Tag: friends

  • ಬಿಗ್‍ಬಾಸ್ ಮನೆಯಲ್ಲಿ ಆಲ್ಟರ್‌ನೇಟ್ ಮೂವಿ ರಹಸ್ಯ ಬಿಚ್ಚಿಟ್ಟ ರಾಜೀವ್!

    ಬಿಗ್‍ಬಾಸ್ ಮನೆಯಲ್ಲಿ ಆಲ್ಟರ್‌ನೇಟ್ ಮೂವಿ ರಹಸ್ಯ ಬಿಚ್ಚಿಟ್ಟ ರಾಜೀವ್!

    ಬಿಗ್‍ಬಾಸ್ ಮನೆಯ ಸದಸ್ಯರಿಗೆ ನಿನ್ನೆ ‘ಗುಟ್ಟೊಂದು ಹೇಳುವೇ’ ಎಂಬ ಚಟುವಟಿಕೆಯೊಂದನ್ನು ಬಿಗ್‍ಬಾಸ್ ನೀಡಿದ್ದರು. ಅದರಂತೆ ಮನೆಯ ಸದಸ್ಯರು ತಮ್ಮ ಜೀವನದಲ್ಲಿ ಇದುವರೆಗೂ ಯಾರಿಗೂ ಹೇಳಿರದ, ಹೊರಜಗತ್ತಿಗೆ ಗೊತ್ತಿಲ್ಲದ ಗುಟ್ಟೊಂದನ್ನು ಹೇಳಬೇಕೆಂದು ತಿಳಿಸಿದ್ದರು. ಈ ವೇಳೆ ಕೆಲವು ಮನೆಯ ಸದಸ್ಯರು ತಮ್ಮ ಜೀವನದ ಕಹಿ ಘಟನೆಯನ್ನು ಹಂಚಿಕೊಂಡರೆ, ಇನ್ನೂ ಕೆಲವರು ಸಿಹಿ ಘಟನೆಗಳನ್ನು ಹಂಚಿಕೊಂಡರು. ಆದರೆ ಎಲ್ಲರ ಮಧ್ಯೆ ರಾಜೀವ್ ಮಾತ್ರ ಹಾಸ್ಯಮಯ ಘಟನೆಯೊಂದನ್ನು ದೊಡ್ಮನೆಯಲ್ಲಿ ರಿವೀಲ್ ಮಾಡಿದ್ದಾರೆ.

    ಹೌದು, ಕ್ರಿಕೆಟಿಗ ರಾಜೀವ್ ಹಾಗೂ ಅವರ 16 ಮಂದಿ ಸ್ನೇಹಿತರು ಒಮ್ಮೆ ಆಲ್ಟರ್‌ನೇಟ್ ಮೂವಿ ನೋಡಲು ಪ್ಲಾನ್ ಮಾಡಿದ್ದರಂತೆ. ಅದರಂತೆ ಲೋಕೇಶ್ ರಾವ್ ಎಂಬ ಸ್ನೇಹಿತನೊಬ್ಬನ ತಂದೆಗೆ ನೈಟ್ ಶಿಫ್ಟ್ ಕೆಲಸ ಇದ್ದಿದ್ದರಿಂದ ಎಲ್ಲರೂ ಅವರ ಮನೆಯಲ್ಲಿ ಆಲ್ಟರ್‌ನೇಟ್ ಮೂವಿ ನೋಡಲು ಹೋಗಿದ್ದರಂತೆ. ಈ ವೇಳೆ ಒಂದು ಸಿಡಿ ಚೆನ್ನಾಗಿಲ್ಲ ಅದನ್ನು ಬದಲಾಯಿಸಿಕೊಂಡು ಬರುತ್ತೇನೆ ಎಂದು ಲೋಕೇಶ್ ಸಿಡಿ ಅಂಗಡಿಗೆ ಹೋದ. ಆಗ 10 ನಿಮಿಷದ ಬಳಿಕ ಲೋಕೇಶ್ ತಂದೆ ಬಾಗಿಲು ತೆರೆದು ಮನೆಗೆ ಎಂಟ್ರಿ ಕೊಟ್ಟರು. ಇದನ್ನು ಕಂಡು ಅವರ ತಂದೆ ಏನು ಮಾತನಾಡದೇ ಸಿದಾ ರೂಮ್‍ಗೆ ಹೋಗಿ ಬಾಗಿಲು ಹಾಕಿಕೊಂಡರು. ನಾವೆಲ್ಲರೂ ಗಾಬರಿಯಿಂದ ಅಲ್ಲಿಂದ ಪರಾರಿಯಾದ್ವಿ. ಬಳಿಕ ಲೋಕೇಶ್ ಮನೆಗೆ ಹೋಗಿದ್ದಾನೆ. ಆಗಲೂ ಕೂಡ ಅವರ ಮನೆಯಲ್ಲಿ ಏನೂ ನಡೆದಿಲ್ಲ.

    ನಾವೆಲ್ಲ ಅವನು ಗ್ರೌಂಡ್‍ಗೆ ಬರುವುದನ್ನೇ ಕಾಯುತ್ತಿದ್ದೆವು. ಸ್ವಲ್ಪ ಸಮಯದ ಬಳಿಕ ಬಂದ ಲೋಕೇಶ್‍ಗೆ ಮನೆಯಲ್ಲಿ ಏನು ನಡೆದಿದೆ ಎಂಬ ವಿಚಾರವನ್ನೆಲ್ಲಾ ವಿವರಿಸಿದೆವು. ಆಗ ಅವನಿಗೆ ನಡೆದ ವಿಚಾರ ತಿಳಿಯಿತು. ಆದರೆ ಒಂದು ವಾರದ ಬಳಿಕ ಈ ಕೋಪ ತೀರಿಸಿಕೊಳ್ಳಲು ಅವರ ತಂದೆ, ಯಾವುದೋ ಬೇರೆ ವಿಚಾರಕ್ಕೆ ಮೊಟ್ಟೆಕಡ್ಡಿ ಪೊರಕೆ ಕಿತ್ತು ಹೋಗುವಂತೆ ಅವರ ಅಮ್ಮನ ಕೈನಲ್ಲಿ ಲೋಕೇಶ್‍ಗೆ ಹೊಡೆಸಿದ್ದಾರೆ. ಅದು ಹೇಗೆಂದರೆ ಅವನನ್ನು ಕೇಳು ಒಂದು ವಾರದ ಹಿಂದೆ ಏನು ಮಾಡಿದ್ದಾನೆ ಎಂದು ಹೇಳುತ್ತಾ ಹೊಡೆಸಿದ್ದಾರೆ. ಈ ವಿಚಾರವನ್ನು ಅವನು ಅವರಮ್ಮನಿಗೂ ಹೇಳಲು ಆಗುತ್ತಿಲ್ಲ. ಅವರಪ್ಪಗೆ ಕೂಡ ಅವರಮ್ಮನ ಹತ್ತಿರ ಹೇಳಲು ಆಗುತ್ತಿಲ್ಲ. ಮನೆಯಲ್ಲಿ ಹೊಡೆಯುತ್ತಿರುವ ವಿಚಾರವನ್ನು ಲೋಕೆಶ್‍ಗೆ ನಮ್ಮ ಬಳಿ ಕೂಡ ಹೇಳಿಕೊಳ್ಳಲು ಆಗುತ್ತಿಲ್ಲ ಎಂದು ಹೇಳುತ್ತಾ ಎಲ್ಲರೂ ನಕ್ಕಿದ್ವಿ.

    ಹೀಗೆ ರಾಜೀವ್ ಹೇಳಿದ ಕಾಮಿಡಿ ಸ್ಟೋರಿ ಕೇಳಿ ಮನೆಯ ಸದಸ್ಯರು ಎದ್ದುಬಿದ್ದು ನಗುತ್ತಾ ಸಖತ್ ಎಂಜಾಯ್ ಮಾಡಿದ್ರು.

  • ಪೋಷಕರು ಬೈದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಸಾವು

    ಪೋಷಕರು ಬೈದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಸಾವು

    ರಾಯಚೂರು: ಕಾಲೇಜಿಗೆ ಹೋಗುವಂತೆ ಪೋಷಕರು ಬೈದಿದ್ದಕ್ಕೆ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ.

    ಲಿಂಗಸುಗೂರು ತಾಲೂಕಿನ ಗುಂತಗೋಳ ಗ್ರಾಮದ ಮೊದಲ ವರ್ಷ ಬಿಎ ವಿದ್ಯಾರ್ಥಿ ಮಂಜುನಾಥ್ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ವಿಷಸೇವನೆ ಮಾಡಿ ಗ್ರಾಮದಿಂದ ತನ್ನ ವಸತಿ ನಿಲಯಕ್ಕೆ ಬಂದಿದ್ದ ವಿದ್ಯಾರ್ಥಿ ಮನೆಯಲ್ಲಿ ಜಗಳವಾಗಿದ್ದಕ್ಕೆ ವಿಷ ಸೇವಿಸಿರುವುದಾಗಿ ಸ್ನೇಹಿತರಿಗೆ ಹೇಳಿಕೊಂಡಿದ್ದಾನೆ. ಅಸ್ವಸ್ಥಗೊಂಡ ವಿದ್ಯಾರ್ಥಿಯನ್ನು ಸ್ನೇಹಿತರು ಕೂಡಲೇ ಲಿಂಗಸುಗೂರು ತಾಲೂಕಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

    ಲಿಂಗಸುಗೂರು ಪರಿಶಿಷ್ಟ ವರ್ಗಗಳ ವಸತಿನಿಲಯದಲ್ಲಿದ್ದ ವಿದ್ಯಾರ್ಥಿ, ಎಂಟತ್ತು ದಿನಗಳಿಂದ ತನ್ನ ಗ್ರಾಮದಲ್ಲೇ ಉಳಿದಿದ್ದ. ಕಾಲೇಜಿಗೆ ಹೋಗುವಂತೆ ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ ಜಗಳವಾಡಿ ಬಂದಿದ್ದ ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗೆಳೆಯನ ಮರಣದ ದಿನವನ್ನು ರಕ್ತದಾನ ಮಾಡುವ ಮೂಲಕ ನೆನಪಿಸಿದ ಸ್ನೇಹಿತರು

