Tag: Gaganyaan Mission

  • ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಮೋದಿ

    ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಮೋದಿ

    – ಇಸ್ರೋ ಐತಿಹಾಸಿಕ ಗಗನಯಾನ ಮಿಷನ್‌; ನಾಲ್ವರು ಗಗನಯಾತ್ರಿಗಳು ಇವರೇ ನೋಡಿ.. 

    ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ಮಾನವ ಸಹಿತ ಗಗನಯಾನದ (Gaganyaan Mission) ಭಾಗವಾಗಿ ಕಡಿಮೆ ಭೂಮಿಯ ಕಕ್ಷೆಗೆ ಹಾರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಪ್ರಕಟಿಸಿದ್ದಾರೆ.

    ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ. ಭಾರತಕ್ಕೆ ಮಾನವ ಸಹಿತ ಮೊದಲ ಗಗನಯಾನ ಇದಾಗಲಿದೆ. ಇದನ್ನೂ ಓದಿ: Gaganyaan Mission- ಇಸ್ರೋ ಗಗನಯಾನ ಪರೀಕ್ಷಾರ್ಥ ಉಡಾವಣೆ ಯಶಸ್ವಿ

    ಗ್ರೂಪ್‌ ಕ್ಯಾಪ್ಟನ್‌ಗಳಾದ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ವಿಂಗ್‌ ಕಮಾಂಡರ್‌ ಶುಭಾಂಶು ಶುಕ್ಲಾ ಅವರು ಬಾಹ್ಯಾಕಾಶಕ್ಕೆ ಭಾರತದ ಮೊದಲ ಮಾನವ ಸಹಿತ ಗಗನಯಾನ ಮಿಷನ್‌ನಲ್ಲಿ ಗಗನಯಾತ್ರಿಗಳಾಗಿ ಆಯ್ಕೆಯಾಗಿದ್ದಾರೆ.

    ಇವರೆಲ್ಲರೂ ಭಾರತೀಯ ವಾಯುಪಡೆಯ (IAF) ವಿಂಗ್ ಕಮಾಂಡರ್‌ ಮತ್ತು ಗ್ರೂಪ್ ಕ್ಯಾಪ್ಟನ್‌ಗಳು. ಪರೀಕ್ಷಾ ಪೈಲಟ್‌ಗಳಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಏನಾದರೂ ತಪ್ಪಾದ ಸಂದರ್ಭಗಳಲ್ಲಿ ತ್ವರಿತವಾಗಿ ಪ್ರತಿಕ್ರಿಯಿಸಲು ಅವರು ಈಗಾಗಲೇ ತರಬೇತಿ ಪಡೆದಿದ್ದಾರೆ. ಇದನ್ನೂ ಓದಿ: ಮಿಷನ್‌ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ

    ಬೆಂಗಳೂರಿನಲ್ಲಿರುವ ಬಾಹ್ಯಾಕಾಶ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ಈ ನಾಲ್ವರೂ ಗಗನಯಾತ್ರಿಗಳು ತರಬೇತಿ ಪಡೆಯುತ್ತಿದ್ದಾರೆ. ಗಗನಯಾತ್ರಿಗಳ ಆಯ್ಕೆಯು ಐಎಎಫ್‌ನ ಇನ್‌ಸ್ಟಿಟ್ಯೂಟ್ ಆಫ್ ಏರೋಸ್ಪೇಸ್ ಮೆಡಿಸಿನ್‌ನಲ್ಲಿ ನಡೆಯಿತು.

    ISRO ಮತ್ತು Glavkosmos (ರಷ್ಯಾದ ಬಾಹ್ಯಾಕಾಶ ಸಂಸ್ಥೆ Roscosmos ನ ಅಂಗಸಂಸ್ಥೆ) ಜೂನ್ 2019 ರಲ್ಲಿ ನಾಲ್ಕು ಗಗನಯಾತ್ರಿಗಳ ತರಬೇತಿಗಾಗಿ ತಿಳುವಳಿಕೆಯ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದ್ದವು. ನಾಲ್ಕು ಗಗನಯಾತ್ರಿಗಳು ರಷ್ಯಾದ ಯೂರಿ ಗಗಾರಿನ್ ಗಗನಯಾತ್ರಿ ತರಬೇತಿ ಕೇಂದ್ರದಲ್ಲಿ 13 ತಿಂಗಳು ತರಬೇತಿ ಪಡೆದಿದ್ದಾರೆ (2020 ರ ಫೆಬ್ರವರಿ ಯಿಂದ 2021 ರ ಮಾರ್ಚ್‌ ತಿಂಗಳ ವರೆಗೆ). ಇದನ್ನೂ ಓದಿ: ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ

    2024 ರ ಅಂತ್ಯದ ವೇಳೆಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಭಾರತೀಯ ಗಗನಯಾತ್ರಿಗಳಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತರಬೇತಿ ನೀಡಲಿದೆ ಎಂದು ಸಂಸ್ಥೆಯ ನಿರ್ವಾಹಕ ಬಿಲ್ ನೆಲ್ಸನ್ 2023 ರಲ್ಲಿ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದರು.

    ಚಂದ್ರಯಾನ-3 ಯಶಸ್ಸಿನ ನಂತರ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆಗೆ ಭಾರತ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಕಲ ಸಿದ್ಧತೆ ನಡೆಸಿದೆ. 400 ಕಿಮೀ ಎತ್ತರದಲ್ಲಿರುವ ಭೂ ಕೆಳ ಕಕ್ಷೆಗೆ ಮಾನವರನ್ನು ಕಳುಹಿಸಲಾಗುವುದು. ಮೂರು ದಿನಗಳ ಕಾಲ ಅಂತರಿಕ್ಷ ಯಾನ ನಡೆಸಿದ ನಂತರ ಗಗನಯಾತ್ರಿಗಳನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವುದು ಗಗನಯಾನ ಮಿಷನ್‌ನ ಗುರಿಯಾಗಿದೆ. ಇದನ್ನೂ ಓದಿ: 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌

  • Gaganyaan Mission- ಇಸ್ರೋ ಗಗನಯಾನ ಪರೀಕ್ಷಾರ್ಥ ಉಡಾವಣೆ ಯಶಸ್ವಿ

    Gaganyaan Mission- ಇಸ್ರೋ ಗಗನಯಾನ ಪರೀಕ್ಷಾರ್ಥ ಉಡಾವಣೆ ಯಶಸ್ವಿ

    ಬೆಂಗಳೂರು: ಮಾನವಸಹಿತ ಗಗನಯಾನ (Gaganyaan Mission) ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ನಡೆಸಿದ ಮಾನವ ರಹಿತ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ವಾಹನ ಯಶಸ್ವಿಯಾಗಿ ಉಡಾವಣೆಯಾಗಿದೆ.

    3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್‌ ಉಡಾವಣೆ ಮಾಡಲಾಯಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ರಾಕೆಟ್‌ ಸೇಫ್‌ ಲ್ಯಾಂಡಿಂಗ್‌ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.

    ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಟಕ್ಕೆ ರಾಕೆಟ್‌ ಉಡಾವಣೆ ಮಾಡಲಾಯಿತು.

    ಈ ಪರೀಕ್ಷೆಗೆ TV-D1 ಎಂದು ಹೆಸರಿಸಲಾಗಿದೆ. ಇಂತಹ ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕ ಹಂತದ ರಾಕೆಟ್ ʻಟಿವಿ-ಡಿ1ʼ ನಭಕ್ಕೆ ಚಿಮ್ಮಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸು ಕಂಡಿದೆ.

    TV-D1 ಪರೀಕ್ಷಾರ್ಥ ಹಾರಾಟವು ಗಗನಯಾನ ಮಿಷನ್‌ನ ನಿರ್ಣಾಯಕ ಭಾಗವಾಗಿದೆ. ಇದು ಮೂರು ವ್ಯಕ್ತಿಗಳ ಸಿಬ್ಬಂದಿಯನ್ನು 3 ದಿನಗಳ ಕಾರ್ಯಾಚರಣೆಗಾಗಿ 400 ಕಿಲೋಮೀಟರ್ ಕಕ್ಷೆಗೆ ಕಳುಹಿಸುವುದು, ಈ ಮೂಲಕ ಹಿಂದೂ ಮಹಾಸಾಗರದ ನೀರಿನಲ್ಲಿ ಸೇಫ್ ಲ್ಯಾಂಡಿಂಗ್ ಮತ್ತು ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳುವುದು ಇದರೊಂದಿಗೆ ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಭಾರತದ ಸಾಮರ್ಥ್ಯ ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

    TV-D ವಾಹನವು ಮಾರ್ಪಡಿಸಿದ ವಿಕಾಸ್ (VIKAS) ಎಂಜಿನ್ ಒಳಗೊಂಡಿದ್ದು, ಕ್ರ‍್ಯೂ ಮಾಡ್ಯೂಲ್ ಮತ್ತು ಕ್ರ‍್ಯೂ ಎಸ್ಕೇಪ್ ಸಿಸ್ಟಂ ಅನ್ನು ಬಳಸುತ್ತದೆ. ಇದು 34.9 ಮೀಟರ್ ಎತ್ತರದಲ್ಲಿದೆ ಮತ್ತು 44 ಟನ್‌ಗಳಷ್ಟು ತೂಕ ಹೊಂದಿದೆ. ಒಂದು ವೇಳೆ ಈ ಮಿಷನ್ ಯಶಸ್ವಿಯಾದಲ್ಲಿ ಮಾನವಸಹಿತ ಬ್ಯಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡುವ ಸಾಮರ್ಥ್ಯವಿರುವ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Gaganyaan Mission: ತಾಂತ್ರಿಕ ದೋಷದಿಂದ ಸದ್ಯಕ್ಕೆ ಮೊದಲ ಪರೀಕ್ಷಾರ್ಥ ಹಾರಾಟ ಸ್ಥಗಿತ

    Gaganyaan Mission: ತಾಂತ್ರಿಕ ದೋಷದಿಂದ ಸದ್ಯಕ್ಕೆ ಮೊದಲ ಪರೀಕ್ಷಾರ್ಥ ಹಾರಾಟ ಸ್ಥಗಿತ

    ಬೆಂಗಳೂರು: ಮಾನವಸಹಿತ ಗಗನಯಾನ (Gaganyaan Mission) ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ನಡೆಸಬೇಕಿದ್ದ ಚೊಚ್ಚಲ ಪ್ರಾಯೋಗಿಕ ಪರೀಕ್ಷಾರ್ಥ ಹಾರಾಟ ಸ್ಥಗಿತವಾಗಿವೆ.

    ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಹಾರಾಟ ಸ್ಥಗಿತಗೊಳಿಸಲಾಗಿದೆ. ಸದ್ಯ ಪರೀಕ್ಷಾರ್ಥ ವಾಹನ ಸೇಫ್‌ ಆಗಿದೆ. ತಾಂತ್ರಿಕ ದೋಷವನ್ನು ಪರಿಶೀಲಿಸಿ ಶೀಘ್ರದಲ್ಲೇ ಉಡ್ಡಯನಕ್ಕೆ ಮುಂದಿನ ದಿನಾಂಕ ನಿಗದಿಪಡಿಸಲಾಗುವುದು ಎಂದು ಇಸ್ರೋ ಅಧ್ಯಕ್ಷರು ತಿಳಿಸಿದ್ದಾರೆ.

    ಈ ಪರೀಕ್ಷೆಗೆ ʻಟಿವಿ-ಡಿ1ʼ ಎಂದು ಹೆಸರಿಸಲಾಗಿದೆ. ಇಂತಹ ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕ ಹಂತದ ರಾಕೆಟ್ ʻಟಿವಿ-ಡಿ1ʼ (GaganyaanTV_D1) ನಭಕ್ಕೆ ಚಿಮ್ಮಲಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸು ಕಾಣುವ ನಿರೀಕ್ಷೆಯನ್ನು ಇಸ್ರೋ ಹೊಂದಿದೆ. ಇದನ್ನೂ ಓದಿ: Gaganyaan Mission: ತಾಂತ್ರಿಕ ದೋಷದಿಂದ ಸದ್ಯಕ್ಕೆ ಮೊದಲ ಪರೀಕ್ಷಾರ್ಥ ಹಾರಾಟ ಸ್ಥಗಿತ

    TV-D1 ಪರೀಕ್ಷಾರ್ಥ ಹಾರಾಟವು ಗಗನಯಾನ ಮಿಷನ್‌ನ ನಿರ್ಣಾಯಕ ಭಾಗವಾಗಿದೆ. ಇದು ಮೂರು ವ್ಯಕ್ತಿಗಳ ಸಿಬ್ಬಂದಿಯನ್ನು 3 ದಿನಗಳ ಕಾರ್ಯಾಚರಣೆಗಾಗಿ 400 ಕಿಲೋಮೀಟರ್ ಕಕ್ಷೆಗೆ ಕಳುಹಿಸುವುದು, ಈ ಮೂಲಕ ಹಿಂದೂ ಮಹಾಸಾಗರದ ನೀರಿನಲ್ಲಿ ಸೇಫ್‌ ಲ್ಯಾಂಡಿಂಗ್ ಮತ್ತು ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳುವುದು ಇದರೊಂದಿಗೆ ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಭಾರತದ ಸಾಮರ್ಥ್ಯ ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ – ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

    TV-D1 ವಾಹನವು ಮಾರ್ಪಡಿಸಿದ ವಿಕಾಸ್‌ (VIKAS) ಎಂಜಿನ್ ಒಳಗೊಂಡಿದ್ದು, ಕ್ರ್ಯೂ ಮಾಡ್ಯೂಲ್ ಮತ್ತು ಕ್ರ್ಯೂ ಎಸ್ಕೇಪ್ ಸಿಸ್ಟಂ ಅನ್ನು ಬಳಸುತ್ತದೆ. ಇದು 34.9 ಮೀಟರ್ ಎತ್ತರದಲ್ಲಿದೆ ಮತ್ತು 44 ಟನ್‌ಗಳಷ್ಟು ತೂಕ ಹೊಂದಿದೆ. ಒಂದು ವೇಳೆ ಈ ಮಿಷನ್‌ ಯಶಸ್ವಿಯಾದಲ್ಲಿ ಮಾನವಸಹಿತ ಬ್ಯಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡುವ ಸಾಮರ್ಥ್ಯವಿರುವ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದನ್ನೂ ಓದಿ: ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ನೂರಾರು ದಲಿತ ಮುಖಂಡರು ವಶಕ್ಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]