Tag: former minister

  • ಪಬ್ಲಿಕ್ ಟಿವಿ ಜೊತೆ ಕ್ಷಮೆ ಕೇಳಿದ ರಮೇಶ್ ಜಾರಕಿಹೊಳಿ

    ಪಬ್ಲಿಕ್ ಟಿವಿ ಜೊತೆ ಕ್ಷಮೆ ಕೇಳಿದ ರಮೇಶ್ ಜಾರಕಿಹೊಳಿ

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪಬ್ಲಿಕ್ ಟಿವಿ ಬೆಳಗಾವಿ ಜಿಲ್ಲಾ ವರದಿಗಾರರ ಜೊತೆ ಕ್ಷಮೆ ಕೇಳಿದ್ದಾರೆ.

    ಮುಂಬೈನಿಂದ ಇಂದು ಬೆಂಗಳೂರಿಗೆ ಆಗಮಿಸಿದ ಅವರು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಗೋಕಾಕ್‍ನಲ್ಲಿ ವರದಿಗಾರರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಪಬ್ಲಿಕ್ ಟಿವಿ ಬೆಳಗಾವಿ ಜಿಲ್ಲಾ ವರದಿಗಾರ ದಿಲೀಪ್ ಕುರಂದವಾಡೆ ಅವರಲ್ಲಿ ಕ್ಷಮೆ ಯಾಚಿಸುತ್ತೇನೆ. ಅವರು ನನ್ನ ಆತ್ಮೀಯರು. ಹೀಗಾಗಿ ಸಲಿಗೆಯಿಂದ ಮಾತನಾಡಿದ್ದೇನೆ. ನನ್ನಿಂದ ತಪ್ಪಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಕ್ಷಮೆ ಕೇಳಿದ ಬಳಿಕ ಮಾತನಾಡಿದ ಮಾಜಿ ಸಚಿವರು, ಪಕ್ಷದ ಮೇಲೆ ನನಗೆ ಅಸಮಾಧಾನ ಇರುವುದು ನಿಜ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಅಷ್ಟೇ ಅಲ್ಲದೇ ಹೈಕಮಾಂಡ್‍ಗೂ ಸವಾಲು ಹಾಕಿಲ್ಲ. ಮಗಳ ಮದುವೆ ಫೆಬ್ರವರಿ 24ರಂದು ನಡೆಯಲಿದೆ. ಹೀಗಾಗಿ ಬ್ಯುಸಿ ಆಗಿದ್ದೆ ಎಂದರು.

    ನನ್ನ ಸಂಬಂಧಿಕರು ಹೆಚ್ಚಾಗಿರುವುದು ಮುಂಬೈನಲ್ಲಿ. ಮಗಳ ಮದುವೆ ಇರುವುದರಿಂದ ಕಲಾಪ ಮುಗಿಸಿಕೊಂಡು ಇಂದು ಸಂಜೆ ಕೂಡ ಮುಂಬೈಗೆ ವಾಪಸ್ ಹೋಗುತ್ತೇನೆ. ಆದರೆ ನಾನು ಬಿಜೆಪಿ ನಾಯಕರ ಸಂಪರ್ಕದಲ್ಲಿ ಇದ್ದೇನೆ ಎನ್ನುವುದು ಸುಳ್ಳು. ಆದರೆ ನಾನು ಏಕಾಂಗಿಯಾಗಿದ್ದೇನೆ ಎಂದು ಹೇಳಿದರು.

    ನಮ್ಮ ಸ್ನೇಹಿತರಿಗೆ ಬೇರೆ ಸಮಸ್ಯೆಗಳಿವೆ. ಹೀಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‍ಪಿ) ಸಭೆಗಳಿಗೆ ಗೈರಾಗಿದ್ದೇವು. ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಜೊತೆಗೆ ಮಾತನಾಡಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಅಸಮಾಧಾನದ ಬಗ್ಗೆ ಸ್ಪಷ್ಟನೆ ನೀಡಿದರು.

    ಬಿಜೆಪಿ ನಾಯಕರ ಜೊತೆಗೆ ನೀವು ಇದ್ದಿದ್ದು ನಿಜವೇ ಎಂದು ಮಾಧ್ಯಮಗಳು ಪ್ರಶ್ನೆ ಕೇಳುತ್ತಿದ್ದಂತೆ, ರೀ ನೀವು ಸಿಟ್ಟಿನಿಂದ ಕೇಳಬೇಡಿ. ನಗುತ್ತ ಮಾತನಾಡಿ, ನೀವು ನ್ಯಾಯಾಧೀಶರಲ್ಲ ಎಂದು ರಮೇಶ್ ಜಾರಕಿಹೊಳಿ ಉತ್ತರಿಸಿದರು.

    ಬಿಜೆಪಿಯಲ್ಲಿ ನನಗೆ ಬಹಳ ಜನ ಗೆಳೆಯರಿದ್ದಾರೆ. ಅವರೆಲ್ಲರೂ ನಮಗೆ ಮಿತ್ರರು. ಪಕ್ಷದ ಸಿದ್ಧಾಂತಗಳು ಬಂದಾಗ ಮಾತ್ರ ಗಲಾಟೆ ಮಾಡಿಕೊಳ್ಳುತ್ತೇವೆ. ಅಧಿವೇಶನ ಮುಗಿಸಿಕೊಂಡು ಮುಂಬೈಗೆ ತೆರಳುತ್ತೇನೆ. ಹೀಗೆ ಮಾಡಿದ್ರೆ ಆಪರೇಷನ್ ಕಮಲವೇ? ನೀವೇ ಪ್ರಶ್ನೆ ಕೇಳುತ್ತೀರಿ, ಉತ್ತರ ಕೊಡುತ್ತೀರಿ. ನೀವೇ ನನ್ನ ವಿಲನ್ ಮಾಡುತ್ತೀರಿ, ಹೀರೋ ಮಾಡುತ್ತೀರಿ ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದರು.

    ನಾನು ಈಗಲೂ ಬಿಜೆಪಿಯ ಶಾಸಕ ಅಶ್ವಥ್ ನಾರಾಯಣ್ ಅವರ ಮನೆಗೆ ಹೋಗುತ್ತೇನೆ. ಇದು ತಪ್ಪೇ ಎಂದ ಅವರು ಕಾಂಗ್ರೆಸ್‍ನಲ್ಲಿ ಇರುವ ಹಾಗೂ ಬಿಡುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದೇನೆ ಎಂದು ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ಆಗಿದ್ದೇನು?:
    ಡಿಸೆಂಬರ್ ಕೊನೆಯಲ್ಲಿ ಕಾಣೆಯಾಗಿದ್ದ ರಮೇಶ್ ಜಾರಕಿಹೊಳಿ ಅವರು ಜ.3 ರಂದು ಬೆಳಗ್ಗೆ ಗೋಕಾಕ್ ನಲ್ಲಿ ಕಾಣಿಸಿಕೊಂಡಿದ್ದರು. ಬ್ಯಾಡ್ಮಿಂಟನ್ ಆಟವಾಡಿ ನಿವಾಸಕ್ಕೆ ಬಂದಾಗ ಅಲ್ಲೇ ಇದ್ದ ಮಾಧ್ಯಮಗಳು ಪ್ರತಿಕ್ರಿಯೆ ಪಡೆಯಲು ಮುಂದಾಗುತ್ತಿದ್ದಾಗ, ಒದಿಯಬೇಕು ನಿಮ್ಮನ್ನು ಜಾಡಿಸಿ ಒದಿಯಬೇಕು ಅತಿಯಾಯ್ತು ನಿಮ್ಮದು ಹುಚ್ಚರಿದೀರಿ ಎಂದು ರಮೇಶ್ ಅವಾಜ್ ಹಾಕಿದ್ದರು. ರಮೇಶ್ ಜಾರಕಿಹೊಳಿ ಪತ್ರಕರ್ತರಿಗೆ ಅವಾಜ್ ಹಾಕಿದ ವರದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಬೆಳಗ್ಗೆ ಗೋಕಾಕ್‍ನಲ್ಲಿ ಕೇಬಲ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶೀಘ್ರವೇ ಜನಾರ್ದನ ರೆಡ್ಡಿಯ ಮನೆ ಮಾರಾಟಕ್ಕೆ!

    ಶೀಘ್ರವೇ ಜನಾರ್ದನ ರೆಡ್ಡಿಯ ಮನೆ ಮಾರಾಟಕ್ಕೆ!

    ಬೆಂಗಳೂರು: ಆಂಬಿಡೆಂಟ್ ಪ್ರಕರಣದಲ್ಲಿ ವಂಚನೆ ಹಣ ವಸೂಲಿಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಬೆಂಗಳೂರಿನ ನಿವಾಸ ಶೀಘ್ರವೇ ಮಾರಾಟವಾಗುವ ಸಾಧ್ಯತೆಯಿದೆ.

    ಜನಾರ್ದನನ ರೆಡ್ಡಿ ಅವರ ಬೆಂಗಳೂರಿನ ಪಾರಿಜಾತ ಅಪಾರ್ಟ್‍ಮೆಂಟ್ ಮಾರಾಟಕ್ಕೆ ಎಲ್ಲ ರೀತಿಯ ಸಿದ್ಧತೆಗಳಾಗಿದೆ. ಈ ಸಂಬಂಧ ಜನಾರ್ದನ ರೆಡ್ಡಿ ಅವರಿಗೂ ನೋಟಿಸ್ ಕಳುಹಿಸಲಾಗಿದೆ. ಜೊತೆಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ ಸಾರ್ವಜನಿಕ ಮಾರಾಟದ ದಿನಾಂಕ ನಿಗದಿ ಮಾಡಲು ಸಿಸಿಬಿ ನಿರ್ಧರಿಸಿದೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.

    ಏನಿದು ಪ್ರಕರಣ?
    ಆಂಬಿಟೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಹಣಕಾಸು ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿದವರ ಹಿತರಕ್ಷಣಾ ಕಾಯ್ದೆ(ಕೆಪಿಐಡಿ) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಂಚನೆ ಹಣವನ್ನು ಜನಾರ್ದನ ರೆಡ್ಡಿ ಅವರಿಂದ ಪಡೆಯಲು ಸಿಸಿಬಿ ಪಾರಿಜಾತ ಅಪಾರ್ಟ್‍ಮೆಂಟ್ ಮುಟ್ಟುಗೊಲು ಹಾಕಿಕೊಳ್ಳಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿದ್ದ ಕೋರ್ಟ್ ಆಸ್ತಿ ಮುಟ್ಟುಗೋಲಿಗೆ ಒಪ್ಪಿಗೆ ಸೂಚಿಸಿತ್ತು.

    ಕೋರ್ಟ್ ನಿಂದ ಅನುಮತಿ ಪಡೆದ ಸಿಸಿಬಿ ಪೊಲೀಸರು, ಮನೆಯ ಆಸ್ತಿ ಮೌಲ್ಯ ನಿರ್ಧಾರಕ್ಕೆ ಕಂದಾಯ ಇಲಾಖೆಯನ್ನು ಕೇಳಿಕೊಂಡಿತ್ತು. ಹೀಗಾಗಿ ಕಂದಾಯ ಇಲಾಖೆಯ ಸಲ್ಲಿಸಿದ್ದ ಮನವಿಗೆ ಸರ್ಕಾರವು ಇಂದು ಅನುಮತಿ ಕೊಟ್ಟಿದೆ. ಈ ಮೂಲಕ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಪೂರ್ಣವಾಗಿದ್ದು, ಮುಂದಿನ 15 ದಿನಗಳಲ್ಲಿ ಸಿಸಿಬಿ ಪೊಲೀಸರು ಮನೆ ಮಾರಾಟ ಮಾಡುವ ಸಾಧ್ಯತೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ವಿರುದ್ಧ ಎಚ್‍ಡಿಡಿ ಗರಂ..!

    ಪ್ರಧಾನಿ ಮೋದಿ ವಿರುದ್ಧ ಎಚ್‍ಡಿಡಿ ಗರಂ..!

    ಬೆಂಗಳೂರು: ಮಣ್ಣಿನ ಮಗ ಏನು ಮಾಡಿದ್ದಾರೆ ಅಂತ ಪ್ರಶ್ನೆ ಮಾಡಿದ ಪ್ರಧಾನಿ ಮೋದಿ ಅವ್ರಿಗೆ ಉತ್ತರ ಕೊಡ್ತೀನಿ ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಗರಂ ಆಗಿದ್ದಾರೆ.

    ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಮಣ್ಣಿನ ಮಗ ದೇಶಕ್ಕೆ ಏನು ಮಾಡಿದ್ದಾರೆ ಅಂತ ಮೋದಿ ಲಘುವಾಗಿ ಮಾತಾಡಿದ್ದಾರೆ. ನಾನು ದೆಹಲಿಗೆ ಹೋಗುತ್ತಾ ಇದ್ದೇನೆ. ಮಣ್ಣಿನ ಮಗ ಏನ್ ಮಾಡಿದ್ದಾರೆ ಅಂತ ಕೇಳಿದ್ದಾರೆ. ಇದಕ್ಕೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

    ಸಂಸತ್ ನಲ್ಲಿ ಸಮಯ ಸಿಕ್ಕರೆ ಈ ಬಗ್ಗೆ ನಾನು ಮಾತಾಡ್ತೀನಿ. 50 ವರ್ಷ ನಾನು ಏನ್ ಮಾಡಿದ್ದೀನಿ ಅಂತ ಸಂಸತ್ ನಲ್ಲಿ ಉತ್ತರ ಕೊಡ್ತೀನಿ ಅಂತ ಮೋದಿ ವಿರುದ್ಧ ಕಿಡಿಕಾರಿದ್ರು. ಅಧಿವೇಶನ ಮುಗಿದ ಮೇಲೆ ರಾಜ್ಯದಲ್ಲೆ ಇರುತ್ತೇನೆ ಅವರು ನುಡಿದ್ರು.

    ಆಡಿಯೋ ಬಗ್ಗೆ ತಪ್ಪು ಒಪ್ಪಿಕೊಂಡ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ನಿರಾಕರಿಸಿದ್ದಾರೆ. ಆಡಿಯೋ ಬಗ್ಗೆ ನಾನು ಯಾವುದೇ ರಿಯಾಕ್ಷನ್ ಕೊಡೋದಿಲ್ಲ. ಆಡಿಯೋ ಮಾಡಿರೋರು ಯಾರು, ಅದಕ್ಕೆ ಯಾರು ಕಾರಣ ಇದೆಲ್ಲ ನನಗೆ ಸಂಬಂಧ ಇಲ್ಲ. ನಾನು ಪ್ರತಿಕ್ರಿಯೆ ಕೊಡೋದು ಯೋಗ್ಯ ಅಲ್ಲ. ಅದಕ್ಕೆ ನಾನು ರಿಯಾಕ್ಷನ್ ಕೊಡೊಲ್ಲ ಅಂತ ನಿರಾಕರಣೆ ಮಾಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೋಮವಾರದೊಳಗೆ ಜಾಧವ್ ರಾಜೀನಾಮೆ ಪಕ್ಕಾ – ಮಾಜಿ ಸಚಿವ ಬಾಬೂರಾವ್ ಚಿಂಚನಸೂರು

    ಸೋಮವಾರದೊಳಗೆ ಜಾಧವ್ ರಾಜೀನಾಮೆ ಪಕ್ಕಾ – ಮಾಜಿ ಸಚಿವ ಬಾಬೂರಾವ್ ಚಿಂಚನಸೂರು

    ಯಾದಗಿರಿ: ಸೋಮವಾರದೊಳಗೆ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡುವುದು 100ಕ್ಕೆ 100ರಷ್ಟು ಸತ್ಯ ಎಂದು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಹೇಳಿದ್ದಾರೆ.

    ಮುಂಬೈನಲ್ಲಿ ಕಾಂಗ್ರೆಸ್ ಅತೃಪ್ತ ಶಾಸಕರ ಹೊಣೆ ಹೊತ್ತಿರುವ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಗೆ ಚಿಂಚೊಳಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿರುತ್ತಾರೆ. ಜಾಧವ್ ಅವರು ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

    ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಕೀರ್ತಿ ಪತಾಕೆ ಹಾರಿಸೋದೆ ನಮ್ಮ ಗುರಿಯಾಗಿದೆ. ಉಮೇಶ್ ಜಾಧವ್ ಅವರು ರಾಜೀನಾಮೆ ನೀಡಿಯೇ ನೀಡುತ್ತಾರೆ. ಜಾಧವ್ ಅವರನ್ನು ಅನರ್ಹಗೊಳಿಸಿದ್ರೆ ನಮಗೂ ಕಾನೂನು ಗೊತ್ತು. ಮುಂದಿನ ವಾರ ಬಿಎಸ್ ಯಡಿಯೂರಪ್ಪ ಗುರುಮಠಕಲ್ ಕ್ಷೇತ್ರಕ್ಕೆ ಬರುತ್ತಾರೆ ಎಂದು ಅವರು ಹೇಳಿದ್ದಾರೆ.

    ರಾಜ್ಯ ಉಗ್ರಾಣ ನಿಗಮಕ್ಕೆ ಉಮೇಶ್ ಜಾಧವ್ ನೇಮಕಾತಿಯನ್ನ ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಉಮೇಶ್ ಜಾಧವ್ ಬದಲಾಗಿ ಉಗ್ರಾಣ ನಿಗಮಕ್ಕೆ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್‍ರನ್ನ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.

    ಫೆಬ್ರವರಿ 17ರಂದು ಕಲಬುರಗಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲೇ ಜಾಧವ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕಲಬುರಗಿ ಮೀಸಲು ಲೋಕಸಭಾ ಚುನಾವಣೆ ಸಿದ್ಧತೆ ನಡೆಸಲಿದ್ದು, ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ಹಣಿಸಲು ಮುಂದಾಗಲಿದ್ದಾರೆ ಎಂಬುದಾಗಿ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಜು ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ: ರೇವಣ್ಣ

    ಮಂಜು ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ: ರೇವಣ್ಣ

    ಬಾಗಲಕೋಟೆ: ಮಾಜಿ ಸಚಿವ ಎ.ಮಂಜು ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

    ದೇವೇಗೌಡರಿಂದ ಮಾತ್ರ ಹಾಸನದಲ್ಲಿ ಗೆಲ್ಲೋಕೆ ಸಾಧ್ಯ, ಪ್ರಜ್ವಲ್‍ಗೆ ಸಾಧ್ಯವಿಲ್ಲ ಎಂಬ ಎ.ಮಂಜು ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ತಡರಾತ್ರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಎ.ಮಂಜು ಅಂತವನ ಮಾತಿಗೆಲ್ಲ ನಾನು ಪ್ರತಿಕ್ರಿಯೆ ಕೊಡಲು ಆಗುತ್ತಾ? ನಾನು ಅಂತವ್ರಿಗೆಲ್ಲ ರಿಯಾಕ್ಟ್ ಮಾಡಲು ಆಗುತ್ತಾ? ಅವನಿಗೆ ನಾನು ರಿಯಾಕ್ಟ್ ಮಾಡಲ್ಲ, ಇಗ್ನೋರ್ ಮಾಡ್ತೀನಿ. ಅವನನ್ನು ಇಷ್ಟು ಹೊತ್ತಿನಲ್ಲಿ ನೆನಪು ಯಾಕೆ ಮಾಡ್ತೀರಿ ಎಂದು ರೇವಣ್ಣ ಗರಂ ಆಗಿಯೇ ಉತ್ತರಿಸಿದ್ದಾರೆ.

    ಹಾಸನಕ್ಕೆ ದೇವೇಗೌಡರು ಅಥವಾ ಪ್ರಜ್ವಲ್ ಇಬ್ಬರಲ್ಲಿ ಯಾರು ಸ್ಪರ್ಧಿಸಬೇಕೆಂದು ನೀವೇ ಹೇಳಿ. ಅವರನ್ನೇ ನಿಲ್ಲಿಸೋಣ ಎಂದು ರೇವಣ್ಣ ಹಾಸ್ಯ ಚಟಾಕಿ ಹಾರಿಸಿದರು.

    ಸಿಎಂ ಕುಮಾರಸ್ವಾಮಿ ಈ ಸಲ ಬಜೆಟ್ ಮಂಡಿಸಲ್ಲ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದ ರೇವಣ್ಣ, ನೂರಕ್ಕೆ ನೂರು ಸಮ್ಮಿಶ್ರ ಸರ್ಕಾರದಿಂದ ಬಜೆಟ್ ಮಂಡನೆ ಮಾಡ್ತೇವೆ. ಕುಮಾರಸ್ವಾಮಿ ಬಜೆಟ್ ಮಂಡನೆ ಕುರಿತು ಯಾವುದೇ ಅನುಮಾನ ಬೇಡ ಎಂದು ಹೇಳಿದರು.

    ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ಕೊಡ್ತಾರೆ, ನೀವು ಏನು ಯೋಚನೆ ಮಾಡಬೇಡಿ ಎಂದು ಹೇಳಿದಲ್ಲದೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಅಂತೇನಿಲ್ಲ. ರೈತರ ಸಾಲಮನ್ನಾ ಆಗಿದ್ದು ಉತ್ತರ ಕರ್ನಾಟಕಕ್ಕೆ ಅಧಿಕ. ಅದರಲ್ಲೂ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತ್ಯಧಿಕವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಯಾಕೆ ರೈತರ ಸಾಲಮನ್ನಾ ಮಾಡಿಲ್ಲ. ಯಾಕೆ ಬಿಜೆಪಿ ಅವರು ಒತ್ತಾಯಿಸಿಲ್ಲ ಎಂದು ಗರಂ ಆದರು.

    ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾರಂಭಿಸುವ ವಿಚಾರವಾಗಿ ಮಾತನಾಡಿದ ರೇವಣ್ಣ, ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಓಪನ್ ಮಾಡಲೇಬೇಕು. ಯಾರೋ ರೇವಣ್ಣ, ಕುಮಾರಸ್ವಾಮಿ ಮಕ್ಕಳಷ್ಟೇ ಓದಬೇಕೇನ್ರೀ? ಎಲ್‍ಕೆಜಿಯಿಂದ ಇಂಗ್ಲಿಷ್ ಮಿಡಿಯಂ ಮಾಡಲೇಬೇಕು, ಹೊಟ್ಟೆಗೆ ಹಿಟ್ಟಿಲ್ಲದವರ ಮಕ್ಕಳು ಏನ್ ಮಾಡಬೇಕು. ಕೂಲಿ ಮಾಡುವವರ ಮಕ್ಕಳು ಇಂಗ್ಲಿಷ್ ಓದಬಾರದೇನ್ರೀ? ವಿವಿಧ ಇಲಾಖೆ ಅನುದಾನ ಕಟ್ ಮಾಡಿ ಇಂಗ್ಲಿಷ್ ಶಾಲೆಗೆ ನೀಡಬೇಕು. ಇದರಿಂದ ಹಿಂದೆ ಸರಿಯುವ ಮಾತೇ ಇಲ್ಲ. ಈ ಸಾಹಿತಿಗಳು ತಮ್ಮ ಮಕ್ಕಳನ್ನು ಎಲ್ಲಿ ಓದಿಸ್ತಾರೆ. ಹಾಗಿದ್ರೆ ಇಂಗ್ಲಿಷ್ ಶಾಲೆ ಬಂದ್ ಮಾಡಿಬಿಡಲಿ. ನಾನೇನು, ಕನ್ನಡ ಶಾಲೆ ಬೇಡ ಅಂತಿಲ್ಲ. ಒಂದು ಭಾಷೆ ಕನ್ನಡ ಇರಲಿ. ಸಮಾಜ ಕನ್ನಡದಲ್ಲಿ ಹೇಳಿ, ಗಣಿತ, ವಿಜ್ಞಾನ ಇಂಗ್ಲಿಷ್ ನಲ್ಲಿ ಹೇಳಲಿ. ಆದರೆ ಯಾರು ಏನು ಅಂದ್ರೂ ಈ ವಿಷಯದಲ್ಲಿ ನನ್ನದು ನೋ ಕ್ವಶ್ಚನ್. ಎಲ್‍ಕೆಜಿಯಿಂದ ಇಂಗ್ಲಿಷ್ ಶಾಲೆ ಆರಂಭ ಆಗಲೇಬೇಕು ಎಂದು ಹೇಳಿದರು.

    ಕಳೆದ 10 ವರ್ಷದಿಂದ ಹಾಸನದಲ್ಲಿ ಜನ ಕುಡಿಯುವ ನೀರಿಗೆ ಪರದಾಡುತ್ತಿದ್ದರು. ದೈವಾನುಗ್ರಹದಿಂದ ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನನ್ನ ಕಡೆ ಎಷ್ಟು ಸಾಧ್ಯವೋ ಅಷ್ಟು ಹಾಸನಕ್ಕೆ ಸಹಾಯ ಮಾಡ್ತೀನಿ ಎಂದು ರೇವಣ್ಣ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ದೇಶಕ್ಕೆ ಶನಿ ಇದ್ದಂತೆ- ಮಾಜಿ ಸಚಿವ ಜನಾರ್ದನ ಪೂಜಾರಿ

    ಮೋದಿ ದೇಶಕ್ಕೆ ಶನಿ ಇದ್ದಂತೆ- ಮಾಜಿ ಸಚಿವ ಜನಾರ್ದನ ಪೂಜಾರಿ

    ಮಂಗಳೂರು: ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ರಕ್ತಪಾತವಾಗುತ್ತಿದೆ. ಮಮತಾ ಬ್ಯಾನರ್ಜಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ನನಗೆ ಬದುಕಬೇಕೆಂಬ ಆಸೆ ಇಲ್ಲ. ರಾಜ್ಯದ ಜನರಿಗೋಸ್ಕರ ನಾನು ಜನರಿಗೋಸ್ಕರ ಸಾಯುತ್ತೇನೆ. ಮೋದಿಯವರು ನನ್ನ ಬಂಗಾಳದ ಜನರನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ. ಈ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕೆಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

    ಮಮತಾಗೆ ಬೆಂಬಲ ಸೂಚಿಸಿ ತಾನೂ ಕುದ್ರೋಳಿ ದೇವಸ್ಥಾನದಲ್ಲಿ ಉಪವಾಸ ಕೂರೋದಾಗಿ ಮೊದಲು ಹೇಳಿದ ಜನಾರ್ದನ ಪೂಜಾರಿ ನಂತರ ದಿಢೀರ್ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಉಪವಾಸದ ನಿರ್ಧಾರ ಕೈಗೊಳ್ಳೋದಾಗಿ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಂಡ-ಹೆಂಡ್ತಿ ಜಗಳ ಸಾಮಾನ್ಯ, ಆದ್ರೆ ಡಿವೋರ್ಸ್ ಆಗಲ್ಲ: ಮಾಜಿ ಸಚಿವ ಎ.ಮಂಜು

    ಗಂಡ-ಹೆಂಡ್ತಿ ಜಗಳ ಸಾಮಾನ್ಯ, ಆದ್ರೆ ಡಿವೋರ್ಸ್ ಆಗಲ್ಲ: ಮಾಜಿ ಸಚಿವ ಎ.ಮಂಜು

    ಹಾಸನ: ಯಾರಿಗೂ ಯಾವುದು ಅನಿವಾರ್ಯ ಅಲ್ಲ. ಅಭಿವೃದ್ಧಿ ಆಗಬೇಕು ಅಷ್ಟೆ. ಗಂಡ ಹೆಂಡತಿ ನಡುವೆ ನಡೆಯುವ ಜಗಳ ಸಾಮಾನ್ಯ, ಆದ್ರೆ ಅದ್ರಿಂದ ಡಿವೋರ್ಸ್ ಆಗಲ್ಲ ಎಂದು ಮಾಜಿ ಸಚಿವ ಎ ಮಂಜು ಹೇಳಿದ್ದಾರೆ.

    ಕಾಂಗ್ರೆಸ್ ಗಿಂತ ಬಿಜೆಪಿಯ ಮೈತ್ರಿಯೇ ಚೆನ್ನಾಗಿತ್ತು ಎಂಬ ಸಚಿವ ಪುಟ್ಟರಾಜು ಹೇಳಿಕೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಅವರಿಗೆ ಎಲ್ಲರ ಜೊತೆ ಸಂಸಾರ ಮಾಡಿ ಅಭ್ಯಾಸ ಆಗಿದೆ. ಬಿಜೆಪಿ ಜೊತೆಗೂ ಮಾಡಿದ್ದಾರೆ ನಮ್ಮ ಜೊತೆಯೂ ಮಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತಾರೆ ಹೊರತು ಅಭಿವೃದ್ಧಿಗೆ ಅಲ್ಲ. ಪುಟ್ಟರಾಜು ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.

    ನಾನು ಮಾತನಾಡಿದರೆ ತಪ್ಪು. ಅವರು ಮಾತನಾಡಿದರೆ ಸರಿ. ಯಾರಿಗೂ ಯಾವುದು ಅನಿವಾರ್ಯ ಅಲ್ಲ. ಅಭಿವೃದ್ದಿ ಆಗಬೇಕು ಅಷ್ಟೆ. ಗಂಡ-ಹೆಂಡತಿ ನಡುವೆ ನಡೆಯುವ ಜಗಳ ಸಾಮಾನ್ಯವಾಗಿರುತ್ತದೆ. ಆದ್ರೆ ಅದರಿಂದ ಡಿವೋರ್ಸ್ ಆಗಲ್ಲ ಎಂದು ಅವರು ಎರಡು ಪಕ್ಷದ ನಡುವಿನ ಒಳಜಗಳಗಳನ್ನು ಸಮರ್ಥಿಸಿಕೊಂಡರು.

    ಇದೇ ವೇಳೆ ಹಾಸನ ಲೋಕಸಭೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರದ ಕುರಿತು ಮತ್ತೆ ವಿರೋಧ ವ್ಯಕ್ತಪಡಿಸಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಹಾಸನಕ್ಕೆ ಅಭ್ಯರ್ಥಿ ಆಗಬೇಕು ಅನ್ನೋದು ನಮ್ಮ ಆಸೆ. ದೇವೇಗೌಡರಂತಹ ಹಿರಿಯರು ನಮ್ಮ ಮೈತ್ರಿಯಲ್ಲಿ ಇರಬೇಕು. ಸಚಿವ ರೇವಣ್ಣರಿಗೆ ತಿಳುವಳಿಕೆ ಕಡಿಮೆ. ದೇವೇಗೌಡರು ಇರುವಾಗಲೇ ಮಗನೇ ಅಭ್ಯರ್ಥಿ ಅನ್ನೋದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ರು.

    ಪ್ರಜ್ವಲ್ ರೇವಣ್ಣರನ್ನು ಚುನಾವಣೆ ಕಣಕ್ಕಿಳಿಸಿದ್ರೆ ದೇವೇಗೌಡರಿಗೂ ಮತ್ತು ಹಾಸನದ ಜನತೆಗೆ ಅವಮಾನ ಮಾಡಿದಂತಾಗುತ್ತದೆ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ತೀರ್ಮಾನವಾಗದೆ ನಮ್ಮ ಕ್ಷೇತ್ರ ಅನ್ನೋದು ಸರಿಯಲ್ಲ ಅಂದ್ರು.

    https://www.youtube.com/watch?v=8ldpuc1F85w

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಯಕ್ಷಗಾನದ ಸಂಭಾಷಣೆಯಲ್ಲಿ ನರೇಂದ್ರ ಹೆಸರು ಉಲ್ಲೇಖ- ಕಲಾವಿದರಿಂದ ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು

    ಯಕ್ಷಗಾನದ ಸಂಭಾಷಣೆಯಲ್ಲಿ ನರೇಂದ್ರ ಹೆಸರು ಉಲ್ಲೇಖ- ಕಲಾವಿದರಿಂದ ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು

    ಮಂಗಳೂರು: ಯಕ್ಷಗಾನದ ಸಂಭಾಷಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಸರು ಉಲ್ಲೇಖಿಸಿ ಸಂಭಾಷಣೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದ್ದು, ಕಲಾವಿದರನ್ನು ಠಾಣೆಗೆ ಕರೆಸಿಕೊಂಡು ಮುಚ್ಚಳಿಕೆ ಬರೆಸಿಕೊಂಡ ಪೊಲೀಸರ ವಿರುದ್ಧ ಹಿಂದೂ ಪರ ಸಂಘಟನೆಗಳು ಕಿಡಿಕಾರಿವೆ.

    ಛತ್ರಪತಿ ಶಿವಾಜಿ ಮಹಾರಾಜನ ಕಥೆಯುಳ್ಳ ಪ್ರಸಂಗದ ಯಕ್ಷಗಾನ ನಡೆಯುತ್ತಿದ್ದಾಗ ಶಿವಾಜಿಯ ಗುರು ಸಮರ್ಥ ರಾಮದಾಸನ ಪಾತ್ರ ಮಾಡಿದ್ದ ಕಲಾವಿದ ಗಣರಾಜ ಭಟ್ ಬಡೆಕ್ಕಿಲ,”ಭಾರತದ ಸ್ವಚ್ಛತೆಗಾಗಿ ನರೇಂದ್ರನಂತೆ ನೀನು ಕೇಸರಿಯ ತಂಡ ಕಟ್ಟಬೇಕು. ರಾತ್ರಿ ವೇಳೆ ಗೋವುಗಳನ್ನು ಕದ್ದೊಯ್ಯುವ ದುಷ್ಟರನ್ನು ಸದೆಬಡಿಯಲು ಜಾಗರಣ ನಿಲ್ಲುವಂತೆ ತರುಣ ಪಡೆಯನ್ನು ಜಾಗರಣ ವೇದಿಕೆಯ ರೂಪದಲ್ಲಿ ಕಟ್ಟಬೇಕಿದೆ” ಎನ್ನುವ ಉಪದೇಶವನ್ನು ಶಿವಾಜಿಗೆ ಹೇಳುತ್ತಾರೆ. ಇದನ್ನು ಓದಿ: ಇವನರ್ವ, ಇವನರ್ವ ಎಂದು ಡೈಲಾಗ್ ಹೇಳಿದ್ದಕ್ಕೆ ಯಕ್ಷಗಾನ ಹಾಸ್ಯ ಕಲಾವಿದ ಅಮಾನತು!

    ಕಥೆಯ ರೂಪವನ್ನು ಈಗಿನ ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಬದಲಿಸಿಕೊಂಡು ಪ್ರಧಾನಿ ಮತ್ತು ಹಿಂದೂ ಸಂಘಟನೆಯ ಹೆಸರು ಹೇಳಿದ್ದು ಬಿಜೆಪಿ ವಿರೋಧಿಗಳ ಕಣ್ಣು ಕೆಂಪಾಗಿಸಿದ್ದು ಕಾಂಗ್ರೆಸ್ಸಿಗರಿಂದ ಆಕ್ಷೇಪ ಕೇಳಿಬಂದಿದೆ. ಇದರಿಂದಾಗಿ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

    ಈ ಬಗ್ಗೆ ಮಾಹಿತಿ ಪಡೆದ ಮಾಜಿ ಸಚಿವ ರಮಾನಾಥ ರೈ ದಕ್ಷಿಣ ಕನ್ನಡ ಎಸ್‍ಪಿಗೆ ಫೋನ್ ಮಾಡಿ ಕಲಾವಿದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆದರೆ ಲಿಖಿತವಾಗಿ ಯಾವುದೇ ದೂರು ಸಲ್ಲಿಸಿಲ್ಲ. ಇದನ್ನೇ ನೆಪ ಮಾಡಿಕೊಂಡ ಪುತ್ತೂರು ಠಾಣೆ ಪೊಲೀಸರು ಕಲಾವಿದ ಗಣರಾಜ ಭಟ್ಟರನ್ನು ಠಾಣೆಗೆ ಕರೆಸಿ, ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

    ಈ ಯಕ್ಷಗಾನ ಕೆಲವು ದಿನಗಳ ಹಿಂದೆ ಪುತ್ತೂರು ತಾಲೂಕಿನ ದೇಂತಡ್ಕದಲ್ಲಿ ನಡೆದಿತ್ತು. ಇದೀಗ ರಮಾನಾಥ್ ರೈ ಅವರ ಫೋನ್ ಕರೆಗೆ ಪೊಲೀಸರು ಕಲಾವಿದನನ್ನು ಠಾಣೆಗೆ ಕರೆಸಿ, ವಿಚಾರಣೆ ನಡೆಸಿದ್ದು ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಾಜೀನಾಮೆ ಏನಿಲ್ಲ, ಇದು ಬರೀ ಆಟ ಅಷ್ಟೇ: ಬಸವರಾಜ ಹೊರಟ್ಟಿ

    ರಾಜೀನಾಮೆ ಏನಿಲ್ಲ, ಇದು ಬರೀ ಆಟ ಅಷ್ಟೇ: ಬಸವರಾಜ ಹೊರಟ್ಟಿ

    ಧಾರವಾಡ: ಯಾರೂ ರಾಜೀನಾಮೆ ಕೊಡುತ್ತಿದ್ದಾರೋ ಅವರು ಕ್ಷೇತ್ರದಲ್ಲಿ ಮತ್ತೆ ಆರಿಸಿ ಬಾರದಂತೆ ಜನ ನೋಡಿಕೊಳ್ಳಬೇಕು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಆಗ ಶಂಕರ ಅವರು ಮಂತ್ರಿಯಾಗಿದ್ದರು, ಮಂತ್ರಿ ಇದ್ದಾಗ ಕೆಲಸ ಆಗಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಂಕರ್ ಬಿಜೆಪಿ ಒತ್ತಡಕ್ಕೆ ಮಣಿದು ಬೆಂಬಲ ವಾಪಸ್ ತಗೊಂಡಿದ್ದಾರೆ. 12 ಜನ ಶಾಸಕರು ರಾಜೀನಾಮೆ ನೀಡಲ್ಲ. ಇದೆಲ್ಲ ಬರೀ ಆಟ ಅಷ್ಟೇ ಎಂದರು.

    ರಾಜೀನಾಮೆ ಕೊಡುವವರು ಯಾವ ಪುರುಷಾರ್ಥಕ್ಕೆ ರಾಜೀನಾಮೆ ಕೊಡಬಲ್ಲರು? ರಾಜ್ಯದಲ್ಲಿ ಅತಂತ್ರ ಸ್ಥಿತಿ ಬರುತ್ತದೆ. ಮೋದಿ ಕೂಡ ಸಮ್ಮಿಶ್ರ ಸರ್ಕಾರದಲ್ಲಿಯೇ ಅಧಿಕಾರ ನಡೆಸುತ್ತಿದ್ದಾರೆ. ಅವರ ಹಿಂದೆಯೂ ಅನೇಕ ಪಕ್ಷಗಳಿವೆ ಎಂದು ಹೇಳಿದರು.

    ಬಿಜೆಪಿಗೆ ಈಗ ಅಧಿಕಾರ ಏತಕ್ಕೆ ಬೇಕು, ವಿರೋಧ ಪಕ್ಷದಲ್ಲಿದ್ದು ಚೆನ್ನಾಗಿ ಕೆಲಸ ಮಾಡಿ ಮುಂದೆ ಅಧಿಕಾರಕ್ಕೆ ಬರಬಹುದು. ಈಗ ಇಂತಹ ಕೆಲಸ ಮಾಡಿ, ಚುನಾವಣೆಗೆ ಹೋಗಿ ಆರೂವರೆ ಕೋಟಿ ಜನರ ತಲೆ ಮೇಲೆ ಭಾರ ಹಾಕುವುದು ಸರಿಯಲ್ಲ ಎಂದರು.

    ಕುಮಾರಸ್ವಾಮಿ ಏನಾದರೂ ಬಹುಮತ ಸಾಬೀತು ಮಾಡುತ್ತೇನೆ ಎಂದರೆ ಇವರು ಏನು ಮಾಡ್ತಾರೆ. ನಮ್ಮ ಸರ್ಕಾರ ಉಳಿಸಬೇಕಿದೆ. ಅದಕ್ಕಾಗಿ ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ. ಯಾರೂ ಬಿಟ್ಟು ಹೋಗಬಾರದು. ಪುನಃ ಅತಂತ್ರವಾಗಬಾರದು ಸಾಧ್ಯವಾದಷ್ಟು ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೊರಟ್ಟಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ, ಎಲ್ಲೂ ಹೋಗಲ್ಲ- ಸಿದ್ದರಾಮಯ್ಯ

    ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ, ಎಲ್ಲೂ ಹೋಗಲ್ಲ- ಸಿದ್ದರಾಮಯ್ಯ

    ಬಾಗಲಕೋಟೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ. ಅವರು ಪಕ್ಷ ಬಿಟ್ಟು ಹೋಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಬದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ, ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೋಗಲ್ಲ. ಕಾಂಗ್ರೆಸ್‍ನಲ್ಲಿಯೇ ಇರುತ್ತಾರೆ. ದೆಹಲಿ ಪ್ರವಾಸ ಸುಳ್ಳು ಮಾಹಿತಿಯಾಗಿದ್ದು, ಅವರು ಬೆಳಗಾವಿಯಲ್ಲೇ ಇದ್ದಾರೆ. ಆದರೆ ಫೋನ್‍ಗೆ ಸಿಗುತ್ತಿಲ್ಲ ಅಷ್ಟೇ. ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ಜೊತೆಗೆ ನಾನು ಮಾತಾಡಿದ್ದೇನೆ. ಸಚಿವ ಸ್ಥಾನ ಕಳೆದುಕೊಂಡಿದ್ದಕ್ಕೆ ಅವರಿಗೆ ಸ್ವಲ್ಪ ಅಸಮಾಧಾನ ಇದೆ. ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದರು. ಇದನ್ನು ಓದಿ: ಇರೋ ಒಬ್ಬ ಮಗನ ಮೇಲಾಣೆ ಸಾಲಮನ್ನಾ ಮಾಡ್ತೀನಿ: ಸಿಎಂ

    ರಮೇಶ್ ಜಾರಕಿಹೊಳಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗುತ್ತಿದ್ದಾರೆ ಎನ್ನುವುದು ಸುಳ್ಳು. ಬಿಜೆಪಿಯವರು ಸುಳ್ಳು ಹೇಳುತ್ತಾರೆ. ಅದಕ್ಕೆಲ್ಲಾ ಪ್ರತಿಕ್ರಿಯೆ ಕೊಡಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.

    ವಿವಿಧ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಹಾಕೂಟದಲ್ಲಿ ಆಯೋಜಿಸಿದ್ದ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಭಾಗವಹಿಸಲು ಇಂದು ಬದಾಮಿಗೆ ಆಗಮಿಸಿದ್ದರು. ಈ ವೇಳೆ ಬದಾಮಿ ಗೃಹ ಕಚೇರಿಯಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv