Tag: Gandhad Gudi

  • ಪುನೀತ್ ರಾಜ್ ಕುಮಾರ್ ನೆನಪಿಗೆ ಅಪ್ಪು ಹೆಸರಿನಲ್ಲಿ ಫುಡ್ ಫೆಸ್ಟ್

    ಪುನೀತ್ ರಾಜ್ ಕುಮಾರ್ ನೆನಪಿಗೆ ಅಪ್ಪು ಹೆಸರಿನಲ್ಲಿ ಫುಡ್ ಫೆಸ್ಟ್

    ನ್ನೇನು ಕೆಲವೇ ಕೆಲವು ದಿನಗಳಲ್ಲಿ ಗಂಧದ ಗುಡಿಯಲ್ಲಿ ಪುನೀತ್ ರಾಜ್ ಕುಮಾರ್ (Puneeth Rajkumar)  ಬೆಳ್ಳಿ ತೆರೆ ಮೇಲೆ ರಾರಾಜಿಸಲಿದ್ದಾರೆ. ಕನ್ನಡನಾಡು ಮಾತ್ರ ಅಲ್ಲ, ದೇಶದ ಜನರು ಅಷ್ಟೇ ಅಲ್ಲ. ಇಡೀ ವಿಶ್ವವೇ ಪುನೀತ್ ರಾಜಕುಮಾರ್ ಕೊನೇ ಚಿತ್ರವನ್ನು ನೋಡಲು ತುದಿಗಾಲಲ್ಲಿ ನಿಂತಿದೆ. ಆ ಚಿತ್ರವನ್ನು ಬರ ಮಾಡಿಕೊಳ್ಳಲು ಕೋಟ್ಯಂತರ ಅಭಿಮಾನಿಗಳು ಸಜ್ಜಾಗಿದ್ದಾರೆ. ಅಭಿಮಾಗಳ ಜೊತೆ ಅಶ್ವಿನಿ ಪುನೀತ್ ರಾಜಕುಮಾರ್ ಕೂಡ ಕೈ ಜೋಡಿಸಿದ್ದಾರೆ. ಅಪ್ಪು ಕಡೇ ಚಿತ್ರವನ್ನು ಎಲ್ಲರಿಗೂ ತಲುಪಿಸುವುದು ಮಾತ್ರ ಅಲ್ಲ, ಎಲ್ಲರಿಗೂ ಹೊಸ ಸಂದೇಶವನ್ನು ಈ ಮೂಲಕ ನೀಡಲು ರೆಡಿಯಾಗಿದ್ದಾರೆ. ಇದೇ 21ರಂದು ಅದ್ದೂರಿ ಪ್ರಿ ಇವೆಂಟ್ ರಿಲೀಸ್ ಕಾರ್ಯಕ್ರಮ ಕೂಡ ಬೆಂಗಳೂರಿನಲ್ಲಿ ನಡೆಯಲಿದೆ.

    ಗಂಧದಗುಡಿ (Gandhad Gudi) ಬಿಡುಗಡೆ ಮುನ್ನ ನಡೆಯುವ ಈ ಕಾರ್ಯಕ್ರಮದಲ್ಲಿ ಭಾರತದ ಸಿನಿ ದಿಗ್ಗಜರು ಹಾಜರಾಗಲಿದ್ದಾರೆ. ಎಲ್ಲ ಭಾಷೆಯ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಯಾರೆಲ್ಲ ಬರುತ್ತಾರೆ ಎನ್ನುವುದು ಪಕ್ಕಾ ಆಗಿದೆ. ಜೊತೆಗೆ ಅಪ್ಪು (Appu) ಬಳಗ ಎಲ್ಲ ಕಾರ್ಯಗಳನ್ನು ನಿಯತ್ತಾಗಿ ಮಾಡುತ್ತಿದೆ. ಇದೇ ಪ್ರಿ ಇವೆಂಟ್ ಕಾರ್ಯಕ್ರಮ ನಡೆದ ಮರುದಿನ, ಅಂದರೆ ಅಕ್ಟೋಬರ್ 22 ಹಾಗೂ 23 ರಂದು ಬೆಂಗಳೂರಿನಲ್ಲಿ ಪುನೀತ್ ಫುಡ್ ಫೆಸ್ಟ್ (Food Fest) ಅದ್ದೂರಿಯಾಗಿ ನಡೆಯಲಿದೆ. ಅಪ್ಪುಗೆ ಇಷ್ಟವಾದ ನಾನ್ ವೆಜ್ ತಿನಿಸುಗಳನ್ನು ಕೆಲವು ಹೋಟೆಲ್‌ಗಳಲ್ಲಿ ಮಾಡಲಾಗುತ್ತದೆ. ಅದರಲ್ಲಿ ಮೋದಿ ಆಸ್ಪತ್ರೆ ಬಳಿಯ ಡಾ.ರಾಜ್ ದೊನ್ನೆ ಬಿರಿಯಾನಿ ಮನೆ ಕೂಡ ಒಂದು. ಖ್ಯಾತ ನಿರೂಪಕಿ ಅನುಶ್ರೀ (Anushree) ಹೋಟೆಲ್ ಉದ್ಘಾಟಿಸಿದರು.

    ಈ ಹೋಟೆಲ್‌ನಲ್ಲಿ ಅಪ್ಪುಗೆ ಬಲು ಇಷ್ಟವಾದ ಮಟನ್ ಚಾಪ್ಸ್ ಸೇರಿದಂತೆ ಮತ್ತಿತರ ತಿನಿಸುಗಳನ್ನು ಮಾಡಲಾಗುತ್ತದೆ. ಅಪ್ಪು ಅಬಿಮಾನಿಗಳು ಇದನ್ನು ಸವಿಯಬಹುದು. ಬರೀ ಇಲ್ಲಷ್ಟೇ ಅಲ್ಲ, ಬೆಂಗಳೂರಿನ ಅನೇಕ ಹೋಟೆಲ್‌ಗಳು ಈ ಫುಡ್‌ಫೆಸ್ಟ್ನಲ್ಲಿ ಭಾಗವಹಿಸಲಿವೆ. ವೆರೈಟಿ ವೆರೈಟಿ ಅಪ್ಪುಗೆ ಇಷ್ಟವಾದ ನಾನ್‌ವೆಜ್ ಐಟಂ ಮಾಡಲಾಗುತ್ತದೆ. ಹೋಟೆಲ್‌ನಲ್ಲೂ ಇದನ್ನು ತಿನ್ನಬಹುದು. ಅಥವಾ ಆರ್ಡರ್ ಕೂಡ ಮಾಡಬಹುದು. ಇದನ್ನೂ ಓದಿ:ದೊಡ್ಮನೆಯಲ್ಲಿ ಮಕ್ಕಳ ದರ್ಬಾರ್: ಮಗುವನ್ನು ತಬ್ಬಿ ಗಳಗಳನೆ ಅತ್ತ ಮಯೂರಿ

    ಅಪ್ಪು ಅಗಲಿ ಇದೇ ಅಕ್ಟೋಬರ್ ಕೊನೆಯ ವಾರಕ್ಕೆ ಒಂದು ವರ್ಷ. ಮೊದಲ ವರ್ಷದ ಪುಣ್ಯ ತಿಥಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪ್ಪು ಕುಟುಂಬ ಮತ್ತು ಅಭಿಮಾನಿಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ, ಅಪ್ಪು ಅವರ ಕನಸುಗಳಲ್ಲಿ ಒಂದಾಗಿದ್ದ ಗಂಧದ ಗುಡಿ ಡಾಕ್ಯುಮೆಂಟರಿ ಕೂಡ ಬಿಡುಗಡೆ ಆಗುತ್ತಿದೆ. ಅಭಿಮಾನಿಗಳು ಕೂಡ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನೆಚ್ಚಿನ ನಟನನ್ನು ನೆನೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್ : ಅಮಿತಾಭ್, ರಜನಿ ಸೇರಿ ಗಣ್ಯರಿಗೆ ಆಹ್ವಾನ

    ‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್ : ಅಮಿತಾಭ್, ರಜನಿ ಸೇರಿ ಗಣ್ಯರಿಗೆ ಆಹ್ವಾನ

    ಪುನೀತ್ ರಾಜ್ ಕುಮಾರ್ ನಟಿಸಿರುವ ‘ಗಂಧದ ಗುಡಿ’ (Gandhad Gudi) ಡಾಕ್ಯುಮೆಂಟರಿ ಮಾದರಿಯ ಸಿನಿಮಾ ಇದೇ ತಿಂಗಳು ಕೊನೆಯಲ್ಲಿ ಬಿಡುಗಡೆ ಆಗುತ್ತಿದೆ. ರಿಲೀಸ್ ಗೂ ಮುನ್ನ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Puneeth Rajkumar) ಅದ್ಧೂರಿಯಾಗಿ ಪ್ರಿ ರಿಲೀಸ್ ಇವೆಂಟ್ ಆಯೋಜನೆ ಮಾಡಲಾಗಿದ್ದು, ಭಾರತೀಯ ಸಿನಿಮಾ ರಂಗದ ದಿಗ್ಗಜರಿಗೆ ಅವರು ಆಹ್ವಾನ ನೀಡಿದ್ದಾರೆ. ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್, ಹಿರಿಯ ನಟ ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಅನೇಕರಿಗೆ ಆಹ್ವಾನ ಹೋಗಿದೆ.

    ಈಗಾಗಲೇ ಕನ್ನಡ ಸಿನಿಮಾ ರಂಗದ ಅನೇಕರಿಗೆ ಆಹ್ವಾನ ಪತ್ರಿಕೆಯನ್ನು ಕೊಡಲಾಗಿದ್ದು, ಡಾ.ರಾ‍ಜ್ ಕುಟುಂಬ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಿದೆ. ಈ ಕಾರ್ಯಕ್ರಮಕ್ಕೆ ಆಹ್ವಾನಿಸಲೆಂದೇ ವಿಶೇಷ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಲಾಗಿದ್ದು, ಪುನೀತ್ ಪುತ್ಥಳಿ, ಗಂಧದ ತುಂಡಿನಲ್ಲಿ ಪುನೀತ್ ಹಸ್ತಾಕ್ಷರ ಹಾಗೂ ಮರದ ಹಲಗೆಯಲ್ಲಿ ಕೆತ್ತಲಾದ ಆಮಂತ್ರಣ ಪತ್ರಿಕೆಯನ್ನು ತಯಾರಿಸಲಾಗಿದೆ. ಇದನ್ನೂ ಓದಿ:ಕನ್ನಡದ ಹೆಸರಲ್ಲಿ ರೋಲ್‌ಕಾಲ್‌: ಪ್ರೂವ್ ಮಾಡಿದರೆ ನೇಣಿಗೇರುವೆ ಎಂದ ರೂಪೇಶ್ ರಾಜಣ್ಣ

    ಮೊನ್ನೆಯಷ್ಟೇ  ಗಂಧದ ಗುಡಿ ಟೀಸರ್ ಬಿಡುಗಡೆ ಆಗಿದ್ದು, ಪ್ರೇಕ್ಷಕರು ದಾಖಲೆ ರೀತಿಯಲ್ಲಿ ಅದನ್ನು ವೀಕ್ಷಿಸಿದ್ದಾರೆ. ಈ ಟೀಸರ್ ನಲ್ಲಿ ಏನಿಲ್ಲ, ಎಲ್ಲವೂ ಇದೆ. ಬೆಟ್ಟ, ಗುಡ್ಡ, ನದಿ, ಹಳ್ಳ, ಕೊಳ್ಳ, ಅರಣ್ಯ, ಕಾಡು ಪ್ರಾಣಿಗಳು, ಕಾಡಂಚಿನ ಜನರು, ದೇವರು, ದೈವ ಎಲ್ಲವನ್ನೂ ಒಂದೇ ಉಸಿರಿಗೆ ಹಿಡಿದಿಟ್ಟಿದ್ದಾರೆ ಪುನೀತ್ ರಾಜ್‍ಕುಮಾರ್. ರಾತ್ರಿ ಅವರು ಕಾಡಿನೊಳಗೆ ನುಗ್ಗಿದಾಗ ನಾವೇ ಭಯಪಡುವಷ್ಟು ಸುಂದರವಾಗಿ ಸೆರೆ ಹಿಡಿದಿದ್ದಾರೆ ಆ ರಾತ್ರಿಯನ್ನು. ಸಮುದ್ರದಾಳಕ್ಕೆ ಅಪ್ಪು ಜಿಗಿದಾಗ ಇಲ್ಲಿ ನಾವೇ ಒದ್ದೆಯಾಗುವಂತೆ ಸಿನಿಮಾಟೋಗ್ರಫಿ ಇದೆ. ಎಲ್ಲವೂ ಚಂದ, ಚಂದ.

    ಗಂಧದ ಗುಡಿ ಟ್ರೈಲರ್ ನ ಮತ್ತೊಂದು ಸೊಗಸು ಅಂದರೆ, ಅಪ್ಪು ಹಾಗೂ ಅವರ ಅಪ್ಪಾಜಿ ಬಾಳಿ ಬದುಕಿದ ಮನೆಯನ್ನು ತೋರಿಸಿದ್ದಾರೆ. ಸ್ವತಃ ಆ ಮನೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಅವರೇ ವಿವರಿಸುತ್ತಾರೆ. ಮನೆಯನ್ನು ಕಣ್ತುಂಬಿಕೊಳ್ಳುವ ಹೊತ್ತಲ್ಲಿ ಡಾ.ರಾಜ್ ಕುಮಾರ್ ಪ್ರವೇಶ. ಥ್ರಿಲ್ ಅನಿಸುವಷ್ಟು ಮಜಾ ಕೊಡುತ್ತದೆ ಟ್ರೇಲರ್.

    ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗಾಗಿ ಟ್ರೇಲರ್ ಪ್ರದರ್ಶನ ಏರ್ಪಡಿಸಲಾಗಿತ್ತು. ಗಂಧದ ಗುಡಿಯ ಅಂದವನ್ನು ಕಣ್ತುಂಬಿಕೊಂಡ ಕಂಗಳಲ್ಲಿ ಅಪ್ಪು ಇಲ್ಲ ಅನ್ನುವ ಕಂಬನಿ ಸುರಿಯುತ್ತಿತ್ತು. ರಾಘವೇಂದ್ರ ರಾಜಕುಮಾರ ಸೇರಿದಂತೆ ಅಲ್ಲಿದ್ದವರ ಅಷ್ಟೂ ಕಣ್ಣುಗಳು ಒದ್ದೆ ಆಗಿದ್ದವು. ಟ್ರೇಲರೇ ಇಷ್ಟೊಂದು ಭಾವುಕತೆ ಸೃಷ್ಟಿ ಮಾಡಿದೆ. ಇದೇ ತಿಂಗಳು ಕೊನೆಯಲ್ಲಿ ಪೂರ್ತಿ ಚಿತ್ರವೇ ಬಿಡುಗಡೆ ಆಗುತ್ತಿದೆ. ಹೃದಯ ಒಡೆಯುವ ಕಾಲವದು.

    Live Tv
    [brid partner=56869869 player=32851 video=960834 autoplay=true]

  • ಗಂಧದ ಗುಡಿ ಟ್ರೇಲರ್ ಸೂಪರ್ ಹಿಟ್ : ಒಂದೇ ದಿನಕ್ಕೆ ಕೋಟಿ ವೀಕ್ಷಣೆ

    ಗಂಧದ ಗುಡಿ ಟ್ರೇಲರ್ ಸೂಪರ್ ಹಿಟ್ : ಒಂದೇ ದಿನಕ್ಕೆ ಕೋಟಿ ವೀಕ್ಷಣೆ

    ಪುನೀತ್ ರಾಜ್ ಕುಮಾರ್ (Puneeth Rajkumar) ನಟಿಸಿ, ನಿರ್ಮಾಣ ಮಾಡಿದ್ದ ಗಂಧದ ಗುಡಿ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಟ್ರೇಲರ್ ನಿನ್ನೆಯಷ್ಟೇ ರಿಲೀಸ್ ಆಗಿದೆ. ಬಿಡುಗಡೆಯಾದ ಒಂದೇ ದಿನಕ್ಕೆ ಕೋಟಿ  ವೀಕ್ಷಣೆ ಪಡೆದದ್ದು, ಅಪ್ಪು ಕೆಲಸಕ್ಕೆ ನೋಡುಗರು ಹಾಡಿ ಹೊಗಳಿದ್ದಾರೆ. ಅಲ್ಲೇ, ಅಪ್ಪು ಟ್ರೇಲರ್ ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಿಲಿಬ್ರಿಟಿಗಳು ಶುಭ ಹಾರೈಸಿದ್ದಾರೆ.

    ಗಂಧದ ಗುಡಿಯಲ್ಲಿ ಏನಿಲ್ಲ, ಎಲ್ಲವೂ ಇದೆ. ಬೆಟ್ಟ, ಗುಡ್ಡ, ನದಿ, ಹಳ್ಳ, ಕೊಳ್ಳ, ಅರಣ್ಯ, ಕಾಡು ಪ್ರಾಣಿಗಳು, ಕಾಡಂಚಿನ ಜನರು, ದೇವರು, ದೈವ ಎಲ್ಲವನ್ನೂ ಒಂದೇ ಉಸಿರಿಗೆ ಹಿಡಿದಿಟ್ಟಿದ್ದಾರೆ ಪುನೀತ್ ರಾಜ್‍ಕುಮಾರ್. ರಾತ್ರಿ ಅವರು ಕಾಡಿನೊಳಗೆ ನುಗ್ಗಿದಾಗ ನಾವೇ ಭಯಪಡುವಷ್ಟು ಸುಂದರವಾಗಿ ಸೆರೆ ಹಿಡಿದಿದ್ದಾರೆ ಆ ರಾತ್ರಿಯನ್ನು. ಸಮುದ್ರದಾಳಕ್ಕೆ ಅಪ್ಪು ಜಿಗಿದಾಗ ಇಲ್ಲಿ ನಾವೇ ಒದ್ದೆಯಾಗುವಂತೆ ಸಿನಿಮಾಟೋಗ್ರಫಿ ಇದೆ. ಎಲ್ಲವೂ ಚಂದ, ಚಂದ. ಇದನ್ನೂ ಓದಿ:ಪನೋರಮಾ ಸ್ಟುಡಿಯೋ ತೆಕ್ಕೆಗೆ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ

    ಗಂಧದ ಗುಡಿ (Gandhad Gudi) ಟ್ರೈಲರ್ ನ ಮತ್ತೊಂದು ಸೊಗಸು ಅಂದರೆ, ಅಪ್ಪು ಹಾಗೂ ಅವರ ಅಪ್ಪಾಜಿ ಬಾಳಿ ಬದುಕಿದ ಮನೆಯನ್ನು ತೋರಿಸಿದ್ದಾರೆ. ಸ್ವತಃ ಆ ಮನೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಅವರೇ ವಿವರಿಸುತ್ತಾರೆ. ಮನೆಯನ್ನು ಕಣ್ತುಂಬಿಕೊಳ್ಳುವ ಹೊತ್ತಲ್ಲಿ ಡಾ.ರಾಜ್ ಕುಮಾರ್ (Rajkumar) ಪ್ರವೇಶ. ಥ್ರಿಲ್ ಅನಿಸುವಷ್ಟು ಮಜಾ ಕೊಡುತ್ತದೆ ಟ್ರೇಲರ್.

    ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗಾಗಿ ಟ್ರೇಲರ್ (Trailer) ಪ್ರದರ್ಶನ ಏರ್ಪಡಿಸಲಾಗಿತ್ತು. ಗಂಧದ ಗುಡಿಯ ಅಂದವನ್ನು ಕಣ್ತುಂಬಿಕೊಂಡ ಕಂಗಳಲ್ಲಿ ಅಪ್ಪು ಇಲ್ಲ ಅನ್ನುವ ಕಂಬನಿ ಸುರಿಯುತ್ತಿತ್ತು. ರಾಘವೇಂದ್ರ ರಾಜಕುಮಾರ ಸೇರಿದಂತೆ ಅಲ್ಲಿದ್ದವರ ಅಷ್ಟೂ ಕಣ್ಣುಗಳು ಒದ್ದೆ ಆಗಿದ್ದವು. ಟ್ರೇಲರೇ ಇಷ್ಟೊಂದು ಭಾವುಕತೆ ಸೃಷ್ಟಿ ಮಾಡಿದೆ. ಇದೇ ತಿಂಗಳು ಕೊನೆಯಲ್ಲಿ ಪೂರ್ತಿ ಚಿತ್ರವೇ ಬಿಡುಗಡೆ ಆಗುತ್ತಿದೆ. ಹೃದಯ ಒಡೆಯುವ ಕಾಲವದು.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ರಾಜ್ ಕುಮಾರ್ ಗಂಧದ ಗುಡಿ ರಿಲೀಸ್ ಡೇಟ್ ಘೋಷಣೆ : ಅಕ್ಟೋಬರ್ 28ಕ್ಕೆ ತೆರೆಗೆ

    ಪುನೀತ್ ರಾಜ್ ಕುಮಾರ್ ಗಂಧದ ಗುಡಿ ರಿಲೀಸ್ ಡೇಟ್ ಘೋಷಣೆ : ಅಕ್ಟೋಬರ್ 28ಕ್ಕೆ ತೆರೆಗೆ

    ವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಕೂಸಾಗಿದ್ದ ‘ಗಂಧದ ಗುಡಿ’ ಸಾಕ್ಷ್ಯಚಿತ್ರವು ಅಕ್ಟೋಬರ್ 28ರಂದು ಬಿಡುಗಡೆ ಮಾಡುವುದಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರು ಪ್ರೀತಿಯ ಕಾಣಿಕೆ ಎಂದು ಅಶ್ವಿನಿ ಬರೆದಿದ್ದಾರೆ.

    ಈ ಸಾಕ್ಷ್ಯ ಚಿತ್ರದ ಬಗ್ಗೆ ಪುನೀತ್ ರಾಜ್ ಕುಮಾರ್ ಅಪಾರ ಕನಸು ಕಟ್ಟಿಕೊಂಡಿದ್ದರು. ಕೊರೊನಾ ಲಾಕ್ ಡೌನ್ ವೇಳೆಯಲ್ಲಿ ಸುಮ್ಮನೆ ಮನೆಯಲ್ಲಿ ಕೂರದೇ ಪುನೀತ್ ಅವರು ಕಾಡು ಮೇಡು ಸುತ್ತಿ ಶೂಟಿಂಗ್ ಮಾಡಿರುವ ಸಿನಿಮಾವಿದು. ನಮ್ಮ ನಾಡಿನ ಕಾಡಿನ ಸಂಪತ್ತನ್ನು ಈ ಸಾಕ್ಷ್ಯ ಚಿತ್ರದಲ್ಲಿ ಪರಿಚಯಿಸುವ ಕೆಲಸ ಮಾಡಿದ್ದಾರಂತೆ ಪುನೀತ್ ರಾಜ್ ಕುಮಾರ್. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಅಂದುಕೊಂಡಂತೆ ಆಗಿದ್ದರೆ, ಅಪ್ಪು ಬದುಕಿದ್ದಾಗಲೇ ಈ ಸಿನಿಮಾದ ಟೀಸರ್ ರಿಲೀಸ್ ಆಗಬೇಕಿತ್ತು. ಅದಕ್ಕೆ ಸಮಯವನ್ನೂ ನಿಗಧಿ ಮಾಡಿದ್ದರು. ಆದರೆ, ಅವರು ಅಷ್ಟರಲ್ಲಿ ನಿಧನರಾದರು. ಹಾಗಾಗಿ ಅವರ ಕನಸಿನ ಕೂಸನ್ನು ಅದ್ಧೂರಿಯಾಗಿಯೇ ರಿಲೀಸ್ ಮಾಡಬೇಕು ಎನ್ನುವುದು ಅಶ್ವಿನಿ ಅವರ ಕನಸಾಗಿತ್ತು. ಹೀಗಾಗಿ ಥಿಯೇಟರ್ ನಲ್ಲೇ ಈ ಸಾಕ್ಷ್ಯ ಚಿತ್ರ ರಿಲೀಸ್ ಆಗುತ್ತಿದೆ.


    Live Tv

    [brid partner=56869869 player=32851 video=960834 autoplay=true]

  • ಕನ್ನಡ ರಾಜ್ಯೋತ್ಸವಕ್ಕೆ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ

    ಕನ್ನಡ ರಾಜ್ಯೋತ್ಸವಕ್ಕೆ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ

    ಪುನೀತ್ ರಾಜ್ ಕುಮಾರ್ ಕನಸಿನ ಕೂಸಾಗಿರುವ ಗಂಧದ ಗುಡಿ ಪ್ರಾಜೆಕ್ಟ್ ಬಗ್ಗೆ ಹೊಸದೊಂದು ಸುದ್ದಿ ಬಂದಿದೆ. ಅಪ್ಪು ತುಂಬಾ ಇಷ್ಟಪಟ್ಟು ಮಾಡಿರುವ ಡಾಕ್ಯುಮೆಂಟರಿ ಇದಾಗಿದ್ದು, ಇದಕ್ಕಾಗಿ ಅವರು ಹರಸಾಹಸವನ್ನೇ ಪಟ್ಟಿದ್ದಾರೆ. ಈ ಡಾಕ್ಯುಮೆಂಟರಿಯ ಟ್ರೈಲರ್ ಕಳೆದ ವರ್ಷ ನವೆಂಬರ್ ಒಂದರಂದು ರಿಲೀಸ್ ಆಗಬೇಕಿತ್ತು. ಅದಕ್ಕೂ ಮುನ್ನ ಪುನೀತ್ ಅಗಲಿದರು. ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆಯಾಗಿ ಗಂಧದ ಗುಡಿ ಟ್ರೈಲರ್ ಕೊಡಬೇಕು ಎನ್ನುವ ಅವರ ಕನಸು ಇದೀಗ ಈಡೇರಲಿದೆ.

    ಕನ್ನಡ ರಾಜ್ಯೋತ್ಸವದ ಉಡುಗೊರೆಯಾಗಿ ಟ್ರೈಲರ್ ರಿಲೀಸ್ ಮಾಡಬೇಕೆನ್ನುವುದು ಅಪ್ಪು ಕನಸಾಗಿದ್ದರಿಂದ ಅದೇ ತಿಂಗಳು ಗಂಧದ ಗುಡಿ ಡಾಕ್ಯುಮೆಂಟರಿಯನ್ನು ಥಿಯೇಟರ್ ನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ ನಲ್ಲಿ ನೂರಾರು ಥಿಯೇಟರ್ ನಲ್ಲಿ ಈ ಡಾಕ್ಯುಮೆಂಟರಿ ತೆರೆ ಕಾಣಲಿದೆ. ಥಿಯೇಟರ್ ನಲ್ಲೇ ಇದನ್ನು ಪ್ರೇಕ್ಷಕರಿಗೆ ತೋರಿಸಬೇಕು ಎನ್ನುವುದು ಅಪ್ಪು ಪ್ಲ್ಯಾನ್ ಕೂಡ ಆಗಿತ್ತು. ಇದನ್ನೂ ಓದಿ : ಬಾಲಿವುಡ್ ನಲ್ಲಿ ಕನ್ನಡದ ರಂಗಿತರಂಗ ಸಿನಿಮಾ ರಿಮೇಕ್

    ಈ ಡಾಕ್ಯುಮೆಂಟರಿಗಾಗಿ ಅನೇಕ ದಿನಗಳ ಕಾಲ ಪುನೀತ್ ರಾಜ್ ಕುಮಾರ್ ಕಾಡು ಮೇಡು ಸುತ್ತಿದ್ದರು. ಸಮುದ್ರದಾಳಕ್ಕೂ ಇಳಿದಿದ್ದರು. ಮುರುಡೇಶ್ವರ ಸೇರಿದಂತೆ ಹಲವು ಕಡೆ ಈ ಡಾಕ್ಯುಮೆಂಟರಿಯ ಚಿತ್ರೀಕರಣ ಮಾಡಿದ್ದರು. ಇದೊಂದು ರೀತಿಯಲ್ಲೇ ಸಿನಿಮಾದ ಮಾದರಿಯಲ್ಲೇ ಶೂಟ್ ಆಗಿರುವುದರಿಂದ ಒಂದು ಗಂಟೆಗೂ ಅಧಿಕ ಸಮಯದ ಡಾಕ್ಯುಮೆಂಟರಿ ಇದಾಗಿದೆಯಂತೆ. ಅಲ್ಲದೇ, ಉನ್ನತ ತಂತ್ರಜ್ಞಾನವನ್ನು ಇದಕ್ಕಾಗಿ ಬಳಕೆ ಮಾಡಲಾಗಿದೆಯಂತೆ.

    Live Tv
    [brid partner=56869869 player=32851 video=960834 autoplay=true]