ಬೆಂಗಳೂರು: ನಾಡಿನಾದ್ಯಂತ ದೀಪಗಳ ಹಬ್ಬ ದೀಪಾವಳಿ (Diwali) ಸಂಭ್ರಮ ಜೋರಾಗಿದೆ. ದೀಪಾವಳಿ ಹಿನ್ನೆಲೆ ಬೆಂಗಳೂರಿನ (Bengaluru) ಕೆಆರ್ ಮಾರ್ಕೆಟ್ನಲ್ಲಿ (KR Market) ಬೆಳ್ಳಂಬೆಳಗ್ಗೆ ಹೂ, ಹಣ್ಣು ಖರೀದಿಗೆ ಜನ ಮುಗಿಬಿದ್ದಿದ್ದಾರೆ.
ಕೆಆರ್ ಮಾರ್ಕೆಟ್ನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸೇರಿದ್ದು, ವಿವಿಧ ಬಗೆಯ ಹೂ, ಹಣ್ಣುಗಳ ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಅವೆನ್ಯೂ ರಸ್ತೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಜನಮಯವಾಗಿದೆ. ಭಾರೀ ಜನಸಂಖ್ಯೆ ಹಿನ್ನೆಲೆ ಕೆಆರ್ ಮಾರ್ಕೆಟ್, ಹೂವಿನ ಮಾರ್ಕೆಟ್, ಅವೆನ್ಯೂ ರಸ್ತೆ ಸುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೇ ಕೆಆರ್ ಮಾರ್ಕೆಟ್ ಫ್ಲೈಓವರ್ ಮೇಲೂ ಕಿ.ಮೀ.ಗಟ್ಟಲೇ ಪಾರ್ಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್ ಎಚ್ಚರಿಕೆ
ಭಾರತದಲ್ಲಿ ತೋಟಗಾರಿಕೆ ಬೆಳೆಗಳ ಇಳುವರಿ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಕ್ಲೀನ್ ಪ್ಲಾಂಟ್ ಯೋಜನೆಗೆ (CPP) ಕೇಂದ್ರ ಸಚಿವ ಸಂಪುಟ (Union Cabinet) ಅನುಮೋದನೆ ನೀಡಿದೆ. ಈ ಯೋಜನೆ ರಾಷ್ಟ್ರದಾದ್ಯಂತ ಹಣ್ಣಿನ ಬೆಳೆಗಳ ಗುಣಮಟ್ಟವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಫೆಬ್ರವರಿ 2023 ರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಮಧ್ಯಂತರ ಬಜೆಟ್ (Interim Budget) ಭಾಷಣದಲ್ಲಿ ಈ ಯೋಜನೆಯನ್ನು ಘೋಷಿಸಿದ್ದರು. ಈ ಕಾರ್ಯಕ್ರಮಕ್ಕಾಗಿ ಕೃಷಿ ಸಚಿವಾಲಯ (Ministry of Agriculture) 1,765 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಇದರಲ್ಲಿ ಅರ್ಧದಷ್ಟು ಭಾಗವನ್ನು ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್ ಆಫ್ ಹಾರ್ಟಿಕಲ್ಚರ್ (MIDH) ನ ಬಜೆಟ್ನಿಂದ ಪಡೆಯಲಾಗಿದೆ. ಈ ಯೋಜನೆಗೆ ಬೇಕಾದ ಉಳಿದ ಅರ್ಧ ಹಣವನ್ನು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನಿಂದ (ADB) ಸಾಲದ ರೂಪದಲ್ಲಿ ಪಡೆಯಲಾಗುತ್ತದೆ.
CPP ಯೋಜನೆ ಎಂದರೇನು?
ತೋಟಗಾರಿಕೆ ಬೆಳೆಗಳ ಇಳುವರಿ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಹಾಕಿಕೊಂಡ ಯೋಜನೆ ಇದಾಗಿದೆ. ಈ ಯೋಜನೆ ಮೂಲಕ ಉತ್ತಮ ಸಸಿಗಳನ್ನು ರೈತರಿಗೆ ಒದಗಿಸಿ ಹಣ್ಣಿನ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ.
CPP ಯೋಜನೆಯ ಮುಖ್ಯ ಉದ್ದೇಶವೇನು?
ಬೆಳೆಗಳ ಇಳುವರಿಯನ್ನು ಹೆಚ್ಚಿಸಲು ಮತ್ತು ಆದಾಯ ಹೆಚ್ಚಿಸಲು ಆರೋಗ್ಯವಂತ ಉತ್ತಮ ಗುಣಮಟ್ಟದ ಸಸ್ಯಗಳನ್ನು ರೈತರಿಗೆ ಒದಗಿಸುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ.
ಇದಕ್ಕಾಗಿ ಸರ್ಕಾರ ಕೈಗೊಳ್ಳಲಿರುವ ಯೋಜನೆಗಳೇನು?
9 ಕ್ಲೀನ್ ಪ್ಲಾಂಟ್ ಸೆಂಟರ್ಗಳ (CPCs) ಅಭಿವೃದ್ಧಿ ಮಾಡುವುದು. ಇದು ರೋಗ ಸಸಿಗಳನ್ನು ರೈತರಿಗೆ ಒದಗಿಸಲು ಅನುಕೂಲವಾಗಲಿದೆ.
CPC ಯಿಂದ ಪಡೆದ ಮೂಲ ಸಸ್ಯಗಳನ್ನು ನರ್ಸರಿಗಳಲ್ಲಿ ಬೆಳೆಸಿ, ಹೆಚ್ಚಿನ ಸಸ್ಯಗಳ ಅಭಿವೃದ್ಧಿಪಡಿಸಿ ರೈತರಿಗೆ ವಿತರಿಸಲಾಗುತ್ತದೆ.
ಸಸಿಗಳ ಮಾರಾಟದ ಸಂಪೂರ್ಣ ಹೊಣೆಗಾರಿಕೆ ಮತ್ತು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಮಿತಿ ರಚನೆ.
CPPಯ ಅವಶ್ಯಕತೆ ಏನು?
