Tag: Freeze

  • ಕೆನಡಾದಲ್ಲಿ ಚಳಿಗೆ ಗುಜರಾತ್ ಮೂಲದ ನಾಲ್ವರು ಸಾವು

    ಕೆನಡಾದಲ್ಲಿ ಚಳಿಗೆ ಗುಜರಾತ್ ಮೂಲದ ನಾಲ್ವರು ಸಾವು

    ವಾಷಿಂಗ್ಟನ್: ಕೆನಡಾ ಗಡಿಯಿಂದ ಅಮೆರಿಕಕ್ಕೆ ನುಸುಳಲು ಯತ್ನಿಸುವ ವೇಳೆ ಮೈನಸ್ 35 ಡಿಗ್ರಿ ಸೆ. ಚಳಿಯನ್ನು ತಾಳಲಾರದೇ ಗುಜರಾತ್ ಮೂಲದ ಕುಟುಂಬವೊಂದು ಸಾವನ್ನಪ್ಪಿದೆ.

    ದುರ್ಘಟನೆಯಲ್ಲಿ ಒಂದು ಮಗು, ಇಬ್ಬರು ವಯಸ್ಕರು ಮತ್ತು ಒಬ್ಬರು ಹದಿಹರೆಯದವರು ಮೃತಪಟ್ಟಿದ್ದಾರೆ. ಈ ಕುಟುಂಬ ಮೂಲತಃ ಗುಜರಾತ್‍ನ ಗಾಂಧಿನಗರ ಜಿಲ್ಲೆಯ ಕಲೋಲ್ ತೆಹ್ಸಿಲ್‍ನ ಹಳ್ಳಿಯವರಾಗಿದ್ದಾರೆ.

    ಇವರ ಶವಗಳು ಕೆನಡಾ ಗಡಿಯಿಂದ ಕೆಲವೇ ಮೀಟರ್‌ಗಳ ಅಂತರದಲ್ಲಿ ಅಮೆರಿಕದಲ್ಲಿ ಪತ್ತೆಯಾಗಿತ್ತು. ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಂಪಿನಿಂದ ಈ ಕುಟುಂಬ ಬೇರ್ಪಟ್ಟ ಕಾರಣ ದಾರಿಕಾಣದೇ ಚಳಿಗೆ ಸಿಲುಕಿ ಸತ್ತಿರಬಹುದೆಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಈ ಗುಂಪಿನಲ್ಲಿದ್ದ ಇನ್ನೂ ಏಳು ಜನರನ್ನು ಯುಎಸ್ ಅಧಿಕಾರಿಗಳು ಬಂಧಿಸಿದ್ದಾರೆ.

    ಗ್ರಾಮದ ನಿವಾಸಿಯೊಬ್ಬರು ಈ ಬಗ್ಗೆ ಮಾತನಾಡಿ, ನಾಲ್ವರ ಕುಟುಂಬವಿದ್ದ ಗ್ರಾಮದ ನಿವಾಸಿಗಳ ಜೊತೆಗೆ ಇನ್ನೂ ಮೂರು-ನಾಲ್ಕು ಕುಟುಂಬಗಳು ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ನಾವು ಅವರ ಫೋಟೋವನ್ನು ಹಾಗೂ ವಿವರಗಳನ್ನು ವಿದೇಶಾಂಗ ಸಚಿವಾಲಯಕ್ಕೆ ಮೇಲ್ ಮಾಡಿದ್ದೇವೆ ಎಂದು ತಿಳಿಸಿದರು.

    ಮ್ಯಾನಿಟೋಬಾ ತಲುಪಿದ ಕೆನಡಾದಲ್ಲಿರುವ ನಮ್ಮ ಸ್ನೇಹಿತರೊಂದಿಗೆ ನಾವು ಸಂಪರ್ಕವನ್ನು ಮಾಡಿದ್ದೇವೆ. ಆದರೆ ಕೆನಡಾದ ಅಧಿಕಾರಿಗಳು ದೃಢೀಕರಣಕ್ಕಾಗಿ ಅವರನ್ನು ಆಸ್ಪತ್ರೆ ಒಳಗೆ ಅನುಮತಿಸುತ್ತಿಲ್ಲ ಎಂದು ಹೇಳಿದರು.  ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

    ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಯುಎಸ್ ಅಧಿಕಾರಿಗಳೊಂದಿಗೆ ಸಂಪರ್ಕಸಿದ್ದಾರೆ. ಬಂಧಿತ ಏಳು ಮಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಭಾರತೀಯ ಅವರಲ್ಲಿ ಒಬ್ಬ ಮಹಿಳೆ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಕ್ಯಾಂಟರ್‌ಗೆ ಸ್ಕೂಟರ್ ಡಿಕ್ಕಿ, ಇಬ್ಬರು ಸಾವು

  • ಯೋಧನ ಕುಟುಂಬದ ಮೇಲೆ ಹಲ್ಲೆ – ಜಿಲ್ಲಾಧಿಕಾರಿಗಳ ಮೊರೆ ಹೋದ ಸೈನಿಕ

    ಯೋಧನ ಕುಟುಂಬದ ಮೇಲೆ ಹಲ್ಲೆ – ಜಿಲ್ಲಾಧಿಕಾರಿಗಳ ಮೊರೆ ಹೋದ ಸೈನಿಕ

    ಬೆಳಗಾವಿ: ಯೋಧರೊಬ್ಬರ ಮನೆಯ ಮೇಲೆ ಕಲ್ಲುಗಳನ್ನು ಎಸೆದು ಮನೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

    ಬೆಳಗಾವಿ ಮಹಾನಗರದಿಂದ ಒಂದು ಕಿಲೋ ಮೀಟರ್ ದೂರದಲ್ಲಿರುವ ಗೌಂಡವಾಡ ಗ್ರಾಮದಲ್ಲಿ ಕರ್ತವ್ಯನಿರತರಾಗಿರುವ ಯೋಧ ದೀಪಕ್ ಪಾಟೀಲ್ ಎಂಬವರ ಮನೆಯ ಮೇಲೆ ಹಲ್ಲೆ ನಡೆಸಲಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್ – ಟಿವಿ ಸೇರಿದಂತೆ ಇತರ ವಸ್ತುಗಳನ್ನು ಧ್ವಂಸ ಮಾಡಿ ಇಡೀ ಕುಟುಂಬವನ್ನು ಊರಿನವರು ಬಹಿಷ್ಕಾರ ಹಾಕಿದ್ದಾರೆ.

    ಸದ್ಯ ಈ ಕಿರುಕಳ ಸಹಿಸಲಾರದೆ ದೇಶ ಕಾಯುವ ಯೋಧನ ಕುಟುಂಬ ಕಾಕತಿ ಪೊಲೀಸ್ ಠಾಣೆಗೆ ಮೊರೆ ಹೋಗಿದ್ದರೂ ಅಲ್ಲಿನ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅಲ್ಲದೆ ಮಕ್ಕಳು ದಿನಸಿ ಅಂಗಡಿಗೆ ಹೋಗಿ ಬಿಸ್ಕತ್ತು ಕೊಡಿ ಎಂದರೆ ಅಂಗಡಿಯವರು ನಮ್ಮಲ್ಲಿ ಬಿಸ್ಕತ್ತು ಇಲ್ಲ ಎಂದು ಮಕ್ಕಳಿಗೆ ಹೇಳಿ ಮರಳಿ ಕಳಿಸುತ್ತಾರೆ. ನಂತರ ಮಕ್ಕಳು ಅಮ್ಮನ ಬಳಿ ಬಂದು ಅಳುತ್ತಾರೆ. ಜೊತೆಗೆ ದೀಪಕ್ ಪಾಟೀಲ್‍ರವರ ದ್ವಿಚಕ್ರ ವಾಹನಕ್ಕೂ ಗ್ರಾಮಸ್ಥರು ಬೆಂಕಿ ಇಟ್ಟಿರುವುದಾಗಿ ಆರೋಪಿಸಿದ್ದಾರೆ.

    ಯೋಧ ದೀಪಕ್ ಸಂಬಂಧಿ ಅಶೋಕ್ ಪಾಟೀಲ್ ಅವರಿಗೆ ಸೇರಿದ ಐದು ಎಕರೆ ಜಮೀನು ವಿವಾದದಲ್ಲಿದ್ದು, ಗ್ರಾಮಸ್ಥರಿಗೂ ಹಾಗೂ ಯೋಧನ ಕುಟುಂಬಕ್ಕೆ ಜಗಳವಾಗಿದೆ ಎಂದು ಹೇಳಲಾಗುತ್ತಿದೆ. ಈಗ ಯೋಧ ನ್ಯಾಯಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಕೋಕ್ ಬಾಟಲ್ ಕೆಳಗಿಟ್ಟ ರೊನಾಲ್ಡೊ- ಕಂಪನಿಗೆ 29 ಸಾವಿರ ಕೋಟಿ ನಷ್ಟ

  • ಸಿಐಡಿ ಅಧಿಕಾರಿಗಳಿಂದ ರಾಹುಲ್ ದ್ರಾವಿಡ್ ಅಕೌಂಟ್ ಫ್ರೀಜ್

    ಸಿಐಡಿ ಅಧಿಕಾರಿಗಳಿಂದ ರಾಹುಲ್ ದ್ರಾವಿಡ್ ಅಕೌಂಟ್ ಫ್ರೀಜ್

    ಬೆಂಗಳೂರು: ವಿಕ್ರಮ್ ಇನ್ವೆಸ್ಟ್‌ಮೆಂಟ್‌ ನಲ್ಲಿ ಹೂಡಿಕೆ ಮಾಡಿದ್ದ ಭಾರತದ ಕ್ರಿಕೆಟ್ ವಾಲ್ ರಾಹುಲ್ ದ್ರಾವಿಡ್ ಅವರ ಖಾತೆಗಳನ್ನು ಸಿಐಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.

    ಹೌದು. ವಿಕ್ರಮ್ ಇನ್ವೆಸ್ಟ್‌ಮೆಂಟ್‌ನಲ್ಲಿ ಹೂಡಿಕೆ ಮಾಡಿದ್ದ ರಾಹುಲ್ ದ್ರಾವಿಡ್ ಅವರು ಹೂಡಿಕೆಗಿಂತ ಮೂರು ಪಟ್ಟು ಹೆಚ್ಚು ಲಾಭ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ದ್ರಾವಿಡ್ ಅವರಿಗೆ ಸಂಬಂಧಿಸಿದ ಎರಡು ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ.

    ಸಿಐಡಿ ಅಧಿಕಾರಿಗಳ ಮಾಹಿತಿ ಪ್ರಕಾರ, ವಿಕ್ರಮ್ ಇನ್ವೆಸ್ಟರ್ಸ್ ಕಂಪನಿ ನೋಂದಾಯಿತ ಕಂಪನಿಯಾಗಿರಲಿಲ್ಲ. ಅಲ್ಲದೇ ಹೂಡಿಕೆದಾರರಿಗೆ ಲಾಭಾಂಶವೂ ಹಿಂದಿರುಗುವುದಿಲ್ಲ. ಹೀಗಾಗಿ ಉಳಿದ ಸಂತ್ರಸ್ತರಿಗೆ ಹಣವನ್ನು ನೀಡುವ ಸಲುವಾಗಿ ಅಕೌಂಟ್ ಫ್ರೀಜ್ ಮಾಡಿದ್ದಾರೆಂದು ಹೇಳಲಾಗುತ್ತಿದೆ.

    ಈ ಹಿಂದೆಯೂ ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯವರ ತಂದೆ ಪ್ರಕಾಶ್ ಪಡುಕೋಣೆಯವರ ಅಕೌಂಟ್‍ಗಳನ್ನು ಸಿಐಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದರು. ಇದುವರೆಗೂ ಹೂಡಿಕೆಗಿಂತ ಮೂರು ಪಟ್ಟು ಲಾಭ ಪಡೆದ 280 ಖಾತೆಗಳನ್ನು ಸಹ ಸಿಐಡಿ ಫ್ರೀಜ್ ಮಾಡಿದೆ.

    ಬನಶಂಕರಿ ಪೊಲೀಸ್ ಠಾಣೆಯಲ್ಲಿ ವಿಕ್ರಮ್ ಇನ್ವೆಸ್ಟ್‌ಮೆಂಟ್‌ ವಂಚನೆ ಪ್ರಕರಣದ ದೂರು ದಾಖಲಾಗಿತ್ತು. ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸುತ್ತಿರುವ ಸಿಐಡಿ ಸಂಸ್ಥೆಯು ಸೂತ್ರಂ ಸುರೇಶ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv