Tag: former mp ramya

  • ವೋಟ್ ಹಾಕದವರು ಮತ ಕೇಳಲು ಅರ್ಹರಲ್ಲ: ರಮ್ಯಾ ವಿರುದ್ಧ ಕೈ ಕಾರ್ಯಕರ್ತರ ಕಿಡಿ

    ವೋಟ್ ಹಾಕದವರು ಮತ ಕೇಳಲು ಅರ್ಹರಲ್ಲ: ರಮ್ಯಾ ವಿರುದ್ಧ ಕೈ ಕಾರ್ಯಕರ್ತರ ಕಿಡಿ

    ಮಂಡ್ಯ: ಮತದಾನ ಮಾಡದವರು, ಚುನಾವಣೆಗೆ ನಿಲ್ಲಲು ಅಥವಾ ಮತ ಕೇಳಲು ಅರ್ಹರಲ್ಲ ಎಂದು ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಂಸದೆ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

    ಇಂದು ನಡೆದ ನಗರಸಭೆ ಚುನಾವಣೆಯಲ್ಲಿ ಕೊನೆಗೂ ಮತದಾನ ಮಾಡದ ರಮ್ಯಾ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.

    ಮಂಡ್ಯ ನಗರಸಭೆಯ 11 ನೇ ವಾರ್ಡ್ ವ್ಯಾಪ್ತಿಯಲ್ಲಿ ಸಂಸದೆ ರಮ್ಯಾ ಮನೆಯಿದೆ. ಆ ವಾರ್ಡ್‍ನ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಕೂಡಾ ಬಂದು ಮತದಾನ ಮಾಡುವಂತೆ ಕೇಳಿಕೊಂಡಿದ್ದರು. ಆಗ ಬರುವುದಾಗಿ ರಮ್ಯಾ ಭರಸೆ ನೀಡಿದ್ದರು. ಮತಗಟ್ಟೆ ಬಳಿ ಸಂಜೆವರೆಗೂ ಕಾದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ನಿರಾಶರಾಗಿದ್ದು, ಅವರು ಬರಲು ಸಾಧ್ಯವಾಗದಷ್ಟು ಕೆಲಸ ಇತ್ತೇನೋ ಎಂದು ತಮ್ಮನ್ನು ತಾವು ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ.

    ರಮ್ಯಾ ಕಳೆದ ಬಾರಿ ವಿಧಾನಸಭೆ ಚುನಾವಣೆಯ ವೇಳೆಯಲ್ಲಿಯೂ ಬಂದು ಮತ ಚಲಾಯಿಸಿರಲಿಲ್ಲ. ಆಗ ರಮ್ಯಾ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಈ ಬಾರಿ ಖಂಡಿತ ಬಂದು ಮತದಾನ ಮಾಡುತ್ತಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಮ್ಯಾ ಬೆಂಬಲಿಗರು ನಿರೀಕ್ಷೆಯಿಟ್ಟಿದ್ದರು.

    ಮಂಡ್ಯದಿಂದಲೇ ರಮ್ಯಾ ಕಾಂಗ್ರೆಸ್‍ನಿಂದ ಮತ್ತೊಮ್ಮೆ 2019ರ ಲೋಕಸಭಾ ಚುನಾವಣೆಗೆ ಸ್ಪಧಿಸುತ್ತಾರೆಂದು ಅವರ ತಾಯಿ ರಂಜಿತಾ ಮಾಧ್ಯಮಗಳಿಗೆ ಈ ಹಿಂದೆ ಹೇಳಿಕೆ ನೀಡಿದ್ದರು. ರಾಜ್ಯ ಮಟ್ಟದಲ್ಲಿ ಜೆಡಿಎಸ್ ನೊಂದಿಗೆ ಸಮ್ಮಿಶ್ರ ಸರ್ಕಾರವನ್ನು ಹೊಂದಿರಬಹುದು, ಆದರೆ ಯಾವುದೇ ಕಾರಣಕ್ಕೂ ಜಿಡಿಎಸ್ ಗೆ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: ಜೆಡಿಎಸ್‍ಗೆ ಬಿಡಲ್ಲ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ರಮ್ಯಾ ಕಣಕ್ಕೆ: ತಾಯಿ ರಂಜಿತಾ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊನೆ ಕ್ಷಣದಲ್ಲಿ ಪ್ರಚಾರದ ಅಖಾಡಕ್ಕೆ ಧುಮುಕಿದ ಪದ್ಮಾವತಿ

    ಕೊನೆ ಕ್ಷಣದಲ್ಲಿ ಪ್ರಚಾರದ ಅಖಾಡಕ್ಕೆ ಧುಮುಕಿದ ಪದ್ಮಾವತಿ

    ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ, ಮಂಡ್ಯ ಮಾಜಿ ಸಂಸದೆ ರಮ್ಯಾ ಕೊನೆಗೂ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಪ್ರವೇಶ ಮಾಡಿದ್ದು, ಮೊಳಕಾಲ್ಮುರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯೋಗೇಶ್ ಬಾಬು ಪರ ಆನ್ ಲೈನ್ ಪ್ರಚಾರ ನಡೆಸಿದ್ದಾರೆ.

    ಈ ಕುರಿತು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ದೇಣಿಗೆ ಪಡೆಯವ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕ ಜಾರಿಗೆ ತರುತ್ತಿದೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆ ಹಣದ ಕುರಿತು ಪರದರ್ಶಕತೆಯನ್ನು ತರಲು ಯತ್ನಿಸುತ್ತಿದೆ. ಅದ್ದರಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಯೋಗೇಶ್ ಬಾಬು ಅವರಿಗೆ ದೇಣಿಗೆ ನೀಡಿ ಎಂದು ಮನವಿ ಮಾಡಿದ್ದಾರೆ.

    ಶ್ರೀ ರಾಮುಲುಗೆ ಟಾಂಗ್: ಪ್ರಚಾರದ ವಿಡಿಯೋದಲ್ಲಿ ರಮ್ಯಾ ಸಂಸದ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೂ ಟಾಂಗ್ ನೀಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಡಾ. ಯೋಗೇಶ್ ಬಾಬು ಶ್ರೀ ರಾಮುಲು ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಶ್ರೀ ರಾಮುಲು ಬಳ್ಳಾರಿ ಗಣಿ ಲೂಟಿ ಪ್ರಕಣದಲ್ಲಿ ಸಿಲುಕಿರುವ ಮಾಡಿರುವ ರೆಡ್ಡಿ ಸಹೋದರರ ಸ್ನೇಹಿತರು. ಗಣಿ ಅಕ್ರಮದ ರೂವಾರಿ ಶ್ರೀರಾಮುಲು ಸೋಲಿಸಿ, ನಮ್ಮ ಅಭ್ಯರ್ಥಿ ಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

  • ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ ಅಂಬಿ ಆಪ್ತ – ರಮ್ಯಾಗೆ ಎಂಪಿ ಟಿಕೆಟ್ ಸಿಕ್ಕ ಗುಟ್ಟು ಬಹಿರಂಗಗೊಳಿಸಿದ್ರು!

    ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ ಅಂಬಿ ಆಪ್ತ – ರಮ್ಯಾಗೆ ಎಂಪಿ ಟಿಕೆಟ್ ಸಿಕ್ಕ ಗುಟ್ಟು ಬಹಿರಂಗಗೊಳಿಸಿದ್ರು!

    ಮಂಡ್ಯ: ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಸಂದರ್ಭ ನೆನೆದು ಬಹಿರಂಗ ಸಭೆಯಲ್ಲಿ ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್ ಕಣ್ಣೀರು ಹಾಕಿದ್ದಾರೆ.

    ಇಂದು ನಗರದ ಪಾಂಡುರಂಗ ಸಮುದಾಯ ಭವನದಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಅಮರಾವತಿ ಚಂದ್ರಶೇಖರ್, ಶಾಸಕ ಅಂಬರೀಶ್ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. 20 ವರ್ಷಗಳಿಂದ ನಮ್ಮ ನಾಯಕರಾದ ಅಂಬರೀಶ್ ಜೊತೆ ನಾವೆಲ್ಲರೂ ಇದ್ದೇವೆ. ನಮ್ಮ ಕಷ್ಟ ಸುಖದಲ್ಲಿ ಅವರು ಪಾಲ್ಗೊಂಡಿದ್ದಾರೆ. ಆದರೆ ಅಂಬರೀಶ್ ಅವರ ಆರೋಗ್ಯದ ಕಾರಣದಿಂದ ಒಳ್ಳೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂಬುದು ನನ್ನ ಭಾವನೆ. ಏಕಾ ಏಕಿ ಎಲ್ಲವನ್ನು ತ್ಯಜಿಸಿ ಪಕ್ಷದ ಕಾರ್ಯಕರ್ತರಿಗೆ ಆಘಾತ ಉಂಟು ಮಾಡಿ ಅವರು ಮೌನವಹಿಸಿದ್ದಾರೆ. ಅಂಬರೀಶ್ ವಿರುದ್ಧ ಚುನಾವಣೆಗೆ ನಿಲ್ಲಬೇಕು ಎಂದು ನಾನು ಬಿ-ಫಾರಂ ಕೇಳಲಿಲ್ಲ. ಚುನಾವಣೆಗೆ ಸ್ಪರ್ಧಿಸುವ ಆಸೆಯೂ ನನಗಿರಲಿಲ್ಲ. ಆದರೆ ಕೊನೆಗೆ ಈ ಬಹುಮಾನ ತೆಗೆದುಕೊಂಡು ಈಚೆಗೆ ಬಂದೆ. ಇದು ತುಂಬಾ ಬೇಸರದ ಸಂಗತಿ ಎಂದು ತಮ್ಮ ಬೆಂಬಲಿಗರೆದುರು ಕಣ್ಣೀರು ಹಾಕಿದರು. ಇದನ್ನು ಓದಿ: ಅಮರಾವತಿಗೆ ಅಂಬರೀಷ್ ಮಂಗಳಾರತಿ!

    ರಮ್ಯಾ ಗೆ ಟಿಕೆಟ್ ಸಿಕ್ಕಿದ್ದು ಹೇಗೆ? ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದೆ ರಮ್ಯಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರ ಬಗ್ಗೆ ಗುಟ್ಟು ಬಿಚ್ಚಿಟ್ಟಿರು. ರಮ್ಯಾ ಅವರಿಗೆ ಎರಡು ಬಾರಿ ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿದಾಗಲೂ ಅಸಮಾಧಾನ ನನಗಿತ್ತು. ಈ ಹಿಂದೆ ಎಂಪಿ ಚುನಾವಣೆಯಲ್ಲಿಯೂ ಹೈಕಮಾಂಡ್ ಏಕಾಏಕಿ ರಮ್ಯಾ ಅವರಿಗೆ ಟಿಕೆಟ್ ನೀಡಿತ್ತು. ಆದರು ನಾವೆಲ್ಲರೂ ಸೇರಿ ಗೆಲ್ಲಿಸಿದ್ದೇವು. ಮತ್ತೆ ಆರು ತಿಂಗಳಲ್ಲಿ ಎಂಪಿ ಎಲೆಕ್ಷನ್ ಬಂತು. ಅಂಬರೀಶ್ ಅವರಿಗೆ ಅನಾರೋಗ್ಯದ ಕಾರಣದಿಂದ ಸಿಂಗಾಪೂರದಲ್ಲಿದ್ದರು. ಮತ್ತೆ ರಮ್ಯಾ ಅವರಿಗೆ ಟಿಕೆಟ್ ಕೊಟ್ಟರು. ಎಲೆಕ್ಷನ್ ಹೇಗೆ ಮಾಡುವುದು ಎಂಬ ಗೊಂದಲವಿತ್ತು. ಚುನಾವಣೆ ಮಾಡುವುದು ಕಾಂಗ್ರೆಸ್‍ನಲ್ಲಿ ಇಷ್ಟ ಇರಲಿಲ್ಲ. ಈ ವೇಳೆ ಅಂಬರೀಶ್ ಸಿಂಗಾಪುರದಲ್ಲಿದ್ದಾರೆ ಇನ್ನು ಯಾರು ಚುನಾವಣೆ ಮಾಡಬೇಕು, ನೀನೇ ಚುನಾವಣೆ ಮಾಡಬೇಕು ಎಂದು ಸಿದ್ದರಾಮಯ್ಯ ಗದರಿದ್ರು. ಅದ್ದರಿಂದ ಚುನಾವಣೆಯಲ್ಲಿ ಗೆಲುವುಗಾಗಿ ಶ್ರಮ ವಹಿಸಿದ್ದೆವು ಎಂದರು.

    ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರಮ್ಯಾ ಸೋತರು. ಅವತ್ತು ಸೋತವರು ಮತ್ತೆ ಕ್ಷೇತ್ರದಲ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಮಂಡ್ಯ ಜಿಲ್ಲೆಯ ನಾಯಕರು, ಕಾರ್ಯಕರ್ತರನ್ನು ಕೇಳದೇ ಪಕ್ಷದ ಹಿರಿಯರು ಎಲ್ಲೋ ಕುಳಿತು ಬಿ-ಫಾರಂ ಕೊಡುತ್ತಾರೆ. ಬಿಫಾರಂ ಪಡೆದು ಬಂದವರು ಚುನಾವಣೆ ಮಾಡಿಕೊಂಡು ಹೋಗುತ್ತಾರೆ. ಕ್ಷೇತ್ರದ ಜನರ ಕಷ್ಟ ಕೇಳುವವರು ಯಾರು ಎಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಿದರು.

    ಸದ್ಯ ಮಂಡ್ಯ ಕ್ಷೇತ್ರದ ಬಿ ಫಾರಂ ಕೊಟ್ಟಿದ್ದೀರಿ. ನಾವು ಚುನಾವಣೆ ಮಾಡುತ್ತೇವೆ. ಆದರೆ ಹೈಕಮಾಂಡ್ ಬಂದು ಮಾತನಾಡಿ ಕಷ್ಟ ಸುಖದಲ್ಲಿ ಇರುತ್ತೇವೆ ಎಂದು ನಾಯಕತ್ವ ಕೊಡಲಿ. ಇಲ್ಲದಿದ್ದರೆ ಕ್ಷೇತ್ರ ಗೊಂದಲವಾಗೇ ಇರುತ್ತೆ ಎಂದು ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದರು.

  • ಮೋದಿ ವಿರುದ್ಧದ ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!

    ಮೋದಿ ವಿರುದ್ಧದ ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!

    ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮೋದಿ ಭಾಷಣದ ಬಳಿಕ ಟ್ವಿಟ್ಟರ್‍ನಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಮೋದಿ ಕಾಲೆಳೆದಿದ್ದು, ಇದಕ್ಕೆ ಶಾಸಕ ಜಮೀರ್ ಅಹಮದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪ್ರಧಾನ ಮಂತ್ರಿಗಳಿಗೆ ಯಾರೇ ಆದರೂ ಗೌರವ ಕೊಡಬೇಕು. ಈ ರೀತಿ ಮಾತನಾಡಬಾರದು ಅಂತ ಶಾಸಕರು, ರಮ್ಯಾ ಟ್ವೀಟ್ ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ಈಕೆ ಯಾರು? ಸಾಧನೆ ಏನು? ಕನ್ನಡ ಬಾರದ ಕಾಡುಪಾಪ- ಮೋದಿ ಕಾಲೆಳೆದ ರಮ್ಯಾ ವಿರುದ್ಧ ಜಗ್ಗೇಶ್ ಕಿಡಿ

    ಮೋದಿ ಕೇವಲ ರಾಜಕೀಯ ಭಾಷಣ ಮಾಡಿ ಹೋಗಿದ್ದಾರೆ. ಮಹದಾಯಿ ಬಗ್ಗೆ ಒಂದೇ ಒಂದು ಶಬ್ಧ ಮಾತನಾಡಿಲ್ಲ. ಯಾರ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ ಗೊತ್ತಿಲ್ಲ. ಯಡಿಯೂರಪ್ಪ ಅವರನ್ನ ಪಕ್ಕದಲ್ಲಿ ಕೂರಿಸಿಕೊಂಡು ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಭ್ರಷ್ಟಾಚಾರ ಮಾಡಿ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ನಮ್ಮ ಸಿಎಂ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಆದ್ರೆ ಮೋದಿ ಮಾಡಿದ ಆರೋಪಕ್ಕೆ ಒಂದೇ ಒಂದು ದಾಖಲೆ ಕೊಡಲಿ ಅಂತ ಅವರು ಸವಾಲೆಸೆದ್ರು. ಇದನ್ನೂ ಓದಿ: ಮೋದಿ ಭಾಷಣವನ್ನ ಮೂರು ಅಕ್ಷರಗಳಲ್ಲಿ ಟೀಕಿಸಿದ ರಮ್ಯಾ  

    ರಮ್ಯಾ ಹೇಳಿದ್ದೇನು?: ಮೋದಿ ಭಾಷಣದ ಬಳಿಕ ಟ್ವಿಟ್ವರ್‍ನಲ್ಲಿ ಕಾಂಗ್ರೆಸ್-ಬಿಜೆಪಿ ನಡುವಿನ ವಾರ್ ತೀವ್ರಗೊಂಡಿತ್ತು. ನಶೆಯಲ್ಲಿದ್ದಾಗ ಹೀಗೆಲ್ಲಾ ಆಗುತ್ತೆ ಎಂದು ಹೇಳುವ ಮೂಲಕ ನಟಿ, ಮಾಜಿ ಸಂಸದೆ ರಮ್ಯಾ ಪ್ರಧಾನಿ ಮೋದಿಯ ಕಾಲೆಳೆದಿದ್ದರು.  ಇದನ್ನೂ ಓದಿ: ಕನ್ನಡಿಗ ರಾಹುಲ್ ದ್ರಾವಿಡ್‍ ಬಗ್ಗೆ ಮೋದಿ ಪ್ರಶಂಸೆ

