Tag: Gallows

  • ಕೊನೆಗೂ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ – ಮಾರ್ಚ್ 20ಕ್ಕೆ ಡೆತ್ ವಾರೆಂಟ್ ಜಾರಿ

    ಕೊನೆಗೂ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ – ಮಾರ್ಚ್ 20ಕ್ಕೆ ಡೆತ್ ವಾರೆಂಟ್ ಜಾರಿ

    ನವದೆಹಲಿ: ಕೊನೆಗೂ ದೆಹಲಿ ಕೋರ್ಟ್ ನಿರ್ಭಯಾ ಅತ್ಯಾಚಾರಿಗಳಿಗೆ ಡೆತ್ ವಾರೆಂಟ್ ಜಾರಿಗೊಳಿಸಿದ್ದು, ಮಾರ್ಚ್ 20ರ ಬೆಳಗ್ಗೆ 5:30ಕ್ಕೆ 4 ಮಂದಿ ದೋಷಿಗಳನ್ನು ಗಲ್ಲಿಗೇರಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

    ಪ್ರತಿ ಬಾರಿ ಗಲ್ಲಿಗೇರಿಸುವ ದಿನಾಂಕವನ್ನು ನಿಗದಿಗೊಳಿಸಿದಾಗಲೂ ಒಂದಲ್ಲಾ ಒಂದು ಕಾರಣ ಹೇಳಿ ಅತ್ಯಾಚಾರಿಗಳು ನೇಣು ಕುಣಿಕೆಯಿಂದ ಬಚಾವ್ ಆಗುತ್ತಾ ಬಂದಿದ್ದರು. ಗಲ್ಲು ಶಿಕ್ಷೆಯಿಂದ ಪಾರಾಗಲು ದೋಷಿಗಳು ನಡೆಸಿದ್ದಾ ಎಲ್ಲಾ ಪ್ರಯತ್ನವೂ ವಿಫಲವಾಗಿದ್ದು, ಇಂದು ದೆಹಲಿ ಕೋರ್ಟ್ ಹೊಸ ಡೆತ್ ವಾರೆಂಟ್ ಜಾರಿಗೊಳಿಸಿದೆ.

    ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಿರಸ್ಕರಿಸಿದ ಬೆನ್ನಲ್ಲೇ ತಿಹಾರ್ ಜೈಲು ಆಡಳಿತ ಹಾಗೂ ದೆಹಲಿ ಸರ್ಕಾರ ಪಟಿಯಾಲ ಕೋರ್ಟ್ ಮೊರೆ ಹೋಗಿತ್ತು.

    ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾ ಆಗಿದ್ದು, ನಾಲ್ವರು ದೋಷಿಗಳ ಬಹುತೇಕ ಕಾನೂನು ಹೋರಾಟ ಅಂತ್ಯವಾಗಿದೆ. ಹಾಗಾಗಿ ಹೊಸ ಡೆತ್ ವಾರೆಂಟ್ ಜಾರಿ ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    ಮಾರ್ಚ್ 3ರಂದು ಪಟಿಯಾಲಾ ಕೋರ್ಟ್ ಮೂರನೇ ಬಾರಿ ಡೆತ್ ವಾರೆಂಟ್ ಜಾರಿ ಮಾಡಿತ್ತು. ಆದರೆ ಕಡೆ ಗಳಿಗೆಯಲ್ಲಿ ದೋಷಿ ಪವನ್ ಗುಪ್ತಾ ರಾಷ್ಟ್ರಪತಿಗೆ ತಿರಸ್ಕೃತಗೊಂಡ ಕ್ಷಮದಾನ ಅರ್ಜಿ ಮರುಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದನು. ದಿಢೀರ್ ಬೆಳವಣಿಗೆಯಿಂದ ಮಾರ್ಚ್ 3ರಂದು ನಡೆಬೇಕಿದ್ದ ಗಲ್ಲು ಶಿಕ್ಷೆಗೆ ಪಟಿಯಾಲ ಕೋರ್ಟ್ ತಡೆ ನೀಡಿತ್ತು.

  • ನಿಮ್ಮ ಕೊನೆಯ ಆಸೆ ಏನು? ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆಗೆ ಶುರುವಾಯ್ತು ದಿನಗಣನೆ

    ನಿಮ್ಮ ಕೊನೆಯ ಆಸೆ ಏನು? ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆಗೆ ಶುರುವಾಯ್ತು ದಿನಗಣನೆ

    ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳ ಗಲ್ಲು ಶಿಕ್ಷೆಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 1 ರಂದು ಬೆಳಗ್ಗೆ ಆರು ಗಂಟೆಗೆ ಗಲ್ಲು ಶಿಕ್ಷೆ ವಿಧಿಸಲಿದ್ದು ಈ ನಿಟ್ಟಿನಲ್ಲಿ ಸಿದ್ಧತೆಗಳು ಆರಂಭವಾಗಿದೆ.

    ನಾಲ್ವರು ದೋಷಿಗಳಿಗೆ ತಮ್ಮ ಕೊನೆಯ ಆಸೆ ತಿಳಿಸುವಂತೆ ತಿಹಾರ್ ಜೈಲು ಅಧಿಕಾರಿಗಳು ಲಿಖಿತ ರೂಪದಲ್ಲಿ ಪತ್ರವೊಂದನ್ನ ನೀಡಿದ್ದಾರೆ. ಕಳೆದ ವಾರ ಈ ಮಾಹಿತಿ ಕೇಳಿರುವ ಹೆಚ್ಚುವರಿ ಇನ್ಸ್‍ಪೆಕ್ಟರ್ ಜನರಲ್ ರಾಜ್‍ಕುಮಾರ್, ಈಡೇರಿಸಬಹುದಾದ ಆಸೆಗಳನ್ನು ಪಟ್ಟಿ ಮಾಡುವಂತೆ ಸೂಚಿಸಿದ್ದಾರೆ.

    ಈ ಮಾಹಿತಿ ಧೃಡಪಡಿಸಿರುವ ಎಐಜಿ ರಾಜಕುಮಾರ್, ಗಲ್ಲಿಗೇರಿಸುವ ಮೊದಲು ನಾಲ್ಕು ಜನರನ್ನು ತಮ್ಮ ಕೊನೆಯ ಆಶಯವನ್ನು ಪಟ್ಟಿ ಮಾಡಲು ಲಿಖಿತವಾಗಿ ಕೇಳಿಕೊಂಡಿದೆ. ಅವರಲ್ಲಿ ಯಾರೂ ಇಲ್ಲಿಯವರೆಗೆ ಪ್ರತಿಕ್ರಿಯಿಸಿಲ್ಲ ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ, ನಾಲ್ವರು ದೋಷಿಗಳ ಕೊನೆಯ ಆಸೆ ಏನೆಂದು ಒಮ್ಮೆ ನಮಗೆ ತಿಳಿಸಿದರೆ, ಆಸೆ ಈಡೇರಲು ಸಾಧ್ಯವಾದರೆ ತಿಹಾರ್ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಪ್ರತಿ ಆಸೆ ಪೂರ್ಣಗೊಳ್ಳಲು ಸಾಧ್ಯವಿಲ್ಲ. ಅವರು ಲಿಖಿತವಾಗಿ ನಮಗೆ ಪಟ್ಟಿ ನೀಡಿದಲ್ಲಿ ಜೈಲು ಆಡಳಿತವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

    ನಾಲ್ಕು ಅಪರಾಧಿಗಳು ತಾವು ಕೊನೆಯ ಬಾರಿಗೆ ಯಾರನ್ನಾದರೂ ಭೇಟಿಯಾಗಲು ಬಯಸಿದರೆ ಅವರು ಹೆಸರಗಳು ಮತ್ತು ಅಪರಾಧಿಗಳು ಹೊಂದಿರುವ ಯಾವುದೇ ಆಸ್ತಿ ಅಥವಾ ವಸ್ತುಗಳನ್ನು ಅವರು ಬಯಸುವ ಯಾರಿಗಾದರೂ ವರ್ಗಾಯಿಸಲು ಕೇಳಿಕೊಳ್ಳಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದರು.

    ಫೆಬ್ರವರಿ 1 ರಂದು ಬೆಳಗ್ಗೆ 6 ಗಂಟೆಗೆ ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31), ಮುಖೇಶ್ ಕುಮಾರ್ ಸಿಂಗ್ (32) ಮತ್ತು ಪವನ್ (26) ಅವರನ್ನು ಗಲ್ಲಿಗೇರಿಸಿಸಲು ದೆಹಲಿ ನ್ಯಾಯಾಲಯವು ಜನವರಿ 17 ರಂದು ಹೊಸ ಡೆತ್ ವಾರಂಟ್ ಹೊರಡಿಸಿದೆ.

  • ರಾಷ್ಟ್ರಪತಿಗಳಿಂದ ನಿರ್ಭಯಾ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕಾರ

    ರಾಷ್ಟ್ರಪತಿಗಳಿಂದ ನಿರ್ಭಯಾ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕಾರ

    ನವದೆಹಲಿ: 2012ರ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ದೋಷಿಗಳಲ್ಲಿ ಒಬ್ಬನಾದ ಮುಕೇಶ್ ಗಲ್ಲುಶಿಕ್ಷೆಯಿಂದ ಪಾರಾಗಲು ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ.

    ಈ ಹಿಂದೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದಾದ ಬಳಿಕ ಮುಕೇಶ್ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಇನ್ನು ಮೂವರು ಕ್ಷಮಾದಾನದ ಅರ್ಜಿ ಸಲ್ಲಿಸಿಲ್ಲ.

    ಮುಕೇಶ್ ಸಿಂಗ್ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಜನವರಿ 22ರಂದು ಗಲ್ಲಿಗೇರಿಸುವ ಬಗ್ಗೆ ಗೊಂದಲವಿದೆ ಎಂದಿತ್ತು. ಜೈಲಿನ ನಿಯಮಗಳನ್ನು ಉಲ್ಲೇಖಿಸಿದ್ದ ಸರ್ಕಾರ, ನಾವು ನಿಯಮಗಳಿಗೆ ಅನುಗುಣವಾಗಿಯೇ ಕೆಲಸ ಮಾಡಬೇಕು. ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಿರುವ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟಿಗೆ ತಿಳಿಸಿತ್ತು.

    ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಮಂಗಳವಾರ ವಜಾಗೊಳಿಸಿತ್ತು.

    ಈ ಅರ್ಜಿ ವಜಾಗೊಂಡ ಕೂಡಲೇ ಮುಕೇಶ್ ರಾಷ್ಟ್ರಪತಿ ಬಳಿ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ. ರಾಷ್ಟ್ರಪತಿಗಳು ನನ್ನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಡೆತ್ ವಾರಂಟ್ ಜಾರಿಯಾಗಲು ಸಾಧ್ಯವಿಲ್ಲ. ನನ್ನ ಅರ್ಜಿ ಇತ್ಯರ್ಥವಾಗದೇ ಡೆತ್ ವಾರಂಟ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮುಕೇಶ್ ಪ್ರಶ್ನಿಸಿದ್ದ. ಆದರೆ ಈಗ ರಾಷ್ಟ್ರಪತಿಗಳು ಮುಕೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

  • ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?

    ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳ ಗಲ್ಲು ಶಿಕ್ಷೆಯ ದಿನಾಂಕ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

    ಈ ಹಿಂದೆ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಗ್ಗೆ ಏಳು ಗಂಟೆಗೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಡೆತ್ ವಾರೆಂಟ್ ಜಾರಿ ಮಾಡಿತ್ತು.

    ಈ ನಡುವೆ ಅಪರಾಧಿ ಮುಕೇಶ್ ಗಲ್ಲು ಶಿಕ್ಷೆಯಿಂದ ಪಾರು ಮಾಡುವಂತೆ ರಾಷ್ಟ್ರಪತಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಜನವರಿ 22ರಂದು ಗಲ್ಲಿಗೇರಿಸಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ತಿಳಿಸಿದೆ.

    ಜೈಲಿನ ನಿಯಮಗಳನ್ನು ಉಲ್ಲೇಖಿಸಿರುವ ಸರ್ಕಾರ, ನಾವು ನಿಯಮಗಳಿಗೆ ಅನುಗುಣವಾಗಿಯೇ ಕೆಲಸ ಮಾಡಬೇಕು. ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಿರುವ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟಿಗೆ ತಿಳಿಸಿದೆ.

    ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಅರುಣ್ ಮಿಶ್ರಾ, ಆರ್.ಎಫ್. ನಾರಿಮನ್, ಆರ್. ಭಾನುಮತಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠ ಮಂಗಳವಾರ ವಜಾಗೊಳಿಸಿತ್ತು.

    ಈ ಅರ್ಜಿ ವಜಾಗೊಂಡ ಕೂಡಲೇ ಮುಕೇಶ್ ರಾಷ್ಟ್ರಪತಿ ಬಳಿ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದ. ರಾಷ್ಟ್ರಪತಿಗಳು ನನ್ನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಡೆತ್ ವಾರಂಟ್ ಜಾರಿಯಾಗಲು ಸಾಧ್ಯವಿಲ್ಲ. ನನ್ನ ಅರ್ಜಿ ಇತ್ಯರ್ಥವಾಗದೇ ಡೆತ್ ವಾರಂಟ್ ಜಾರಿ ಮಾಡುವುದು ಎಷ್ಟು ಸರಿ ಎಂದು ಮುಕೇಶ್ ಪ್ರಶ್ನಿಸಿದ್ದ.

  • ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

    ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

    – ಇದು ಬೇಜವಾಬ್ದಾರಿ ಹೇಳಿಕೆ ಎಂದು ಭಾರೀ ವಿರೋಧ
    – ಕ್ಷಮೆಯಾಚಿಸುವಂತೆ ಆಗ್ರಹ

    ಹೈದರಾಬಾದ್: ಪಶುವೈದ್ಯೆ(ದಿಶಾ) ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಅವರು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಇದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಯಾಗಿದೆ ತಕ್ಷಣ ಕ್ಷಮೆಯಾಚಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.

    ಜನಸೇನೆ ಕಾರ್ಯಕರ್ತರನ್ನುದ್ದೇಶಿಸಿ ಮಾತಾಡುವ ವೇಳೆ ಪವನ್ ಕಲ್ಯಾಣ್, ಸಹೋದರಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಇಡೀ ದೇಶವೇ ಒತ್ತಾಯಿಸುತ್ತಿದೆ. ಜನ ಆಕ್ರೋಶಕ್ಕೊಳಗಾಗಿ ಹೀಗೆ ಆಗ್ರಹಿಸುತ್ತಿದ್ದಾರೆ. ಸಂವಿಧಾನ ಯಾರಿಗೂ ಯಾರನ್ನು ಕೊಲ್ಲುವ ಹಕ್ಕು ನೀಡಿಲ್ಲ. ಆದ್ದರಿಂದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಬದಲಿಗೆ ಸಿಂಗಾಪುರ್ ಮಾದರಿಯಲ್ಲಿ ಶಿಕ್ಷೆ ನೀಡಬೇಕು. ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವಿಚಾರಕ್ಕೆ ನನ್ನ ಸಹಮತವಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಸಿಂಗಾಪುರ್ ನಲ್ಲಿ ಅತ್ಯಾಚಾರಿಗಳಿಗೆ 20 ವರ್ಷ ಜೈಲು ಶಿಕ್ಷೆ, ದಂಡ ಹಾಗೂ ಕಬ್ಬಿನಿಂದ ಹೊಡೆಯುವ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನೂ ಓದಿ: ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    https://twitter.com/SucharitaYSRCP/status/1202189478137217024

    ಪವನ್ ಕಲ್ಯಾಣ್ ಹೇಳಿಕೆಗೆ ಈಗ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಈ ಬಗ್ಗೆ ವೈಎಸ್‍ಆರ್ ಕಾಂಗ್ರೆಸ್ ಸಂಸದ ವಿಜಯ್ ಸಾಯ್ ರೆಡ್ಡಿ ಪ್ರತಿಕ್ರಿಯಿಸಿ, ಪವನ್ ಕಲ್ಯಾಣ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಇಡೀ ದೇಶವೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸುತ್ತಿದೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

    ಈ ಬೆನ್ನಲ್ಲೇ ಆಂಧ್ರ ಪ್ರದೇಶ ಸಚಿವರು ಕೂಡ ಪವನ್ ಕಲ್ಯಾಣ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವೆ ಪವನ್ ಕಲ್ಯಾಣ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ದಿಶಾ ಪ್ರಕರಣದ ಬಗ್ಗೆ ಪವನ್ ಅವರು ನೀಡಿರುವ ಹೇಳಿಕೆ ತಪ್ಪು. ಅತ್ಯಾಚಾರಿಗಳಿಗೆ ಕಬ್ಬಿನಿಂದ ಹೊಡೆದರೆ ಅವರ ಕೃತ್ಯಗಳನ್ನು ನಿಯಂತ್ರಿಸಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

    ದೇಶದೆಲ್ಲೆಡೆ ಈ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸಿ ಎಂಬ ಕೂಗು ಕೇಳಿಬರುತ್ತಿದೆ. ಹೀಗಿರುವಾಗ ಪವನ್ ಅವರು ಈ ರೀತಿ ಬೇಜವಾಬ್ದಾರಿ ಹೇಳಿಕೆ ಕೊಡುವುದು ಅವರು ಹೆಣ್ಣುಮಕ್ಕಳನ್ನು ಎಷ್ಟು ಗೌರವಿಸುತ್ತಾರೆ ಎನ್ನುವುದನ್ನು ತೋರಿಸುತ್ತದೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ದಿಶಾ ಪ್ರಕರಣದ ಬಗ್ಗೆ ಕೇಳಿದಾಗ ಬೇಸರವ್ಯಕ್ತಪಡಿಸಿದ್ದರು. ಅಲ್ಲದೆ ಈ ರೀತಿ ನೀಚ ಕೃತ್ಯವೆಸೆಗುವವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವುದಾಗಿ ಹೇಳಿದ್ದರು ಎಂದು ತಿಳಿಸಿ ಕಿಡಿಕಾರಿದ್ದಾರೆ.

    ಇನ್ನೊಂದು ಪತ್ರಿಕಾಗೋಷ್ಠಿಯಲ್ಲಿ ವೈಎಸ್‌ಆರ್‌ಸಿ ಶಾಸಕ ಮಾತನಾಡಿ, ಪವನ್ ಕಲ್ಯಾಣ್ ಅವರ ಹೇಳಿಕೆಯಿಂದ ಜನರು ಗೊಂದಲ ಹಾಗೂ ಆಶ್ಚರ್ಯಕ್ಕಿಡಾಗಿದ್ದಾರೆ. ಹಿಂದೊಮ್ಮೆ ಅವರು ತಮ್ಮ ಕೋಪದ ಬಗ್ಗೆ ಹೇಳುತ್ತಾ, ತಮ್ಮ ಸಹೋದರಿಯನ್ನು ಯಾರೋ ರೇಗಿಸಿದ್ದಕ್ಕೆ ಅವರನ್ನು ಹೊಡೆಯಲು ಕತ್ತಿ ತರಲು ಮನೆಗೆ ಓಡಿಹೋಗಿದ್ದ ಪ್ರಸಂಗದ ಬಗ್ಗೆ ತಿಳಿಸಿದ್ದರು. ಆದರೆ ಈಗ ದಿಶಾ ಪ್ರಕರಣ ಆರೋಪಿಗಳನ್ನು ಗಲ್ಲಿಗೇರಿಸಲು ಸಹಮತವಿಲ್ಲ ಎಂದಿದ್ದಾರೆ. ಇದು ಜನರಲ್ಲಿ ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ.