Tag: Gallows Punishment

  • ನೇಣು ಕುಣಿಕೆಯಿಂದ ಮತ್ತೆ ಪಾರಾದ ಕೀಚಕರು- ನಿರ್ಭಯಾ ಅತ್ಯಾಚಾರಿಗಳಿಗೆ ಸದ್ಯಕ್ಕಿಲ್ಲ ಗಲ್ಲು

    ನೇಣು ಕುಣಿಕೆಯಿಂದ ಮತ್ತೆ ಪಾರಾದ ಕೀಚಕರು- ನಿರ್ಭಯಾ ಅತ್ಯಾಚಾರಿಗಳಿಗೆ ಸದ್ಯಕ್ಕಿಲ್ಲ ಗಲ್ಲು

    ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ದೋಷಿಗಳು ಮತ್ತೆ ನೇಣು ಕುಣಿಕೆಯಿಂದ ಪಾರಾಗಿದ್ದಾರೆ. ಮುಂದಿನ ಆದೇಶದವರೆಗೂ ಗಲ್ಲು ಶಿಕ್ಷೆ ವಿಧಿಸದಂತೆ ದೆಹಲಿಯ ಪಟಿಯಾಲ ಕೋರ್ಟ್ ಆದೇಶ ನೀಡಿದೆ.

    ಸುಪ್ರೀಂಕೋರ್ಟಿನಲ್ಲಿ ಗಲ್ಲು ಶಿಕ್ಷೆಯನ್ನು ಮರಣದಂಡನೆ ಇಳಿಸುವಂತೆ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿ ವಜಾ ಆಗುತ್ತಿದ್ದಂತೆ, ತಿರಸ್ಕೃತಗೊಂಡಿರುವ ಕ್ಷಮಾದಾನ ಅರ್ಜಿಯನ್ನು ಮರು ಪರಿಶೀಲನೆ ನಡೆಸುವಂತೆ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದರು. ರಾಷ್ಟ್ರಪತಿಗಳಿಗೆ ಹೊಸ ಅರ್ಜಿಯನ್ನು ಸಲ್ಲಿಸಿದ್ದ ಹಿನ್ನೆಲೆ ನಾಳೆ ಬೆಳಗ್ಗೆ ನಿಗದಿಯಾಗಿದ್ದ ಗಲ್ಲು ಶಿಕ್ಷಗೆ ತಡೆ ನೀಡುವಂತೆ ಪವನ್ ಗುಪ್ತಾ ಪರ ವಕೀಲ ಎ.ಪಿ ಸಿಂಗ್ ಮನವಿ ಮಾಡಿದರು. ಇದರ ಜೊತೆಗೆ ಮತ್ತೋರ್ವ ದೋಷಿ ಅಕ್ಷಯ್ ಠಾಕೂರ್ ನ ತಿರಸ್ಕೃತಗೊಂಡ ಕ್ಷಮಾದಾನ ಅರ್ಜಿಯ ಮರು ಪರಿಶೀಲನಾ ಅರ್ಜಿ ಬಾಕಿ ಇದೆ ಎಂದು ಕೋರ್ಟ್ ಗಮನಕ್ಕೆ ತಂದರು.

    ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಧರ್ಮೇಂದರ್ ರಾಣಾ ಅರ್ಜಿದಾರರ ಪರ ವಕೀಲ ಎ.ಪಿ ಸಿಂಗ್ ವಿರುದ್ಧ ಹರಿಹಾಯ್ದರು. ಒಂದು ವಾರದಲ್ಲಿ ಕಾನೂನು ಹೋರಾಟವನ್ನು ಮುಗಿಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಇದ್ಯಾಗೂ ನೀವೂ ಕಾನೂನು ಹೋರಾಟಗಳನ್ನು ಅಂತ್ಯಗೊಳಿಸಿಲ್ಲ ನೀವೂ ಬೆಂಕಿಯ ಜೊತೆ ಆಟವಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಎರಡು ಗಂಟೆಗೆ ವಿಚಾರಣೆ ನಡೆಸಿದ್ದ ಪಟಿಯಾಲ ಕೋರ್ಟ್ ದಿಢೀರ್ ಬೆಳವಣಿಗೆಯಿಂದ ಗಲ್ಲು ಶಿಕ್ಷೆಗೆ ತಡೆ ನೀಡಲಾಗಿದ್ದು, ಮುಂದಿನ ಆದೇಶವರೆಗೂ ಗಲ್ಲು ಶಿಕ್ಷೆ ವಿಧಿಸದಂತೆ ತಿಹಾರ್ ಜೈಲು ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ. ಇದರಿಂದಾಗಿ ಸತತವಾಗಿ ಮೂರನೇ ಬಾರಿ ಗಲ್ಲು ಶಿಕ್ಷೆಯಿಂದ ನಾಲ್ವರು ದೋಷಿಗಳು ಪಾರಾಗಿದ್ದಾರೆ.

    ಪಟಿಯಾಲ ಕೋರ್ಟ್ ತೀರ್ಪು ಬಳಿಕ ಮಾತನಾಡಿದ ದೋಷಿಗಳ ಪರ ವಕೀಲ ಎ.ಪಿ ಸಿಂಗ್, ನಾಳಿನ ಗಲ್ಲು ಶಿಕ್ಷೆಗೆ ವಿಶೇಷ ಕೋರ್ಟ್ ತಡೆ ನೀಡಿದೆ. ಮುಂದಿನ ಆದೇಶದವರೆಗೂ ತಡೆ ನೀಡಿದೆ. ನಾಲ್ವರು ದೋಷಿಗಳಿಗೂ ನಾಳೆ ಶಿಕ್ಷೆ ಆಗುವುದಿಲ್ಲ ಎಂದರು.

    ಕೋರ್ಟ್ ಆದೇಶ ಬಗ್ಗೆ ನಾನೇನು ಹೇಳಲಿ, ಪದೇ ಪದೇ ಗಲ್ಲು ಶಿಕ್ಷೆ ಮುಂದೂಡಿಕೆಯಾಗಿದೆ ಭಾರತದಲ್ಲಿ ಅಪರಾಧಿಗಳಿಗೆ ಬೆಂಬಲ ಸಿಗುತ್ತಿದೆ. ಇಡೀ ಸಮಾಜ ಈ ಬೆಳವಣಿಗೆ ನೋಡುತ್ತಿದೆ. ಗಲ್ಲು ಶಿಕ್ಷೆ ಯಾವಾಗ ಎಂದು ನೀವೇ ಕೋರ್ಟ್ ಮತ್ತು ಸರ್ಕಾರವನ್ನು ಕೇಳಿ ಎಂದು ಸಂತ್ರಸ್ತೆ ತಾಯಿ ಆಶಾದೇವಿ ಆಕ್ರೋಶ ವ್ಯಕ್ತಪಡಿಸಿದರು.

  • ಅತ್ಯಾಚಾರಿಗಳಿಗೆ ಕ್ಷಮೆ ಇಲ್ಲ, ಕ್ಷಮಾದಾನದ ಅರ್ಜಿ ಸ್ವೀಕರಿಸಲ್ಲ -ರಾಷ್ಟ್ರಪತಿ ಕೋವಿಂದ್

    ಅತ್ಯಾಚಾರಿಗಳಿಗೆ ಕ್ಷಮೆ ಇಲ್ಲ, ಕ್ಷಮಾದಾನದ ಅರ್ಜಿ ಸ್ವೀಕರಿಸಲ್ಲ -ರಾಷ್ಟ್ರಪತಿ ಕೋವಿಂದ್

    – ನಿರ್ಭಯಾ ಅತ್ಯಾಚಾರಿಗಳಿಗೆ ನೇಣು ಫಿಕ್ಸ್?

