Tag: Former Union Minister

  • ಚಿದಂಬರಂಗೆ ಕೊಂಚ ರಿಲೀಫ್ ಕೊಟ್ಟ ಸುಪ್ರೀಂ

    ಚಿದಂಬರಂಗೆ ಕೊಂಚ ರಿಲೀಫ್ ಕೊಟ್ಟ ಸುಪ್ರೀಂ

    ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡ, ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಕೊಂಚ ರಿಲೀಫ್ ಸಿಕ್ಕಿದೆ.

    ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಕುರಿತ ಕುರಿತು ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಚಿದಂಬರಂ ಅವರನ್ನು ತಿಹಾರ್ ಜೈಲಿಗೆ ಕಳುಹಿಸದಂತೆ ಮತ್ತು ಸಿಬಿಐ ಪ್ರಧಾನ ಕಚೇರಿಯಲ್ಲೇ ಗುರುವಾರದವರೆಗೆ ಇರಿಸಿಕೊಳ್ಳುವಂತೆ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಚಿದಂಬರಂ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುವಂತೆಯೂ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

    ಮಧ್ಯಂತರ ಜಾಮೀನಿಗಾಗಿ ಚಿದಂಬರಂ ಕೋರಿಕೆಯನ್ನು ವಿಚಾರಣಾ ನ್ಯಾಯಾಲಯ ಸೋಮವಾರವೇ ಪರಿಗಣಿಸದಿದ್ದಲ್ಲಿ ಸಿಬಿಐ ಕಸ್ಟಡಿಯನ್ನು ಇನ್ನೂ ಮೂರು ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

    ನ್ಯಾಯಾಧೀಶರಾದ ಆರ್.ಭಾನುಮತಿ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ, ತಮ್ಮ ವಿರುದ್ಧ ಜಾರಿಗೊಳಿಸಲಾದ ಜಾಮೀನುರಹಿತ ವಾರಂಟ್ ಪ್ರಶ್ನಿಸಿ ಚಿದಂಬರಂ ಅವರು ಸಲ್ಲಿಸಿದ ಅರ್ಜಿಗೆ ಉತ್ತರಿಸುವಂತೆ ಸಿಬಿಐಗೆ ಸೂಚನೆ ನೀಡಿದೆ.

    ಚಿದಂಬರಂ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ತಮ್ಮ ಕಕ್ಷಿದಾರರನ್ನು ಕಳೆದ 12 ದಿನಗಳಿಂದ ಸಿಬಿಐ ತನ್ನ ಕಸ್ಟಡಿಯಲ್ಲಿಟ್ಟುಕೊಂಡಿದೆ. ಅಷ್ಟೇ ಅವರನ್ನು ತಿಹಾರ್ ಜೈಲಿಗೆ ಯಾಕೆ ಕಳುಹಿಸಬೇಕು? ಸದ್ಯದ ಮಟ್ಟಿಗೆ ಅವರಿಗೆ ಗೃಹಬಂಧನ ನೀಡಿದರೆ ಸಾಕು ಎಂದು ಮನವಿ ಸಲ್ಲಿಸಿದರು. ಇದನ್ನು ಪುರಷ್ಕರಿಸಿದ ಸುಪ್ರೀಂ ಕೋರ್ಟ್, ಚಿದಂಬರಂ ಅವರನ್ನು ಜೈಲಿಗೆ ಕಳುಹಿಸದಂತೆ ಸೂಚನೆ ನೀಡಿದೆ.

  • ಟ್ವೀಟ್‍ಗೆ ನನಗೂ ಯಾವುದೇ ಸಂಬಂಧವಿಲ್ಲ, ಕೈ ಗೆಲುವಿನ ವಾತಾವರಣವನ್ನು ಕೆಡಿಸಲು ವಿರೋಧಿಗಳ ಕೆಲ್ಸ: ಮಹದೇವಪ್ಪ

    ಟ್ವೀಟ್‍ಗೆ ನನಗೂ ಯಾವುದೇ ಸಂಬಂಧವಿಲ್ಲ, ಕೈ ಗೆಲುವಿನ ವಾತಾವರಣವನ್ನು ಕೆಡಿಸಲು ವಿರೋಧಿಗಳ ಕೆಲ್ಸ: ಮಹದೇವಪ್ಪ

    ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಟ್ವೀಟ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಮಹದೇವಪ್ಪ  ಹೇಳಿದ್ದಾರೆ.

    ಬಿಜೆಪಿ ವಿರುದ್ಧ ಪ್ರಕರಣ ತಿರುಗಿಸಲು ನೋಡಿದ ಸಚಿವರು, ಕಾಂಗ್ರೆಸ್ ಗೆ ಗೆಲುವಿನ ವಾತಾವಣ ಇದೆ. ಇದನ್ನು ಕೆಡಿಸಲು ವಿರೋಧಿಗಳ ಇಂತಹ ಕೆಲಸ ಮಾಡಿರಬಹುದು. ಬಿಜೆಪಿ ನಾಯಕರು ದಾಖಲೆ ಇಲ್ಲದೇ ಎಂದಿನಂತೆ ಹಳೇ ಆರೋಪ ಮಾಡುತ್ತಾರೆ. ನಾನು ಪಕ್ಷದ ಕೆಲಸ, ಸರ್ಕಾರದ ಕೆಲಸ ಮಾತ್ರ ಮಾಡುತ್ತೇನೆ ಅಷ್ಟೇ ಎಂದು ಹೇಳಿದರು.

    ಗಾಂಧಿ ಭವನ ರಸ್ತೆಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾ ಬಗ್ಗೆ ನನಗೆ ಗೊತ್ತಿಲ್ಲ. ಮೊಯ್ಲಿ ಅವರು ಟ್ವೀಟ್ ಮಾಡಿದ್ದು ಯಾಕೆ? ಡಿಲೀಟ್ ಮಾಡಿದ್ದು ಯಾಕೆ ಎನ್ನುವುದು ನನಗೆ ಗೊತ್ತಿಲ್ಲ. ಅವರೇನು ಚಿಕ್ಕ ಹುಡುಗ ಅಲ್ಲ. ನಾನು ಪಕ್ಷದ ಕಾರ್ಯಕರ್ತ. ಮೊಯ್ಲಿ ಅವರೇ ಟ್ವೀಟ್ ನನ್ನದಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಮತ್ತೇನು ಹೇಳಲ್ಲ. ಬೇಕಿದ್ದರೆ ಮೊಯ್ಲಿ ಅವರನ್ನು ನೀವೇ ಕೇಳಿಕೊಳ್ಳಿ ಎಂದರು.

    ಕಾಂಟ್ರಾಕ್ಟ್ ಒಬ್ಬರಿಗೆ ಟಿಕೆಟ್ ಕೊಡಿಸುವ ವಿಚಾರ ಹಾಗೂ ಮೊಯ್ಲಿ ಮಗನಿಗೆ ಟಿಕೆಟ್ ತಪ್ಪಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರಾ ಎನ್ನುವ ಪ್ರಶ್ನೆಗೆ, ಯಾರಿಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಮೊಯ್ಲಿ ಅವರು ಹಿರಿಯ ನಾಯಕರಾಗಿದ್ದು, ಅವಶ್ಯಕತೆ ಬಿದ್ದರೆ ನಾನೇ ಅವರ ಜೊತೆ ಮಾತನಾಡುತ್ತೇನೆ. ವಿವಾದದಿಂದ ನನಗೇನು ಆಗಿಲ್ಲ. ನಾನು ಸಂತೋಷವಾಗಿಯೇ ಇದ್ದೇನೆ ಎಂದು ಉತ್ತರಿಸಿದರು. ಇದನ್ನೂ ಓದಿ: ವೀರಪ್ಪ ಮೊಯ್ಲಿ ಟ್ವೀಟ್ 10% ಕಮಿಷನ್ ಸರ್ಕಾರದ ಆರೋಪಕ್ಕೆ ಸಾಕ್ಷಿ : ಬಿಎಸ್‍ವೈ

    ಟಿಕೆಟ್ ನಿರ್ಧಾರ ಆಗಿಲ್ಲ: ಮುಂಬರುವ ಚುನಾವಣೆಯಲ್ಲಿ ನನ್ನನ್ನು ಸೇರಿದಂತೆ ಯಾರಿಗೂ ಇನ್ನು ಟಿಕೆಟ್ ನಿರ್ಧಾರ ಆಗಿಲ್ಲ. ಟಿಕೆಟ್ ಸಂಬಂಧ ಸಭೆಗಳು ನಡೆಯುತ್ತಿವೆ. ನನ್ನ ಮಗ ಕೂಡಾ ಟಿಕೆಟ್ ಆಕಾಂಕ್ಷಿ. ಯಾವ ಕ್ಷೇತ್ರ ಅಂತ ಇನ್ನು ನಿರ್ಧಾರ ಆಗಿಲ್ಲ. ನನ್ನ ಹಾಗೂ ನನ್ನ ಮಗನ ಸ್ಪರ್ಧೆಯ ಕ್ಷೇತ್ರದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರೋದು ಸುಳ್ಳು. ನನ್ನ ಹಾಗೂ ಮಗನ ಸ್ಪರ್ಧೆಯನ್ನ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.

  • ವೀರಪ್ಪ ಮೊಯ್ಲಿ ಟ್ವೀಟ್ 10% ಕಮಿಷನ್ ಸರ್ಕಾರದ ಆರೋಪಕ್ಕೆ ಸಾಕ್ಷಿ : ಬಿಎಸ್‍ವೈ

    ವೀರಪ್ಪ ಮೊಯ್ಲಿ ಟ್ವೀಟ್ 10% ಕಮಿಷನ್ ಸರ್ಕಾರದ ಆರೋಪಕ್ಕೆ ಸಾಕ್ಷಿ : ಬಿಎಸ್‍ವೈ

    ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಅವರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿರುವ ಟ್ವೀಟ್ ಸಿದ್ದರಾಮಯ್ಯ ಅವರ ಸರ್ಕಾರ 10% ಸರ್ಕಾರ ಆಗಿದೆ ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂಪ್ಪ ಟ್ವೀಟ್ ಮಾಡಿದ್ದಾರೆ.

    ರಾಜ್ಯದ ಕಾಂಗ್ರೆಸ್ ಸರ್ಕಾರ 10% ಸರ್ಕಾರ ಎಂದು ಸಾಬೀತು ಪಡಿಸಲು ನಾವು ಈಗಾಗಲೇ ಹಲವು ದಾಖಲೆಗಳ ಹಾಗೂ ಪುರಾವೆಗಳನ್ನು ಒದಗಿಸಿದ್ದೇವು. ಆದರೆ ಸಿಎಂ ಅವುಗಳನ್ನು ಸುಳ್ಳು ಎಂದು ಪ್ರತಿಪಾದಿಸಿದ್ದರು. ಇಂದು ಕಾಂಗ್ರೆಸ್ ಹಿರಿಯ ನಾಯಕರೇ ಇದಕ್ಕೆ ಸಾಕ್ಷಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಯೋಜನೆ ನಡೆಯಬೇಕಾದರು ಕಮಿಷನ್ ನೀಡಬೇಕೆಂಬ ಸತ್ಯ ಹೊರಬಂದಿದೆ. ಪಿಡಬ್ಲೂಡಿ ಸಚಿವರು ಗುತ್ತಿಗೆದಾರರೊಂದಿಗೆ ಸೇರಿ ತಮ್ಮ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಬಿಎಸ್‍ವೈ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    `ಕಾಂಟ್ರಾಕ್ಟರ್ ಗಳ ಕೈಲಿ ಕಾಂಗ್ರೆಸ್ ಟಿಕೆಟ್’ ಎಂದು ಬರೆದು ಕಾಂಗ್ರೆಸ್‍ನಲ್ಲಿ ಹಣದ ಹೊಂದಾಣಿಕೆಯಿಂದ ಅಭ್ಯರ್ಥಿಗಳನ್ನು ನಿರ್ಧರಿಸುವಂತಾಗಿದೆ ಅಂತ ಪಕ್ಷದ ವಿರುದ್ಧ ನೇರವಾಗಿ ಮೊಯ್ಲಿ ತಮ್ಮ ಟ್ವೀಟ್ ನಲ್ಲಿ ಆರೋಪ ಮಾಡಿದ್ದರು. ಈ ಟ್ವೀಟನ್ನು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿಯ ಅಧಿಕೃತ ಖಾತೆಗೆ ಟ್ಯಾಗ್ ಮಾಡಿದ್ದರು. ಅಲ್ಲದೇ ಮೊಹ್ಲಿ ಅವರ ಟ್ವೀಟ್ ಗೆ ಅವರ ಪುತ್ರ ಸಹ ಮರುಟ್ವೀಟ್ ಮಾಡಿದ್ದರು.

    ನವದೆಹಲಿಯಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಟ್ವೀಟ್ ಮಾಡಿರುವುದು ನಾನಲ್ಲ. ಇದು ನನ್ನ ಅನಧಿಕೃತ ಟ್ವೀಟ್ ಖಾತೆಯಾಗಿದೆ. ನನ್ನ ಮಗ ಕೂಡ ಇಂತಹ ಟ್ವೀಟ್ ಮಾಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.