Tag: Former BJP MLA

  • ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ

    ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ

    ರಾಯ್‍ಪುರ್: ಛತ್ತೀಸ್‍ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್‍ಗಢದ ಜಶ್‍ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ.  ಇದನ್ನೂ ಓದಿ: ಕುಮಾರಸ್ವಾಮಿ ಎಲ್ಲಾ ಕ್ಷೇತ್ರದಲ್ಲೂ ಇಬ್ಬಿಬ್ಬರನ್ನು ಇಟ್ಟಿರ್ತಾರೆ: ಎಸ್.ಆರ್ ಶ್ರೀನಿವಾಸ್

    Yudveer Singh

    ಯುಧ್ವೀರ್ ಸಿಂಗ್‍ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೇ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಅಲ್ಲಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಸೋಮವಾರ ಮುಂಜಾನೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಸೋದರ ಸಂಬಂಧಿ ಮತ್ತು ಮಾಜಿ ಬಿಜೆಪಿ ರಾಜ್ಯಸಭಾ ಸದಸ್ಯ ರಣವಿಜಯ್ ಸಿಂಗ್ ಹೇಳಿದ್ದಾರೆ.  ಇದನ್ನೂ ಓದಿ: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ

    ಪಾರ್ಥೀವ ಶರೀರವನ್ನು ಮಂಗಳವಾರ ಜಶಪುರಕ್ಕೆ ತರಲಾಗಿದ್ದು, ಅಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ. ಯುಧ್ವೀರ್ ಜುದೇವ್ ತಾಯಿ ಮಾಧ್ವಿ, ಪತ್ನಿ ಸಂಯೋಗಿತಾ ಮತ್ತು ಒಬ್ಬ ಮಗಳನ್ನು ಅಗಲಿದ್ದಾರೆ. 2008ರಲ್ಲಿ ಚಂದ್ರಪುರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಹಾಗೂ 2013ರಲ್ಲಿ ಸತತ ಎರಡನೇ ಬಾರಿಗೆ ಶಾಸಕರಾಗಿ ಯುಧ್ವೀರ್ ಜುದೇವ್ ಆಯ್ಕೆಯಾಗಿದ್ದರು.

  • ಉನ್ನಾವೋ ಕೇಸ್ – ಶಾಸಕ ರೇಪ್‍ಗೈದ 1 ವಾರದ ನಂತ್ರ ಅಪ್ರಾಪ್ತೆಯ ಮೇಲೆ ಮೂವರಿಂದ ಗ್ಯಾಂಗ್‍ರೇಪ್

    ಉನ್ನಾವೋ ಕೇಸ್ – ಶಾಸಕ ರೇಪ್‍ಗೈದ 1 ವಾರದ ನಂತ್ರ ಅಪ್ರಾಪ್ತೆಯ ಮೇಲೆ ಮೂವರಿಂದ ಗ್ಯಾಂಗ್‍ರೇಪ್

    – ಸಿಬಿಐನಿಂದ ದೆಹಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ
    – ಅ.10 ರಿಂದ ವಿಚಾರಣೆ ಆರಂಭ

    ಲಕ್ನೋ: ಉನ್ನಾವೋ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರಿಯ ತನಿಖಾ ದಳ (ಸಿಬಿಐ) ಗುರುವಾರ ದೆಹಲಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ಮೂವರು ಸಂತ್ರಸ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದೆ.

    ಈ ಚಾರ್ಜ್‍ಶೀಟ್‍ನಲ್ಲಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರು ಅತ್ಯಾಚಾರ ಮಾಡಿದ ಒಂದು ವಾರದ ನಂತರ ಅದೇ ಸಂತ್ರಸ್ತೆಯನ್ನು ಇನ್ನೂ ಮೂವರು ಉನ್ನವೋದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಉಲ್ಲೇಖಿಸಿದೆ.

    ಸಂತ್ರಸ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಮೂವರನ್ನು ನರೇಶ್ ತಿವಾರಿ, ಬ್ರಿಜೇಶ್ ಯಾದವ್ ಸಿಂಗ್ ಮತ್ತು ಶುಭಮ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಶುಭಂ ಸಿಂಗ್ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಅವರ ಸಹವರ್ತಿ ಶಶಿ ಸಿಂಗ್ ಅವರ ಪುತ್ರನಾಗಿದ್ದು, ಕುಲದೀಪ್ ಯಾದವ್ ಅವರೇ ಇದನ್ನು ಮಾಡಿಸಿದ್ದಾರೆ ಎಂದು ಆರೋಪಿಸಿದೆ.

    ಸಧ್ಯ ಈ ಮೂವರು ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದು, ಈ ಮೂವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಜೂನ್ 11 2017 ರಂದು ಉನ್ನಾವೊದಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಈ ಪ್ರಕರಣದಲ್ಲಿ ಶಶಿ ಸಿಂಗ್ ಕೂಡ ಸಹ ಆರೋಪಿಯಾಗಿದ್ದಾನೆ. ಶಶಿ ಸಿಂಗ್ ಆಮಿಷವೊಡ್ಡಿ ಕುಲದೀಪ್ ಸಿಂಗ್ ನಿವಾಸಕ್ಕೆ ಸಂತ್ರಸ್ತೆಯನ್ನು ಕರೆ ತಂದ ಬಳಿಕ ಜೂನ್ 4 2017 ರಂದು ಸಂತ್ರಸ್ತೆಯನ್ನು ಕುಲದೀಪ್ ಸಿಂಗ್ ಅತ್ಯಾಚಾರ ಮಾಡಿದ್ದಾರೆ ಎಂದು ಉಲ್ಲೇಖಿಸಿದೆ.

    ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಲು ಅ.10ರಂದು ದಿನ ನಿಗದಿ ಮಾಡಿದೆ. ಇನ್ನು 6 ದಿನ ಸಿಕ್ಕಿದ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯಕ್ಕೆ ಮತ್ತಷ್ಟು ಸಾಕ್ಷ್ಯಗಳನ್ನು ಸಲ್ಲಿಸುವ ಸಾಧ್ಯತೆಯಿದೆ. ರೇಪ್ ಕೇಸ್ ದೇಶಾದ್ಯಂತ ಸುದ್ದಿಯಾದ ಬಳಿಕ ಬಿಜೆಪಿ ಕುಲ್‍ದೀಪ್ ಸಿಂಗ್ ಸೆಂಗಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.

  • ಸೊಸೆಯನ್ನೇ ರೇಪ್‍ಗೈದ ಆರೋಪ: ಬಿಜೆಪಿಯ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್

    ಸೊಸೆಯನ್ನೇ ರೇಪ್‍ಗೈದ ಆರೋಪ: ಬಿಜೆಪಿಯ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್

    ನವದೆಹಲಿ: ಮದ್ಯದ ಅಮಲಿನಲ್ಲಿ ಸೊಸೆಯನ್ನೇ ಅತ್ಯಾಚಾರಗೈದ ಆರೋಪದ ಅಡಿ ಬಿಜೆಪಿಯ ಮಾಜಿ ಶಾಸಕ ಮನೋಜ್ ಶೊಕೀನ್ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿ ಮನೋಜ್ ಶೊಕೀನ್ ಅವರು ದೆಹಲಿಯ ನಂಗ್ಲೋಯಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ 2015ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಮಾಜಿ ಶಾಸಕರ ವಿರುದ್ಧ ಸಂತ್ರಸ್ತೆಯು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಮನೋಜ್ ಶೊಕೀನ್ ಅವರು ಕಳೆದ ಡಿಸೆಂಬರ್ 31ರ ಮಧ್ಯರಾತ್ರಿ ಗನ್ ತೋರಿಸಿ, ಬೆದರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆಯು ದೂರು ನೀಡಿದ್ದಾರೆ. ಈ ಸಂಬಂಧ ಮಾಜಿ ಶಾಸಕರ ವಿರುದ್ಧ ಅತ್ಯಾಚಾರ ಆರೋಪದ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ದೂರಿನಲ್ಲಿ ಏನಿದೆ?:
    2018 ಡಿಸೆಂಬರ್ 31ರಂದು ರಾತ್ರಿ ನಾನು, ಪತಿ, ಸಹೋದರ ಹಾಗೂ ಸಹೋದರ ಸಂಬಂಧಿ ಎಲ್ಲರೂ ಸೇರಿ ಮೀರ ಬಾಘ್ ಪ್ರದೇಶದಲ್ಲಿರುವ ಪತಿಯ ಮನೆಗೆ ಹೊರಡಿದ್ದೇವು. ಆದರೆ ಹೊಸ ವರ್ಷಾಚರಣೆಗೆ ಪತಿ ನನ್ನನ್ನು ಪಾಶ್ಚಿಮ್ ವಿಹಾರ ಪ್ರದೇಶದಲ್ಲಿರುವ ಹೊಟೇಲ್‍ವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿಗೆ ನಮ್ಮ ಅನೇಕ ಸಂಬಂಧಿಕರು ಬಂದಿದ್ದರು. ಸುಮಾರು ಮಧ್ಯ ರಾತ್ರಿ 12:30ಕ್ಕೆ ಪಾರ್ಟಿ ಮುಗಿಸಿ ಮಗೆ ಬಂದಿದ್ದೇವು. ಆದರೆ ಪತಿ ನನ್ನನ್ನು ಮನೆಯಲ್ಲಿ ಬಿಟ್ಟು ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಹೋಗಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

    ಮನೆಯಲ್ಲಿ ನಾನು ಒಬ್ಬಳೆ ಮಲಗಿದ್ದಾಗ ಮಧ್ಯರಾತ್ರಿ 1:30 ಗಂಟೆ ಸುಮಾರು ಮನೆಗೆ ಬಂದ ನನ್ನ ಮಾವ ಮನೋಜ್ ಶೊಕೀನ್, ನಿನ್ನ ಜೊತೆ ಮಾತನಾಡಬೇಕು ಎಂದು ಹೇಳಿ ರೂಂ ಒಳಗೆ ಬಂದರು. ಬಳಿಕ ಅಸಭ್ಯವಾಗಿ ವರ್ತಿಸಲು ಆರಂಭಿಸಿದರು. ಇದನ್ನು ವಿರೋಧಿಸಿದ್ದಕ್ಕೆ ಗನ್ ತೋರಿಸಿ, ಬೊಬ್ಬಿಟ್ಟರೆ ನಿನ್ನ ಸಹೋದರನನ್ನು ಗುಂಡಿಟ್ಟು ಹತ್ಯೆ ಮಾಡುತ್ತೇನೆ ಎಂದು ಬೆದರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಸಂಬಂಧ ಆರೋಪಿ ಮನೋಜ್ ಶೊಕೀನ್ ಅವರ ಐಪಿಸಿ ಸೆಕ್ಷನ್ 376 (ಬಲಾತ್ ಸಂಭೋಗಕ್ಕೆ ದಂಡನೆ) ಹಾಗೂ 506 (ಕೊಲೆ ಬೆದರಿಕೆ) ಅಡಿ ಪ್ರಕರಣದ ದಾಖಲಾಗಿದೆ. ಪ್ರಕರಣ ಕುರಿತು ತನಿಖೆ ಆರಂಭಿಸಲಾಗಿದ್ದು, ಆರೋಪಿಯ ವಿರುದ್ಧ ಸೂಕ್ತಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ ಸೆಜು ಪಿ ಕುರುವಿಲ್ಲಾ ಹೇಳಿದ್ದಾರೆ.