Tag: Fuel Price

  • ಲಂಕಾದಲ್ಲಿ ತೀವ್ರ ಬಿಕ್ಕಟ್ಟು – ಲೀಟರ್ ಪೆಟ್ರೋಲ್ 550, ಡೀಸೆಲ್ ಬೆಲೆ 460 ರೂ.ಗೆ ಏರಿಕೆ

    ಲಂಕಾದಲ್ಲಿ ತೀವ್ರ ಬಿಕ್ಕಟ್ಟು – ಲೀಟರ್ ಪೆಟ್ರೋಲ್ 550, ಡೀಸೆಲ್ ಬೆಲೆ 460 ರೂ.ಗೆ ಏರಿಕೆ

    ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ಕೈ ಮೀರುತ್ತಿದ್ದು ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಮುಖಿಯಾಗುತ್ತಿವೆ. ಇಂಧನ ಬೆಲೆಯಂತೂ ರಾಕೆಟ್ ವೇಗದಲ್ಲಿ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ಲಂಕಾ ಸರ್ಕಾರ ಮೂರು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ.

    ಇದೀಗ ಮತ್ತೆ ಪೆಟ್ರೋಲ್ ಬೆಲೆ ಶೇ.22 ರಷ್ಟು ಹಾಗೂ ಡೀಸೆಲ್ ಬೆಲೆ ಶೇ.15ರಷ್ಟು ಏರಿಸಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 460 ರೂ. ಹಾಗೂ ಪೆಟ್ರೋಲ್ ಬೆಲೆ 550 ರೂ.ಗೆ ತಲುಪಿದೆ. ಇದನ್ನೂ ಓದಿ: ನಾನೂ ಸೈನಿಕನಂತೆ ಹೋರಾಡಿದ್ದೆ – ಮನ್ ಕಿ ಬಾತ್‌ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಮೋದಿ

    ಇಂದು ಮಧ್ಯಾಹ್ನ 2 ಗಂಟೆಯಿಂದಲೇ ಶ್ರೀಲಂಕಾದಲ್ಲಿ ಇಂಧನ ಬೆಲೆ ಏರಿಕೆಯಾಗಿದೆ ಎಂದು ಸಾರ್ವಜನಿಕ ವಲಯದ ಕಂಪನಿ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್ ತಿಳಿಸಿದೆ. ಲಂಕಾದ ಐಒಸಿ ಸಹ ಅದೇ ಪ್ರಮಾಣದಲ್ಲಿ ಬೆಲೆಯನ್ನು ಹೆಚ್ಚಿಸಿದೆ. ಇದನ್ನೂ ಓದಿ: ನೈಟ್‍ಕ್ಲಬ್‍ನಲ್ಲಿ 20 ಯುವಕರ ನಿಗೂಢ ಸಾವು

    ಕಳೆದ ವಾರ ಬರಬೇಕಿದ್ದ ತೈಲವು ಲಂಕಾವನ್ನು ತಲುಪಿಲ್ಲ. ಅಲ್ಲದೆ ಮುಂದಿನ ವಾರ ನಿಗದಿಪಡಿಸಿದ ಸರಕಗಳೂ ಸಹ ಬರುವುದಿಲ್ಲ ಈ ರೀತಿಯ ಬ್ಯಾಂಕಿಂಗ್ ಕಾರಣಗಳಿಂದಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ ಎಂದು ಲಂಕಾದ ಇಂಧನ ಸಚಿವರಾದ ಕಾಂಚನಾ ವಿಜೆಶೇಖರ ಹೇಳಿದ್ದಾರೆ.

    sri lanka diesel

    ವಿದೇಶಿ ವಿನಿಮಯ ಮಿತಿ ಕಡಿತ: ವಿದೇಶಿ ವಿನಿಮಯದ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ, ಒಬ್ಬ ವ್ಯಕ್ತಿಯು ವೈಯಕ್ತಿಕವಾಗಿ ಇಡಬಹುದಾದ ವಿದೇಶಿ ವಿನಿಮಯದ ಮಿತಿಯನ್ನು ಕಡಿತಗೊಳಿಸಲಾಗಿದೆ. ಇದನ್ನೂ ಓದಿ: ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ, ಆದರೆ ಹರಡುವ ಭೀತಿಯಿದೆ: WHO

    ಯುಸ್‌ನೊಂದಿಗೆ ಮಾತುಕತೆ: ಲಂಕಾದ ಆರ್ಥಿಕ ಬಿಕ್ಕಟ್ಟು ಪರಿಹರಿಸುವ ಸಲುವಾಗಿ ಅಗತ್ಯ ಶ್ರೀಲಂಕನ್ನರನ್ನು ಬೆಂಬಲಿಸಲು ಅಮೆರಿಕಾ ಅತ್ಯಂತ ಪರಿಣಾಮಕಾರಿ ಮಾರ್ಗಗಳನ್ನು ಅನ್ವೇಶಿಸಲು ಮಾತುಕತೆಗೆ ಕರೆದಿದೆ.

    ಅಮೆರಿಕವು ಕಳೆದ ಎರಡು ವಾರಗಳಲ್ಲಿ ಶ್ರೀಲಂಕಾಗೆ 158.75 ಮಿಲಿಯನ್ ಡಾಲರ್‌ಗಳಷ್ಟು ಹಣಕಾಸು ಒದಗಿಸಿದೆ. ದುರ್ಬಲ ವರ್ಗದವರ ಆಹಾರಕ್ಕಾಗಿ 47 ಮಿಲಿಯನ್ ಡಾಲರ್‌ಗಳನ್ನು ಸಂಗ್ರಹಿಸಲು ಈಗಾಗಲೇ ತುರ್ತು ಮನವಿಯನ್ನು ನೀಡಿದೆ ಎಂದು ರಾಯಭಾರಿ ಹೇಳಿದ್ದಾರೆ.

    Live Tv

  • ಇಂಧನ ಬೆಲೆ ಏರಿಕೆ ನಡುವೆಯೇ ಹಸಿರು ಹೈಡ್ರೋಜನ್‌ ಕಾರಿನಲ್ಲಿ ಪಾರ್ಲಿಮೆಂಟ್‌ಗೆ ಬಂದ ನಿತಿನ್‌ ಗಡ್ಕರಿ

    ಇಂಧನ ಬೆಲೆ ಏರಿಕೆ ನಡುವೆಯೇ ಹಸಿರು ಹೈಡ್ರೋಜನ್‌ ಕಾರಿನಲ್ಲಿ ಪಾರ್ಲಿಮೆಂಟ್‌ಗೆ ಬಂದ ನಿತಿನ್‌ ಗಡ್ಕರಿ

    ನವದೆಹಲಿ: ದಿನೇ ದಿನೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಇಂತಹ ಸನ್ನಿವೇಶದಲ್ಲೇ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ತಮ್ಮ ನಿವಾಸದಿಂದ ಸಂಸತ್‌ಗೆ ಹಸಿರು ಹೈಡ್ರೋಜನ್‌ ಚಾಲಿತ ಕಾರಿನಲ್ಲಿ ಆಗಮಿಸಿ ಗಮನ ಸೆಳೆದಿದ್ದಾರೆ.

    ಕಾರು ಪೂರ್ಣ ಟ್ಯಾಂಕ್‌ನಲ್ಲಿ 600 ಕಿ.ಮೀ. ಕ್ರಮಿಸಬಹುದೆಂದು ವರದಿಯಾಗಿದೆ. ಇದು ಪ್ರತಿ ಕಿ.ಮೀ.ಗೆ ಕೇವಲ 2 ರೂ. ಪ್ರಯಾಣದ ವೆಚ್ಚವನ್ನು ತರುತ್ತದೆ. ವಾಹನದ ಇಂಧನ ಟ್ಯಾಂಕ್ ತುಂಬಲು ಇದು ಕೇವಲ ಐದು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಇದನ್ನೂ ಓದಿ: 8ನೇ ಬಾರಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

    ಸಚಿವರು ಕಾರಿನ ಮುಂಭಾಗದ ಸೀಟಿನಲ್ಲಿ ಚಾಲಕನ ಪಕ್ಕದಲ್ಲಿ ಕುಳಿತು ಪಾರ್ಲಿಮೆಂಟ್‌ಗೆ ಆಗಮಿಸಿದರು. ಬಿಳಿ ಬಣ್ಣದ ಕಾರು ಹಸಿರು ನಂಬರ್ ಪ್ಲೇಟ್ ಅನ್ನು ಹೊಂದಿದ್ದು, ಇದನ್ನು ಇಲೆಕ್ಟ್ರಿಕ್‌ ವಾಹನಗಳಲ್ಲಿಯೂ ಬಳಸಲಾಗುತ್ತದೆ.

    ನಿತಿನ್ ಗಡ್ಕರಿ ಅವರು ಈಚೆಗಷ್ಟೇ ಭಾರತದ ಮೊದಲ ಹಸಿರು ಹೈಡ್ರೋಜನ್ ಆಧಾರಿತ ಸುಧಾರಿತ ಇಂಧನ ಕೋಶದ ಎಲೆಕ್ಟ್ರಿಕ್ ವೆಹಿಕಲ್ (ಎಫ್‌ಸಿಇವಿ) ‘ಟೊಯೊಟಾ ಮಿರೈ’ ಅನ್ನು ಬಿಡುಗಡೆ ಮಾಡಿದ್ದರು. ಇದು ಭಾರತದಲ್ಲಿನ ಮೊದಲ ಯೋಜನೆಯಾಗಿದೆ ಎಂದು ಅವರು ಹೇಳಿದ್ದರು. ಇದನ್ನೂ ಓದಿ: ಒಂದೇ ವಾರದಲ್ಲಿ 6 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ..!

    ತಾವೇ ಹೈಡ್ರೋಜನ್ ಚಾಲಿತ ಕಾರನ್ನು ಬಳಸುವುದಾಗಿ ಸಚಿವರು ಜನವರಿಯಲ್ಲಿ ಘೋಷಿಸಿದ್ದರು. ಜಪಾನ್‌ನ ಟೊಯೊಟಾ ಕಂಪನಿಯು ಹಸಿರು ಹೈಡ್ರೋಜನ್‌ನಿಂದ ಚಲಿಸುವ ವಾಹನವನ್ನು ನನಗೆ ನೀಡಿದೆ. ನಾನು ಅದನ್ನು ಪೈಲಟ್ ಯೋಜನೆಯಾಗಿ (ಪರ್ಯಾಯ ಇಂಧನದಲ್ಲಿ) ಬಳಸುತ್ತೇನೆ ಎಂದು ಅವರು ಹೇಳಿದ್ದರು.

    ಕಳೆದ ಒಂಬತ್ತು ದಿನಗಳಲ್ಲಿ ಎಂಟನೇ ಬಾರಿಗೆ ಬುಧವಾರವು ಸಹ ಇಂಧನ ಬೆಲೆಯನ್ನು ಮತ್ತೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ ಲೀಟರ್‌ಗೆ 80 ಪೈಸೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಸತತ 7ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

    ರಾಷ್ಟ್ರ ರಾಜಧಾನಿಯಲ್ಲಿ ಒಂದು ಲೀಟರ್ ಪೆಟ್ರೋಲ್ 100.21 ರೂ. ಇದ್ದದ್ದು ಈಗ 101.01 ರೂ. ಆಗಿದೆ. ಡೀಸೆಲ್ ಬೆಲೆ ಲೀಟರ್‌ಗೆ 91.47 ಇದ್ದದ್ದು ಈಗ 92.27 ಕ್ಕೆ ಏರಿಕೆಯಾಗಿದೆ.

  • ವಾಜಪೇಯಿ ಬಳಸಿದ್ದ ಕ್ರಿಮಿನಲ್ ಲೂಟ್ ಸರ್ಕಾರ್ ಪದ ಬಳಸಿದ ಮಾಜಿ ಸಿಎಂ ಸಿದ್ದರಾಮಯ್ಯ

    ವಾಜಪೇಯಿ ಬಳಸಿದ್ದ ಕ್ರಿಮಿನಲ್ ಲೂಟ್ ಸರ್ಕಾರ್ ಪದ ಬಳಸಿದ ಮಾಜಿ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಪ್ರಸಕ್ತ ವಿಧಾನಮಂಡಲ ಅಧಿವೇಶನದಲ್ಲಿ ಸಂಪೂರ್ಣವಾಗಿ ರಣತಂತ್ರ ಬದಲಿಸಿರುವ ವಿಪಕ್ಷ ಕಾಂಗ್ರೆಸ್, ಗದ್ದಲದ ಬದಲಿಗೆ ಚರ್ಚೆಯ ಮೂಲಕ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಅಂದು ವಾಜಪೇಯಿ ಬಳಸಿದ್ದ ಕ್ರಿಮಿನಲ್ ಲೂಟ್ ಸರ್ಕಾರ್ ಎಂಬ ಪದ ಬಳಸಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

    ಅಧಿವೇಶನದ ಮೊದಲ ದಿನ ಎತ್ತಿನ ಬಂಡಿಯಲ್ಲಿ ವಿಧಾನಸೌಧಕ್ಕೆ ಬರುವ ಮೂಲಕ ತೈಲ ಬೆಲೆ ಏರಿಕೆಯನ್ನು ಕಾಂಗ್ರೆಸ್ ಖಂಡಿಸಿತ್ತು. ಅಂದು ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಂತ್ರಿಗಳು, ಸದನದಲ್ಲಿ ಉತ್ತರ ನೀಡೋದಾಗಿ ಹೇಳಿದ್ರು. ಆದರೆ, ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ತೈಲ ಬೆಲೆ ಏರಿಕೆಯ ಕಾಂಡವನ್ನು ಇಡಿ ಇಡಿಯಾಗಿ ಬಿಡಿಸಲು ಶುರು ಮಾಡುತ್ತಲೇ, ಅಂದು ಸದನದಲ್ಲಿ ಚರ್ಚೆ ಮಾಡ್ತೀವಿ ಎಂದಿದ್ದವರೇ ಇಂದು ಉಲ್ಟಾ ಹೊಡೆದ್ರು. ತೈಲ ಬೆಲೆ ಏರಿಕೆ ಬಗ್ಗೆ ಇಲ್ಲಿ ಚರ್ಚೆಯೇ ಅಪ್ರಸ್ತುತ, ಇದಕ್ಕೂ ನಮಗೇನು ಏನ್ರೀ ಸಂಬಂಧ ಎಂದರೆ, ಸಿಎಂ ಬೊಮ್ಮಾಯಿ ಮೌನವೇ ಆಭರಣ ಎಂಬಂತೆ ಕುಳಿತಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ದೆಹಲಿಗೆ ಹೋಗಬೇಕು – ಸದನದಲ್ಲಿ ಸ್ವಾರಸ್ಯಕರ ಚರ್ಚೆ

    ನಿಯಮ 69ರ ಅಡಿ ಚರ್ಚೆ ಶುರು ಮಾಡಿದ ಸಿದ್ದರಾಮಯ್ಯ, ತೈಲ ಬೆಲೆ ಏರಿಕೆಯಿಂದ ಜನರ ಬದುಕು ಹೇಗೆಲ್ಲಾ ದುಸ್ತರವಾಗಿದೆ ಎಂಬುದನ್ನು ವಿವರಿಸಿದರು. ಪದೇ ಪದೇ ಆಯಿಲ್ ಬಾಂಡ್ ಬಗ್ಗೆ ಪ್ರಸ್ತಾಪ ಮಾಡಿ ಯುಪಿಎ ಮೇಲೆ ಆರೋಪ ಮಾಡುವ ಬಿಜೆಪಿ ನಾಯಕರಿಗೆ ಅಂಕಿ ಅಂಶ ಸಮೇತ ಸಿದ್ದರಾಮಯ್ಯ ಬಿಸಿ ಮುಟ್ಟಿಸಿದ್ರು. 1973ರಲ್ಲಿ ವಾಜಪೇಯಿ ಎತ್ತಿನಬಂಡಿಯಲ್ಲಿ ಸಂಸತ್‍ಗೆ ಎಂಟ್ರಿ ಕೊಟ್ಟಿದ್ದನ್ನು ಪ್ರಸ್ತಾಪಿಸಿ ಮೊನ್ನೆ ಎತ್ತಿನ ಬಂಡಿಯಲ್ಲಿ ಬಂದಿದ್ದನ್ನು ಸಮರ್ಥನೆ ಮಾಡಿಕೊಂಡರು.

    ಈ ಸರ್ಕಾರವನ್ನು, ಅಂದು ವಾಜಪೇಯಿ ಬಳಸಿದ್ದ ಕ್ರಿಮಿನಲ್ ಲೂಟ್ ಸರ್ಕಾರ್ ಎಂಬ ಪದ ಬಳಸಿ ಬಿಜೆಪಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ತಮಿಳುನಾಡಂತೆ ಸೆಸ್ ಇಳಿಸಿ ಎಂದು ಒತ್ತಾಯಿಸಿದರು. ಆಗ ಅಂಬಾನಿ, ಅದಾನಿ ಬೆಳೆಸಿದ್ದು ಯಾರು ಎನ್ನುತ್ತಾ ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಬಳಿಕ ಸಿದ್ದರಾಮಯ್ಯ ಭಾಷಣ ಮುಮದುವರಿಸಿದರು. ಈ ವೇಳೆ ಪದೇ ಪದೇ ಸಚಿವ ಸುಧಾಕರ್, ಮಾಧುಸ್ವಾಮಿ ಅಡ್ಡಿಪಡಿಸಲು ನೋಡಿದ್ರು. ಸಿದ್ದರಾಮಯ್ಯ ಭಾಷಣವನ್ನು ಸಂಸತ್ ಭಾಷಣ ಎಂದು ಕೂಡ ಕಾಲೆಳೆದರು. ಮಧ್ಯೆ ಮಧ್ಯೆ ಉಭಯ ಪಕ್ಷಗಳ ನಡುವೆ ಹಲವು ಬಾರಿ ವಾಕ್ಸಮರ ನಡೆಯಿತು.  ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ – ಚರ್ಚೆಗೆ ಆಗ್ರಹಿಸಿ ಸಾರಾ ಮಹೇಶ್ ಪ್ರತಿಭಟನೆ

  • ಬೆಲೆ ಏರಿಕೆ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನಾಲಗೆ ಬಿದ್ದು ಹೋಗಿದೆ: ದಿನೇಶ್ ಗುಂಡೂರಾವ್

    ಬೆಲೆ ಏರಿಕೆ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನಾಲಗೆ ಬಿದ್ದು ಹೋಗಿದೆ: ದಿನೇಶ್ ಗುಂಡೂರಾವ್

    ಬೆಂಗಳೂರು: ಬೆಲೆ ಏರಿಕೆ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನಾಲಗೆ ಬಿದ್ದು ಹೋಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

    ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರು ಹಾಗೂ ಬೆಲೆ ಏರಿಕೆ ವಿರುದ್ಧ ಹರಿಹಾಯ್ದ ದಿನೇಶ್ ಗುಂಡೂರಾವ್, ರಾಜ್ಯ BJP ಉಸ್ತುವಾರಿ ಅರುಣ್ ಸಿಂಗ್ ಬೆಲೆಯೇರಿಕೆ ಬಗ್ಗೆ ಪ್ರತಿಕ್ರಿಯಿಸಲು ನಾನೇನು RBI ಗೌರ್ನರ್ ಅಲ್ಲ ಎಂದಿದ್ದಾರೆ. ಇದು ಅರುಣ್ ಸಿಂಗ್ ಅವರ ಅಜ್ಞಾನ ಮತ್ತು ಭಂಡತನದ ಪರಮಾವಧಿ. ಬೆಲೆಯೇರಿಕೆ ಬಗ್ಗೆ RBI ಗೌರ್ನರ್ ಸಮಜಾಯಿಷಿ ಕೊಡುವುದಾದರೆ,ಬೆಲೆ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರದ ಪಾತ್ರವೇನು ಎಂದು ಪ್ರಶ್ನಿಸಿದರು.

    ಬೆಲೆಯೇರಿಕೆ ಬಗ್ಗೆ ಮಾತನಾಡಲು BJP ನಾಯಕರಿಗೆ ಈಗ ನಾಲಗೆ ಬಿದ್ದು ಹೋಗಿದೆ. ಹಾಗಾಗಿ ಜನರ ಗಮನ ಬೇರೆಡೆ ಸೆಳೆಯಲು ಧರ್ಮ, ದೇವರು,ಹೆಸರು ಬದಲಾವಣೆ ಎಂಬ ಅಸ್ತ್ರ ಪ್ರಯೋಗ ಮಾಡುತ್ತಿರುತ್ತಾರೆ. ಬಿಜೆಪಿಯ ಕೆಲ ಜೋಕರ್ ಗಳು ಈ ಅಸ್ತ್ರ ಪ್ರಯೋಗಿಸುತ್ತಾ ಜನ ಎದುರಿಸುತ್ತಿರುವ ನೈಜ ಸಮಸ್ಯೆ ಮರೆ ಮಾಚಿ ದೇಶಕ್ಕೆ ದ್ರೋಹ ಎಸಗುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ಸಂಪನ್ಮೂಲ ಕ್ರೋಢೀಕರಣಕ್ಕೆ ಬೆಲೆಯೇರಿಕೆ ಅನಿವಾರ್ಯ ಎಂಬ ಕೆಲ BJP ನಾಯಕರ ವಾದ ಶುದ್ಧ ಅವಿವೇಕತನದ್ದು. ಕೇವಲ ತೈಲದ ತೆರಿಗೆಯ ಮೂಲಕವೇ ಕೇಂದ್ರ ಇಲ್ಲಿಯವರೆಗೂ 23 ಲಕ್ಷ ಕೋಟಿ ಸಂಗ್ರಹಿಸಿದೆ. ಆ ಹಣ ಯಾವ ಅಭಿವೃದ್ಧಿಗೆ ಬಳಕೆಯಾಗಿದೆ.? ತಾನೇ ಜಾರಿಗೆ ತಂದ 10 ಯೋಜನೆಗಳಿಗೆ ಕೇಂದ್ರಕ್ಕೆ ಅನುದಾನ ಕೊಡುವ ಯೋಗ್ಯತೆಯಿಲ್ಲ. ಅಭಿವೃದ್ಧಿ ಎಲ್ಲಿದೆ ಎಂದು ಟ್ವಿಟ್ಟರ್ ಮುಖಾಂತರ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

  • ಇಂಧನ ಬೆಲೆ ಫ್ಲೆಕ್ಸಿಬಲ್ ಇರುತ್ತೆ, ಏನೂ ಸಮಸ್ಯೆ ಆಗಲ್ಲ: ನಾರಾಯಣಗೌಡ ಉಡಾಫೆ

    ಇಂಧನ ಬೆಲೆ ಫ್ಲೆಕ್ಸಿಬಲ್ ಇರುತ್ತೆ, ಏನೂ ಸಮಸ್ಯೆ ಆಗಲ್ಲ: ನಾರಾಯಣಗೌಡ ಉಡಾಫೆ

    ಬೆಂಗಳೂರು: ಇಂಧನ ಮತ್ತು ಗ್ಯಾಸ್ ಬೆಲೆ ಯಾಕೆ ಜಾಸ್ತಿ ಆಗಿದೆ ಅಂತಾ ಎಲ್ಲರಿಗೂ ಗೊತ್ತಿದೆ. ಇಂಧನ ಬೆಲೆ ಫ್ಲೆಕ್ಸಿಬಲ್ ಇರುತ್ತದೆ. ಆದರೆ ಇಲ್ಲಿ ರಾಜಕಾರಣ ಮಾಡಲಾಗುತ್ತಿದೆ, ನಿಜವಾದ ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ, ಬೀದಿಗೆ ಬಂದಿರುವವರು ರಾಜಕಾರಣಿಗಳು ಎಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ಸಚಿವ ನಾರಾಯಣಗೌಡ ಉಡಾಫೆಯ ಉತ್ತರ ನೀಡಿದ್ದಾರೆ.

    ಬಿಜೆಪಿ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ವಿಚಾರದ ಪ್ರತಿಭಟನೆಯಲ್ಲಿ ಒಂದು ಡ್ರಾಮಾ ನಡೆಯುತ್ತಿದೆ. ನಿಜವಾದ ಸಮಸ್ಯೆ ಯಾರಿಗೂ ಆಗಿಲ್ಲ, ಇದು ರಾಜಕಾರಣದ ಪಿತೂರಿ. ಕಾಂಗ್ರೆಸ್ ಸರ್ಕಾರ ಇರುವಾಗ ಬೆಲೆ ಏರಿಕೆ ಆಗಿಲ್ವಾ? ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ ಎಂದು ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ

    ಅಲ್ಲದೆ ಮನೆ ಮನೆಗೆ ಗ್ಯಾಸ್ ಕೊಟ್ಟಿರುವವರು ಯಾರು? ಹೆಣ್ಣು ಮಕ್ಕಳಿಗೆ ತೊಂದರೆ ಅಗಬಾರದು ಎಂದು ಉಚಿತವಾಗಿ ಕೊಟ್ಟಿರೋದು ಅದು. ಇಂಧನ ಬೆಲೆ ಫ್ಲೆಕ್ಸಿಬಲ್ ಇರುತ್ತದೆ. ಸಮಸ್ಯೆ ಬಗೆಹರಿಸಲು ಪ್ರಧಾನಿ ಸನ್ನದ್ಧವಾಗುತ್ತಿದ್ದಾರೆ. ಕಾಂಗ್ರೆಸ್ ಅವರಿಂದ ಹೇಳಿಸಿಕೊಳ್ಳಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ: ಪ್ರಹ್ಲಾದ್ ಜೋಶಿ

    ಪ್ರತಿಭಟನೆ ಮಾಡಿಸುತ್ತಿರೋದು ರಾಜಕಾರಣ. ಬೆಲೆ ಏರಿಕೆ ತಾತ್ಕಾಲಿಕ, ಅದು ಕಡಿಮೆ ಆಗುತ್ತದೆ. ಶಾಸಕರದ್ದು, ಸಚಿವರದ್ದು ವೇತನ ಹೆಚ್ಚಳ ಆಗಿಲ್ಲ, ನಾವೂ ಕೇಳಿಲ್ಲ. ಶಾಸಕರಿಗೂ ಡೀಸೆಲ್, ಪೆಟ್ರೋಲ್ ಖರ್ಚು ಇರುತ್ತದೆ ಎಂದು ಹೇಳಿದ್ದಾರೆ.

  • ಬೆಂಗಳೂರಿನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

    ಬೆಂಗಳೂರಿನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

    ಬೆಂಗಳೂರು: ದೇಶದಾದ್ಯಂತ ಪೆಟ್ರೋಲ್, ಡಿಸೇಲ್ ದರ ಏರಿಕೆ ಮತ್ತೆ ಮುಂದುವರಿದಿದೆ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 28 ಪೈಸೆ ಏರಿಕೆ ಕಂಡು ಸೆಂಚುರಿ ಬಾರಿಸಿದೆ. ಈ ಮೂಲಕ 1 ಲೀಟರ್ ಪೆಟ್ರೋಲ್ ಬೆಲೆ 100.23 ರೂಪಾಯಿ ತಲುಪಿದೆ.

    ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದ್ದು, 100 ರೂಪಾಯಿ ಗಡಿದಾಟಿದೆ. ಇಂದು ಪೆಟ್ರೋಲ್ ಬೆಲೆ 28 ಪೈಸೆ ಏರಿಕೆ ಕಂಡು 1 ಲೀಟರ್‍ ಗೆ 100.23 ರೂ ಆಗಿದೆ. ಡಿಸೇಲ್ ದರ 44 ಪೈಸೆ ಏರಿಕೆ ಕಂಡು ಲೀಟರ್‍ ಗೆ 93.02 ರೂಪಾಯಿ ತಲುಪಿದೆ.  ಇದನ್ನೂ ಓದಿ: SSLC ಪರೀಕ್ಷೆ ಬಗ್ಗೆ ಭಯ ಬೇಡ – ಎರಡು ದಿನ ಎರಡೇ ಪೇಪರ್

    ನಗರದಲ್ಲಿ ನಿನ್ನೆ ಪೆಟ್ರೋಲ್ ಲೀಟರ್‍ ಗೆ 99.95 ರೂಪಾಯಿ ಮತ್ತು ಡಿಸೇಲ್ ಲೀಟರ್‍ ಗೆ 92.38 ರೂಪಾಯಿ ಆಗಿತ್ತು. ಇಂದು ಮತ್ತೆ ಏರಿಕೆಯತ್ತ ಮುಖಮಾಡಿ ಪೆಟ್ರೋಲ್ ಸೆಂಚುರಿ ಬಾರಿಸಿದೆ. ಈ ಮೂಲಕ ಮತ್ತೆ ವಾಹನ ಚಾಲಕರಿಗೆ ಪೆಟ್ರೋಲ್, ಡಿಸೇಲ್ ಬರೆ ಬಿದ್ದಿದೆ. ಇದನ್ನೂ ಓದಿ:  SSLC ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

    ಕೆಲ ದಿನಗಳ ಹಿಂದೆ ಹೈದರಾಬಾದ್ ಮತ್ತು ತೆಲಂಗಾಣದಲ್ಲೂ ಪೆಟ್ರೋಲ್ ದರ ಶತಕ ತಲುಪಿತ್ತು. ಭೋಪಾಲ್‍ನಲ್ಲಿ ಲೀಟರ್‍ ಗೆ 104.53 ರೂಪಾಯಿ ತಲುಪಿತ್ತು. ಇಂದು ಡೆಲ್ಲಿಯಲ್ಲಿ ಪೆಟ್ರೋಲ್ ದರ ಲೀಟರ್‍ ಗೆ 96.93 ರೂಪಾಯಿ. ಡಿಸೇಲ್‍ಗೆ ಲೀಟರ್‍ ಗೆ 87.69 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಲೀಟರ್‍ ಗೆ 103.08 ರೂಪಾಯಿ, ಡಿಸೇಲ್ ಲೀಟರ್‍ ಗೆ 95.14 ರೂಪಾಯಿ ಆಗಿದೆ.

  • 100 ನಾಟೌಟ್, ಕಾಂಗ್ರೆಸ್ ಪ್ರತಿಭಟನೆ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ

    100 ನಾಟೌಟ್, ಕಾಂಗ್ರೆಸ್ ಪ್ರತಿಭಟನೆ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ

    ಬೆಂಗಳೂರು: 100 ನಾಟೌಟ್ ಹೆಸರಿನಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

    ಪೆಟ್ರೋಲ್ ದರ 100 ರೂ. ಆಗಿದ್ದನ್ನು ಖಂಡಿಸಿ 100 ನಾಟ್ ಔಟ್ ಪ್ರತಿಭಟನೆ ನಡೆಸಲಾಯಿತು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ರಾಜ್ಯದ 5 ಸಾವಿರ ಪೆಟ್ರೋಲ್ ಬಂಕ್ ಗಳ ಮುಂದೆ ಕಾಂಗ್ರೆಸ್ ನಾಯಕರು 5 ದಿನಗಳ ಕಾಲ ಪ್ರತಿಭಟನೆ ನಡೆಸಲಿದ್ದಾರೆ.

    ಬೆಂಗಳೂರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶೇಷಾದ್ರಿಪುರಂನ ಶಿವಾನಂದ ಸರ್ಕಲ್ ಸಮೀಪದ ರೆಡ್ಡಿ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಇಂದಿನಿಂದ 5 ದಿನಗಳ ಕಾಲ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿದಿನ ಒಂದು ಗಂಟೆ ಕಾಲ ಬೇರೆ ಬೇರೆ ಪೆಟ್ರೋಲ್ ಬಂಕ್ ಮುಂದೆ ಕೈ ನಾಯಕರ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

    https://twitter.com/siddaramaiah/status/1403224290678362114

    ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ಕರೆದೊಯ್ದು ಆನಂತರ ಬಿಡುಗಡೆ ಮಾಡಿದರು.

  • ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದ ಪೆಟ್ರೋಲ್ ಬೆಲೆ

    ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದ ಪೆಟ್ರೋಲ್ ಬೆಲೆ

    ಬೆಂಗಳೂರು: ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದೆ. ಬೆಂಗಳೂರಲ್ಲಿ ಲೀಟರ್ ಪೆಟ್ರೋಲ್ ಬರೋಬ್ಬರಿ 98 ರೂಪಾಯಿ 19 ಪೈಸೆಯಾಗಿದೆ. ಹಾಗೆಯೇ ಲೀಟರ್ ಡಿಸೇಲ್ ಗೆ 90 ರೂಪಾಯಿ 84 ಪೈಸೆಯಾಗಿದೆ. ಕಳೆದ ಒಂದು ವಾರದಿಂದ ಪೈಸೆ ಪೈಸೆ ಲೆಕ್ಕದಲ್ಲಿ ಪೆಟ್ರೋಲ್ ಮತು ಡೀಸೆಲ್ ಬೆಲೆ ಹೆಚ್ಚಾಗುತ್ತಿದೆ.

    ಕೊರೊನಾ ಲಾಕ್‍ಡೌನ್ ನಿಂದಾಗಿ ಜನಸಾಮಾನ್ಯರು ಬದುಕೋದು ಕಷ್ಟವಾಗಿದೆ. ಸಾಕಷ್ಟು ಜನಕ್ಕೆ ಆರ್ಥಿಕ ಹೊಡೆತ ಬಿದ್ದಿದೆ. ಇದರ ನಡುವೆ ಪೆಟ್ರೋಲ್, ಡಿಸೇಲ್ ಬೆಲೆಗಳು ಗಗನಕ್ಕೇರುತ್ತಿವೆ. ಅದ್ರಲ್ಲೂ ಪೆಟ್ರೋಲ್ ಬೆಲೆಯಂತೂ ಶತಕದ ಸನಿಹದಲ್ಲಿದೆ. ಈಗಾಗಲೇ ದೇಶದ ಕೆಲ ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ.

    ದೇಶದಲ್ಲಿ ಕೊರೊನಾ ಎರಡನೇ ಅಲೆ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯಗಳು ಲಾಕ್‍ಡೌನ್ ಆಗಿದ್ದರಿಂದ ಇಂಧನ ಮಾರಾಟದಲ್ಲಿ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿಗೆ ಹೋಲಿಕೆ ಮಾಡಿದ್ರೆ ಶೇ.17ರಷ್ಟು ಇಂಧನ ಮಾರಾಟದಲ್ಲಿ ಇಳಿಕೆಯಾಗಿದೆ. ಮೇ ತಿಂಗಳಿನಲ್ಲಿ ಪೆಟ್ರೋಲ್ ಬರೋಬ್ಬರಿ 17.9 ಲಕ್ಷ ಟನ್ ನಷ್ಟು ಇಳಿಕೆ ಕಂಡಿದೆ.

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗ್ತಿದೆ. ಜನವರಿಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್ ಗೆ 54.79 ಡಾಲರ್ ನಷ್ಟಿತ್ತು. ಇದೀಗ ಶೇ.22ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್ 66.98 ಡಾಲರ್ ಗೆ ತಲುಪಿದೆ.

  • ಬೆಲೆ ಏರಿಕೆ ಖಂಡಿಸಿ ಭಾರತ ಬಂದ್‍ಗೆ ಕರೆ

    ಬೆಲೆ ಏರಿಕೆ ಖಂಡಿಸಿ ಭಾರತ ಬಂದ್‍ಗೆ ಕರೆ

    ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆ, ಸರಕು ಮತ್ತು ಸೇವಾ ತೆರಿಗೆ, ಇ-ಬಿಲ್ ಇತ್ಯಾದಿಗಳನ್ನು ವಿರೋಧಿಸಿ ಶುಕ್ರವಾರ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಭಾರತ್ ಬಂದ್‍ಗೆ ಕರೆ ನೀಡಿದೆ. ಭಾರತ ಬಂದ್‍ಗೆ ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘ(ಎಐಟಿಡಬ್ಲೂಎ) ಕೂಡ ಬೆಂಬಲ ನೀಡುತ್ತಿದ್ದು, ಫೆಬ್ರವರಿ 26ರಂದು ಚಕ್ಕಾ ಜಾಮ್ ನಡೆಸಲಿದ್ದಾರೆ.

    ಹೇಗಿರಲಿದೆ ಬಂದ್?:
    * ಸುಮಾರು 40,000ಕ್ಕೂ ಹೆಚ್ಚು ವ್ಯಾಪಾರಿಗಳ ಸಂಘ ಬಂದ್‍ನಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ದೇಶಾದ್ಯಂತ ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಮುಚ್ಚಲಾಗುತ್ತದೆ.
    * ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿರುವುದರಿಂದ ಬೆಳಗ್ಗೆ 6ರಿಂದ ರಾತ್ರಿ 8ರವರೆಗೂ ಸಾರಿಗೆ ಸಂಸ್ಥೆಗಳ ಸಂಘ(ಎಐಟಿಡಬ್ಲೂಎ) ಹಾಗೂ ಎಲ್ಲಾ ಸಾರಿಗೆ ಸಂಸ್ಥೆಗಳಿಗೆ ಸಂಚಾರ ಸ್ಥಗಿತಗೊಳಿಸುವುದಾಗಿ ಸೂಚಿಸಲಾಗಿದೆ.
    * ಬುಕಿಂಗ್ ಹಾಗೂ ಬಿಲ್ ಆಧಾರಿತ ಸರಕುಗಳ ಸಾಗಣೆಗೆ ತಡೆ.
    * ರಾಷ್ಟ್ರವ್ಯಾಪ್ತಿ 1,500 ಸ್ಥಳಗಳಲ್ಲಿ ಧರಣಿ ನಡೆಸಲಾಗುತ್ತದೆ.
    * 40 ಲಕ್ಷ ರಸ್ತೆಗಳು ಶುಕ್ರವಾರ ಬಂದ್
    * ಆಲ್ ಇಂಡಿಯಾ ಮೋಟರ್ ಟ್ರಾನ್ಸ್‍ಪೋರ್ಟ್ ಕಾಂಗ್ರೆಸ್(ಎಐಎಂಟಿಸಿ) ಮತ್ತು ಭೈಚರಾ ಆಲ್ ಇಂಡಿಯಾ ಟ್ರಕ್ ಆಪರೇಟರ್ ವೆಲ್‍ಫೆರ್ ಅಸೋಸಿಯೆಟ್(ಬಿಎಐಟಿಓಡಬ್ಲೂಎ) ಬಂದ್‍ನಲ್ಲಿ ಭಾಗವಹಿಸುತ್ತಿಲ್ಲ.

    ಜಿಎಸ್‍ಟಿ ವ್ಯವಸ್ಥೆಯಲ್ಲಿನ ತೆರಿಗೆಗಳನ್ನು ಕಡಿತಗೊಳಿಸಲು ಮತ್ತು ಅನೇಕ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಇ-ವೇ ಬಿಲ್ ಕಾನೂನುಗಳನ್ನು ರದ್ದುಗೊಳಿಸುವಂತೆ ಮತ್ತು ಇಂಧನ ಬೆಲೆಯನ್ನು ಖಂಡಿಸಿ ಸಾರಿಗೆ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆ ಜಿಎಸ್‍ಟಿ ಕಾನೂನಿಂದ 100 ಕಿ.ಮೀನಿಂದ 200ಕಿ.ಮೀ ವರೆಗೂ ಅಂತರವನ್ನು ಹೆಚ್ಚಿಸಿರುವ ಇ-ಬಿಲ್‍ನನ್ನು ಕಡಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತದೆ.

  • ಬಿಜೆಪಿ-ಕಾಂಗ್ರೆಸ್ ಮಧ್ಯೆ ಪೆಟ್ರೋಲ್ ಪೈಸೆ ಫೈಟ್

    ಬಿಜೆಪಿ-ಕಾಂಗ್ರೆಸ್ ಮಧ್ಯೆ ಪೆಟ್ರೋಲ್ ಪೈಸೆ ಫೈಟ್

    ನವದೆಹಲಿ: ದೇಶದಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಗಗನಮುಖಿಯಾಗಿದೆ. ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

    ಕೊರೊನಾ ಸಂಕಷ್ಟದ ನಡುವೆ ಜನರಿಗೆ ಬದುಕುವುದೇ ಕಷ್ಟವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದೆ. ತಕ್ಷಣವೇ ತೈಲದರ ಏರಿಕೆ ಹಿಂಪಡೆಯಿರಿ ಅಂತ ಆಗ್ರಹಿಸಿದ್ದಾರೆ. 10 ದಿನಗಳಲ್ಲಿ ಪೆಟ್ರೋಲ್ ದರ ಲೀಟರಿಗೆ 5.45 ರೂ. ಹಾಗೂ ಡೀಸೆಲ್ ಲೀಟರಿಗೆ 5.80 ರೂ. ಏರಿಕೆಯಾಗಿದೆ.

    ಜೂನ್ 7ರಂದು ಒಂದು ಬ್ಯಾರೆಲ್‍ಗೆ 42 ಡಾಲರ್ ಇತ್ತು. ಆಗ ಭಾರತ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ದರವನ್ನು 64 ಪೈಸೆ ಹಾಗೂ ಡೀಸೆಲ್ ದರವನ್ನು 60 ಪೈಸೆ ಏರಿಕೆ ಮಾಡಿತ್ತು. ಇದರಿಂದಾಗಿ ಪೆಟ್ರೋಲ್ 74.61 ರೂ. ಹಾಗೂ ಡೀಸೆಲ್ 68.42 ರೂ. ನಿಗದಿಯಾಗಿತ್ತು. ಅಲ್ಲಿಂದ ಏರಿಕೆಯಾಗುತ್ತಲೇ ಬಂದ ಇಂಧನ ದರವು ಜೂನ್ 16 ವೇಳೆಗೆ ಪ್ರತಿ ಲೀಟರ್ ಪೆಟ್ರೋಲ್ 79.64 ರೂ. ಹಾಗೂ ಡೀಸೆಲ್ 73.50 ರೂ. ಆಗಿದೆ.

    ಇಂಧನ ಏರಿಕೆ ಹಿನ್ನೆಲೆ ವಿಪಕ್ಷ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.