ಚೀನಾದ ನಂತರ ಭಾರತವು ವಿಶ್ವದ ಎರಡನೇ ಅತಿದೊಡ್ಡ ಹಣ್ಣುಗಳು ಮತ್ತು ತರಕಾರಿಗಳನ್ನು ಉತ್ಪಾದಿಸುವ ದೇಶವಾಗಿದೆ. 2013-14 ರಿಂದ 2023-24ರವರೆಗೆ, ತೋಟಗಾರಿಕೆ ಬೆಳೆಗಳ ವ್ಯಾಪ್ತಿಯು 2.4 ಕೋಟಿ ಹೆಕ್ಟೇರ್ಗಳಿಂದ 2.86 ಕೋಟಿ ಹೆಕ್ಟೇರ್ಗಳಿಗೆ ಏರಿದೆ. ಉತ್ಪಾದನೆಯು 27.74 ಕೋಟಿ ಮೆಟ್ರಿಕ್ ಟನ್ಗಳಿಂದ (ಎಂಟಿ) 35.2 ಕೋಟಿ ಮೆಟ್ರಿಕ್ ಟನ್ಗೆ ಏರಿದೆ. 2023-24ರ ಹಣಕಾಸು ವರ್ಷದಲ್ಲಿ ಭಾರತವು 1.15 ಶತಕೋಟಿ ಡಾಲರ್ ಮೌಲ್ಯದ ತಾಜಾ ಹಣ್ಣುಗಳನ್ನು ರಫ್ತು ಮಾಡಿದೆ. ಉತ್ಪಾದನೆ ಹೆಚ್ಚಿಸುವ ಗುರಿ ಹಾಗೂ ರಫ್ತನ್ನು ಹೆಚ್ಚಿಸುವ ಉದ್ದೇಶದಿಂದ ಸಿಪಿಪಿ ಯೋಜನೆ ಬಹಳ ಪ್ರಾಮುಖ್ಯತೆ ಪಡೆದಿದೆ.
ವಿದೇಶಗಳಿಂದ ಭಾರತ ಯಾವೆಲ್ಲ ಹಣ್ಣಿನ ಸಸಿಗಳನ್ನು ಆಮದು ಮಾಡಿಕೊಂಡಿದೆ?
ಮೂಲಗಳ ಪ್ರಕಾರ 2018-20 ರ ನಡುವೆ, EXIM ಸಮಿತಿಯು 2018 ರಲ್ಲಿ 21.44 ಲಕ್ಷ ಸೇಬಿನ ಗಿಡಗಳನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿತು, ಇದು 2020 ರಲ್ಲಿ 49.57 ಲಕ್ಷಕ್ಕೆ ಏರಿತು. 2018 ರಲ್ಲಿ ಕೇವಲ 1,000 ಆವಕಾಡೊಗಳನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿತ್ತು. ಇದು 2020 ರಲ್ಲಿ 26,500 ಕ್ಕೆ ಏರಿತು. ಹಾಗೆಯೇ, ಬ್ಲೂಬೆರ್ರಿ ಸಸ್ಯಗಳ ಆಮದು 2020 ರಲ್ಲಿ 4.35 ಲಕ್ಷಕ್ಕೆ ಏರಿಕೆ ಕಂಡಿದೆ.
ಪ್ರಸ್ತುತ ಸಸ್ಯಗಳನ್ನು ಆಮದು ಮಾಡಿಕೊಳ್ಳುವ ಪ್ರಕ್ರಿಯೆಗೆ ತೊಡಕಾಗಿದೆ, ಆಮದು ಮಾಡಿದ ಸಸ್ಯಗಳನ್ನು ಎರಡು ವರ್ಷಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತಿದೆ. CPC ಗಳು ಈ ಅವಧಿಯನ್ನು ಆರು ತಿಂಗಳ ಕಡಿತಗೊಳಿಸುತ್ತವೆ ಮತ್ತು ಭಾರತದಲ್ಲಿ ತೋಟಗಾರಿಕಾ ಬೆಳೆಗಳಿಗೆ ಆರೋಗ್ಯವಂತ ಸಸಿಗಳನ್ನು ಒದಗಿಸಲು ಇದು ಅನುಕೂಲವಾಗಲಿದೆ.
ಕ್ಲೀನ್ ಪ್ಲಾಂಟ್ ಪ್ರೋಗ್ರಾಂ (CPP) ನ ಪ್ರಮುಖ ಪ್ರಯೋಜನಗಳೇನು?
ರೈತರು: ಸಿಪಿಪಿ ವೈರಸ್-ಮುಕ್ತ, ಉತ್ತಮ ಗುಣಮಟ್ಟದ ಸಸಿಗಳನ್ನು ಒದಗಿಸುತ್ತದೆ. ಇದು ಹೆಚ್ಚಿನ ಇಳುವರಿ ಮತ್ತು ಆದಾಯಕ್ಕೆ ಕಾರಣವಾಗುತ್ತದೆ.
ನರ್ಸರಿಗಳು: ಸುವ್ಯವಸ್ಥಿತ ನರ್ಸರಿಗಳನ್ನು ಉತ್ತೇಜಿಸುವ ಮೂಲಕ, ಉತ್ತಮ ಸಸಿಗಳ ಅಭಿವೃದ್ಧಿಗೆ ಸಹಾಯವಾಗಲಿದೆ.
ಗ್ರಾಹಕರು: ಹಣ್ಣುಗಳ ರುಚಿ, ಆಕಾರ ಮತ್ತು ಪೌಷ್ಟಿಕಾಂಶ ಹೆಚ್ಚಾಗುವುದರಿಂದ ಗ್ರಾಹಕರನ್ನು ಸೆಳೆಯಲಿದೆ.
ರಫ್ತು: ಉತ್ತಮ ಗುಣಮಟ್ಟದ ಹಣ್ಣುಗಳ ಉತ್ಪಾದನೆ ಭಾರತವು ಪ್ರಮುಖ ಜಾಗತಿಕ ರಫ್ತುದಾರನಾಗಿ ಬೆಳೆಯಲು ಸಹಾಯಕವಾಗಲಿದೆ. ಅಂತರರಾಷ್ಟ್ರೀಯ ಹಣ್ಣಿನ ವ್ಯಾಪಾರದಲ್ಲಿ ತನ್ನ ಪಾಲನ್ನು ಈ ಯೋಜನೆ ಹೆಚ್ಚಿಸಲಿದೆ.
ಇಷ್ಟೇ ಅಲ್ಲದೇ, ಸಣ್ಣ ಹಿಡುವಳಿದಾರರನ್ನು, ರೈತ ಮಹಿಳೆಯರನ್ನು ಈ ಯೋಜನೆ ತಲುಪುವಂತೆ ಕಾರ್ಯಗತಗೊಳಿಸಲು ಸರ್ಕಾರ ಮುಂದಾಗಿದೆ. ಸರ್ಕಾರ ರೈತರಿಗೆ ಸೂಕ್ತ ತರಬೇತಿ ಹಾಗೂ ತಂತ್ರಜ್ಞಾನಗಳ ಪರಿಚಯ ಮಾಡಿಸಲು ಅಗತ್ಯ ಕ್ರಮಕೈಗೊಳ್ಳಲಿದೆ.
