Tag: former Prime Minister HD Deve Gowda

  • ಗೌಡರ ಕುಟುಂಬ ಗೂಂಡಾಗಿರಿ ಕುಟುಂಬವಲ್ಲ – ಕಲ್ಲು ತೂರಾಟ ಮಾಡಿದವ್ರನ್ನ ಕ್ಷಮಿಸಲ್ಲ: ಸಿಎಂ ಎಚ್‍ಡಿಕೆ

    ಗೌಡರ ಕುಟುಂಬ ಗೂಂಡಾಗಿರಿ ಕುಟುಂಬವಲ್ಲ – ಕಲ್ಲು ತೂರಾಟ ಮಾಡಿದವ್ರನ್ನ ಕ್ಷಮಿಸಲ್ಲ: ಸಿಎಂ ಎಚ್‍ಡಿಕೆ

    ಬೆಂಗಳೂರು: ಹಾಸನ ನಡೆದಿರುವ ಗಲಾಟೆಯ ಬಗ್ಗೆ ಮಾಹಿತಿಯನ್ನು ಪಡೆದಿದ್ದು, ಬಿಜೆಪಿ ಶಾಸಕರ ಅಭಿಮಾನಿಗಳೇ ಪ್ರಚೋದನೆ ನೀಡಿದ್ದಾರೆ. ಆದರೆ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ ಸಿಎಂ ಎಚ್‍ಡಿಕೆ, ಹಾಸನದಲ್ಲಿ ನಡೆದ ಘಟನೆಯಲ್ಲಿ ಕೆಲ ದೇವೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಭಿಮಾನಿಗಳು ಅಥವಾ ಪಕ್ಷದ ಕಾರ್ಯಕರ್ತರೋ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಶಾಸಕರ ಬೆಂಬಲಿಗರೇ ಉದ್ರೇಕಕಾರಿಯಾಗಿ ಮಾತನಾಡಿ ಪ್ರಚೋದನೆ ನೀಡಿದ್ದಾರೆ. ಆದರೆ ಜೆಡಿಎಸ್ ಕಾರ್ಯಕರ್ತರೇ ಆದರೂ ಕೂಡ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸಲ್ಲ ಎಂದು ಸಿಎಂ ತಿಳಿಸಿದ್ದಾರೆ. ಇದನ್ನು ಓದಿ: ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

    ಈ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಗಮನಿಸಿ ತಕ್ಷಣ ಮೈಸೂರು ವಲಯ ಐಜಿ ಮತ್ತು ಹಾಸನ ಎಸ್‍ಪಿ ಅವರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ಕೂಡ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಆದರೆ ದೇವೇಗೌಡರ ಬಗ್ಗೆ ಆವಹೇಳನಕಾರಿಯಾಗಿ ಮಾತನಾಡಿದ್ದೇ ಕಾರಣ ಎಂಬುವುದು ನನಗೆ ಮಾಹಿತಿ ಲಭಿಸಿದೆ. ದೇವೇಗೌಡರ ಕುಟುಂಬ ಯಾವತ್ತೂ ಗೂಂಡಾ ಸಂಸ್ಕೃತಿಯನ್ನ ಬೆಂಬಲಿಸಲ್ಲ. ದೇವೇಗೌಡರ ಬಗ್ಗೆ ಇಂತಹ ಹೇಳಿಕೆಗಳು ಇದೇ ಮೊದಲೇನಲ್ಲ. ಈ ಹಿಂದೆ ಇಂತಹ ಅನೇಕ ದಾಳಿಗಳು ದೇವೇಗೌಡರ ಮೇಲೆ ಆಗಿವೆ. ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದಿಲ್ಲ. ನೀವು ಗಲಾಟೆ ಮಾಡಿಕೊಂಡರೆ ನನಗೆ ಅಪಮಾನ ಮಾಡಿದಂತೆ ಎಂದು ಕಾರ್ಯಕರ್ತರಿಗೆ ಬಿಸಿ ಮುಟ್ಟಿಸಿದ್ದೇನೆ ಎಂದು ಹೇಳಿದ್ದಾಗಿ ವಿವರಿಸಿದರು.

    ನಮ್ಮ ಕುಟುಂಬದ ಮೇಲೆ ದೇವರ ಅನುಕಂಪವಿದ್ದು, ಯಾವುದೋ ಒಂದು ಶಕ್ತಿ ನಮ್ಮನ್ನ ಕಾಪಾಡುತ್ತಿದೆ. ಇಲ್ಲದಿದ್ದರೆ ಸರ್ಕಾರ ನಡೆಸಲು ಆಗುತ್ತಿತ್ತಾ? ಇಷ್ಟೆಲ್ಲಾ ಗಂಡಾಂತರಗಳು ಬಂದರೂ ಕೂಡ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಭರವಸೆ ನೀಡಿದರು.

    https://www.youtube.com/watch?v=V2Yszl9rLEg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲೋಕಸಭಾ ಚುನಾವಣೆಗೆ ವರಿಷ್ಠರ ಗ್ರೀನ್ ಸಿಗ್ನಲ್ – ಸಂತಸ ವ್ಯಕ್ತಪಡಿಸಿದ ಪ್ರಜ್ವಲ್ ರೇವಣ್ಣ

    ಲೋಕಸಭಾ ಚುನಾವಣೆಗೆ ವರಿಷ್ಠರ ಗ್ರೀನ್ ಸಿಗ್ನಲ್ – ಸಂತಸ ವ್ಯಕ್ತಪಡಿಸಿದ ಪ್ರಜ್ವಲ್ ರೇವಣ್ಣ

    ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಪಕ್ಷದ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ, ಹಾಸನ ಕ್ಷೇತ್ರದ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧನಿದ್ದು, ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಸಂತೋಷವಾಗಿದೆ. ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

    ಕಳೆದ ನಾಲ್ಕು ತಿಂಗಳುಗಳಿಂದ ಜಿಲ್ಲೆಯ ಬೇಲೂರು, ಹೊಳೇನರಸಿಪುರ ಸೇರಿದಂತೆ ಕ್ಷೇತ್ರ ಹಲವೆಡೆ ಪ್ರವಾಸ ಮಾಡುತ್ತಿದ್ದೇನೆ. ನಮ್ಮ ಸರ್ಕಾರದ ಹಲವು ಇಲಾಖೆಗಳಿಂದ ಆಗುತ್ತಿರುವ ಅಭಿವೃದ್ದಿ ಕೆಲಸಗಳಿಂದಾಗಿ ಒಳ್ಳೆಯ ವಿಶ್ವಾಸ ಇದೆ. ಚುನಾವಣೆ ಸ್ಪರ್ಧೆ ಕುರಿತು ಹಿರಿಯರಾದ, ಮಾಜಿ ಪ್ರಧಾನಿ ದೇವೇಗೌಡರು ಎಲ್ಲರೊಂದಿಗೆ ಚರ್ಚೆ ಮಾಡಿಯೇ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷದ ಹಿರಿಯರ ಮನೆಗಳಿಗೆ ಭೇಟಿ ನೀಡಿ ಎಲ್ಲರ ಆಶೀರ್ವಾದ ಪಡೆಯುತ್ತೇನೆ ಎಂದರು.

    ಜಿಲ್ಲೆಯ ಜನತೆ ನನ್ನನು ಒಬ್ಬ ಮಗನಾಗಿ ಸ್ವೀಕರಿಸಿದ್ದಾರೆ. ನಾನೂ ಕೂಡ ಕೆಲಸ ಮಾಡಬೇಕು ಎನ್ನುವ ದೂರ ದೃಷ್ಟಿ ಇಟ್ಟುಕೊಂಡಿದ್ದೇನೆ. ಜಿಲ್ಲೆಯಲ್ಲಿ ಜೆಡಿಎಸ್ ಮಾಡಿರುವ ಅಭಿವೃದ್ಧಿ ಕೆಲಸಗಳು ನನ್ನ ಕೈ ಹಿಡಿಯಲಿವೆ. ಪಕ್ಷದ ಒಮ್ಮತದ ಅಭ್ಯರ್ಥಿಯಾದರೆ, ನಾನು ಸ್ಪರ್ಧಿಸಲು ಹಿಂಜರಿಯುವುದಿಲ್ಲ. ಜಿಲ್ಲೆಯ ಲೋಕಸಭಾ ಅಭ್ಯರ್ಥಿ ವಿಚಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಒಪ್ಪಂದ ಕುರಿತು ರಾಹುಲ್ ಗಾಂಧಿ ಮತ್ತು ದೇವೇಗೌಡರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ನಾಯಕರ ಆಕ್ಷೇಪದ ಬಗ್ಗೆ ದೊಡ್ಡವರು ನೋಡಿಕೊಳ್ಳುತ್ತಾರೆ. ಅವರ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು ಎಚ್‍ಡಿಡಿ ಭೇಟಿಗಾಗಿ ರಾಜ್ಯಕ್ಕೆ ಸಿಎಂ ಚಂದ್ರಬಾಬು ನಾಯ್ಡು ಆಗಮನ

    ಇಂದು ಎಚ್‍ಡಿಡಿ ಭೇಟಿಗಾಗಿ ರಾಜ್ಯಕ್ಕೆ ಸಿಎಂ ಚಂದ್ರಬಾಬು ನಾಯ್ಡು ಆಗಮನ

    ಬೆಂಗಳೂರು: ಕಾಂಗ್ರೆಸ್ ಜೊತೆ ಮೈತ್ರಿಗೆ ಮುಂದಾಗಿರುವ ಆಂಧ್ರಪ್ರದೇಶದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

    ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತುಕತೆ ನಡೆಸಲು ಚಂದ್ರಬಾಬು ನಾಯ್ಡು ಆಗಮಿಸುತ್ತಿದ್ದು, ಇಬ್ಬರ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಜೆಡಿಎಎಸ್ ವರಿಷ್ಠರಿಂದ ಸಲಹೆ ಪಡೆಯಲು ಚಂದ್ರಬಾಬು ನಾಯ್ಡು ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

    ಇದೇ ವೇಳೆ ಜನಾರ್ದನ ರೆಡ್ದಿಗಾಗಿ ಸಿಸಿಬಿ ಪೊಲಿಸರು ಶೋಧ ನಡೆಸುತ್ತಿರುವುದರಿಂದ ಕರ್ನಾಟಕ ಸಿಎಂ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕ ಪಂಚಕ್ಷೇತ್ರಗಳ ಉಪಚುನಾವಣೆಯ ಬಳಿಕ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ ವೇಳೆಯೂ ಚಂದ್ರಬಾಬು ನಾಯ್ಡು ಮಾಜಿ ಪ್ರಧಾನಿ ದೇವೇಗೌಡ ಶುಭಾಶಾಯ ತಿಳಿಸಿದ್ದರು.  ಇದನ್ನು ಓದಿ: ದೇಶ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಚ್‍ಡಿಡಿ ಬಹಿರಂಗ ಸಭೆಗೆ ಕಾರ್ಯಕರ್ತರ ಬರ- ಹಣ ಹಂಚಿಕೆಯ ದೃಶ್ಯ ಸೆರೆ

    ಎಚ್‍ಡಿಡಿ ಬಹಿರಂಗ ಸಭೆಗೆ ಕಾರ್ಯಕರ್ತರ ಬರ- ಹಣ ಹಂಚಿಕೆಯ ದೃಶ್ಯ ಸೆರೆ

    ರಾಮನಗರ: ಮಾಜಿ ಪ್ರಧಾನಿ ದೇವೇಗೌಡರ ಬಹಿರಂಗ ಸಭೆಗೆ ಕಾರ್ಯಕರ್ತರ ಬರವೇ ಎನ್ನುವ ಪ್ರಶ್ನೆ ಇಂದು ರಾಮನಗರದ ಬಹಿರಂಗ ಸಮಾವೇಶದ ವೇಳೆ ಮೂಡಿತ್ತು.

    ಏಕೆಂದರೆ ಇಂದು ರಾಮನಗರ ಕ್ಷೇತ್ರದಲ್ಲಿ ದೇವೇಗೌಡರ ಪ್ರಚಾರ ಸಭೆಗೆ ಕಾರ್ಯಕರ್ತರನ್ನ ಕರೆತರಲು ಜೆಡಿಎಸ್, ಕಾಂಗ್ರೆಸ್ ಪಕ್ಷದ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆ.

    ಕ್ಷೇತ್ರದ ಕೊಳ್ಳಿಗಾನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಬಹಿರಂಗ ಪ್ರಚಾರ ಸಭೆಯನ್ನು ಇಂದು ಆಯೋಜಿಸಲಾಗಿತ್ತು. ಸಭೆಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಆಗಮಿಸಿ ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿ ಪಕ್ಷದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದರು.

    ಈ ಬಹಿರಂಗ ಸಭೆಗೆ ಜನರನ್ನು ಕರೆತರಲು ಸ್ಥಳೀಯ ಮೈತ್ರಿಗೆ ಮಾಡಿಕೊಂಡಿರುವ ಜೆಡಿಎಸ್, ಕಾಂಗ್ರೆಸ್ ಮುಖಂಡರು ಸಭೆಗೆ ಬರುವ ಪ್ರತಿಯೊಬ್ಬರಿಗೂ ತಲಾ 150 ರೂ. ಹಂಚಿಕೆ ಮಾಡಿದ್ದಾರೆ. ಪಕ್ಷದ ಶಾಲು ಹಾಕಿಕೊಂಡಿದ್ದ ಮುಖಂಡರು ಜನರಿಗೆ ಹಣ ಹಂಚಿಕೆ ಮಾಡುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಪ್ರಚಾರದ ವೇಳೆ ಹಾರೋಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಡಿಡಿ, ಬಿಜೆಪಿ ಆಡಳಿತದ ಬಗ್ಗೆ ನಾನು ಮಾತಾಡಿದ್ದೇನೆ. ಮೋದಿ, ಯಡಿಯೂರಪ್ಪ ಸೇರಿದಂತೆ ಯಾರ ಬಗ್ಗೆಯೂ ವೈಯಕ್ತಿಕ ವಿಚಾರ ಮಾತಾಡಲ್ಲ. ನನಗೆ 50 ವರ್ಷಗಳ ರಾಜಕೀಯ ಅನುಭವ ಇದ್ದು, ಯಾವ ರೀತಿ ಮಾತಾಡಬೇಕು ಎಂಬ ಅರಿವು ನನಗಿದೆ. ಬೇರೆಯವರು ಮಾತನಾಡಿದ್ದ ಬಗ್ಗೆಯೂ ನಾನು ಪ್ರತಿಕ್ರಿಯಿಸಲ್ಲ. ಬೇರೆಯವರ ಲೆವಲ್ ಗೆ ಇಳಿಸುವಂತೆ ನನ್ನನ್ನು ಮಾತನಾಡಿಸ ಬೇಡಿ. ದೇಶದ ಪ್ರಧಾನಿಯಾಗಿದ್ದವನು ನಾನು, ಆ ಘನತೆ ಉಳಿಸಬೇಕು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸರ್ಕಾರ ಹೋದ ಮೇಲೆ ಸಂತೋಷ ಪಡಿ – ಮಾಧ್ಯಮಗಳ ಮೇಲೆ ಎಚ್‍ಡಿಡಿ ಕಿಡಿ

    ಸರ್ಕಾರ ಹೋದ ಮೇಲೆ ಸಂತೋಷ ಪಡಿ – ಮಾಧ್ಯಮಗಳ ಮೇಲೆ ಎಚ್‍ಡಿಡಿ ಕಿಡಿ

    ಶಿವಮೊಗ್ಗ: ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿರುವುದು ಮಾಧ್ಯಮಗಳಿಗೆ ಇಷ್ಟವಿಲ್ಲ. ಕುಮಾರಸ್ವಾಮಿ ಅವರ ಜನ ಪರ ಕಾರ್ಯಗಳ ಬಗ್ಗೆ ಜನರಿಗೆ ತೋರಿಸುವ ಆಸಕ್ತಿ ಇಲ್ಲ. ಸರ್ಕಾರ ಹೋದ ಮೇಲೆ ಸಂತೋಷ ಪಡಿ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

    ನಗರಕ್ಕೆ ಆಗಮಿಸಿದ್ದ ವೇಳೆ ಪರಮೇಶ್ವರ್ ಭೇಟಿ, ರಮೇಶ್ ಜಾರಕಿಹೊಳಿ ಅವರ ಬಂಡಾಯದ ಕುರಿತು ಮಾಧ್ಯಮ ಪ್ರತಿನಿಧಿಗಳಿಂದ ಪ್ರಶ್ನೆ ಕೇಳಿಬರುತ್ತಿದಂತೆ ಸಿಡಿಮಿಡಿಗೊಂಡ ಅವರು, ಇಂತಹ ಪ್ರಶ್ನೆಗಳನ್ನು ಅವರಿಗೆ ಕೇಳಿ. ಇದು ನಿಮಗೇ ಅತ್ಯಂತ ಪ್ರಮುಖ ವಿಷಯವೇ ಎಂದು ಖಾರವಾಗಿ ಮರುಪ್ರಶ್ನೆ ಹಾಕಿದರು.

    ಇಂತಹ ವಿಷಯಗಳನ್ನೇ ಬೆಳಗ್ಗೆಯಿಂದ ಸಂಜೆವರೆಗೂ ಕಳೆದ ಮೂರು ತಿಂಗಳಿನಿಂದ ತೋರಿಸುತ್ತಿದ್ದೀರಿ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ಕುರಿತು ನೀವು ಯಾಕೆ ವರದಿ ಮಾಡುವುದಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

    ಸಕುಮಾರಸ್ವಾಮಿ ಅವರ ಒಳ್ಳೆಯ ಕೆಲಸಗಳು ನಿಮ್ಮಗೆ ಕಾಣಿಸುವುದಿಲ್ಲ. ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿರುವುದು ಒಂದು ಸಮುದಾಯಕ್ಕೆ ಇಷ್ಟವಿಲ್ಲ. ಅದ್ದರಿಂದ ಸರ್ಕಾರ ಉರುಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಬೀಳಿಸಲು ಮುಹೂರ್ತ ಫಿಕ್ಸ್ ಮಾಡಿದವರಿಗೆ ನಿರಾಸೆ ಉಂಟಾಗಲಿದೆ ಎಂದರು.

    ಬಳಿಕ ಶಿವಮೊಗ್ಗದ ಮಲೆನಾಡು ಸೊಸೈಟಿ ರಜತ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಎಚ್‍ಡಿಡಿ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಪರವಾಗಿ ನೇರ ಬ್ಯಾಟಿಂಗ್ ನಡೆಸಿದರು. ಕುಮಾರಸ್ವಾಮಿ ಬಗ್ಗೆ ವಾತ್ಸಲ್ಯದಿಂದ ಮಾತನಾಡುತ್ತಿಲ್ಲ. ಕೇವಲ 37 ಜನ ಶಾಸಕರನ್ನು ಇಟ್ಟುಕೊಂಡು ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವಂತ ಸ್ಥೈರ್ಯ ತೋರಿದ್ದಾರೆ. ರಾಜ್ಯದ ಒಂದು ಸಮುದಾಯ ಸರ್ಕಾರ ಹೋಗಲಿ ಎಂದು ನಿರಂತರವಾಗಿ ಪ್ರಯತ್ನಿಸುತ್ತಿದೆ. ಸರ್ಕಾರ ಬೀಳಿಸಲು ಮಹೂರ್ತ ಫಿಕ್ಸ್ ಮಾಡಿದವರು ನಿರಾಶರಾಗಲಿದ್ದಾರೆ. ಮೈತ್ರಿ ಸರ್ಕಾರಲ್ಲಿ ಸಣ್ಣ ಪುಟ್ಟ ದೋಷಗಳಿವೆ ಆದರೆ, ಸರ್ಕಾರ ಬೀಳುವುದಿಲ್ಲ ಎಂದು ಹೇಳಿದರು.

    ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ, ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಸಿಎಂ ಎಚ್‍ಡಿಕೆ 37 ಜನ ಶಾಸಕರನ್ನು ಇಟ್ಟುಕೊಂಡು ನಾಡಿನ ಅಳ್ವಿಕೆ ನಡೆಸುತ್ತಿರುವುದು ಅಚ್ಚರಿಯ ವಿಷಯ. ದೈವಶಕ್ತಿ ಇದರ ಹಿಂದೆ ಇರುವುದರಿಂದ ಮಾತ್ರ ಸಾಧ್ಯವಾಗಿದೆ. ಇದಕ್ಕೆ ವಿರುದ್ಧವಾಗಿ ನಡೆಯುವುದು ದೈವದ ವಿರುದ್ಧದ ಕೆಲಸ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Qy8pYpFkfo0

  • 85ರ ಇಳಿವಯಸ್ಸಲ್ಲೂ ಬರಿಗಾಲಲ್ಲೇ ವಿಂಧ್ಯಗಿರಿ ಏರಿ ಬಾಹುಬಲಿ ದರ್ಶನ ಪಡೆದ ಎಚ್‍ಡಿಡಿ

    85ರ ಇಳಿವಯಸ್ಸಲ್ಲೂ ಬರಿಗಾಲಲ್ಲೇ ವಿಂಧ್ಯಗಿರಿ ಏರಿ ಬಾಹುಬಲಿ ದರ್ಶನ ಪಡೆದ ಎಚ್‍ಡಿಡಿ

    ಹಾಸನ: ಕಳೆದ ಒಂದು ವಾರದಿಂದಲೂ ನಡೆಯುತ್ತಿರುವ ಮಹಾಮಸ್ತಕಾಭಿಷೇಕಕ್ಕೆ ಇನ್ನೆರಡು ದಿನಗಳು ಬಾಕಿ ಇರುವಂತೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಇಂದು ಯಶಸ್ವಿಯಾಗಿ ವಿಂಧ್ಯಗಿರಿ ಏರಿ ಬಾಹುಬಲಿ ದರ್ಶನ ಪಡೆದಿದ್ದಾರೆ.

    85ನೇ ವಯಸ್ಸಿನಲ್ಲೂ ದೇವೇಗೌಡರ ಮನೋಶಕ್ತಿಗೆ ನೆರೆದಿದ್ದ ಜನರು ಅಚ್ಚರಿ ವ್ಯಕ್ತಪಡಿಸಿದ್ದು, ಅವರು ಬರಿಗಾಲಲ್ಲೇ ವಿಂಧ್ಯಗಿರಿ ಹತ್ತುವ ದೃಶ್ಯಗಳನ್ನು ಸೆರೆಹಿಡಿಯಲು ನೆರೆದಿದ್ದ ಜನರು ಮುಗಿಬಿದ್ದರು. ಈ ವೇಳೆ ಎಚ್‍ಡಿಡಿ ಅವರ ಪತ್ನಿ ಚೆನ್ನಮ್ಮ ಸಹ ದೇವೇಗೌಡರಿಗೆ ಕೆಲಕಾಲ ಸಾತ್ ನೀಡಿದರು. ಆನಂತರ ಅವರನ್ನು ಡೋಲಿ ಸಹಾಯದಿಂದ ಕರೆದುಕೊಂಡು ಹೋಗಲಾಯಿತು.

    ಸುಡು ಬಿಸಿಲನ್ನು ಲೆಕ್ಕಿಸದೆ ಬೆಟ್ಟ ಹತ್ತಿದ್ದ ಎಚ್‍ಡಿಡಿ, ಬಾಹುಬಲಿ ಗೆ ನೆರವೇರುತ್ತಿದ್ದ ಪಂಚಾಮೃತ ಅಭಿಷೇಕವನ್ನ ಕಣ್ತುಂಬಿಕೊಂಡರು. ಮಹಾಮಸ್ತಕಾಭಿಷೇಕ ಆರಂಭ ದಿನವಾದ ಫೆಬ್ರವರಿ 17 ರಂದು ಸಿಎಂ ಸಿದ್ದರಾಮಯ್ಯ ಅವರು ಡೋಲಿ ಬಳಸದೆ ಮೆಟ್ಟಿಲು ಹತ್ತಿ ದರ್ಶನ ಪಡೆದಿದ್ದರು. ನಾಳೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಶ್ರವಣಬೆಳಗೊಳಕ್ಕೆ ಆಗಮಿಸುತ್ತಿದ್ದು, ಬಾಹುಬಲಿ ದರ್ಶನ ಪಡೆಯಲಿದ್ದಾರೆ. ಫೆ.26 ರಂದು 88 ನೇ ಮಹಾ ಮಸ್ತಕಾಭಿಷೇಕದ ಸಮಾರೋಪ ಸಮಾರಂಭ ನಡೆಯಲಿದೆ.

    ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬಾಹುಬಲಿಯ ಮೂರ್ತಿ ತ್ಯಾಗದ ಸಂಕೇತವಾಗಿದ್ದು ಇಡೀ ಜಗತ್ತಿಗೆ ಮಾದರಿಯಾಗಿದೆ. ಸರ್ವಸ್ವವನ್ನೂ ತ್ಯಾಗ ಮಾಡಿದ ಸಂತರು ಇಲ್ಲಿಗೆ ಬಂದಿದ್ದಾರೆ. ಅವರ ಜೀವನವೇ ಅತ್ಯಂತ ಕಷ್ಟಕರ, ಅದನ್ನ ನೋಡುವುದು ನಮಗೆ ಪುಣ್ಯ. ಅಧಿಕಾರಕ್ಕಾಗಿ ಹಪಹಪಿಸುವವರು ಬಾಹುಬಲಿ ಜೀವನ ಅರಿಯಬೇಕು. ನಾನು ಐವತ್ತು ವರ್ಷಗಳಿಂದ ಮಹಾಮಸ್ತಕಾಭಿಷೇಕ ನೋಡಿದ್ದು, ಐದು ಬಾರಿ ಮಹಾಮಜ್ಜನ ನೋಡಿದ್ದೇನೆ. ಕ್ಷೇತ್ರದ ಚಾರೂಕೀರ್ತಿ ಭಟ್ಟಾರಕ ಸ್ವಾಮಿಜಿ ಕ್ಷೇತ್ರಕ್ಕೆ ಸಾಕಷ್ಟು ಪುಣ್ಯದ ಕೆಲಸ ಮಾಡಿದ್ದಾರೆ. ನಾವು ರಾಜ್ಯ ಹಾಗೂ ಕೇಂದ್ರ ಸರ್ಕಾರದಲ್ಲಿದ್ದಾಗ ಸಾಕಷ್ಟು ಸಹಾಯ ಮಾಡಿದ್ದೇವೆ. ಈ ಕ್ಷೇತ್ರದ ಅಭಿವೃದ್ಧಿಗೆ ಇಲ್ಲಿನ ಸಂತರ ಕೊಡುಗೆ ಅಪಾರ. ಲಕ್ಷಾಂತರ ಜನ ಭಕ್ತರಿದ್ದಾರೆ, ಇದು ಅದ್ಭುತವಾದ ಕಾರ್ಯ. ಮಹಾಮಸ್ತಕಾಭಿಷೇಕದಲ್ಲಿ ಭಾಗಿಯಾದ ಬಗ್ಗೆ ಹರ್ಷವಾಗಿದೆ ಎಂದು ಹೇಳಿದರು.

    https://www.youtube.com/watch?v=QTotz43oSDo

  • ಕುಟುಂಬ ರಾಜಕಾರಣ ಎಂದು ಟೀಕಿಸೋ ಮಂದಿಗೆ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಪ್ರಜ್ವಲ್ ರೇವಣ್ಣ

    ಕುಟುಂಬ ರಾಜಕಾರಣ ಎಂದು ಟೀಕಿಸೋ ಮಂದಿಗೆ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಪ್ರಜ್ವಲ್ ರೇವಣ್ಣ

    ಮಂಡ್ಯ: ರೈತರ ಸಂಕಷ್ಟ ಓಡಿಸಬೇಕು ಅಂದರೆ ಕುಮಾರಣ್ಣ ಅಧಿಕಾರಕ್ಕೆ ಬರಬೇಕು. ಕುಮಾರಣ್ಣ ಮತ್ತು ದೇವೇಗೌಡರು ಚುನಾವಣೆಗೆ ನಿಲ್ಲು ಅಂದರೆ ನಿಲ್ಲುತ್ತೇನೆ, ಇಲ್ಲದಿದ್ರೆ ನಿಲ್ಲೋದಿಲ್ಲ ಎಂದು ಪ್ರಜ್ವಲ್ ರೇವಣ್ಣ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

    ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಾತನಾಡಿದ ಅವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಮಂದಿಗೆ ತಿರುಗೇಟು ನೀಡಿದರು. ಇವತ್ತು ನನ್ನ ಬಗ್ಗೆ ಮಾಧ್ಯಮಗಳು ಒತ್ತು ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮಗ ಯತೀಂದ್ರ ಅವರನ್ನು ಚುನಾವಣೆಗೆ ನಿಲ್ಲಿಸುತ್ತಿದ್ದೇನೆ ಅಂತಿದ್ದಾರೆ. ಯಾರಾದರೂ ಈ ಕುರಿತು ಪ್ರಶ್ನಿಸಿದ್ದೀರ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ರಾಘವೇಂದ್ರ ಅವರನ್ನು ಚುನಾವಣೆಯಲ್ಲಿ ನಿಲ್ಲಿಸಿದ್ದರು. ಅದು ಕುಟುಂಬ ರಾಜಕಾರಣ ಅಲ್ಲವೇ? ಯಾರೂ ಅದರ ಬಗ್ಗೆ ಮಾತನಾಡದೇ ನನ್ನ ಬಗ್ಗೆ ಮಾತ್ರ ಮಾತನಾಡುವುದು ಎಷ್ಟು ಸರಿ ಎಂದು ಹೇಳಿ ಬೇಸರ ವ್ಯಕ್ತಪಡಿಸಿದರು.

    ಕಾರ್ಯಕರ್ತರಲ್ಲಿ ಎಲ್ಲ ಕಡೆ ಮನವಿ ಮಾಡುತ್ತಿದ್ದೇವೆ. ನಮ್ಮ ನಡುವೆ ಬೇಧ ಭಾವ ಏನೂ ಇಲ್ಲ. ನನಗೆ ಹುಷಾರಿರಲಿಲ್ಲ. ಆದರೂ ನಾನು ಹೋರಾಟ ಮಾಡಲು ಸಿದ್ಧವಾಗಿದ್ದೇನೆ. ಯುವಕರು ಎಲ್ಲರೂ ಕುಮಾರಣ್ಣನಿಗೆ ಶಕ್ತಿ ಕೊಡಬೇಕು. ಕುಮಾರಣ್ಣ ನನ್ನ ಸ್ವಂತ ಚಿಕ್ಕಪ್ಪ. ಯಾರಿಗೆ ನೋವು ಮಾಡಿ ಗೆದ್ದರೂ ಚೆನ್ನಾಗಿರಲ್ಲ. ಕುಮಾರಣ್ಣ ಮತ್ತು ದೇವೇಗೌಡರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಈ ಕುರಿತು ಸುಮ್ಮನೆ ಕೆಟ್ಟದಾಗಿ ಹಬ್ಬಿಸೋದು ಬೇಡ ಎಂದು ಮನವಿ ಮಾಡಿದರು.

    ನಾನು ಸಹ ಚುನಾವಣೆಯಲ್ಲಿ ಟಿಕೆಟ್ ಅಕಾಂಕ್ಷಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು ಯಾರು ಬೇಕಾದರು ಚುನಾವಣಾ ಆಕಾಂಕ್ಷಿಯಾಗಬಹುದು. ಆದರೆ ಟಿಕೆಟ್ ನೀಡುವ ಅಂತಿಮ ನಿರ್ಧಾರ ಎಚ್.ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.