Tag: former CM BS Yeddyurappa

  • ಆಪರೇಷನ್ ಆಡಿಯೋ ಪ್ರಕರಣ – ಎಸ್‍ಐಟಿ ತನಿಖೆ ವಹಿಸಿಕೊಂಡರೆ ತನಿಖೆ ಹೇಗೆ ನಡೆಯುತ್ತೆ?

    ಆಪರೇಷನ್ ಆಡಿಯೋ ಪ್ರಕರಣ – ಎಸ್‍ಐಟಿ ತನಿಖೆ ವಹಿಸಿಕೊಂಡರೆ ತನಿಖೆ ಹೇಗೆ ನಡೆಯುತ್ತೆ?

    ಬೆಂಗಳೂರು: ಆಪರೇಷನ್ ಕಮಲ ವಿರುದ್ಧ ಸಿಎಂ ಕುಮಾರಸ್ವಾಮಿ ಅವರು ಸಿಡಿಸಿರುವ ಆಡಿಯೋ ಕುರಿತು ಮುಖ್ಯಮಂತ್ರಿಗಳು ಇಂದು ಎಸ್‍ಐಟಿ ತನಿಖೆಗೆ ನಡೆಸುವುದಾಗಿ ತಿಳಿಸಿದ್ದು, ಈ ಕ್ರಮಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ವಿಶೇಷ ತನಿಖಾ ದಳಕ್ಕೆ ಪ್ರಕರಣದ ತನಿಖೆ ಒಪ್ಪಿಸುವುದರ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುವ ಹಿಂದೆ ಕಾರಣವೂ ಇದ್ದು, ಸರ್ಕಾರದ ಅಡಿ ಕಾರ್ಯ ನಿರ್ವಹಿಸುವ ಅಧಿಕಾರಿಗಳೆ ತನಿಖೆ ನಡೆಸುವುದಿಂದ ಸರ್ಕಾರದ ಮೇಲೆ ನಂಬಿಕೆ ಇಲ್ಲ ಎಂದು ಬಿಜೆಪಿ ಸ್ಪೀಕರ್ ಎದುರು ತಿಳಿಸಿದೆ. ಒಂದೊಮ್ಮೆ ಸ್ಪೀಕರ್ ಬಿಜೆಪಿ ನಾಯಕರ ಮಾತಿಗೆ ಮಾನ್ಯತೆ ನೀಡದೆ ಎಸ್‍ಐಟಿ ತನಿಖೆಗೆ ಒಪ್ಪಿಸಿದರೆ ಹೇಗಲ್ಲಾ ತನಿಖೆ ನಡೆಯುತ್ತದೆ ಎಂಬ ಮಾಹಿತಿ ಇಂತಿದೆ.

    ತನಿಖೆ ಹೇಗೆ ನಡೆಯುತ್ತದೆ?:
    ಎಸ್‍ಐಟಿ ಅಧಿಕಾರಿಗಳು ಆಪರೇಷನ್ ಆಡಿಯೋ ಕುರಿತು ತನಿಖೆ ನಡೆಸಲು ಅವಕಾಶ ಪಡೆದರೆ ಮೊದಲು ಎಫ್‍ಐಆರ್ ದಾಖಲು ಮಾಡಲಾಗುತ್ತದೆ. ಪೊಲೀಸ್ ಅಧಿಕಾರಿಗಳು ಹೇಗೆ ತನಿಖೆ ನಡೆಸುತ್ತಾರೋ ಹಾಗೆಯೇ ಎಸ್‍ಐಟಿ ತನಿಖೆಯೂ ಆರಂಭವಾಗುತ್ತದೆ. ಇದರೊಂದಿಗೆ ಕ್ರಿಮಿನಿನಲ್ ಪ್ರಕರಣದ ರೀತಿ ತನಿಖೆ ನಡೆಯುವ ಅವಕಾಶಗಳಿದ್ದು, ಎಫ್‍ಐಆರ್ ದಾಖಲಾದ ಬಳಿಕ ಡೀಲ್ ನಡೆದಿದೆ ಎನ್ನಲಾದ ಸ್ಥಳದ ಮಹಜರು ಕಾರ್ಯವನ್ನು ಎಸ್‍ಐಟಿ ತಂಡ ಮಾಡಲಿದೆ.

    ತನಿಖೆಗೂ ಮುನ್ನವೇ ಶಾಸಕ ನಾಗನಗೌಡ ಪುತ್ರ ಶರಣಗೌಡರ ಹೇಳಿಕೆ ಸಂಗ್ರಹ ಮಾಡಬಹುದಾಗಿದ್ದು, ಆಡಿಯೋವನ್ನು ವಶಕ್ಕೆ ಪಡೆದು ಕೂಲಂಕುಷವಾಗಿ ದಾಖಲೆ ಸಂಗ್ರಹ ಮಾಡಲಾಗುತ್ತದೆ. ಜೊತೆಗೆ ಆಡಿಯೋ ಕುರಿತು ಯಾರೆಲ್ಲಾ ಹೆಸರು ಪ್ರಸ್ತಾಪ ಆಗಿದೆಯೋ ಅವರಿಗೆಲ್ಲಾ ಕೂಡ ನೋಟಿಸ್ ನೀಡಲಾಗುತ್ತದೆ. ನಂತರದಲ್ಲಿ ವಶಕ್ಕೆ ಪಡೆದ ಆಡಿಯೋ ದಾಖಲೆಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಮುನ್ನ (ಎಫ್‍ಎಸ್‍ಎಲ್) ವಾಯ್ಸ್ ಸ್ಯಾಂಪಲ್ ಪಡೆಯುವ ಸಾಧ್ಯತೆ ಇದ್ದು, ಈ ವೇಳೆ ವಾಯ್ಸ್ ಸ್ಯಾಂಪಲ್ ನೀಡಲು ಒಪ್ಪಿಗೆ ನೀಡದಿದ್ದರೆ ಬಂಧನ ಮಾಡಲು ಕೂಡ ಅವಕಾಶವಿದೆ.

    ಒಂದೊಮ್ಮೆ ಎಫ್‍ಎಸ್‍ಎಲ್ ವರದಿ ಬಂದರೆ ಆ ವರದಿಯನ್ನು ಆಧರಿಸಿ ಬಂಧನ ನಡೆಸುವ ಸಾಧ್ಯತೆ ಇದ್ದು, ಯಾರನ್ನಾದರೂ ಕೂಡ ಬಂಧಿಸುವ ಅವಕಾಶವಿದೆ. ಅಲ್ಲದೇ ಪ್ರಕರಣದಲ್ಲಿ ಸ್ಪೀಕರ್ ಹಾಗೂ ನ್ಯಾಯಮೂರ್ತಿಗಳ ಹೆಸರು ಪ್ರಸ್ತಾಪ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಸುವ ಹಾಗು 50/25 ಕೋಟಿ ರೂ. ಪ್ರಸ್ತಾಪ ಆಗಿರುವ ಕಾರಣ ಅದಾಯ ತೆರಿಗೆ ಇಲಾಖೆ (ಐಟಿ) ಹಾಗೂ ಜಾರಿ ನಿರ್ದೇಶನಾಲಯದ (ಇಡಿ)ಗೆ ತನಿಖೆ ನಡೆಸಲು ಸೂಚಿಸಬಹುದಾಗಿದೆ. ಅಲ್ಲದೇ ಎಸ್‍ಐಟಿ ನೀಡಲಿರುವ ಚಾರ್ಜ್ ಶೀಟನ್ನು ನ್ಯಾಯಾಲಯಕ್ಕೂ ಸಲ್ಲಿಕೆ ಮಾಡಬಹುದು.

    ಪ್ರಕರಣದಲ್ಲಿ ಸಿಎಂ ಕುಮಾರಸ್ವಾಮಿ ಅವರು ಕೂಡ ಆಡಿಯೋ ರೆಕಾರ್ಡ್ ಮಾಡಲು ನಾನು ಸೂಚನೆ ನೀಡಿದ್ದೇ ಎಂದು ಹೇಳಿದ ಮಾತಿನ ಅನ್ವಯ ಎಚ್‍ಡಿಕೆ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬಹುದಾಗಿದೆ. ತನಿಖೆಯ ವೇಳೆ ಪ್ರಕರಣ ದಾಖಲಾದ ಬಳಿಕ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಬಂಧನ ಸಾಧ್ಯತೆ ಇದ್ದು, ತನಿಖೆಗೆ ಸಹಕಾರ ನೀಡದಿದ್ದರೆ ಬಿಎಸ್ ಯಡಿಯೂರಪ್ಪ ಅವರನ್ನು ಕೂಡ ಬಂಧಿಸುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಜಿ ವರದಿ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್‍ವೈ ತಿರುಗೇಟು

    ಸಿಎಜಿ ವರದಿ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್‍ವೈ ತಿರುಗೇಟು

    ಬೆಂಗಳೂರು: ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದಿಲ್ಲ ಎಂದು ಸಿಎಜಿ ಸಲ್ಲಿಸಿರುವ ವರದಿಯ 35 ಸಾವಿರ ಕೋಟಿ ರೂ. ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ವಾಗ್ದಾಳಿ ನಡೆಸಿದ್ದು, ಕಾನೂನು ಗೊತ್ತಿದ್ದವರೇ ಈ ರೀತಿಯಲ್ಲಿ ಹೇಳಿಕೆ ನೀಡಿದರೆ ಸಾಮಾನ್ಯ ಅಪರಾಧಿ ಯಾವ ರೀತಿ ಕಾನೂನಿಗೆ ಗೌರವ ಕೊಡಬಹುದು ಎಂದು ಪ್ರಶ್ನೆ ಮಾಡುವ ಮೂಲಕ ಕಿಡಿಕಾರಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್‍ವೈ, ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಟೀಕೆ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಇದು ವಾಡಿಕೆ ಆಗಿದೆ. ನಿಮ್ಮ ಪಕ್ಷದವರ ಮೇಲೆ ಆಪಾದನೆ ಬಂದರೆ, ನನ್ನ ಕಡೆ ಬೊಟ್ಟು ಮಾಡಿ ತೋರಿಸುವುದು. 35,000 ಸಾವಿರ ಕೋಟಿಗಳಿಗೆ ಲೆಕ್ಕಪತ್ರವಿಲ್ಲ ಎಂದು ಸಿಎಜಿ ವರದಿ ನೀಡಿದೆ. ಆದರೆ ನಾವೇನು ಜೈಲಿಗೆ ಹೋಗಿಲ್ಲ ಎಂದು ಮಾಜಿ ಸಿಎಂ ಉತ್ತರ ಕೊಡುತ್ತಾರೆ. ಕಾನೂನು ಓದಿದವರೇ ಈ ರೀತಿ ಅಸಂಬದ್ಧ ಹೇಳಿಕೆ ನೀಡಿದರೆ, ಇನ್ನು ಸಾಮಾನ್ಯ ಅಪರಾಧಿ ಏನು ಹೇಳುತ್ತಾನೆ. ಅವರು ಈ ನೆಲದ ಕಾನೂನಿಗೆ ಏಕೆ ಗೌರವ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿ ಟೀಕೆ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಿಂದ 35 ಸಾವಿರ ಕೋಟಿ ರೂ. ಅವ್ಯವಹಾರ: ಬಿಜೆಪಿಯಿಂದ ಸಿಎಜಿ ವರದಿ ಆಧರಿಸಿ ಆರೋಪ

    ಇದೇ ವೇಳೆ ಮಂಡ್ಯದಲ್ಲಿ ಭತ್ತ ಕಟಾವು ಕಾರ್ಯದಲ್ಲಿ ಸಿಎಂ ಭಾಗಿಯಾಗಿಯಾಗುವ ವಿಚಾರ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿಎಂ ಧೋರಣೆಯನ್ನು ನೋಡಿದರೆ ಉತ್ತರ ಕರ್ನಾಟಕ ಬಗ್ಗೆ ಮಲತಾಯಿ ಧೋರಣೆಯನ್ನು ತೋರಿಸುತ್ತದೆ. ಅದ್ದರಿಂದ ಸಿಎಂ ಅಸಡ್ಡೆ ಬಗ್ಗೆ ಹೆಚ್ಚು ಚರ್ಚಿಸುವುದು ಅನಗತ್ಯವಾಗಿದೆ. ರಾಜ್ಯಕ್ಕೆ ಸಿಎಂ ಆಗಿರುವವರು ತಾಯಿಯ ಸ್ಥಾನದಲ್ಲಿ ಇರಬೇಕೇ ಹೊರತು ಮಲತಾಯಿ ಸ್ಥಾನದಲ್ಲಿ ಇರಬಾರದು ಎಂದು ತಿರುಗೇಟು ನೀಡಿದ್ದಾರೆ.

    ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಬಹಳಷ್ಟು ತಾಲೂಕುಗಳು ಬರದಿಂದ ತತ್ತರಿಸಿವೆ. ಜನರಿಗೆ ಕುಡಿಯಲು ನೀರು ಇಲ್ಲ. ಆದರೆ ಸಿಎಂ ಆಗಲಿ ಸಂಪುಟದ ಮಂತ್ರಿಗಳಾಗಲಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿಲ್ಲ. ಜನರ ಸಂಕಷ್ಟಗಳನ್ನು ಅರಿಯಲು ಪ್ರಯತ್ನಿಸುತ್ತಿಲ್ಲ ಎಂದು ಟೀಕೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕನ್ನಡ ಮೇರು ನಟರ ಸ್ಮಾರಕ ಒಂದೆಡೆ ಆಗಬೇಕು – ಬಿಎಸ್‍ವೈ

    ಕನ್ನಡ ಮೇರು ನಟರ ಸ್ಮಾರಕ ಒಂದೆಡೆ ಆಗಬೇಕು – ಬಿಎಸ್‍ವೈ

    ಬೆಂಗಳೂರು: ಕನ್ನಡ ಚಿತ್ರರಂಗದ ಮೂವರು ಮೇರು ನಟರ ಸ್ಮಾರಕಗಳು ಒಂದೇ ಕಡೆ ಆಗಬೇಕೇಂಬುದು ನನ್ನ ಬಯಕೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಮೂವರು ಮೇರು ನಟರಾದ ಡಾ. ರಾಜ್‍ಕುಮಾರ್, ಡಾ. ವಿಷ್ಣುವರ್ಧನ್, ಡಾ. ಅಂಬರೀಶ್ ಅವರ ಸ್ಮಾರಕಗಳು ಒಂದೇ ಕಡೆ ಆಗಬೇಕು ಎಂಬುವುದು ನನ್ನ ಬಯಕೆ. ನಾನು ಹೇಳಿದ್ದು ಆದರೆ ಒಳ್ಳೆಯದು ಎಂದು ವಿಷ್ಣು ಸ್ಮಾರಕ ಸ್ಥಳಾಂತರ ಬಗ್ಗೆ ಪರೋಕ್ಷವಾಗಿ ಒಪ್ಪಿಗೆ ನೀಡಿದ್ದಾರೆ.

    ಸದ್ಯ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಚರ್ಚೆ ಬೇಡ. ಈಗಾಗಲೇ ಅಂಬರೀಶ್ ಅವರ ಅಂತಿಮ ಕಾರ್ಯಗಳನ್ನು ಮಾಡಲು ಸರ್ಕಾರ ಯಶಸ್ವಿಯಾಗಿ ವ್ಯವಸ್ಥೆ ಮಾಡಿದೆ. ಸಿಎಂ ಕುಮಾರಸ್ವಾಮಿ ಅವರು, ಸಚಿವ ಡಿಕೆ ಶಿವಕುಮಾರ್ ಅವರು ಸ್ಮಾರಕದ ಬಗ್ಗೆ ಚಿಂತನೆ ಹೊಂದಿದ್ದಾರೆ. ನನ್ನ ಅಭಿಪ್ರಾಯದಂತೆ ಮೂವರಿಗೂ ಸರಿಸಮಾನವಾಗಿ ಒಂದೇ ಕಡೆ ಸ್ಮಾರಕ ನಿರ್ಮಾಣ ಮಾಡುವುದು ಒಳ್ಳೆಯದು ಎಂಬ ಸಲಹೆ ನೀಡುವುದಾಗಿ ಹೇಳಿದರು. ಅಲ್ಲದೇ ಈ ಹಿಂದೆ ನಡೆದ ಬಗ್ಗೆ ಈಗ ಚರ್ಚೆ ಮಾಡುವುದು ಬೇಡ. ಏಕೆಂದರೆ ಈಗಿನ ಸರ್ಕಾರ ಉತ್ತಮ ನಿರ್ಧಾರ ಕೈಗೊಳ್ಳಲಿ ಎಂದರು. ಅಂದ ಹಾಗೇ, ವಿಷ್ಣುವರ್ಧನ್ ಅವರು 2009ರಲ್ಲಿ ಇಹಲೋಕ ತ್ಯಜಿಸಿದಾಗ ಯಡಿಯೂರಪ್ಪ ಅವರೇ ಸಿಎಂ ಆಗಿದ್ದರು.

    ಅಭಿಮಾನಿಗಳ ಬೇಡಿಕೆ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಭಾರತಿ ವಿಷ್ಣು ವರ್ಧನ್ ಅವರು, ಈಗಾಗಲೇ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣ ಕಾರ್ಯ ಒಂದು ಹಂತಕ್ಕೆ ಆಗಿರುವುದರಿಂದ ಮತ್ತೆ ಅದರ ಸ್ಥಳಾಂತರದ ಚರ್ಚೆ ಬೇಡ. ಈ ಬಗ್ಗೆ ಚರ್ಚೆ ಮಾಡಲು ನಮಗೆ ಇಷ್ಟವಿಲ್ಲ. ಏಕೆಂದರೆ ಅದಕ್ಕೆ ಕಾಲಾವಕಾಶ ಅಂತ್ಯವಾಗಿದೆ. ಕೆಲವರು ಸ್ಮಾರಕದ ಬಗ್ಗೆ ಕೋರ್ಟ್ ಮೆಟ್ಟಿಲು ಹತ್ತಿದ್ದು, ಸಿಎಂ ಅವರು ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಂಡರೆ ಒಳಿತು ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಿಪ್ಪರಲಾಗ ಹಾಕಿದ್ರೂ ಬಿಎಸ್‍ವೈ ಸಿಎಂ ಮತ್ತೆ ಆಗಲ್ಲ – ಜಮೀರ್ ಅಹ್ಮದ್ ಲೇವಡಿ

    ತಿಪ್ಪರಲಾಗ ಹಾಕಿದ್ರೂ ಬಿಎಸ್‍ವೈ ಸಿಎಂ ಮತ್ತೆ ಆಗಲ್ಲ – ಜಮೀರ್ ಅಹ್ಮದ್ ಲೇವಡಿ

    ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಎಷ್ಟೇ ತಿಪ್ಪರಲಾಗ ಹಾಕಿದ್ರೂ ಮತ್ತೆ ಸಿಎಂ ಆಗಲ್ಲ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಬಿಎಸ್ ಯಡಿಯೂರಪ್ಪ ಭೇಟಿಯನ್ನು ಟೀಕಿಸಿದರು. ಚೆನ್ನಾಗಿದ್ದರೆ ಎಲ್ಲರೂ ಜೊತೆಯಲ್ಲಿರುತ್ತಾರೆ. ಸ್ವಲ್ಪ ಹೆಚ್ಚು ಕಡಿಮೆ ಆದರೆ ಬಿಟ್ಟು ಬಿಡುತ್ತಾರೆ. ಕೆಟ್ಟ ಘಳಿಗೆ ಬಂದಾಗ ಹಿಂದೇಟು ಹಾಕುವುದು ಬಿಜೆಪಿಗೆ ಸಾಮಾನ್ಯವಾಗಿದ್ದು, ಜನಾರ್ದನ ರೆಡ್ಡಿ ಬಿಜೆಪಿಯಲ್ಲೇ ಇದ್ದಾರೆ. ರೆಡ್ಡಿ ಅವರು ತಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ಅಂದರೆ ಯೂ ಟರ್ನ್ ಪಕ್ಷ ಎಂದು ಚಾಟಿ ಬೀಸಿದರು.

    ಇದೇ ವೇಳೆ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಹೇಳಿದ ಜಮೀರ್, ಬಿಎಸ್‍ವೈ ಎಷ್ಟೇ ತಿಪ್ಪರಲಾಗ ಹಾಕಿದರೂ ಏನೂ ಮಾಡಲು ಸಾಧ್ಯವಿಲ್ಲ. ಅವರು ಮತ್ತೆ ಮುಖ್ಯಮಂತ್ರಿ ಆಗಲ್ಲ. ಕಳೆದ ಕೆಲ ತಿಂಗಳುಗಳಿಂದ ಯಡಿಯೂರಪ್ಪ ಅವರು ನಿದ್ದೆ ಮಾಡುತ್ತಿಲ್ಲವಂತೆ. ಮುಖ್ಯಮಂತ್ರಿ ಆದೆ ಎಂದು ಕನಸು ಕಾಣುತ್ತಾರಂತೆ. ಕನಸು ಕಾಣುವುದು ತಪ್ಪಲ್ಲ, ಆದರೆ ಹಗಲುಗನಸು ಕಾಣಬೇಡಿ ಎಂದು ಸಲಹೆ ನೀಡಿದರು.

    ಇದಕ್ಕೂ ಮುನ್ನ ರಾಮಮಂದಿರ ನಿರ್ಮಾಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಮತ್ತು ಮಸೀದಿ ಎರಡೂ ನಿರ್ಮಾಣವಾಗಲಿ. ಚುನಾವಣೆ ಬಂದಾಗ ಮಾತ್ರ ಇದು ಪ್ರಚಾರದ ವಿಷಯ ಆಗದಿರಲಿ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರ ನಾಲ್ಕೂವರೆ ವರ್ಷದಲ್ಲಿ ಬಿಜೆಪಿ ಅವರಿಗೆ ನೆನಪಿಗೆ ಬಂದಿಲ್ಲ. ಲೋಕಸಭಾ ಚುನಾವಣೆ ಬಂದರೆ ಮಂದಿರ ನೆನಪಾಗುತ್ತೆ. ಮಂದಿರ ಕಟ್ಟೋಕೆ ಮುಸಲ್ಮಾನರ ವಿರೋಧ ಇಲ್ಲ. ನಮಗೆ ಮಂದಿರವೂ ಆಗಬೇಕು, ಮಸೀದಿಯೂ ನಿರ್ಮಾಣ ಆಗಬೇಕು. ಭಾರತ ಸರ್ವ ಧರ್ಮೀಯರೂ ಸಹೋದರರಂತೆ ಬಾಳುವ ದೇಶ. ವಿಶ್ವದಲ್ಲಿ ಇಂತಹ ಇನ್ನೊಂದು ದೇಶ ನೋಡಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

     

  • ಹೆಚ್‍ಡಿಕೆಗೆ ಶಕ್ತಿ ಕಡಿಮೆ, ಭಾರ ಹೆಚ್ಚು – ಸಿಎಂ ಅಳಬಾರದು ಅಂತ ಏನಿಲ್ಲ ಅಲ್ವಾ : ವಿಪಕ್ಷಗಳಿಗೆ ಸತೀಶ್ ಜಾರಕಿಹೊಳಿ ಟಾಂಗ್

    ಹೆಚ್‍ಡಿಕೆಗೆ ಶಕ್ತಿ ಕಡಿಮೆ, ಭಾರ ಹೆಚ್ಚು – ಸಿಎಂ ಅಳಬಾರದು ಅಂತ ಏನಿಲ್ಲ ಅಲ್ವಾ : ವಿಪಕ್ಷಗಳಿಗೆ ಸತೀಶ್ ಜಾರಕಿಹೊಳಿ ಟಾಂಗ್

    ಬೆಳಗಾವಿ: ಸಿಎಂ ಕುಮಾರಸ್ವಾಮಿ ಅಳಬಾರದಂತೆನಿಲ್ಲ. ಸನ್ನಿವೇಶ, ಸಂದರ್ಭಕ್ಕೆ ತಕ್ಕಂತೆ ಅಲ್ಲಿ ಏನಾದ್ರೂ ಆಗಿರಬಹುದು. ಅವರಿಗೆ ಶಕ್ತಿ ಕಡಿಮೆ, ಭಾರ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಸಿಎಂ ಎಚ್‍ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಒಂದು ಕಡೆ ಕಾಂಗ್ರೆಸ್ ಅವರ ಸಮಸ್ಯೆ ಕೇಳಬೇಕು, ಮತ್ತೊಂದು ಕಡೆ ಬಿಜೆಪಿಯರು ವಿರೋಧ ವ್ಯಕ್ತಪಡಿಸುತ್ತಾರೆ. ಸಿಎಂ ಅದನ್ನು ಸಹಿಸಿಕೊಳ್ಳಬೇಕು. ರಾಜ್ಯದ ಜನರ ಸಮಸ್ಯೆ ಇರುತ್ತೆ, ಹೀಗಾಗಿ ಒಬ್ಬ ವ್ಯಕ್ತಿಗೆ ಕೆಲಸ ಮಾಡಲು ಇತಿಮಿತಿ ಇರುತ್ತೆ. ಆದರೆ ಸಿಎಂ ಗೆ ಹೆಚ್ಚು ಕೆಲಸವಿದೆ ಹೀಗಾಗಿ ಅದರ ಒತ್ತಡದಿಂದ ಅತ್ತಿರಬಹುದು. ಅದನ್ನು ಹೆಚ್ಚು ವ್ಯಾಖ್ಯಾನ ಮಾಡುವುದು ಸರಿಯಲ್ಲ. ಅಳುವುದು ಬಿಡುವುದು ಅವರ ವೈಯಕ್ತಿಕ ಎಂದು ವಿಪಕ್ಷ ನಾಯಕರಿಗೆ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದರು.

    ಇದೇ ವೇಳೆ ಮಾಜಿ ಸಿಎಂ ಬಿಎಸ್‍ವೈ ಗೆ ಪರೋಕ್ಷ ಟಾಂಗ್ ಕೊಟ್ಟ ಅವರು, ವಿರೋಧ ಪಕ್ಷದವರು ಅಧಿಕಾರದಲ್ಲಿದ್ದ ಹಾಗೂ ಇಲ್ಲದ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದಾರೆ. ಬಹಳಷ್ಟು ಜನ ರಾಜಕಾರಣಿಗಳು ಕಣ್ಣೀರು ಹಾಕಿದ್ದಾರೆ. ಸಿಎಂ ಕುಮಾರಸ್ವಾಮಿ ಅವರಿಗೆ ಎಲ್ಲಾ ರೀತಿಯಿಂದ ಸಹಕಾರ ಕೊಡುತ್ತೇವೆ. ಒಳ್ಳೆ ಸರ್ಕಾರ ಕೊಡುವುದೇ ನಮ್ಮ ಉದ್ದೇಶ ಎಂದರು.

    ಉತ್ತರ ಕರ್ನಾಟಕ ಅನ್ಯಾಯದ ಕುರಿತು ಶ್ವೇತ್ರಪತ್ರ ಹೊರಡಿಸುವ ವಿಚಾರ ಪ್ರತಿಕ್ರಿಯೆ ನೀಡಿ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ಹೇಳಿದಂತೆ ಶ್ವೇತಪತ್ರ ಹೊರಡಿಸಲಿ. ಇದಕ್ಕೆ ನಮ್ಮ ಆಗ್ರಹವಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಬಹಳಷ್ಟು ಅನುದಾನ ಕೊಟ್ಟಿದ್ದಾರೆ. ಈ ಬಜೆಟ್ ನಲ್ಲಿ ಅನ್ಯಾಯವಾಗಿದ್ದರೆ ಮತ್ತೆ ಅನುದಾನ ಪಡೆಯಬಹುದು ಎಂದು ಹೇಳಿದರು.

    ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಟಾಂಗ್: ಬಿಜೆಪಿ ಹುಲಿ ಇದ್ದಂತೆ ಕಾಂಗ್ರೆಸ್ ಇಲಿ ಎನ್ನುವಂತೆ ಮಾತನಾಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಗೆ ಏಕವಚನದಲ್ಲಿ ತಿರುಗೇಟು ಕೊಟ್ಟ ಅವರು, ಅವನು ಹೇಳ್ತಾನೆ ಇರ್ತಾನೆ. ಈ ರೀತಿ ಅನಾವಶ್ಯಕ ಮಾತು ಸೃಷ್ಟಿ ಮಾಡುವುದು ಹೊಸದೇನು ಅಲ್ಲ. ಜಾತಿ, ಧರ್ಮ, ಆಹಾರ, ಅಭಿವೃದ್ಧಿಯಲ್ಲಿ ಅನವಶ್ಯಕ ಗೊಂದಲ ಉಂಟುಮಾಡುತ್ತಾನೆ. ಅವನ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.