Tag: Former Speaker

  • ಸುಳ್ಳು ವಯಸ್ಸಿನ ದಾಖಲೆ ನೀಡಿ ಸ್ಪರ್ಧೆ – ಬೋಪಯ್ಯ ವಿರುದ್ಧ ದೂರು

    ಸುಳ್ಳು ವಯಸ್ಸಿನ ದಾಖಲೆ ನೀಡಿ ಸ್ಪರ್ಧೆ – ಬೋಪಯ್ಯ ವಿರುದ್ಧ ದೂರು

    ಮಡಿಕೇರಿ: ಚುನಾವಣೆಗೆ ಸ್ಪರ್ಧಿಸಲು ವಯಸ್ಸಿನ ಸುಳ್ಳು ದಾಖಲೆ ನೀಡಿದ್ದರು ಎಂದು ಆರೋಪಿಸಿ ಶಾಸಕ ಹಾಗೂ ಮಾಜಿ ಸ್ಪೀಕರ್ (Former Speaker) ಕೆ.ಜಿ ಬೋಪಯ್ಯ (K.G Bopaiah) ವಿರುದ್ಧ ವ್ಯಕ್ತಿಯೊಬ್ಬರು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೋಪಯ್ಯ ತಮ್ಮ ವಯಸ್ಸನ್ನು ತಿದ್ದಿ, ತಪ್ಪು ಮಾಹಿತಿ ನೀಡಿ ನಾಮಪತ್ರ ಸಲ್ಲಿಸಿದ್ದರು ಎಂದು ಪಿ.ಬಿ ತಿಮ್ಮಯ್ಯ ಎಂಬವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಆತಂಕ ಸೃಷ್ಟಿಸಿರುವ H3N2ಗೆ ರಾಜ್ಯದಲ್ಲಿ ಮೊದಲಿ ಬಲಿ

    ದೂರಿನಲ್ಲಿ ವಿರಾಜಪೇಟೆ (Virajpet) ಕ್ಷೇತ್ರದ ವಿಧಾನಸಭಾ ಸದಸ್ಯರಾದ ಕೆ.ಜಿ ಬೋಪಯ್ಯ 1979ರ ಅಕ್ಟೋಬರ್‌ನಲ್ಲಿ ಬಾರ್ ಕೌನ್ಸಿಲ್ (Bar Council) ವಕೀಲರಾಗಿದ್ದರು. ಅವರು ಆಗ ತಮ್ಮ ಹುಟ್ಟಿದ ದಿನಾಂಕವನ್ನು 1951 ಅಕ್ಟೋಬರ್ 17 ಎಂದು ದಾಖಲಿಸಿದ್ದರು. ಆದರೆ ಬೋಪಯ್ಯನವರು 2004 ನೇ ಸಾಲಿನ ಚುನಾವಣೆ ಸಮಯದಲ್ಲಿ ಅವರ ವಯಸ್ಸು 53 ವರ್ಷ ಆಗಿತ್ತು. ಆದರೆ ಬೋಪಯ್ಯನವರು ತಮ್ಮ ವಯಸ್ಸನ್ನು 49 ವರ್ಷ ಎಂದು ಸುಳ್ಳು ಮಾಹಿತಿ ನೀಡಿದ್ದರು.

    2013ರ ಚುನಾವಣೆಯಲ್ಲಿ ಅವರ ವಯಸ್ಸು 61 ವರ್ಷ ಆಗಿತ್ತು. ಆದರೆ ಅವರು ಚುನಾವಣಾ ಆಯೋಗಕ್ಕೆ (Election Commission) 58 ವರ್ಷ ಎಂದು ಸುಳ್ಳು ಮಾಹಿತಿ ನೀಡಿದ್ದರು. ಮತ್ತು 2018ರ ಚುನಾವಣೆಯಲ್ಲಿ ಅವರ ವಯಸ್ಸು 67 ಆಗಿತ್ತು. ಆದರೆ ತಮ್ಮ ವಯಸ್ಸನ್ನು 65 ಎಂದು ಸುಳ್ಳು ಮಾಹಿತಿ ನೀಡಿದ್ದಾರೆಂದು ದೂರುದಾರ ತಿಮ್ಮಯ್ಯ ಆರೋಪಿಸಿದ್ದಾರೆ.

    ಇದು ಚುನಾವಣೆ ನೀತಿ ಸಂಹಿತೆ ಅನುಗುಣವಾಗಿ ಗಂಭೀರ ಅಪರಾಧವಾಗಿದೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ದೂರು ದಾಖಲಿಸಿದ್ದಾರೆ.

    ಬೋಪಯ್ಯ ಸ್ಪಷ್ಟನೆ: ಪ್ರತೀ ಚುನಾವಣೆ ಬಂದಾಗ ನನ್ನ ವಿರುದ್ಧ ಇಂತಹ ಆರೋಪ ಮಾಡುವ ಗ್ಯಾಂಗ್ ಮಡಿಕೇರಿಯಲ್ಲಿದೆ. ವಯಸ್ಸಿನ ಬಗ್ಗೆ ಸುಳ್ಳು ದಾಖಲೆ ನೀಡಿದ ಆರೋಪದ ದೂರು ದಾಖಲಾಗಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ನನ್ನ ತಂದೆ ಹೆಬ್ಬೆಟ್ಟು. ನನ್ನ ತಂದೆ ಕೊಟ್ಟಿರುವ ದಿನಾಂಕವನ್ನೇ ನಾನು ಫಾಲೋ ಮಾಡುತ್ತಾ ಬಂದಿದ್ದೇನೆ ಎಂದು ಬೋಪಯ್ಯ ಪ್ರತಿಕ್ರಿಯಿಸಿದ್ದಾರೆ.

    ನನ್ನ ವಿರುದ್ಧದ ಹಿಂದೆ ಸೋ ಕಾಲ್ಡ್ ಪರಿಸರವಾದಿಗಳು ಇದ್ದಾರೆ. ಅವರ ಈ ಸಣ್ಣತನಕ್ಕೆ ನಾನು ಸಣ್ಣತನ ಮಾಡಲ್ಲ. ನನ್ನ ಎಲ್ಲಾ ದಾಖಲೆಗಳಲ್ಲೂ ಒಂದೇ ಡೇಟ್ ಇದೆ. ಈ ಬಾರಿ ಚುನಾವಣೆ ಎದುರಿಸಲು ತನಗೆ ಪಕ್ಷದ ತೀರ್ಮಾನವಾಗಿದೆ. ಆರೋಪಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಎರಡು ಕ್ಷೇತ್ರದ ಬಿಜೆಪಿ ಸ್ಥಾನಗಳನ್ನು ಕುಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು- ಹಲವರಿಗೆ ಗಾಯ

  • ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ

    ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ

    ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅವರ ಪತ್ನಿ ನಿಧನರಾಗಿದ್ದಾರೆ.

    ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಮೃತಪಟ್ಟಿದ್ದಾರೆ.

    ವಿಜಯಮ್ಮ (Vijayamma) ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

    ಮೃತರು ಪತಿ, ಓರ್ವ ಮಗಳು, ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಇದನ್ನೂ ಓದಿ: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ: ರಮೇಶ್ ಕುಮಾರ್

    ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ: ರಮೇಶ್ ಕುಮಾರ್

    ಬೆಳಗಾವಿ: ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

    ರಮೇಶ್ ಕುಮಾರ್ ಅವರಿಗೆ ಮಾಧ್ಯಮಗಳ ಮೇಲೆ ಇನ್ನೂ ಕೋಪ ತಣ್ಣಗಾದಂತಿಲ್ಲ. ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ರಮೇಶ್ ಕುಮಾರ್ ನಕಾರ ಮಾಡಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಕೈ ಮುಗಿದು ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಹೇಳುತ್ತಾ ಹೊರಟಿದ್ದಾರೆ.

    ಅತ್ಯಾಚಾರದ ಕುರಿತು ರಮೇಶ್ ಕುಮಾರ್ ಅವರು ಬೆಳಗಾವಿ ವಿಧಾನಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿ ಎಡವಟ್ಟು ಮಾಡಿಕೊಂಡಿದ್ದರು. ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ಕಿಡಿಕಾರಿದ್ದಾರೆ. ರಮೇಶ್ ಕುಮಾರ್ ಅವರು ಹೆಣ್ಣಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎನ್ನುವ ಟೀಕೆಗಳು ವ್ಯಕ್ತವಾಗಿದ್ದವು. ಇದನ್ನೂ ಓದಿ:  ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಇತ್ತ ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕರು, ಸಚಿವರು ಒತ್ತಾಯಿಸಿದ್ದರು. ನಂತರ ರಮೇಶ್ ಕುಮಾರ್ ಟ್ವೀಟ್ ಮಾಡಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಅಲ್ಲದೆ ಸದನಸದಲ್ಲಿಯೂ ಎಲ್ಲರ ಮುಂದೆಯೂ ಕ್ಷಮೆ ಕೇಳಿದ್ದರು. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್

  • ಖಾಸಗಿ ಶಾಲೆಗಳ ದುಬಾರಿ ಶುಲ್ಕ- ರಮೇಶ್ ಕುಮಾರ್ ಉಪಸ್ಥಿತಿಯಲ್ಲಿ ಚಿಂತನ ಮಂಥನ

    ಖಾಸಗಿ ಶಾಲೆಗಳ ದುಬಾರಿ ಶುಲ್ಕ- ರಮೇಶ್ ಕುಮಾರ್ ಉಪಸ್ಥಿತಿಯಲ್ಲಿ ಚಿಂತನ ಮಂಥನ

    ಬೆಂಗಳೂರು: ಖಾಸಗಿ ಶಾಲೆಗಳ ದುಬಾರಿ ಶುಲ್ಕ ಹಾಗೂ ಸಂಕಷ್ಟದಲ್ಲಿರುವ ಪೋಷಕರಿಗೆ ನೆರವಾಗುವುದರಲ್ಲಿ ಸರ್ಕಾರದ ಪಾತ್ರದ ಕುರಿತು ಆಮ್ ಆದ್ಮಿ ಪಾರ್ಟಿಯು ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಚಿಂತನ-ಮಂಥನ ಕಾರ್ಯಕ್ರಮವನ್ನು ಆಯೋಜಿಸಿದೆ.

    ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರದ ಎಎಪಿ ಉಪಾಧ್ಯಕ್ಷ ಸುರೇಶ್ ರಾಥೋಡ್, ಸೆ. 26ರ ಭಾನುವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೆಳಗ್ಗೆ 10:30ರಿಂದ ಮಧ್ಯಾಹ್ನ 2 ಗಂಟೆಯ ತನಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಮಾತನಾಡಲಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

    ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ತತ್ತರಿಸಿರುವ ರಾಜ್ಯದ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ. ಸರ್ಕಾರವು ಈ ಬಗ್ಗೆ ಜಾಣಕುರುಡು ಪ್ರದರ್ಶಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಅವೈಜ್ಞಾನಿಕ ನಿರ್ಧಾರಗಳಿಂದ ಸಮಸ್ಯೆಗಳು ಮತ್ತಷ್ಟು ಬಿಗಡಾಯಿಸಿದೆ. ಅವರು ಎಲ್ಲಾ ಖಾಸಗಿ ಶಾಲೆಗಳಿಗೆ 30% ಶುಲ್ಕ ಇಳಿಸಬೇಕೆಂದು ಆದೇಶಿಸಿದ್ದರು. ಆದರೆ ಹೇಗೆ ಇಳಿಸಬೇಕು, ಖಾಸಗಿ ಶಾಲೆಗಳನ್ನು ಆ ನಷ್ಟವನ್ನು ಹೇಗೆ ಭರಿಸಿಕೊಳ್ಳಬೇಕೆಂದು ಸ್ಪಷ್ಟತೆ ನೀಡಿರಲಿಲ್ಲ. ಇದರಿಂದಾಗಿ ಸಚಿವರ ಆದೇಶಕ್ಕೆ ನ್ಯಾಯಾಲಯದಲ್ಲಿ ಹಿನ್ನಡೆಯಾಯಿತು. ಪರಿಣಾಮವಾಗಿ ಬಡ ಹಾಗೂ ಮಧ್ಯಮ ವರ್ಗದ ಪೋಷಕರು ದಿಕ್ಕು ತೋಚದಂತಾಗಿದ್ದಾರೆ ಎಂದು ಸುರೇಶ್ ರಾಥೋಡ್ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸುಪ್ರೀಂಕೋರ್ಟ್ ಇಮೇಲ್‍ಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆಗೆ ಬ್ರೇಕ್

