Tag: Funeral ceremony

  • ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ

    ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ

    `ಕಾಮಿಡಿ ಕಿಲಾಡಿಗಳು ಸೀಸನ್ 3’ರ ಖ್ಯಾತಿಯ ರಾಕೇಶ್ ಪೂಜಾರಿ ಅಂತ್ಯಕ್ರಿಯೆ ಉಡುಪಿಯ(Udupi) ಹೂಡೆಯ ಸ್ಮಶಾನದಲ್ಲಿ ನಡೆಯಿತು.

    ಹುಟ್ಟೂರು ಉಡುಪಿಯಲ್ಲಿ ರಾಕೇಶ್ ಪೂಜಾರಿ(Rakesh Poojary) ಅವರ ಅಂತ್ಯಕ್ರಿಯೆ ನಡೆದಿದೆ. ಯೋಗರಾಜ್ ಭಟ್, ಅನುಶ್ರೀ, ರಕ್ಷಿತಾ ಪ್ರೇಮ್, ಮಲೈಕಾ, ನಯನ, ಸೂರಜ್ ಸೇರಿ ಅನೇಕ ಕಲಾವಿದರು ರಾಕೇಶ್‌ ಅವರ ಅಂತಿಮ ದರ್ಶನ ಪಡೆದರು. ಇದನ್ನೂ ಓದಿ: ರಾಕೇಶ್ ಅಕಾಲಿಕ ಮರಣ ನೋವು ತಂದಿದೆ: ಯೋಗರಾಜ್ ಭಟ್

    ಹೂಡೆ ಬೀಚ್(Hoode Beach) ಪಕ್ಕದಲ್ಲಿ ರಾಕೇಶ್ ಅವರ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಮನೆಯಿಂದ ಸ್ಮಶಾನದವರೆಗೆ ಅಂತಿಮ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ನಟನಟಿಯರು, ಕುಟುಂಬಸ್ಥರು ಹಾಗೂ ಆಪ್ತರು ಸೇರಿ ನೂರಾರು ಮಂದಿ ಭಾಗಿಯಾಗಿದ್ದರು. ಇದನ್ನೂ ಓದಿ: ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ

    ರಾಕೇಶ್ ಅವರ ಮಾವಂದಿರಾದ ಸತೀಶ್ ಪೂಜಾರಿ ಹಾಗೂ ಶ್ರೀಧರ ಪೂಜಾರಿ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅವರ ಅಂತ್ಯಕ್ರಿಯೆಯು ಬಿಲ್ಲವ ಸಂಪ್ರದಾಯದಂತೆ ಪಡುತೋನ್ಸೆಯ ಬಿಲ್ಲವ ಸಮಾಜ ರುದ್ರಭೂಮಿಯಲ್ಲಿ ನೆರವೇರಿತು.

    ಜನಪ್ರಿಯ ಹಾಸ್ಯ ಕಾರ್ಯಕ್ರಮ ಕಾಮಿಡಿ ಕಿಲಾಡಿಗಳು(Comedy Khiladigalu Season-3) ಸೀಸನ್ -3 ರ ಗ್ರ‍್ಯಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿದ್ದ ಉಡುಪಿ ನಿವಾಸಿ ರಾಕೇಶ್, ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ. ರಾಕೇಶ್ ತಮ್ಮ ಶಾಲಾ ಶಿಕ್ಷಣವನ್ನ ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದರು. ಅಷ್ಟೇ ಅಲ್ಲ ಪೈಲ್ವಾನ್, ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕ್ಕೆಲ್ ತುಳು ನಾಟಕಗಳು, ಪ್ರಹಸನಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ಇದನ್ನೂ ಓದಿ: ಮೃದು ಸ್ವಭಾವದ ವ್ಯಕ್ತಿತ್ವ ನಿನ್ನದು – ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಸಂತಾಪ

    ಇಂದು ಬೆಳಗ್ಗಿನ ಜಾವ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಟನ ನಿಧನಕ್ಕೆ ಸ್ಯಾಂಡಲ್‌ವುಡ್ ಕಲಾವಿದರು ಸಂತಾಪ ಸೂಚಿಸಿದ್ದಾರೆ.

  • ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮಂಜುನಾಥ್ ಅಂತ್ಯಕ್ರಿಯೆ

    ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮಂಜುನಾಥ್ ಅಂತ್ಯಕ್ರಿಯೆ

    ಶಿವಮೊಗ್ಗ: ಪಹಲ್ಗಾಮ್‌ನಲ್ಲಿ (Pahalgam) ಉಗ್ರರ ಗುಂಡೇಟಿಗೆ ಬಲಿಯಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ (Manjunath Rao) ಅವರ ಅಂತ್ಯಕ್ರಿಯೆ ತುಂಗಾ ತೀರದಲ್ಲಿರುವ ರೋಟರಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

    ಪುತ್ರ ಅಭಿಜನ್ ಬ್ರಾಹ್ಮಣ (Brahmin) ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಂತ್ಯ ಸಂಸ್ಕಾರದ ಅಂತಿಮ ವಿಧಿವಿಧಾನವು ಗುಂಡಾ ಭಟ್ಟರ ನೇತೃತ್ವದಲ್ಲಿ ನಡೆಯಿತು. ಇದನ್ನೂ ಓದಿ: ಪಹಲ್ಗಾಮ್ ದಾಳಿ | ಕೂಡಲೇ ಪಾಕ್‌ ತೊರೆಯಿರಿ ಭಾರತೀಯರಿಗೆ ಕೇಂದ್ರ ಸೂಚನೆ

    ಮಂಜುನಾಥ್ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ 10:30ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗದಲ್ಲಿರುವ (Shivamogga) ನಿವಾಸಕ್ಕೆ ತರಲಾಯಿತು. ಬಳಿಕ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ 12:30ರ ಸುಮಾರಿಗೆ ನಿವಾಸದಲ್ಲಿ ಅಂತಿಮ ವಿಧಿಗಳನ್ನು ಪೂರೈಸಿ ಮಂಜುನಾಥ್‌ರವರ ಅಂತಿಮಯಾತ್ರೆ ಹೊರಟಿತು. ಇದನ್ನೂ ಓದಿ: ನನ್ನನ್ನೂ ಶೂಟ್ ಮಾಡು ಅಂದೆ, ಅವ್ನು ಹೋಗಿ ಮೋದಿಗೆ ಹೇಳು ಅಂದ: ಮಂಜುನಾಥ್ ಪುತ್ರ

    ಅಂತಿಮ ಮೆರವಣಿಗೆಯು ಐಬಿ ಸರ್ಕಲ್ ಮೂಲಕ ಕುವೆಂಪು ರಸ್ತೆಗೆ ಬಂದು, ಜೈಲ್ ಸರ್ಕಲ್‌ನಿಂದ ದುರ್ಗಿಗುಡಿ ಮುಖ್ಯರಸ್ತೆ ಮೂಲಕ ಸೀನಪ್ಪ ಶೆಟ್ಟಿ ಸರ್ಕಲ್‌ಗೆ ತಲುಪಿತು. ಅಲ್ಲಿಂದ ಅಮೀರ್ ಅಹಮದ್ ಸರ್ಕಲ್ ಮೂಲಕ ಬಿಹೆಚ್ ರೋಡ್ ನಲ್ಲಿ ಸಾಗಿ, ರೋಟರಿ ಚಿತಾಗಾರವನ್ನು ತಲುಪಿತು. ಇದನ್ನೂ ಓದಿ: ಪಹಲ್ಗಾಮ್‌ ದಾಳಿ – ಪಾಕ್‌ ಉಗ್ರರ ಮಾಹಿತಿ ಕೊಟ್ಟವರಿಗೆ 20 ಲಕ್ಷ ಬಹುಮಾನ ಘೋಷಣೆ

    ಅಂತಿಮಯಾತ್ರೆ ವೇಳೆ ಮಾರ್ಗದುದ್ದಕ್ಕೂ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟನ್ನು ಮುಚ್ಚಿ ಅಂತಿಮ ನಮನ ಸಲ್ಲಿಸಿದರು. ರೋಟರಿ ಚಿತಾಗಾರಕ್ಕೆ ಮೃತದೇಹ ತಲುಪುತ್ತಲೇ ಶಾಸಕ ಚನ್ನಬಸಪ್ಪ ಹಾಗೂ ವಿವಿಧ ರಾಜಕೀಯ ಮುಖಂಡರು ಮೃತದೇಹಕ್ಕೆ ಹೆಗಲು ನೀಡಿದರು. ಇದನ್ನೂ ಓದಿ: ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೇವೆ: ಘರ್ಜಿಸಿದ ಮೋದಿ

    ಬಳಿಕ ಪಾರ್ಥಿವ ಶರೀರಕ್ಕೆ ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸರ್ಕಾರಿ ಗೌರವ ನೀಡಿದರು. ಗುಂಡಾಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳು ನಡೆದಿದ್ದು, ಪುತ್ರ ಅಭಿಜನ್ ಕಣ್ಣೀರಿಡುತ್ತಲೇ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಇದನ್ನೂ ಓದಿ: ಭಾರತದಿಂದ ದಾಳಿ ಭೀತಿ – ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್‌

    ಈ ವೇಳೆ ಪತ್ನಿ ಪಲ್ಲವಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಚಿವ ಮಧು ಬಂಗಾರಪ್ಪ ಅವರು ಸ್ಥಳದಲ್ಲಿದ್ದು ಮೃತ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

  • ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು

    ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’- ಯಜಮಾನರ ಪಟ್ಟು

    – ಮೃತನ ಮನೆಗೆ ಹೋಗದಂತೆ ಗ್ರಾಮಸ್ಥರಿಗೆ ಆದೇಶ
    – 19,300 ರೂ. ಕೊಟ್ಟ ಬಳಿಕ ನಡೆದ ಅಂತ್ಯಸಂಸ್ಕಾರ
    – ಮೂಕಪ್ರೇಕ್ಷಕರಂತೆ 4 ಗಂಟೆ ನಿಂತಿದ್ದ ಪೊಲೀಸರು

    ಚಾಮರಾಜನರ: ‘ಸಾಲದ ದುಡ್ಡು ವಾಪಸ್ ಕೊಡುವವರೆಗೂ ಶವ ಸಂಸ್ಕಾರಕ್ಕೆ ಬಿಡಲ್ಲ’ ಎಂದು ಯಜಮಾನರು ಪಟ್ಟು ಹಿಡಿದ ಅಮಾನವೀಯ ಘಟನೆ ಜಿಲ್ಲೆಯ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.

    ಅಮಚವಾಡಿ ಗ್ರಾಮದ ನಿವಾಸಿ ಲಿಂಗರಾಜ್ ನಾಯಕ್ (45) ಮೃತ ವ್ಯಕ್ತಿ. ಅದೇ ಗ್ರಾಮದ ಯಜಮಾನರು ಲಿಂಗರಾಜ್ ಕುಟುಂಬಸ್ಥರಿಗೆ ಬಹಿಷ್ಕಾರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಸಾಲದ ಹಣ ಪಾವತಿಸುವವರೆಗೂ ಶವ ಸಂಸ್ಕಾರಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

    ಲಿಂಗರಾಜ್ ನಾಯಕ್ ಮೃತಪಟ್ಟು ಅರ್ಧ ದಿನವೇ ಕಳೆದು ಹೋಗಿತ್ತು. ಆತನ ಸಾವಿನ ಸುದ್ದಿ ಇಡೀ ಊರಿಗೆ ಹರಡಿತ್ತು. ಸಾವಿರಾರು ಜನರಿರುವ ಅಮಚವಾಡಿ ಗ್ರಾಮದ ಯಾರೊಬ್ಬರೂ ಲಿಂಗರಾಜ್ ಮನೆಗೆ ಕಡೆಗೆ ಸುಳಿಯಲಿಲ್ಲ. ಬೇರೆ ಬೇರೆ ಕಡೆಯಿಂದ ಬಂದ ನೆಂಟರಸ್ಥರಿಗೂ ಅಂತ್ಯ ಸಂಸ್ಕಾರ ಮಾಡದಂತೆ ಗ್ರಾಮದ ಯಜಮಾನರು ಅಲಿಖಿತ ಆದೇಶ ನೀಡಿದ್ದರು. ಹೊತ್ತು ಮುಳುಗುತ್ತಿದ್ದರೂ ಅಂತ್ಯ ಸಂಸ್ಕಾರ ಆಗದೇ ಇರುವುದನ್ನು ನೆನೆದು ಲಿಂಗರಾಜ್‍ನ ಮಕ್ಕಳು ಮತ್ತು ಪತ್ನಿ ಕಣ್ಣೀರಿಡುತ್ತಿದ್ದ ದೃಶ್ಯ ನೋಡುಗರ ಮನಕಲಕುವಂತೆ ಮಾಡಿತ್ತು.

    ಲಿಂಗರಾಜ್ ನಾಯಕ್‍ಗೆ ಇಬ್ಬರು ಪತ್ನಿಯರು ಹಾಗೂ ನಾಲ್ಕು ಮಕ್ಕಳಿದ್ದಾರೆ. ಮೊದಲನೇ ಹೆಂಡತಿ ಕಳೆದ 12 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಳು. ಎರಡನೇ ಹೆಂಡತಿ ಪತಿಯ ಕಿರುಕುಳ ತಾಳಲಾರದೇ ತವರು ಮನೆ ಸೇರದ್ದಳು. ಮೊದಲನೇ ಹೆಂಡತಿ ಎರಡು ಮಕ್ಕಳನ್ನ ಮದುವೆ ಮಾಡಲಾಗಿತ್ತು. ಉಳಿದವರು ಬೇರೆ ಕಡೆ ವಾಸವಿದ್ದರು. ಹಾಗಾಗಿ ಲಿಂಗರಾಜ್ ನಾಯಕ್ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ.

    ಮದ್ಯ ಕುಡಿತದ ದಾಸನಾಗಿದ್ದ ಲಿಂಗರಾಜ್ ವಿವಿಧ ಸಂಘಗಳಿಂದ ಸಾಲ ಮಾಡಿದ್ದ. ಸಾಲ ಕೊಡದೇ ಇದ್ದಾಗ ಗ್ರಾಮಸ್ಥರು ಅವನಿಗೆ 19,300 ರೂ. ಕೊಡುವವರೆಗೂ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಜೊತೆಗೆ ಲಿಂಗರಾಜ್ ಮೂರು ಎಕರೆ ಜಾಗವನ್ನು ಇಬ್ಬರಿಗೆ ಮಾರ್ಟ್ ಗೇಜ್ ಮಾಡಿ ಹಣ ಪಡೆದಿದ್ದ. ಬಹಿಷ್ಕಾರಕ್ಕೆ ಕ್ಯಾರೇ ಎನ್ನದೆ ತನ್ನಷ್ಟಕ್ಕೆ ತಾನು ಎಂಬತಿದ್ದ. ಆದರೆ ಇದ್ದಕ್ಕಿದ್ದಂತೆ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಬೆಳಗ್ಗೆ ಮಕ್ಕಳು ಬಂದರೂ ಕೂಡ ಅಂತ್ಯ ಸಂಸ್ಕಾರಕ್ಕೆ ಗ್ರಾಮದ ಯಜಮಾನರು ಅವಕಾಶ ಕಲ್ಪಿಸಿರಲಿಲ್ಲ. ಅಷ್ಟೇ ಅಲ್ಲದೆ ಯಾರೂ ಕೂಡ ಮೃತ ಲಿಂಗರಾಜ್ ಮನೆಗೆ ಹೋಗುವಂತಿಲ್ಲ ಎಂದು ಯಜಮಾನರು ಗ್ರಾಮಸ್ಥರಿಗೆ ತಾಕೀತು ಮಾಡಿದ್ದರು.

    19,300 ರೂ. ನೀಡ ಬೇಕು. ಜೊತೆಗೆ ಜಮೀನ್ನು ಮಾರ್ಟ್ ಗೇಜ್ ಮಾಡಿ ಪಡೆದಿರುವ ಒಂದೂವರೆ ಲಕ್ಷ ರೂ. ಹಣವನ್ನ ಕೊಡ ಬೇಕು ಎಂದು ಯಜಮಾನರು ಮೃತನ ಮಗನಿಗೆ ಹೇಳಿದ್ದರು. ಸಾವಿರಾರು ರೂಪಾಯಿ ಹಣ ಇಲ್ಲದೇ ಇರುವಾಗ ಲಕ್ಷಾಂತರ ರೂಪಾಯಿ ತರುವುದಾದರು ಎಲ್ಲಿಂದ ಎಂದು ಮೃತನ ಮಕ್ಕಳು ಯಜಮಾನರ ಬಳಿ ಅಂಗಲಾಚಿದ್ದರು. ಆದರೆ ಅದ್ಯಾವುದಕ್ಕೂ ಒಪ್ಪದ ಯಜಮಾನರು ಹಣ ನೀಡುವವರೆಗೆ ಶವ ಎತ್ತದಂತೆ ಕಟ್ಟಪ್ಪಣೆ ಹೊರಡಿಸಿದ್ದರು.

    ಈ ಮಧ್ಯೆ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನಾಲ್ಕೈದು ಗಂಟೆಗಳ ಕಾಲ ಕುಳಿತ್ತಿದ್ದರು. ನಂತರ ಸಾಲಸೋಲ ಮಾಡಿ 19,300 ರೂ. ಕೊಡುತ್ತಿದ್ದಂತೆ ಶವ ಎತ್ತಲು ಅವಕಾಶ ಕಲ್ಪಿಸಲಾಯಿತು. ಆದರೂ ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರು ಹೋಗದಂತೆ ನಿರ್ಬಂಧ ವಿಧಿಸಲಾಗಿತ್ತು.

    ಇಂತಹ ಆಧುನಿಕ ಯುಗದಲ್ಲೂ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಜಾರಿಯಲ್ಲಿ ಇರುವುದು ಮಾತ್ರ ದುರಾದೃಷ್ಟ. ಬಹಿಸ್ಕಾರದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಶವ ಸಂಸ್ಕಾರಕ್ಕೆ ಅವಕಾಶ ಕಲ್ಪಿಸದೇ ಇರುವುದು ಮಾತ್ರ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಸ್ಥಳಕ್ಕೆ ಬಂದ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡ ಬಹಿಸ್ಕಾರ ಹಾಕಿದವರ ವಿರುದ್ಧ ಮಾತನಾಡದೇ ಇದ್ದದ್ದು ದುರ್ದೈವ ಎಂದು ಸ್ಥಳೀಯರು ದೂರಿದ್ದಾರೆ.

  • ‘T’ ಯಮ..!

    ‘T’ ಯಮ..!

    https://www.youtube.com/watch?v=ubn6UZ1R4pU

  • ಕಾಫಿ ತೋಟದಲ್ಲಿ ‘ಕಾಫಿ ಕಿಂಗ್’ ಲೀನ

    ಕಾಫಿ ತೋಟದಲ್ಲಿ ‘ಕಾಫಿ ಕಿಂಗ್’ ಲೀನ

    ಚಿಕ್ಕಮಗಳೂರು: ಉದ್ಯಮಿ ವಿಜಿ ಸಿದ್ಧಾರ್ಥ್ ಹೆಗ್ಡೆ ಅವರ ಅಂತ್ಯಸಂಸ್ಕಾರವು ಸ್ವಗ್ರಾಮ ಬೇಲೂರಿನ ಚಿಕ್ಕನಹಳ್ಳಿಯ ಚೇತನಹಳ್ಳಿ ಎಸ್ಟೇಟ್ ನಿವಾಸದ ಬಳಿ ಸಾವಿರಾರು ಜನರ ಕಣ್ಣೀರಧಾರೆ ನಡುವೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿತು.

    ವಿಜಿ ಸಿದ್ಧಾರ್ಥ ಅವರ ಚಿತೆಗೆ ಹಿರಿಯ ಪುತ್ರ ಅಮರ್ತ್ಯ ಅಂತಿಮ ವಿಧಿವಿಧಾನ ನಡೆಸಿ ಪೂಜೆ ನಡೆಸಿದರು. ಬಳಿಕ ಪುತ್ರರಾದ ಅಮರ್ತ್ಯ ಮತ್ತು ಕಿರಿಯ ಪುತ್ರ ಇಶಾನ್ ಅಗ್ನಿ ಸ್ಪರ್ಶ ನೇರವೇರಿಸಿದರು. ಹಲಸು, ಶ್ರೀಗಂಧ, ಮಾವು, ಆಲದ ಮರದಿಂದ ಸಿದ್ಧಪಡಿಸಿರುವ ಚಿತೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.

    ಕಾಫಿ ಡೇ ಮಾಲೀಕ, ಉದ್ಯಮಿ ಸಿದ್ದಾರ್ಥ್ ಮೂರು ದಿನಗಳ ಹಿಂದೆ ಇಳಿ ಸಂಜೆ ನೇತ್ರಾವತಿ ಸೇತುವೆ ಮೇಲಿನಿಂದ ಕಣ್ಮರೆಯಾಗಿದ್ದರು. ಅವರಿಗಾಗಿ ನಿರಂತರವಾಗಿ ಮೂರು ದಿನ ಹುಡುಕಾಟ ನಡೆಸಲಾಗಿತ್ತು. ಸಿದ್ಧಾರ್ಥ್ ಅವರು ಹೊಯಿಗೆ ಬಜಾರಿನ ಅಳಿವೆ ಬಾಗಿಲಿನಲ್ಲಿ ಇಂದು ಬೆಳಗ್ಗೆ 6.30ಕ್ಕೆ ಶವದ ರೂಪದಲ್ಲಿ ಪತ್ತೆಯಾದರು. ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಕಣ್ಣಿಗೆ ಸಿದ್ದಾರ್ಥ್ ಮೃತದೇಹ ಕಂಡಿತ್ತು. ಮಾಹಿತಿ ಗೊತ್ತಾದ ಕೂಡಲೇ ಕುಟುಂಬಸ್ಥರು, ಆಪ್ತರು, ಕಾಫಿಡೇ ಕುಟುಂಬದ ಆಕ್ರಂದನ ಮುಗಿಲುಮುಟ್ಟಿತ್ತು.

    ಮಧ್ಯಾಹ್ನ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಿಂದ ವಿಶೇಷ ಅಂಬುಲೆನ್ಸ್‍ನಲ್ಲಿ ಚಿಕ್ಕಮಗಳೂರು ನಗರದ ಎಬಿಸಿ ಕಾಫಿ ಕ್ಯೂರಿಂಗ್ ಅವರಣಕ್ಕೆ ತರಲಾಯಿತು. ಅಳಿಯ ಪಾರ್ಥಿವ ಶರೀರ ನೋಡಿದ ಹಿರಿಯ ಜೀವ ಎಸ್.ಎಂ.ಕೃಷ್ಣ ಮನಸ್ಸು ಭಾರವಾಗಿತ್ತು. ಕಪ್ಪು ಕನ್ನಡಕ ಅವರ ದುಃಖವನ್ನು ಮರೆ ಮಾಚಿತ್ತು. ಎಸ್‍ಎಂ ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ, ಸಿದ್ದಾರ್ಥ್ ಧರ್ಮಪತ್ನಿ ಮಾಳವಿಕಾ, ತಾಯಿ ವಸಂತಿ ಕಣ್ಣಾಲಿಗಳು ತುಂಬಿಬಂದಿದ್ದವು. ಎಲ್ಲರ ದುಃಖದ ಕಟ್ಟೆ ಒಡೆದಿತ್ತು. ಮಕ್ಕಳಾದ ಅಮಥ್ಯ ಮತ್ತು ಇಶಾನ್‍ರ ಕಣ್ಣೀರ ಕೋಡಿ ನಿಲ್ಲಲೇ ಇಲ್ಲ. ಆದರೆ ಮೈಸೂರಿನ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಪ್ಪ ಗಂಗಯ್ಯ ಹೆಗ್ಡೆ ಅವರಿಗೆ ಪುತ್ರನ ಮುಖವನ್ನು ಕೊನೆಯದಾಗಿ ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿಲ್ಲ.

    ಎಬಿಸಿ ಕಾಫಿ ಕ್ಯೂರಿಂಗ್ ಅವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್ ಸೇರಿದಂತೆ ನೂರಾರು ರಾಜಕಾರಣಿಗಳು, ಸಹಸ್ರಾರು ಸಂಖ್ಯೆಯಲ್ಲಿ ಬಂದಿದ್ದ ಅಭಿಮಾನಿಗಳು, ಕಾರ್ಮಿಕರು ಅಂತಿಮ ದರ್ಶನ ಪಡೆದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ಧಾರ್ಥ್ ಅವರನ್ನು ನೆನೆದು ಕಣ್ಣೀರಿಟ್ಟರು.

    ಕಾಫಿ ನಾಡು ಚಿಕ್ಕಮಗಳೂರಿಗೂ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರಿಗೂ ಅವಿನಾಭಾವ ಸಂಬಂಧ. ಚಿಕ್ಕಮಗಳೂರಿನ ಬಹುತೇಕರು ಒಂದಲ್ಲ ಒಂದು ರೀತಿ, ಒಂದಲ್ಲ ಒಂದು ಕ್ಷಣದಲ್ಲಿ ಸಿದ್ಧಾರ್ಥ್ ಅವರಿಂದ ನೆರವು ಪಡೆದವರೇ. ಹೀಗಾಗಿ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಿದ್ಧಾರ್ಥ್ ಪಾರ್ಥಿವ ಶರೀರವನ್ನು ತರುವ ಮಾರ್ಗದುದ್ದಕ್ಕೂ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ಸಂತಾಪ ಸೂಚಿಸಿದರು. ಮಲೆನಾಡ ಹೆಬ್ಬಾಗಿಲು ಕೊಟ್ಟಿಗೆಹಾರ, ಬಣಕಲ್‍ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣ ಆಗಿತ್ತು. ಪಾರ್ಥಿವ ಶರೀರ ಬರುವಿಕೆಗಾಗಿ ಮಾರ್ಗದುದ್ದಕ್ಕೂ ಕಾದು ನಿಂತ ಸಾವಿರಾರು ಜನ, ವಾಹನ ನಿಲ್ಲಿಸಿ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರು, ಹಾಸನ, ಮಡಿಕೇರಿ ಜಿಲ್ಲೆಯ ಕಾಫಿ ಕಾರ್ಮಿಕರಿಗೆ ರಜೆ ಘೋಷಿಸಲಾಗಿತ್ತು. ಕಾಫಿ ಕೆಲಸ ಸಂಪೂರ್ಣ ಸ್ತಬ್ಧವಾಗಿತ್ತು.

    ಸಿದ್ಧಾರ್ಥ್ ಅಕಾಲಿಕ ಅಗಲಿಕೆಗೆ ರಾಜಕೀಯ ಗಣ್ಯರು, ಸ್ವಾಮೀಜಿಗಳು, ಆಪ್ತರ ಉದ್ಯಮಿಗಳು ಕಂಬನಿ ಮಿಡಿದಿದ್ದಾರೆ. ಸಿದ್ದಾರ್ಥ್ ಬದುಕಿನ ವಿಚಾರದಲ್ಲಿ ದುಡುಕಿದ್ದಾರೆ. ಭಗವಂತ ಎಸ್‍ಎಂ ಕೃಷ್ಣ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು, ಸಿದ್ದಾರ್ಥ್ ನಿಧನವನ್ನ ಅರಗಿಸಿಕೊಳ್ಳಲು ಆಗ್ತಿಲ್ಲ. ಇದು ದೇಶಕ್ಕೆ ದೊಡ್ಡ ನಷ್ಟ. ಸಾವಿರಾರು ಜನಕ್ಕೆ ಸ್ವಾಭಿಮಾನದಿಂದ ಬದುಕಲು ದಾರಿ ಮಾಡಿಕೊಟ್ಟಿದ್ದ ನಂದಾದೀಪ ಆರಿ ಹೋಗಿದೆ ಅಂತ ಸಂತಾಪ ಸೂಚಿಸಿದ್ದಾರೆ. ಅವರ ಈ ದಾರುಣ ಸಾವಿಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

    ಡಿಕೆ ಶಿವಕುಮಾರ್ ಮಾತನಾಡಿ, ಸಿದ್ಧಾರ್ಥ್ ನಮ್ಮ ರಾಜ್ಯದ ಆಸ್ತಿ. ಇಷ್ಟೊಂದು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದರು. ಆದಾಯ ತೆರಿಗೆ ಇಲಾಖೆ ಏನ್ ಬೇಕಾದರೂ ಮಾತಾಡಿಕೊಳ್ಳಲಿ. ಎಲ್ಲವನ್ನೂ ದೇವರೇ ನೋಡಿಕೊಳ್ಳುತ್ತಾನೆ ಎಂದು ಮಾರ್ಮಿಕವಾಗಿ ನುಡಿದರು.

    ಖುದ್ದು ಸ್ಥಳದಲ್ಲಿ ಬೀಡುಬಿಟ್ಟು ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದ ಮಾಜಿ ಸಚಿವ ಯು.ಟಿ ಖಾದರ್, ಸಂತಾಪ ಸೂಚಿಸಿದರು. ಶವ ಪತ್ತೆಯಾದ ರೀತಿಯನ್ನು ವಿವರಿಸಿದರು. ನೀರಿನ ಸೆಳೆತ, ವೇಗಕ್ಕೆ ಸಿದ್ಧಾರ್ಥ್ ಧರಿಸಿದ್ದ ಟೀ ಶರ್ಟ್ ಬಿಚ್ಚಿ ಹೋಗಿದೆ. ಸಿದ್ಧಾರ್ಥ್ ಪ್ಯಾಂಟಿನಲ್ಲಿ ಮೊಬೈಲ್, ಕರ್ಚಿಫ್ ಸಿಕ್ಕಿದೆ. ಕೈಯಲ್ಲಿ ಉಂಗುರ, ಡಿಜಿಟಲ್ ವ್ಹಾಚ್ ಇದೆ ಎಂದು ತಿಳಿಸಿದರು. ಶೃಂಗೇರಿ ಶಾಸಕ ರಾಜೇಗೌಡರರು ಆಪ್ತ ಮಿತ್ರ ಸಿದ್ಧಾರ್ಥ್ ಅವರನ್ನು ನೆನೆದು ಕಂಬನಿ ಮಿಡಿದರು.

    https://www.youtube.com/watch?v=zudpwA7rBm4