    ಗೆಳೆಯನ ಮರಣದ ದಿನವನ್ನು ರಕ್ತದಾನ ಮಾಡುವ ಮೂಲಕ ನೆನಪಿಸಿದ ಸ್ನೇಹಿತರು

    ಹಾವೇರಿ: ಗೆಳೆಯನ ಮರಣದ ದಿನದಂದು ಆತನ ಸ್ಮರಣಾರ್ಥವಾಗಿ ಗ್ರಾಮದ ಯುವಕರು ಹಾಗೂ ಗೆಳೆಯರು ಸೇರಿ ರಕ್ತದಾನ ಶಿಬಿರ ಮಾಡುವ ಮೂಲಕ ವಿಶೇಷ ಕಾರ್ಯಕ್ರಮ ಮಾಡಿದ್ದಾರೆ.

    ಹಾವೇರಿಯ ಮರೋಳ ಗ್ರಾಮದ ಮಾರುತಿ ಹೆಗ್ಗಪ್ಪ ಹೆಸ್ಕಾಂ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ತಂತಿ ಸ್ವರ್ಶಿಸಿ ಕಳೆದ ವರ್ಷ ಮೃತಪಟ್ಟಿದ್ದರು. ಹಾಗಾಗಿ ಈ ವರ್ಷ ಅದೇ ದಿನ ಸ್ನೇಹಿತರೆಲ್ಲಾ ಸೇರಿ ಮರೋಳ ಗ್ರಾಮದಲ್ಲಿ ರಕ್ತದಾನ ಶಿಬಿರ ಮಾಡುವ ಮೂಲಕ ಅರ್ಥಪೂರ್ಣವಾಗಿ ಗೆಳೆಯನನ್ನು ನೆನಪಿಸಿಕೊಂಡಿದ್ದಾರೆ.

    ಗ್ರಾಮದ ಸ್ನೇಹಜೀವಿ ಗೆಳೆಯರ ಬಳಗ, ಸರ್ಕಾರಿ ಪ್ರೌಢಶಾಲೆಯ ಮರೋಳ ಹಾಗೂ ಸ್ನೇಹ ಮೈತ್ರಿ ಬ್ಲಡ್ ಆರ್ಮಿ ಅಕ್ಕಿಆಲೂರು ಇದರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

    ರಕ್ತದಾನ ಶಿಬಿರವನ್ನು 35 ಬಾರಿ ರಕ್ತದಾನ ಮಾಡಿದ ರಕ್ತಸೈನಿಕ ವಿಜಯಕುಮಾರ್ ದೇವರಗುಂಡಿಮಠ ಉದ್ಘಾಟಿಸಿದರು. ಗ್ರಾಮದ ಗೆಳೆಯರು ಹಾಗೂ ಯುವಕರು ಸೇರಿ ಒಟ್ಟು 61 ಜನ ರಕ್ತದಾನ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ರಕ್ತದಾನಿ ವಿಜಯಕುಮಾರ್ ಸ್ವತಃ 35ನೇ ಬಾರಿ ರಕ್ತದಾನ ಮಾಡಿ ಯುವಕರಿಗೆ ಪ್ರೇರಣೆ ನೀಡಿದರು. ಜಿಲ್ಲಾ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು ಶಿಬಿರದಲ್ಲಿ ಭಾಗವಹಿಸಿದ್ದರು.

  • ಮಿಸ್ ಯೂ, ಮರಳಿ ಬಾ ಅಂತ ಗೆಳೆಯರ ಪೋಸ್ಟ್ – ಸಾವಿನ ಕದ ತಟ್ಟಿ ಬಂದ ಯುವಕ

    ಮಿಸ್ ಯೂ, ಮರಳಿ ಬಾ ಅಂತ ಗೆಳೆಯರ ಪೋಸ್ಟ್ – ಸಾವಿನ ಕದ ತಟ್ಟಿ ಬಂದ ಯುವಕ

    – ಜೀವಂತ ಇರುವಾಗಲೇ ಪೋಸ್ಟ್ ಮಾರ್ಟಮ್‍ಗೆ ಸಿದ್ಧತೆ

    ಬಾಗಲಕೋಟೆ: ಶವಾಗಾರ ತಲುಪಿ ಪವಾಡ ಸದೃಶ ರೀತಿಯಲ್ಲಿ ಯುವಕನೋರ್ವ ಸಾವಿನ ಮನೆಯ ಬಾಗಿಲು ತಟ್ಟಿ ವಾಪಸ್ ಬಂದಿರುವ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಲಿಂಗಪುರದಲ್ಲಿ ನಡೆದಿದೆ.

    ಮಹಾಲಿಂಗಪುರದ ನಿವಾಸಿ ಶಂಕರ್ ಗೊಂಬಿ (27) ಎಂಬ ಯುವಕನೇ ಮರಣೋತ್ತರ ಪರೀಕ್ಷೆ ನಡೆಸುವ ಕೋಣೆ ತಲುಪಿ ಜೀವಂತವಾಗಿದ್ದೇನೆಂದು ವಾಪಸ್ ಬಂದಿದ್ದಾನೆ.

    ಕಳೆದ ಫೆಬ್ರವರಿ 27 ರಂದು ರಸ್ತೆ ದಾಟುವಾಗ ಮಹಲಿಂಗಪುರ ಪಟ್ಟಣದ ಬಳಿ ಬೈಕಿಗೆ ಕಾರು ಡಿಕ್ಕಿ ಹೊಡೆದು ಶಂಕರ್ ತಲೆಗೆ ತೀವ್ರವಾಗಿ ಗಾಯಗಳಾಗಿತ್ತು. ಹೀಗಾಗಿ ಶಂಕರ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬದುಕುವ ಸಾಧ್ಯತೆ ಕಡಿಮೆ ಇದ್ದು, ವೆಂಟಿಲೇಟರ್ ಅಳವಡಿಸಿ ಅಂಬುಲೆನ್ಸ್ ಮೂಲಕ ವೈದ್ಯರು ಶಂಕರ್ ನನ್ನ ವಾಪಸ್ ಮನೆಗೆ ಕಳುಹಿಸಿದ್ದರು. ಅಂಬುಲೆನ್ಸ್ ನಲ್ಲಿ ಮಾರ್ಗಮಧ್ಯೆ ತೀರಿ ಹೋಗಿದ್ದಾನೆಂದು ಸುದ್ದಿ ಹರಡಿಬಿಟ್ಟಿತ್ತು. ಹೀಗಾಗಿ ಶಾಂಕರ್ ನನ್ನು ಮಹಲಿಂಗಪುರದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

    ಮರಣೋತ್ತರ ಪರೀಕ್ಷೆಯ ಕೋಣೆಯಲ್ಲಿ ಕೈ ಕಾಲು ಅಲುಗಾಡಲು ಶುರುಮಾಡಿವೆ. ವಿಷಯ ತಿಳಿದು ಹಿರಿಯ ವೈದ್ಯರು ಬಂದು ತಪಾಸಣೆ ಮಾಡಿದಾಗ, ಶಂಕರ್ ಬದುಕಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇಷ್ಟೆಲ್ಲ ಘಟನೆ ನಡೆಯುವ ವೇಳೆಗೆ ಶಂಕರ್ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಮಿಸ್ ಯೂ, ಮರಳಿ ಬಾ ಅಂತ ಶೃದ್ಧಾಂಜಲಿ ಪೋಸ್ಟ್ ಹಾಕುವ ಮೂಲಕ ಶೋಕ ವ್ಯಕ್ತಪಡಿಸಿದ್ದಾರೆ.

    ಮರಳಿ ಬಾರದೂರಿಗೆ ಪಯಣ ಎಂದು ಶೋಕ ಗೀತೆ ಮೂಲಕವೂ ಶಂಕರ್ ಗೆ ಶೃದ್ಧಾಂಜಲಿಯನ್ನ ಸಲ್ಲಿಸಿದ್ದರು. ಸದ್ಯ ಮತ್ತೆ ಸ್ನೇಹಿತ ಬದುಕಿರೋ ಸುದ್ದಿ ತಿಳಿದು ಕುಟುಂಬಸ್ಥರು ಹಾಗೂ ಸ್ನೇಹಿತರ ಬಳಗದಲ್ಲಿ ಸಮಾಧಾನ ಮೂಡಿದೆ. ಈಗ ಸ್ನೇಹಿತರು ಸೋಶಿಯಲ್ ಮೀಡಿಯಾದಲ್ಲಿ ಶೃದ್ಧಾಂಜಲಿ ಪೋಸ್ಟ್ ತೆಗೆದಿದ್ದು ಸ್ನೇಹಿತ ಬದುಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

    ಒಟ್ಟಾರೆ ಶಂಕರ್ ಬದಿಕಿರುವಾಗಲೇ ಮೃತನಾಗಿದ್ದಾನೆಂದು ಆತನ ಸ್ನೇಹಿತರು ಶೋಕ ಶ್ರದ್ಧಾಂಜಲಿ ಮಾಡಿದ್ರೆ, ಇತ್ತ ಮರಣೋತ್ತರ ಪರೀಕ್ಷೆ ವೇಳೆ ಬದುಕುಳಿದಿರೋದು ಬೆಳಕಿಗೆ ಬಂದಿದೆ. ಶಂಕರ್ ಬದುಕಿರುವಾಗಲೇ ಸಾವಿನ ಬಾಗಿಲು ತಲುಪಿ ಬಂದಂತಾಗಿದೆ.

  • ಪತಿ ಜಗಳ ಬಿಡಿಸಲು ಹೋದ ಮಹಿಳೆಗೆ ಗರ್ಭಪಾತ

    ಪತಿ ಜಗಳ ಬಿಡಿಸಲು ಹೋದ ಮಹಿಳೆಗೆ ಗರ್ಭಪಾತ

    ಚಾಮರಾಜನಗರ: ಪತಿಯ ಮೇಲೆ ನಡೆಸುತ್ತಿದ್ದ ಜಗಳ ಬಿಡಿಸಲು ಹೋದ ಮಹಿಳೆ ಹಲ್ಲೆಗೊಳಗಾಗಿ ಮಹಿಳೆಯೆ ಗರ್ಭಪಾತ ಆಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೋಕು ಉತ್ತಂಬಳ್ಳಿಯಲ್ಲಿ ನಡೆದಿದೆ.

    ಹಲ್ಲೆಗೊಳಗಾದ ಮಹಿಳೆಯನ್ನು ಮಾದೇವಿ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಮಹಿಳೆ ಗಂಡ ಸೋಮು ಎಂಬಾತನ ಮೇಲೆ ಮಾದೇಶ್ ಹಾಗೂ ಇತರ ಸ್ನೇಹಿತರು ಜಗಳ ಮಾಡಿದ್ದಾರೆ. ಈ ವೇಳೆ ಪತಿಯನ್ನು ಜಗಳದಿಂದ ಬಿಡಿಸಲು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಾದೇವಿ ಮುಂದಾಗಿದ್ದಾರೆ.

    ಜಗಳ ನಡೆಯುತ್ತಿದ್ದ ಸಮಯದಲ್ಲಿ ಮಾದೇವಿ ಅಡ್ಡ ಬಂದಿದ್ದಕ್ಕೆ ಕೋಪಗೊಂಡ ಮಾದೇಶ್ ಮಹಿಳೆ ಹೊಟ್ಟೆಗೆ ಕಾಲಿನಿಂದ ಜೋರಾಗಿ ಒದ್ದಿದ್ದಾನೆ. ಒದೆತದಿಂದ ಮಾದೇವಿ ಗಂಭೀರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಘಟನೆ ಕುರಿತಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಆರೋಪಿ ಮಾದೇಶ ಹಾಗು ಸ್ನೇಹಿತರಾದ ಶಿವಣ್ಣ, ಗೋವಿಂದ ಎಂಬಾವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ಅತ್ಯಾಚಾರಗೈದು ವೀಡಿಯೋ ಶೇರ್ – ಶೃಂಗೇರಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೇಸ್

    ಅತ್ಯಾಚಾರಗೈದು ವೀಡಿಯೋ ಶೇರ್ – ಶೃಂಗೇರಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೇಸ್

    ಚಿಕ್ಕಮಗಳೂರು: ಶೃಂಗೇರಿಯಲ್ಲಿ 15 ವರ್ಷದ ಅಪ್ರಾಪ್ತೆ ಮೇಲೆ 30ಕ್ಕೂ ಹೆಚ್ಚು ಜನ ಅತ್ಯಾಚಾರಗೈದ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ರಸ್ತೆ ಮಧ್ಯೆ ಅಡ್ಡಗಟ್ಟಿ ಹೆದರಿಸಿ ಮನೆಗೆ ಕರೆದೊಯ್ದು ಅತ್ಯಾಚಾರಗೈದು ವೀಡಿಯೋ ಮಾಡಿಕೊಂಡು ಸ್ನೇಹಿತರಿಗೆ ಶೇರ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

    ಜಿಲ್ಲೆಯ ಗ್ರಾಮೀಣ ಭಾಗದ ಕುಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಶೃಂಗೇರಿ ಹಾಗೂ ಈ ಘಟನೆಯಿಂದ ಜಿಲ್ಲೆಯ ಮಲೆನಾಡು ಭಾಗದ ಜನ ಆತಂಕಕ್ಕೀಡಾಗಿ, ಮಕ್ಕಳನ್ನು ಹೇಗೆ ಶಾಲೆಗೆ ಕಳಿಸುವುದು ಎಂದು ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ.

    ಶಾಲೆಗಾಗಿ 4 ಕಿ.ಮೀ. ನಡಿಗೆ

    ಎಂಟನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಗಾಗಿ ಪ್ರತಿ ದಿನ ನಾಲ್ಕು ಕಿ.ಮೀ. ನಡೆದು ಬರುತ್ತಿದ್ದಳು. ಹೀಗೆ ಆ ದಿನ ಶಾಲೆಗೆ ಬರುವಾಗ ಅದೇ ಊರಿನ ಯುವಕ ಅಡ್ಡಗಟ್ಟಿ ಮನೆಗೆ ಕರೆದು ಹೆದರಿಸಿ ಕೃತ್ಯ ಎಸಗಿ ವಿಡಿಯೋ ಹಾಗೂ ಫೋಟೋ ಮಾಡಿಕೊಂಡು ಸ್ನೇಹಿತರಿಗೆ ಶೇರ್ ಮಾಡಿದ್ದ. ಕರೆದಾಗ ಬರಬೇಕು. ಇಲ್ಲವಾದರೆ, ಸಾಮಾಜಿಕ ಜಾಲತಾಣಕ್ಕೆ ಹಾಕುವುದಾಗಿ ಹೆದರಿಸಿದ್ದಾನೆ. ಬಾಲಕಿ ನಡೆದ ವಿಷಯನ್ನು ಪೋಷಕರಿಗೆ ತಿಳಿಸಿದ್ದು ನಂತರ ಸಂಬಂಧಪಟ್ಟ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೊ ಶೇರ್ ಮಾಡಿದ್ದ ವಿಡಿಯೋವನ್ನು ನೋಡಿದ್ದ ಗೆಳೆಯರನ್ನ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಐದು ತಿಂಗಳ ಹಿಂದೆ 15 ವರ್ಷದ ಅಪ್ರಾಪ್ತೆ ಮೇಲೆ 30ಕ್ಕೂ ಹೆಚ್ಚು ಜನ ಅತ್ಯಾಚಾರಗೈದ ಸುದ್ದಿ ಕೇಳಿಯೇ ಮಲೆನಾಡಿಗರು ಬೆಚ್ಚಿ ಬಿದ್ದಿದ್ದರು. ಶೃಂಗೇರಿ ಪ್ರಕರಣ ಮಾಸುವೇ ಮುನ್ನವೇ ಮತ್ತೊಂದು ಅದೇ ರೀತಿಯ ಪ್ರಕರಣ ನಡೆದಿರುವುದು ಜಿಲ್ಲೆಯ ಜನರನ್ನು ದೃತಿಗೇಡುವಂತೆ ಮಾಡಿದೆ.

    ಭವಿಷ್ಯದ ಬಗ್ಗೆ ಮಲೆನಾಡಿಗರು ಕಂಗಾಲು 

    ಜಿಲ್ಲೆಯ ಮಲೆನಾಡು ಭಾಗ ಬಹುತೇಕ ಬೆಟ್ಟಗುಡ್ಡಗಳಿಂದ ಕೂಡಿದೆ. ಕುಗ್ರಾಮಗಳೇ ಹೆಚ್ಚು. ಇಲ್ಲಿನ ಬಹುತೇಕ ಭಾಗದ ಮಕ್ಕಳು ಶಾಲೆಗೆ ಬರಬೇಕೆಂದರೆ ಕನಿಷ್ಟ 2-3 ಕಿ.ಮೀ ನಡೆಯಬೇಕು. ಮೇಲಿಂದ ಮೇಲೆ ಇಂತಹ ಪ್ರಕರಣ ನಡೆಯುತ್ತಿದ್ದು ಮಲೆನಾಡಿಗರು ಭವಿಷ್ಯದ ಬಗ್ಗೆ ಭಯಗೊಂಡಿದ್ದಾರೆ. ಮಕ್ಕಳನ್ನು ಹೇಗೆ ಶಾಲೆಗೆ ಕಳಿಸೋದು ಎಂದು ಕಂಗಾಲಾಗಿದ್ದಾರೆ. ಎರಡು ಪ್ರಕರಣಗಳಲ್ಲೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಯಾವುದೇ ಮುಲಾಜಿಗೂ ಒಳಗಾಗದೆ ಆರೋಪಿಗಳಿಗೆ ತಕ್ಕ ಶಾಸ್ತಿ ಮಾಡಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.

  • ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಅಬಕಾರಿ ಅಧಿಕಾರಿ, ಮೂವರು ಐಟಿ ಉದ್ಯೋಗಿಗಳ ದುರ್ಮರಣ

    ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಅಬಕಾರಿ ಅಧಿಕಾರಿ, ಮೂವರು ಐಟಿ ಉದ್ಯೋಗಿಗಳ ದುರ್ಮರಣ

    ಹಾಸನ: ಕಂಟೈನರ್‌ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಸೇರಿದಂತೆ ಮೂವರು ಐಟಿ ಉದ್ಯೋಗಿಗಳು ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

    ಅಪಘಾತದಲ್ಲಿ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ. ಈ ನಾಲ್ವರೂ ಸ್ನೇಹಿತರಾಗಿದ್ದು ಒಂದೇ ಕಾರಿನಲ್ಲಿ ಪ್ರಯಾಣ ಬೆಳಸುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

    ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಹಾಸನ ಕಡೆಗೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಸಮೀಪ ಕಂಟೈನರ್‌ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪತಿಯನ್ನ ಕೊಂದು ಒಂದು ವಾರ ಶವವನ್ನ ಮನೆಯಲ್ಲೇ ಇಟ್ಕೊಂಡ್ಳು!

    ಪತಿಯನ್ನ ಕೊಂದು ಒಂದು ವಾರ ಶವವನ್ನ ಮನೆಯಲ್ಲೇ ಇಟ್ಕೊಂಡ್ಳು!

    – ಚಿಕ್ಕಪ್ಪ, ಇನಿಯನ ಜೊತೆ ಸೇರಿ ಪತಿಗೆ ಚಟ್ಟ ಕಟ್ಟಿದ್ಳು!

    ಚಂಡೀಗಢ: ಅಕ್ರಮ ಸಂಬಂಧ ಉಳಿಸಿಕೊಳ್ಳಲು ಪ್ರಿಯಕರ ಹಾಗೂ ಆತನ ಸ್ನೇಹಿತರೊಂದಿಗೆ ಸೇರಿ ಮಹಿಳೆ ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ದಿನೇಶ್ ಪತ್ನಿಯ ಅಕ್ರಮ ಸಂಬಂಧಕ್ಕೆ ಬಲಿಯಾದ ವ್ಯಕ್ತಿ. ಜನವರಿ 28ರಂದು ಚರಂಡಿ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ ಮೃತದೇಹ ಸೈನಿಕ್ ಕಾಲೋನಿ ನಿವಾಸಿ ದಿನೇಶ್ ಎಂಬವರದ್ದು ಅಂತ ಗೊತ್ತಾಯ್ತು. ದಿನೇಶ್ ಪ್ರಾಪರ್ಟಿ ಡೀಲರ್ ಆಗಿ ಕೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ತನಿಖೆಯಲ್ಲಿ ದಿನೇಶ್ ಪತ್ನಿ ನಿತಿನ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಚಾರ ಬೆಳಕಿಗೆ ಬಂದಿದೆ. ನಿತಿನ್ ಹಾಗೂ ಆಕೆಯ ಸಂಬಂಧಕ್ಕೆ ದಿನೇಶ್ ಅಡ್ಡಿಯಾಗುತ್ತಿದ್ದರಿಂದ ತನ್ನ ಚಿಕ್ಕಪ್ಪ ಹರ್ಜೀತ್ ಸಿಂಗ್, ನಿತಿನ್ ಹಾಗೂ ಆತನ ಸ್ನೇಹಿತರೊಂದಿಗೆ ಮಹಿಳೆ ಸೇರಿ ಕೊಲೆ ಮಾಡಲು ಸಂಚು ರೂಪಿಸಿದ್ದಳು.

    ಜನವರಿ 11 ಹಾಗೂ 12 ಮಧ್ಯರಾತ್ರಿ ಮಹಿಳೆ ಪ್ರಿಯಕರ ನಿತಿನ್, ಆತನ ಸ್ನೇಹಿತರಾದ ವಿನೀತ್ ಮತ್ತು ವಿಷ್ಣು ಕೋಲಿನಿಂದ ದಿನೇಶ್ ಮೇಲೆ ಹಲ್ಲೆ ನಡೆಸಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಕೊಲೆ ನಂತರ ಶವವನ್ನು ಗೋಣಿ ಚೀಲದಲ್ಲಿ ತುಂಬಿ ಬಾತ್ ರೂಂನಲ್ಲಿ ಇಟ್ಟಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಹರ್ಜೀತ್ ಸಿಂಗ್ ಪಾತ್ರವು ಇದ್ದು ಆತನು ಬರುವುದು ತಡವಾದ್ದರಿಂದ ನಿತಿನ್ ಹಾಗೂ ಆತನ ಸ್ನೇಹಿತರೇ ದಿನೇಶ್‍ನನ್ನು ಕೊಲೆ ಮಾಡಿ ಮುಗಿಸಿ ಬಿಟ್ಟಿದ್ದರು. ಅಲ್ಲದೆ ಈ ಕೊಲೆ ಮಾಡಲು ನಿತಿನ್ ಸ್ನೇಹಿತರಾದ ವಿನೀತ್ ಮತ್ತು ವಿಷ್ಣುವಿಗೆ 41 ಸಾವಿರ ರೂ. ಹಣ ನೀಡಿದ್ದನು.

    ಸುಮಾರು ಒಂದು ವಾರದವರೆಗೂ ಪತಿಯ ಶವವನ್ನು ಮಹಿಳೆ ಮನೆಯಲ್ಲಿಯೇ ಇಟ್ಟಿಕೊಂಡಿದ್ದಾಳೆ. ಆದರೆ ಶವ ಜನವರಿ 18ಕ್ಕೆ ದುರ್ವಾಸನೆ ಬರಲು ಆರಂಭವಾಗಿದೆ ಹಾಗಾಗಿ ಮಹಿಳೆ ಮತ್ತೋರ್ವ ಸ್ನೇಹಿತ ದೀಪಕ್ ಜೊತೆ ಸೇರಿ ಶವವನ್ನು ಡಬುವಾ ಪ್ರದೇಶದಲ್ಲಿನ ಚರಂಡಿಗೆ ಎಸೆದಿದ್ದಾಳೆ. ಇದೀಗ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಇತರ ಶಂಕಿತರನ್ನು ಬಂಧಿಸಲು ಹುಡುಕಾಟ ನಡೆಸುತ್ತಿರುವುದಾಗಿ ಹೇಳಿದ್ದಾರೆ.

  • ಮುಂಜಾನೆ ಭೀಕರ ಅಪಘಾತ – ಐದು ಮಂದಿ ದಾರುಣ ಸಾವು

    ಮುಂಜಾನೆ ಭೀಕರ ಅಪಘಾತ – ಐದು ಮಂದಿ ದಾರುಣ ಸಾವು

    ಆನೇಕಲ್: ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡು ಈರೋಡ್‍ನ ಕಾವೇರಿಪಟ್ಟಣಂ ಬಳಿ ನಡೆದಿದೆ.

    ಘಟನೆಯಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ಪ್ಯಾಸೆಂಜರ್ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳನ್ನು ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್, ಓಮ್ನಿ ಚಾಲಕ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಎಂದು ಗುರುತಿಸಲಾಗಿದೆ.

    ಸ್ನೇಹಿತರೆಲ್ಲ ಸೇರಿ ಈರೋಡ್ ಜಿಲ್ಲೆಯ ಭವಾನಿಯಿಂದ ಬೆಂಗಳೂರಿನ ವಂಡರ್ ಲಾ ಹೊರಟಿದ್ದರು. ಈ ಸಂದರ್ಭದಲ್ಲಿ ಅಂದರೆ ಮುಂಜಾನೆ 4 ಗಂಟೆ ಸುಮಾರಿಗೆ ಪ್ರವಾಸಿ ತಾಣಕ್ಕೆ ಹೋಗುವ ದಾರಿಯಲ್ಲಿ ಈ ದುರಂತ ಸಂಭವಿಸಿದೆ.

    ವ್ಯಕ್ತಿಯೊಬ್ಬರು ರಸ್ತೆ ದಾಟಲು ಯತ್ನಿಸಿದ್ದಾರೆ. ಹೀಗಾಗಿ ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಓಮ್ನಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಪರಿಣಾಮ 5 ಮಂದಿ ಸ್ಥಳದಲ್ಲಿ ಮೃತಪಟ್ಟರೆ ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬವರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

  • ಬಾರ್ ಬಳಿ ನಿಂತಿದ್ದ ಯುವಕರಿಬ್ಬರ ಮೇಲೆ ಚಾಕು ಇರಿತ ಪ್ರಕರಣ – ಓರ್ವ ಸಾವು

    ಬಾರ್ ಬಳಿ ನಿಂತಿದ್ದ ಯುವಕರಿಬ್ಬರ ಮೇಲೆ ಚಾಕು ಇರಿತ ಪ್ರಕರಣ – ಓರ್ವ ಸಾವು

    ಶಿವಮೊಗ್ಗ: ಬಾರ್ ಬಳಿ ನಿಂತಿದ್ದ ಯುವಕರಿಬ್ಬರ ಮೇಲೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಾವನ್ನಪ್ಪಿದ್ದಾನೆ.

    ಮೃತಪಟ್ಟ ಯುವಕನನ್ನು ಸೀಗೆಹಟ್ಟಿಯ ಜೀವನ್ (28), ಹಾಗೂ ಗಾಯಾಳು ಕೇಶವ (28) ಎಂದು ಗುರುತಿಸಲಾಗಿದೆ. ಮೃತ ಜೀವನ್ ಹಾಗೂ ಗಾಯಾಳು ಕೇಶವ ಇಬ್ಬರು ಸ್ನೇಹಿತರು. ಮೃತ ಜೀವನ್ ಡ್ಯಾನ್ಸರ್ ಆಗಿ ಕೆಲಸ ಮಾಡಿಕೊಂಡಿದ್ದ. ಇನ್ನು ಕೇಶವ ಖಾಸಗಿ ಬ್ಯಾಂಕ್ ವೊಂದರಲ್ಲಿ ಉದ್ಯೋಗಿಯಾಗಿದ್ದ.

    ಜೀವನ್ ಹಾಗೂ ಕೇಶವ್ ಇಬ್ಬರು ನಿನ್ನೆ ರಾತ್ರಿ ನಗರದ ಎನ್ ಟಿ ರಸ್ತೆಯಲ್ಲಿರುವ ಬಾರ್ ವೊಂದರ ಬಳಿ ನಿಂತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಅಪರಿಚಿತರ ಗುಂಪು ಏಕಾಏಕಿ ಇಬ್ಬರ ಮೇಲೆ ಚಾಕು ಇರಿದು ಪರಾರಿಯಾಗಿತ್ತು. ಮೃತ ಜೀವನ್ ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡುರುವ ಕೇಶವ ಎಂಬಾತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

    ಗಾಯಾಳು ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಪೂರ್ವ ವಲಯ ಐಜಿಪಿ ಎಸ್.ರವಿ ಭೇಟಿ ನೀಡಿ ಘಟನೆ ಬಗ್ಗೆ ಗಾಯಾಳು ಕೇಶವನಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ಕುರಿತಂತೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಕೆಲವೆಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.