    ಆಮ್ ಆದ್ಮಿ ಪಾರ್ಟಿಯ ಮಹಿಳಾ ಮುಖಂಡೆ ಉಷಾ ಮೋಹನ್ ಮಾತನಾಡಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೌಚಾಲಯ, ಶುದ್ಧ ಕುಡಿಯುವ ನೀರು, ಕಂಪ್ಯೂಟರ್, ಸುಸಜ್ಜಿತ ಕೊಠಡಿ ಮುಂತಾದ ಮೂಲಸೌಕರ್ಯಗಳಿಲ್ಲ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಸೇರಿಸಬೇಕಾಗಿದೆ. ಕೋವಿಡ್‍ನಿಂದ ತತ್ತರಿಸಿರುವ ವೇಳೆ ಅಲ್ಲಿನ ದುಬಾರಿ ಶುಲ್ಕವನ್ನು ಬಡ ಪೋಷಕರು ಹೇಗೆ ತಾನೇ ಕಟ್ಟಬಹುದು? ದೆಹಲಿಯ ಕೇಜ್ರಿವಾಲ್ ಸರ್ಕಾರವು ಸರ್ಕಾರಿ ಶಾಲೆಗಳನ್ನು ಎಲ್ಲ ರೀತಿಯಲ್ಲೂ ಅಭಿವೃದ್ಧಿಪಡಿಸಿದೆ. ಇಲ್ಲಿನ ಸರ್ಕಾರಿ ಶಾಲೆಗಳೂ ಅಭಿವೃದ್ಧಿಯಾಗಿದ್ದರೆ ಖಾಸಗಿ ಶಾಲೆಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ನಾವು ಇಷ್ಟೊಂದು ಆಗ್ರಹಿಸುವ ಸಂದರ್ಭವೇ ಬರುತ್ತಿರಲಿಲ್ಲ. ಆದರೆ ನಮ್ಮ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ಹಾಗೂ ಶಾಲಾ ಅಭಿವೃದ್ಧಿಯು ಆದ್ಯತೆಯ ವಿಷಯವಾಗಿಲ್ಲ. ಇದನ್ನೂ ಓದಿ: ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

  • ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

    ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

    ಮೈಸೂರು: ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರು ಮೈಸೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

    ಹಲವು ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲಿತ್ತಿದ್ದ ಮಾಜಿ ಸ್ಪೀಕರ್ ಕೃಷ್ಣ ಅವರು ಇಂದು ನಿಧನರಾಗಿದ್ದಾರೆ. ಲಿವರ್ ಕ್ಯಾನ್ಸರ್ ಚಿಕಿತ್ಸೆಗೆ ಅವರು ಚೆನ್ನೈಗೂ ಸಹ ತೆರಳಿದ್ದರು. ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಕೃಷ್ಣ ಅವರನ್ನು ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆತರಲಾಗಿತ್ತು. ಇದೀಗ ಅವರು ನಿಧನರಾಗಿದ್ದು,  ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ನೆರವೇರಲಿದೆ.

    ಕೃಷ್ಣ ಅವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದವರು. ಮೂರು ಬಾರಿ ಕೆ.ಆರ್.ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದು, 1996 ರಲ್ಲಿ ಮಂಡ್ಯದ ಸಂಸದರು ಸಹ ಆಗಿದ್ದರು. 1988ರಲ್ಲಿ ಎಸ್.ಆರ್.ಬೊಮ್ಮಾಯಿ ಅವರ ಸಂಪಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಹಾಗೂ 2006 ರಿಂದ 2008ರ ವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

  • ಸಿಡಿ ಲೇಡಿ ಪರ ನಾವಿದ್ದೇವೆ, ಧೈರ್ಯದಿಂದ ಬಂದು ಹಾಜರಾಗ್ಲಿ: ರಮೇಶ್ ಕುಮಾರ್

    ಸಿಡಿ ಲೇಡಿ ಪರ ನಾವಿದ್ದೇವೆ, ಧೈರ್ಯದಿಂದ ಬಂದು ಹಾಜರಾಗ್ಲಿ: ರಮೇಶ್ ಕುಮಾರ್

    ಕೋಲಾರ: ಸಿಡಿ ಸಂತ್ರಸ್ತೆ ಅಜ್ಞಾತ ಸ್ಥಳದಿಂದ ರಕ್ಷಣೆ ಕೋರಿದ್ದು, ಸಂತ್ರಸ್ತೆ ನೆರವಿಗೆ ನಾವಿದ್ದೇವೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.

    ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀನಿವಾಸಪುರ ತಾಲೂಕಿನ ಅಧಿಕಾರಿಗಳ ಜೊತೆ ಕರೆದಿದ್ದ ಸಭೆಗೂ ಮುನ್ನ ರಮೇಶ್ ಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಅಜ್ಞಾತ ಸ್ಥಳದಿಂದ ರಕ್ಷಣೆ ಕೋರಿ ಪಾಪ ಆಕೆ ಮನವಿ ಮಾಡಿದ್ದಾಳೆ. ಸಾರ್ವಜನಿಕ ಜೀವನದಲ್ಲಿರುವ ನಾವು, ಆಕೆ ಹಾಗೂ ಆಕೆಯ ಕುಟುಂಬಕ್ಕೆ ರಕ್ಷಣೆ ನೀಡುವುದು ಕರ್ತವ್ಯ ಎಂದರು.

    ಈಗಾಗಲೇ ಅಸೆಂಬ್ಲಿಯಲ್ಲಿ ಸಂತ್ರಸ್ತೆಯ ರಕ್ಷಣೆ ಕುರಿತು ಮಾತನಾಡಿದ್ದು, ಖಂಡಿತಾ ಆಕೆಗೆ ರಕ್ಷಣೆ ಒದಗಿಸುತ್ತೇವೆ. ಆಕೆ ಹೆದರಬೇಕಾಗಿಲ್ಲ, ನಮ್ಮದೇನು ಅನಾಗರಿಕ ಸಮಾಜವೇನಲ್ಲ. ಒಂದು ಹೆಣ್ಣು ಮಗಳು ಸಂಕಷ್ಟದಲ್ಲಿದ್ದು ಸಹಾಯ ಕೇಳಿದ್ದಾಳೆ ಅಂದರೆ ಆಕೆಯ ನೆರವಿಗೆ ನಾವು ನಿಲ್ಲುತ್ತೇವೆ. ಸದಾ ಸಾರ್ವಜನಿಕ ಜೀವನದಲ್ಲಿರುವ ನಾವು ಯಾರೇ ಸಹಾಯ ಕೇಳಿದರೂ ಅವರ ಸಹಾಯಕ್ಕೆ ನಿಲ್ಲುತ್ತೇವೆ. ಎಸ್‍ಐಟಿ ಮುಂದೆ ಹೇಳಿಕೆ ನೀಡಲು ಒತ್ತಡ ಇದ್ದರೆ, ನ್ಯಾಯಾಧೀಶರ ಎದುರು ಹೇಳಿಕೆ ನೀಡಲಿ. ಆಗ ಅದು ಅಧಿಕೃತವಾಗುತ್ತದೆ ಎಂದು ಸಲಹೆ ನೀಡಿದರು.

    ಸದ್ಯ ಆಕೆ ಅಜ್ಞಾತ ಸ್ಥಳದಲ್ಲಿದ್ದಾಳೆ. ಧೈರ್ಯವಾಗಿ ಬಂದು ಹೇಳಿಕೆ ನೀಡಲಿ ಎಂದ ಅವರು, ನನಗೂ ಒಂದು ಹೆಣ್ಣು ಮಗಳಿದ್ದಾಳೆ. ಆಕೆಗೆ ಸಂಕಷ್ಟ ಎದುರಾದಾಗ ನೆರವಿಗೆ ನಿಲ್ಲಬೇಕಲ್ಲವೇ. ಸಿಡಿ ಯುವತಿಗೆ ವಿಶೇಷ ರಕ್ಷಣೆ ನೀಡುವುದಕ್ಕೆ ನಾನು ಗೃಹಮಂತ್ರಿ ಅಲ್ಲ. ನಮ್ಮ ಕೆಲಸವನ್ನ ಶ್ರದ್ಧೆ ಹಾಗೂ ನಿಷ್ಠೆಯಿಂದ ಮಾಡುತ್ತೇವೆ. ಗೌರವಯುತವಾಗಿ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಇದೇ ವೇಳೆ ಕಾಂಗ್ರೆಸ್ಸಿನಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತಿದೆಯಲ್ಲಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ 71 ವರ್ಷ ವಯಸ್ಸಾಗಿದೆ. ಡಿಕೆಶಿ ನನ್ನ ತಮ್ಮ ಇದ್ದ ಹಾಗೆ, ಸಿದ್ದರಾಮಯ್ಯ ನನ್ನ ನಾಯಕರು ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ರು.

  • 20 ಲಕ್ಷ ಕೋಟಿಗೆ ಎಷ್ಟು ಸೊನ್ನೆ ಗೊತ್ತಿಲ್ಲ, ಲಕ್ಷ ಕೊಟ್ರೆ ರಾತ್ರಿಯೆಲ್ಲಾ ಎಣಿಸ್ತೀನಿ: ರಮೇಶ್ ಕುಮಾರ್

    20 ಲಕ್ಷ ಕೋಟಿಗೆ ಎಷ್ಟು ಸೊನ್ನೆ ಗೊತ್ತಿಲ್ಲ, ಲಕ್ಷ ಕೊಟ್ರೆ ರಾತ್ರಿಯೆಲ್ಲಾ ಎಣಿಸ್ತೀನಿ: ರಮೇಶ್ ಕುಮಾರ್

    – ಯಾರಾದರೂ ಆಹಾರ ಕಿಟ್ ಕೊಟ್ರೆ ತೆಗೆದುಕೊಳ್ತೇನೆ

    ಕೋಲಾರ: ಒಂದು ಲಕ್ಷ ಕೋಟಿಗೆ ಎಷ್ಟು ಸೊನ್ನೆಗಳು ಬರುತ್ತೆ ಅನ್ನೋದೇ ಗೊತ್ತಿಲ್ಲ. 1 ಲಕ್ಷ ಕೈಗೆ ಬಂದ್ರೆ ರಾತ್ರಿಯೆಲ್ಲಾ ಎಣಿಸುತ್ತೇನೆ ಎಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ವ್ಯಂಗ್ಯವಾಡಿದ್ರು.

    ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಕೆ.ಸಿ ವ್ಯಾಲಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2-3 ಸಾವಿರ ಎಣಿಸುತ್ತೇನೆ. ಆದರೆ 20 ಲಕ್ಷ ಕೋಟಿಗೆ ಎಷ್ಟು ಸೊನ್ನೆಗಳು ಬರುತ್ತೆ ಅನ್ನೋದು ಗೊತ್ತಿಲ್ಲ ಎಂದರು.

    ಲಕ್ಷ ಕೋಟಿ ಬಗ್ಗೆ ವ್ಯಾಖ್ಯಾನ ಮಾಡಿ ಎಂದರೆ ನನಗೆ ಚಂದ್ರಯಾನ ಹೇಗಿರುತ್ತೆ ಅಂತ ಕೇಳಿದಾಗೆ ಆಗುತ್ತದೆ ಎಂದು ವ್ಯಂಗ್ಯವಾಡಿದರು. ಸರ್ಕಾರ ಕೊರೊನಾ ಪ್ಯಾಕೇಜ್ ಘೋಷಣೆ ಮಾಡಿದೆ, ಅದರ ಬಗ್ಗೆ ಮಾತನಾಡುವುದು ಸರಿಯಿಲ್ಲ. ಜವಾಬ್ದಾರಿ ಸ್ಥಾನದಲ್ಲಿ ಇದ್ದೇನೆ, ನನಗಿಂತ ಆರ್ಥಿಕ ತಜ್ಞರು ಇದ್ದರೆ ಅವರು ಮಾತನಾಡುತ್ತಾರೆ. ನಾನು ಅಷ್ಟು ಮೇಧಾವಿ ಅಲ್ಲ ಎಂದರು.

    ನಮ್ಮ ಹಿರಿಯ ನಾಯಕರು ರಾಹುಲ್ ಗಾಂಧಿ ಅವರು ತಜ್ಞರ ಜೊತೆ ಚರ್ಚಿಸಿ ಹೇಳಿಕೆ ನೀಡಿರುತ್ತಾರೆ ಎಂದ ಅವರು, ಲಾಕ್ ಡೌನ್ ಸಂದರ್ಭದಲ್ಲಿ ಜನ್ರಿಗೆ ಸಹಾಯ ಮಾಡುವಷ್ಟು ಶಕ್ತಿಯಿಲ್ಲ, ಯಾರಾದರೂ ದಿನಸಿ ಕಿಟ್ ಕೊಟ್ಟರೆ ನಾನು ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ರು.

  • ಜನರನ್ನ ಕಟ್ಟಿಕೊಂಡು ಕೆರೆ ಪೂಜೆ- ಲಾಕ್‍ಡೌನ್ ಉಲ್ಲಂಘಿಸಿದ ರಮೇಶ್ ಕುಮಾರ್

    ಜನರನ್ನ ಕಟ್ಟಿಕೊಂಡು ಕೆರೆ ಪೂಜೆ- ಲಾಕ್‍ಡೌನ್ ಉಲ್ಲಂಘಿಸಿದ ರಮೇಶ್ ಕುಮಾರ್

    ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ನೂರಾರು ಜನರನ್ನ ಕಟ್ಟಿಕೊಂಡು ಕೆರೆಯಲ್ಲಿ ಪೂಜೆ ಸಲ್ಲಿಸಿ ಲಾಕ್‍ಡೌನ್ ಉಲ್ಲಂಘಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ರಮೇಶ್ ಕುಮಾರ್ ಅವರು ತಮ್ಮದೆ ಮುಖಂಡರು, ಸ್ಥಳೀಯರನ್ನ ಸೇರಿಸಿಕೊಂಡು ಪೂಜೆಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಪೂಜೆ ವೇಳೆ ನೂರಾರು ಜನರ ಸೇರಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಮಾಜಿ ಸ್ಪೀಕರ್ ವಿರುದ್ಧ ಅನೇಕರು ಆಕ್ರೋಶ ಹೊರ ವ್ಯಕ್ತಪಡಿಸಿದ್ದಾರೆ. ಬಡವರಿಗೊಂದು ಶ್ರೀಮಂತರಿಗೊಂದು ನ್ಯಾಯಾನ ಎಂದು ನೆಟ್ಟಿಗರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಬಡವರ ಮದುವೆಯಲ್ಲಿ 10 ಜನರಿಗೆ ಮಾತ್ರ ಅವಕಾಶ ನೀಡುವ ಸರ್ಕಾರ ಹಾಗೂ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಈ ರೀತಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಕೆರೆ ಪೂಜೆಗೆ ನೂರಾರು ಜನರನ್ನ ಸೇರಿಸಿಕೊಂಡ ರಮೇಶ್ ಕುಮಾರ್ ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

  • ಹೆಗಲ ಮೇಲೆ ಪೈಪ್ ಹೊತ್ತು ನಡೆದ ರಮೇಶ್ ಕುಮಾರ್

    ಹೆಗಲ ಮೇಲೆ ಪೈಪ್ ಹೊತ್ತು ನಡೆದ ರಮೇಶ್ ಕುಮಾರ್

    ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಾಮಾನ್ಯರಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಅನೇಕ ರಾಜಕಾರಣಿಗಳು ಮನೆಯಲ್ಲೇ ಕಳೆಯುತ್ತಿದ್ದರೆ, ಕೆಲವರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್‍ಡೌನ್‍ನಲ್ಲಿ ಕಾಲ ಕಳೆಯುತ್ತಿದ್ದಾರೆ.

    ಕಾಂಗ್ರೆಸ್‍ನ ಟಾಸ್ಕ್ ಪೋರ್ಸ್ ಕಮಿಟಿ ಅಧ್ಯಕ್ಷ ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿರುವ ತೋಟದಲ್ಲಿ ಸಸಿಗಳಿಗೆ ನೀರು ಹಾಯಿಸಲು ಸಿದ್ಧತೆ ನಡೆಸಿದ್ದಾರೆ. ಸ್ವತಃ ಹೆಗಲ ಮೇಲೆ ಪೈಪ್‍ಗಳನ್ನು ಹೊತ್ತು ಸಾಗಿದರು. ಅಷ್ಟೇ ಅಲ್ಲದೆ ಆಪ್ತರೊಂದಿಗೆ ಕುಳಿತು ಅನೇಕ ಕೆಲಸಗಳನ್ನು ನಿರ್ವಹಿಸಿದ್ದಾರೆ.

    ರಮೇಶ್ ಕುಮಾರ್ ಅವರು ತಮ್ಮ ಮಾವಿನ ತೋಟಕ್ಕೆ ಡ್ರಿಪ್ ಪೈಪ್ ಲೈನ್ ಅಳವಡಿಸುತ್ತಿರುವ ವಿಡಿಯೋ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೂಲಿ ಕೆಲಸದವರು ಸಿಗದ ಹಿನ್ನೆಲೆಯಲ್ಲಿ ತಮ್ಮ ಆಪ್ತರೊಂದಿಗೆ ತೋಟದ ಕೆಲಸದಲ್ಲಿ ಮಾಜಿ ಸ್ಪೀಕರ್ ಕಾರ್ ಚಾಲಕ ಬಂಗಾರು, ಆಪ್ತ ಸಹಾಯಕ ಶ್ರೀನಿವಾಸ ಜೊತೆಗೂಡಿ ಕೆಲಸ ಮಾಡಿದ್ದಾರೆ.

  • ಮುಸ್ಲಿಮರು ಭಾರತ ಮಾತೆಯ ಮಕ್ಕಳು: ರಮೇಶ್ ಕುಮಾರ್

    ಮುಸ್ಲಿಮರು ಭಾರತ ಮಾತೆಯ ಮಕ್ಕಳು: ರಮೇಶ್ ಕುಮಾರ್

    ಉಡುಪಿ: ನಗರದಲ್ಲಿ ಪೌರತ್ವ ಕಿಚ್ಚು ಸದ್ದುಮಾಡಿದೆ. ಸಹಬಾಳ್ವೆ ಸಂಘಟನೆ ನಗರದ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಸಿಎಎ ವಿರುದ್ಧ ಸಮಾವೇಶ ನಡೆಯಿತು. ಪ್ರಗತಿಪರ, ದಲಿತ ಮುಸಲ್ಮಾನ ಮತ್ತು ಕಾಂಗ್ರೆಸ್ ಜಂಟಿಯಾಗಿ ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಸಮಾವೇಶ ಆಯೋಜಿಸಿತು.

    ಕಾರ್ಯಕ್ರಮದ ದಿಕ್ಸೂಚಿ ಭಾಷಣ ಮಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕಾಯ್ದೆ ತಂದ ಮೋದಿ ಸರ್ಕಾರಕ್ಕೆ ವ್ಯಂಗ್ಯವಾಗಿ ಧನ್ಯವಾದ ಹೇಳಿದರು. ಸ್ವಾತಂತ್ರ್ಯ ಹೋರಾಟ ನೋಡಿಲ್ಲ, ಸಾಯೋ ಕಾಲಕ್ಕೆ ಇಷ್ಟು ಧ್ವಜಗಳನ್ನು ನೋಡುವ ಅವಕಾಶವಾಗಿದೆ. ಕೇಸರಿ ಬಟ್ಟೆ ಧ್ವಜ ನೋಡಿ ಸಾಕಾಗಿತ್ತು ಎಂದು ಕುಟುಕಿದರು.

    ಮುಸ್ಲಿಮರನ್ನು ಅನುಮಾನದಿಂದ ನೋಡಬೇಡಿ, ಭಾರತ ಮಾತೆ ಕಣ್ಣೀರು ಹಾಕುತ್ತಾಳೆ. ಮುಸ್ಲಿಮರು ಭಾರತ ಮಾತೆಯ ಮಕ್ಕಳು ಎಂದು ಭಾವನಾತ್ಮಕವಾಗಿ ಮಾತನಾಡಿದರು.

    ಬಿಜೆಪಿಯವರಿಗೆ ಭಾರತದ ಇತಿಹಾಸದ ಪರಿಚಯ ಇಲ್ಲ. ಭಾರತದ ಇತಿಹಾಸ ಬಿಜೆಪಿಗರಿಗೆ ಬೇಕಾಗಿಯೂ ಇಲ್ಲ, ನಾಥುರಾಮ ಗೋಡ್ಸೆ ಸಂಸ್ಕೃತಿಯನ್ನು ನಮ್ಮ ಮಕ್ಕಳಿಗೆ ಕಲಿಸಲು ನಾವು ಬಿಡಲ್ಲ ಎಂದು ಗುಡುಗಿದರು.

    ಅಮೆರಿಕದಲ್ಲಿ ಜನಿಸಿದ್ರೆ ಪೌರತ್ವ ಸಿಗುತ್ತದೆ. ನಮ್ಮ ದೇಶದ ಜನಕ್ಕೆ ಪೌರತ್ವ ಗಗನ ಕುಸುಮವಾಗುತ್ತಿದೆ. 1955ರಲ್ಲಿ ಜಾತಿ ಧರ್ಮದ ವಿಚಾರದಲ್ಲಿ ಪೌರತ್ವ ಕಾಯ್ದೆ ಮಾಡಿಲ್ಲ, ನಿರಾಶ್ರಿತರು ನುಸುಳುಕೋರರು ಎಂಬ ಎರಡು ವಿಧ ಇದೆ. ಪೌರತ್ವ ಕಾಯ್ದೆಯನ್ನು ಧರ್ಮಾಧಾರಿತ ಮಾಡಿದ್ದಾರೆ. ಮೋದಿ ಸರ್ಕಾರ ಸಂವಿಧಾನ ವಿರೋಧಿ ಎಂದು ಟೀಕಿಸಿದರು.

    ಸ್ವಾತಂತ್ರ್ಯ ನಂತರ ಸಂವಿಧಾನ ಮತ್ತು ಜನರ ನಡುವೆ ತಿಕ್ಕಾಟ ಶುರುವಾಗಿದೆ. ಇದೇ ತರ ಮುಂದುವರಿದರೆ ದೇಶದ ಜಾತಕವನ್ನು ಜನರೇ ಬದಲು ಮಾಡುತ್ತಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.

    ಪ್ರಥಮ ಬಾರಿಗೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮೆರವಣಿಗೆ ಪೊಲೀಸ್ ಪರ್ಮಿಷನ್ ಇರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.