Tag: former minister

  • ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಕೇಸಲ್ಲಿ ಜೈಲಿಗೆ ಹೋಗಿದ್ದ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿಯಿಂದ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ.

    ಜನಾರ್ದನ ರೆಡ್ಡಿ ಬಂಧನ ತಪ್ಪಿಸಲು ಕಾಂಗ್ರೆಸ್‍ ನ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಯತ್ನಿಸಿದ್ದಾರೆ ಅನ್ನೋ ಮಾಹಿತಿಯೊಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

    ರೆಡ್ಡಿ ಬಂಧನಕ್ಕೆ ಬಲೆ ಬೀಸುತ್ತಲೇ ರಮೇಶ್ ಜಾರಕಿಹೊಳಿ ಮೂಲಕ ಸಿಎಂ ಮೇಲೆ ರಾಮುಲು ಒತ್ತಡ ಹೇರಿದ್ದಾರಂತೆ. ಸಿಎಂ ಕುಮಾರಸ್ವಾಮಿ ಜೊತೆ ಆತ್ಮಿಯ ಒಡನಾಟ ಹೊಂದಿರುವ ರಮೇಶ್ ಜಾರಕಿಹೊಳಿಯಿಂದ ಈ ಒತ್ತಡ ತಂತ್ರ ಹೂಡಲಾಗಿದೆ. ಆದರೆ ರೆಡ್ಡಿ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ. ನೀವು ಸುಮ್ಮನಿರಿ ಅಂತ ಕುಮಾರಸ್ವಾಮಿ ಹೇಳಿದ್ದು, ಕೊನೆಗೆ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮೂಲಕ ಒತ್ತಡ ಹೇರಲು ಪ್ರಯತ್ನ ಮಾಡಲಾಗಿದೆ ಅಂತ ಹೇಳಲಾಗುತ್ತಿದೆ.

    ರೆಡ್ಡಿ ಅರೆಸ್ಟ್ ಆದ್ರೆ ರಾಮುಲು ಅವರ ವಾಲ್ಮೀಕಿ ಸಮುದಾಯ ಮುನಿಸಿಕೊಳ್ಳಬಹುದು ಎಂದು ಪರೋಕ್ಷ ಬೆದರಿಕೆ ಹಾಕಲಾಗಿತ್ತು. ನಮಗೂ ಕಷ್ಟ ಆಗುತ್ತೆ. ಮುಂದಿನ ದಿನಗಳಲ್ಲಿ ಇದು ಬೇರೆ ಬೆಳವಣಿಗೆಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇದ್ಯಾವುದಕ್ಕೂ ಮುಖ್ಯಮಂತ್ರಿಯವರು ಸೊಪ್ಪು ಹಾಕಿಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಪ್ರಯತ್ನಕ್ಕೂ ಯಶಸ್ಸು ಸಿಕ್ಕಿಲ್ಲ. ಈ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿ ದೊಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಚರ್ಚೆಗಳು ಆರಂಭವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪ್ರತ್ಯೇಕ ರಾಜ್ಯ ರಚಿಸಿ ಜನಾರ್ದನ ರೆಡ್ಡಿಯನ್ನು ಸಿಎಂ ಮಾಡ್ತೀವಿ -ಬಿಜಿಪಿ ವಿರುದ್ಧ ರೆಡ್ಡಿ ಸಮಾಜ ಕಿಡಿ

    ಪ್ರತ್ಯೇಕ ರಾಜ್ಯ ರಚಿಸಿ ಜನಾರ್ದನ ರೆಡ್ಡಿಯನ್ನು ಸಿಎಂ ಮಾಡ್ತೀವಿ -ಬಿಜಿಪಿ ವಿರುದ್ಧ ರೆಡ್ಡಿ ಸಮಾಜ ಕಿಡಿ

    – ಫೇಸ್ ಬುಕ್‍ನಲ್ಲಿ ರೆಡ್ಡಿ ಸಮಾಜದಿಂದ ಮಾಜಿ ಸಚಿವರ ಪರ ಬ್ಯಾಟಿಂಗ್

    ಕೊಪ್ಪಳ: ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಪದೇ ಪದೇ ಹೇಳುತ್ತಿರುವ ಬಿಜೆಪಿ ನಾಯಕರ ವಿರುದ್ಧ ರೆಡ್ಡಿ ಸಮುದಾಯದವರು ಕಿಡಿಕಾರಿದ್ದಾರೆ.

    ಜಿಲ್ಲೆಯ ರೆಡ್ಡಿ ಸಮಾಜದ ಕೆಲವರು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣ ಅಸಮಾಧಾನ ಹೊರ ಹಾಕಿ, ನಾಯಕರಿಗೆ ಸವಾಲ್ ಹಾಕಿದ್ದಾರೆ. ನಾವು ಪ್ರತ್ಯೇಕ ಕರ್ನಾಟಕ ಮಾಡಿಕೊಂಡು ಜನಾರ್ದನ ರೆಡ್ಡಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಗಂಗಾವತಿ ತಾಲೂಕಿನ ಹೇರೂರು ಗ್ರಾಮದ ಶರೇನೇಗೌಡ ಎಂಬವರ ಫೇಸ್ ಬುಕ್‍ನಲ್ಲಿ ಜನಾರ್ದನ ರೆಡ್ಡಿ ಪರ ಬ್ಯಾಟ್ ಬೀಸಿ, ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಅವರ ಪೋಸ್ಟ್‌ ಗೆ ಭಾರೀ ಬೆಂಬಲ ಸಿಕ್ಕಿದ್ದು, ಅನೇಕರು ಜನಾರ್ದನ ರೆಡ್ಡಿ ಬೆಂಬಲಕ್ಕೆ ನಿಂತಿದ್ದಾರೆ. ಉಳಿದಂತೆ ಕೆಲವರು ವ್ಯಂಗ್ಯವಾಡಿದ್ದಾರೆ.

    ಜನಾರ್ದನ್ ರೆಡ್ಡಿ ಪ್ರತ್ಯೇಕ ಕರ್ನಾಟಕದ ಮುಂದಿನ ಸಿಎಂ ಎಂಬ ಪೋಸ್ಟ್‌ ಗೆ ರೆಡ್ಡಿ ಸಮಾಜದ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ಅವಶ್ಯವಿದ್ದಾಗ ನೆನಪಾಗುವುದು ಜನಾರ್ದನ ರೆಡ್ಡಿ, ಆದರೆ ಅವರಿಗೆ ತೊಂದರೆ ಬಂದರೆ ನಮಗೆ ಸಂಬಂಧ ಇಲ್ಲಾ ಅಂತಾ ಹೇಳುತ್ತಿದ್ದಾರೆ ಎಂದು ರೆಡ್ಡಿ ಸಮಾಜದವರು ಆರೋಪಿಸಿದ್ದಾರೆ.

    ಪೋಸ್ಟ್‍ನಲ್ಲಿ ಏನಿದೆ?:
    ಕರ್ನಾಟಕದಲ್ಲಿ 25 ಲಕ್ಷ ರೆಡ್ಡಿ ಸಮಾಜದ ಜನರಿದ್ದಾರೆ. ಆದರೆ ಪ್ರಯೋಜನ ಏನು ಬಂತು? ನಮ್ಮ ನಾಯಕ ಜನಾರ್ದನ ರೆಡ್ಡಿ ಅವರ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ಅವರನ್ನು ಜೈಲಿಗೆ ಹಾಕಲು ಯತ್ನಿಸುತ್ತಿದ್ದಾರೆ. ಆದರೆ ನಾವು ಅವರ ಸಹಾಯಕ್ಕೆ ನಿಂತಿಲ್ಲ. ನಮಗೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನ ಕಟ್ಟಿಸಲು ಜನಾರ್ದನ ರೆಡ್ಡಿ ಬೇಕು. ನಮ್ಮ ಸಮಾಜದ ಕಾರ್ಯಕ್ರಮ ನಡೆಸಲು ಅವರ ಸಹಾಯಬೇಕು. ರಾಜ್ಯದ ಯಾವುದೇ ರೆಡ್ಡಿಗೆ ತೊಂದರೆ ಆದರೆ ಅವರು ಬೇಕು. ಅಷ್ಟೇ ಏಕೆ, ಮೊನ್ನೆ ಬೆಂಗಳೂರಿನಲ್ಲಿ ನಡೆದ ಸಮಾವೇಶಕ್ಕೆ ರೆಡ್ಡಿ ಬೇಕಾಗಿತ್ತು ಎಂದು ಸಮಾಜದ ಮುಖಂಡರ ಮೇಲೆ ಶರೇನೇಗೌಡ ಛಾಟಿ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬಿಜೆಪಿ ಒಂದು ಅವಕಾಶವಾದಿ ಪಕ್ಷ: ಶಿವಾರಾಜ್ ತಂಗಡಗಿ ವ್ಯಂಗ್ಯ

    ಬಿಜೆಪಿ ಒಂದು ಅವಕಾಶವಾದಿ ಪಕ್ಷ: ಶಿವಾರಾಜ್ ತಂಗಡಗಿ ವ್ಯಂಗ್ಯ

    ಕೊಪ್ಪಳ: ಬಿಜೆಪಿ ಒಂದು ಅವಕಾಶವಾದಿ ಪಕ್ಷ. ಅವಕಾಶ ಇದ್ದಾಗ ಉಪಯೋಗಿಸಿ ನಂತರ ಕೈ ಕೊಡುತ್ತಾರೆ. ಇದಕ್ಕೆ ಜೀವಂತ ಸಾಕ್ಷಿ ಅಂದರೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಶಾಸಕ ಬಿ.ಶ್ರೀರಾಮುಲು ಎಂದು ಹೇಳುವ ಮೂಲಕ ಮಾಜಿ ಸಚಿವ ಶಿವಾರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಇಲ್ಲ ಅಂದಿದ್ದರೆ ಅಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಜನಾರ್ದನ ರೆಡ್ಡಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈಗ ಜನಾರ್ದನ ರೆಡ್ಡಿ ನನಗೆ ಸಂಬಂಧವೇ ಇಲ್ಲ ಅಂತಾ ಹೇಳುತ್ತಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆಯಲ್ಲಿ 5 ಜನ ಪಕ್ಷೇತರ ಶಾಸಕರನ್ನು ಕರೆತರಲು ಈ ಇಬ್ಬರು ನಾಯಕರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ ನಂತರದಲ್ಲಿ ಬಹುಮತದಿಂದ ಜಯ ಸಾಧಿಸಿದ್ದ ಬಿಜೆಪಿಯವರು ನಮ್ಮನ್ನು ಕೈಬಿಟ್ಟರು. ನಮ್ಮಂತೆ ಈಗ ಜನಾರ್ದನ ರೆಡ್ಡಿ ಬಿಜೆಪಿ ಕೈಬಿಟ್ಟಿದೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಈಗಲಾದರೂ ಅರ್ಥ ಆಗಬೇಕು ಎಂದು ಆರೋಪಿಸಿದರು.

    ಸಮ್ಮಿಶ್ರ ಸರ್ಕಾರ ರಚನೆಯ ಜವಾಬ್ದಾರಿ ಹೊತ್ತು, ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು. ಅಷ್ಟೇ ಅಲ್ಲದೆ ಚುನಾವಣೆ ವೇಳೆ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಸುಳ್ಳು ಹೇಳಿ ಈ ಭಾಗದ ಮತಗಳನ್ನು ಕದ್ದಿದ್ದರು ಎಂದು ದೂರಿದರು.

    ಶ್ರೀರಾಮುಲು ಅವರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಅಂತಾ ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದ ವೇಳೆ ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಹೇಳಿದ್ದರು. ಸತ್ಯ ಏನು ಅಂದರೆ ಅವರು ಬೊಗಳೆ ಬಿಟ್ಟಿದ್ದಾರೆ ಅಷ್ಟೇ. ಉಪಮುಖ್ಯಮಂತ್ರಿ ಅಲ್ಲಾ ಕೊನೆಪಕ್ಷ ವಿರೋಧ ಪಕ್ಷದ ಉಪನಾಯಕರನ್ನಾಗಿ ಶ್ರೀರಾಮುಲು ಅವರನ್ನು ನೇಮಿಸಲಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜನಾರ್ದನ ರೆಡ್ಡಿಯ ಡೀಲ್ ಕೇಸ್‍ನಲ್ಲಿ ಮೆಗಾ ಟ್ವಿಸ್ಟ್

    ಜನಾರ್ದನ ರೆಡ್ಡಿಯ ಡೀಲ್ ಕೇಸ್‍ನಲ್ಲಿ ಮೆಗಾ ಟ್ವಿಸ್ಟ್

    ಬೆಂಗಳೂರು: ಮಾಜಿ ಸಚಿವ ಗಣಿಧಣಿ ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತಮ್ಮ ವಕೀಲ ಚಂದ್ರಶೇಖರ್ ಜೊತೆ ಸಿಸಿಬಿಗೆ ಹಾಜರಾಗಿದ್ದರು. ಆದರೆ ಇಂದು ರೆಡ್ಡಿಯ ಡೀಲ್ ಕೇಸಿನಲ್ಲಿ ಮೆಗಾ ಟ್ವಿಸ್ಟ್ ಸಿಕ್ಕಿದೆ.

    `ಡೀಲ್’ ರೆಡ್ಡಿ ವಿರುದ್ಧ ಸಾಕ್ಷ್ಯ ಕಲೆಹಾಕಲು ಸಿಸಿಬಿ ಕಸರತ್ತು ನಡೆಸುತ್ತಿದ್ದು, ಸತತ 16 ಗಂಟೆಗಳಿಂದ ಗಣಿಧಣಿ ರೆಡ್ಡಿಗೆ ಫುಲ್ ಗ್ರಿಲ್ ಮಾಡುತ್ತಿದ್ದಾರೆ. ಆದರೂ ರೆಡ್ಡಿ ವಿರುದ್ಧ ಸಿಸಿಬಿಗೆ ಪೂರಕ ಸಾಕ್ಷ್ಯ ಸಿಕ್ಕಿಲ್ವಾ ಎಂಬ ಪ್ರಶ್ನೆ ಮೂಡಿದೆ.

    ಸಿಸಿಬಿ ಪೊಲೀಸರು ತಡರಾತ್ರಿ ಮತ್ತೊಬ್ಬರನ್ನ ವಶಕ್ಕೆ ಪಡೆದಿದ್ದು, ರೆಡ್ಡಿ ವಿರುದ್ಧ ಸಾಕ್ಷಿ ನುಡಿಯಲು ಬಂದ ಆತ ಬೇರಾರು ಅಲ್ಲ ಬಿಲ್ಡರ್ ಬ್ರಿಜೇಶ್ ರೆಡ್ಡಿ ಆಪ್ತನಾಗಿದ್ದಾರೆ. ಅಂಬಿಡೆಂಟ್ ಮಾಲೀಕ ಫರೀಧ್ ಮತ್ತು ರೆಡ್ಡಿ ನಡುವೆ ಡೀಲ್ ಕುದುರಿಸಿದ್ದೇ ಬ್ರಿಜೇಶ್ ರೆಡ್ಡಿ. ಈತನ ಎಲ್ಲಾ ಚಟುವಟಿಕೆಗಳಿಗೂ ಬ್ರಿಜೇಶ್ ಆಪ್ತ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಅಂತೆಯೇ ತಾಜ್ ವೆಸ್ಟೆಂಡ್ ನಲ್ಲಿ ಕುದುರಿದ ಡೀಲ್‍ಗೂ ಬ್ರಿಜೇಶ್ ರೆಡ್ಡಿ ಆಪ್ತ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಹೀಗಾಗಿ ಬ್ರಿಜೇಶ್ ರೆಡ್ಡಿ ಆಪ್ತನನ್ನು ಕರೆತಂದು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯಕ್ಕೆ ಸಿಸಿಬಿ ಪೊಲೀಸರು ರೆಡ್ಡಿ ವಿರುದ್ಧ ಪೂರಕ ಸಾಕ್ಷಿ ಕಲೆ ಹಾಕುತ್ತಿದ್ದಾರೆ.

    ಪ್ರಕರಣದ ಕುರಿತಂತೆ ಸಿಸಿಬಿಗೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರೆಡ್ಡಿ ಬಂಧನಕ್ಕೆ ಬೇಕಾಗಿರುವ ಸಾಕ್ಷ್ಯಾಧಾರಗಳನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಶನಿವಾರ ಸಂಜೆ 4 ಗಂಟೆಯಿಂದ ತಡರಾತ್ರಿ 2 ಗಂಟೆವರೆಗೂ ಸಿಸಿಬಿ ರೆಡ್ಡಿ ಹೇಳಿಕೆಯನ್ನು ಪಡೆದಿದೆ. ಸತತ 10 ಗಂಟೆಗಳ ಕಾಲ ರೆಡ್ಡಿಯನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ರೆಡ್ಡಿ, ಅಲಿಖಾನ್, ಫರೀದ್ ಹೇಳಿಕೆಯಲ್ಲಿ ವ್ಯತ್ಯಾಸ ಬರುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಮತ್ತೊರ್ವ ವ್ಯಕ್ತಿಯನ್ನು ಕರೆ ತಂದಿದ್ದು, ಸಿಸಿಬಿ ಎಸಿಪಿ ಸುಬ್ರಹ್ಮಣ್ಯ ನೇತೃತ್ವದ ತಂಡದಿಂದ ಮತ್ತೊಬ್ಬ ವ್ಯಕ್ತಿ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

    ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಹೊರಬೀಳುತ್ತಿದ್ದಂತೆಯೇ ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದರು ಎಂದು ಹೇಳಲಾಗಿದ್ದು, ಶನಿವಾರ ಮಧ್ಯಾಹ್ನ ತಮ್ಮ ವಕೀಲ ಚಂದ್ರಶೇಖರ್ ಜೊತೆ ಸಿಸಿಬಿಗೆ ಹಾಜರಾಗಿದ್ದರು. ಇದಕ್ಕೂ ಮೊದಲು ವಿಡಿಯೋ ಮಾಡಿ ಮಾಧ್ಯಮಕ್ಕೆ ಬಿಡುಗಡೆಗೊಳಿಸಿದ್ದರು. ವಿಡಿಯೋದಲ್ಲಿ ಕಳೆದ ನಾಲ್ಕು ದಿನಗಳಿಂದ ನನ್ನ ಬಗ್ಗೆ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದವು. ಈ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕೆಂದು ವಕೀಲರ ಸಲಹೆಯ ಮೇರೆಗೆ ಈ ವಿಡಿಯೋವನ್ನು ಮಾಡಿದ್ದೇನೆ. ಪೊಲೀಸರು ಕೆಟ್ಟ ಉದ್ದೇಶದಿಂದ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಸಿಸಿಬಿ ಕಚೇರಿಗೆ ಹೋಗಿ ಸ್ಪಷ್ಟನೆ ನೀಡಲು ತೀರ್ಮಾನಿಸಿದಾಗ, ವಕೀಲರು ನಮಗೆ ಯಾವುದೇ ನೋಟಿಸ್ ನೀಡಿಲ್ಲ ಮತ್ತು ಎಫ್‍ಐಆರ್ ನಲ್ಲಿ ನಿಮ್ಮ ಹೆಸರಿಲ್ಲ. ಯಾವ ಕಾರಣಕ್ಕಾಗಿ ಸಿಸಿಬಿಗೆ ಹೋಗಬೇಕೆಂದು ತಿಳಿಸಿದ್ದರು ಅಂತ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಮ್ ಬಾಸ್ ಇಲ್ಲೇ ಇದ್ದಾರೆ, ನಾನ್ ಇಲ್ಲಿಂದ ಹೋಗಲ್ಲ – ಸ್ವಾಮಿ ನಿಷ್ಠೆ ಮೆರೆದ ರೆಡ್ಡಿ ಪಿಎ ಅಲಿಖಾನ್

    ನಮ್ ಬಾಸ್ ಇಲ್ಲೇ ಇದ್ದಾರೆ, ನಾನ್ ಇಲ್ಲಿಂದ ಹೋಗಲ್ಲ – ಸ್ವಾಮಿ ನಿಷ್ಠೆ ಮೆರೆದ ರೆಡ್ಡಿ ಪಿಎ ಅಲಿಖಾನ್

    ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರೋ ಮಾಜಿ ಗಣಿಧಣಿ ಜನಾರ್ದನ ರೆಡ್ಡಿ ಅವರ ಪಿಎ ಅಲಿಖಾನ್ ಸ್ವಾಮಿನಿಷ್ಠೆ ಮೆರೆದಿದ್ದಾರೆ.

    ರೆಡ್ಡಿ ವಿಚಾರಣೆಯಾಗುತ್ತಿದ್ದಂತೆಯೇ ಅಲಿಖಾನ್ ನನ್ನು ಮನೆಗೆ ತೆರಳುವಂತೆ ಪೊಲೀಸರು ಸೂಚಿಸಿದ್ದರು. ಈ ವೇಳೆ ಅಲಿಖಾನ್, ನಮ್ಮ ಬಾಸ್ ಇಲ್ಲೇ ಇದ್ದಾರೆ. ಹೀಗಾಗಿ ನಾನೂ ಇಲ್ಲೇ ಇರುತ್ತೀನಿ. ನಮ್ಮ ಬಾಸ್ ನ ಬಿಟ್ಟು ಹೋಗಲ್ಲ ಅಂತ ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ಕಷ್ಟದ ವೇಳೆಯೂ ಶಿಷ್ಯ ಆಲಿಖಾನ್ ಗಣಿಧಣಿಗೆ ನಿಷ್ಠೆ ಮೆರೆದಿದ್ದಾನೆ ಎಂದು ಹೇಳಲಾಗುತ್ತಿದೆ.

    ರೆಟ್ಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಖಾನ್ ನನ್ನು ಶನಿವಾರ ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದರು. ಆದ್ರೆ ಸದ್ಯ ಅಲಿಖಾನ್ , ಜನಾರ್ದನ ರೆಡ್ಡಿ ಜೊತೆಯೇ ಸಿಸಿಬಿ ಕಚೇರಿಯಲ್ಲಿದ್ದಾನೆ.

    ಅಲಿಖಾನ್ ಅರೆಸ್ಟ್:
    ಅಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಜೊತೆ ಸಿಸಿಬಿ ಅಧಿಕಾರಿಗಳ ಬಳಿ ಆಗಮಿಸಿದ್ದ ಅಲಿಖಾನ್ ನನ್ನು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಅಲಿಖಾನ್ ನನ್ನು ಶನಿವಾರ ಪೊಲೀಸರು ಬಂಧಿಸಿದ್ದರು. ಅಲಿಕಾನ್ ವಿರುದ್ಧ ನಿನ್ನೆ ಬೆಳಗ್ಗೆಯೇ ಅಕ್ರಮ ಶಸ್ತ್ರಾಸ್ತ್ರದ ಕಾಯ್ದೆಯಡಿ ಸಿಸಿಬಿ ಪೊಲೀಸರು ಪ್ರತ್ಯೇಕ ಕೇಸ್ ದಾಖಲಿಸಿದ್ದರು. ಹೀಗಾಗಿ ರೆಡ್ಡಿ ಜೊತೆ ಬಂದ ಅಲಿಖಾನ್ ನನ್ನು ಸಿಸಿಬಿ ಬಂಧಿಸಿತ್ತು. ಅಲಿಖಾನ್ ಹೊಂದಿರುವ ಶಸ್ತ್ರಾಸ್ರ ಪರವಾನಿಗೆ 2017ರಲ್ಲಿ ಅಂತ್ಯಗೊಂಡಿತ್ತು. ಪರವಾನಿಗೆಯನ್ನು ನವೀಕರಣ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಅಲಿಖಾನ್ ಬಂಧನವಾಗಿದೆ. ಅಲಿಖಾನ್ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ 5 ಜೀವಂತ ಗುಂಡುಗಳು ಪತ್ತೆಯಾಗಿದ್ದವು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಆಂಬಿಡೆಂಟ್ ಡೀಲ್ ಪ್ರಕರಣದ ಸೂತ್ರಧಾರಿ ಆಗಿರುವ ಅಲಿಖಾನ್ ಜಾಮೀನು ಸಹ ಪಡೆದುಕೊಂಡಿದ್ದ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಜನಾರ್ದನ ರೆಡ್ಡಿ ಜೊತೆಯಲ್ಲಿ ಅಲಿಖಾನ್ ಸಿಸಿಬಿ ಕಚೇರಿಗೆ ಆಗಮಿಸುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಒಂದು ವಾರ ಸಿಗದೆ ಕಾಡಿದ ರೆಡ್ಡಿಗೆ ಇಡೀ ರಾತ್ರಿ ಕಾಡಿದ ಸಿಸಿಬಿ – ತಡರಾತ್ರಿ 2 ಗಂಟೆವರೆಗೂ ವಿಚಾರಣೆ

    ಒಂದು ವಾರ ಸಿಗದೆ ಕಾಡಿದ ರೆಡ್ಡಿಗೆ ಇಡೀ ರಾತ್ರಿ ಕಾಡಿದ ಸಿಸಿಬಿ – ತಡರಾತ್ರಿ 2 ಗಂಟೆವರೆಗೂ ವಿಚಾರಣೆ

    ಬೆಂಗಳೂರು: ಒಂದು ವಾರ ಸಿಗದೆ ಕಾಡಿದ ಮಾಜಿ ಸಚಿವ ಗಣಿದಣಿ ಜನಾರ್ದನ ರೆಡ್ಡಿಗೆ ಸಿಸಿಬಿ ತಡರಾತ್ರಿವರೆಗೂ ಪ್ರಶ್ನೆಗಳ ಸುರಿಮಳೆ ಸುರಿಸಿದೆ. ತಡರಾತ್ರಿ 2 ವರೆಗೂ ರೆಡ್ಡಿಗೆ ಸಿಸಿಬಿ ಅಧಿಕಾರಿಗಳಿಂದ ತೀವ್ರ ವಿಚಾರಣೆ ನಡೆದಿದೆ.

    ಪ್ರಕರಣದ ಕುರಿತಂತೆ ಸಿಸಿಬಿಗೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರೆಡ್ಡಿ ಬಂಧನಕ್ಕೆ ಬೇಕಾಗಿರುವ ಸಾಕ್ಷ್ಯಾಧಾರಗಳನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಶನಿವಾರ ಸಂಜೆ 4 ಗಂಟೆಯಿಂದ ತಡರಾತ್ರಿ 2 ಗಂಟೆವರೆಗೂ ಸಿಸಿಬಿ ರೆಡ್ಡಿ ಹೇಳಿಕೆಯನ್ನು ಪಡೆದಿದೆ. ಸತತ 10 ಗಂಟೆಗಳ ಕಾಲ ರೆಡ್ಡಿಯನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ರೆಡ್ಡಿ, ಅಲಿಖಾನ್, ಫರೀದ್ ಹೇಳಿಕೆಯಲ್ಲಿ ವ್ಯತ್ಯಾಸ ಬರುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಮತ್ತೊರ್ವ ವ್ಯಕ್ತಿಯನ್ನು ಕರೆ ತಂದಿದ್ದು, ಸಿಸಿಬಿ ಎಸಿಪಿ ಸುಬ್ರಹ್ಮಣ್ಯ ನೇತೃತ್ವದ ತಂಡದಿಂದ ಮತ್ತೊಬ್ಬ ವ್ಯಕ್ತಿ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

    ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಹೊರಬೀಳುತ್ತಿದ್ದಂತೆಯೇ ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದರು ಎಂದು ಹೇಳಲಾಗಿದ್ದು, ಶನಿವಾರ ಮಧ್ಯಾಹ್ನ ತಮ್ಮ ವಕೀಲ ಚಂದ್ರಶೇಖರ್ ಜೊತೆ ಸಿಸಿಬಿಗೆ ಹಾಜರಾಗಿದ್ದರು. ಇದಕ್ಕೂ ಮೊದಲು ವಿಡಿಯೋ ಮಾಡಿ ಮಾಧ್ಯಮಕ್ಕೆ ಬಿಡುಗಡೆಗೊಳಿಸಿದ್ದರು. ವಿಡಿಯೋದಲ್ಲಿ ಕಳೆದ ನಾಲ್ಕು ದಿನಗಳಿಂದ ನನ್ನ ಬಗ್ಗೆ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದವು. ಈ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕೆಂದು ವಕೀಲರ ಸಲಹೆಯ ಮೇರೆಗೆ ಈ ವಿಡಿಯೋವನ್ನು ಮಾಡಿದ್ದೇನೆ. ಪೊಲೀಸರು ಕೆಟ್ಟ ಉದ್ದೇಶದಿಂದ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಸಿಸಿಬಿ ಕಚೇರಿಗೆ ಹೋಗಿ ಸ್ಪಷ್ಟನೆ ನೀಡಲು ತೀರ್ಮಾನಿಸಿದಾಗ, ವಕೀಲರು ನಮಗೆ ಯಾವುದೇ ನೋಟಿಸ್ ನೀಡಿಲ್ಲ ಮತ್ತು ಎಫ್‍ಐಆರ್ ನಲ್ಲಿ ನಿಮ್ಮ ಹೆಸರಿಲ್ಲ. ಯಾವ ಕಾರಣಕ್ಕಾಗಿ ಸಿಸಿಬಿಗೆ ಹೋಗಬೇಕೆಂದು ತಿಳಿಸಿದ್ದರು ಅಂತ ಹೇಳಿದ್ದರು.

    ಈ ಮೊದಲು ವಕೀಲ ಚಂದ್ರಶೇಖರ್ ಮಾತನಾಡಿ, ಅಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಜನಾರ್ದನ ರೆಡ್ಡಿಯವರ ಹೆಸರನ್ನು ಪ್ರಸ್ತಾಪಿಸಿದ್ದರು. ಅಲ್ಲದೇ ಅದೇ ಪೊಲೀಸ್ ಪ್ರಕರಟಣೆಯಲ್ಲಿ ರೆಡ್ಡಿ ವಿರುದ್ಧ ಕೆಲವೊಂದು ಆರೋಪಗಳನ್ನು ಕೂಡ ಮಾಡಿದ್ದರು. ಆದ್ರೆ ಅವೆಲ್ಲವೂ ಸತ್ಯಕ್ಕೆ ದೂರವಾದದ್ದಾಗಿದೆ. ವಿನಾಕಾರಣ ಸಿಸಿಬಿಯವರು ಜನಾರ್ದನ ರೆಡ್ಡಿ ಮೇಲೆ ಆರೋಪ ಮಾಡಿದ್ದಾರೆ. ಆದ್ರೆ ಸಿಸಿಬಿ ನೋಟಿಸ್ ಜಾರಿ ಮಾಡಲಿಲ್ಲ. ಹೀಗಾಗಿ ನೀವು ನೋಟಿಸ್ ಜಾರಿ ಮಾಡಿ ಅಂತ ಕೇಳಿಕೊಂಡಿದ್ದೆವು. ನೋಟಿಸ್ ಜಾರಿ ಮಾಡದೇ ನಾವು ವಿಚಾರಣೆಗೆ ಹಾಜರಾಗುವುದ ಹೇಗೆ ಅಂತ ಪ್ರಶ್ನಿಸಿದ್ದೆವು. ಹೀಗಾಗಿ ಇದೀಗ ಸಿಸಿಬಿ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸದ್ಯ ನಾವು ಸಿಸಿಬಿಗೆ ಹಾಜರಾಗುತ್ತೇವೆ. ಈ ಕೇಸ್ ನಲ್ಲಿ ಪ್ರತಿ ಹಂತದಲ್ಲಿಯೂ ವಿಚಾರಣೆಗೆ ಸಂಪೂರ್ಣವಾಗಿ ಸಿದ್ಧರಿದ್ದೇವೆ. ಒಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಅಂತ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜನಾರ್ದನ ರೆಡ್ಡಿಯವರ ಸಿಸಿಬಿ ವಿಚಾರಣೆಯ ಸಂಪೂರ್ಣ ವಿವರ ಇಲ್ಲಿದೆ

    ಜನಾರ್ದನ ರೆಡ್ಡಿಯವರ ಸಿಸಿಬಿ ವಿಚಾರಣೆಯ ಸಂಪೂರ್ಣ ವಿವರ ಇಲ್ಲಿದೆ

    ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರನ್ನು ಇಂದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ವಿಚಾರಣೆಯಲ್ಲಿ ಕೇಳಿದ ಪ್ರಶ್ನೆಗಳು ಇಂತಿವೆ..
    * ಅಲೋಕ್: ಡೀಲ್ ಮಾಡಿದ್ದೀಯಾ.. ಖಾತೆಗೆ ದುಡ್ಡು ಬಂದಿದೆ. ಟಾಪ್ ಟು ಬಾಟಂ ಏನಾಗಿದೆ ಅಂತ ಒಂದೇ ಸಲ ಒದರಬೇಕು. ನಿನ್ನ ಎಲ್ಲಾ ಆಟಗಳು ನಮಗೆ ಗೊತ್ತಿದೆ
    ( ರೆಡ್ಡಿ ವಕೀಲ ಚಂದ್ರಶೇಖರ್ ಮಾತನಾಡೋಕೆ ಮುಂದಾಗ್ತಾರೆ.. ಸುಮ್ನಿರಿ. ಏನಿದ್ರೂ ವಿಚಾರಣೆ ಬಳಿಕ ಮಾತನಾಡಿ. ನಾವೇನು ರೆಡ್ಡಿ ಮೇಲೆ ಹಲ್ಲೆ ಮಾಡ್ತಿಲ್ಲ. ತನಿಖೆಗೆ ಅಡ್ಡಿ ಪಡಿಸ್ಬೇಡಿ ಅಂತ ವಾರ್ನಿಂಗ್)
    * ಸಿಸಿಬಿ: ಅಂಬಿಡೆಂಟ್‍ನ ಫರೀದ್ ಮತ್ತು ನಿಮ್ಮ ನಡುವೆ ಎಷ್ಟು ವರ್ಷದ ಸಂಬಂಧ..?
    * ರೆಡ್ಡಿ: ಫರೀದ್‍ನ ಆಲಿಖಾನ್ ಪರಿಚಯ ಮಾಡಿದ್ದು. ಅಲಿಖಾನ್ ಕುಟುಂಬ ಅಂಬಿಡೆಂಟ್‍ನಲ್ಲಿ ಹೂಡಿಕೆ ಮಾಡಿರೋ ವಿಚಾರ ಗೊತ್ತಿತ್ತು. ಆ ಮೂಲಕ ನನಗೆ ಪರಿಚಯ

    * ಸಿಸಿಬಿ: ಫರೀದ್ ವ್ಯವಹಾರದಲ್ಲಿ ನಿಮ್ಮ ಪಾಲುದಾರಿಕೆ ಇದ್ಯಾ..?
    * ರೆಡ್ಡಿ: ಯಾವುದೇ ಪಾಲುದಾರಿಕೆ ಇಲ್ಲ. ಪಾಲುದಾರಿಕೆ ಬಗ್ಗೆ ಫರೀದ್ ಜೊತೆ ಮಾತನಾಡಿಲ್ಲ..
    * ಸಿಸಿಬಿ: ನಿಮ್ಮ ಆಪ್ತ ಆಲಿಖಾನ್ ಹೊಂದಿದ್ದಾರೆ ಅನ್ನೋ ಮಾಹಿತಿ ಇದೆ
    * ರೆಡ್ಡಿ: ಅಲಿಖಾನ್ ಬಳಿ ಎಲ್ಲವನ್ನೂ ಕೇಳಿದ್ದೀನಿ. ಆತನ ಕುಟುಂಬ 70 ಲಕ್ಷ ಹಣ ಹೂಡಿಕೆ ಮಾಡಿದ್ರು. ಆ ಹಣಕ್ಕೂ ಫರೀದ್ ಮೋಸ ಮಾಡಿದ್ದ. ಆ ವಿಚಾರ ಅಷ್ಟೇ ನನಗೆ ಗೊತ್ತು. ಆತನೂ ಪಾಲುದಾರಿಕೆಯನ್ನು ಹೊಂದಿಲ್ಲ ..

    * ಸಿಸಿಬಿ: ಫರೀದ್ ಬಚಾವ್ ಮಾಡಲು ನೀವು ಡೀಲ್ ತೆಗೆದುಕೊಂಡಿದ್ದೀರಿ..?
    * ರೆಡ್ಡಿ: ನನ್ನ ಕೇಸ್‍ಯಿಂದ್ಲೇ ಬಚಾವ್ ಆಗೋದಕ್ಕೆ ಆಗಿಲ್ಲ. ಫರೀದ್‍ನ ಹೇಗೆ ಬಚಾವ್ ಮಾಡ್ಲಿ. ತನಿಖಾ ಸಂಸ್ಥೆಗಳು ನಾವು ಹೇಳಿದಂತೆ ಕೇಳ್ತಾವಾ..?
    * ಸಿಸಿಬಿ: ಇ.ಡಿ. ಅಧಿಕಾರಿಗಳಿಗೆ ನಿಮ್ಮಿಂದ ಹಣದ ಆಮಿಷ ಹೋಗಿದೆ.. ಅದಕ್ಕೆ ಸೂಕ್ತ ದಾಖಲೆಗಳು ಇವೆ..
    * ರೆಡ್ಡಿ: ಇಡಿ ಆಫೀಸರ್ಸ್ ಏನೂ ಅಂತ ನಿಮಗೂ ಗೊತ್ತು. ನಾವು ಅವರ ಬಳಿ ಡೀಲ್ ಮಾಡೋಕೆ ಸಾಧ್ಯನಾ..? ನಿಮ್ಮ ಸಾಕ್ಷ್ಯ ತೋರಿಸಿದ್ರೆ ಉತ್ತರ ಕೊಡ್ತೀನಿ.
    * ಸಿಸಿಬಿ: ಇಲ್ಲ ಅನ್ನೋದೇ ಆದ್ರೆ, ಫರೀದ್ ಡೀಲ್‍ನಲ್ಲಿ ನಿಮ್ಮೆಸ್ರು ಹೇಳಿದ್ಯಾಕೆ..?

    * ರೆಡ್ಡಿ: ಬಚಾವ್ ಆಗೋಕೆ ಫರೀದ್ ಹೇಳಿರ್ಬೋದು. ಅಥವಾ ಆತನ ಮೇಲೆ ಒತ್ತಡ ಇದೆ ಅನ್ನೋದು ಗೊತ್ತಿಲ್ಲ.
    * ಸಿಸಿಬಿ: ಫರೀದ್ ನಿಮಗೆ 57 ಕೆಜಿ ಚಿನ್ನದ ಗಟ್ಟಿ ಕೊಟ್ಟಿದ್ದಾರೆ. ಇದಕ್ಕೂ ದಾಖಲೆ ಇದೆ
    * ರೆಡ್ಡಿ: ಫರೀದ್ ಚಿನ್ನ ಕೊಟ್ಟಿದ್ದೀನಿ ಅಂತ ಅಷ್ಟೇ ಹೇಳಿದ್ದಾನೆ. ಅದನ್ನು ನಾನು ರಿಸೀವ್ ಮಾಡಿಕೊಂಡಿದ್ದೇನಾ..? ಯಾವುದಾದರು ಸಾಕ್ಷ್ಯ ಇದ್ರೆ ಉತ್ತರ ಕೊಡ್ತೀನಿ. ಸುಖಾಸುಮ್ಮನೆ ನೀವು ಹೇಳ್ತಾ ಇದ್ದೀರಿ
    * ಸಿಸಿಬಿ: ನೀವು ಇಷ್ಟು ದಿನ ಎಸ್ಕೇಪ್ ಆಗಿದ್ಯಾಕೆ..?
    * ರೆಡ್ಡಿ: ನಾನು ಎಲ್ಲಿಯು ಓಡಿ ಹೋಗಿಲ್ಲ. ಹೈದರಾಬಾದ್‍ಗೂ ಹೋಗಿಲ್ಲ. ವಕೀಲರ ಜೊತೆ ಮಾತುಕತೆ ನಡೆಸುತ್ತಿದೆ.
    * ಸಿಸಿಬಿ: ನಾವು ಮನೆ ರೈಡ್ ಮಾಡಿದಾಗ ಎಲ್ಲಿ ಇದ್ರಿ..
    * ರೆಡ್ಡಿ: ಬೆಂಗಳೂರಲ್ಲೇ.. ಬೇರೆ ಮನೇಲಿ ಇದ್ದೆ. ನನಗೆ ವಿಚಾರಣಾ ನೋಟಿಸ್ ಕೊಡೋ ಮೊದಲೇ ರೇಡ್ ಆಗಿದ್ದು ಯಾಕೆ..?

    ಹೀಗೆ.. ವಿಚಾರಣೆ ಮುಂದುವರಿದಿದೆ.

    ವಿಚಾರಣೆಯ ಮಧ್ಯೆಯೇ ತನಿಖಾಧಿಕಾರಿಗಳ ಪ್ರಶ್ನೆಗೆ ಸರಿಯಾಗಿ ಉತ್ತರಿಸದ ಪರಿಣಾಮ ಸಿಸಿಬಿ ಮುಖ್ಯಸ್ಥ ಅಲೋಕ್ ಕುಮಾರ್ ಕಚೇರಿಗೆ ಆಗಮಿಸಿ ರೆಡ್ಡಿಯನ್ನು ವಶಕ್ಕೆ ಪಡೆದು ಮತ್ತೆ ವಿಚಾರಣೆ ಮುಂದುವರಿಸಿದ್ದಾರೆ. ರೆಡ್ಡಿಗೆ ಐವರು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಲೋಕ್ ಕುಮಾರ್, ಡಿಸಿಪಿ ಗಿರೀಶ್, ಎಸ್ ಪಿಗಳಾದ ವೆಂಕಟೇಶ್ ಪೆಸನ್ನು ಸೇರಿದಂತೆ ಇತರ ಪೊಲೀಸರ ತಂಡ ಪ್ರಶ್ನೆಗಳನ್ನು ಕೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ಮಂಗಳೂರು: ಸಂಸದ ನಳಿನ್‍ಕುಮಾರ್ ಕಟೀಲ್ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನೋಟ್ ಬ್ಯಾನ್ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನಗರದ ಜಿಲ್ಲಾ ಕಚೇರಿ ಎದುರಲ್ಲಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಚಿವರು, ಲಾಭದಲ್ಲಿರುವ ವಿಜಯ ಬ್ಯಾಂಕ್ ಜೊತೆಗೆ ನಷ್ಟದಲ್ಲಿರುವ ದೇನಾ ಬ್ಯಾಂಕನ್ನು ವಿಲೀನಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದು ಹರಿಹಾಯ್ದರು.

    ವಿಜಯ್ ಬ್ಯಾಂಕನ್ನು ನಮ್ಮ ಸಮುದಾಯದ ನಾಯಕರು ಸ್ಥಾಪಿಸಿ ಬೆಳೆಸಿದರು. ಅದು ರಾಷ್ಟ್ರೀಕೃತಗೊಂಡು ಲಾಭದಾಯಕ ಬ್ಯಾಂಕ್ ಆಗುತ್ತಿದೆ. ಆದರೆ ಈಗ ಅದರೊಂದಿಗೆ ನಷ್ಟದಲ್ಲಿರುವ ದೇನಾ ಬ್ಯಾಂಕ್ ವಿಲೀನಗೊಳಿಸಲಾಗುತ್ತಿದೆ. ಇದನ್ನು ತಡೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಿಜೆಪಿ ಶಾಸಕರು, ಸಂಸದರು ವಿಫಲರಾಗಿದ್ದಾರೆ. ಹೀಗಾಗಿ ಅವರು ಜೀವಂತ ಇದ್ದೂ ಸತ್ತ ಹಾಗೆ ಎಂದು ಗುಡುಗಿದರು.

    ಬ್ಯಾಂಕ್ ವಿಲೀನ ತಪ್ಪಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಸಂಸದ ನಳಿನ್ ಕುಮಾರ್ ಕಟೀಲ್ ಸತ್ತಿದ್ದಾರೆಯೇ ಅಂತ ಪ್ರಶ್ನೆ ಮಾಡುತ್ತೇನೆ ಎಂದ ಮಾಜಿ ಸಚಿವರು, ಸಂಸದರ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದರು.

    ಲೋಕಪಾಲ್ ಜಾರಿಗೆ ತರುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಆದರೆ ಗುಜರಾತಿನಲ್ಲೇ ಲೋಕಾಯುಕ್ತರು ಇಲ್ಲ. ಬೇರೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಬೋಧನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ಎಲ್ಲಿದ್ದಾರೆ ಎಸ್ಕೇಪ್ ರೆಡ್ಡಿಗಾರು? ಕೋಟಿ-ಕೋಟಿ ಡೀಲ್‍ನ ರೆಡ್ಡಿಗಾಗಿ ಸಿಸಿಬಿ ಪೊಲೀಸರ ತಲಾಶ್

    ಎಲ್ಲಿದ್ದಾರೆ ಎಸ್ಕೇಪ್ ರೆಡ್ಡಿಗಾರು? ಕೋಟಿ-ಕೋಟಿ ಡೀಲ್‍ನ ರೆಡ್ಡಿಗಾಗಿ ಸಿಸಿಬಿ ಪೊಲೀಸರ ತಲಾಶ್

    ಬೆಂಗಳೂರು: ಬಳ್ಳಾರಿ ಉಪಚುನಾವಣೆ ವೇಳೆ ವೀರಾವೇಶದ ಮಾತುಗಳನ್ನು ಆಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಇಂದು ದೀಪಾವಳಿಯ ಕರಾಳ ಅಮಾವಾಸ್ಯೆ. ಜಾರಿ ನಿರ್ದೇಶನಾಲಯದ ಗಾಳಕ್ಕೆ ಸಿಕ್ಕಿರೋ ಆಂಬಿಡೆಂಟ್ ಮಾರ್ಕೆಟಿಂಗ್ ಕಂಪನಿಯನ್ನ ರಕ್ಷಿಸಲು 20 ಕೋಟಿ ಡೀಲ್ ಮಾಡಿದ್ದ ಗಣಿಧಣಿ ಜನಾರ್ದನ ರೆಡ್ಡಿ ಈಗ ಮತ್ತೆ ಜೈಲಿಗೆ ಹೋಗುವ ಸ್ಥಿತಿ ಬಂದೊಂದಗಿದೆ.

    ಈಗ ಜನಾರ್ದನ ರೆಡ್ಡಿ ವಿರುದ್ಧ ಮನಿ ಲಾಂಡರಿಂಗ್ ಅಡಿ ಕೇಸ್ ಬಿದ್ದಿದೆ. ಬೆಂಗಳೂರಿನ ಕಾವಲ್‍ಭೈರಸಂದ್ರದ ಕನಕನಗರದಲ್ಲಿರೋ ಆಂಬಿಡೆಂಟ್ ಅನ್ನೋ ಕಂಪನಿ ಸಾರ್ವಜನಿಕರಿಗೆ ವಂಚನೆ ಮಾಡಿ ಸುಮಾರು 600 ಕೋಟಿಗೂ ಅಧಿಕ ಹಣವನ್ನ ಸಂಗ್ರಹ ಮಾಡಿತ್ತು. ಈ ಬಗ್ಗೆ ಸರ್ಫರಾಜ್ ಸೇರಿದಂತೆ ಕೆಲವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದು, ಇದು ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು. ವಂಚಕ ಕಂಪನಿಯ ಮಾಲೀಕ ಫರೀದ್, ಇಡಿ ಕೇಸ್‍ನಿಂದ ಬಚಾವ್ ಆಗಲು ಮಾಸ್ಟರ್ ಪ್ಲಾನ್ ಮಾಡಿದ್ದ. ಆಗ ಫರೀದ್‍ಗೆ ಸಿಕ್ಕವನೇ ಮಾಜಿ ಸಚಿವ ಜನಾರ್ದನ ರೆಡ್ಡಿಯ ಪಿಎ ಅಲಿಖಾನ್.

    ಈ ವೇಳೆ ಫರೀದ್‍ನನ್ನು ಇ.ಡಿ ಪ್ರಕರಣದಿಂದ ಬಚಾವ್ ಮಾಡೋಕೆ 20 ಕೋಟಿ ಕೊಡುವಂತೆ ಕೇಳಿದ್ದ ರೆಡ್ಡಿ, ಚಿನ್ನದ ರೂಪದಲ್ಲಿ ಹಣ ಕೊಡುವಂತೆ ಷರತ್ತು ವಿಧಿಸಿದ್ರು. ಬಳಿಕ ರೆಡ್ಡಿ, ಫರೀದ್ ಹಾಗೂ ಬಿಸಿನೆಸ್ ಮೆನ್ ಬ್ರಿಜೇಶ್ ರೆಡ್ಡಿ, ತಾಜ್‍ವೆಸ್ಟೆಂಡ್ ಹೋಟೆಲ್‍ನಲ್ಲಿ ಮೀಟಿಂಗ್ ಕೂಡ ಮಾಡ್ತಾರೆ. ಆಗ ಅಲಿಖಾನ್‍ಗೆ ಪರಿಚಯವಿದ್ದ ಬಳ್ಳಾರಿಯ ರಾಜ್‍ಮಹಲ್ ಫ್ಯಾನ್ಸಿ ಜ್ಯುವೆಲರ್ಸ್‍ನ ಮಾಲೀಕ ರಮೇಶ್ ಮೂಲಕ ಬೆಂಗಳೂರಿನ ಅಂಬಿಕಾ ಸೇಲ್ಸ್ ಕಾರ್ಪೊರೇಷನ್‍ನ ಮಾಲೀಕ ರಮೇಶ್ ಕೊಠಾರಿಯವರ ಖಾತೆಗೆ 18 ಕೋಟಿ ಹಣವನ್ನ ಆರ್‍ಟಿಜಿಎಸ್ ಮಾಡಿದ್ದ ಫರೀದ್. ಹಾಗೇ ಕೊರಿಯರ್ ಮೂಲಕ 57 ಕೆ.ಜಿ. ಚಿನ್ನದ ಗಟ್ಟಿಗಳು ಗಣಿಧಣಿಯ ಮನೆ ಸೇರಿತ್ತು.

    ಸಿಸಿಬಿಗೆ ಪ್ರಕರಣ ಕೈ ಸೇರುತ್ತಿದ್ದಂತೆ, ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹಾಗೂ ಡಿಸಿಪಿ ಗಿರೀಶ್ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ರು. ಆಂಬಿಡೆಂಟ್ ಮಾಲೀಕ ಹಾಗು ರಾಜಮಹಲ್ ಜ್ಯುವೆಲರ್ಸ್ ನ ಮಾಲೀಕ ರಮೇಶ್‍ನನ್ನ ಅರೆಸ್ಟ್ ಮಾಡಿ, ಬೆಂಡೆತ್ತಿದಾಗ ಜನಾರ್ದನ ರೆಡ್ಡಿ ಹಾಗು ಅಲಿಖಾನ್ ಪಾತ್ರದ ಬಗ್ಗೆ ಬಾಯಿ ಬಿಟ್ಟಿದ್ರು. ಬೈ ಎಲೆಕ್ಷನ್ ಮುಗಿಯೋದಕ್ಕು ಮುಂಚೆ ರೆಡ್ಡಿಯನ್ನ ಅರೆಸ್ಟ್ ಮಾಡಿದ್ರೆ, ರಾಜಕೀಯ ಮೇಲಾಟಗಳು ನಡೆಯಬಹುದು ಅನ್ನೋ ಕಾರಣಕ್ಕೆ ಸಿಸಿಬಿ ರೆಡ್ಡಿಯನ್ನ ಟಚ್ ಮಾಡೋದಕ್ಕೆ ಹೋಗಿರಲಿಲ್ಲ. ಆದರೆ ಬುಧವಾರ ರಾತ್ರಿ ಎಲ್ಲಾಕಡೆ ರೆಡ್ಡಿಗಾಗಿ ಹುಡುಕಾಟ ನಡೆಸಲಾಯ್ತು. ಅಷ್ಟರಲ್ಲಾಗಲೇ ಅರೆಸ್ಟ್ ಆಗೋ ವಾಸನೆ ತಿಳಿದಿದ್ದ ರೆಡ್ಡಿ, ಅಬ್‍ಸ್ಕ್ಯಾಂಡ್ ಆಗಿದ್ರು.

    ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಡೀಲ್ ಮಾಡಿ ಗಣಿಧಣಿ ರೆಡ್ಡಿಗಾರು ನಾಟ್‍ರಿಚಬಲ್ ಆಗಿದ್ದಾರೆ. ಮಾಜಿ ಸಚಿವ ಜನಾರ್ಧನ ರೆಡ್ಡಿಯನ್ನ ಖೆಡ್ಡಾಗೆ ಕೆಡವಲೇ ಬೇಕು ಅಂತಾ ತೀರ್ಮಾನಿಸಿರೊ ಸಿಸಿಬಿ ಅಧಿಕಾರಿಗಳು ದೀಪಾವಳಿ ಹಬ್ಬವನ್ನೇ ತೊರೆದಿದ್ದಾರೆ. ರೆಡ್ಡಿಗಾಗಿ ಬಲೆ ಬೀಸಿರೊ ಸಿಸಿಬಿ, ಮೂವರು ಎಸಿಪಿಗಳ ನೇತೃತ್ವದಲ್ಲಿ ಹುಡುಕಾಟ ನಡೆಸ್ತಿದೆ. ಎಸಿಪಿ ವೆಂಕಟೇಶ್ ಪ್ರಸನ್ನ ನೇತೃತ್ವದ ತಂಡ ಬೆಂಗಳೂರಲ್ಲಿ ಹುಡುಕಾಟ ನಡೆಸಿದ್ರೆ , ಎಸಿಪಿ ಸುಬ್ರಮಣಿ ಹೈದರಾಬಾದ್ ನಲ್ಲಿ ತಡಕಾಡ್ತಿದ್ದಾರೆ.. ಇನ್ನು ಎಸಿಪಿ ಮಂಜುನಾಥ್ ಚೌದರಿ ನೇತೃತ್ವದ ತಂಡ ಬಳ್ಳಾರಿ ಸುತ್ತಮುತ್ತ ಹುಡುಕಾಟ ನಡೆಸ್ತಿದೆ.. ರೆಡ್ಡಿ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಯಾವ ಕಡೆ ತಲೆ ಮರೆಸಿಕೊಂಡಿದ್ದಾರೆ ಅಂತಾ ಗೊತ್ತಿಲ್ಲ. ಆದರೆ ರೆಡ್ಡಿ ಜೊತೆ ಪಿಎ ಅಲಿಖಾನ್ ಇರೋದನ್ನ ಅಧಿಕಾರಿಗಳು ಕನ್ಫರ್ಮ್ ಮಾಡ್ತಿದ್ದಾರೆ. ಇಂದು ಗಣಿಧಣಿಯನ್ನ ಅರೆಸ್ಟ್ ಮಾಡೋ ಭರವಸೆಯಲ್ಲಿದೆ ಸಿಸಿಬಿ ತಂಡ

    ನಾಲ್ಕು ತಂಡಗಾಗಿ ಸಿಸಿಬಿ ಪೊಲೀಸರು ಬೆಂಗಳೂರು, ಬಳ್ಳಾರಿ, ಹೈದರಾಬಾದ್ ನಲ್ಲಿ ಹುಡುಕಾಡುತ್ತಿದ್ದಾರೆ. ಈಗಾಗಲೇ ರೆಡ್ಡಿ ಎಲ್ಲಿದ್ದಾರೆ ಅನ್ನೋ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದ್ದು, ಇಂದು ಎಲ್ಲೇ ಇದ್ರು ಬಂಧಿಸೋದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ರೆಡ್ಡಿಗಾಗಿ ಸಿಸಿಬಿ ಪೊಲೀಸರು ಬೆಳಗ್ಗೆಯಿಂದಲೇ ತೀವ್ರ ಬೇಟೆ ಆರಂಭಿಸಿದ್ರು. ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಮಧ್ಯಾಹ್ನ ಎರಡು ಗಂಟೆ ವೇಳೆಗೆ ನಗರದ ಚಾಲುಕ್ಯ ಸರ್ಕಲ್ ಬಳಿಯಿರುವ ರೆಡ್ಡಿ ಮನೆ ಮೇಲೆ ದಾಳಿ ನಡೆಸಿದರು. ಮನೆಯ ಕೀ ಇಲ್ಲದ ಕಾರಣ, ನಕಲಿ ಕೀ ಮೇಕರ್‍ನ ಕರೆಸಿ ಸತತ ಎರಡು ಗಂಟೆಗಳ ಕಾಲ ಸರ್ಕಸ್ ಮಾಡಿ ಬಾಗಿಲು ಓಪನ್ ಮಾಡಲಾಯ್ತು. ಮನೆ ಒಳಗೆ ಎಂಟ್ರಿಕೊಟ್ಟ ಪೋಲೀಸರು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದರು. ಇದರ ಜೊತೆಗೆ ಪಾರಿಜಾತ ಅಪಾರ್ಟ್ ಮೆಂಟ್‍ನ ಹೊರಗಡೆಯಿದ್ದ ಸಿಸಿಟಿವಿ ಪರಿಶೀಲನೆ ನಡೆಸಿ ಡಿವಿಆರ್ ವಶಕ್ಕೆ ಪಡೆದಿದ್ದಾರೆ.

    ಸಿಸಿಬಿಯ ಮತ್ತೊಂದು ತಂಡ ರೆಡ್ಡಿ ಪಿಎ ಅಲಿಖಾನ್‍ನ ಆರ್‍ಟಿ ನಗರದ ಮನೆ ದಾಳಿ ಮಾಡಿ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದೆ. ದಾಳಿ ಮುಗಿಸಿ ಒಂದು ತಂಡ ತೆರಳುತ್ತಿದ್ದಂತೆ ಆಲಿಖಾನ್ ತಂದೆ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಿ ರಂಪಾಟ ಮಾಡಿದರು.

    ಜನಾರ್ದನ್ ರೆಡ್ಡಿ ವಿರುದ್ಧ ಸಿಸಿಬಿ ಪೊಲೀಸರು ಮನಿಲ್ಯಾಂಡ್ರಿಂಗ್ ಕೇಸ್ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಸಿಕ್ಕ ಮಾಹಿತಿ ಮೇಲೆ ಸಿಸಿಬಿ ಪೊಲೀಸರು ಈ ಕೇಸ್ ದಾಖಲಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಫ್ರಾರ್ಡ್ ಕಂಪನಿ ಆಂಬಿಡೆಂಟ್ ಸಹಾಯಕ್ಕೆ ನಿಂತು ಡೀಲ್ ಮಾಡಿ ಸಿಕ್ಕಿಬಿದ್ದಿರುವ ರೆಡ್ಡಿಗಾರು, ಸದ್ಯ ರಾಜ್ಯದಿಂದಲೇ ಎಸ್ಕೇಪ್ ಆಗೋ ಪರಿಸ್ಥಿತಿ ಬಂದಿರೋದು ದುರಂತ. ಸದ್ಯ ಆರೋಪಿ ಜನಾರ್ದನ ರೆಡ್ಡಿಗೆ ಬಲೆ ಬೀಸಿರೋ ಸಿಸಿಬಿ ಪೊಲೀಸರು ಲುಕ್‍ಔಟ್ ನೋಟಿಸ್ ಸಹ ಜಾರಿ ಮಾಡಿದ್ದಾರೆ. ಮಾಡಬಾರದ ಕೆಲಸ ಮಡಲು ಹೋಗಿ ರೆಡ್ಡಿ ಮತ್ತೊಮ್ಮೆ ಜೈಲು ದಾರಿ ನೋಡಬೇಕಾದಂತ ಪರಿಸ್ಥಿತಿ ಬಂದೊದಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿಯ ಸುಳ್ಳಿನ ಕಂತೆ ನಡೆಯಲ್ಲ ಅನ್ನೋದಕ್ಕೆ ಈ ಉಪಚುನಾವಣೆಯೇ ಸಾಕ್ಷಿ: ವಿನಯ್ ಕುಲಕರ್ಣಿ

    ಮೋದಿಯ ಸುಳ್ಳಿನ ಕಂತೆ ನಡೆಯಲ್ಲ ಅನ್ನೋದಕ್ಕೆ ಈ ಉಪಚುನಾವಣೆಯೇ ಸಾಕ್ಷಿ: ವಿನಯ್ ಕುಲಕರ್ಣಿ

    ಧಾರವಾಡ: ಜನರಿಗೆ ಸುಳ್ಳು ಹೇಳಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದ್ದು, 5 ವರ್ಷದಲ್ಲಿ ಹೇಳಿದ ಮಾತಿನಂತೆ ನಡೆದುಕೊಂಡಿಲ್ಲವೆಂದು ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ಕಿಡಿಕಾರಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲದರ ಖಂಡಿಸಿ ಭಾರತ್ ಬಂದ್ ವೇಳೆ ಕೆಲವರು ತಮ್ಮ ಫೇಸ್ ಬುಕ್ ನಲ್ಲಿ ನೂರು ರೂಪಾಯಿ ಆದರೂ ನಾವು ಮೋದಿಗೆ ಓಟ್ ಹಾಕುತ್ತೇವೆ ಎಂದು ಹಾಕಿಕೊಂಡಿದ್ದರು. ಇದನ್ನು ಯಾವುದೇ ಸಾರ್ವಜನಿಕರು ಹಾಕಿಲ್ಲ. ಬಿಜೆಪಿಯವರೇ ಈ ರೀತಿ ಪೋಸ್ಟ್ ಗಳನ್ನು ಫೇಸ್‍ಬುಕ್ ನಲ್ಲಿ ಹಾಕಿದ್ದಾರೆ. ಬಿಜೆಪಿಯವರು ಸಾಮಾನ್ಯ ಜನರಲ್ಲ. ಮೋದಿಯ ಸುಳ್ಳಿನ ಕಂತೆ ಬಹಳ ದಿನ ನಡೆಯುವುದಿಲ್ಲ ಎಂದರು.

    ಜನರಿಗೆ ಸುಳ್ಳು ಹೇಳಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕಳೆದ 5 ವರ್ಷಗಳಲ್ಲಿ ತಾನು ಹೇಳಿದ್ದ ಮಾತಿನಂತೆ ಎಂದಿಗೂ ನಡೆದುಕೊಂಡಿಲ್ಲ. ಕೆಲವು ದಿನಗಳ ಹಿಂದೆ ರೈತರಿಂದ ಹೆಸರುಕಾಳಿಗೆ ಪ್ರತಿ ಕ್ವಿಂಟಾಲ್‍ಗೆ 6,800 ರೂಪಾಯಿಯಂತೆ ಖರೀದಿ ಮಾಡುತ್ತೇವೆಂದು ಹೇಳಿ, ಕೇವಲ 3 ರಿಂದ 4 ಕ್ವಿಂಟಾಲ್ ಖರೀದಿ ಮಾಡಿದ್ದರು. ಆದರೆ ಖರೀದಿ ಪ್ರಕ್ರಿಯಿಯನ್ನು ಏಕಾಏಕಿ ನಾಲ್ಕೇ ದಿನಕ್ಕೆ ನಿಲ್ಲಿಸಿದ್ದಾರೆ. ಇವರ ಸರ್ಕಾರದ ಅವಧಿಯಲ್ಲಿ ರೈತರ ಪರಿಸ್ಥಿತಿ ಅಧೋಗತಿಗೆ ತಲುಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಈ ವೇಳೆ ಜನಾರ್ದನ ರೆಡ್ಡಿ ಕುರಿತು ಮಾತನಾಡಿದ ಅವರು, ಇಂಥವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಕ್ಕೆ ಅವರ ಪರಿಸ್ಥಿತಿ ಏನಾಗಿದೆ ಎಂಬುದು ಗೊತ್ತಾಗುತ್ತಿದೆ. ಪ್ರಧಾನಿ ಮೋದಿಯವರು ಸಿಬಿಐ ಪ್ರಕರಣದಲ್ಲಿ ಏನು ಮಾಡಿದ್ದಾರೆ ಎಂಬುದು ಗೊತ್ತಿದೆ. ಇಂತಹ ಹಲವು ಪ್ರಕರಣಗಳಲ್ಲಿ ರಫೇಲ್ ಕೂಡ ಒಂದು. ಈ ದೇಶದಲ್ಲಿ ಯಾರಿಗೂ ಸ್ವತಂತ್ರವೇ ಇಲ್ಲವೆಂಬುವಂತೆ ಆಗಿದೆ. ರೆಡ್ಡಿ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ. ಗೊತ್ತಿಲ್ಲದೇ ಮಾತನಾಡಲ್ಲ. ಬಿಜೆಪಿ ವಿರೋಧ ಅಲೆಗೆ ಉಪಚುನಾವಣೆಯ ಫಲಿತಾಂಶಗಳೇ ಸಾಕ್ಷಿ. ನಮಗೆ ಉಪಚುನಾವಣೆಯಲ್ಲಿ ಅಭೂತಪೂರ್ವ ಜಯ ತಂದು ಕೊಟ್ಟ ಜನರಿಗೆ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv