Tag: Free Ration Scheme

  • ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ನವದೆಹಲಿ: ದೆಹಲಿ ಸರ್ಕಾರವು ಉಚಿತ ಪಡಿತರ ಯೋಜನೆಯನ್ನು ಸೆಪ್ಟೆಂಬರ್ 30ರವರೆಗೆ ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ.

    ಬುಧವಾರ ನಡೆದ ಕ್ಯಾಬಿನೆಟ್ ಸಭೆಯ ನಂತರ ಆನ್‍ಲೈನ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದಾಗಿ ತಿಳಿಸಿದರು. ಕೊರೊನಾ ವೈರಸ್ ಹಿನ್ನೆಲೆ ತಮ್ಮ ಸರ್ಕಾರವು 2020ರ ಏಪ್ರಿಲ್‍ನಿಂದ ಸುಮಾರು 73 ಲಕ್ಷ ನಾಗರಿಕರಿಗೆ ಉಚಿತವಾಗಿ ಪಡಿತರವನ್ನು ಪೂರೈಸುತ್ತಿದೆ. ಇದರ ಪ್ರಯೋಜನವನ್ನು 73 ಲಕ್ಷ ಮಂದಿ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್‌ – ಯಾವುದೇ ಫೀಸ್‌ ಕಟ್ಟುವ ಅಗತ್ಯವಿಲ್ಲ

    Arvind Kejriwal

    ದೆಹಲಿ ಸರ್ಕಾರವು ಕಳೆದೆರಡು ವರ್ಷಗಳಿಂದ ಜನರಿಗೆ ಉಚಿತವಾಗಿ ಪಡಿತರವನ್ನು ನೀಡುತ್ತಿದೆ. ಸರ್ಕಾರ ಪಡಿತರ ಅಂಗಡಿಗಳ ಮೂಲಕ ಅತೀ ಕಡಿಮೆ ಬೆಲೆಗೆ ಪಡಿತರವನ್ನು ನೀಡುತ್ತಿದೆ. ಕಳೆದೆರಡು ವರ್ಷಗಳಿಂದ ನಾವು ಉಚಿತವಾಗಿ ಪಡಿತರವನ್ನು ನೀಡುತ್ತಿದ್ದೇವೆ. ಇದೀಗ ಈ ಯೋಜನೆಯನ್ನು ಸೆಪ್ಟೆಂಬರ್ 30ರವರೆಗೂ ವಿಸ್ತರಿಸಿದ್ದೇವೆ ಮತ್ತು ಮುಂಬರುವ ತಿಂಗಳುಗಳಲ್ಲಿ ಉಚಿತವಾಗಿ ಪಡಿತರ ನೀಡುವುದನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಸರ್ಕಾರದಿಂದ ಗುಡ್‍ನ್ಯೂಸ್- 2,500 ರೂ. ಗೌರವ ಧನ ಹೆಚ್ಚಿಸಿ ಆದೇಶ

    ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (ಎನ್‍ಎಫ್‍ಎಸ್‍ಎ), 2013 ರ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಪಡಿತರವನ್ನು ವಿತರಿಸುತ್ತಿದೆ. ಎನ್‍ಎಫ್‍ಎಸ್‍ಸಿ ವರ್ಗವು ವಲಸೆ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಗೃಹ ಸಹಾಯಕರು ಮತ್ತು ಪಡಿತರ ಚೀಟಿಗಳನ್ನು ಹೊಂದಿರದವರಿಗೂ ರೇಷನ್ ನೀಡಲಾಗುತ್ತಿದೆ.

    ಈ ಯೋಜನೆಯಡಿಯಲ್ಲಿ ಎನ್‍ಎಫ್‍ಎಸ್ ಕಾಯಿದೆ 2013ರ ಅಡಿಯಲ್ಲಿ ಸೂಚಿಸಲಾದ ಅರ್ಹತೆಯ ಪ್ರಕಾರ ಪ್ರತಿ ತಿಂಗಳು ಐದು ಕೆಜಿ ಆಹಾರ ಧಾನ್ಯಗಳು ಮತ್ತು ನಾಲ್ಕು ಕೆಜಿ ಗೋಧಿ ಮತ್ತು ಒಂದು ಕೆಜಿ ಅಕ್ಕಿಯನ್ನು ಅಗತ್ಯವಿರುವವರಿಗೆ ಉಚಿತವಾಗಿ ನೀಡಲಾಗುತ್ತದೆ. ದೆಹಲಿ ಸರ್ಕಾರವು ಈ ಹಿಂದೆ ಉಚಿತ ಪಡಿತರ ಯೋಜನೆಯನ್ನು 2021ರ ಡಿಸೆಂಬರ್‌ನಿಂದ 2022ರ ಮೇವರೆಗೆ ವಿಸ್ತರಿಸಿತ್ತು.

    Live Tv

  • ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ

    ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ

    ಲಕ್ನೋ: ಉತ್ತರಪ್ರದೇಶದಲ್ಲಿ ಮುಂದಿನ ಮೂರು ತಿಂಗಳ ಕಾಲ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಜೂನ್‍ವರೆಗೆ ಉಚಿತ ಪಡಿತರ ಯೋಜನೆಯನ್ನು ಮುಂದುವರಿಸಲಾಗುತ್ತದೆ. ಇದರಿಂದಾಗಿ ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಿದ್ದೇವೆ. ಇದು ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯು ಪ್ರತಿ ಮನೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕಿ.ಗ್ರಾಂಗಳಷ್ಟು ಆಹಾರ ಧಾನ್ಯವನ್ನು ಒದಗಿಸುತ್ತದೆ. ಸಾಂಕ್ರಾಮಿಕ ರೋಗವು 2020ರಲ್ಲಿ ಬಂದಾಗ ಕೇಂದ್ರವು ಇದನ್ನು ಮೊದಲು ಜಾರಿಗೆ ತಂದಿತು ಎಂದು ತಿಳಿಸಿದರು. ಇದನ್ನೂ ಓದಿ: 2ನೇ ಬಾರಿ ಸಿಎಂ ಆಗಿ ‘ಬುಲ್ಡೋಜರ್ ಬಾಬಾ’ ಚುಕ್ಕಾಣಿ – ಮೋದಿ, ಬಿಜೆಪಿ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣವಚನ

    ಉತ್ತರಪ್ರದೇಶದಲ್ಲಿ ಮುಂದಿನ ಮೂರು ತಿಂಗಳ ಕಾಲ ಉಚಿತ ಪಡಿತರ ನೀಡಲಾಗುವುದು. ಬಡವರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳು ಜನರಿಗೆ ತಲುಪಬೇಕು ಎಂದು ನೂತನ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದರು. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರಿಗೆ ಶಾಕ್ – ಎಸ್‌ಎಸ್‌ಎಲ್‌ಸಿ ಪರಿಕ್ಷೆಗೆ ಸಮವಸ್ತ್ರ ಕಡ್ಡಾಯ

    ಶುಕ್ರವಾರ ಲಕ್ನೋದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಾಖಲೆಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.