    ಗಾಂಧಿನಗರ: ಹೈದರಾಬಾದ್ ದಿಶಾ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿದ ಬೆನ್ನಲ್ಲೇ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳನ್ನು ಅತ್ಯಾಚಾರ ಮಾಡಿದ ಆರೋಪಿಗಳ ಕ್ಷಮಾದಾನ ಮನವಿಯನ್ನು ಸ್ವೀಕಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಮಕ್ಕಳನ್ನು ಅತ್ಯಾಚಾರ ಮಾಡಿ ಪೊಕ್ಸೊ ಕಾಯ್ದೆ ಅಡಿಯಲ್ಲಿ ಬಂಧನವಾಗಿರುವ ಆರೋಪಿಗಳ ಕ್ಷಮಾದಾನದ ಪತ್ರವನ್ನು ನಾವು ಸ್ವೀಕಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ನಮ್ಮ ದೇಶದಲ್ಲಿ ಮಹಿಳೆಯ ಸುರಕ್ಷತೆ ಗಂಭೀರವಾದ ಸಮಸ್ಯೆಯಾಗಿದೆ. ಮಕ್ಕಳನ್ನು ಆತ್ಯಾಚಾರ ಮಾಡಿ ಪೊಕ್ಸೊ ಕಾಯ್ದೆ ಅಡಿಯಲ್ಲಿರುವ ಆರೋಪಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸುವ ಹಕ್ಕನ್ನು ನೀಡಬಾರದು. ಸಂಸತ್ತು ಆ ಅರ್ಜಿಯನ್ನು ಪರಿಶೀಲನೆ ಮಾಡಬೇಕು ಎಂದು ರಾಮನಾಥ್ ಕೋವಿಂದ್ ಅವರು ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಇದನ್ನು ಓದಿ: 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

    ಕ್ಷಮಾದಾನ ಪತ್ರ ಎಂದರೇನು?
    ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ ಆರೋಪಿಗಳು ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಬರೆಯುವ ಅವಕಾಶವಿದೆ. ಈ ಅರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪು ಅಂತಿಮವಾಗುತಿತ್ತು. ಆದರೆ ಈಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ಅಂತ್ಯವಾಡಿದ್ದು, ಮಕ್ಕಳನ್ನು ಆತ್ಯಾಚಾರ ಮಾಡಿದ ಆರೋಪಿಗಳ ಕ್ಷಮಾದಾನದ ಅರ್ಜಿ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಪೊಕ್ಸೊ ಕಾಯ್ದೆ ಅಡಿಯಲ್ಲಿ ಬರುವ ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ನೀಡುವ ತೀರ್ಪು ಅಂತಿಮವಾಗಲಿದೆ.

    ನಿರ್ಭಯಾ ಅತ್ಯಾಚಾರಿಗಳಿಗೆ ನೇಣು ಫಿಕ್ಸ್?
    2012 ಡಿಸೆಂಬರ್ 16 ರಂದು ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಈ ನಡುವೆ ರಾಜ್ಯಪಾಲರಿಗೆ ಆರೋಪಿಗಳು ಕ್ಷಮಾದಾನದ ಅರ್ಜಿ ಸಲ್ಲಿಸಿದ್ದು, ಅದನ್ನು ರಾಜ್ಯಪಾಲರು ತಿರಸ್ಕಾರ ಮಾಡಿದ್ದಾರೆ. ಹೀಗಿರುವಾಗ ಪ್ರಕರಣದ ದೋಷಿಗಳು ಕ್ಷಮಾದಾನ ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವಾಲಯಕ್ಕೆ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಗೃಹ ಸಚಿವಾಲಯವೂ ಈ ಅರ್ಜಿಯನ್ನು ತಿರಸ್ಕರಿಸಿದೆ. ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಆಗುತ್ತಾ ಇಲ್ಲವೋ ಎನ್ನುವುದು ಕೆಲ ದಿನಗಳಲ್ಲಿ ರಾಷ್ಟ್ರಪತಿಗಳು ಇತ್ಯರ್ಥಪಡಿಸಲಿದ್ದಾರೆ. ಇದನ್ನು ಓದಿ: ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