CPP ಯ ಪ್ರಮುಖ ಅಂಶಗಳು
ಕ್ಲೀನ್ ಪ್ಲಾಂಟ್ ಸೆಂಟರ್ಗಳು (CPC ಗಳು): ಸುಧಾರಿತ ರೋಗನಿರ್ಣಯದ ಚಿಕಿತ್ಸಕಗಳು ಮತ್ತು ಅಂಗಾಂಶ ಕೃಷಿ ಪ್ರಯೋಗಾಲಯಗಳೊಂದಿಗೆ ಸುಸಜ್ಜಿತವಾದ ಒಂಬತ್ತು ವಿಶ್ವದರ್ಜೆಯ ಅತ್ಯಾಧುನಿಕ CPC ಗಳನ್ನು ಭಾರತದಾದ್ಯಂತ ಸ್ಥಾಪಿಸಲಾಗುತ್ತದೆ.
ಇವುಗಳಲ್ಲಿ ದ್ರಾಕ್ಷಿ (NRC, ಪುಣೆ), ಸಮಶೀತೋಷ್ಣ ಹಣ್ಣುಗಳು – ಸೇಬು, ಬಾದಾಮಿ, ವಾಲ್ನಟ್ಸ್ ಇತ್ಯಾದಿ (CITH, ಶ್ರೀನಗರ & ಮುಕ್ತೇಶ್ವರ), ಸಿಟ್ರಸ್ ಹಣ್ಣುಗಳು (CCRI, ನಾಗ್ಪುರ್ & CIAH, ಬಿಕಾನೇರ್), ಮಾವು / ಪೇರಲೆ / ಆವಕಾಡೊ (IIHR, ಬೆಂಗಳೂರು); ಮಾವು / ಪೇರಲೆ / ಲಿಚಿ (CISH, ಲಕ್ನೋ), ದಾಳಿಂಬೆ (NRC, ಶೋಲಾಪುರ), ಮತ್ತು ಪೂರ್ವ ಭಾರತದಲ್ಲಿ ಉಷ್ಣವಲಯದ/ಉಪ ಉಷ್ಣವಲಯದ ಹಣ್ಣಿನ ಸಸಿಗಳನ್ನು ಈ ಕೇಂದ್ರಗಳಲ್ಲಿ ಬೆಳೆಸಲಾಗುತ್ತದೆ.
ಪ್ರಮಾಣೀಕರಣ ಮತ್ತು ಕಾನೂನು ಚೌಕಟ್ಟು: ಬೀಜಗಳ ಕಾಯಿದೆ 1966 ರ ಅಡಿಯಲ್ಲಿ ದೃಢವಾದ ಪ್ರಮಾಣೀಕರಣ ವ್ಯವಸ್ಥೆಯನ್ನು ಅಳವಡಿಸುವುದು.
ಮೂಲಸೌಕರ್ಯಗಳ ಅಭಿವೃದ್ಧಿ: ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ದೊಡ್ಡ ಪ್ರಮಾಣದ ನರ್ಸರಿಗಳಿಗೆ ಬೆಂಬಲವನ್ನು ಒದಗಿಸುವುದು. ಈ ಮೂಲಕ ಉತ್ತಮ ಸಸಿಗಳ ಸಂಖ್ಯೆಯನ್ನು ಹೆಚ್ಚಿಸುವುದು.
ಈ ಕಾರ್ಯಕ್ರಮವು ಭಾರತವನ್ನು ಪ್ರಮುಖ ಜಾಗತಿಕ ಹಣ್ಣುಗಳ ರಫ್ತುದಾರನಾಗಿ ಮಾಡುವಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ. ಈ ಕಾರ್ಯಕ್ರಮವನ್ನು ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಸಹಯೋಗದೊಂದಿಗೆ ಕಾರ್ಯಗತಗೊಳಿಸುತ್ತದೆ. CPC ಗಳು ಅಮೆರಿಕ, ಇಸ್ರೇಲ್ ಮತ್ತು ನೆದರ್ಲ್ಯಾಂಡ್ಸ್ನಂತಹ ದೇಶಗಳಲ್ಲಿನ ಯಶಸ್ವಿ ಯೋಜನೆಯಾಗಿದೆ.
ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ನಮಗೆ ಎದುರಾಗುತ್ತವೆ. ತಿಂಗಳ ಆರಂಭದಿಂದಲೇ ಶುರುವಾಗುವ ತಯಾರಿ ಶ್ರಾವಣ ಮುಗಿಯುವವರೆಗೂ ನಿಲ್ಲುವುದಿಲ್ಲ. ಪ್ರತಿ ಶುಕ್ರವಾರ ಮನೆಯಲ್ಲಿ ವಿಜೃಂಭಿಸುವ ಲಕ್ಷ್ಮೀ ಪೂಜೆಯ ಸಿದ್ಧತೆಯಂತೂ ಸಂಭ್ರಮದಿಂದ ಕೂಡಿರುತ್ತದೆ. ಹಬ್ಬದಲ್ಲಿ ಗಡಿಬಿಡಿಯೂ ಇರುತ್ತದೆ.
ನಾಳೆ ಶಾವ್ರಣ ಮಾಸದ ಎರಡನೇ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ (Varamahalakshmi festival) ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ (Flowers, Fruits) ಬೆಲೆ ಗಗನಕ್ಕೇರಿದೆ. ಹಬ್ಬದ ಹಿಂದಿನ ದಿನ ಮಾರುಕಟ್ಟೆಗೆ ಇಳಿಯುವ ಜನರು ಹೂವು ಹಣ್ಣಿನ ಬೆಲೆ ಕೇಳಿ ಶಾಕ್ ಆಗಿದ್ದಾರೆ. ಹೂವು ಹಣ್ಣುಗಳಿಲ್ಲದೇ ಹಬ್ಬ ಮಾಡುವುದು ಅಸಾಧ್ಯ. ಹೀಗಾಗಿ ದರ ಹೆಚ್ಚಿದ್ದರೂ ಜನರಿಗೆ ಕೊಂಡುಕೊಳ್ಳುವುದು ಅನಿವಾರ್ಯವಾಗಿದೆ.
ಸಾಮಾನ್ಯ ದಿನ ಮಾರಾಟವಾಗುವ ದರಕ್ಕಿಂತ ಹೂವು ಹಣ್ಣಿನ ದರ ದುಪ್ಪಟ್ಟಾಗಿದೆ. ಹಾಗಾದರೆ ಯಾವುದರ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.
ಹೂವಿನ ಬೆಲೆ ಎಷ್ಟಿದೆ?
ಮಲ್ಲಿಗೆ ಕೆಜಿಗೆ 1,600 ರೂಪಾಯಿ, ಸೇವಂತಿ 80-300 ರೂ., ಗುಲಾಬಿ 200-250 ರೂ., ಚೆಂಡು ಹೂವು 50-80 ರೂ., ಸುಗಂಧರಾಜ 300 ರೂ., ಕನಕಾಂಬರ 2,000 ರೂ., ಸೇವಂತಿಗೆ ಮಾರು 80-200 ರೂ., ಮಲ್ಲಿಗೆ ಹಾರ 1,500-2,000 ರೂ. ಹಾಗೂ ಬಾಳೆಕಂದು ಜೋಡಿ 100-150 ರೂ. ಇದೆ.
ಯಾವ ಹಣ್ಣಿಗೆ ಎಷ್ಟು ಬೆಲೆ?
ಮಿಕ್ಸ್ ಹಣ್ಣು ಕೆಜಿಗೆ 450 ರೂಪಾಯಿ, ಸೇಬು 300 ರೂ., ದಾಳಿಂಬೆ 250 ರೂ., ಅನಾನಸ್ 150-200 ರೂ. ಇದೆ.
ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ (Vijaya Dashami) ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆ (Ayudha Pooje) ಹಿನ್ನೆಲೆ ಹೂವು-ಹಣ್ಣುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ನಗರದ ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಮಡಿವಾಳ ಮಾರ್ಕೆಟ್ಗಳಲ್ಲಿ ಜನಸ್ತೋಮವೇ ತುಂಬಿ ತುಳುಕುತ್ತಿದೆ.
ಹೌದು, ಬೆಲೆ ಏರಿಕೆ ನಡುವೆಯೂ ಕೆ.ಆರ್ ಮಾರ್ಕೆಟ್ನಲ್ಲಿ (KR Market) ಹೂ, ಹಣ್ಣು, ತರಕಾರಿ ಖರೀದಿಗೆ ಜನಸಾಗರವೇ ಹರಿದುಬಂದಿದೆ. ಆಯುಧ ಪೂಜೆಗೆ ಬೂದುಕುಂಬಳಕಾಯಿ ಹಾಗೂ ಬಾಳೆ ಕಂಬಕ್ಕೆ ಫುಲ್ ಡಿಮ್ಯಾಂಡ್ ಇದ್ದು, ಹಬ್ಬದ ಸಂಭ್ರಮದಲ್ಲಿ ಇರುವವರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದ್ರೆ ಹೂ ಹಣ್ಣುಗಳ ದರ ಡಬಲ್ ಏರಿಕೆಯಾಗಿದೆ. ಇದನ್ನೂ ಓದಿ: ನವರಾತ್ರಿ ಹಬ್ಬ – ಆಯುಧ ಪೂಜೆ ಮಾಡೋದು ಯಾಕೆ? ಪುರಾಣ ಕಥೆ ಏನು?
ಒಟ್ಟಿನಲ್ಲಿ ಈ ಬಾರಿ ದಸರ ಹಬ್ಬಕ್ಕೆ ಕೊಂಚ ಬೆಲೆ ಏರಿಕೆಯಾಗಿದ್ದರೂ ಸಹ ಜನರೆಲ್ಲರೂ ನಾಡಿನ ಹಬ್ಬದ ಆಚರಣೆ ಸಂಭ್ರಮದಲ್ಲಿದ್ದಾರೆ. ಕೊಂಚ ಬೆಲೆ ಏರಿಕೆಗೆ ರೈತ ನಗು ಬಿರಿದ್ರೆ ಗ್ರಾಹಕರು ಉಸಿರು ಬಿಟ್ಟಿದ್ದಾರೆ.
ಬೆಂಗಳೂರು: ನಾಡಿನಾದ್ಯಂತ ಯುಗಾದಿ (Ugadi) ಸಂಭ್ರಮ ಮನೆ ಮಾಡಿದೆ. ಹೊಸವರ್ಷವನ್ನು ಬರಮಾಡಿಕೊಳ್ಳಲು ಕಾತುರದಲ್ಲಿದ್ದ ಸಿಟಿಜನ ಹೂವು (Flowers), ಹಣ್ಣು (Fruits) ಖರೀದಿಗೆ ಮುಗಿಬಿದ್ದಿದ್ದಾರೆ. ಹಬ್ಬದ ಜೋಶ್ನಲ್ಲಿ ಮಾರುಕಟ್ಟೆಗೆ ಹೋದ ಜನರಿಗೆ ಬೆಲೆ ಏರಿಕೆ ಶಾಕ್ ತಟ್ಟುತ್ತಿದೆ.
ಯುಗಾದಿ ಹಬ್ಬದೊಂದಿಗೆ ಆರಂಭವಾಗುವ ಹೊಸವರ್ಷವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಯುಗಾದಿ ಹಬ್ಬಕ್ಕೆ ಭರದ ಸಿದ್ಧತೆ ನಡೆಸಿದ್ದರು. ಹೊಸ ದಿರಿಸು ಖರೀದಿ ಜೊತೆಗೆ ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಇತ್ಯಾದಿಗಳ ಖರೀದಿಯು ನಗರದ ಮಾರುಕಟ್ಟೆಗಳಲ್ಲಿ ಅಬ್ಬರದಿಂದ ನಡೆದಿದೆ. ನಗರದ ಕೆ.ಆರ್. ಮಾರುಕಟ್ಟೆ, ಬಸವನಗುಡಿ, ಮಲ್ಲೇಶ್ವರ, ಗಾಂಧಿ ಬಜಾರ್, ಸೇರಿದಂತೆ ನಗರದ ಎಲ್ಲಾ ಮಾರುಕಟ್ಟೆಗಳಲ್ಲಿ ಹೂವು-ಹಣ್ಣುಗಳ ಖರೀದಿ ಜೋರಾಗಿ ನಡೆದಿದೆ. ಹಬ್ಬದ ಜೋಶ್ನಲ್ಲಿದ್ದ ಜನಕ್ಕೆ ಬೆಲೆ ಏರಿಕೆಯ ಶಾಕ್ ತಟ್ಟಿದೆ.
ಯುಗಾದಿ ಹಬ್ಬಕ್ಕೆ ಹೂವು, ಹಣ್ಣು, ಮಾವಿನಸೊಪ್ಪು, ಬೇವಿನಸೊಪ್ಪು ಬೇಕೇ ಬೇಕಾಗುತ್ತದೆ. ಹಾಗಾದರೆ ಯಾವುದೆಲ್ಲ ಎಷ್ಟು ದರ ಹೆಚ್ಚಾಗಿದೆ ಎನ್ನುವುದು ಈ ರೀತಿಯಿದೆ.
ಬೇವಿನಸೊಪ್ಪು 1 ಕಟ್ಟಿಗೆ 20 ರೂ.ಯಿದ್ದು, ಮಾವಿನಸೊಪ್ಪು 1 ಕಟ್ಟಿಗೆ 30 ರೂ., ಚಂಡೆ ಹೂವು 1 ಮಾರಿಗೆ 80 ರೂ. ಇದೆ. ಇನ್ನೂಳಿದಂತೆ ಹೂವಿನಲ್ಲಿ ಸೇವಂತಿಗೆ 1 ಮಾರಿಗೆ 120 ರೂ., ಗುಲಾಬಿ ಒಂದು ಕೆಜಿಗೆ 300 ರೂ., ಸೇವಂತಿಗೆ ಒಂದು ಕೆಜಿಗೆ 250 -300 ರೂ., ಮಲ್ಲಿಗೆ 1 ಕೆಜಿಗೆ 700 ರೂ., ಕನಕಾಂಬರ 1 ಕೆಜಿಗೆ 800 ರೂ., ಸುಗಂಧರಾಜ 1 ಕೆಜಿಗೆ 160 ರೂ., ಚೆಂಡು ಹೂ 1ಕೆಜಿಗೆ 80 ರೂ., ತುಳಸಿ ಹಾರಗೆ 1 ಕೆಜಿ 70 ರೂ. ದರವಿದೆ. ಹಣ್ಣುಗಳಾದ ದಾಳಿಂಬೆಗೆ 1 ಕೆಜಿಗೆ 120 ರೂ., ಆಪಲ್ 1 ಕೆಜಿಗೆ 180 ರೂ., ಮೊಸಂಬಿ 1 ಕೆಜಿಗೆ 120 ರೂ., ಕಿತ್ತಳೆ 1 ಕೆಜಿಗೆ 150 ರೂ., ಮರಸೇಬು 1 ಕೆಜಿಗೆ 250 ರೂ., ಬಟರ್ ಫ್ರೂಟ್ 1 ಕೆಜಿಗೆ 350 ರೂ.ನಷ್ಟು ದರ ಏರಿಕೆ ಆಗಿದೆ. ಇದನ್ನೂ ಓದಿ: ವರುಣಾದಲ್ಲಿ ಸ್ಪರ್ಧಿಸಿದ್ರೂ ಸಿದ್ದರಾಮಯ್ಯ ವಿರುದ್ಧ ಪದ್ಮವ್ಯೂಹ- ಬೆಂಗ್ಳೂರಲ್ಲಿ ಕೋಲಾರ ಕೈಪಡೆ ಹೈಡ್ರಾಮಾ
ಯುಗಾದಿ ಹಬ್ಬದ ಪ್ರಯುಕ್ತ ಸಾಮಾಗ್ರಿಗಳ ಬೆಲೆ ದುಬಾರಿಯಾಗಿದ್ದು, ಗ್ರಾಹಕರ ಜೇಬಿಗೆ ಭಾರೀ ಹೊಡೆತ ಬಿದ್ದಿದೆ. ಆದರೂ ಹಬ್ಬವನ್ನು ಆಚರಣೆ ಮಾಡ್ಲೇಬೇಕಲ್ವಾ ಅಂತಾ ಅಗತ್ಯ ವಸ್ತುಗಳನ್ನು ಜನರು ತೆಗೆದುಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಬೆಲೆ ಏರಿಕೆಯಾಗಿರುವುದರಿಂದ ಗ್ರಾಹಕರು ಬರುತ್ತಿಲ್ಲ. ಖರೀದಿ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ವ್ಯಾಪಾರ ಡಲ್ ಅಂತಾ ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ:ದೆಹಲಿಯಲ್ಲಿ ಪ್ರಬಲ ಭೂಕಂಪನ – ಬೆಚ್ಚಿ ಮನೆಯಿಂದಾಚೆ ಓಡಿಬಂದ ಜನ
ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಬೇಸಿಗೆ ಧಗೆ ಒಂದ್ಕಡೆಯಾದ್ರೆ, ಹಣ್ಣು, ತರಕಾರಿಗಳ (Vegetables) ಬೆಲೆ ಗಗನಕ್ಕೇರಿ ಗ್ರಾಹಕರ ಜೇಬು ಸುಡಲಾರಂಭಿಸಿದೆ.
ಕಳೆದೊಂದು ವಾರದಿಂದ ಬೆಂಡೆಕಾಯಿ, ಟೊಮೆಟೋ (Tometo), ಕ್ಯಾರೆಟ್ ಸೇರಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ಪೂರೈಕೆಯಲ್ಲಿ ಕೊರತೆಯಿರುವುದು ಹಾಗೂ ಕೆಲವು ಹಣ್ಣುಗಳ ಋತುಮಾನ ಮುಗಿಯುತ್ತಿರುವುದೇ ದಿಢೀರ್ ಬೆಲೆ ಏರಿಕೆಗೆ ಕಾರಣ ಎಂದು ಹಾಪ್ ಕಾಮ್ಸ್ ಅಧ್ಯಕ್ಷ ದೇವರಾಜ್ ಹೇಳಿದರು.
ಒಂದು ಕೆಜಿ ಟೊಮೆಟೋ ಬೆಲೆ 30 ರಿಂದ 40 ರೂಪಾಯಿ, ಒಂದು ಕೆಜಿ ಬಿನ್ಸ್ ಬೆಲೆ 40ರಿಂದ 70 ರೂಪಾಯಿ, ಒಂದು ಕೆಜಿ ಕ್ಯಾರೆಟ್ ಬೆಲೆ 20ರಿಂದ 50 ರೂಪಾಯಿ ಹಾಪ್ ಕಾಮ್ಸ್ನಲ್ಲಿ ಆಗಿದೆ. ಹಾಗೆಯೇ ಹಣ್ಣುಗಳಾದ ಒಂದು ಕೆಜಿ ಸೇಬು ಹಣ್ಣಿನ ಬೆಲೆ 170 ರಿಂದ 200 ರೂ, ಒಂದು ಕೆಜಿ ಬ್ಲ್ಯಾಕ್ ದ್ರಾಕ್ಷಿ 150 ರಿಂದ 220 ರೂ., ಒಂದು ಕೆಜಿ ದಾಳಿಂಬೆ 120 ರಿಂದ 190 ರೂ.ವರೆಗೆ ಏರಿಕೆಯಾಗಿದೆ. ಇದನ್ನೂ ಓದಿ:ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ: ಅಶ್ವಥ್ ನಾರಾಯಣ್
ಬೇಸಿಗೆ ಆರಂಭವಾಗುತ್ತಿದ್ದಂತೆ ತರಕಾರಿ ಹಾಗೂ ಹಣ್ಣುಗಳ ಬೆಲೆ ಗಗನನಕ್ಕೇರಿದೆ. ಒಟ್ಟಿನಲ್ಲಿ ಬೇಸಿಗೆ ಆರಂಭದಲ್ಲೇ ಈ ರೇಟ್ ಆದ್ರೇ ಏಪ್ರಿಲ್-ಮೇ ವೇಳೆಗೆ ತರಕಾರಿ, ಹಣ್ಣುಗಳ ಬೆಲೆ ಹೆಚ್ಚಾಗೋ ನಿರೀಕ್ಷೆ ಇದೆ. ಇದನ್ನೂ ಓದಿ: ಹಣವಿಲ್ಲದೇ ಸ್ಥಳೀಯ ಚುನಾವಣೆಯನ್ನು ಮುಂದೂಡಿದ ಶ್ರೀಲಂಕಾ
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಹಬ್ಬ ಅಂದ್ರೆ ಸಾಕು, ಎಲ್ಲಾ ಕಡೆ ಸಂಭ್ರಮವೋ ಸಂಭ್ರಮ. ಅದರಲ್ಲೂ ವರಲಕ್ಷ್ಮಿ ಹಬ್ಬ ಅಂದರೆ ಮಹಿಳೆಯರಿಗೆ ಖುಷಿ ಇಮ್ಮುಡಿಯಾಗುತ್ತೆ. ಅದನ್ನ ಇನ್ನಷ್ಟು ಹೆಚ್ಚಿಸಲು ಈ ಬಾರಿ ಮಹಿಳೆಯರಿಗೆ ದೇವಾಲಯಗಳಲ್ಲಿ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಕೊಡಲು ಮುಜರಾಯಿ ಇಲಾಖೆ ನಿರ್ಧಾರ ಮಾಡಿದೆ.
ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬ ಮನೆ ಮಾಡಿದೆ. ಹಬ್ಬದ ದಿನ ಬೆಂಗಳೂರಿನ ಮುಜರಾಯಿ ದೇಗುಲಗಳಿಗೆ ಬರುವ ಮಹಿಳೆಯರಿಗೆ ಮುಜರಾಯಿ ಇಲಾಖೆ ಗಿಫ್ಟ್ ನೀಡುತ್ತಿದೆ. ಬೆಂಗಳೂರಿನ ಎಲ್ಲಾ ದೇವಸ್ಥಾನಗಳಲ್ಲೂ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುವಂತೆ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳದ್ರವ್ಯಗಳನ್ನು ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚಿಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿ ಸೂಚಿಸಲಾಗಿತ್ತು. ಇದರಂತೆ ಹಸಿರು ಬಳೆಗಳು ಹಾಗೂ ಕಸ್ತೂರಿ ಅರಿಶಿಣ-ಕುಂಕುಮವನ್ನು ವಿತರಿಸಲಾಗುತ್ತೆ.
ಗಗನಕ್ಕೇರಿದ ಹೂವು-ಹಣ್ಣಿನ ದರ: ವರಮಹಾಲಕ್ಷ್ಮಿ ಹಬ್ಬದಿಂದಾಗಿ ಹೂ ಹಣ್ಣುಗಳ ಬೆಲೆ ಗಗನಕ್ಕೇರಿದೆ. ದರೂ ಕೆ.ಆರ್. ಮಾರ್ಕೆಟ್, ಬನಶಂಕರಿ ದೇಗುಲ ಸೇರಿದಂತೆ, ಅಣ್ಣಮ್ಮ, ಮಹಾಲಕ್ಷ್ಮಿ ದೇವಾಲಯಗಳ ಬಳಿ ಹಬ್ಬಕ್ಕೆ ಖರೀದಿ ಭರಾಟೆ ಜೋರಾಗಿತ್ತು. ಶ್ರಾವಣ ಮಾಸ ಶುರುವಾದ್ರೆ ಸಾಕು ಸಾಲು ಸಾಲು ಹಬ್ಬಗಳು ಎಂಟ್ರಿ ಕೊಡುತ್ತವೆ. ಅದರಲ್ಲೂ ವರಲಕ್ಷ್ಮಿ ಹಬ್ಬ ಅಂದ್ರೆ ಮಹಿಳೆಯ ಪ್ರಿಯವಾದ ಹಬ್ಬ. ಈ ಹಬ್ಬಕ್ಕೆ ಹೂವು ಪ್ರದಾನ ವಸ್ತುವಾದ್ರೆ, ನಂತರದ ಆದ್ಯತೆ ಹಣ್ಣುಗಳಿಗೆ. ಹೀಗಾಗಿ ಹೂವಿನ ದರದ ಏರಿಕೆಯ ಜೊತೆಗೆ ಹಣ್ಣಿನ ದರವೂ ಏರಿಕೆಯಾಗಿದೆ. ಹಾಗಾದ್ರೆ ಏನೆಲ್ಲಾ ಬೆಲೆ ಏರಿಕೆಯಾಗಿದೆ ಅಂತ ನೋಡೋದಾದ್ರೆ.
ಅಗತ್ಯ ವಸ್ತುಗಳ ಬೆಲೆ: ಮಾವಿನ ಎಲೆ 1 ಕಟ್ಟು – 20 ರೂ., ಬಾಳೆ ಕಂಬ – 50 ರೂ., ಬೇವಿನ ಸೊಪ್ಪು 1 ಕಟ್ಟು – 20 ರೂ., ತುಳಸಿ ತೋರಣ 1 ಮಾರು – 50 ರೂ. ಕಳೆದ ಎರಡು ವರ್ಷ ಕೊರೊನಾದಿಂದ ಹಬ್ಬಗಳಿಗೆ ಬ್ರೇಕ್ ಬಿದ್ದಿತ್ತು. ಆದ್ರೆ ಈ ವರ್ಷ ಕೊರೊನಾ ಕಂಟ್ರೋಲ್ ಗೆ ಬಂದಿದ್ದು, ಸಿಲಿಕಾನ್ ಸಿಟಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕೆ ಜೇಬಿಗೆ ಕತ್ತರಿ ಬಿದ್ರು ಸಹ ಮಾರ್ಕೆಟ್ ನಲ್ಲಿ ಹೂ, ಹಣ್ಣು ಖರೀದಿ ಮಾಡಿ ಹಬ್ಬವನ್ನ ಗ್ರ್ಯಾಂಡ್ ಆಗಿ ಮಾಡ್ತಿದ್ದಾರೆ. ಇದರ ಜೊತೆಗೆ ಮಹಿಳೆಯರಿಗೆ ದೇವಾಲಯಗಳಲ್ಲಿ ಕುಂಕುಮ, ಬಳೆ ನೀಡ್ತೀರೋದು ಸಂತಸದ ವಿಷಯ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಕೆಆರ್ ಮಾರ್ಕೆಟ್ ನಲ್ಲಿ ಬೆಂಗಳುರು ಮಂದಿ ಹೂವು, ಹಣ್ಣು ಖರೀದಿಯಲ್ಲಿ ನಿರತರಾಗಿದ್ದಾರೆ.
ಇಂದು ಬೆಳ್ಳಂಬೆಳಗ್ಗೆನೆ ಜನ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೂವು, ಹಣ್ಣು, ತರಕಾರಿ, ಹಬ್ಬದ ಸಾಮಾಗ್ರಿಗಳ ಖರೀದಿಯಲ್ಲಿ ಬ್ಯುಸಿಯಾಗಿರುವುದು ಕಂಡುಬಂತು. ಕೆಆರ್ ಮಾರ್ಕೆಟ್ ಮುಖ್ಯರಸ್ತೆಯ ಎರಡು ಬದಿಗಳಲ್ಲೂ ಹಬ್ಬದ ವ್ಯಾಪಾರ ಜೋರಾಗಿತ್ತು. ಮುಖ್ಯ ರಸ್ತೆಯಲ್ಲೇ ವ್ಯಾಪಾರ ನಡೀತಿರುವ ಕಾರಣ ಕೆಆರ್ ಮಾರ್ಕೆಟ್ ಮುಖ್ಯ ರಸ್ತೆ ಬ್ಲಾಕ್ ಆಗಿತ್ತು.
ವರಮಹಾಲಕ್ಷ್ಮಿ ಹಬ್ಬಕ್ಕೆ ಹಿನ್ನೆಲೆಯಲ್ಲಿ 30 ರಿಂದ 40% ನಷ್ಟು ಹೂವು ಹಣ್ಣುಗಳ ಬೆಲೆ ಏರಿಕೆಯಾಗಿದೆ. ಸೇವಂತಿಗೆ ಹೂವು ಕೆ.ಜಿಗೆ 320 ರೂ. (ಒಂದು ಮೊಳ – 80), ಮಲ್ಲಿಗೆ ಒಂದು ಕೆ.ಜಿಗೆ 2350 ರಿಂದ 2450 ರೂ., ಕನಕಾಂಬರ- ಒಂದು ಕೆಜಿ 4000 ರೂ., ಗುಲಾಬಿ ಹೂವು ಕೆ.ಜಿ 320-350 ರೂ., ಮಲ್ಲಿಗೆ ಕೆ.ಜಿಗೆ 350 ರೂ. (ಒಂದು ಮೊಳ 100 ರೂ.), ಕಮಲ ಹೂ ಜೋಡಿ 80-100 ರೂ., ಬಟನ್ಸ್ ಹೂವು ಕೆ.ಜಿ 300 ರೂ. ಮಲ್ಲೆ ಹೂವು ಕೆ.ಜಿ 320 ರೂ. (ಒಂದು ಮೊಳ – 60 ರೂ.) ಆಗಿದೆ.
ಒಟ್ಟಿನಲ್ಲಿ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಕೆ ಆರ್ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಭರಾಟೆ ಬಲು ಜೋರಾಗಿದೆ. ಹೂವು, ಹಣ್ಣುಗಳ ಬೆಲೆಯೇರಿಕೆಯಾಗಿದ್ದರೂ ಖರೀದಿ ಮಾತ್ರ ಹಿಂದೆ ಬಿದ್ದಿಲ್ಲ. ಖರೀದಿ ಬಂದಿರುವ ಜನಸಾಗರದಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
Live Tv
[brid partner=56869869 player=32851 video=960834 autoplay=true]
ಹಾಲಿನಿಂದ ಮಾಡಿದ ಯಾವುದೇ ರೆಸಿಪಿ ಎಲ್ಲ ವೆಜ್ ಮತ್ತು ನಾನ್ವೆಜ್ ಪ್ರಿಯರಿಗೂ ತುಂಬಾ ಇಷ್ಟ. ಹಾಲಿನಿಂದ ಮಾಡಿದ ಪ್ರತಿಯೊಂದು ಸಿಹಿ ಪದಾರ್ಥಾಗಳು ಸವಿಯಲು ಚೆನ್ನಾಗಿ ಇರುತ್ತೆ. ಅದಕ್ಕೆ ಇಂದು ನಿಮಗಾಗಿ ‘ಫ್ರೂಟ್ ಕಸ್ಟರ್ಡ್’ ಮಾಡುವುದು ಹೇಗೆ ಎಂದು ಹೇಳಿಕೊಡುತ್ತೇವೆ. ಇದು ಆರೋಗ್ಯಕ್ಕೆ ತುಂಬ ಒಳ್ಳೆಯದು ಸವಿಯಲು ತುಂಬಾ ಚೆನ್ನಾಗಿರುತ್ತೆ.
ಬೇಕಾಗಿರುವ ಪದಾರ್ಥಗಳು:
* ಹಾಲು – ಅರ್ಧ ಲೀಟರ್
* ಕಸ್ಟರ್ಡ್ ಪೌಡರ್ – 2 ಟೀಸ್ಪೂನ್
* ಸಕ್ಕರೆ – 5 ಟೀಸ್ಪೂನ್
* ಕಟ್ ಮಾಡಿದ ಕಲ್ಲಂಗಡಿ ಹಣ್ಣು – ಅರ್ಧ ಕಪ್
* ಕಟ್ ಮಾಡಿದ ಪಪ್ಪಾಯ ಸ್ವಲ್ಪ – ಅರ್ಧ ಕಪ್
* ಕಟ್ ಮಾಡಿದ ಕಪ್ಪು ದ್ರಾಕ್ಷಿ – ಅರ್ಧ ಕಪ್
* ಸ್ವಲ್ಪ ದಾಳಿಂಬೆ – ಅರ್ಧ ಕಪ್
* ಕಟ್ ಮಾಡಿದ ಬಾಳೆಹಣ್ಣು – ಅರ್ಧ ಕಪ್
* ಕಟ್ ಮಾಡಿದ ಸೇಬು – ಅರ್ಧ ಕಪ್
ಮಾಡುವ ವಿಧಾನ:
* 1 ಕಪ್ ಹಾಲಿಗೆ ಎರಡು ಸ್ಪೂನ್ ಕಸ್ಟರ್ಡ್ ಪೌಡರ್ ಹಾಕಿ ಗಂಟಿಲ್ಲದಂತೆ ಚೆನ್ನಾಗಿ ಕಲಸಿಕೊಳ್ಳಬೇಕು.
* ಉಳಿದ ಹಾಲನ್ನು ಕಾಯಿಸಿ, ಕಾದ ಹಾಲಿಗೆ 5 ಸ್ಪೂನ್ ಸಕ್ಕರೆ ಹಾಕಬೇಕು. ಕೆನೆ ಬರದಂತೆ ಕೈ ಆಡಿಸುತ್ತಲೇ ಇರಿ.
* ನಂತರ ತಯಾರಿಸಿಕೊಂಡ ಹಾಲು ಮತ್ತು ಕಸ್ಟರ್ಡ್ ಮಿಶ್ರಣವನ್ನು ಮಿಕ್ಸ್ ಮಾಡಿ ಉಕ್ಕಿದ ನಂತರ ಗ್ಯಾಸ್ ಆಫ್ ಮಾಡಿ ಸಂಪೂರ್ಣವಾಗಿ ತಣ್ಣಗಾಗಲು ಬಿಡಬೇಕು.
* ತಣ್ಣಗಾದ ಮಿಶ್ರಣವನ್ನು ಬೇರೆ ಬೌಲ್ಗೆ ಸುರಿದು ಕಟ್ ಮಾಡಿದ ಕಲ್ಲಂಗಡಿ, ಬಾಳೆಹಣ್ಣು, ಸೇಬು, ಪಪ್ಪಾಯಿ ಹಾಗೂ ಕಪ್ಪು ದ್ರಾಕ್ಷಿ, ದಾಳಿಂಬೆಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. 2 ಗಂಟೆಗಳ ಕಾಲ ಫ್ರಿಡ್ಜ್ನಲ್ಲಿಟ್ಟು ಟೇಸ್ಟ್ ನೋಡಿ.
Live Tv
[brid partner=56869869 player=32851 video=960834 autoplay=true]
ಹಣ್ಣುಗಳು ಸೇವೆನೆ ಆರೋಗ್ಯಕ್ಕೆ ಒಳ್ಳೆಯದು ಎಂದು ಗೊತ್ತಿರುವ ವಿಚಾರವಾಗಿದೆ. ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಲು ಹಣ್ಣುಗಳು ಸಹಾಯ ಮಾಡುತ್ತವೆ. ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಅನೇಕ ಪೌಷ್ಟಿಕ ಗುಣಗಳನ್ನು ಹೊಂದಿರುತ್ತವೆ.
ಕಿವಿ ಹಣ್ಣು: ಕ್ಯಾನ್ಸರ್ ರೋಗವನ್ನು ತಡೆಯುವ ಆಂಟಿ ಆಕ್ಸಿಡಂಟ್ ಸತ್ವವೂ ಕಿವಿ ಹಣ್ಣನಲ್ಲಿದೆ. ಫೈಬರ್ ಮತ್ತು ಆಂಟಿ ಆಕ್ಸಿಡೆಂಟ್ಗಳ ಮೂಲವೆಂದು ಪರಿಗಣಿಸಲಾಗುವ ಕಿವಿ ಹಣ್ಣಿನ ಸೇವನೆಯಿಂದ ಡಿಎನ್ಎ ಉತ್ತಮಗೊಳಿಸಬಹುದು. ಇದನ್ನೂ ಓದಿ:ಮೆಂತೆ ಸೊಪ್ಪಿನ ಸೇವನೆಯಿಂದ ಸಿಗಲಿದೆ ಆರೋಗ್ಯಕರ ಅಂಶ
ಕಿತ್ತಳೆ ಹಣ್ಣು: ಕಿತ್ತಳೆ ರಸ ಮತ್ತು ಕಿತ್ತಳೆ ಹಣ್ಣುಗಳು ಮನುಷ್ಯನ ಆರೋಗ್ಯಕರ ರಕ್ತದೊತ್ತಡ, ಫೋಲಿಕ್ ಆಮ್ಲ ಮತ್ತು ಉತ್ಕರ್ಷಣ ನಿರೋಧಕ ಎಂದು ಕರೆಸಿಕೊಂಡಿರುವ ವಿಟಮಿನ್ ಸಿಯ ಉತ್ತಮ ಮೂಲವಾದ ಪೊಟ್ಯಾಸಿಯಮ್ ಅನ್ನು ಒದಗಿಸುತ್ತದೆ.
ಸೇಬುಹಣ್ಣು: ಸೇಬಿನಲ್ಲಿ ಅತಿ ಹೆಚ್ಚಿನ ಮಟ್ಟದ ಫೈಬರ್ ಮತ್ತು ವಿಟಮಿನ್, ಖನಿಜಾಂಶಗಳಿವೆ. ಇದು ಪೆಕ್ಟಿನ್ ಎಂಬ ಅಂಶವನ್ನು ಒಳಗೊಂಡಿದ್ದು, ಕರುಳಿನ ಆರೋಗ್ಯವನ್ನು ಉತ್ತೇಜಿಸುವ ಕೆಲಸ ಮಾಡುತ್ತದೆ. ಇದನ್ನೂ ಓದಿ: ಚಳಿಗಾಲದಲ್ಲಿ ನೀವು ಸೇವಿಸುವ ಆಹಾರದಲ್ಲಿ ಈ ಅಂಶಗಳು ಇರಲಿ
ಸೀಬೆಹಣ್ಣು: ವಿಟಮಿನ್ ಎ, ಕಾಪರ್, ಮತ್ತು ನಾರಿನಂಶವಿದೆ. ಚಳಿಗಾಲದಲ್ಲಿ ಸೀಬೆ ಹಣ್ಣನ್ನು ತಿನ್ನುವುದರಿಂದ ಜೀವಕೋಶದ ಹಾನಿ ಮತ್ತು ಉರಿಯೂತವನ್ನು ತಡೆಯುತ್ತದೆ, ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ.
ಬಾಳೆಹಣ್ಣು: ಬಾಳೆಹಣ್ಣು ಜೀರ್ಣಕ್ರಿಯೆ ಸಮಸ್ಯೆಗೆ ಒಳ್ಳೆಯದು. ಜೀರ್ಣಕ್ರಿಯೆಯನ್ನು ಸುಧಾರಿಸಲು ಬಾಳೆಹಣ್ಣು ತಿನ್ನುವುದಾಗಿ ತಜ್ಞರು ಸಲಹೆ ನೀಡುತ್ತಾರೆ. ಅದಕ್ಕಾಗಿಯೇ ಊಟವಾದ ತಕ್ಷಣ ಒಂದು ಬಾಳೆಹಣ್ಣು ತಿನ್ನುವಂತೆ ಸಲಹೆ ನೀಡುವುದು. ಬಾಳೆಹಣ್ಣು ಸೇವಿಸುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಸಿಕೊಳ್ಳಬಹುದು. ಇದನ್ನೂ ಓದಿ: ಕಿವಿಹಣ್ಣು ಸೇವಿಸಿ ಆರೋಗ್ಯ ಸುಧಾರಿಸಿಕೊಳ್ಳಿ
ಸೀತಾಫಲ: ಸೀತಾಫಲ ಹಣ್ಣಿನಲ್ಲಿ ಪೊಟ್ಯಾಶಿಯಂ, ಫೈಬರ್ ಮತ್ತು ವಿಟಮಿನ್ ಅಧಿಕವಾಗಿರುತ್ತದೆ. ಜತೆಗೆ ಸೀತಾಫಲ ಹಣ್ಣು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹೀಗಿರುವಾಗ ಮನೆಯಲ್ಲಿಯೇ ಬೆಳೆದ ಸೀತಾಫಲ ಹಣ್ಣನ್ನು ಸೇವಿಸುವ ಮೂಲಕ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.