಲ್ಲಿ ಅಭಿಮಾನಿಗಳ ಒತ್ತಾಯಕ್ಕೆ ಚಾಮರಾಜನಗರದ ರಾಯಭಾರಿಯಾಗಲೂ ಶಿವಣ್ಣ ಒಪ್ಪಿಗೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯೋನ್ಮುಖವಾಗಿ ಶಿವಣ್ಣರನ್ನು ರಾಯಭಾರಿಯಾಗಿಸಲೂ ಮನಸ್ಸು ಮಾಡಲಿ ಅನ್ನೋದೆ ಅಭಿಮಾನಿಗಳ ಆಶಯ.

    Live Tv
    [brid partner=56869869 player=32851 video=960834 autoplay=true]

  • ನಾಯಿ ಆಸೆ ತೋರಿಸಿ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

    ನಾಯಿ ಆಸೆ ತೋರಿಸಿ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

    ಚಿಕ್ಕಬಳ್ಳಾಪುರ: ನಾಯಿ ಆಸೆಯನ್ನ ತೋರಿಸಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

    ತೋಟದ ಮನೆಯಲ್ಲಿ ಕಟ್ಟಿ ಹಾಕಲಾಗಿದ್ದ ಸಾಕುನಾಯಿಯ ಮೇಲೆ ದಾಳಿ ಮಾಡಿ ಭಕ್ಷಿಸಿದ್ದ ಚಿರತೆಯನ್ನ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಳೆದ ಹಲವು ದಿನಗಳಿಂದ ಕೋಳೂರು ಸಮೀಪದ ಅರಣ್ಯ ಇಲಾಖೆ ನಿರ್ಮಿಸಿರುವ ಪ್ಲಾಂಟೇಷನ್ ಬಳಿ ಚಿರತೆ ಕಂಡುಬಂದಿತ್ತು. ಮೇ 29 ರ ಭಾನುವಾರ ರಾತ್ರಿ ಹರೀಶ್ ಅವರ ತೋಟದ ಮನೆಗೆ ನುಗ್ಗಿ, ಸಾಕುನಾಯಿಯನ್ನು ಕೊಂದು ಹಾಕಿತ್ತು. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ 

    ಶ್ರೀನಿವಾಸಪುರ, ಮರಳೇನಹಳ್ಳಿ, ಕಮಲೂರು, ಶಿರವಾರ, ಅಂತರಹಳ್ಳಿ, ಕೋಳೂರು ಸುಮಾರು ಎರಡು, ಮೂರು ಕಿಮೀ ಅಂತರದ ಅಕ್ಕಪಕ್ಕದ ಗ್ರಾಮಗಳಲ್ಲಿ ಚಿರತೆ ಇರುವುದು ಪತ್ತೆಯಾಗಿತ್ತು. ಈ ಕುರಿತಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ, ತ್ವರಿತವಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.

    ಹೀಗಾಗಿ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ಅದೇ ದಿನ ಕೋಳೂರು ಪ್ಲಾಂಟೇಷನ್ ಬಳಿ ಬೋನ್ ಅಳವಡಿಸಿ, ಚಿರತೆ ಸೆರೆಗೆ ಕ್ರಮಕೈಗೊಂಡಿದ್ದರು. ಇದರ ಬೆನ್ನಲ್ಲೇ ರಾತ್ರಿ ಭಾನುವಾರ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ನೆಮ್ಮದಿ ತಂದಿದೆ. ಇದನ್ನೂ ಓದಿ:  ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ – 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್

  • ಚಿರತೆಯನ್ನು ಸಜೀವ ದಹನ ಮಾಡಿದ್ದ 150 ಗ್ರಾಮಸ್ಥರ ವಿರುದ್ಧ FIR ದಾಖಲು

    ಚಿರತೆಯನ್ನು ಸಜೀವ ದಹನ ಮಾಡಿದ್ದ 150 ಗ್ರಾಮಸ್ಥರ ವಿರುದ್ಧ FIR ದಾಖಲು

    ಡೆಹರಾಡೂನ್: ಅರಣ್ಯಾಧಿಕಾರಿಗಳು ಹಿಡಿದ ಚಿರತೆಯೊಂದನ್ನು ಸಜೀವ ದಹನ ಮಾಡಿದ್ದ 150 ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರಖಂಡದಲ್ಲಿ ನಡೆದಿದೆ.

    ಉತ್ತರಖಂಡದ ಪೌರಿ ಗಾರ್ವಾಲ್ ಜಿಲ್ಲೆಯ ಹಳ್ಳಿಯೊಂದರ ಅರಣ್ಯದಲ್ಲಿ 7 ವರ್ಷದ ಗಂಡು ಚಿರತೆಯನ್ನು ಅಧಿಕಾರಿಗಳು ಸೆರೆಹಿಡಿದಿದ್ದರು. ಈ ವಿಷಯ ತಿಳಿದ ಜನರ ಗುಂಪೊಂದು ಸ್ಥಳಕ್ಕೆ ಧಾವಿಸಿ ಅಧಿಕಾರಿಗಳ ಸಮ್ಮುಖದಲ್ಲಿ ಸಜೀವ ದಹನ ಮಾಡಿದ್ದಾರೆ.

    crime

    ಈ ತಿಂಗಳ ಆರಂಭದಲ್ಲಿ ಚಿರತೆಯೊಂದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಆಕ್ರೋಶಗೊಂಡಿದ್ದರು. ಆದರೆ, ಮಹಿಳೆಯ ಮೇಲೆ ಮಾರಣಾಂತಿಕ ದಾಳಿ ನಡೆಸಿದ ಚಿರತೆ ಅದೇ ಚಿರತೆಯೇ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳೀಯ ಗ್ರಾಮ ಪ್ರಧಾನ್ ಮತ್ತು ಇತರ 150 ಜನರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

    ಜಿಲ್ಲಾ ಅರಣ್ಯಾಧಿಕಾರಿ ಮುಖೇಶ್ ಶರ್ಮಾ ಮಾತನಾಡಿ, ಮೇ 15 ರಂದು ಜಿಲ್ಲೆಯ ಸಪ್ಲೋಡಿ ಗ್ರಾಮದಲ್ಲಿ ಸುಷ್ಮಾ ದೇವಿ(47) ಅವರನ್ನು ಚಿರತೆ ಕೊಂದಿತು. ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಎರಡು ವಿಭಿನ್ನ ಸ್ಥಳಗಳಲ್ಲಿ ಬೋನ್‍ಗಳನ್ನು ಇರಿಸಿದ್ದರು. ಇದನ್ನೂ ಓದಿ: ಅಜ್ಮೀರ್ ದರ್ಗಾ ದೇವಾಲಯವಾಗಿತ್ತು – ಸಮೀಕ್ಷೆಗೆ ಹಿಂದೂ ಸಂಘಟನೆ ಆಗ್ರಹ

    POLICE JEEP

    ಇದರಲ್ಲಿ ಒಂದು ಬೋನಿಗೆ ಚಿರತೆ ಸಿಕ್ಕಿಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲಿ ಅವರು ಸ್ಥಳೀಯರೊಂದಿಗೆ ಮಾತನಾಡಿದರು, ಆದರೆ ಸ್ಥಳೀಯ ಗ್ರಾಮ ಪ್ರಧಾನ್ ನೇತೃತ್ವದಲ್ಲಿ ಕೋಪಗೊಂಡ ಗುಂಪು ಪಂಜರದ ಮೇಲೆ ದಾಳಿ ಮಾಡಿದೆ. ಪೆಟ್ರೋಲ್ ಸುರಿದು ಒಣ ಹುಲ್ಲಿನ ಮೇಲೆ ಎಸೆದು ಬೆಂಕಿ ಹಚ್ಚಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಅವರನ್ನು ತಡೆಯಲು ಪ್ರಯತ್ನಿಸಿದರೂ ವಿಫಲವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಿಗೆ ಹಾಕೋ ಬಿಎಂಟಿಸಿ ವಾಯವ್ಯ ಸಾರಿಗೆ ಮಾರಾಟ- 50 ಸಾವಿರ ರೂ.ಗೊಂದು ಬಸ್