Tag: freedom fighter

  • ಬ್ರಿಟಿಷರ ವಿರುದ್ಧ ಹೋರಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ

    ಬ್ರಿಟಿಷರ ವಿರುದ್ಧ ಹೋರಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ

    ತುಮಕೂರು: ಜಿಲ್ಲೆಯ ಪಾವಗಡದ (Pavagada) ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ (Freedom Fighter) 103 ವರ್ಷದ ವಿ.ಎನ್ ನರಸರೆಡ್ಡಿ (VN Reddy) ನಿಧನರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿ.ಎನ್ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ. ಇಂದು ಮೃತರ ಸ್ವಗ್ರಾಮವಾದ ವೆಂಕಟಪುರ ಗ್ರಾಮದ ಸಮೀಪದ ತೋಟದಲ್ಲಿ ಅಂತ್ಯಕ್ರಿಯೆ ನಡೆದಿದೆ. ಇದನ್ನೂ ಓದಿ: ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    ವಿ.ಎನ್ ರೆಡ್ಡಿಯವರು ಮಾಜಿ ಉಪರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ, ಎ.ಎಂ ಲಿಂಗಣ್ಣ, ಕೊಲ್ಲೂರು ಸುಬ್ಬಾರಾವು, ಪಡಪಲ್ಲಿ ಚಿದಂಬರ ರೆಡ್ಡಿಯವರ ಒಡನಾಡಿಯಾಗಿದ್ದರು. 1951-52ರಲ್ಲಿ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ನಡೆದ ಎಲ್ಲಾ ಚುನಾವಣೆಗಳಲ್ಲೂ ವಿ.ಎನ್ ರೆಡ್ಡಿ ಮತ ಚಲಾಯಿಸಿದ್ದಾರೆ. ಬ್ರಿಟಿಷ್ ಆಳ್ವಿಕೆಯಲ್ಲಿದ್ದ ದಾಖಲೆಗಳನ್ನು ನಾಶಪಡಿಸಲು ಪಾವಗಡ ತಾಲೂಕು ಕಛೇರಿಗೆ ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ದಾಖಲೆಗಳಿರುವ ಕೊಠಡಿಗೆ ಇಲಿಗಳನ್ನು ಬಿಟ್ಟು ದಾಖಲೆಗಳನ್ನು ಸುಟ್ಟಿದ್ದರು. ಇದನ್ನೂ ಓದಿ: ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್

    ಈ ಕೃತ್ಯ ಎಸಗಿದ್ದಕ್ಕೆ ರಾತ್ರಿ ಮಲಗಿದ್ದ ವೇಳೆ ಪೊಲೀಸರು ವಿ.ಎನ್ ನರಸರೆಡ್ಡಿ ಅವರನ್ನು ಸೇರಿದಂತೆ ಏಳು ಜನರನ್ನು ಬಂಧಿಸಿ ತುಮಕೂರು ಜೈಲಿಗೆ ಹಾಕಿದ್ದರು. ಅಲ್ಲಿಯೂ ಬ್ರಿಟಿಷರ ಆಳ್ವಿಕೆ ವಿರುದ್ಧ ಪ್ರತಿಭಟನೆ, ಹೋರಾಟಗಳನ್ನು ಮುಂದುವರಿಸಿದ್ದರಿಂದ ತುಮಕೂರು ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಬಂಧಿಸಿ ಒಟ್ಟು 32 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಇದನ್ನೂ ಓದಿ: ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

    ಜೈಲು ಶಿಕ್ಷೆ ಅನುಭವಿಸಿ ಬಂದ ನಂತರ ಪಾವಗಡ ತಾಲೂಕಿನಾದ್ಯಂತ ಎತ್ತಿನಗಾಡಿಯಲ್ಲಿ ಸಂಚರಿಸಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಸ್ವಾತಂತ್ರ‍್ಯ ಹೋರಾಟದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

  • Manipur: ಅಬ್ದುಲ್‌ ಕಲಾಂರಿಂದ ಗೌರವಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

    Manipur: ಅಬ್ದುಲ್‌ ಕಲಾಂರಿಂದ ಗೌರವಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

    ಇಂಫಾಲ್‌: ಮಣಿಪುರದಲ್ಲಿ ಹಿಂಸಾಚಾರ (Manipur Violence) ದಿನದಿಂದ ದಿನಕ್ಕೆ ಭುಗಿಲೇಳುತ್ತಿದೆ. ಮಹಿಳೆಯರನ್ನ ಬೆತ್ತಲೆ ಮೆರವಣಿಗೆ (Manipur Women Paraded) ನಡೆಸಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅದೇ ದಿನ ಮತ್ತಿಬ್ಬರು ಯುವತಿಯರ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಇದೀಗ ಸ್ವಾತಂತ್ರ್ಯ ಹೋರಾಟಗಾರನೊಬ್ಬರ ಪತ್ನಿಯನ್ನ ಸಜೀವ ದಹನ ಮಾಡಿರುವ ಘಟನೆ ಜನರನ್ನ ಬೆಚ್ಚಿ ಬೀಳಿಸಿದೆ.

    ಕಾಕ್ಚಿಂಗ್‌ ಜಿಲ್ಲೆಯ ಸೆರೋ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರನ (Freedom Fighter) ಪತ್ನಿ 80‌ ವರ್ಷದ ಮಹಿಳೆಯನ್ನ ಮನೆಯೊಳಗೆ ಕೂಡಿಹಾಕಿಕೊಂಡು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಮೇ 28ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಸೆರೋ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಕೇಸ್‌ ದಾಖಲಾಗಿದೆ.

    ಮೃತ ಮಹಿಳೆ ಸ್ವಾತಂತ್ರ್ಯ ಹೋರಾಟಗಾರ ಎಸ್‌.ಚೂರಚಂದ್‌ ಸಿಂಗ್‌ ಅವರ ಪತ್ನಿ. ಚೂರಚಂದ್‌ ಭಾರತದ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರಿಂದ ಗೌರವಿಸಲ್ಪಟ್ಟಿದ್ದರು. ಇದನ್ನೂ ಓದಿ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಯುವತಿಯರ ಮೇಲೆ ರೇಪ್, ಮರ್ಡರ್ ಆರೋಪ – ಮಣಿಪುರ ಧಗ ಧಗ

    ಕಳೆದ ಮೇ 3 ರಂದು ಹಿಂಸಾಚಾರ ಭುಗಿಲೇಳುವುದಕ್ಕೂ ಮುನ್ನ ರಾಜಧಾನಿ ಇಂಫಾಲ್‌ನಿಂದ 45 ಕಿಮೀ ದೂರದಲ್ಲಿ ಸುಂದರ ಗ್ರಾಮವಾಗಿದ್ದ ಸೆರೋ ಈಗ ಸ್ಮಶಾನದಂತೆ ಕಾಣುತ್ತಿದೆ. ಕೇವಲ ಸುಟ್ಟ ಮನೆಗಳಷ್ಟೇ ಕಣ್ಣಿಗೆ ಗೋಚರವಾಗುತ್ತಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

    ಪರಿಶಿಷ್ಟ ಪಂಗಡಗಳ ಸ್ಥಾನಮಾನಕ್ಕಾಗಿ ಮಿಟೈಸ್‌ ಮತ್ತು ಕುಕಿ ಬುಡಕಟ್ಟಿನ ನಡುವೆ ಘರ್ಷಣೆ ಪ್ರಾರಂಭವಾದ ಕೆಲ ದಿನಗಳ ನಂತರ ಶಸ್ತ್ರಸಜ್ಜಿತ ಗುಂಪೊಂದು ದಾಳಿ ನಡೆಸಿ 80 ವರ್ಷದ ಮಹಿಳೆಯನ್ನ ಜೀವಂತವಾಗಿ ಸುಟ್ಟುಹಾಕಿತ್ತು. ಆಕೆಯನ್ನು ರಕ್ಷಿಸಲು ಧಾವಿಸುವಷ್ಟರಲ್ಲಿ ದೇಹ ಸಂಪೂರ್ಣ ಸುಟ್ಟು ಕರಕಲಾಗಿತ್ತು ಎಂದು ಮೊಮ್ಮಗ ಪ್ರೇಮಕಾಂತ ಕಣ್ಣಾರೆ ಕಂಡ ದೃಶ್ಯವನ್ನ ವಿವರಿಸಿದ್ದಾನೆ. ಇದನ್ನೂ ಓದಿ: ಮಣಿಪುರದಲ್ಲಿ ನಡೆದ ಘಟನೆ ದುಃಖಕರ – ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಖಂಡನೆ

    ಸುಮಾರು ಎರಡೂವರೆ ತಿಂಗಳಿನಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ. ದಿನೇ ದಿನೇ ಹಿಂಸಾಚಾರ ಹೆಚ್ಚಾಗುತ್ತಲೇ ಸಾಗಿದೆ. ಶಾಂತಿ ಎಂಬುದಿಲ್ಲಿ ಮರೀಚಿಕೆ ಆಗಿದೆ. ಇಂತಹ ಸಂದರ್ಭದಲ್ಲಿ ಮನುಕುಲ ತಲೆತಗ್ಗಿಸುವಂತಹ ವೀಡಿಯೋ ಒಂದು ಹೊರಬಂದಿತ್ತು. ಆದಿವಾಸಿ ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿದ ರಾಕ್ಷಸಿ ಗುಂಪೊಂದು, ಅವರನ್ನು ನೂರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮಾಡಿತ್ತು. ಈ ದೃಶ್ಯಾವಳಿ ಇದು ಇಡೀ ದೇಶದ ಮನಕಲಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ವಾತಂತ್ರ್ಯ ಹೋರಾಟಗಾರ, ಶತಾಯಿಷಿ ವೆಂಕಣ್ಣ ನಾಯಕ ಇನ್ನಿಲ್ಲ

    ಸ್ವಾತಂತ್ರ್ಯ ಹೋರಾಟಗಾರ, ಶತಾಯಿಷಿ ವೆಂಕಣ್ಣ ನಾಯಕ ಇನ್ನಿಲ್ಲ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕೊನೆಯಕೊಂಡಿಯಾಗಿದ್ದ ಅಂಕೋಲಾದ ಶತಾಯಿಷಿ ವೆಂಕಣ್ಣ ಬೊಮ್ಮಯ್ಯ ನಾಯಕ ಅಸ್ತಂಗತರಾಗಿದ್ದಾರೆ.

    ವೆಂಕಣ್ಣ ನಾಯಕ ಅವರು ಬ್ರಿಟಿಷರ ವಿರುದ್ಧ ಅಸಹಕಾರ ಚಳವಳಿ, ಜಂಗಲ್ ಸತ್ಯಾಗ್ರಹ, ಹುಲ್ಲುಬನ್ನಿ ಸತ್ಯಾಗ್ರಹ, ಉಪ್ಪಿನ ಸತ್ಯಾಗ್ರಹ, ಉಳುವರೆ ಜಂಗಲ್ ಸುಡುವ ಕಾರ್ಯದಲ್ಲಿ ಭಾಗವಹಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಇವರು 1942ರ ಮೇ 12 ರಿಂದ 1943ರ ಜೂನ್ 7ರವರೆಗೆ ನಾಸಿಕ್ ಸೆಂಟ್ರಲ್ ಜೈಲ್‍ನಲ್ಲಿ ಶಿಕ್ಷೆ ಅನುಭವಿಸಿದ್ದರು.

    ಸ್ವಾತಂತ್ರ್ಯ ನಂತರದಲ್ಲಿ ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸೇವಾ ಸಹಕಾರಿ ಸಂಘ ತಳಗದ್ದೆಯ ಸಂಸ್ಥಾಪನಾ ಅಧ್ಯಕ್ಷರಾಗಿ ಸೇವಾ ಸಹಕಾರಿ ಸಂಘ ಸೂರ್ವೆಯ ಅಧ್ಯಕ್ಷರಾಗಿ, ತಾಲೂಕಾ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನಿರ್ದೇಶಕರಾಗಿ ಹೀಗೆ ಹಲವು ಕಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇದನ್ನೂ ಓದಿ: ಮಹಾಮಳೆಗೆ ನಲುಗಿದ ರಾಜ್ಯ ರಾಜಧಾನಿ- 100ಕ್ಕೂ ಹೆಚ್ಚು ಮನೆಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು

    ಮೃತರು ಪತ್ನಿ ಪಾರ್ವತಿ, ಮೂರು ಗಂಡು ಮತ್ತು ಮೂರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವೆಂಕಣ್ಣ ಬೊಮ್ಮಯ್ಯ ನಾಯಕ ಅವರ ಅಂತ್ಯಕ್ರಿಯೆಯು ಅಂಕೋಲದ ಸೂರ್ವೆಯಲ್ಲಿ ನಡೆಯಲಿದ್ದು, ಅಧಿಕಾರಿಗಳು ಮತ್ತು ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಜಮೀರ್ `ಗಣೇಶ’ ಅಸ್ತ್ರ – ಇಷ್ಟು ದಿನ ಇಲ್ಲದ್ದು ಈಗ್ಯಾಕೆ? ಶಾಸಕರ ನಡೆಗೆ ಸ್ಥಳೀಯರಿಂದ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ ಹೋರಾಟಗಾರರಲ್ಲ, ಸಾವರ್ಕರ್‌ ಒಬ್ಬ ಮೂಲಭೂತವಾದಿ: ಯತೀಂದ್ರ ಸಿದ್ದರಾಮಯ್ಯ

    ಸ್ವಾತಂತ್ರ ಹೋರಾಟಗಾರರಲ್ಲ, ಸಾವರ್ಕರ್‌ ಒಬ್ಬ ಮೂಲಭೂತವಾದಿ: ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ಸಾವರ್ಕರ್ ಏನು ಸ್ವಾತಂತ್ರ ಹೋರಾಟಗಾರರಲ್ಲ. ಸಾವರ್ಕರ್‌ ಮೂಲಭೂತವಾದಿ ಎಂದು ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

    ಟಿ.ನರಸೀಪುರದಲ್ಲಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎರಡನೇ ದರ್ಜೆಯ ಪ್ರಜೆಗಳಾಗಿ ಇರಬೇಕು. ಹಿಂದೂ ರಾಷ್ಟ್ರವನ್ನು, ಹಿಂದೂ ಅಧಿಕಾರ ಒಪ್ಪಿಕೊಂಡು ಎರಡನೇ ದರ್ಜೆ ನಾಗರೀಕರಾಗಿ ಇರಬೇಕೆಂದು ಹೇಳಿದ ಸಾವರ್ಕರ್ ಅನ್ಯಮತ ದ್ವೇಷಿ ಎಂದಿದ್ದಾರೆ.

    ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಇಡಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಮರನ್ನು ಸಾವರ್ಕರ್ ಯಾವತ್ತಿಗೂ ಭಾರತೀಯರು ಎಂದು ಒಪ್ಪಿಕೊಂಡಿರಲಿಲ್ಲ. ಹಾಗಾಗಿ ಸಹಜವಾಗಿ ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾಗಳಲ್ಲಿ ಇದ್ದಾಗ ಕೋಪ ಬರುತ್ತದೆ. ಹಿಂದೂ ಏರಿಯಾಗಳಲ್ಲಿ ಮುಸ್ಲಿಂ ನಾಯಕರ ಫೋಟೋ ಹಾಕಿದಾಗ ಕೋಪ ಬರುವುದಿಲ್ಲವೇ? ಹಾಗಾಗಿ ಮುಸ್ಲಿಂ ಏರಿಯಾಗಳಲ್ಲಿ ಸಾವರ್ಕರ್ ಫೋಟೋ ಹಾಕಿದಾಗ ಪ್ರಚೋದನಕಾರಿಯಾಗುತ್ತದೆ. ಇಂತಹ ಘಟನೆಗಳನ್ನು ತಡೆಗಟ್ಟುವುದನ್ನು ಬಿಟ್ಟು ಅನಗತ್ಯ ವಿಚಾರವನ್ನ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಹೇಳಉವ ಮೂಲಕ ತಂದೆಯ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋಮು ದ್ವೇಷ ಹೆಚ್ಚಾಗಿ ಹರಡುತ್ತಿದೆ. ಒಬ್ಬರೊನ್ನಬ್ಬರು ಸಾಯಿಸುವುದು ಕೊಲೆ ಮಾಡುವುದು ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಬದಲು ಮುಖ್ಯಮಂತ್ರಿಗಳೇ ಸ್ವತಃ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿಯ ವೈಫಲ್ಯತೆಯನ್ನ ಮುಚ್ಚಿ ಹಾಕಲು ಅನಗತ್ಯ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಹೋರಾಟಗಾರರ ಮಗಳ ಕಾಲು ಮುಟ್ಟಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

    ಸ್ವಾತಂತ್ರ್ಯ ಹೋರಾಟಗಾರರ ಮಗಳ ಕಾಲು ಮುಟ್ಟಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

    ಅಮರಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಆಂಧ್ರಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ ಪಸಲ ಕೃಷ್ಣ ಮೂರ್ತಿ ಅವರ ಕುಟುಂಬವನ್ನು ಭೇಟಿ ಮಾಡಿದರು.

    ಪಸಲ ಕೃಷ್ಣ ಮೂರ್ತಿ ಅವರ 90 ವರ್ಷದ ಪುತ್ರಿ ಪಸಲ ಭಾರತಿ, ಅವರ ಸಹೋದರಿ ಹಾಗೂ ಸೊಸೆಯನ್ನು ಮೋದಿ ಭೇಟಿ ಮಾಡಿದ್ದಾರೆ. ಈ ವೇಳೆ ಮೋದಿ ಭಾರತಿಯವರ ಕಾಲನ್ನು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ವ್ಹೀಲ್ ಚೇರ್‌ನಲ್ಲಿ ಕುಳಿತಿರುವ ಭಾರತಿ ಅವರ ಕಾಲನ್ನು ಮುಟ್ಟಿ ನಮಸ್ಕರಿಸುತ್ತಿರುವ ಮೋದಿಯವರ ಫೋಟೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಕೋವಿಡ್ ವೇಳೆ ಜನರ ಜೀವ ರಕ್ಷಣೆಗೆ ಮೋದಿಯವ್ರು ಹಗಲು-ರಾತ್ರಿ ಪ್ರಯತ್ನ ಮಾಡಿದ್ದಾರೆ: ಶೋಭಾ ಕರಂದ್ಲಾಜೆ

    ಪಸಲ ಕೃಷ್ಣ ಮೂರ್ತಿ ಅವರು 1900 ಇಸವಿಯಲ್ಲಿ ಪಶ್ಚಿಮ ಗೋದಾವರಿ ಜಿಲ್ಲೆಯ ತಾಡೆಪಲ್ಲಿಗುಡೆಂ ತಾಲೂಕಿನ ಪಶ್ಚಿಮ ವಿಪ್ಪರ್ರಿ ಗ್ರಾಮದಲ್ಲಿ ಜನಿಸಿದರು. ಅವರು 1921ರಲ್ಲಿ ತಮ್ಮ ಪತ್ನಿಯೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಗಾಂಧಿವಾದಿಯಾಗಿದ್ದ ಕೃಷ್ಣ ಮೂರ್ತಿ ಉಪ್ಪಿನ ಸತ್ಯಾಗ್ರಹ ಚಳವಳಿಯಲ್ಲಿ ಭಾಗವಹಿಸಿದ್ದರು. ಇದಕ್ಕಾಗಿ ಅವರಿಗೆ 1 ವರ್ಷದ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಕೃಷ್ಣ ಮೂರ್ತಿ 1978ರಲ್ಲಿ ನಿಧನರಾದರು. ಇದನ್ನೂ ಓದಿ: ಮಿಗ್ 29 ಬದಲಿಸಲು ಮಲೇಷ್ಯಾದ ಮೊದಲ ಆಯ್ಕೆ ಭಾರತದ ತೇಜಸ್

    ಆಂಧ್ರಪ್ರದೇಶದ ಭೀಮಾವರಂನಲ್ಲಿ ಇಂದು ನಡೆದ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನದ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು. ಈ ವಿಶೇಷ ಕಾರ್ಯಕ್ರಮದಲ್ಲಿ 30 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಮೋದಿ ಅನಾವಣಗೊಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಹೋರಾಟಗಾರ ಡಿ. ಮಾರಪ್ಪನವರಿಗೆ ಅಂತಿಮ ನಮನ ಸಲ್ಲಿಸಿದ ಸುಧಾಕರ್

    ಸ್ವಾತಂತ್ರ್ಯ ಹೋರಾಟಗಾರ ಡಿ. ಮಾರಪ್ಪನವರಿಗೆ ಅಂತಿಮ ನಮನ ಸಲ್ಲಿಸಿದ ಸುಧಾಕರ್

    ಚಿಕ್ಕಬಳ್ಳಾಪುರ: ಅನಾರೋಗ್ಯದಿಂದ ನಿಧನರಾದ ಸ್ವಾತಂತ್ರ್ಯ ಹೋರಾಟಗಾರರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಕೊಳವನಹಳ್ಳಿ ಗ್ರಾಮದ ಡಿ. ಮಾರಪ್ಪನವರ ಅಂತಿಮ ದರ್ಶನವನ್ನು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಪಡೆದಿದ್ದಾರೆ.

    ತಾಲೂಕಿನ ಕೊಳವನಹಳ್ಳಿ ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಡಿ.ಮಾರಪ್ಪನವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಸಾಹಿತಿಗಳು, ಶಿಕ್ಷಣ ಪ್ರೇಮಿಗಳು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ಮಾಡಿದಂತಹ ಧೀಮಂತ ವ್ಯಕ್ತಿಯ ಸಾವು ನಮಗೆಲ್ಲಾ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

    ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ಕೊಟ್ಟಿದ್ದರು. ಅನೇಕ ಪುಸ್ತಕಗಳನ್ನು ಸಹ ರಚನೆ ಮಾಡಿದ್ದರು. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದವರು. ಅವರನ್ನು ಕಳೆದುಕೊಂಡಿರುವುದು ಇಡೀ ಜಿಲ್ಲೆಯ ಜನತೆಗೆ ತುಂಬಲಾರದ ನಷ್ಟ ಅಂತ ಮಾರಪ್ಪನವರನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಶಾಲೆಗೆ ಆಗಮಿಸಿದ ಸಚಿವ ಸುಧಾಕರ್‌ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

  • ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸೂರಂ ರಾಮಯ್ಯ ಇನ್ನಿಲ್ಲ

    ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸೂರಂ ರಾಮಯ್ಯ ಇನ್ನಿಲ್ಲ

    ಬೆಂಗಳೂರು: 102 ವರ್ಷಗಳ ಸಾರ್ಥಕ ಜೀವನ ನಡೆಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೂರಂ ರಾಮಯ್ಯನವರು ಇಂದು ನಿಧನರಾಗಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದ ನಿವಾಸಿಯಾಗಿದ್ದ ಸೂರಂ ರಾಮಯ್ಯನವರು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ 3:30ಕ್ಕೆ ನಮ್ಮೆಲ್ಲರನ್ನು ಅಗಲಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಅವರು ಗಾಂಧೀಜಿಯವರ ವಿಚಾರಧಾರೆ ಮತ್ತು ಅವರ ಕರೆಗಳಿಗೆ ಆಕರ್ಷಿತರಾಗಿದ್ದರು.

    ಸ್ವಾತಂತ್ರ್ಯದ ನಂತರ ನಡೆದ ಎರಡನೇಯ ವಿಧಾನಸಭಾ ಚುನಾವಣೆಯಲ್ಲಿ 1969-72ರ ಅವಧಿಗೆ ಹೊಸಕೋಟೆ- ದೇವನಹಳ್ಳಿ ಜಂಟಿ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದರು. ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿಗಳ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

    ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಹೊಸಕೋಟೆ ತಾಲೂಕಿನಲ್ಲಿ ನಡೆಯುತ್ತಿದ್ದ ಪ್ರಜಾಸತ್ತಾತ್ಮಕ ಜನ ಚಳುವಳಿಗಳಲ್ಲಿ ವಿಶೇಷವಾಗಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನಡೆದ ರೈತರ ಹೋರಾಟಗಳಲ್ಲಿ, ಕಾರ್ಮಿಕರ ಹೋರಾಟಗಳಲ್ಲಿ ಹಾಗೂ ಸಿಪಿಐ(ಎಂ) ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.

    ನೂತನ ವಿದ್ಯುತ್ ಕಾಯ್ದೆ ಮತ್ತು ಮೀಟರಿಕರಣದ ವಿರುದ್ಧದ ಪ್ರಬಲ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕರ್ನಾಟಕ ಪ್ರಾಂತ ರೈತ ಸಂಘದ ಬೆಂಗಳೂರು ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಹಾಗೇಯೇ ಸಾಮಾಜಿಕ ಸಮಸ್ಯೆಗಳು, ಭ್ರಷ್ಟಾಚಾರದ ವಿರುದ್ಧವಾಗಿಯೂ ನಡೆದ ಹಲವು ಹೋರಾಟಗಳಲ್ಲಿ ಮತ್ತು ಹೋರಾಟ ರೂಪಿಸುವಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

    ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದ ಅವರು, ಸೂಲಿಬೆಲೆ ಒಳಗೊಂಡು ತಾಲೂಕಿನಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಜನ ಸಾಮಾನ್ಯರಿಗೆ ಶಿಕ್ಷಣವನ್ನು ನೀಡಿ ಸ್ವಾಭಿಮಾನ, ದೇಶಾಭಿಮಾನ ಮೂಡಿಸಲು ಶ್ರಮಿಸಿದ್ದರು. ಅದಕ್ಕಾಗಿ ಸ್ವಾಮಿ ವಿವೇಕಾನಂದ ವಿದ್ಯಾ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಿ ಅದರ ಸಂಸ್ಥಾಪಕ ಅಧ್ಯಕ್ಷರಾಗಿ ಶ್ರಮಿಸುತ್ತಾ ಬಂದಿದ್ದರು.ಸೂರಂ ರಾಮಯ್ಯನವರ ಅಗಲಿಕೆಯು ನಿಸ್ವಾರ್ಥತೆಯಿಂದ ತಮ್ಮನ್ನು ತೊಡಗಿಸಿಕೊಂಡ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಜನ ಚಳುವಳಿಗಳು ನೆಚ್ಚಿನ ಒಡನಾಡಿಯನ್ನು ಕಳೆದುಕೊಂಡಂತಾಗಿದೆ. ಇದನ್ನೂ ಓದಿ: ಬಿಎಸ್‍ವೈಗೆ ಸ್ವಾಭಿಮಾನ ಇದ್ದಿದ್ದರೆ ರಾಜೀನಾಮೆ ನೀಡಬೇಕಿತ್ತು: ವಿ.ಎಸ್ ಉಗ್ರಪ್ಪ

    ಅನೇಕ ಜನಪರ ಹೋರಾಟಗಳು, ಕಾರ್ಯಕ್ರಮಗಳಲ್ಲಿ ಮತ್ತು ಅತ್ಯಂತ ಸಂದಿಗ್ಧ ಹಾಗೂ ಸಂಕೀರ್ಣವಾದ ಸವಾಲುಗಳ ಎದುರಿಸುವುದರಲ್ಲಿ ನಡೆದ ಹೋರಾಟಗಳಲ್ಲಿ ಭಾಗವಹಿಸಿ ಸ್ಫೂರ್ತಿ ತುಂಬಿದ್ದು ಸ್ಮರಣೀಯವಾಗಿದೆ. ಹೊಸಕೋಟೆ ತಾಲೂಕಿನಲ್ಲಿ ಜೋಡಿ ಇನಾಮ್ತಿಗೆ ಪ್ರತಿರೋಧವಾಗಿ ನಡೆದ ಚಳುವಳಿಗಳಲ್ಲಿ ನಮ್ಮ ತಂದೆ ಎಂ.ಎಂ.ರಾಮಸ್ವಾಮಿರವರ ಒಡನಾಡಿಯಾಗಿದ್ದರು. ಅಂದಿನ ದಿನಗಳಲ್ಲಿ ಹೊಸಕೋಟೆ ತಾಲೂಕು ರಾಜಕೀಯ ಹಿಂಸಾಚಾರ ಮತ್ತು ದಬ್ಬಾಳಿಕೆಗಳಿಗೆ ಕುಖ್ಯಾತಿ ಆಗಿದ್ದನ್ನು ಅಂತಹ ಸನ್ನಿವೇಶದಲ್ಲಿ ಜನ ಚಳುವಳಿಗಳು ಮುನ್ನಡೆಯಲು ಸೂರಂ ರಾಮಯ್ಯನವರ ಭಾಗವಹಿಸುವಿಕೆ, ನೇತೃತ್ವಗಳು ಆತ್ಮ ವಿಶ್ವಾಸ, ಸ್ಫೂರ್ತಿಯನ್ನು ತುಂಬುತ್ತಿದ್ದವು ಎನ್ನುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು.

    ಸೂರಂ ರಾಮಯ್ಯನವರ ಅಗಲಿಕೆ ಸ್ವಾತಂತ್ರ್ಯ ಸಂಗ್ರಾಮದ ಒಂದು ಪ್ರಮುಖ ಕೊಂಡಿಯನ್ನು, ಜನಸ್ನೇಹಿಯನ್ನು ಕಳೆದುಕೊಂಡಂತಾಗಿದೆ. ಇದನ್ನೂ ಓದಿ:  ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿಯಾಗಿ ಘೋಷಣೆ ವಿಚಾರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ: ಜೋಶಿ

  • ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು- ನಾಲಿಗೆ ಹರಿಬಿಟ್ಟ ಯತ್ನಾಳ್

    ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು- ನಾಲಿಗೆ ಹರಿಬಿಟ್ಟ ಯತ್ನಾಳ್

    – ನೀವು ರಾಜಕಾರಣಕ್ಕೆ ಯಾಕೆ ಸೇರಿದ್ರಿ, ನಿಮ್ಮದೇನಿತ್ತು ಇಲ್ಲಿ ಮೂಲ
    – ಎಚ್‍ಡಿಕೆಗೆ ಯತ್ನಾಳ್ ಪ್ರಶ್ನೆ?

    ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾಲಿಗೆ ಹರಿಬಿಟ್ಟಿದ್ದಾರೆ.

    ದೊರೆಸ್ವಾಮಿ ಪಾಕ್ ಏಜೆಂಟ್ ಎಂಬ ಹೇಳಿಕೆಯನ್ನು ಸಾಣೆಹಳ್ಳಿ ಪಂಡಿತರಾದ್ಯ ಶ್ರೀಗಳು ಸಹ ಖಂಡಿಸಿದ್ದರು. ಹಿರಿಯ ಹೋರಾಟಗಾರರ ಬಗ್ಗೆ ಹಲವರು ಮಾತನಾಡಿದ್ದಾರೆ. ಹೀಗಾಗಿ ಆನೆ ನಡೆಯುವಾಗ ನಾಯಿಗಳು ಬೊಗಳಿದರೆ ಏನೂ ಆಗಲ್ಲ ಎಂದು ಸಾಣೇಹಳ್ಳಿ ಶ್ರೀ ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ್, ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು ಎಂದು ಹೇಳಿಕೆ ನೀಡಿದ್ದಾರೆ.

    ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಯತ್ನಾಳ್ ಹುಟ್ಟಿದ್ದರೋ ಇಲ್ಲವೋ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕುಮಾರಸ್ವಾಮಿ ಹುಟ್ಟಿದ್ರಾ? ಅಷ್ಟೇ ಅಲ್ಲದೆ ಊಟಕ್ಕೆ ಗತಿ ಇಲ್ಲದವರು ಸೇನೆಗೆ ಸೇರ್ತಾರೆ ಎಂದು ಹೇಳಿದ್ದ ಅವರಿಗೆ ನಾಚಿಕೆ ಆಗಬೇಕು. ಹಾಗಾದರೆ ನೀವು ಯಾಕೆ ರಾಜಕಾರಣಕ್ಕೆ ಸೇರಿದ್ರಿ? ನಿಮ್ಮದೇನಿತ್ತು ಮೂಲ? ನಿಮ್ಮ ತಂದೆಯವರು ವರ್ಕ್ ಇನ್ಸ್‌ಪೆಕ್ಟರ್ ಇದ್ರಾ? ನಿಮಗೆ ಸಾವಿರಾರು ಕೋಟಿ ಹೇಗೆ ಬಂತು? ನನ್ನ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.

    ನಿಮ್ಮ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವಗೌಡ ಅವರೇನದಾರು ಸ್ವಾತಂತ್ರ್ಯ ಸೈನಿಕರೇ? ರಾಜಕಾರಣಿಗಳಲ್ಲಿ ಹೊಂದಾಣಿಕೆ ಇರಬಹುದು. ಆದ್ರೆ ಯತ್ನಾಳ್ ಜೊತೆ ಯಾರಿಗೂ ಹೊಂದಾಣಿಕೆ ಆಗಲು ಸಾಧ್ಯವಿಲ್ಲ ಎಂದು ಗುಡುಗಿದರು.

    ವೀರ ಸಾವರ್ಕರ್ ಅವರಷ್ಟು ದೊರೆಸ್ವಾಮಿ ಅವರು ಲಾಠಿ ಏಟು ತಿಂದಿದ್ದಾರಾ? ಅವರು ಯಾವ ವಯಸ್ಸಿನಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿರಬಹುದು ಎಂದು ದೊರೆಸ್ವಾಮಿ ಅವರ ವಿರುದ್ಧೆ ಮತ್ತೊಮ್ಮೆ ಹರಿಹಾಯ್ದರು.

    ಪ್ರಧಾನಿ ನರೇಂದ್ರ ಮೋದಿ, ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮೊದಲು ಕ್ಷಮೆ ಬೇಡಲಿ. ರಾತ್ರಿ ಒಂದು, ಬೆಳಗ್ಗೆ ಒಂದು ಮಾತನಾಡುವ ಚಟ ಇರುವ ರಾಜಕಾರಣಿ ನಾನಲ್ಲ ಎಂದು ಹೇಳಿದರು.

    ಗೂಡ್ಸೆ ಸಂತತಿಯ ಯತ್ನಾಳ್ ಸದನದಲ್ಲಿ ಇರಲು ನಾಲಾಯಕ್ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಶಾಸಕರು, ರಮೇಶ್ ಕುಮಾರ್ ಅವರ ಇತಿಹಾಸ ಏನು, ಎಷ್ಟು ಭೂ ಕಬಳಿಕೆ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಬಹಳ ಸಾಚಾ ಎಂಬಂತೆ ಮಾತನಾಡುತ್ತಾರೆ. ಸತ್ಯಹರಿಶ್ಚಂದ್ರನ 19ನೇ ಸಂತತಿಯವರಂತೆ ಮಾತನಾಡುತ್ತಾರೆ. ಮೊದಲು ಅವರು ತಮ್ಮ ಮನೆ ಸ್ವಚ್ಛ ಮಾಡಿಕೊಳ್ಳಲಿ ಎಂದು ಗುಡುಗಿದರು.

    ನನ್ನ ಬಗ್ಗೆ ಮಾತಾಡುವ ನೈತಿಕತೆ ರಮೇಶ್ ಕುಮಾರ್ ಅವರಿಗೆ ಇಲ್ಲ. ಹಾಗೆಯೇ ನನ್ನ ಮೇಲೆ ನೀರಾವರಿ ಹೋರಾಟದ 23 ಕೇಸ್ ಗಳಿವೆಯೇ ಹೊರತು, ಭೂ ಕಬಳಿಕೆ, ಅತ್ಯಾಚಾರ, ನಕಲಿ ನೋಟ್ ಮಾಡಿರುವ ಪ್ರಕರಣಗಳಿಲ್ಲ. ರಮೇಶ್ ಕುಮಾರ್ ಅವರಿಂದ ಯಾವುದೇ ಆದರ್ಶ ತತ್ವ ಕಲಿಯುವ ಅವಶ್ಯಕತೆಯಿಲ್ಲ. ಯಾಕಂದ್ರೆ ನಾನು ಆರ್‍ಎಸ್‍ಎಸ್ ಅವರು ಏನ್ ಮಾಡ್ತಾರೆ ಎಂದು ಪ್ರಶ್ನಿಸಿದರು.

    ನಾನೇನು ದೇಶ ವಿರೋಧಿ ಅಲ್ಲ, ಪಾಕಿಸ್ತಾನ್ ಏಜೆಂಟ್ ಕೂಡ ಅಲ್ಲ. ದೇಶದ ಪರ ಮಾತನಾಡುತ್ತೇನೆ. ಯಾರ ಭಯವೂ ನನಗಿಲ್ಲ. ಪೊಲೀಸರು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದರೆ ಎರಡನೇ ದೆಹಲಿ ಮಂಗಳೂರು ಆಗುತ್ತಿತ್ತು. ದೆಹಲಿಯಲ್ಲಿ ಪೊಲೀಸರಿಗೆ ಬಂದೂಕು ತೋರಿಸುತ್ತಿದ್ದಾರೆ. ಅದನ್ನು ವಿರೋಧಿಸುವುದನ್ನು ಬಿಟ್ಟು ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರಿಗೆ ನಾಚಿಕೆ ಆಗಬೇಕು ಎಂದು ವಾಗ್ದಾಳಿ ನಡೆಸಿದರು.

    ಸಚಿವ ನಾರಾಯಣಗೌಡ ಮಹಾರಾಷ್ಟ್ರಕ್ಕೆ ಜೈಕಾರ ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರೇನು ಪಾಕಿಸ್ತಾನಕ್ಕೆ ಜೈ ಅಂದಿದ್ದಾರಾ? ನಮ್ಮ ದೇಶದ ಒಂದು ಭಾಗಕ್ಕೆ ಜೈ ಎಂದಿದ್ದಾರೆ. ಅದರಲ್ಲಿ ತಪ್ಪೇನಿದೆ? ಹುಬ್ಬಳ್ಳಿ, ಬೆಂಗಳೂರಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕುವಾಗ ಕನ್ನಡಪರ ಹೋರಾಟಗಾರರು ಎಲ್ಲಿ ಹೋಗಿದ್ರಿ. ನಮ್ಮ ದೇಶದಲ್ಲಿರುವ ಒಂದು ಭಾಗಕ್ಕೆ ಜೈಕಾರ ಹಾಕುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವರ ಪರ ಬ್ಯಾಟ್ ಬೀಸಿದರು.

  • ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಪಂಡಿತ್ ಸುಧಾಕರ ಚತುರ್ವೇದಿ ನಿಧನ

    ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಪಂಡಿತ್ ಸುಧಾಕರ ಚತುರ್ವೇದಿ ನಿಧನ

    _ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿ ಬೆಸ್ಟ್ ಫ್ರೆಂಡ್

    ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ವಿದ್ವಾಂಸ, ಶತಾಯುಷಿ ಪಂಡಿತ್ ಸುಧಾಕರ ಚತುರ್ವೇದಿ ಅವರು ಇಂದು ಬೆಳಗ್ಗೆ ದೈವಾಧೀನರಾಗಿದ್ದಾರೆ.

    ತುಮಕೂರಿನ ಕ್ಯಾತಸಂದ್ರದಲ್ಲಿ 20ನೇ ಏಪ್ರಿಲ್ 1897ರಲ್ಲಿ ಜನಿಸಿದ ಸುಧಾಕರ ಚತುರ್ವೇದಿ ಅವರು 125 ವರ್ಷ ಬದುಕಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ, ಗಾಂಧೀಜಿಯವರ ಬೆಸ್ಟ್ ಫ್ರೆಂಡ್ ಎನಿಸಿಕೊಂಡಿದ್ದರು. ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಚಳುವಳಿಯಾದ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷದರ್ಶಿಗಳೂ ಆಗಿದ್ದರು. ಜೊತೆಗೆ ದೇಶಕ್ಕಾಗಿ ಮಡಿದ ಹುತಾತ್ಮರಿಗೆ ಸಂಸ್ಕಾರ ಮಾಡುತ್ತಿದ್ದರು.

    ಸುಧಾಕರ ಚತುರ್ವೇದಿ ಅವರು ವೀರಸನ್ಯಾಸಿ ಸ್ವಾಮಿ ಶ್ರೀ ಶ್ರದ್ಧಾನಂದರ ಶಿಷ್ಯರಾಗಿ ವೇದಗಳ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ವೇದ ಪ್ರಚಾರಕ್ಕಾಗಿ ಸುಮಾರು ಐವತ್ತಕ್ಕೂ ಹೆಚ್ಚು ಕೃತಿಗಳನ್ನು ನಾಲ್ಕು ಭಾಷೆಗಳಲ್ಲಿ ರಚಿಸಿದ್ದಾರೆ. ಋಗ್ವೇದ ದರ್ಶನ ಭಾಗ-1, ಭಗವಾನ್ ಶ್ರೀರಾಮಚಂದ್ರ, ವೇದೋಕ್ತ ಜೀವನ ಪಥ, ಉಪನಿಷತ್ ಭಾಷ್ಯ, ಮುಂತಾದವುಗಳು ಇವರ ಜನಪ್ರಿಯ ಕೃತಿಗಳು. ಇದರ ಜೊತೆಗೆ ಇವರಿಗೆ ಅನೇಕ ಪ್ರಶಸ್ತಿಗಳು ಬಿರುದುಗಳು ನೆನಪಿನ ಫಲಕಗಳು ಸಂದಿವೆ.

    ಶಿಷ್ಯರ ಜೊತೆ ವಾರಕ್ಕೊಮ್ಮೆ ಸತ್ಸಂಗವನ್ನು ನಡೆಸುತ್ತಾ, ವಿಚಾರ ಮಂಥನ ನಗಿಸುತ್ತಿರುವುದೇ ಶತಾಯುಷಿಗಳ ಆರೋಗ್ಯದ ಗುಟ್ಟು ಎಂಬುದು ಕುಟುಂಬಸ್ಥರ ಅಭಿಪ್ರಾಯವಾಗಿದೆ.

  • ಯತ್ನಾಳ್ ಪರ ಬ್ಯಾಟ್ ಬೀಸಿ, ದೊರೆಸ್ವಾಮಿಗೆ ಸಲಹೆ ಕೊಟ್ಟ ಈಶ್ವರಪ್ಪ

    ಯತ್ನಾಳ್ ಪರ ಬ್ಯಾಟ್ ಬೀಸಿ, ದೊರೆಸ್ವಾಮಿಗೆ ಸಲಹೆ ಕೊಟ್ಟ ಈಶ್ವರಪ್ಪ

    – ಅಧಿವೇಶನ ನಡೆಸೋದಕ್ಕೆ ಹೇಗೆ ಬಿಡೋದಿಲ್ಲ ನೋಡ್ತೀನಿ

    ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ. ಇಷ್ಟೇ ಅಲ್ಲದೇ ದೊರೆಸ್ವಾಮಿ ಅವರಿಗೆ ಕಿವಿ ಮಾತು ಕೂಡ ಹೇಳಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸ್ವಾತಂತ್ರ್ಯ ಹೋರಾಟಗಾರರು, ಹಿರಿಯರಾದ ದೊರೆಸ್ವಾಮಿ ಅವರು ಪಕ್ಷಾತೀತರಾಗಿ ಇರಬೇಕು. ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ದೊರೆಸ್ವಾಮಿ ಅವರು ಯೋಚನೆ ಮಾಡಬೇಕು. ಕಾಂಗ್ರೆಸ್ ಏನು ಹೇಳುತ್ತದೆಯೋ ಹಾಗೆ ದೊರೆಸ್ವಾಮಿಯವರು ಕೂಡ ಹೇಳುತ್ತಿದ್ದಾರೆ. ಅವರು ಯಾವುದೋ ಒಂದು ಪಕ್ಷದ ಪರವಾಗಿರಬಾರದು. ಹೀಗೆ ಇದ್ದರೆ ಅವರ ಬಗ್ಗೆ ಹೇಗೆ ಗೌರವ ಬರುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನು ಯಾರಿಗೂ ಕ್ಷಮೆ ಕೋರುವ ಪ್ರಶ್ನೆಯೇ ಇಲ್ಲ: ಯತ್ನಾಳ್

    ನಾನು ಕೂಡ ದೊರೆಸ್ವಾಮಿಯವರ ಹೇಳಿಕೆಗಳನ್ನು ಖಂಡಿಸುತ್ತೇನೆ. ಯತ್ನಾಳ್ ಹೇಳಿಕೆ ವಿರುದ್ಧ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊಲೆಗಡುಕ ಎಂದು ಹೇಳಿದ್ದರು. ಆಗ ಕಾಂಗ್ರೆಸ್ ಅವರನ್ನು ಪಕ್ಷದಿಂದಲೇ ಹೊರಗೆ ಹಾಕಬೇಕಿತ್ತು. ಪ್ರಪಂಚ ಮೆಚ್ಚಿದ ಪ್ರಧಾನಿಯನ್ನು ಒಬ್ಬ ಸಾಮಾನ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ಕೊಲೆಗಡುಕ ಎಂದಿದ್ದರು ಎಂದು ಕಿಡಿ ಕಾರಿದರು.

    ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡಿದ್ದ ಸಿದ್ದರಾಮಯ್ಯ ಅವರು ಈಗ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ಕ್ಷಮೆ ಕೋರುವವರೆಗೂ ವಿಧಾನಸಭೆ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಅವರು ಹೇಗೆ ಬಿಡೋದಿಲ್ಲ ಎಂಬುದನ್ನು ನಾನು ನೋಡುತ್ತೇನೆ ಎಂದು ಸವಾಲು ಹಾಕಿದರು.

    ವಿಧಾನಸೌಧ ಏನು ಇವರ ಸ್ವಂತ ಆಸ್ತಿ ಅಲ್ಲ. ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿಧಾನಸೌಧವಿಲ್ಲ. ಮಾಜಿ ಸಿಎಂಗೆ ತಾವು ಏನು ಹೇಳಿಕೆ ನೀಡುತ್ತಿದ್ದೇನೆ ಎಂಬ ಕಲ್ಪನೆ ಕೂಡ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

    ರಾಷ್ಟ್ರ ದ್ರೋಹಿ ಅಮೂಲ್ಯಗೆ 20 ವಯಸ್ಸು. ಆದರೆ ಅವಳಿಗೆ ವಯಸ್ಸಿನ ಆಧಾರದ ಮೇಲೆ ನಾವು ವಿರೋಧ ವ್ಯಕ್ತಪಡಿಸಿಲ್ಲ. ದೇಶದ ವಿರುದ್ಧ ಘೋಷಣೆ ಕೂಗಿದ್ದಕ್ಕೆ ವಿರೋಧಿಸಿದ್ದೇವೆ. ಅದರಂತೆ ದೊರೆಸ್ವಾಮಿ ಅವರ ವಯಸ್ಸು ನೋಡಿ ವಿರೋಧ ಮಾಡುತ್ತಿಲ್ಲ. ಅವರು ಹಿರಿಯರಾಗಿ ಎಲ್ಲರಿಗೂ ಮಾರ್ಗದರ್ಶನ ಮಾಡಿದ್ದರೆ ಅವರನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ ಎಂದು ಶಾಸಕ ಯತ್ನಾಳ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.

    ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ಭಾರತದ ಜೊತೆ ನಾನು ನಿಲ್ಲುತ್ತೇನೆ ಎಂದು ಟ್ರಂಪ್ ಭರವಸೆ ನೀಡಿದ್ದಾರೆ. ಇದಕ್ಕಿಂತ ಮತ್ತೇನು ಬೇಕು ಎಂದು ಪ್ರಶ್ನಿಸಿದರು.

    ಚೈನಾ ಮತ್ತು ಪಾಕಿಸ್ತಾನ ರಾಷ್ಟ್ರಗಳೇ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೆ ಬಾಯಿ ಮುಚ್ಚಿಕೊಂಡಿವೆ. ಸಿದ್ದರಾಮಯ್ಯ ಅವರಿಗೆ ಯಾವುದರಿಂದ ಲಾಭವಾಗಿದೆ ಅಂತ ಮೊದಲು ಹೇಳಲಿ ಎಂದು ಲೇವಡಿ ಮಾಡಿದರು.