    ಭಾಷಣದಲ್ಲಿ ರೈತರು ತಮ್ಮ ಟಾಪ್ ಆದ್ಯತೆ ಎಂದು ಮೋದಿ ಹೇಳಿದ್ದರು. ಟಾಪ್(TOP) ಎಂದರೆ ಟೊಮೆಟೋ, ಈರುಳ್ಳಿ, ಪೊಟಾಟೋ ಎಂದು ವಾಖ್ಯಾನಿಸಿದ್ದರು. ಇದನ್ನೇ ಉಲ್ಲೇಖಿಸಿದ ರಮ್ಯಾ ಟಾಪ್ ನನ್ನು ಉಲ್ಟಾ ಬರೆದು ಪಾಟ್ ಮಾಡಿದ್ದರು. ಪಾಟ್(POT) ಎಂದರೆ ಮಾದಕ ದ್ರವ್ಯ. ಮರಿಜುನಾ ಮಾದಕ ದ್ರವ್ಯ ಗಿಡಕ್ಕೆ ಪಾಟ್ ಎನ್ನುವ ಹೆಸರೂ ಇದೆ. ಇದನ್ನೂ ಓದಿ: ಮೋದಿ ರ‍್ಯಾಲಿಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಲಾಭ

    ಪದಪುಂಜ ಬಿಡಿಸೋದು ಬಿಟ್ಟರೆ ಪ್ರಧಾನಿ ರೈತರ ಬಗ್ಗೆ ಏನೂ ಮಾಡಿಲ್ಲ. ಕರ್ನಾಟಕದಲ್ಲಿ 3,500 ರೈತರು ಸಾವನ್ನಪ್ಪಿದ್ದರೂ ಗುಜರಾತ್, ಆಂಧ್ರ, ರಾಜಸ್ಥಾನ, ತಮಿಳುನಾಡಿಗೆ ಹೆಚ್ಚು ಪರಿಹಾರ ಕೊಟ್ಟಿರೋ ಮೋದಿ ಸರ್ಕಾರ, ಕರ್ನಾಟಕಕ್ಕೆ ಅತ್ಯಂತ ಕಡಿಮೆ ಬರ ಪರಿಹಾರ ಕೊಟ್ಟಿದೆ. ಸಿದ್ದರಾಮಯ್ಯ ಸರ್ಕಾರ 1,165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ರೆ, ಮೋದಿ ಸರ್ಕಾರ ಮಾಡಿರೋ ಸಾಲ ಮನ್ನಾ ಸೊನ್ನೆ ಎಂದು ರಮ್ಯಾ ತಿರುಗೇಟು ನೀಡಿದ್ದರು. ರಮ್ಯಾ ಅವರ ಟ್ವೀಟ್ ಗೆ ನವರಸ ನಾಯಕ ಜಗ್ಗೇಶ್ ಕೂಡ ತಿರುಗೇಟು ನೀಡುವ ಮೂಲಕ ಕಿಡಿಕಾರಿದ್ದರು. ಇದನ್ನೂ ಓದಿ: ಬಿಜೆಪಿ ಪರಿವರ್ತನಾ ಸಮಾರೋಪ ಸಮಾರಂಭ ಮುಕ್ತಾಯ- ಮಹದಾಯಿ ಕುರಿತು ತುಟಿಬಿಚ್ಚದ ಮೋದಿ!

  • ಅಪ್ಪಾಜಿ, ಇಂದಿರಾ ಆಯ್ತು, ಮಂಡ್ಯದಲ್ಲಿ ಶುರುವಾಗ್ತಿದೆ ರಮ್ಯಾ ಕ್ಯಾಂಟೀನ್

    ಅಪ್ಪಾಜಿ, ಇಂದಿರಾ ಆಯ್ತು, ಮಂಡ್ಯದಲ್ಲಿ ಶುರುವಾಗ್ತಿದೆ ರಮ್ಯಾ ಕ್ಯಾಂಟೀನ್

    ಮಂಡ್ಯ: ರಾಜ್ಯದಲ್ಲಿ ಈಗ ಕ್ಯಾಂಟೀನ್ ಭಾಗ್ಯಗಳ ಸರಮಾಲೆಯೇ ಶುರುವಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಶುರುವಾಗುತ್ತೆ ಎಂದು ಗೊತ್ತಾದ ಬೆನ್ನಲ್ಲೇ ಜೆಡಿಎಸ್ ಶಾಸಕ ಶರವಣ ಅವರು ಅಪ್ಪಾಜಿ ಕ್ಯಾಂಟೀನ್ ಆರಂಭಿಸಿದ್ದರು. ಈ ನಡುವೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೆಸರಲ್ಲಿ ಸ್ವಾಮಿ ಕ್ಯಾಂಟೀನ್ ಕೂಡಾ ಶುರುವಾಯ್ತು. ಇದಕ್ಕೀಗ ಮತ್ತೊಂದು ಸೇರ್ಪಡೆ ರಮ್ಯಾ ಕ್ಯಾಂಟೀನ್.

    ಹೌದು, ಮೋಹಕ ತಾರೆ, ಮಂಡ್ಯದ ಮಾಜಿ ಸಂಸದೆ ರಮ್ಯಾ ಮೇಲಿನ ಅಭಿಮಾನಕ್ಕಾಗಿ, ಅಭಿಮಾನಿಯೊಬ್ಬರು ಮಂಡ್ಯದ ಜನರಿಗೆ ಭಾನುವಾರ ಬೆಳಗ್ಗೆಯಿಂದ ಕ್ಯಾಂಟೀನ್ ಶುರು ಮಾಡಲಿದ್ದಾರೆ. ರಮ್ಯಾ ಕ್ಯಾಂಟೀನ್ ಆರಂಭ ಮಾಡುತ್ತಿರುವ ಅಭಿಮಾನಿ ಹೆಸರು ರಘು. ಕಳೆದ 15 ವರ್ಷಗಳಿಂದ ಮಂಡ್ಯದಲ್ಲಿ ರಸ್ತೆ ಬದಿ ಕ್ಯಾಂಟೀನ್ ನಡೆಸುತ್ತಿದ್ದರು. ಇದೀಗ ಹೊಸದಾಗಿ ಕ್ಯಾಂಟೀನ್ ಆರಂಭಿಸಿರುವ ರಘು ಅವರು ಮಾಜಿ ಸಂಸದೆ ರಮ್ಯಾ ಅವರ ಅಭಿಮಾನಿ. ರಮ್ಯಾ ಅವರು ಸಂಸದರಾಗಿದ್ದಾಗ ಒಳ್ಳೆಯ ಕೆಲಸ ಮಾಡಿದ್ದಾರೆ. ಹಳ್ಳಿ ಹಳ್ಳಿಗೆ ಭೇಟಿ ಮಾಡಿ ಜನರ ಕಷ್ಟ ಆಲಿಸಿದ್ದಾರೆ. ಹಾಗಾಗಿ ಅವರ ಹೆಸರಲ್ಲೇ ಒಂದು ಕ್ಯಾಂಟೀನ್ ಆರಂಭಿಸಲು ತೀರ್ಮಾನಿಸಿದ್ದಾರೆ. ಮಂಡ್ಯದ ಅಶೋಕ ನಗರದ ತ್ರಿವೇಣಿ ರಸ್ತೆಯಲ್ಲಿ ಕ್ಯಾಂಟೀನ್ ಆರಂಭಿಸುತ್ತಿದ್ದು, ಕೇವಲ ಹತ್ತು ರೂಪಾಯಿಗೆ ಊಟ ತಿಂಡಿ ನೀಡಲು ಮುಂದಾಗಿದ್ದಾರೆ.

    10 ರೂ.ಗೆ ಸಿಗುತ್ತೆ ಬಗೆ ಬಗೆ ಐಟಂ: ರಮ್ಯಾ ಕ್ಯಾಂಟೀನ್ ಆರಂಭ ಮಾಡುತ್ತಿರುವ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಘು, ತಾವೇ ಮಾಲೀಕರಾಗಿ, ತಾವೇ ಕೆಲಸಗಾರರಾಗಿ ಹೋಟೆಲ್‍ನಲ್ಲಿ ದುಡಿಯುವುದರಿಂದ 10 ರೂಪಾಯಿಗೆ ಊಟ ತಿಂಡಿ ನೀಡಿದರೂ ನನಗೆ ನಷ್ಟವಿಲ್ಲ ಎಂದು ಹೇಳುತ್ತಾರೆ.

    ಮಸಾಲೆ ದೋಸೆ, ಪ್ಲೈನ್ ದೋಸೆ ಸೇರಿದಂತೆ ವಿವಿಧ ಬಗೆಯ ದೋಸೆಗಳು, ಇಡ್ಲಿ, ವಡೆ, ಮುದ್ದೆ, ಅನ್ನ, ಸಾಂಬಾರು, ರಾಗಿ ಗಂಜಿ ಸೇರಿದಂತೆ ಹಲವಾರು ಸ್ವಾದಿಷ್ಟ ಆಹಾರಗಳು ರಮ್ಯಾ ಕ್ಯಾಂಟೀನ್ ನಲ್ಲಿದೆ. ರಮ್ಯಾ ಕ್ಯಾಂಟೀನ್ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಮೀಪದಲ್ಲೇ ಇದ್ದು, ಜಿಲ್ಲೆಯ ಎಲ್ಲ ತಾಲೂಕುಗಳಿಂದ ಜನ ಆಸ್ಪತ್ರೆಗೆ ಬರುತ್ತಾರೆ. ಅವರಲ್ಲಿ ಹಲವರ ಬಳಿ ಹೆಚ್ಚು ಹಣವಿರುವುದಿಲ್ಲ. ಅಂತಹವರಿಗೆ ರಮ್ಯಾ ಕ್ಯಾಂಟೀನ್ ನಿಂದ ತುಂಬಾ ಅನುಕೂಲವಾಗಲಿದೆ ಎಂಬುವುದು ಸಾರ್ವಜನಿಕರ ಅಭಿಪ್ರಾಯ.

    ಮಾಜಿ ಸಂಸದೆ ರಮ್ಯಾ ಮಂಡ್ಯದಿಂದ ನಾಪತ್ತೆಯಾಗಿ ವರ್ಷ ಕಳೆದರೂ ಅವರ ಅಭಿಮಾನಿಗಳು ಮಾತ್ರ ರಮ್ಯಾ ಹೆಸರಲ್ಲಿ ಒಂದಿಲ್ಲೊಂದು ಒಂದು ಕೆಲಸ ಮಾಡುತ್ತಾ ಇದ್ದಾರೆ. ಇವೆಲ್ಲವನ್ನೂ ನೋಡಿದ ಮೇಲಾದರೂ ನವದೆಹಲಿಯಲ್ಲಿ ಪಕ್ಷ ಕಟ್ಟುವ ಕೆಲಸದಲ್ಲಿ ತೊಡಗಿರುವ ರಮ್ಯಾ ಅವರು ಮಂಡ್ಯಕ್ಕೆ ಬಂದು ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾರಾ ಎಂಬುದು ಸದ್ಯ ಮಂಡ್ಯದ ಜನರಿಗಿರುವ ಕುತೂಹಲ.


  • ರಮ್ಯಾ ಚುನಾವಣೆಗೆ ಸ್ಪರ್ಧಿಸುತ್ತಾರಾ?: ಪರಮೇಶ್ವರ್ ಈ ಉತ್ತರ ನೀಡಿದ್ರು

    ರಮ್ಯಾ ಚುನಾವಣೆಗೆ ಸ್ಪರ್ಧಿಸುತ್ತಾರಾ?: ಪರಮೇಶ್ವರ್ ಈ ಉತ್ತರ ನೀಡಿದ್ರು

    ಬೆಂಗಳೂರು: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡುವ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಮ್ಯಾ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರವನ್ನು ಎಲ್ಲೂ ಹೇಳಿಲ್ಲ ಎಂದು ತಿಳಿಸಿದ್ದಾರೆ.

    ರಮ್ಯಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಎಲ್ಲೂ ಹೇಳಿಕೆ ನೀಡಿಲ್ಲ, ನಾವು ಹೇಳಿಲ್ಲ. ರಮ್ಯಾ ಯಾರ ಸಂಪರ್ಕದಲ್ಲಿ ಇದ್ದಾರೋ, ಇಲ್ವೋ ಎಂಬುವುದು ತಿಳಿದಿಲ್ಲ. ಅವರ ಹುಟ್ಟು ಹಬ್ಬದ ದಿನದಂದು ಅವರಿಗೆ ಕರೆ ಮಾಡಿ ಶುಭಾಶಯ ಹೇಳಿದ್ದೆ ಎಂದು ತಿಳಿಸಿದ್ದಾರೆ.

    ಇನ್ನು 2018 ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಯಾತ್ರೆ ಕೈಗೊಳ್ಳುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷದವರು ಯಾತ್ರೆ ಮಾಡಿದ ತಕ್ಷಣ ನಾವು ಏಕೆ ಯಾತ್ರೆ ಮಾಡಬೇಕು. ಯಾತ್ರೆ ಮಾಡಿದ ತಕ್ಷಣ ಚುನಾವಣೆಗೆ ತಯಾರಿ ಅಂತ ಏನಿಲ್ಲ. ನಾವು ನಮ್ಮದೇ ರಣತಂತ್ರ ಹೊಂದಿದ್ದೇವೆ. ಈಗಾಗಲೇ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

    ಈ ಬಾರಿಯ ಚುನಾವಣೆಯಲ್ಲಿ ನಾನು ಕೊರಟಗೆರೆಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ ಪರಮೇಶ್ವರ್ ಒಂದು ಕುಟುಂಬದಲ್ಲಿ ಹಲವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಕೋಪಗೊಂಡರು. ಚುನಾವಣೆಯಲ್ಲಿ ಮೂರು ಬಾರಿ ಪರಾಭವಗೊಂಡವರಿಗೆ ಹಾಗೂ ಒಂದು ಕುಟುಂಬದಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕು ಎನ್ನುವ ನಿಯಮ ಇದೆ. ಆದರೆ ಇದು ಜಾರಿಯಾಗಿಲ್ಲ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಹೈಕಮಾಂಡ್ ಹೇಗೆ ನಿಯಮ ರೂಪಿಸುತ್ತದೋ ಅದರ ಅನ್ವಯ ಟಿಕೆಟ್ ನೀಡಲಾಗುತ್ತದೆ ಎಂದರು. ಚನ್ನಪಟ್ಟಣದಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಒಳ ಒಪ್ಪಂದ ವಿಚಾರ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಣಕ್ಕೆ ಇಳಿಸುತ್ತೇವೆ ಎಂದರು.

    ರಮ್ಯಾ ಅವರು ಸಂಸದರಾಗಿ ಆಯ್ಕೆಯಾದ ಕಡಿಮೆ ಅವಧಿಯಲ್ಲಿ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಮಂಡ್ಯದ ಕಾಂಗ್ರೆಸ್ ಅಭಿಮಾನಿಗಳು ಮನವಿ ಮಾಡಿದ್ದರು.

  • ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿಯಾದ್ರೂ ರಮ್ಯಾ ನೋ ರಿಯಾಕ್ಷನ್

    ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿಯಾದ್ರೂ ರಮ್ಯಾ ನೋ ರಿಯಾಕ್ಷನ್

    ಮಂಡ್ಯ: ಸದಾ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರವನ್ನು ಒಂದಲ್ಲ ಒಂದು ಕಾರಣಕ್ಕೆ ಟೀಕಿಸುತ್ತಿದ್ದ ಮಾಜಿ ಸಂಸದೆ ರಮ್ಯಾ ಇದೀಗ ತಮ್ಮದೇ ಪಕ್ಷದ ಸಚಿವರ ಮನೆ ಮೇಲೆ ಐಟಿ ದಾಳಿ ಮಾಡಿದಾಗ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಕಳೆದ ಮೂರು ದಿನಗಳಿಂದ ಇಂಧನ ಸಚಿವ ಡಿಕೆ ಶಿವಕುಮಾರ್, ಸಂಬಂಧಿಕರು ಹಾಗೂ ಅವರ ಆಪ್ತರ ನಿವಾಸದ ಮೇಲೆ ಐಟಿ ದಾಳಿ ನಡೆಯುತ್ತಿದೆ. ನಿರಂತರವಾಗಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಅಲ್ಲದೇ ಈ ಕುರಿತು ರಾಜ್ಯಾದ್ಯಂತ ಹಾಗೂ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳು ಕೇಳಿ ಬರ್ತಾ ಇದೆ. ಈ ದಾಳಿ ಒಂದು ರಾಜಕೀಯ ಪ್ರೇರಿತವಾಗಿದೆ ಎನ್ನುವ ಆರೋಪಗಳು ವ್ಯಕ್ತವಾಗುತ್ತಿದೆ. ಆದ್ರೆ ಪ್ರತಿ ಬಾರಿ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ನಲ್ಲಿ ಜರಿಯುತ್ತಿದ್ದ ರಮ್ಯಾ ಇದೀಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಗೊಂದಲಕ್ಕೀಡುಮಾಡಿದೆ.

    ಅಲ್ಲದೇ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕಾರ್ಯನಿರತರಾಗರೋ ರಮ್ಯಾ ತಮ್ಮ ಮಂಡ್ಯದಲ್ಲಿರೋ ನಿವಾಸಕ್ಕೆ ಭೇಟಿ ನೀಡದೆ ತಿಂಗಳುಗಳೇ ಕಳೆದಿದೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.