Tag: ganesh chatruthi

  • ಗಣೇಶ ಉತ್ಸವದ ವೇಳೆ ಡಿಜೆ ಬ್ಯಾನ್; ಶಾಂತಿ ಭಂಗ ಮಾಡಿದ್ರೆ ಕ್ರಮ – ಗದಗ ಎಸ್ಪಿ ವಾರ್ನಿಂಗ್

    ಗಣೇಶ ಉತ್ಸವದ ವೇಳೆ ಡಿಜೆ ಬ್ಯಾನ್; ಶಾಂತಿ ಭಂಗ ಮಾಡಿದ್ರೆ ಕ್ರಮ – ಗದಗ ಎಸ್ಪಿ ವಾರ್ನಿಂಗ್

    ಗದಗ: ಗಣೇಶ್ ಹಬ್ಬದ ಸಂದರ್ಭದಲ್ಲಿ ಯಾರಾದ್ರು ಗಲಾಟೆ, ತೊಂದರೆ ಮಾಡಿದ್ರೆ ಅಥವಾ ಶಾಂತಿ ಭಂಗ ಮಾಡಿದ್ರೆ ಅಂತವರ ಮೇಲೆ ಸೂಕ್ತ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ತೇವೆ ಎಂದು ಗದಗ (Gadag) ಎಸ್ಪಿ ರೋಹನ್ ಜಗದೀಶ್ ಖಡಕ್ ವಾರ್ನ್ ನೀಡಿದ್ದಾರೆ.

    ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೆ ಸೂಕ್ಷ್ಮ, ಅತಿಸೂಕ್ಷ್ಮ, ಸಾಧಾರಣ ಎಂಬ ಪ್ರದೇಶಗಳನ್ನು ಗುರುತಿಸಲಾಗಿದೆ. ಎಲ್ಲಾ ಕಡೆಗಳಲ್ಲಿ ಸೂಕ್ತ ರೀತಿಯ ಭದ್ರತೆ ಕೈಗೊಳ್ಳಲಾಗಿದೆ. ಪೂರ್ವಭಾವಿಯಾಗಿ ರೌಡಿಶೀಟರ್, ಗುಂಡಾಗಳಿಗೆ ಈಗಾಗಲೇ ವಾರ್ನ್ ಮಾಡಿದೆ. ಅವರಿಂದ ಮುಚ್ಚಳಿಕೆ ಸಹ ಬರಿಸಿಕೊಳ್ಳಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್; 5 ಕೋಟಿ ಮೌಲ್ಯದ ಆಸ್ತಿಗೆ ಇಡಿ ತಾತ್ಕಾಲಿಕ ಮುಟ್ಟುಗೋಲು

    ಇನ್ನು ಜಿಲ್ಲೆಯ ಸೂಕ್ಷ್ಮ ಪ್ರದೇಶದಲ್ಲಿ, ಗಣಪತಿ ಹೋಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾಗಳು ಹಾಗೂ ಡ್ರೋನ್ ಕ್ಯಾಮೆರಾಗಳ ನಿಗಾವಹಿಸಲಾಗಿದೆ. ಗದಗ ಜಿಲ್ಲೆಯಾದ್ಯಂತ ಗಣೇಶ ಹಬ್ಬ ವಿಶೇಷವಾಗಿ ಹಾಗೂ ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಸಾರ್ವಜನಿಕರ ಹಿತಾಸಕ್ತಿ ಹಾಗೂ ಭದ್ರತೆಗಾಗಿ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಪ್ಪಿ ಮನೆಯಲ್ಲಿ ಗಣೇಶ ಹಬ್ಬ ಭಲೇ ಜೋರು

    ಜಿಲ್ಲೆಯಲ್ಲಿ ಡಿಜೆ ಬಳಕೆಯ ಮಾತೇ ಇಲ್ಲ
    ಇನ್ನು ಡಿಜೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯ ನಿರ್ದೇಶನ ಜಾರಿ ಮಾಡಿದೆ. ನ್ಯಾಯಾಲಯದ ಆದೇಶಕ್ಕೆ ನಾವೆಲ್ಲ ತಲೆಬಾಗಲೇಬೇಕು. ಹಾಗಾಗಿ ಜಿಲ್ಲೆಯಾದ್ಯಂತ ಸುರಕ್ಷಿತವಾಗಿ ಹಬ್ಬ ಆಚರಣೆಗೆ ಜಿಲ್ಲಾ ಪೊಲೀಸ್ ಸನ್ನದ್ಧವಾಗಿದೆ. ಜಿಲ್ಲೆಯಲ್ಲಿ ಡಿಜೆ ಬಳಕೆಯ ಮಾತೇ ಇಲ್ಲ. ಬೇಕಾದ್ರೆ ಸೌಂಡ್ ಪರವಾನಿಗೆ ಪಡೆಯಬಹುದು. ಆದ್ರೆ ಅದಕ್ಕು ಯಾವ ಪ್ರದೇಶದಲ್ಲಿ ಇಷ್ಟೆಲ್ಲಾ ಡೆಸಿಮಲ್ ಇರಬೇಕು ಅಂತ ನಿಯಮ ಇದೆ ಎಂದು ಮಾಹಿತಿ ನೀಡಿದ್ದಾರೆ.

    ಆ ನಿಯಮದ ಆಧಾರದ ಮೇಲೆ ಪರವಾನಗಿ ಪಡೆಯಬಹುದು. ನ್ಯಾಯಾಲಯದ ಆದೇಶ ಉಲ್ಲಂಘನೆಯಾದ್ರೆ ನಾವು ಮಾತ್ರ ಸುಮ್ನೆ ಬಿಡಲ್ಲ. ಸಾರ್ವಜನಿಕ ಹಬ್ಬ ಆಗಿರೋದ್ರಿಂದ ಎಲ್ಲರು ಸಹಕಾರ, ಸಹಮತದಿಂದ ಆಚರಿಸಬೇಕು. ಬೇರೆ ಏನಾದ್ರು ಬೆಳವಣಿಗೆಗಳಾದ್ರೆ ಪೊಲೀಸ್ ಇಲಾಖೆ ಮಾತ್ರ ಸುಮ್ಮನಿರಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ.

  • ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್

    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್

    ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣ ಮಾಡಲು ಪ್ಲಾನ್ ಮಾಡುವವರಿಗೆ ಇದೊಂದು ಶಾಕಿಂಗ್ ಸುದ್ದಿಯಾಗಿದೆ. ಹೌದು. ಹಬ್ಬದ ನೆಪದಲ್ಲಿ ಖಾಸಗಿ ಬಸ್‍ಗಳ ಮಾಲೀಕರಿಂದ ಹಗಲು ದರೋಡೆ ನಡೆಯುತ್ತಿದೆ.

    ಎಂದಿಗಿಂತ ಎರಡ್ಮೂರು ಪಟ್ಟು ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಂದ ಸುಲಿಗೆ ಮಾಡಲು ಮಾಲೀಕರ ತಯಾರಾಗಿದ್ದು, ಗಣೇಶ ಚತುರ್ಥಿ ಮುನ್ನಾ ಎರಡು ದಿನದ ರೇಟ್ ಕೇಳಿದ್ರೆ ಆಗ್ತಿರಾ ಶಾಕ್ ಆಗ್ತೀರಿ. ಇಂದು 500 ರೂ. ಟಿಕೆಟ್ ದರ ಇದ್ರೆ 11, 12ರಂದು 1500 ರೂ. ಆಗಿರುತ್ತದೆ. ಈ ಬಗ್ಗೆ ಪ್ರಶ್ನಿಸಿದ್ರೆ ಬೇಕಾದ್ರೆ ಬುಕ್ ಮಾಡಿ ಇಲ್ಲಾ ಅಂದ್ರೆ ಹೋಗಿ ಅಂತ ಬುಕ್ಕಿಂಗ್ ಏಜೆಂಟ್ಸ್ ಹೇಳುತ್ತಾರೆ. ಈ ವಿಚಾರ ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೇಕ್‍ನಲ್ಲಿ ಬಯಲಾಗಿದೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಟಿಕೆಟ್ ದರ ಏರಿಸಲ್ಲ: ಸಾರಿಗೆ ಸಚಿವ ಡಿಸಿ ತಮ್ಮಣ್ಣ

    ಬೆಂಗಳೂರಿನಿಂದ ಬೇರೆ ಬೇರೆ ಪ್ರಮುಖ ಊರುಗಳಿಗೆ ಇವತ್ತಿನ ಪ್ರಯಾಣ ದರ ಎಷ್ಟಿದೆ. 11, 12 ನೇ ತಾರೀಕು ಇದೇ ಪ್ರಮುಖ ಊರುಗಳಿಗೆ ಟಿಕೆಟ್ ದರ ಈ ಕೆಳಗಿನಂತಿದೆ. ಇದನ್ನೂ ಓದಿ: ಮತ್ತೊಂದು ಶಾಕ್, ಇನ್ನು ಮುಂದೆ ಪ್ರತಿ ತಿಂಗಳು ಬಸ್ ಟಿಕೆಟ್ ಪರಿಷ್ಕರಣೆ!

    ಎಲ್ಲಿಂದ ಎಲ್ಲಿಗೆ [ನಾನ್ ಎಸಿ ಸ್ಲೀಪರ್]  – ಇಂದಿನ ದರ-  11, 12ರ ದರ
    ಬೆಂಗಳೂರು TO ಬೆಳಗಾವಿ –  950 ರೂ. –  1750 ರೂ.
    ಬೆಂಗಳೂರು TO ಮಂಗಳೂರು  – 850- ರೂ.- 1600 ರೂ .
    ಬೆಂಗಳೂರು TO ಉಡುಪಿ –  850 ರೂ. – 1500 ರೂ .
    ಬೆಂಗಳೂರು TO ಶಿವಮೊಗ್ಗ  – 560 ರೂ. – 1600 ರೂ.
    ಬೆಂಗಳೂರು TO ಹುಬ್ಬಳ್ಳಿ –   600 ರೂ. – 1700 ರೂ.
    ಬೆಂಗಳೂರು TO ಬೀದರ್ –  1100 ರೂ. – 1700 ರೂ.
    ಬೆಂಗಳೂರು TO ಬಳ್ಳಾರಿ –  560 ರೂ. – 1300 ರೂ.
    ಬೆಂಗಳೂರು TO ರಾಯಚೂರು –  660 ರೂ. – 1700 ರೂ.
    ಬೆಂಗಳೂರು TO ಮೈಸೂರು –  500 ರೂ. – 850 ರೂ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv