Tag: former Mp

  • ಮನೆ ಖಾಲಿ ಮಾಡೋ ವಿಚಾರದಲ್ಲಿ ಸುಳ್ಳು ಹೇಳಿದ್ರಾ ರಮ್ಯಾ?

    ಮನೆ ಖಾಲಿ ಮಾಡೋ ವಿಚಾರದಲ್ಲಿ ಸುಳ್ಳು ಹೇಳಿದ್ರಾ ರಮ್ಯಾ?

    ಮಂಡ್ಯ: ಇಲ್ಲಿನ ವಿದ್ಯಾನಗರದಲ್ಲಿದ್ದ ಬಾಡಿಗೆ ಮನೆ ಖಾಲಿ ಮಾಡುವ ವಿಚಾರದಲ್ಲಿ ಮಾಜಿ ಸಂಸದೆ ರಮ್ಯಾ ಅವರು ಸುಳ್ಳು ಹೇಳಿದ್ರಾ ಅನ್ನೋ ಅನುಮಾನ ಪ್ರಶ್ನೆ ಎದ್ದಿದೆ.

    ಮಾಲೀಕ ಮನೆಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ನಾನು ಮಂಡ್ಯದ ಮನೆಯನ್ನು ಖಾಲಿ ಮಾಡಿದ್ದೇನೆ ಅಂತ ರಮ್ಯಾ ಹೇಳಿದ್ದು, ಇದೀಗ ಸ್ವತಃ ಮಾಲೀಕರೇ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಅಂತ ಹೇಳಿದ್ದಾರೆ.

    ರಮ್ಯಾ ಮನೆ ಖಾಲಿ ಮಾಡುವುದಾಗಿ ಅವರ ಪಿಎ ಎರಡು ತಿಂಗಳ ಹಿಂದೆ ಕರೆ ಮಾಡಿ ಹೇಳಿದ್ದರು. ಆದ್ರೆ ಈಗ ಮನೆ ಖಾಲಿ ಮಾಡಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸೋಮವಾರ ಬೆಳಗ್ಗೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಸುದ್ದಿ ನೋಡಿದ ನಂತರ ರಮ್ಯಾ ಮನೆ ಖಾಲಿ ಮಾಡಿದ್ದು ಗೊತ್ತಾಗಿದೆ. ಮನೆಯಲ್ಲಿದ್ದ ಫರ್ನಿಚರ್ ತೆಗೆದುಕೊಂಡು ಹೋಗುತ್ತೇನೆ ಅಂದ್ರು. ಓಕೆ ತೆಗೆದುಕೊಂಡು ಹೋಗಿ ಇಲ್ಲ ಅಂದ್ರೆ ನಾನೇ ಕಳಿಸಿಕೊಡುತ್ತೇನೆ. ಆದ್ರೆ ಮನೆ ಖಾಲಿ ಮಾಡುವ ಬಗ್ಗೆ ಬರಹದಲ್ಲಿ ಕೊಡಿ ಎಂದು ಕೇಳಿದ್ದೆ. ಆದ್ರೆ ಇದುವರೆಗೂ ಬರಹದಲ್ಲಿ ಕೊಟ್ಟಿಲ್ಲ. ಅವರು ಸಿಗೋದೇ ಇಲ್ಲ. ಹೀಗಾಗಿ ಮನೆಯ ವಸ್ತುಗಳನ್ನು ಎಲ್ಲಿ ತೆಗೆದುಕೊಂಡು ಹೋಗಿದ್ದಾರೆ ಗೊತ್ತಿಲ್ಲ ಅಂತ ರಮ್ಯಾ ಅವರ ಬಾಡಿಗೆ ಮನೆ ಮಾಲೀಕ ಸಾದತ್ ಆಲಿಖಾನ್ ಹೇಳಿದ್ದಾರೆ.

    ಅವರು ಮನೆ ಖಾಲಿ ಮಾಡಿದ್ದಾರೆ ಎಂದು ಗೊತ್ತಾದ ನಂತರ ವಿಚಾರಿಸಿದೆ. ಇನ್ನೂ ಮನೆ ಬಳಿ ಸೆಕ್ಯೂರಿಟಿ ಇರುವುದು ಗೊತ್ತಾಗಿದೆ. ಮನೆ ಬಳಕೆಯಾಗಲಿ ಎಂದು ರಮ್ಯಾ ಅವರಿಗೆ ಕೊಟ್ಟಿದ್ದೆ. ಆದ್ರೆ ಮನೆಗೆ ಅವರು ಬರುತ್ತಲೇ ಇಲ್ಲ. ಮನೆಗೆ ಸೆಕ್ಯೂರಿಟಿ ಇಟ್ಟಿದ್ರು. ಹೀಗಾಗಿ ಮನೆ ನಿಮಗೆ ಬೇಡ ಅಂದ್ರೆ ನಾವೇ ಇರುತ್ತೇವೆ ಕೊಡಿ ಎಂದು ಕೇಳಿದ್ದೆ. ಆದ್ರೆ ನಾನು ಹಾಗೇ ಕೇಳುವ ಮುಂಚೆಯೇ ಅವರು ಖಾಲಿ ಮಾಡುತ್ತೇವೆ ಅಂದಿದ್ರು. ಹೀಗಾಗಿ ಖಾಲಿ ಮಾಡಿರಬಹುದು ಎಂದು ತಿಳಿಸಿದರು.

    ರಮ್ಯಾ ಅವರು ಅಂಬರೀಶ್ ಅಂತ್ಯ ಸಂಸ್ಕಾರಕ್ಕಾದ್ರೂ ಬರಬೇಕಿತ್ತು. ಅವರಿಗೆ ಹುಷಾರಿಲ್ಲದ ಕಾರಣ ಬಂದಿಲ್ಲದಿರಬಹುದು. ಅವರು ಚುನಾವಣೆಗೆ ನಿಂತು ಇಲ್ಲಿಯೇ ಇರುತ್ತಾರೆ ಎಂದುಕೊಂಡಿದ್ದೆ. ಆದ್ರೆ ಅವರು ಚುನಾವಣೆಗೆ ನಿಲ್ಲಲಿಲ್ಲ. ಅವರಿಗೆ ಹುಷಾರಿಲ್ಲ ಎಂದು ಯಾರೋ ಹೇಳಿದ್ರು. ಆದ್ರೆ ಅವರಿಗೆ ಏನಾಗಿದೆ ಎಂಬ ಸತ್ಯ ನನಗೆ ಗೊತ್ತಿಲ್ಲ. ಅವರು ಸಿಗ್ತಾನೆ ಇಲ್ಲ. ನನಗೆ ಆ ಮನೆಯ ಬಗ್ಗೆ ಭಾವನಾತ್ಮಕ ಸಂಬಂಧವಿದೆ. ಹೀಗಾಗಿ ಆ ಮನೆಯನ್ನು ನಾನು ಯಾರಿಗೂ ಮಾರಲ್ಲ. ಮೊದಲು ಆ ಮನೆಗೆ ಅಂಬರೀಶ್ ಬಾಡಿಗೆಗೆ ಬರುತ್ತಾರೆ ಎಂದು ಅವರ ಅಭಿಮಾನಿಗಳು ಹೇಳಿದ್ರು. ಅವರು ಬರಲಿಲ್ಲ. ಆ ನಂತ್ರ ರಮ್ಯಾ ಬಾಡಿಗೆಗೆ ಬಂದ್ರು ಅಂತ ಅವರು ವಿವರಿಸಿದ್ರು.

    ರಮ್ಯಾ ಹೇಳಿದ್ದು ಏನು?
    ರಾತ್ರೋರಾತ್ರಿ ನಾನು ನಿವಾಸವನ್ನು ಖಾಲಿ ಮಾಡಿಲ್ಲ. ಮಂಡ್ಯದಲ್ಲಿ ನಾನು ಬಾಡಿಗೆ ಮನೆಯಲ್ಲಿದ್ದೆ. ಕೆಲ ದಿನಗಳ ಹಿಂದೆ ಮನೆ ಮಾಲೀಕ ನಾನು ಮರಳುತ್ತಿದ್ದೇನೆ. ಹೀಗಾಗಿ ನನಗೆ ಆ ಮನೆ ಬೇಕೆಂದು ಹೇಳಿದರು. ಜವಾಬ್ದಾರಿಯುತ ಬಾಡಿಗೆದಾರಳಾಗಿ ಮಾಲೀಕನ ಮಾತನ್ನು ಕೇಳಬೇಕಾದದ್ದು ನನ್ನ ಕರ್ತವ್ಯ. ಹೀಗಾಗಿ ನಾನು ಮನೆಯನ್ನು ಖಾಲಿ ಮಾಡಿದ್ದೇನೆ ಎಂದು ರಮ್ಯಾ ಪ್ರತಿಕ್ರಿಯಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಪರೇಷನ್ ಬಿಟ್ರೆ ಯಾವುದೇ ಚಿಕಿತ್ಸೆ ಇಲ್ಲ- ರಮ್ಯಾ ಕಾಯಿಲೆ ಬಗ್ಗೆ ಮೂಳೆ ತಜ್ಞರ ಸ್ಪಷ್ಟನೆ

    ಆಪರೇಷನ್ ಬಿಟ್ರೆ ಯಾವುದೇ ಚಿಕಿತ್ಸೆ ಇಲ್ಲ- ರಮ್ಯಾ ಕಾಯಿಲೆ ಬಗ್ಗೆ ಮೂಳೆ ತಜ್ಞರ ಸ್ಪಷ್ಟನೆ

    ಮಂಡ್ಯ: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿಲ್ಲ.

    ಈ ಕಾಯಿಲೆ ಬಗ್ಗೆ ಮೂಳೆ ತಜ್ಞ ಡಾ.ಜಗನ್ನಾಥ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆ ಪ್ರಮುಖವಾಗಿ ಮೂಳೆಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಇದನ್ನು ಮೂಳೆ ಕ್ಯಾನ್ಸರ್ ಎಂದು ಹೇಳಲಾಗುತ್ತದೆ ಎಂದು ತಿಳಿಸಿದ್ದಾರೆ.

    ಇದು ಅಪರೂಪದ ಕಾಯಿಲೆಯಾಗಿದ್ದು, ಪುರುಷ ಮತ್ತು ಮಹಿಳೆ ಇಬ್ಬರಲ್ಲೂ ಸಮಾನಾಗಿ ಕಾಣಿಸಿಕೊಳ್ಳುತ್ತದೆ. ಇದು 2-3 ಸಾವಿರ ಮಂದಿಯಲ್ಲಿ ಒಬ್ಬರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆಯನ್ನು ಮೂಳೆಯಲ್ಲಿ ಬದಲಾವಣೆ ಕಂಡುಬಂದ ನಂತರ ತಿಳಿಯಬಹುದಾಗದೆ. ಆಸ್ಟಿಯೋಕ್ಲ್ಯಾಟೋಮಾ ಕಾಯಿಲೆ ಮೊದಲನೇ ಹಂತದಲ್ಲಿ ಇದ್ದಾಗಲೇ ಚಿಕಿತ್ಸೆ ಪಡೆಯಬೇಕು ಇಲ್ಲವಾದರೆ ಮೂಳೆಯನ್ನು ತಿನ್ನುತ್ತಾ ಹೋಗುತ್ತದೆ ಎಂದು ಅವರು ವಿವರಿಸಿದ್ದಾರೆ.

    ಆಸ್ಟಿಯೋಕ್ಲ್ಯಾಟೋಮಾ ಕಾಯಿಲೆ ಬಂದರೆ, ಮೂಳೆಗಳಲ್ಲಿ ತುಂಬಾ ನೋವು ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಮುಖ್ಯವಾಗಿ ಜಾಯಿಂಟ್‍ಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆ ಬಂದರೆ ಓಡಾಡೋಕೆ ಆಗಲ್ಲ. ಅಲ್ಲದೇ ಕಾಯಿಲೆ ಕಾಣಿಸಿಕೊಂಡ ಜಾಗವನ್ನು ಅಲುಗಾಡಿಸಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಆ ಜಾಗದಲ್ಲಿ ತುಂಬಾ ನೋವಾಗುತ್ತದೆ. ಒಂದು ವೇಳೆ ಈ ಕಾಯಿಲೆ ಬಂದರೆ ಅದಕ್ಕೆ ಚಿಕಿತ್ಸೆ ಎಂದರೆ ಆಪರೇಷನ್ ಮಾತ್ರ. ಆಪರೇಷನ್ ಬಿಟ್ಟು ಬೇರೆ ಯಾವುದೇ ಚಿಕಿತ್ಸೆ ಇಲ್ಲ. ಆಪರೇಷನ್ ಮಾಡಿದ ತಕ್ಷಣ ಸಂಪೂರ್ಣ ಬೆಡ್ ರೆಸ್ಟ್ ಮಾಡಬೇಕು ಎಂದು ಡಾ.ಜಗನ್ನಾಥ್ ಹೇಳಿದ್ದಾರೆ.

    https://www.instagram.com/p/BpH55YWjMcE/?utm_source=ig_embed

    ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದ್ದು, ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದೆ. ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್‍ಗೆ ತುತ್ತಾಗುತ್ತಿದ್ದರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೊಬರ್‍ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದಾರೆ.

    ದೇಹದಲ್ಲಿ ಸಮಸ್ಯೆಗಳಾದರೆ ವ್ಯತಾಸ ಕಂಡು ಬಂದರೆ ಡಾಕ್ಟರ್ ಸಂಪರ್ಕಿಸಿ. ನಿರ್ಲಕ್ಷ್ಯ ಮಾಡಿದರೆ ಸೂಕ್ತ ಬೆಲೆ ತೆರಬೇಕಾಗತ್ತದೆ. ನಿರ್ಲಕ್ಷ್ಯ ಮಾಡಿ ನಾನು ಈಗ ಪಾಠ ಕಲಿತಿದ್ದೇನೆ ಅಂತ ಕಾಲಿನ ಚಿತ್ರ ಹಾಕಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಒಟ್ಟಿನಲ್ಲಿ ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವಿರುದ್ಧ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ರೆ ರಮ್ಯಾ ಅವರು ಅಂಬಿ ನೋಡಲು ಯಾಕೆ ಬರಲಿಲ್ಲ ಅನ್ನೋ ಅಸಲಿ ಕಾರಣ ಇದೀಗ ತಿಳಿದುಬಂದಿದೆ.

    https://www.youtube.com/watch?v=pMVHrrxwSzo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜಕೀಯ ದಾರಿ ತೋರಿದ ಅಂಬಿಯನ್ನೇ ಮರೆತ್ರಾ ರಮ್ಯಾ?

    ರಾಜಕೀಯ ದಾರಿ ತೋರಿದ ಅಂಬಿಯನ್ನೇ ಮರೆತ್ರಾ ರಮ್ಯಾ?

    ಮಂಡ್ಯ: ಮಾಜಿ ಸಂಸದೆ ರಮ್ಯಾ ವಿರುದ್ಧ ನಟ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಬಾರದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

    ಅಂಬರೀಶ್ ಅವರು ರಮ್ಯಾಗೆ ರಾಜಕೀಯವಾಗಿ ದಾರಿ ತೋರಿಸಿದ್ದಾರೆ. ಹೀಗಾಗಿ ಅಂಬಿ ಅಂತಿಮ ದರ್ಶನಕ್ಕಾದರೂ ರಮ್ಯಾ ಮಂಡ್ಯಕ್ಕೆ ಬರಬೇಕಿತ್ತು. ಅಲ್ಲದೇ ಓರ್ವ ಮಂಡ್ಯದ ಮಗಳಾಗಿ ರಮ್ಯಾ ಮಂಡ್ಯಕ್ಕೆ ಆಗಮಿಸಬೇಕಿತ್ತು. ಆದರೆ ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಅಂಬರೀಶ್ ವಿರುದ್ಧವೇ ಇನ್ನೂ ದ್ವೇಷ ಸಾಧಿಸುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.

    ಅಂಬಿ ನಿಧನರಾಗಿ ಒಂದು ದಿನಕಳೆದರೂ ಅಂತಿಮ ದರ್ಶನಕ್ಕೆ ರಮ್ಯಾ ಬಂದಿಲ್ಲ. ಘಟಾನುಘಟಿ ನಾಯಕರು, ಸಿನಿಮಾ ತಾರೆಯರು ಬಂದು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ್ದಾರೆ. ರಮ್ಯಾ ಅವರೆಲ್ಲರಿಗಿಂತ ಬ್ಯುಸಿ ಇದ್ದಾರಾ ಎಂದು ಪ್ರಶ್ನಿಸುವ ಮೂಲಕ ಅಂಬಿ ಅಭಿಮಾನಿಗಳು ರಮ್ಯಾ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

    ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ರಮ್ಯಾ ಗೆಲುವಲ್ಲಿ ಅಂಬರೀಶ್ ಪ್ರಮುಖ ಪಾತ್ರ ವಹಿಸಿದ್ದರು. ಅಂಬಿಯಂತೆ ರಮ್ಯಾ ಕೂಡ ಚಿತ್ರರಂಗ, ರಾಜಕೀಯ ಎರಡೂ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಅಲ್ಲದೇ ಇಬ್ಬರೂ ಮಂಡ್ಯದವರೇ. ಹೀಗಾಗಿ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತಂದಾಗ ರಮ್ಯಾ ಕೂಡ ತವರು ಜಿಲ್ಲೆಗೆ ಬಂದು ಅಂತಿಮ ದರ್ಶನ ಪಡೆಯುತ್ತಾರೆ ಅಂತ ಅಭಿಮಾನಿಗಳು ನಂಬಿದ್ದರು.

    ಕಳೆದ ಎರಡು ವರ್ಷದಿಂದ ಮಂಡ್ಯ ಕಡೆ ಆಗಮಿಸದ ರಮ್ಯಾ, ಇದೀಗ ಅಂಬಿ ಕೊನೆಯುಸಿರೆಳೆದಾಗಲೂ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಆಗಮಿಸದಿರುವುದು ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಕಾರಣರಾಗಿದ್ದಾರೆ.

    https://www.youtube.com/watch?v=EdRmEJPlhQ8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೇದಿಕೆಯಲ್ಲೇ ಹಾಲಿ Vs ಮಾಜಿ ಸಂಸದರ ಮುನಿಸು ಬಹಿರಂಗ!

    ವೇದಿಕೆಯಲ್ಲೇ ಹಾಲಿ Vs ಮಾಜಿ ಸಂಸದರ ಮುನಿಸು ಬಹಿರಂಗ!

    ಮೈಸೂರು: ಹಾಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಇಬ್ಬರೂ ಅಕ್ಕ-ಪಕ್ಕದಲ್ಲಿಯೇ ಕುಳಿತಿದಿದ್ದರೂ ಒಬ್ಬರಿಗೊಬ್ಬರು ಮಾತನಾಡಿಸದೇ ತಮ್ಮ ಮುನಿಸನ್ನು ವೇದಿಕೆಯಲ್ಲೇ ಬಹಿರಂಗಪಡಿಸಿದ್ದಾರೆ.

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ನಗರದಲ್ಲಿ ಗೌರವ ಸಮರ್ಪಣೆ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಸೇರಿದಂತೆ ಮೈಸೂರು ಹಾಲಿ ಸಂಸದ ಪ್ರತಾಪ್ ಸಿಂಹ ಹಾಗೂ ಪ್ರಮುಖ ವ್ಯಕ್ತಿಗಳು ಆಗಮಿಸಿದ್ದರು.

    ಇದೇ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಂಸದ ಸಿ.ಎಚ್.ವಿಜಯಶಂಕರ್, ಪ್ರತಾಪ್ ಸಿಂಹ ಅವರ ಅಕ್ಕ-ಪಕ್ಕದಲ್ಲಿಯೇ ಕುಳಿತುಕೊಂಡಿದ್ದರು. ಆದರೆ ಇಬ್ಬರೂ ಸಹ ಒಬ್ಬರ ಮುಖ ಮತ್ತೊಬ್ಬರು ನೋಡಲಿಲ್ಲ. ಪ್ರತಾಪ ಸಿಂಹ ಶಾಸಕ ನಾಗೇಂದ್ರ ಜೊತೆ ಮಾತನಾಡಿದರೂ, ಪಕ್ಕದಲ್ಲೇ ಇದ್ದ ತನ್ನ ಹಳೆಯ ಸ್ನೇಹಿತ ವಿಜಯಶಂಕರ್ ಕಡೆಗೆ ನೋಡಲಿಲ್ಲ.

    ಈ ವೇಳೆ ಸಾ.ರಾ.ಮಹೇಶ್ ಆಗಮಿಸುತ್ತಿದ್ದಂತೆ ಶಾಸಕ ನಾಗೇಂದ್ರ ಬೇರೆ ಕುರ್ಚಿಗೆ ತೆರಳಿದರೆ, ಇತ್ತ ಪ್ರತಾಪ್ ಸಿಂಹ ಕೂಡ ಮತ್ತೊಂದು ಖುರ್ಚಿಯಲ್ಲಿ ಆಸೀನರಾದರು. ಮಹೇಶ್ ಆಸೀನರದ ಎಡ ಹಾಗೂ ಬಲದಲ್ಲಿ ಹಾಲಿ ಹಾಗೂ ಮಾಜಿ ಸಂಸದರು ಕುಳಿತು ತಮ್ಮ ಮುನಿಸನ್ನು ಬಹಿರಂಗ ವೇದಿಕೆಯಯಲ್ಲೇ ಪ್ರದರ್ಶಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹುಡ್ಗಿ ಮುಂದೆ ಗನ್ ತೆಗೆದು ಶೋ ಕೊಟ್ಟ ಮಾಜಿ ಸಂಸದನ ಪುತ್ರ- ವಿಡಿಯೋ ವೈರಲ್

    ಹುಡ್ಗಿ ಮುಂದೆ ಗನ್ ತೆಗೆದು ಶೋ ಕೊಟ್ಟ ಮಾಜಿ ಸಂಸದನ ಪುತ್ರ- ವಿಡಿಯೋ ವೈರಲ್

    ನವದೆಹಲಿ: ಕ್ಷುಲ್ಲಕ ವಿಚಾರಕ್ಕೆ ಬಿಎಸ್‍ಪಿ ಮಾಜಿ ಸಂಸದರ ಪುತ್ರನೊಬ್ಬ ಯುವತಿಗೆ ಗನ್ ತೋರಿಸಿ ಆತಂಕ ಸೃಷ್ಟಿಸಿದ ಘಟನೆ ರಾಷ್ಟ್ರ ರಾಜಧಾನಿ ದಕ್ಷಿಣ ದೆಹಲಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಉತ್ತರಪ್ರದೇಶದ ಮಾಜಿ ಬಿಎಸ್‍ಪಿ ಸಂಸದ ರಾಕೇಶ್ ಪಾಂಡೆ ಪುತ್ರ ಆಶಿಶ್ ಪಾಂಡೆ ಯುವತಿಗೆ ಗನ್ ತೋರಿಸಿ ಬೆದರಿಸಿದ್ದಾನೆ. ಭಾನುವಾರ ರಾತ್ರಿ ದಕ್ಷಿಣ ದೆಹಲಿಯ ಫೈವ್ ಸ್ಟಾರ್ ಹೋಟೆಲ್ ಬಳಿ ಕಾರ್ ಪಾರ್ಕಿಂಗ್ ವಿಚಾರವಾಗಿ ಯುವ ಜೋಡಿ ಹಾಗೂ ಆಶಿಶ್ ಪಾಂಡೆ ನಡುವೆ ಜಗಳ ಏರ್ಪಟಿತ್ತು. ಈ ವೇಳೆ ಸಿಟ್ಟಿಗೆದ್ದ ಮಾಜಿ ಸಂಸದರ ಪುತ್ರ ಏಕಾಏಕಿ ತಮ್ಮ ಬಳಿಯಿದ್ದ ಗನ್ ತೆಗೆದು ಯುವತಿ ಹಾಗೂ ಆತನ ಪ್ರಿಯಕರನಿಗೆ ಬೆದರಿಸಿದ್ದಾನೆ.

    https://twitter.com/rajshekharTOI/status/1052068745319931904

    ಆಶಿಶ್ ಗನ್ ತೆಗೆದು ರಂಪಾಟ ನಡೆಸುತ್ತಿದ್ದನ್ನು ಕಂಡ ಹೋಟೆಲ್‍ನ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನ ಪಡಿಸಿ ಕಳುಹಿಸಿದ್ದಾರೆ. ಹೋಟೆಲ್ ಸಿಬ್ಬಂದಿ ತಕ್ಷಣ ಎಚ್ಚತ್ತುಕೊಂಡಿದ್ದರಿಂದ ಆಗಬಹುದಾಗಿದ್ದ ಅನಾಹುತ ತಪ್ಪಿದೆ. ಅಲ್ಲದೇ ಆಶಿಶ್ ಪಾಂಡೆ ಗನ್ ಹಿಡಿದು ಪುಂಡಾಟ ಮೆರೆದ 1 ನಿಮಿಷಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

    ವಿಡಿಯೋ ವೈರಲ್ ಆದ ಬೆನ್ನಲ್ಲೆ ಎಚ್ಚೆತ್ತಾ ದೆಹಲಿ ಪೊಲೀಸರು, ಸಾರ್ವಜನಿಕ ಪ್ರದೇಶದಲ್ಲಿ ಶಸ್ತ್ರಾಸ್ತ್ರ ತೋರಿ ದರ್ಪ ಮೆರೆದ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈಸೂರು ವಿವಿಗೆ ಆರ್ ಟಿಐ ಅಡಿ ಅರ್ಜಿ ಸಲ್ಲಿಸಿ ರಮ್ಯಾಗೆ ಟಾಂಗ್!

    ಮೈಸೂರು ವಿವಿಗೆ ಆರ್ ಟಿಐ ಅಡಿ ಅರ್ಜಿ ಸಲ್ಲಿಸಿ ರಮ್ಯಾಗೆ ಟಾಂಗ್!

    ಮಂಡ್ಯ: ಬಿಜೆಪಿ ಕಾರ್ಯಕರ್ತ ಮಂಜುನಾಥ್ ಅವರು ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಾಜಿ ಸಂಸದೆ ರಮ್ಯಾಗೆ ಟಾಂಗ್ ಕೊಟ್ಟಿದ್ದಾರೆ.

    ಹಂದಿ ತಾನಿರುವ ಚೆಂದಕ್ಕೆ ನಂದಿಯನ್ನ ಆಡಿಕೊಂಡಂತೆ ಎಂಬ ಗಾದೆ ಮಾತು ಪಿಯುಸಿ ಮಾಡಿರುವ ಮಾಜಿ ಸಂಸದೆ ರಮ್ಯಾ ಎಂಎ ಮಾಡಿರುವ ನರೇಂದ್ರ ಮೋದಿ ಅವರನ್ನ ಆಡಿಕೊಂಡಿರುವುದಕ್ಕೆ ಉದಾಹರಣೆ ಕೊಡಬಹುದೆ ಅಂತ ಅರ್ಜಿಯಲ್ಲಿ ತಿಳಿಸಿದ್ದಾರೆ.

    ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಹತೆ ಬಗ್ಗೆ ಆಡಿಕೊಂಡಿದ್ದರು. ಹೀಗಾಗಿ ಮಂಜುನಾಥ್ ಮೈಸೂರು ವಿಶ್ವವಿದ್ಯಾನಿಲಯದ ಜಾನಪದ ಮತ್ತು ಗಾದೆ ವಿಭಾಗಕ್ಕೆ ಮಾಹಿತಿ ಹಕ್ಕಿನ ಮೂಲಕ `ಹಂದಿ ತಾನಿರುವ ಚೆಂದಕ್ಕೆ ನಂದಿಯನ್ನು ಆಡಿಕೊಂಡಂತೆ’ ಎಂಬ ಗಾದೆ ರಮ್ಯಾರಿಗೆ ಉದಾಹರಣೆ ಕೊಡಬಹುದೆ ಅಂತ ಅರ್ಜಿ ಸಲ್ಲಿಸುವ ಮೂಲಕ ರಮ್ಯಾಗೆ ಟಾಂಗ್ ನೀಡಿದ್ದಾರೆ.

    ರಮ್ಯಾ ಏನ್ ಹೇಳಿದ್ದರು?:
    ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಒಂದು ರಿಪೋರ್ಟ್ ಕಾರ್ಡ್ ಕೊಟ್ಟಿತ್ತು. ಈ ರಿಪೋರ್ಟ್ ಕಾರ್ಡ್ ಸಾಕಷ್ಟು ವಿವಾದಕ್ಕೆ ಗುರಿಯಾಗಿತ್ತು. ಶಾಲೆಯಲ್ಲಿ ಸಿಗೋ ಮಾರ್ಕ್ಸ್ ಕಾರ್ಡ್ ನಂತೆ ಮಾಡಿ ಅದರಲ್ಲಿ ವಿಷಯ, ರಿಮಾರ್ಕ್ ಮತ್ತು ದರ್ಜೆ ಅಂತ ರಿಪೋರ್ಟ್ ಕಾರ್ಡ್ ನಲ್ಲಿ ನಮೂದಿಸಲಾಗಿತ್ತು.

    ಹೆಸರು -ಪ್ರಧಾನಿ ನರೇಂದ್ರ ಮೋದಿ
    ಅವಧಿ -2014ರಿಂದ ಇಲ್ಲಿಯವರೆಗೂ
    ರೋಲ್ ನಂಬರ್ -282 (ಲೋಕಸಭಾ ಸದಸ್ಯರ ಸಂಖ್ಯೆ)
    ಬ್ಲಡ್ ಗ್ರೂಪ್- ಬಿಜೆಪಿ
    ಉದ್ಯೋಗ ಸೃಷ್ಟಿ ಪರೀಕ್ಷೆಯಲ್ಲಿ- ಡಿ ಗ್ರೇಡ್

    ರಕ್ಷಣಾ ಪರೀಕ್ಷೆಯಲ್ಲಿ-ಸಿ ಗ್ರೇಡ್
    ಆರೋಗ್ಯ ಪರೀಕ್ಷೆಯಲ್ಲಿ -ಎಫ್ ಗ್ರೇಡ್
    ಆರ್ಥಿಕ ಪರೀಕ್ಷೆಯಲ್ಲಿ -ಎಫ್ ಗ್ರೇಡ್
    ಮಹಿಳಾ ಸುರಕ್ಷತೆ ಪರೀಕ್ಷೆಯಲ್ಲಿ- ಸಿ ಗ್ರೇಡ್

    ಸ್ಟೋರಿ ಟೆಲ್ಲಿಂಗ್‍ನಲ್ಲಿ -ಎ + +
    ಇತರೆ ವಿಭಾಗಗಳು- ಹಿಂಸೆ ? ಯೆಸ್, ಕೋಮುವಾದ-ಯೆಸ್
    ಫೈನಲ್ ಗ್ರೇಡ್ – ಡಿ ಗ್ರೇಡ್

    ಕೊನೆಯದಾಗಿ ಈ ಹುಡುಗ ಹಿಂಸಾತ್ಮಕವಾಗಿ ವರ್ತಿಸುತ್ತಾನೆ.. ಅಸಮರ್ಥ.. ಆದರೆ ಸುಳ್ಳು ಹೇಳುವುದರಲ್ಲಿ, ದ್ವೇಷ ಹರಡುವುದರಲ್ಲಿ ಪರಿಣಿತ ಅಂತ ಹೇಳಲಾಗಿತ್ತು. ಈ ರಿಪೋರ್ಟ್ ಕಾರ್ಡನ್ನು ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿ ಮೋದಿಯನ್ನು ಹೀಗಳೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತವರಿಗೆ ಬಾ ತಂಗಿ ಎಂದು ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು

    ತವರಿಗೆ ಬಾ ತಂಗಿ ಎಂದು ರಮ್ಯಾಗೆ ಬಾಗಿನ ಕಳುಹಿಸಿದ ಬಿಜೆಪಿ ಕಾರ್ಯಕರ್ತರು

    ಮಂಡ್ಯ: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಬಿಜೆಪಿ ಕಾರ್ಯಕರ್ತರು ತವರಿಗೆ ಬಾ ತಂಗಿ ಎನ್ನುವ ಮೂಲಕ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಾಗಿನವನ್ನು ಪೋಸ್ಟ್ ಮುಖಾಂತರ ಕಳುಹಿಸಿ ಕೊಟ್ಟಿದ್ದಾರೆ.

    ಕಳೆದ ಒಂದು ವರ್ಷದಿಂದ ಜಿಲ್ಲೆಯಿಂದ ನಾಪತ್ತೆಯಾಗಿರುವ ರಮ್ಯಾರವರು ಪುನಃ ಮಂಡ್ಯಕ್ಕೆ ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮನವಿ ಮಾಡಿಕೊಂಡಿದ್ದಾರೆ. ರಮ್ಯಾರವರಿಗೆ ಪೋಸ್ಟ್ ಮೂಲಕ ಬಾಗಿನವನ್ನು ತಲುಪಿಸಿ, ತವರಿಗೆ ಬಾ ತಂಗಿ ಎನ್ನುವ ಮೂಲಕ ಉಡುಗೊರೆಯನ್ನು ಕಳುಹಿಸಿಕೊಟ್ಟಿದ್ದಾರೆ.

    ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಿಗೂ ಮತಚಲಾಯಿಸಲು ಬಂದಿಲ್ಲ. ಗೌರಿ-ಗಣೇಶ ಹಬ್ಬಕ್ಕಾದರೂ ತವರು ಕ್ಷೇತ್ರ ಮಂಡ್ಯಕ್ಕೆ ಆಗಮಿಸಿ, ಜನರ ಕಷ್ಟಕ್ಕೆ ಸ್ಪಂದಿಸಲಿ ಎಂದು ಬಿಜೆಪಿ ಕಾರ್ಯಕರ್ತರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ ಎರಡು ವರ್ಷದಿಂದ ನಾಪತ್ತೆಯಾಗಿರುವ ನೀವು, ಈಗಲಾದರೂ ಆಗಮಿಸದಿದ್ದರೆ ಮುಂದಿನ ಲೋಕಾ ಚುನಾವಣೆಗೆ ಬಂದಾಗ ಘೇರಾವ್ ಹಾಕುವುದಾಗಿ ಎಚ್ಚರಿಸಿದ್ದಾರೆ.

    ಬಾಗಿನದಲ್ಲಿ ಹೂವು, ಬಳೆ ಹಾಗೂ ತೆಂಗಿನಕಾಯಿ ಸೇರಿದಂತೆ ಎಲ್ಲವನ್ನೂ ಅಂಚೆ ಮೂಲಕ ರಮ್ಯಾಗೆ ರವಾನಿಸಿದ್ದಾರೆ. ಗೌರಿ-ಗಣೇಶ ಹಬ್ಬದ ನೆಪಕ್ಕಾದರೂ ರಮ್ಯಾರವರು ತವರು ಜಿಲ್ಲೆಗೆ ಬರುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಕಳೆದ ವಿಧಾನಸಭೆ ಹಾಗೂ ನಗರಸಭೆ ಚುನಾವಣೆಗಳಲ್ಲಿ ಮತ ಚಲಾಯಿಸಿದ ಬಾರಿ ಟೀಕೆಗೆ ರಮ್ಯಾ ಗುರಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತನಿಂದ ಚಳುವಳಿ

    ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತನಿಂದ ಚಳುವಳಿ

    ಮಂಡ್ಯ: ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು ಚಳುವಳಿ ಆರಂಭಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎಂಬವರೇ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಚಳುವಳಿ ಆರಂಭಿಸಿದ್ದಾರೆ. ಮಂಡ್ಯದ ಉಪ್ಪರಕನಹಳ್ಳಿ ಗ್ರಾಮದ ನಿವಾಸಿಯಾಗಿರೋ ಶಿವಕುಮಾರ್ ಆರಾಧ್ಯ ಅವರು, ವಿಧಾನಸಭೆ ಮತ್ತು ಮಂಡ್ಯ ನಗರಸಭೆ ಚುನಾವಣೆಯಲ್ಲಿ ಮತದಾನ ಮಾಡದ ರಮ್ಯಾ ಅವರಿಗೆ ಯಾರೂ ಮತಹಾಕಬೇಡಿ ಎಂದು ಚಳುವಳಿಯ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವೋಟ್ ಹಾಕದವರು ಮತ ಕೇಳಲು ಅರ್ಹರಲ್ಲ: ರಮ್ಯಾ ವಿರುದ್ಧ ಕೈ ಕಾರ್ಯಕರ್ತರ ಕಿಡಿ

    ರಮ್ಯಾ ಮುಂದಿನ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಗಬಾರದು. ಮತ ಚಲಾಯಿಸದ ರಮ್ಯಾ ಅವರಿಗೆ ಯಾರೂ ಮತ ಹಾಕಬಾರದು ಎಂದು ಶಿವಕುಮಾರ್ ಅವರು ವಾಟ್ಸಪ್ ನಲ್ಲಿ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ರಮ್ಯಾ ವೋಟ್ ಮಾಡದಿದ್ರೆ, ಸ್ಪರ್ಧೆ ಮಾಡುವಂತಿಲ್ಲ: ಮಂಡ್ಯ ಜನ

    ಒಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಅವರು ರಮ್ಯಾ ವಿರುದ್ಧ ಆಕ್ರೋಶ ಹೊರಹಾಕಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಸಂಸದೆಗಾಗಿ ಮಂಡ್ಯ ಜನತೆ ಆಗ್ರಹ!

    ಮಾಜಿ ಸಂಸದೆಗಾಗಿ ಮಂಡ್ಯ ಜನತೆ ಆಗ್ರಹ!

    ಮಂಡ್ಯ: ನಗರಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮಾಜಿ ಸಂಸದೆ ರಮ್ಯಾ ಅವರು ಮತದಾನ ಮಾಡಲು ಬರಲೇಬೇಕು ಅಂತ ಸಾರ್ವಜನಿಕರು ಆಗ್ರಹಿಸಿದ್ದಾರೆ.

    ನಗರಸಭೆ ಚುನಾವಣೆಗೆ ಮತ ಹಾಕಲು ಬರದಿದ್ರೆ ನೀವು ಕೂಡ ಮತ ಕೇಳಬೇಡಿ ಎಂದು ಮಂಡ್ಯ ಜನತೆ ಮಾಜಿ ಸಂಸದೆ ರಮ್ಯಾಗೆ ಎಚ್ಚರಿಕೆ ನೀಡಿದ್ದಾರೆ. ಇಂದು ನಗರಸಭೆಗೆ ಚುನಾವಣೆ ನಡೆಯಲಿದ್ದು 11ನೇ ವಾರ್ಡ್‍ನಲ್ಲಿ ರಮ್ಯಾ ಮತದಾನ ಮಾಡಬೇಕಿದೆ. ರಮ್ಯಾ ಮತದಾನ ಮಾಡದಿದ್ರೆ ಮತ ಕೇಳುವ ಹಕ್ಕು ನಿಮಗಿಲ್ಲ ಎಂದು ಸಾರ್ವಜನಿಕರು ಗರಂ ಆಗಿದ್ದಾರೆ.

    ಅಲ್ಲದೇ ಮಂಡ್ಯ ನಗರಸಭೆ ಚುನಾವಣೆಗೆ ಓಟ್ ಹಾಕಲು ಬರದಿದ್ರೆ ಇನ್ನು ಮುಂದೆ ನೀವು ಕೂಡ ಓಟ್ ಕೇಳಬೇಡಿ. ಕಳೆದ ಬಾರಿ ವಿಧಾನಸಭೆ ಚುನಾಣೆಯಲ್ಲಿ ಮಂಡ್ಯದ ವಿದ್ಯಾನಗರದ ಮತಗಟ್ಟೆ ಸಂಖ್ಯೆ 168 ರಲ್ಲಿ ರಮ್ಯಾ ಮತದಾನ ಮಾಡಬೇಕಿತ್ತು. ಮತದಾರರ ಪಟ್ಟಿಯಲ್ಲಿ ಕ್ರಮ ಸಂಖ್ಯೆ 420 ರಲ್ಲಿದ್ದ ರಮ್ಯಾ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡದೆ ಟೀಕೆಗೆ ಗುರಿಯಾಗಿದ್ದರು. ಹೀಗಾಗಿ ಇಂದು ಮಂಡ್ಯ ನಗರಸಭೆ ಚುನಾವಣೆ ನಡೆಯುತ್ತಿದ್ದು 11 ನೇ ವಾರ್ಡ್‍ನಲ್ಲಿ ರಮ್ಯಾ ಮತದಾನ ಮಾಡಬೇಕಿದೆ.

    ಮತದಾರರ ಪಟ್ಟಿಯಲ್ಲಿ ರಮ್ಯಾ ಹೆಸರು ದಿವ್ಯಸ್ಪಂದನ ಎಂದಿದ್ದು, ಕ್ರಮಸಂಖ್ಯೆ 671 ಆಗಿದೆ. ವೇಣುಗೋಪಾಲ ದೇವಸ್ಥಾನದ ಎದುರು ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಮ್ಯಾ ಮತದಾನ ಮಾಡಬೇಕಿದೆ. ಒಂದು ವರ್ಷ ಎಂಟು ತಿಂಗಳಿಂದ ಮಂಡ್ಯ ಕಡೆ ತಲೆ ಹಾಕದ ರಮ್ಯಾ, ನಗರಸಭೆ ಚುನಾವಣೆಗೆ ಆಗಮಿಸಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯಬೇಕು. ಇಲ್ಲದಿದ್ರೆ ಅವರು ಚುನಾವಣೆಗೆ ನಿಂತು ನಮ್ಮನ್ನು ಮತ ಕೇಳಬಾರದು. ಅಷ್ಟೇ ಅಲ್ಲ ಚುನಾವಣಾ ಆಯೋಗ ಮತದಾನ ಮಾಡದವರ ಚುನಾವಣೆಗೆ ನಿಲ್ಲುವ ಅರ್ಹತೆಯನ್ನು ರದ್ದುಗೊಳಿಸುವ ಕಾನೂನು ತರಬೇಕು ಎಂದು, ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಸ್ಥಳೀಯ ಚುನಾವಣೆಯಲ್ಲಿ ರಮ್ಯಾ ವೋಟ್ ಮಾಡದಿದ್ರೆ, ಸ್ಪರ್ಧೆ ಮಾಡುವಂತಿಲ್ಲ: ಮಂಡ್ಯ ಜನ

    ಸ್ಥಳೀಯ ಚುನಾವಣೆಯಲ್ಲಿ ರಮ್ಯಾ ವೋಟ್ ಮಾಡದಿದ್ರೆ, ಸ್ಪರ್ಧೆ ಮಾಡುವಂತಿಲ್ಲ: ಮಂಡ್ಯ ಜನ

    ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ ಮತದಾನವನ್ನು ಮಾಡದೇ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪರ್ಧೆ ಮಾಡಲು ಬಿಡುವುದಿಲ್ಲವೆಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

    ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡದೇ, ಸಾರ್ವಜನಿಕರ ಕೆಂಗಣ್ಣಿಗೆ ರಮ್ಯಾ ಗುರಿಯಾಗಿದ್ದರು. ಒಂದು ವೇಳೆ ನೀವು ಸ್ಥಳೀಯ ಸಂಸ್ಥೆಯಲ್ಲಿ ಚುನಾವಣೆಯಲ್ಲಿ ಮತದಾನ ಮಾಡದೇ ಇದ್ದರೆ, ನೀವು ಯಾವುದೇ ಕಾರಣಕ್ಕೂ ಮಂಡ್ಯದಿಂದ ಸ್ಪರ್ಧೆ ಮಾಡುವಂತಿಲ್ಲ ಎಂದು ಜನ ಆಗ್ರಹಿಸಿದ್ದಾರೆ.

    ರಮ್ಯಾರವರು ನಗರದ 11 ನೇ ವಾರ್ಡಿನ ಮತದಾರರಾಗಿದ್ದು, ಮತದಾರರ ಪಟ್ಟಿಯಲ್ಲಿ 621 ನೇ ಕ್ರಮಸಂಖ್ಯೆಯಲ್ಲಿ ಹೊಂದಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಅವರು 420 ನೇ ಕ್ರಮಾಂಕದಲ್ಲಿದ್ದರು. ಅಲ್ಲದೇ ರಮ್ಯಾ ವಿಧಾನಸಭೆ ಚುನಾವಣೆ ಮತದಾನಕ್ಕೆ ಬರುತ್ತಾರೆಂದು ಬೆಂಬಲಿಗರು ಹೆಸರು ಹಾಗೂ ಕ್ರಮಸಂಖ್ಯೆಯನ್ನು ಬರೆದುಕೊಂಡು ಕಾಯುತ್ತಿದ್ದರು. ಆದರೆ ಅವರು ಮತದಾನ ಮಾಡದೇ ಬೇಜವಾಬ್ದಾರಿ ಪ್ರದರ್ಶಿಸಿದ್ದರು. ಮತದಾನ ಮಾಡದ ರಮ್ಯಾ ವಿರುದ್ಧ ರಾಷ್ಟ್ರಮಟ್ಟದಲ್ಲಿ ಟೀಕೆಗಳು ಕೇಳಿಬಂದಿದ್ದವು. ಅಲ್ಲದೇ ಒಬ್ಬ ಮಾಜಿ ಸಂಸದೆಯಾಗಿ ಮತವನ್ನು ಚಲಾಯಿಸದೇ, ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಜನರು ಆಕ್ರೋಶ ಹೊರಹಾಕಿದ್ದರು.

    ಮಂಡ್ಯದಿಂದಲೇ ರಮ್ಯಾ ಕಾಂಗ್ರೆಸ್‍ನಿಂದ ಮತ್ತೊಮ್ಮೆ 2019ರ ಲೋಕಸಭಾ ಚುನಾವಣೆಗೆ ಸ್ಪಧಿಸುತ್ತಾರೆಂದು ಅವರ ತಾಯಿ ರಂಜಿತಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ರಾಜ್ಯ ಮಟ್ಟದಲ್ಲಿ ಜೆಡಿಎಸ್ ನೊಂದಿಗೆ ಸಮ್ಮಿಶ್ರ ಸರ್ಕಾರವನ್ನು ಹೊಂದಿರಬಹುದು, ಆದರೆ ಯಾವುದೇ ಕಾರಣಕ್ಕೂ ಜಿಡಿಎಸ್ ಗೆ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: ಜೆಡಿಎಸ್‍ಗೆ ಬಿಡಲ್ಲ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ರಮ್ಯಾ ಕಣಕ್ಕೆ: ತಾಯಿ ರಂಜಿತಾ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv