Tag: Former Siddaramaiah

  • ಸಿದ್ದರಾಮಯ್ಯ ಇಂಗು ತಿಂದ ಮಂಗನಂತೆ ಆಡ್ತಿದ್ದಾರೆ – ಸಿ.ಟಿ ರವಿ ವ್ಯಂಗ್ಯ

    ಸಿದ್ದರಾಮಯ್ಯ ಇಂಗು ತಿಂದ ಮಂಗನಂತೆ ಆಡ್ತಿದ್ದಾರೆ – ಸಿ.ಟಿ ರವಿ ವ್ಯಂಗ್ಯ

    ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗನಿಂದಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಗು ತಿಂದ ಮಂಗನಂತೆ ಆಡುತ್ತಿದ್ದಾರೆ. ಅವರಿಗೆ ಅಧಿಕಾರ ಸಿಗದೇ ಹೀಗೆ ಆಡುತ್ತಾ ಇದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ವ್ಯಂಗ್ಯವಾಡಿದ್ದಾರೆ.

    ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆಪ್ತರು ಪದೇ ಪದೇ ಇಂಗು ತಿಂದ ಮಂಗನಂತೆ ಆಡುತ್ತಿರುವುದನ್ನು ಸಮಾಧಾನ ಮಾಡಲು ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ ಅಂದ್ರು.

    ಬಜೆಟ್ ದಿನ ಬಿಜೆಪಿ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರು ತೀರ್ಮಾನ ಕೈಗೊಳ್ತಾರೆ. ಅದಕ್ಕೆ ತಕ್ಕ ಹಾಗೇ ನಾವು ನಡೆದುಕೊಳ್ತೀವಿ. ಸರ್ಕಾರದ ಈ ಸುತ್ತೋಲೆಯನ್ನ ನೋಡಿದ್ದಿವಿ. ಲೋಕಸಭಾ ಮಾದರಿ ಎಂದಿರುವ ಹಿನ್ನೆಲೆಯಲ್ಲಿ ಮಾತುಕತೆ ಮಾಡಿ ತೀರ್ಮಾನ ಕೈಗೊಳ್ತಿವಿ ಎಂದು ತಿಳಿಸಿದ್ರು.

    ದಾಖಲೆ ಇದ್ರೆ ಬಿಡುಗಡೆ ಮಾಡಿ:
    ಸುಮ್ನೆ ಆರೋಪ ಮಾಡುವುದು ಬೇಡ. ದಾಖಲೆ ಇದ್ರೆ ಬಿಡುಗಡೆ ಮಾಡಿ. ಸಿದ್ದರಾಮಯ್ಯನವರು 30-40 ಕೋಟಿ ರೂ. ತಂದಿಟ್ಟಿದ್ದಾರೆ ಎಂದು ಆಪಾದನೆ ಮಾಡುತ್ತಿದ್ದಾರೆ. ಅವರು ಓರ್ವ ಕ್ರಿಮಿನಲ್ ವಕೀಲರು. ಈ ರೀತಿಯಾದ್ರೆ ಏನ್ ಮಾಡಬೇಕೆಂದು ಕ್ರಿಮಿನಲ್ ಲಾಯರ್‍ಗೆ ಗೊತ್ತಿಲ್ಲ ಅಂದ್ರೆ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಅವರ ನಿಲುವೇ ಸ್ಪಷ್ಟಪಡಿಸುತ್ತದೆ ಅಂದ್ರು.

    ಒಂದೇ ವೇಳೆ 30-40 ಕೋಟಿ ಕೊಟ್ಟಿದ್ದಿದ್ದರೆ ಸಾಕ್ಷಿ ಸಮೇತ ಅದನ್ನು ಪ್ರೂವ್ ಮಾಡುತ್ತಿದ್ದರು. ಆದ್ರೆ ಅವರು ಕೇವಲ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಪಕ್ಷದ ಒಳಜಗಳವನ್ನು ಹದ್ದುಬಸ್ತಿನಲ್ಲಿಡಲಾಗಿದೆ. ಅವರ ಪಕ್ಷದಲ್ಲಿನ ಭಿನ್ನಮತೀಯರನ್ನು ನಿಯಂತ್ರಣ ಮಾಡಲು ಸಾಧ್ಯವಾಗದೇ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಗರಂ ಆದ್ರು.

    ನವದೆಹಲಿಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಅವರು ಬಿಜೆಪಿ ಮೇಲೆ ಆರೋಪಗಳ ಸುರಿಮಳೆಗೈದಿದ್ದು, ಸೂಕ್ತ ಸಮಯದಲ್ಲಿ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದ್ರೆ ಅದ್ಯಾವಾಗ ಸೂಕ್ತ ಸಮಯ ಬರುತ್ತದೆ ಎಂದು ನನಗೆ ಗೊತ್ತಿಲ್ಲ ಎಂದು ಸಿಟಿ ರವಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇವಲ 25 ನಿಮಿಷಗಳಲ್ಲಿ ಕಲಾಪ ಮುಕ್ತಾಯ

    ಕೇವಲ 25 ನಿಮಿಷಗಳಲ್ಲಿ ಕಲಾಪ ಮುಕ್ತಾಯ

    – ಎರಡು ದಿನಗಳ ಕಾಲ ಪ್ರತಿಭಟನೆ ಮೊಳಗಿಸಿದ ವಿಪಕ್ಷ
    – ಗದ್ದಲದಲ್ಲಿಯೇ ಎರಡು ವಿಧೇಯಕಗಳಿಗೆ ಅಂಗೀಕಾರ ಪಡೆದ ಸರ್ಕಾರ
    – ಅಧಿವೇಶನಕ್ಕೆ ಮಾಜಿ ಸಿಎಂ ಚಕ್ಕರ್

    ಬೆಳಗಾವಿ: ಚಳಿಗಾಲ ಅಧಿವೇಶನದ ಕೊನೆಯ ದಿನದ ಕಲಾಪ ಗದ್ದಲ ಗೊಂದಲಗಳಿಗಷ್ಟೇ ಸೀಮಿತವಾಗಿ 11 ಗಂಟೆಗೆ ಆರಂಭವಾದ ಸದನ ಕೇವಲ 25 ನಿಮಿಷದಲ್ಲಿ ಮುಕ್ತಾಯವಾಯಿತು.

    ಸದನ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ನಿನ್ನೆಯಂತೆ ಸದನದ ಬಾವಿಗಿಳಿದು ಧರಣಿ ಮುಂದುವರಿಸಿದರು. ಈ ವೇಳೆ ಆಡಳಿತ ಹಾಗೂ ವಿಪಕ್ಷದ ಶಾಸಕರು ಪರ ವಿರೋಧ ಘೋಷಣೆಗೆ ಇಳಿದರು. ಇದರಿಂದಾಗಿ ಕಲಾಪದಲ್ಲಿ ಗೊಂದಲ ಆರಂಭವಾಗಿತ್ತು. ಈ ಪರಿಸ್ಥಿತಿಯಲ್ಲಿ ಸರ್ಕಾರವು ಎರಡು ವಿಧೇಯಕಗಳಿಗೆ ಅಂಗೀಕಾರ ಪಡೆಯಿತು.

    ಕರ್ನಾಟಕ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರ ನೇಮಕಾತಿ ತಿದ್ದುಪಡಿ ಹಾಗೂ ರೈ ತಾಂತ್ರಿಕ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು. ಗದ್ದಲ ಜಾಸ್ತಿಯಾಗುತ್ತಿದ್ದಂತೆ ಸ್ಪೀಕರ್ ಅನಿರ್ಧಿಷ್ಟ ಅವಧಿಗೆ ಸದನವನ್ನು ಮುಂದೂಡಿದರು. ಬಳಿಕ ಪ್ರತಿಭಟನೆಯ ಬಿಸಿ ಕಲಾಪಕ್ಕೆ ತಟ್ಟಿದ್ದರಿಂದ ಅಧಿವೇಶನದ ಕೊನೆಯ ದಿನ ಯಾವುದೇ ಚರ್ಚೆ ನಡೆಯದೇ ರಾಷ್ಟ್ರಗೀತೆಯೊಂದಿಗೆ ಅಧಿವೇಶನಕ್ಕೆ ತೆರೆ ಬಿದ್ದಿತು.

    ರೈತರ ಕೃಷಿ ಸಾಲಮನ್ನಾ ಹಾಗೂ ಸಿಎಂ ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕರು ಎರಡು ದಿನಗಳ ಕಾಲ ಪ್ರತಿಭಟನೆ ನಡೆಸಿದರು. ಆದರೆ ಕುಮಾರಸ್ವಾಮಿ ಅವರು ಇದಕ್ಕೆ ತಲೆ ಕೆಡಿಸಿಕೊಳ್ಳದೆ ಕಲಾಪದಿಂದ ದೂರ ಉಳಿದಿದ್ದರು. ಬಿಜೆಪಿ ಶಾಸಕರ ಪ್ರತಿಭಟನೆ ಹಾಗೂ ಆಡಳಿತ ಪಕ್ಷದ ಕೆಲ ನಾಯಕರ ಗೈರು ಎಲ್ಲವೂ ಸದನವನ್ನು ನುಂಗಿ ಹಾಕಿತು.

    ಕಾಡಿದ ಮಾಜಿ ಸಿಎಂ ಗೈರು:
    ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದೇಶಿ ಪ್ರವಾಸ, ಕ್ಷೇತ್ರ ಪ್ರವಾಸದಲ್ಲಿ ಫುಲ್ ಬ್ಯೂಸಿ ಆಗಿದ್ದರು. ಹೀಗಾಗಿ ಶಾಸಕಾಂಗ ಸಭೆಯ ದಿನದಂದು ಮಾತ್ರ ಕಲಾಪದಲ್ಲಿ ಕಾಣಿಸಿಕೊಂಡರು. ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಇದರಿಂದಾಗಿ ಕೊನೆಯ ದಿನದ ಕಲಾಪದಿಂದ ಅವರು ದೂರ ಉಳಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv