Tag: G7 Summit

  • ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

    ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

    -ಕೆನಡಾ ಪ್ರವಾಸ ಮುಗಿಸಿ ಕ್ರೊಯೇಷಿಯಾಗೆ ತೆರಳಿದ ಮೋದಿ

    ಒಟ್ಟಾವಾ: ಭಾರತ (India) ಮತ್ತು ಕೆನಾಡ (Canada) ನಡುವಿನ ಸಂಬಂಧ ಸುಧಾರಿಸಿದ್ದು, ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಕೆನಡಾ ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ಕೆನಡಾದ ನೂತನ ಪ್ರಧಾನಮಂತ್ರಿ ಮಾರ್ಕ್ ಕಾರ್ನಿ (Mark Carney) ಅವರನ್ನು ಭೇಟಿ ಮಾಡಿದ್ದಾರೆ.

    ಕೆನಡಾ ಪ್ರಧಾನಿ ಭೇಟಿ ವೇಳೆ ಎರಡೂ ದೇಶಗಳ ನಡುವೆ ಸಂಬಂಧ ಸುಧಾರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿತ್ತು. ಎರಡೂ ದೇಶಗಳು ತಮ್ಮ ಹೈಕಮಿಷನರ್‌ಗಳನ್ನು ವಾಪಸ್ ಕರೆಸಿಕೊಂಡಿದ್ದವು. ಈಗ ಮಾತುಕತೆ ಬಳಿಕ ಭಾರತ ಮತ್ತು ಕೆನಡಾ ಹೊಸ ಹೈಕಮಿಷನರ್‌ಗಳನ್ನು ನೇಮಿಸಲು ಒಪ್ಪಿಕೊಂಡಿವೆ. ಇದನ್ನೂ ಓದಿ: ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

    ಎರಡೂ ದೇಶಗಳು ಸಾಮಾನ್ಯ ರಾಜತಾಂತ್ರಿಕ ಸೇವೆಗಳನ್ನು ಪುನರಾರಂಭಿಸಲು ಹೊಸ ಹೈಕಮಿಷನರ್‌ಗಳನ್ನು ನೇಮಿಸುತ್ತವೆ. ಇದು ಎರಡೂ ದೇಶಗಳ ನಾಗರಿಕರು ಮತ್ತು ಉದ್ಯಮಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಶುದ್ಧ ಇಂಧನ, ಶುದ್ಧ ತಂತ್ರಜ್ಞಾನ, ಡಿಜಿಟಲ್ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ, ಆಹಾರ ಭದ್ರತೆ, ನಿರ್ಣಾಯಕ ಖನಿಜಗಳು ಮತ್ತು ಪೂರೈಕೆ ಸರಪಳಿಗಳಿಗೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಸಂಭಾವ್ಯ ಸಹಕಾರವನ್ನು ಉಭಯ ನಾಯಕರು ಚರ್ಚಿಸಿದ್ದಾರೆ. ಕೆನಡಾ ಪ್ರವಾಸ ಮುಗಿಸಿದ ಮೋದಿ ಇದೀಗ ಕ್ರೊಯೇಷಿಯಾಗೆ ತೆರಳಿದ್ದಾರೆ. ಇದನ್ನೂ ಓದಿ: ವರುಣಾರ್ಭಟಕ್ಕೆ ಬಿರುಕು ಬಿಟ್ಟ ನಿಜಾಮರ ಕಾಲದ ಸೇತುವೆ – ಇತ್ತ ಮಲೆನಾಡಲ್ಲಿ ನದಿಗಳಿಗೆ ಜೀವಕಳೆ

  • G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ

    G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ

    – ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಪ್ರವಾಸ

    ರೋಮ್:‌ G7 ಶೃಂಗಸಭೆಯಲ್ಲಿ (G7- Summit) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಇಟಲಿಗೆ ತಲುಪಿದ್ದಾರೆ. ಮೋದಿಯವರನ್ನು ಸ್ವಾಗತಿಸಲು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಕೂಡ ಬ್ರಿಂಡಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

    ಇಟಲಿಯ ಬ್ರಿಂಡಿಸಿ ವಿಮಾನ ನಿಲ್ದಾಣ ತಲುಪಿದ ಬಳಿಕ ಎಕ್ಸ್ ಮಾಡಿರುವ ಮೋದಿ (Narendra Modi), ನಾನು G7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿ ತಲುಪಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಅರ್ಥಪೂರ್ಣ ಚರ್ಚೆಗಾಗಿ ವಿಶ್ವ ನಾಯಕರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

    ಜೊತೆಗೆ ಜಾಗತಿಕ ಸವಾಲುಗಳನ್ನು ಪರಿಹರಿಸುವುದು ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸುವುದು ನಮ್ಮ ಗುರಿ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಿಯಾಸಿ ಬಸ್‌ ಮೇಲೆ ದಾಳಿ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು

    ಜಿ7 ಶೃಂಗಸಭೆಯಲ್ಲಿ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸೇರಿದಂತೆ ಹಲವು ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ. ಮೂರನೇ ಬಾರಿಗೆ ಭಾರತದ ಪ್ರಧಾನಿಯಾದ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶಿ ಪ್ರವಾಸ ಇದಾಗಿದೆ.

    G7 ಯುಎಸ್, ಬ್ರಿಟನ್, ಫ್ರಾನ್ಸ್, ಇಟಲಿ, ಜರ್ಮನಿ, ಕೆನಡಾ ಮತ್ತು ಜಪಾನ್ ಅನ್ನು ಒಳಗೊಂಡಿದೆ. ಪ್ರಸ್ತುತ ಇಟಲಿ G7 (ಗ್ರೂಪ್ ಆಫ್ ಸೆವೆನ್) ಶೃಂಗಸಭೆಯ ಅಧ್ಯಕ್ಷತೆ ಮತ್ತು ಆತಿಥ್ಯ ವಹಿಸುತ್ತಿದೆ.

  • ರಷ್ಯಾ ಯುದ್ಧ ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ಭೇಟಿಯಾದ ಮೋದಿ

    ರಷ್ಯಾ ಯುದ್ಧ ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ಭೇಟಿಯಾದ ಮೋದಿ

    ಟೋಕಿಯೊ: ಉಕ್ರೇನ್‌ (Ukrain) ಮೇಲೆ ರಷ್ಯಾ (Russia) ಯುದ್ಧ ಆರಂಭಿಸಿದ ನಂತರ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ (Volodymyr Zelensky) ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

    ಜಪಾನಿನ (Japan) ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ (G7 summit) ನೇಪಥ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಇಂದು ಭೇಟಿಯಾದರು. ಕಳೆದ ವರ್ಷ ಫೆಬ್ರುವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಪ್ರಾರಂಭವಾದ ನಂತರ ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ. ಇದನ್ನೂ ಓದಿ: ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ನಿರ್ಬಂಧ ಹೇರಿದ ರಷ್ಯಾ

    ಉಕ್ರೇನ್‌ನಲ್ಲಿನ ಯುದ್ಧವು ಇಡೀ ಜಗತ್ತಿಗೆ ದೊಡ್ಡ ಸಮಸ್ಯೆಯಾಗಿದೆ. ಇದು ಪ್ರಪಂಚದ ಮೇಲೆ ಹಲವಾರು ರೀತಿಯಲ್ಲಿ ಪರಿಣಾಮ ಬೀರಿದೆ. ಆದರೆ ನಾನು ಇದನ್ನು ರಾಜಕೀಯ ಅಥವಾ ಆರ್ಥಿಕ ಸಮಸ್ಯೆ ಎಂದು ಪರಿಗಣಿಸುವುದಿಲ್ಲ. ಇದು ನನಗೆ ಮಾನವೀಯತೆ ಮತ್ತು ಮಾನವೀಯ ಮೌಲ್ಯಗಳ ಸಮಸ್ಯೆಯಾಗಿದೆ. ಯುದ್ಧದ ನೋವು ನಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ. ಕಳೆದ ವರ್ಷ ನಮ್ಮ ಮಕ್ಕಳು ಉಕ್ರೇನ್‌ನಿಂದ ಹಿಂದಿರುಗಿದಾಗ ಮತ್ತು ಅಲ್ಲಿನ ಪರಿಸ್ಥಿತಿಗಳನ್ನು ವಿವರಿಸಿದಾಗ, ನಿಮ್ಮ ನಾಗರಿಕರ ವೇದನೆಯನ್ನು ನಾನು ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ. ಈ ಪರಿಸ್ಥಿತಿಯನ್ನು ಪರಿಹರಿಸಲು ಭಾರತ ಮತ್ತು ನಾನು ವೈಯಕ್ತಿಕವಾಗಿ ನಮ್ಮ ಸಾಮರ್ಥ್ಯದಲ್ಲಿ ಏನು ಬೇಕಾದರೂ ಮಾಡುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಮೋದಿ ಅವರು ಝೆಲೆನ್ಸ್ಕಿಗೆ ತಿಳಿಸಿದ್ದಾರೆ.

    ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಪಾಲ್ಗೊಂಡಿದ್ದ ಸಭೆಯ ಛಾಯಾಚಿತ್ರಗಳನ್ನು ಪ್ರಧಾನಿ ಕಾರ್ಯಾಲಯ ಹಂಚಿಕೊಂಡಿದೆ. ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಜಿ7 ಶೃಂಗಸಭೆಯಲ್ಲಿ ಮೂರು ಸೆಷನ್‌ಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜಪಾನ್‌ಗೆ ಭೇಟಿ ನೀಡಿದ್ದಾರೆ. ಉಕ್ರೇನ್‌ ಅಧ್ಯಕ್ಷರು ಸಹ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

  • ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

    ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

    – ಹಿರೋಶಿಮಾ ನಗರದಲ್ಲಿ ಭಾರತೀಯರನ್ನ ಭೇಟಿಯಾದ ನಮೋ

    ಟೋಕಿಯೋ: ಅಣುಬಾಂಬ್ ಸ್ಫೋಟಗೊಂಡ ಜಪಾನ್ ದೇಶದ ಹಿರೋಶಿಮಾ (Hiroshima) ನಗರದಲ್ಲಿ ನಡೆಯುತ್ತಿರುವ G7 ಶೃಂಗಸಭೆಯಲ್ಲಿ (G7 Summit) ಪ್ರಧಾನಿ ಮೋದಿ (PM Nrendra Modi) ಪಾಲ್ಗೊಂಡಿದ್ದಾರೆ.

    ಶುಕ್ರವಾರದಿಂದ ಪ್ರಧಾನಿ ಮೋದಿಯವರ 6 ದಿನಗಳ ವಿದೇಶ ಪ್ರವಾಸ ಇವತ್ತಿಂದ ಶುರುವಾಗಿದೆ. ಹಿರೋಶಿಮಾದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈ ಶೃಂಗಸಭೆಯಲ್ಲಿ ಭಾರತ ವಿಶೇಷ ಆಹ್ವಾನಿತ ದೇಶವಾಗಿದೆ. ಪ್ರಧಾನಿ ಮೋದಿ 6 ದಿನಗಳ ಈ ಪ್ರವಾಸದಲ್ಲಿ ಹಿರೋಶಿಮಾದಲ್ಲಿ ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾತ್ಮಾ ಗಾಂಧಿ ವಿಗ್ರಹವನ್ನು ಅನಾವರಣ ಮಾಡಲಿದ್ದಾರೆ. ಇದೇ ವೇಳೆ ಅಲ್ಲಿನ ಭಾರತೀಯರನ್ನೂ ಭೇಟಿಯಾಗಿದ್ದಾರೆ.

    ಸಭೆಗೆ ಹಾಜರಾಗುವುದಕ್ಕೂ ಮುನ್ನ `ನಿಕ್ಕಿ ಏಷ್ಯಾ’ಗೆ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, ಭಾರತ ಮತ್ತು ಪಾಕಿಸ್ತಾನ, ಭಾರತ ಮತ್ತು ಚೀನಾ ಸಂಬಂಧದ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್ ಬ್ಯಾನ್ – ಕೇಂದ್ರ ಬಿಜೆಪಿ ವಿರುದ್ಧ ನಿಯೋಜಿತ ಸಿಎಂ ಸಿದ್ದರಾಮಯ್ಯ ಕಿಡಿ

    ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ಬಾಂಧವ್ಯ ಹೊಂದಲು ಬಯಸುತ್ತದೆ. ಆದ್ರೆ ಭಯೋತ್ಪಾದನೆ, ಹಗೆತನ ಮುಕ್ತ ವಾತಾವರಣ ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲದ ಬಗ್ಗೆ ಭಾರತ ಪದೇ ಪದೇ ತನ್ನ ಕಳವಳ ವ್ಯಕ್ತಪಡಿಸಿದೆ. ಭಯೋತ್ಪಾದನೆ ಕುರಿತ ಮಾತುಕತೆಗೆ ಎಂದಿಗೂ ಭಾರತ ಪಾಕಿಸ್ತಾನದೊಂದಿಗೆ ಹೋಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಈ ತಿಂಗಳ ಆರಂಭದಲ್ಲಿಯೂ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಗೋವಾದಲ್ಲಿ ನಡೆದ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದರು. ಆದ್ರೆ ಅವರೊಂದಿಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ಸಹ ನಡೆದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ ಬಳಸಿದ ಕಾಂಡೋಮ್, ಲೈಂಗಿಕ ಸಂದೇಶದ ಲೆಟರ್ ಪೋಸ್ಟ್ – ಯಾರು ಕಳಿಸಿದ್ದಾರೆ ಅನ್ನೋದೆ ಸಸ್ಪೆನ್ಸ್

    ಚೀನಾ ಸಂಬಂಧದ ಕುರಿತು ಮಾತನಾಡುತ್ತಾ, ಭಾರತವು ತನ್ನ ಸಾರ್ವಭೌಮತೆ ಮತ್ತು ಘನತೆಯನ್ನು ರಕ್ಷಿಸಲು ಸಂಪೂರ್ಣವಾಗಿ ಸಿದ್ಧ ಮತ್ತು ಬದ್ಧವಾಗಿದೆ. ಚೀನಾ ಸೇನೆಯ ಕ್ರಮಗಳ ನಂತರ 2020ರ ಬೇಸಿಗೆಯಲ್ಲಿ ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗೆ ಬಿಕ್ಕಟ್ಟು ಭುಗಿಲೆದ್ದಿತು. ಆನಂತರ ನಡೆದ ಮಾತುಕತೆಗಳ ಬಳಿಕ ಕೆಲವು ಪ್ರದೇಶಗಳಿಂದ ಬೇರ್ಪಟ್ಟಿತು. ಈಗ ಸೇನೆಯ ಮಧ್ಯೆ ಘರ್ಷಣೆಗಳು ಆಗಾಗ್ಗೆ ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

  • ಆಸ್ಟ್ರೇಲಿಯಾದಲ್ಲಿ ನಿಗದಿಪಡಿಸಲಾಗಿದ್ದ ಕ್ವಾಡ್ ಶೃಂಗಸಭೆ ರದ್ದು

    ಆಸ್ಟ್ರೇಲಿಯಾದಲ್ಲಿ ನಿಗದಿಪಡಿಸಲಾಗಿದ್ದ ಕ್ವಾಡ್ ಶೃಂಗಸಭೆ ರದ್ದು

    ಕ್ಯಾನ್‌ಬೆರಾ: ಮುಂದಿನ ವಾರ ಸಿಡ್ನಿಯಲ್ಲಿ (Sydney) ನಡೆಯಬೇಕಿದ್ದ ಕ್ವಾಡ್ ಶೃಂಗಭೆಯನ್ನು (Quad Summit) ಆಸ್ಟ್ರೇಲಿಯಾ (Australia) ಬುಧವಾರ ರದ್ದುಗೊಳಿಸಿದೆ.

    ಸ್ವದೇಶದ ಆರ್ಥಿಕ ಸಮಸ್ಯೆಯ ಹಿನ್ನೆಲೆ ಅಮೆರಿಕದ (America) ಅಧ್ಯಕ್ಷ ಜೋ ಬೈಡನ್ (Joe Biden) ಆಸ್ಟ್ರೇಲಿಯಾ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ.

    ಅಮೆರಿಕದಲ್ಲಿ ಸಾಲದ ಮಿತಿಯನ್ನು ತೆರವುಗೊಳಿಸುವ ಕುರಿತು ನಡೆಯುತ್ತಿರುವ ಚರ್ಚೆಯ ಹಿನ್ನೆಲೆ ಬೈಡನ್ ಆಸ್ಟ್ರೇಲಿಯಾ ಹಾಗೂ ಪಪುವಾ ನ್ಯೂಗಿನಿಯಾ ಭೇಟಿಗಳನ್ನು ರದ್ದುಗೊಳಿಸಿದ್ದಾರೆ. ಆದರೂ ಈ ವಾರಾಂತ್ಯ ಅವರು ಜಿ7 ಶೃಂಗಸಭೆಯಲ್ಲಿ (G7 Summit) ಪಾಲ್ಗೊಳ್ಳುವ ನಿರೀಕ್ಷೆಯಿದೆ.

    ಕ್ವಾಡ್ ಶೃಂಗಸಭೆಯ ರದ್ದು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಮುಂದಿನ ವಾರ ಸಿಡ್ನಿಯಲ್ಲಿ ಕ್ವಾಡ್ ನಾಯಕರ ಸಭೆ ನಡೆಯುವುದಿಲ್ಲ. ಬದಲಿಗೆ ನಾವು ಜಪಾನ್‌ನಲ್ಲಿ (Japan) ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಕ್ವಾಡ್ ನಾಯಕರೊಂದಿಗೆ ಆ ಚರ್ಚೆಯನ್ನು ನಡೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ಚೀನಾದ ದೋಣಿ ಮುಳುಗಡೆ – 39 ಜನ ನಾಪತ್ತೆ

    ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಹೆಚ್ಚುತ್ತಿದ್ದ ಚೀನಾದ ಪ್ರಭಾವದ ಹಿನ್ನೆಲೆ 2017ರಲ್ಲಿ ಅಮೆರಿಕ, ಭಾರತ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ಒಕ್ಕೂಟವನ್ನು ರಚಿಸಲಾಯಿತು. ಭಾರತ ಹಾಗೂ ಆಸ್ಟ್ರೇಲಿಯಾ 7 ದೇಶಗಳ ಜಿ7 ನ ಸದಸ್ಯತ್ವ ಹೊಂದಿಲ್ಲ. ಆದರೂ ಮೇ 19 ರಿಂದ ಮೇ 21 ರವರೆಗೆ ಜಪಾನ್‌ನ ಹಿರೋಶಿಮಾದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಲು ಇವೆರಡು ದೇಶಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ – 10 ದಿನ ಪ್ರವಾಸ

  • ಜಿ7 ಶೃಂಗಸಭೆ – ಮೋದಿ ಬಳಿ ತೆರಳಿ ಬೈಡನ್ ಶೇಕ್ ಹ್ಯಾಂಡ್

    ಜಿ7 ಶೃಂಗಸಭೆ – ಮೋದಿ ಬಳಿ ತೆರಳಿ ಬೈಡನ್ ಶೇಕ್ ಹ್ಯಾಂಡ್

    ಬರ್ಲಿನ್: ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ಸ್ಲೋಸ್ ಎಲ್ಮಾವ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಗೆ ತೆರಳಿದ್ದು, ಅಲ್ಲಿ ವಿಶ್ವದ ನಾಯಕರನ್ನು ಭೇಟಿಯಾಗಿದ್ದಾರೆ. ಜಾಗತಿಕ ನಾಯಕರೊಂದಿಗೆ ಮೋದಿ ಖುಷಿಯ ಕ್ಷಣ ಕಳೆದಿರುವುದು ಕ್ಯಾಮೆರಾ ಕಣ್ಣುಗಳು ಸೆರೆ ಹಿಡಿದಿವೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹಾಗೂ ಕೆನಡಾದ ಪ್ರಧಾನಿ ಜಸ್ಟಿನ್ ಟುಡ್ರೋ ಸೇರಿದಂತೆ ಅನೇಕ ಗಣ್ಯರೊಂದಿಗೆ ಮೋದಿ ಆತ್ಮೀಯವಾಗಿ ಸಮಯ ಕಳೆದಿದ್ದಾರೆ. ಇದನ್ನೂ ಓದಿ: ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ಜೋ ಬೈಡನ್ ಮೋದಿ ಅವರನ್ನು ಸ್ವಾಗತಿಸಲು ಹಾಗೂ ಸಂತೋಷವನ್ನು ಹಂಚಿಕೊಳ್ಳಲು ಅವರ ಬಳಿ ತೆರಳಿದ್ದಾರೆ. ಕೆನಡಾ ಪ್ರಧಾನಿಯೊಂದಿಗೆ ಸಂವಹನದಲ್ಲಿ ತೊಡಗಿದ್ದ ಮೋದಿ ಬೈಡನ್ ಕಂಡು ಸಂತೋಷದಿಂದ ಅವರ ಕೈ ಕುಲುಕಿ ಮಾತನಾಡಿದ್ದಾರೆ. ಇದನ್ನೂ ಓದಿ: ಅಗ್ನಿಪಥ್‌ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ

    ಮೇ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಬಳಿಕ ಮೋದಿ ಮತ್ತು ಬೈಡನ್ ಜಿ7 ಶೃಂಗಸಭೆಯಲ್ಲಿ ಮೊದಲ ಬಾರಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರು ಜುಲೈನಲ್ಲಿ ನಡೆಯಲಿರುವ ಐ2ಯು2 ವರ್ಚುವಲ್ ಶೃಂಗಸಭೆಯಲ್ಲಿ ಇಸ್ರೇಲ್ ಹಾಗೂ ಸಂಯುಕ್ತ ಅರಬ್ ಸಂಸ್ಥಾನದ ನಾಯಕರನ್ನು ಭೇಟಿಯಾಗಲಿದ್ದಾರೆ.

    Live Tv

  • ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇ ರಾಷ್ಟ್ರದ ಅಗತ್ಯವಿಲ್ಲ – ಟ್ರಂಪ್ ಮುಂದೆ ಮೋದಿ ಮಾತು

    ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇ ರಾಷ್ಟ್ರದ ಅಗತ್ಯವಿಲ್ಲ – ಟ್ರಂಪ್ ಮುಂದೆ ಮೋದಿ ಮಾತು

    ಪ್ಯಾರಿಸ್: ಭಾರತ ಹಾಗೂ ಪಾಕಿಸ್ತಾನದ ಸಮಸ್ಯೆ ದ್ವಿಪಕ್ಷೀಯವಾಗಿದ್ದು, ಇದನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ, ನಮಗಾಗಿ ಇತರೆ ರಾಷ್ಟ್ರಗಳು ತೊಂದರೆ ಅನುಭವಿಸುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.

    ಫ್ರಾನ್ಸ್ ದೇಶದ ಬಿಯರಿಟ್ಜ್ ನ ನಗರದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದು, ಈ ವೇಳೆ ಮೋದಿ ಜಮ್ಮು ಕಾಶ್ಮೀರದ ಸಮಸ್ಯೆ ದ್ವಿಪಕ್ಷೀಯವಾದದ್ದು ಎಂದು ತಿಳಿಸಿದ್ದಾರೆ.

    ಭಾರತ ಹಾಗೂ ಪಾಕಿಸ್ತಾನ 1947ಕ್ಕೂ ಮೊದಲು ಒಂದಾಗಿತ್ತು. ಹೀಗಾಗಿ ನಮ್ಮ ಸ್ವಂತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ನಾವು ಸಮರ್ಥರಾಗಿದ್ದೇವೆ. ಜಮ್ಮು ಕಾಶ್ಮೀರದ ವಿಚಾರವು ದ್ವಿಪಕ್ಷೀಯ ವಿಷಯವಾಗಿದೆ ಎಂದು ಒತ್ತಿ ಹೇಳುವ ಮೂಲಕ ಈ ಹಿಂದೆ ಎರಡು ಬಾರಿ ಜಮ್ಮು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವ ಕುರಿತು ಹೇಳಿಕೆ ನೀಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

    ಪಾಕಿಸ್ತಾನ ಹಾಗೂ ಭಾರತದ ನಡುವೆ ಹಲವು ದ್ವೀಪಕ್ಷೀಯ ಸಮಸ್ಯೆಗಳಿವೆ. ಹೀಗಾಗಿ ನಾವು ಈ ಕುರಿತು ಯಾವುದೇ ಮೂರನೇ ರಾಷ್ಟ್ರಕ್ಕೆ ತೊಂದರೆ ಕೊಡಲು ಇಷ್ಟಪಡುವುದಿಲ್ಲ. ಈ ಸಮಸ್ಯೆಗಳನ್ನು ನಾವು ದ್ವಿಪಕ್ಷೀಯ ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಟ್ರಂಪ್ ಮಾತನಾಡಿ, ಕಾಶ್ಮೀರ ವಿಚಾರ ಸಂಬಂಧ ಕಳೆದ ರಾತ್ರಿ ನಾವಿಬ್ಬರು ಮಾತನಾಡಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ ಎಂದು ಪ್ರಧಾನಿ ತಿಳಿಸಿದ್ದಾರೆ ಎಂದು ಹೇಳಿದರು.

    ಟ್ರಂಪ್ ಅವರಿಂದ ಮಧ್ಯಸ್ಥಿಕೆ ಹೇಳಿಕೆ ಬಂದ ಹಿನ್ನೆಲೆಯಲ್ಲಿ ಭಾರತದ ವಿರೋಧ ಪಕ್ಷಗಳು ಈ ಹೇಳಿಕೆಯ ಬಗ್ಗೆ ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿತ್ತು. ಈಗ ಮೋದಿ ಟ್ರಂಪ್ ಮುಂದುಗಡೆಯೇ ಯಾವುದೇ ದೇಶ ಈ ವಿಚಾರದಲ್ಲಿ ಮಧ್ಯಸ್ಥಿತಿಕೆ ವಹಿಸುವುದು ಬೇಡ ಎಂದು ಹೇಳಿಕೆ ನೀಡುವ ಮೂಲಕ ಎಲ್ಲ ಗೊಂದಲ, ಪ್ರಶ್ನೆಗಳಿಗೆ ತೆರೆ ಎಳೆದಿದ್ದಾರೆ.

    ಈ ಹಿಂದೆ ಭಾರತ ಹಾಗೂ ಪಾಕಿಸ್ತಾನದ ಸಮಸ್ಯೆ ಬಗೆಹರಿಸುವಲ್ಲಿ ನನ್ನ ಪ್ರಯತ್ನವನ್ನು ಮಾಡುತ್ತೇನೆ ಎಂದು ಹೇಳುವ ಮೂಲಕ ಮಧ್ಯಸ್ಥಿಕೆ ವಹಿಸುವ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ತೋರಿಸಿದ್ದರು.

    ಇದಕ್ಕೂ ಹಿಂದೆ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಮೋದಿ ನನ್ನ ಬಳಿ ಮನವಿ ಮಾಡಿದ್ದಾರೆ ಎಂದು ಟ್ರಂಪ್ ಹೇಳಿದ್ದರು. ಆದರೆ, ಈ ಹೇಳಿಕೆಯನ್ನು ಭಾರತ ಸಾರಾಸಗಟಾಗಿ ತಿರಸ್ಕರಿಸಿತ್ತು. ಪಾಕ್ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಜುಲೈ ತಿಂಗಳ ನಾಲ್ಕನೇಯ ವಾರದಲ್ಲಿ ಇಮ್ರಾನ್ ಖಾನ್ ಶ್ವೇತಭವನಕ್ಕೆ ಭೇಟಿ ನೀಡಿ ಡೊನಾಲ್ಡ್ ಟ್ರಂಪ್ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಭಾರತ-ಪಾಕ್ ಒಪ್ಪಿದರೆ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಟ್ರಂಪ್ ಹೇಳಿದ್ದರು.

    ಎರಡು ವಾರಗಳ ಹಿಂದೆ ನಾನು ಮತ್ತು ಮೋದಿ ಕಾಶ್ಮೀರ ವಿಚಾರದ ಬಗ್ಗೆ ಚರ್ಚೆ ನಡೆಸಿದೆವು. ಈ ವೇಳೆ ಮೋದಿ ಈ ಸಮಸ್ಯೆ ಪರಿಹಾರಕ್ಕೆ ಮಧ್ಯಸ್ಥಿಗೆ ವಹಿಸುತ್ತೀರಾ ಎಂದು ಕೇಳಿದರು. ಇದಕ್ಕೆ ನಾನು ನನ್ನಿಂದ ಸಹಾಯವಾಗುತ್ತದೆ ಎಂದಾದರೆ ನಾನು ಮಧ್ಯಸ್ಥಿಕೆ ವಹಿಸುತ್ತೇನೆ ಎಂದು ಭರವಸೆ ನೀಡಿದೆ ಎಂದು ತಿಳಿಸಿದ್ದರು.

    ಕಾಶ್ಮೀರ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸಲು ಆಸಕ್ತಿ ತೋರಿದ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಇಮ್ರಾನ್‍ ಖಾನ್ ಸ್ವಾಗತಿಸಿದ್ದರು. ಟ್ರಂಪ್ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತದ ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್ ಪ್ರತಿಕ್ರಿಯಿಸಿ, ದ್ವಿಪಕ್ಷೀಯ ಮಾತುಕತೆಯಿಂದ ಮಾತ್ರ ಜಮ್ಮು ಕಾಶ್ಮೀರ ವಿವಾದ ಪರಿಹರಿಸಲು ಸಾಧ್ಯ. ಈ ಮಾತುಕತೆ ನಡೆಯಬೇಕಾದರೆ ಪಾಕಿಸ್ತಾನ ಗಡಿಯಲ್ಲಿ ನಡೆಸುತ್ತಿರುವ ಉಗ್ರಗಾಮಿ ಚಟುವಟಿಕೆ ನಿಲ್ಲಬೇಕು. ಪ್ರಧಾನಿ ಮೋದಿಯವರು ಈ ಸಮಸ್ಯೆ ಪರಿಹಾರಕ್ಕೆ ಯಾವುದೇ ಮನವಿ ಸಲ್ಲಿಸಿಲ್ಲ ಎಂದು ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ್ದರು.