Tag: foundation stone

  • ಕಲ್ಕಿಧಾಮ ದೇಗುಲಕ್ಕೆ ಮೋದಿ ಶಂಕುಸ್ಥಾಪನೆ- ಇದು ನನ್ನ ಸೌಭಾಗ್ಯವೆಂದ ಪ್ರಧಾನಿ

    ಕಲ್ಕಿಧಾಮ ದೇಗುಲಕ್ಕೆ ಮೋದಿ ಶಂಕುಸ್ಥಾಪನೆ- ಇದು ನನ್ನ ಸೌಭಾಗ್ಯವೆಂದ ಪ್ರಧಾನಿ

    ಲಕ್ನೋ: ಅಯೋಧ್ಯೆ ರಾಮಮಂದಿರದ (Ayodhya Ram mandir) ಬಳಿಕ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಉತ್ತರಪ್ರದೇಶದ ಸಂಭಾಲ್‌ನಲ್ಲಿ ಮತ್ತೊಂದು ಹಿಂದೂ ದೇಗುಲ ಶ್ರೀ ಕಲ್ಕಿಧಾಮದ ಶಂಕುಸ್ಥಾಪನೆಯನ್ನು ನೆರವೇರಿಸಿದರು.

    ಉತ್ತರ ಪ್ರದೇಶ (Uttarpradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮತ್ತು ಕಲ್ಕಿಧಾಮ (Kalki Dham) ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರೊಂದಿಗೆ ಆಗಮಿಸಿದ ಮೋದಿ ಅವರು ಮೊದಲು ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು. ನಂತರ ಶಂಕುಸ್ಥಾಪನೆ ನೆರವೇರಿಸಿದರು.

    ಬಳಿಕ ಮಾತನಾಡಿದ ಪ್ರಧಾನಿ, ಇಂದು ಛತ್ರಪತಿ ಶಿವಾಜಿ ಮಹಾರಾಜರ (Chhatrapati Shivaji Maharaj) ಜನ್ಮದಿನವೂ ಆಗಿದೆ. ಆದ್ದರಿಂದ ಈ ದಿನವು ಹೆಚ್ಚು ಪವಿತ್ರ ಮತ್ತು ಹೆಚ್ಚು ಸ್ಪೂರ್ತಿದಾಯಕವಾಗಿದೆ. ಈ ಸಂದರ್ಭದಲ್ಲಿ ನಾನು ಛತ್ರಪತಿ ಶಿವಾಜಿ ಮಹಾರಾಜರಿಗೆ ಗೌರವಪೂರ್ವಕವಾಗಿ ನಮಸ್ಕರಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಏ.13ರಿಂದ 23ರ ವರೆಗೆ ವಿಶ್ವವಿಖ್ಯಾತ ಬೆಂಗಳೂರು ಕರಗ

    ಇಂದು ಸಂತರ ಭಕ್ತಿ ಮತ್ತು ಸಾರ್ವಜನಿಕರ ಉತ್ಸಾಹದಿಂದ ಮತ್ತೊಂದು ಪುಣ್ಯ ಕ್ಷೇತ್ರಕ್ಕೆ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಆಚಾರ್ಯರು ಮತ್ತು ಸಂತರ ಸಮ್ಮುಖದಲ್ಲಿ ಭವ್ಯವಾದ ಕಲ್ಕಿ ಧಾಮದ ಶಂಕುಸ್ಥಾಪನೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಕಲ್ಕಿಧಾಮವು ಭಾರತೀಯ ನಂಬಿಕೆಯ ಮತ್ತೊಂದು ಧಾರ್ಮಿಕ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸ ನನಗಿದೆ ಎಂದರು.

    ಈ ಕಾರ್ಯಕ್ರಮದಲ್ಲಿ ದೇಶದ ನಾನಾ ಭಾಗಗಳಿಂದ ಆಗಮಿಸಿದ್ದ ಧರ್ಮಗುರುಗಳು ಹಾಗೂ ಧರ್ಮಗುರುಗಳು ಪಾಲ್ಗೊಂಡಿದ್ದರು. ಶ್ರೀ ಕಲ್ಕಿ ಧಾಮದ ನಿರ್ಮಾಣವನ್ನು ಕೃಷ್ಣಂ ಅವರ ಅಧ್ಯಕ್ಷತೆಯ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ನೋಡಿಕೊಳ್ಳುತ್ತದೆ.

  • ಬಸವಣ್ಣನ ಅನುಭವ ಮಂಟಪ ನೆನೆದ ಪ್ರಧಾನಿ ಮೋದಿ- ಕನ್ನಡದಲ್ಲಿ ಭಾಷಣ

    ಬಸವಣ್ಣನ ಅನುಭವ ಮಂಟಪ ನೆನೆದ ಪ್ರಧಾನಿ ಮೋದಿ- ಕನ್ನಡದಲ್ಲಿ ಭಾಷಣ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನಕ್ಕೆ ಇಂದು ಶಂಕು ಸ್ಥಾಪನೆ ನೆರವೇರಿಸಿದರು. ಈ ವೇಳೆ ನೂತನ ಸಂಸತ್ ಭವನದ ಮಾದರಿಯನ್ನು ಸಹ ಬಿಡುಗಡೆಗೊಳಿಸಿದರು. ಕೇಂದ್ರ ಸಚಿವರು, ಧಾರ್ಮಿಕ ಪ್ರಮುಖರು ಸೇರಿದಂತೆ ವಿವಿಧ ಗಣ್ಯರು ಭಾಗಿಯಾಗಿದ್ದರು. ಇದೇ ವೇಳೆ ಬಸವಣ್ಣನವರ ಅನುಭವ ಮಂಟಪ ನೆನೆದು ಕನ್ನಡದಲ್ಲಿ ಮಾತನಾಡಿದರು.

    ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಸಂಸತ್ ಭವನದ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಗಣ್ಯರು ಭಾಗವಹಿಸಿದ್ದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪೂರಿ ಹಾಗೂ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

    ಈ ಅನುಭವ ಮಂಟಪ ಜನಸಭೆ ನಾಡಿನ ಒಟ್ಟು ರಾಷ್ಟ್ರದ ಉನ್ನತಿ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತದೆ. ಈ ಅನುಭವ ಮಂಟಪ ರಾಜ್ಯ, ರಾಷ್ಟ್ರದ ಉನ್ನತಿಗಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ಅನುಭವ ಮಂಟಪ ರಾಷ್ಟ್ರದ ಹಿತಕ್ಕಾಗಿ ಕೆಲಸ ಮಾಡುತ್ತದೆ ಎಂದು ಕನ್ನಡದಲ್ಲೇ ಮಾತನಾಡಿದರು.

    ಇಂದು ಐತಿಹಾಸಿಕ ದಿನವಾಗಿದ್ದು, ಹೊಸ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಹೊಸ ಸಂಸತ್ ಭವನವನ್ನು ಭಾರತೀಯರೆಲ್ಲರೂ ಸೇರಿ ನಿರ್ಮಿಸೋಣ. ಇದು 130 ಕೋಟಿ ಭಾರತೀಯರು ಹೆಮ್ಮೆಪಡುವ ದಿನವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ನಾವು ಸಾಕ್ಷಿಯಾಗುತ್ತಿದ್ದೇವೆ. ಹೊಸ ಸಂಸತ್ ಭವನವು ಹೊಸ ಮತ್ತು ಹಳೆಯ ಸಹಬಾಳ್ವೆಯ ಉದಾಹರಣೆಯಾಗಿದೆ. ಸಮಯ ಮತ್ತು ಅಗತ್ಯತೆಗಳಿಗೆ ಅನುಗುಣವಾಗಿ ನಮ್ಮೊಳಗೇ ಬದಲಾವಣೆ ಮಾಡಿಕೊಳ್ಳುವ ಪ್ರಯತ್ನವಿದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

    ಪ್ರಸ್ತುತ ಇರುವ ಸಂಸತ್ ಭವನವು 100 ವರ್ಷ ಹಳೆಯದಾಗಿದ್ದು, ಹಲವು ಬಾರಿ ಉನ್ನತೀಕರಿಸಲಾಗಿದೆ. ಈಗ ಅದಕ್ಕೆ ವಿಶ್ರಾಂತಿ ಅವಶ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ 75ನೇ ಸ್ವಾತಂತ್ರೋತ್ಸವ ಆಚರಿಸುವ ಸುಸಂದರ್ಭದಲ್ಲಿ ಹೊಸ ಸಂಸತ್ ಭವನ ಹೊಂದುವುದಕ್ಕಿಂತ ಸುಂದರ, ಪವಿತ್ರ ದಿನ ಮತ್ಯಾವುದಿದೆ? ಹೊಸ ಸಂಸತ್ ಭವನವು ‘ಆತ್ಮನಿರ್ಭರ ಭಾರತ’ದ ಗುರಿಯನ್ನು ಸಾಧಿಸಲು ಹಾಗೂ 21ನೇ ಶತಮಾನದ ಮಹತ್ವಾಕಾಂಕ್ಷೆಯನ್ನು ಪೂರೈಸಲು ಸಹಾಯವಾಗಲಿದೆ. ಸ್ವಾತಂತ್ರ್ಯದ ಬಳಿಕ ಹಳೆಯ ಸಂಸತ್ ಕಟ್ಟಡ ಹೊಸ ದಿಕ್ಕು ನೀಡಿತು. ಆದರೆ ಹೊಸ ಕಟ್ಟಡ ಆತ್ಮನಿರ್ಭರ ಭಾರತಕ್ಕೆ ಸಾಕ್ಷಿಯಾಗಲಿದೆ ಎಂದರು.

    2014ರಲ್ಲಿ ಮೊದಲ ಭಾರಿಗೆ ಪ್ರಧಾನ ಮಂತ್ರಿಯಾಗಿ ಕಾಲಿಟ್ಟ ಸಂದರ್ಭವನ್ನು ಜೀವನದಲ್ಲಿ ನಾನೆಂದೂ ಮರೆಯುವುದಿಲ್ಲ. ಪ್ರಜಾಪ್ರಭುತ್ವದ ಈ ದೇವಸ್ಥಾನಕ್ಕೆ ಕಾಲಿಡುವ ಮುನ್ನ ಹಣೆ ಹಚ್ಚಿ ನಮಸ್ಕರಿಸಿ ಬಂದಿದ್ದೇನೆ. ಎಲ್ಲ ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕರಿಗೆ ಉತ್ತರದಾಯಿಗಳು ಎಂಬುದುನ್ನು ಮರೆಯಬಾರದು ಎಂದು ತಿಳಿಸಿದರು.

    ಮಾಜಿ ಪ್ರಧಾನಿಗಳು, ಮಾಜಿ ಲೋಕಸಭಾ ಸ್ಪೀಕರ್‍ಗಳು, ಸರ್ವಪಕ್ಷಗಳ ನಾಯಕರು ಭಾಗಿಯಾಗಿದ್ದರು. ಇನ್ನೂ ವಿಶೇಷ ಎಂಬಂತೆ 12 ಧಾರ್ಮಿಕ ಪ್ರಮುಖರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಸಂದೇಶ ಬೋಧಿಸಿದರು.

    ಹೊಸ ಕಟ್ಟಡವು ‘ಆತ್ಮನಿರ್ಭರ ಭಾರತ’ದ ದೂರ ದೃಷ್ಟಿಯ ಒಂದು ಭಾಗವಾಗಿದೆ. ಅಲ್ಲದೆ ಸ್ವಾತಂತ್ರ್ಯದ ಬಳಿಕ ಮೊದಲ ಬಾರಿಗೆ ಜನರ ಸಂಸತ್‍ನ್ನು ನಿರ್ಮಿಸುವ ಒಂದು ಹೆಗ್ಗುರುತಾಗಿದೆ. ಹೊಸ ಭಾರತದ ಅಗತ್ಯತೆಗಳು ಹಾಗೂ ಆಕಾಂಕ್ಷೆಗಳಿಗೆ ಹೊಂದಿಕೆಯಾಗುವ ರೀತಿಯಲ್ಲಿ ಸಂಸತ್ ಭವನ ನಿರ್ಮಿಸಲಾಗುತ್ತಿದೆ. 75ನೇ ಸ್ವಾತಂತ್ರ್ಯೋತ್ಸವ ಅಂದರೆ 2022ಕ್ಕೆ ಲೋಕಾರ್ಪಣೆಯಾಗಲಿದೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

    ಸ್ಪೀಕರ್ ಓಂ ಬಿರ್ಲಾ ಟವರು ಈ ಕುರಿತು ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಪೂರೈಸುತ್ತದೆ. ಅಂದೇ ಸರ್ಕಾರದ ಎರಡೂ ಮನೆಯ ಕಲಾಪಗಳು ಹೊಸ ಸಂಸತ್ ಭವನದಲ್ಲಿ ನಡೆಯಲಿವೆ. ಆಗಸ್ಟ್ 15, 2021ರಂದು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದರು.

  • ರಾಮಮಂದಿರ ನಿರ್ಮಾಣದೊಂದಿಗೆ ದೇಶದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ: ಬಾಬಾ ರಾಮ್‍ದೇವ್

    ರಾಮಮಂದಿರ ನಿರ್ಮಾಣದೊಂದಿಗೆ ದೇಶದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ: ಬಾಬಾ ರಾಮ್‍ದೇವ್

    ಲಕ್ನೋ: ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಲಿದೆ. ರಾಮಂದಿರ ನಿರ್ಮಾಣದೊಂದಿಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂದು ಯೋಗಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.

    ಇಂದು ಬೆಳಗ್ಗೆ ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂದು ಐತಿಹಾಸಿಕ ದಿನವಾಗಿದೆ. ಈ ದಿನವನ್ನು ನಾವೆಲ್ಲರೂ ದೀರ್ಘಕಾಲ ನೆನಪಿನಟ್ಟಿಕೊಳ್ಳಬಹುದು. ರಾಮದೇವಾಲಯದ ನಿರ್ಮಾಣದೊಂದಿಗೆ ಭಾರತದಲ್ಲಿ ‘ರಾಮರಾಜ್ಯ’ ಸ್ಥಾಪನೆಯಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ನಾಗರ ಶೈಲಿಯಲ್ಲಿ ರಾಮಮಂದಿರ- ಮೂರು ಅಂತಸ್ತಿನಲ್ಲಿ ಐದು ಗೋಪುರ ನಿರ್ಮಾಣ

    ಪ್ರಧಾನಿ ಮೋದಿಯವರು ಭೂಮಿ ಪೂಜೆ ಕಾರ್ಯವನ್ನು ನರವೇರಿಸಲಿದ್ದು, ಇದಕ್ಕೂ ಮೊದಲು ಅವರು ಕೂಡ ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಾಲಯವನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಇದನ್ನೂ ಓದಿ: ಭೂಕಂಪಕ್ಕೂ ಜಗ್ಗದಂತೆ ನಿರ್ಮಾಣವಾಗಲಿದೆ ರಾಮ ಮಂದಿರ

    ಹನುಮಂತ ಇಲ್ಲದೇ ರಾಮನ ಯಾವುದೇ ಕೆಲಸ ಆರಂಭಗೊಳ್ಳುವುದಿಲ್ಲ. ಈ ಕಾರಣಕ್ಕೆ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರು ಮೊದಲು ಹನುಮಂತನ ಪೂಜೆ ಮಾಡಿ ಆಶೀರ್ವಾದ ಪಡೆದ ಬಳಿಕ ರಾಮ ದೇವಸ್ಥಾನದ ಭೂಮಿ ಪೂಜೆಗೆ ತೆರಳುತ್ತಿದ್ದಾರೆ ಎಂದು ಹನುಮಂತ ದೇವಾಲಯ ಅರ್ಚಕ ಮಾಧವನ್ ದಾಸ್ ತಿಳಿಸಿದರು. ಇದನ್ನೂ ಓದಿ: ಸುತ್ತ 4 ಚಿಕ್ಕ ಮಂದಿರ – ರಾಮಮಂದಿರದ ಹೊರಗಡೆ ಏನೇನು ಇರಲಿದೆ?