Tag: Former Minister Renukaacharya

  • ಸಿಎಂ ಆಗಲು ಕುಂದಗೋಳದಲ್ಲಿ ’50 ಕೋಟಿ’ ರೂ. ಡಿಕೆಶಿ ಹೂಡಿಕೆ – ರೇಣುಕಾಚಾರ್ಯ ಗಂಭೀರ ಆರೋಪ

    ಸಿಎಂ ಆಗಲು ಕುಂದಗೋಳದಲ್ಲಿ ’50 ಕೋಟಿ’ ರೂ. ಡಿಕೆಶಿ ಹೂಡಿಕೆ – ರೇಣುಕಾಚಾರ್ಯ ಗಂಭೀರ ಆರೋಪ

    ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬೀಳಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳ ನಡುವೆಯೇ, ಕಾಂಗ್ರೆಸ್ ಹಲವು ನಾಯಕರು ಸಿಎಂ ರೇಸ್‍ಗೆ ಇಳಿದಿದ್ದಾರೆ. ಇತ್ತ ಇದೇ ವೇಳೆ ಸಚಿವ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಎಂಬಿ ಪಾಟೀಲ್ ನಡುವೆ ಸಿಎಂ ಕುರ್ಚಿಗಾಗಿ ರೇಸ್ ನಡೆಯುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ಆರೋಪ ಮಾಡಿದ್ದಾರೆ.

    ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ಅಂತರಿಕ ಕಚ್ಚಾಟ ಹೆಚ್ಚಾಗಲಿದ್ದು, ಒಂದೊಮ್ಮೆ ಸಿಎಂ ಆಗುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಲಭಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಸೈಡ್ ಮಾಡಿ ಡಿಕೆ ಶಿವಕುಮಾರ್ ಕುರ್ಚಿ ಪಡೆಯಲಿದ್ದಾರಾ ಎಂಬ ಅನುಮಾನ ರೇಣುಕಾಚಾರ್ಯ ಅವರ ಹೇಳಿಕೆಯಿಂದ ಮೂಡಿದೆ.

    ಕ್ಷೇತ್ರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಂದಗೋಳ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅವರು 50 ಕೋಟಿ ರೂ. ಹೂಡಿಕೆ ಮಾಡುತ್ತಿದ್ದಾರೆ. ಮತದಾರರಿಗೆ ಹಣ ಹಂಚಿಕೆ ಮಾಡಲು ಬೆಂಗಳೂರಿನಿಂದ 500 ಮಂದಿಯನ್ನು ಬಿಟ್ಟಿದ್ದಾರೆ ಎಂದು ರೇಣುಕಾಚಾರ್ಯ ಆರೋಪ ಮಾಡಿದ್ದಾರೆ.

    ಭ್ರಷ್ಟಾಚಾರ ನಡೆಸಿದ ಹಣವನ್ನು ಇಲ್ಲಿ ಖರ್ಚು ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಪ್ರತಿ ಪಂಚಾಯಿತಿಯ ಜವಾಬ್ದಾರಿಯನ್ನ ಪಕ್ಷದ ಶಾಸಕರಿಗೆ ನೀಡಿದ್ದು, ಪ್ರತಿ ಪಂಚಾಯಿತಿ ವ್ಯಾಪ್ತಿಗೆ ಇಷ್ಟು ಕೋಟಿ ರೂ. ಖರ್ಚು ಮಾಡಬೇಕು. ನಾನು ಸಿಎಂ ಆದರೆ ನಿಮಗೆ ಈ ಸಚಿವ ಸ್ಥಾನ ನೀಡುತ್ತೇನೆ ಎಂದು ಆಮಿಷ ಒಡ್ಡಿದ್ದಾರೆ. ಆದ್ದರಿಂದ ಈ ಮಟ್ಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ. ಆದರೆ ನಮಗೆ ಜನರ ಬೆಂಬಲ ಇದ್ದು, ನಮ್ಮ ಅಭ್ಯರ್ಥಿಯನ್ನು ಜನ ಗೆಲ್ಲಿಸಿಕೊಡುತ್ತಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

    ಇತ್ತ ಸಚಿವ ಡಿಕೆ ಶಿವಕುಮಾರ್ ಅವರು ಕೂಡ ನಾನು ಸನ್ಯಾಸಿ ಅಲ್ಲ, ನನಗೂ ಸಿಎಂ ಆಗುವ ಆಸೆ ಇದೆ ಎಂದು ಹೇಳಿದ್ದರು. ಈ ಹೇಳಿಕೆ ರೇಣುಕಾಚಾರ್ಯ ಅವರ ಆರೋಪಕ್ಕೆ ಪುಷ್ಠಿ ನೀಡುತ್ತಿದೆ. ಆದರೆ ಇಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್ ಅವರು, ನನಗೆ ಸಿಎಂ ಆಗುವ ಆಸೆ ಇದೆ ಎಂದು ಹೇಳಿದ್ದು ಸತ್ಯ. ಆದರೆ ಈಗ ನಮ್ಮ ಪಕ್ಷ ಕುಮಾರಸ್ವಾಮಿ ಅವರನ್ನು 5 ವರ್ಷ ಸಿಎಂ ಎಂದು ನಿರ್ಧರಿಸಿದೆ. ಆದ್ದರಿಂದ ನಾನು ಮುಂದಿನ ಅವಧಿಯಲ್ಲಿ ಎಂದು ಹೇಳಿದ್ದೆ. ನಮ್ಮ ಸರ್ಕಾರದಲ್ಲಿ ಯಾವುದೇ ಬದಲಾವಣೆ ಆಗಲ್ಲ, ಸಮ್ಮಿಶ್ರ ಸರ್ಕಾರ ಬಲಿಷ್ಠವಾಗಿ 5 ವರ್ಷ ಪೂರೈಸುತ್ತದೆ ಎಂದು ಹೇಳಿದರು.

  • ಅಧಿಕಾರಿ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ – ಏರು ಧ್ವನಿಯಲ್ಲೇ ಉತ್ತರಿಸಿದ ಜಿಲ್ಲಾ ಪಂಚಾಯತ್ ಸಿಇಓ

    ಅಧಿಕಾರಿ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ – ಏರು ಧ್ವನಿಯಲ್ಲೇ ಉತ್ತರಿಸಿದ ಜಿಲ್ಲಾ ಪಂಚಾಯತ್ ಸಿಇಓ

    ದಾವಣಗೆರೆ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರೇಣುಕಾಚಾರ್ಯ ಅವರು ಅಧಿಕಾರಿಗಳ ವಿರುದ್ಧ ಕೆಂಡಾಮಂಡರಾಗಿದ್ದು, ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಓ ಏರು ಧ್ವನಿಯಲ್ಲೇ ಉತ್ತರ ನೀಡಿದ್ದಾರೆ.

    ಇಂದು ನಗರದಲ್ಲಿ ನಡೆಸಿದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಶಾಸಕ ರೇಣುಕಾಚಾರ್ಯ, ಜಿಲ್ಲಾ ಸಿಇಓ ಸಿ.ಅಶ್ವತಿ ಅವರು ಜನಪ್ರತಿನಿಧಿಗಳಿಗೆ ಗೌರವ ಕೊಡುತ್ತಿಲ್ಲ. ಯಾವ ಜನಪ್ರತಿನಿಧಿಗಳ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಜಿಲ್ಲಾ ಪಂಚಾಯತ್ ನ ಯಾವುದೇ ಕೆಲಸ ಆಗಲಿ ಸಿಇಓ ಅನುಮತಿ ಬೇಕೆಂದು ಅಧಿಕಾರಿಗಳು ಹೇಳುತ್ತಾರೆ. ಯಾವುದೇ ಫೈಲನ್ನು ನಿಗಧಿತ ಸಮಯದಲ್ಲಿ ಕಳುಹಿಸುವುದಿಲ್ಲ. ನಿಮ್ಮ ದರ್ಬಾರ್ ಏನು ಎಂದು ಪ್ರಶ್ನಿಸಿದ್ದಾರೆ.

    ಈ ವೇಳೆ ಶಾಸಕರ ಮಾತಿಗೆ ಸಭೆಯಲ್ಲೇ ತಿರುಗೇಟು ಕೊಟ್ಟ ಸಿಇಓ ಅಧಿಕಾರಿ ಅಶ್ವತಿ ಅವರು, ನಾನು ಜನಪ್ರತಿನಿಧಿಗಳಿಗೆ ಗೌರವ ಕೊಡುತ್ತಿದ್ದೇನೆ. ಯಾರಿಗೂ ಅಗೌರವ ತೋರುತ್ತಿಲ್ಲ. ನಾನು ಆ ರೀತಿ ನಡೆದುಕೊಂಡಿಲ್ಲ. ನನ್ನ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದು ಏರುಧ್ವನಿಯಲ್ಲೇ ಪ್ರತ್ಯುತ್ತರ ನೀಡಿದ್ದಾರೆ.

    ಮಾಧ್ಯಮಗಳಿಗೆ ಪತ್ರಿಕ್ರಿಯೆ ನೀಡಿದ ರೇಣುಕಾಚಾರ್ಯ ಅವರು, ಅಧಿಕಾರಿಗಳ ವಿರುದ್ಧ ನಾನು ವಾಗ್ದಾಳಿ ನಡೆಸಿಲ್ಲ. ಆದರೆ ಅಧಿಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ತಿಳಿಸಿದ್ದು ಎಲ್ಲಾ ಚುನಾಯಿತ ಸದಸ್ಯರು ಈ ಕುರಿತು ದೂರು ನೀಡಿದ್ದಾರೆ. ಅದ್ದರಿಂದ ಅವರಿಗೆ ಈ ಕುರಿತು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು. ಸಾಮಾನ್ಯ ಸಭೆಯಲ್ಲಿ ಜಿಲ್ಲೆಯ ಶಾಸಕರು ಸೇರಿದಂತೆ, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.