Tag: former MLA MK Somashekhar

  • ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

    ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

    – ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯ

    ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Expressway) ನಿಯಂತ್ರಣ ತಪ್ಪಿದ ಕಾರೊಂದು (Car) ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ (Service Road) ಉರುಳಿ ಬಿದ್ದ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಚೋಳಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮೈಸೂರು (Mysuru) ಕಡೆಯಿಂದ ಬೆಂಗಳೂರು (Bengaluru) ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸರ್ವಿಸ್ ರಸ್ತೆಗೆ ಉರುಳಿಬಿದ್ದ ಕಾರು, ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ 5,13,400 ಸಿಗರೇಟ್‌ ಸೀಜ್‌

    ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಮೈಸೂರಿನ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ (MK Somashekar) ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

  • ಬೀದಿಯಲ್ಲಿ ನರಳುತ್ತಿದ್ದ ವೃದ್ಧರನ್ನು ಆಸ್ಪತ್ರೆಗೆ ಸೇರಿಸಿದ ಮಾಜಿ ಶಾಸಕ

    ಬೀದಿಯಲ್ಲಿ ನರಳುತ್ತಿದ್ದ ವೃದ್ಧರನ್ನು ಆಸ್ಪತ್ರೆಗೆ ಸೇರಿಸಿದ ಮಾಜಿ ಶಾಸಕ

    ಮೈಸೂರು: ನಗರದ ಸಾರಿಗೆ ಬಸ್ ತಂಗುದಾಣದಲ್ಲಿ ನರಳುತ್ತಾ ಬಿದ್ದಿದ್ದ ವೃದ್ಧರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮೈಸೂರಿನ ಕೆ.ಆರ್ ಕ್ಷೇತ್ರದ ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಮಾನವೀಯತೆ ಮೆರೆದಿದ್ದಾರೆ.

    ಮೈಸೂರಿನ ರೈಲ್ವೆ ವರ್ಕ್‍ಶಾಪ್ ಬಳಿಯ ನಗರ ಬಸ್ ನಿಲ್ದಾಣದ ತಂಗುದಾಣದಲ್ಲಿ ವೃದ್ಧರೊಬ್ಬರು ನರಳುತ್ತಾ ಮಲಗಿದ್ದರು. ಅವರನ್ನು ಗಮನಿಸಿದ ಸೋಮಶೇಖರ್ ತಕ್ಷಣವೇ ಅಂಬುಲೆನ್ಸ್ ಕರೆಸಿ, ವೃದ್ಧರನ್ನು ಕೆ.ಆರ್ ಆಸ್ಪತ್ರೆಗೆ ಕಳುಹಿಸಿದರು.

    ಅಷ್ಟೇ ಅಲ್ಲದೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ, ವೃದ್ಧರಿಗೆ ಸರಿಯಾಗಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ವೃದ್ಧನ ಗಂಟಲಲ್ಲಿ ಗೆಡ್ಡೆ ಬೆಳೆದಿದ್ದು, ಅವರು ಮಾತನಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಯಾರು? ಯಾವ ಊರು ಎನ್ನುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ.