Tag: ganesha festival

  • ಡ್ಯಾನ್ಸ್ ವಿಚಾರಕ್ಕೆ ಗಲಾಟೆ- ಓರ್ವ ಸಾವು, ಮೃತನ ತಾಯಿಗೂ ಚಾಕು ಇರಿತ

    ಡ್ಯಾನ್ಸ್ ವಿಚಾರಕ್ಕೆ ಗಲಾಟೆ- ಓರ್ವ ಸಾವು, ಮೃತನ ತಾಯಿಗೂ ಚಾಕು ಇರಿತ

    ಬೆಂಗಳೂರು: ಗಣಪತಿ ಬಿಡುವಾಗ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಶ್ರೀನಿವಾಸ್ ಕೊಲೆಯಾದ ಯುವಕ. ಈತನ ಕೊಲೆಯ ಮೂಲಕ ಎರಡು ಗುಂಪುಗಳ ಜಗಳ ಅಂತ್ಯವಾಗಿದೆ. ಗಣಪತಿ ಬಿಡುವಾಗ ಯಾಕ್ರೋ ಇಲ್ಲಿ ಡ್ಯಾನ್ಸ್ ಮಾಡ್ತೀರಾ ಅಂದಿದ್ದಕ್ಕೆ ಗಲಾಟೆ ನಡೆದಿದ್ದು, ಲಾಂಗ್ ಮಚ್ಚುಗಳಿಂದ ಹೊಡೆದಾಟ ಮಾಡಿಕೊಂಡಿವೆ.

    ಗಲಾಟೆಯಲ್ಲಿ ರಂಜಿತ್ ಎಂಬವನಿಗೂ ಗಂಭೀರ ಗಾಯಗಳಾಗಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಲಾಟೆ ಬಿಡಿಸಲು ಬಂದ ಮೃತ ಶ್ರೀನಿವಾಸ್ ತಾಯಿಗೂ ಗ್ಯಾಂಗ್ ಚಾಕುವಿನಿಂದ ಇರಿದಿದೆ. ಇವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಊಟಿಯಂತಾದ ಬೆಂಗಳೂರು- 4 ದಿನ ಮಳೆ ಸಾಧ್ಯತೆ

    ಹಿಂದಿನ ತಿಂಗಳು ನಡೆದ ಗಣೇಶ ವಿಸರ್ಜನಾ (Ganesha Festival) ಸಮಯದಲ್ಲಿ ಡ್ರಾನ್ಸ್ ವಿಚಾರವಾಗಿ ಗಲಾಟೆಯಾಗಿತ್ತು. ಶ್ರೀನಿವಾಸ್ ಕಡೆಯವರಿಗೆ ಇಲ್ಲಿ ನೀವು ಡ್ಯಾನ್ಸ್ ಮಾಡಬೇಡಿ ಅಂತಾ ವಾರ್ನ್ ಮಾಡಿದ್ದರು. ಭಾನುವಾರ ಇವರು ಗಣಪತಿ ಬಿಡುವಾಗ ಶ್ರೀನಿವಾಸ್ ಏರಿಯಾದಲ್ಲಿ ಡ್ಯಾನ್ಸ್ ಮಾಡಿದ್ದರು. ಈ ಗಣೇಶ ಬಲಿ ಕೇಳುತ್ತೆ ಅಂತಾ ಕೂಗಿದ್ದಾರೆ. ಆಗ ಇಬ್ಬರ ನಡುವೆ ಗಲಾಟೆ ಶುರುವಾಗಿದೆ.

    ಗಲಾಟೆಯಲ್ಲಿ ಲಾಂಗು ಮಚ್ಚು ಹಿಡಿದು ಹೊಡೆದಾಡಿಕೊಂಡಿದ್ದಾರೆ. ಗುಂಪು ಗಲಾಟೆ ಮಾಡಬೇಕು ಅಂತಾ ರೆಡಿಯಾಗಿಯೇ ಬಂದಿತ್ತು. ಗಲಾಟೆ ಸಂದರ್ಭದಲ್ಲಿ ಓರ್ವ ರೌಡಿಶೀಟರ್ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ.

    ಘಟನೆ ಸಂಬಂಧ ಅಡುಗೋಡಿ ಪೊಲೀಸ್ ಠಾಣೆಯಲ್ಲಿ (Adugodi Police Station) ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಪೊಲೀಸರು ಬಲೆಬೀಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ – ವಿಘ್ನೇಶ್ವರನಿಗೂ ವಿಶೇಷ ಮಂಟಪ

    ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ – ವಿಘ್ನೇಶ್ವರನಿಗೂ ವಿಶೇಷ ಮಂಟಪ

    ಹಾವೇರಿ: ಗಣೇಶ ಚತುರ್ಥಿ ಮುಗಿದು ಇದೀಗ ತಾಳವಾದ್ಯಗಳೊಂದಿಗೆ ಗಣೇಶ ಮೂರ್ತಿ (Ganesha Idol) ವಿಸರ್ಜನೆ ಮಾಡುವ ಕಾರ್ಯಕ್ರಮಗಳು ಅದ್ಧೂರಿಯಾಗಿ ಅಲ್ಲಲ್ಲಿ ನಡೆಯುತ್ತಿವೆ. ಆದ್ರೆ ರಾಣೇಬೆನ್ನೂರಿನಲ್ಲಿ ಗಣೇಶ ಹಬ್ಬದ (Ganesha Festival) ಪ್ರಯುಕ್ತ ಒಂದೂವರೆ ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ (Ram Mandir) ನಿರ್ಮಾಣ ಮಾಡಲಾಗಿದೆ.

    ಸುಮಾರು ಒಂದೂವರೆ ಕೋಟಿ ರೂ.ಗಳಷ್ಟು ಹಣ ಖರ್ಚು ಮಾಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ವೇದಿಕೆ ಪಕ್ಕದಲ್ಲೇ ರಾಮಮಂದಿರ ನಿರ್ಮಿಸಲಾಗಿದೆ. ಶತಮಾನಗಳ ಇತಿಹಾಸ ಸಾರುವ ಜೊತೆಗೆ ರಾಮಮಂದಿರದ ಇತಿಹಾಸ ತಿಳಿಸುವ ಮಾಹಿತಿಗಳನ್ನೂ ಇಲ್ಲಿ ಚಿತ್ರಿಸಲಾಗಿದೆ. ಈ ಸೌಂದರ್ಯವನ್ನ ಕಣ್ತುಂಬಿಕೊಳ್ಳಲು ಭಕ್ತರು ಮುಗಿಬೀಳುತ್ತಿದ್ದಾರೆ.

    ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕ್ರೀಡಾಂಗಣದಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ವಂದೇ ಮಾತರಂ ಸೇವಾ ಸಂಸ್ಥೆಯು ಕಳೆದ 15 ವರ್ಷಗಳಿಂದ ರಾಣೇಬೆನ್ನೂರಿನಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತಾ ಬಂದಿದೆ. ಆದ್ರೆ ಈ ಬಾರಿ ಹಬ್ಬವನ್ನು ಇನ್ನಷ್ಟು ವಿಶೇಷವಾಗಿಸಲು ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬುರಡಿಕಟ್ಟಿ ನೇತೃತ್ವದಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ಈ ಬಾರಿ ಗಣೇಶ ಪ್ರತಿಷ್ಠಾಪನೆ ಜೊತೆಗೆ ಭವ್ಯ ರಾಮಮಂದಿರವನ್ನೂ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆ

    ರಾಮಮಂದಿರದ ವಿಶೇಷತೆ ಏನು?
    ಸಾವಿರಾರು ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮಾದರಿಯಲ್ಲೇ ಇಲ್ಲಿನ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಜೊತೆಗೆ ರಾಮ ಜನ್ಮಭೂಮಿಗಾಗಿ ನಡೆದ ಹೋರಾಟಗಳು ಹಾಗೂ ಅದರ ಹಿನ್ನೆಲೆಯನ್ನು ಬರಹಗಳಲ್ಲಿ ಅಳವಡಿಸಲಾಗಿದೆ. ಇದರೊಂದಿಗೆ ಮಂದಿರಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಇದನ್ನೂ ಓದಿ: Ind vs Aus ಪಂದ್ಯಕ್ಕೆ ಮಳೆ ಅಡ್ಡಿ; ಓವರ್‌ ಕಡಿತಗೊಳಿಸಲು ನಿರ್ಧಾರ – ಆಸೀಸ್‌ಗೆ ಒಲಿಯುತ್ತಾ ಲಕ್‌?

    ಅಷ್ಟೇ ಅಲ್ಲದೇ ಇತಿಹಾಸ ಸಾರುವ ಅನೇಕ ಕಬ್ಬಿಣ ಹಾಗೂ ಫೈಬರ್‌ನಿಂದ ಸಿದ್ಧಪಡಿಸಲಾದ ಕಲಾಕೃತಿಗಳನ್ನೂ ಈ ಮಂದಿರದಲ್ಲಿ ನಿರ್ಮಿಸಲಾಗಿದೆ. ಶ್ರೀರಾಮನ ಮೂರ್ತಿಯನ್ನೂ ಇಲ್ಲಿ ಇಡಲಾಗಿದ್ದು, ಭಕ್ತರನ್ನು ಆಕರ್ಷಿಸುವಂತೆ ಮಾಡಲಾಗಿದೆ. ಭಕ್ತರು ಸಂತಸದಿಂದಲೇ ಮಂದಿರಕ್ಕೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.

    ಹಾವೇರಿ ಅಷ್ಟೇ ಅಲ್ಲದೆ ಶಿವಮೊಗ್ಗ, ದಾವಣಗೆರೆ, ಧಾರವಾಡ ಜಿಲ್ಲೆಗಳಿಂದಲೂ ಅನೇಕರು ರಾಮಮಂದಿರ ನೋಡಲು ಸಾಗರೋಪಾದಿಯಲ್ಲಿ ಹರಿದುಬರುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಲ್ಲಿ ಯಾವ್ದೇ ಮೀನು ತಗೊಂಡ್ರೂ KG 99 ರೂ. ಮಾತ್ರ – ಚಿಕ್ಕಬಳ್ಳಾಪುರದಲ್ಲಿ ಮೀನು ಪ್ರಿಯರಿಗೆ ಬಂಪರ್‌

    ಇಲ್ಲಿ ಯಾವ್ದೇ ಮೀನು ತಗೊಂಡ್ರೂ KG 99 ರೂ. ಮಾತ್ರ – ಚಿಕ್ಕಬಳ್ಳಾಪುರದಲ್ಲಿ ಮೀನು ಪ್ರಿಯರಿಗೆ ಬಂಪರ್‌

    ಚಿಕ್ಕಬಳ್ಳಾಪುರ: ನಿನ್ನೆಯಷ್ಟೇ ಎಲ್ಲೆಡೆ ಗೌರಿ-ಗಣೇಶ ಹಬ್ಬವನ್ನು (Ganesha festival) ಸಂಭ್ರಮದಿಂದ ಆಚರಿಸಲಾಗಿದೆ. ಕೆಲವೆಡೆ ಮಂಗಳವಾರ (ಇಂದು) ಹಬ್ಬ ಆಚರಿಸಿದ್ರೆ, ಇನ್ನೂ ಕೆಲವೆಡೆ ಸೋಮವಾರವೇ ಹಬ್ಬ ಆಚರಿಸಿ ಮುಕ್ತಾಯಗೊಳಿಸಿದ್ದಾರೆ. ಗೌರಿ-ಗಣೇಶನ ಹಬ್ಬ ಮುಗಿದಿದ್ದೇ ತಡ ಇಂದು ಮಾಂಸಹಾರ (Meat) ಪ್ರಿಯರ ಕಣ್ಣು ಚಿಕನ್, ಮಟನ್, ಮೀನು ಆಹಾರ ಪದಾರ್ಥಗಳತ್ತ ಬಿದ್ದಿದೆ.

    ಚಿಕ್ಕಬಳ್ಳಾಪುರದಲ್ಲಿ (Chikkaballapura) ಮೀನು ಮಾರಾಟಗಾರನೊರ್ವ ಯಾವುದೇ ಮೀನು ತಗೊಂಡ್ರೂ 99 ರೂ. ಮಾತ್ರ ಅಂತ ಆಫರ್ ಕೊಟ್ಟಿದ್ದು ಮೀನು (Fish) ಖರೀದಿಗಾಗಿ ಜನ ಮುಗಿಬೀಳುತ್ತಿದ್ದಾರೆ. ಈ ಆಫರ್‌ ಇರುವುದು ಮಂಗಳವಾರ (ಇಂದು) ಮಾತ್ರ. ಇದನ್ನೂ ಓದಿ: ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್

    ಹೌದು. ಶ್ರಾವಣ ಮಾಸ ಅದ್ರಲ್ಲೂ ಈ ಬಾರಿ ಆಧಿಕ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಮಾಂಸಹಾರ ಸೇವನೆಗೆ ಬ್ರೇಕ್ ಬಿದ್ದಿತ್ತು. ಈಗ ಗೌರಿ-ಗಣೇಶ ಹಬ್ಬ ಮುಗಿದಿದ್ದೇ ತಡ ನಾನ್‌ವೆಜ್‌ ಪ್ರಿಯರು ಮಾಂಸ ಪದಾರ್ಥಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಭೂಮಿ ಕಕ್ಷೆ ತೊರೆದ ಆದಿತ್ಯ ಎಲ್‌1 ನೌಕೆ – 110 ದಿನಗಳ ಸೂರ್ಯ ಯಾತ್ರೆ ಆರಂಭ

    ಚಿಕ್ಕಬಳ್ಳಾಪುರದ ಗುಡಿಬಂಡೆ ಅಮಾನಿ ಬೈರಸಾಗರ ಕೆರೆಯಲ್ಲಿ ಮೀನು ಸಾಕಾಣಿಕೆ ಗುತ್ತಿಗೆ ಪಡೆದಿರೋ ಬಿಲಾಲ್ ಕಡಿಮೆ ದರಕ್ಕೆ ಮೀನು ಮಾರಾಟ ಮಾಡುತ್ತಿದ್ದಾರೆ. ಪ್ರತಿ ದಿನ ಯಾವುದೇ ಮೀನಿಗೂ ಕೆಜಿಗೆ 150 ರೂ. ಮಾರಾಟ ಮಾಡ್ತಿದ್ದ ಬಿಲಾಲ್ ಇಂದು 99 ರೂ.ಗೆ ಆಫರ್‌ ಮಾಡಿದ್ದಾರೆ. ಬೈರಸಾಗರ ಕೆರೆಯ ಮೀನು ಅಂದ್ರೆ ಜನರಿಗೂ ಬಹಳ ಫೇವರೆಟ್ ಆಗಿರುವುದರಿಂದ ಮುಗಿಬಿದ್ದು ಖರೀದಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿಂದು ಗಣೇಶ ಪ್ರತಿಷ್ಠಾಪನೆ- ಮೆರವಣಿಗೆ, ವಿಶೇಷ ಪೂಜೆಗೆ ಸಿದ್ಧತೆ

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿಂದು ಗಣೇಶ ಪ್ರತಿಷ್ಠಾಪನೆ- ಮೆರವಣಿಗೆ, ವಿಶೇಷ ಪೂಜೆಗೆ ಸಿದ್ಧತೆ

    – ಅಹಿತಕರ ಘಟನೆ ನಡೆಯದಂತೆ ಖಾಕಿ ಭದ್ರತೆ

    ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ (Idgah Maidan) ಇಂದು ಗಣೇಶ ಪ್ರತಿಷ್ಠಾಪನೆಗೆ ಸಿದ್ಧತೆ ನಡೆದಿದೆ. ಬೆಳಗ್ಗೆ 9.30ಕ್ಕೆ ನಗರದ ಮೂರು ಸಾವಿರ ಮಠದಿಂದ ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಪ್ರತಿಷ್ಠಾಪನಾ ಗಣೇಶ ಮೂರ್ತಿ ಈದ್ಗಾ ಮೈದಾನಕ್ಕೆ ಕರೆಯಲಾಗುತ್ತದೆ. ಬಳಿಕ ಹಿಂದೂ ಮುಖಂಡರ ಸಮ್ಮುಖದಲ್ಲಿ ಗಣೇಶ ಮೂರ್ತಿ (Ganesha Idol) ಪ್ರತಿಷ್ಠಾಪನೆಯಾಗಲಿದೆ. ನಂತರ ಹೋಮ, ಹವನ ಜೊತೆಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸಲಿದೆ. ತದನಂತರ ಸಾರ್ವಜನಿಕರ ದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

    ಶಾಂತಿಯುತವಾಗಿ ಹಬ್ಬ ಆಚರಣೆಗೆ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಮೈದಾನದಲ್ಲಿ ನಮಾಝ್ ಮಾಡುವ ಸ್ಥಳ ಹಾಗೂ ಮೂರ್ತಿ ಪ್ರತಿಷ್ಠಾಪನೆ ಸ್ಥಳದ ಮಧ್ಯೆ ಟೀನ್ ಶೀಟ್ ಹಾಕಿ ಅದರ ಮೇಲೆ ಪರದೆ ಕಟ್ಟಲಾಗಿದೆ. ಮೈದಾನದಲ್ಲಿ ಸುತ್ತಲೂ ಸಿಸಿ ಕ್ಯಾಮೆರಾಗಳ ಕಣ್ಗಾವಲು ವ್ಯವಸ್ಥೆಯಿದೆ. ಮೈದಾನದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಆರಂಭಿಸಲಾಗಿದೆ. ಖಾಕಿಪಡೆ ಫುಲ್ ಹೈಅಲರ್ಟ್ ಆಗಿದ್ದು, ಶಾಂತಿ ಭಂಗ ಆಗದಂತೆ ಎಚ್ಚರಿಕೆ ವಹಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

    ಹಿಂದೂ ಸಂಘಟನೆಗಳು ಪ್ರತಿಷ್ಠಾಪನೆಗೂ ಮುನ್ನ ಮೈದಾನದಲ್ಲಿ ಪೂಜೆ ಜೊತೆಗೆ ಮೈದಾನ ಶುದ್ಧಿ ಪೂಜೆ ಮಾಡಿ ಮಂಟಪ ಸಿದ್ಧಪಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿವೆ. ಮೂರು ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ.. ರಾಜ್ಯದ ಹೆಸರಾಂತ ಸ್ವಾಮಿಗಳು, ಹಿಂದೂಪರ ಮುಖಂಡರು ಭೇಟಿ ನೀಡಲಿದ್ದಾರೆ.. ಒಟ್ನಲ್ಲಿ ಇಂದು ನಿರ್ವಿಘ್ನವಾಗಿ ವಿನಾಯಕ ಪ್ರತಿಷ್ಠಾಪನೆಯಾಗಲಿ, ಹುಬ್ಬಳ್ಳಿ ಶಾಂತಿ ತವರು ಎಂಬ ಸಂದೇಶ ಎಲ್ಲ ಕಡೆ ಹಬ್ಬಲಿ ಎಂಬುವುದು ಇಲ್ಲಿನ ಜನರ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇಶದ ಶ್ರೀಮಂತ ಗಣೇಶನಿಗೆ ಬರೋಬ್ಬರಿ 360 ಕೋಟಿ ಇನ್ಶುರೆನ್ಸ್‌; 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ

    ದೇಶದ ಶ್ರೀಮಂತ ಗಣೇಶನಿಗೆ ಬರೋಬ್ಬರಿ 360 ಕೋಟಿ ಇನ್ಶುರೆನ್ಸ್‌; 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ

    ಮುಂಬೈ: ದೇಶಾದ್ಯಂತ ಗಣೇಶ ಹಬ್ಬದ (Ganesh Chaturthi) ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನ (Ganesh Idol) ಕೂರಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.

    ಈ ನಡುವೆ ಮುಂಬೈನ ಜಿಎಸ್‌ಬಿ ಸೇವಾ ಮಂಡಲ (GSB Seva Mandal) ದೇಶದಲ್ಲೇ ಅಂತ್ಯಂತ ಶ್ರೀಮಂತ ಗಣೇಶ ಮೂರ್ತಿಯನ್ನ ಕೂರಿಸಿ, ಗಣೇಶೋತ್ಸವವನ್ನು ಆಚರಿಸುತ್ತಿದೆ. ವಿಶೇಷವೆಂದರೆ ಈ ಗಣೇಶನ ಮೂರ್ತಿಯ ಅಲಂಕಾರಕ್ಕೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿಯನ್ನು ಬಳಕೆ ಮಾಡಲಾಗಿದೆ. ಇದನ್ನೂ ಓದಿ: ಫ್ರೀ ಕರೆಂಟ್, ಮಹಿಳೆಯರಿಗೆ ತಿಂಗಳಿಗೆ 2,500 ರೂ., ಉಚಿತ ಬಸ್ ಪ್ರಯಾಣ: ತೆಲಂಗಾಣದಲ್ಲೂ ಕಾಂಗ್ರೆಸ್ ಗ್ಯಾರಂಟಿ ಘೋಷಣೆ

    ಹೌದು.. ಮುಂಬೈನ ಅತ್ಯಂತ ದೊಡ್ಡ ಗಣೇಶ ಎನ್ನಲಾದ ಕಿಂಗ್ಸ್​ ಸರ್ಕಲ್​​ನ ಈ ಗಣಪತಿಗೆ ಹೀಗೆ ಚಿನ್ನ-ಬೆಳ್ಳಿಯಲ್ಲಿ ಭರ್ಜರಿ ಅಲಂಕಾರ ಮಾಡಲಾಗಿದೆ. ಜಿಎಸ್​​ಬಿ ಸೇವಾ ಮಂಡಲದವರು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸುವ ಈ ಗಣೇಶ ಉತ್ಸವ ಪ್ರಸಿದ್ಧಿ ಪಡೆದಿದ್ದು, ಪ್ರತಿ ವರ್ಷವೂ ದೇಶದ ಗಮನ ಸೆಳೆಯುತ್ತದೆ. ಈ ಬಾರಿ ಸೆ.19ರಿಂದ 23ರ ವರೆಗೂ ಇಲ್ಲಿ ಗಣೇಶ ಚತುರ್ಥಿ ಉತ್ಸವ ಆಚರಣೆ ಆಗಲಿದೆ.

    ಈ ಗಣೇಶನಿಗೆ ವೈಭವೋಪೇತ ಅಲಂಕಾರ ಮಾಡಲಾಗುತ್ತಿದ್ದು, ಈ ಸಲ ಅಲಂಕಾರಕ್ಕೆಂದೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಸಲಾಗಿದೆ. ದುಬಾರಿ ಅಲಂಕಾರ ಮತ್ತಿತರ ಕಾರಣಗಳಿಂದಾಗಿ ಈ ಗಣೇಶನಿಗೆ ಪ್ರತಿವರ್ಷ ವಿಮೆ ಕೂಡ ಮಾಡಿಸಲಾಗುತ್ತಿದ್ದು, ಈ ಬಾರಿ 360 ಕೋಟಿ ರೂ.ಗೆ ವಿಮೆ ಮಾಡಿಸಲಾಗಿದೆ. ಇದನ್ನೂ ಓದಿ: ಗದರ್‌-2 ಸಿನಿಮಾ ನೋಡಿ ‘ಹಿಂದೂಸ್ತಾನ್‌ ಜಿಂದಾಬಾದ್‌’ ಎಂದು ಕೂಗಿದ ವ್ಯಕ್ತಿಯನ್ನ ಹೊಡೆದು ಕೊಂದ ಸ್ನೇಹಿತರು

    ಕಳೆದ ವರ್ಷ ಜಿಎಸ್‌ಬಿ ಮಂಡಲವು 316.40 ಕೋಟಿ ರೂ. ವಿಮೆ ಮಾಡಿಸಿತ್ತು. ಆದರೆ ಈ ಬಾರಿ ವಿಮೆ ಮೊತ್ತವು 44 ಕೋಟಿ ರೂ. ಹೆಚ್ಚಾಗಿದೆ. ಅದ್ರೆ ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತಗೊಳಿಸಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್ಲಿಕ್ ಟಿವಿ ಕಚೇರಿಯಲ್ಲಿ ಗಣೇಶ ಹಬ್ಬ ಆಚರಣೆ

    ಪಬ್ಲಿಕ್ ಟಿವಿ ಕಚೇರಿಯಲ್ಲಿ ಗಣೇಶ ಹಬ್ಬ ಆಚರಣೆ

    ಬೆಂಗಳೂರು: ನಾಡಿನ ಕೆಲವೆಡೆ ಇಂದಿನಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಅಂತೆಯೇ ಪ್ರತಿವರ್ಷದಂತೆ ಈ ಬಾರಿಯೂ ಪಬ್ಲಿಕ್ ಟಿವಿ (Public TV Office) ಕಚೇರಿಯಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ.

    ಇಂದಿನಿಂದ ಮೂರು ದಿನಗಳ ಕಾಲ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆ ಪೂಜಾ- ಕೈಂಕರ್ಯಗಳೊಂದಿಗೆ ಗೌರಿ- ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಇದನ್ನೂ ಓದಿ: ಗಣೇಶನ ಹಬ್ಬ ಸೆ.18ಕ್ಕಾ ಅಥವಾ 19ಕ್ಕಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    ಈ ವೇಳೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ (HR Ranganath), ಸಿಇಓ ಅರುಣ್ ಕುಮಾರ್, ಮುಖ್ಯ ಸಂಪಾದಕರಾದ ದಿವಾಕರ್‌.ಸಿ ಹಾಗೂ ಕಚೇರಿಯ ಸಿಬ್ಬಂದಿ ಹಾಜರಿದ್ದರು.

    ಪೂಜೆಯ ಬಳಿಕ ಕಚೇರಿಯ ಸಿಬ್ಬಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.  ಇದನ್ನೂ ಓದಿ: ಗಂಡು ಮಗುವಿಗೆ ತಂದೆಯಾದ ನಟ ಧ್ರುವ ಸರ್ಜಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶನಿಗಾಗಿ ಸಿಹಿ ಕಡುಬು ಮಾಡುವ ವಿಧಾನ

    ಗಣೇಶನಿಗಾಗಿ ಸಿಹಿ ಕಡುಬು ಮಾಡುವ ವಿಧಾನ

    ಇಡೀ ಭಾರತ ದೇಶವೇ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಅಂದರೆ ಗಣೇಶ ಚತುರ್ಥಿ. ಹಬ್ಬಗಳು ಬಂದರೆ ಸಾಕು ಸಿಹಿ ತಿನಿಸುಗಳನ್ನು ಮಾಡಬೇಕು. ಅದರಲ್ಲೂ ಗಣೇಶ ಹಬ್ಬವೆಂದರೆ ಮುಂಚಿತವಾಗಿ ಗಣಪನಿಗೆ ಇಷ್ಟವಾಗುವ ತಿಂಡಿ-ತಿನಿಸುಗಳನ್ನು ಮಾಡಿ ಸಿದ್ಧ ಮಾಡಿಕೊಳ್ಳಬೇಕು. ಗಣೇಶನಿಗೆ ವಿಶೇಷವಾಗಿ ಸಿಹಿ ಕಡುಬು ಎಂದರೆ ಇಷ್ಟವಾಗುತ್ತದೆ. ಆದ್ದರಿಂದ ಗಣಪನಿಗೆ ಸಿಹಿ ಕಡುಬು ಮಾಡುವ ಸುಲಭ ವಿಧಾನ ಇಲ್ಲಿದೆ.

    ಬೇಕಾಗುವ ಸಾಮಾಗ್ರಿಗಳು:
    1. ಅಕ್ಕಿ ಹಿಟ್ಟು – ಅರ್ಧ ಕೆಜಿ
    2. ಬೆಲ್ಲ – 1 ಅಚ್ಚು
    3. ಹುರಿಗಡಲೆ – 1/4 ಕೆಜಿ
    4. ಕೊಬ್ಬರಿ ತುರಿ – 1 ಬಟ್ಟಲು
    5. ಏಲಕ್ಕಿ – 2-3
    6. ತುಪ್ಪ – 2 ಚಮಚ
    7. ಬಾಳೆ ಎಲೆ ಇದನ್ನೂ ಓದಿ: ಕೃಷ್ಣನಿಗಾಗಿ ಸಿಹಿ ಕರ್ಜಿಕಾಯಿ ಮಾಡುವ ವಿಧಾನ

    ಮಾಡುವ ವಿಧಾನ
    * ಬೆಲ್ಲವನ್ನು ತುರಿದುಕೊಳ್ಳಿ. ಹಾಗೆಯೇ ಹುರಿಗಡಲೆಯನ್ನು ಸ್ವಲ್ಪ ಹುರಿದು ಪುಡಿ ಮಾಡಿಕೊಳ್ಳಿ.
    * ಈಗ ಒಂದು ಮಿಕ್ಸಿಂಗ್ ಬೌಲ್‍ಗೆ ಪುಡಿ ಮಾಡಿದ ಹುರಿಗಡಲೆ, ತುರಿದ ಬೆಲ್ಲ, ಕೊಬ್ಬರಿ ತುರಿ, ಏಲಕ್ಕಿ ಪುಡಿ ಸೇರಿಸಿ ಊರ್ಣ ತಯಾರಿಸಿಕೊಳ್ಳಿ. (ಸಿಹಿ ಜಾಸ್ತಿ ಬೇಕಾದ್ರೆ ಬೆಲ್ಲ ಸೇರಿಸಿ, ಬೇಕಿದ್ದರೆ ಗೋಡಂಬಿ, ದ್ರಾಕ್ಷಿ. ಬಾದಾಮಿಯನ್ನು ಸಣ್ಣಗೆ ಕಟ್ ಮಾಡಿ ಸೇರಿಸಬಹುದು. ಗಸಗಸೆ ಕೂಡ ಸೇರಿಸಬಹುದು)
    * ಒಂದು ಅಗಲವಾದ ತಳಹತ್ತದ ಅಥವಾ ನಾನ್ ಸ್ಟಿಕ್ ಪಾತ್ರೆಗೆ ಒಂದು ಲೋಟ ನೀರು ಹಾಕಿ ಕುದಿಸಿ.
    * ನೀರು ಕುದಿಯುತ್ತಿರುವಾಗ ನಿಧಾನವಾಗಿ ಅಕ್ಕಿ ಹಿಟ್ಟು ಸೇರಿಸಿ ಮಿಕ್ಸ್ ಮಾಡಿ ಹಿಟ್ಟು ಗಂಟು ಕಟ್ಟದಂತೆ ನೋಡಿಕೊಳ್ಳಿ.
    * ಕೈ ಬಿಡದೇ ಹಿಟ್ಟಿನ ಕೋಲನ್ನು ಬಳಸಿ ತಿರುಗಿಸುತ್ತೀರಿ. ಈಗ 2 ಚಮಚ ತುಪ್ಪ ಸೇರಿಸಿ.
    * ಹಿಟ್ಟು ತೀರ ತೆಳ್ಳಗೂ ಅಲ್ಲದೆ, ತೀರ ಗಟ್ಟಿಯಾಗಿಯೂ ಇರಬಾರದು.

    * ಈಗ ಲಾಡು ಸೈಜ್‍ನ ಅಕ್ಕಿ ಹಿಟ್ಟಿನ ಮುದ್ದೆ ತೆಗೆದುಕೊಂಡು ಕೈಯಲ್ಲೇ ಅಗಲ ಮಾಡಿ ಒಳಗೆ ಊರ್ಣ ಇಟ್ಟು ಕಡುಬು ಶೇಪ್‍ನಲ್ಲಿ ಮಡಿಚಿ.
    * ಹಿಟ್ಟು ಬಿಸಿ ಇರುವಾಗಲೇ ಮಾಡಬೇಕು, ಆಮೇಲೆ ಮಾಡಿದರೆ ಹಿಟ್ಟು ಒಡೆಯುತ್ತದೆ. ಬಿಸಿ ಆರಿದ್ರೆ ಬೇಕಾದಲ್ಲಿ ಮತ್ತೆ ಒಲೆಯ ಮೇಲಿಟ್ಟು ಬಿಸಿ ಮಾಡಿಕೊಳ್ಳಬಹುದು.
    * ಹೀಗೆ ಮಾಡಿಟ್ಟುಕೊಂಡ ಕಡುಬುಗಳನ್ನು ಬಾಳೆಎಲೆಯಲ್ಲಿ ಅಥವಾ ಅರಿಶಿನ ಎಲೆಯ ಒಳಗಿಟ್ಟು ಇಡ್ಲಿ ಕುಕ್ಕರ್ ನಲ್ಲಿಟ್ಟು 10-12 ನಿಮಿಷ ಬೇಯಿಸಿ.
    * ಬಿಸಿಬಿಸಿ ಇರುವಾಗಲೇ ಸರ್ವ್ ಮಾಡಿ. ಕಾಯಿ ಹಾಲು, ತುಪ್ಪ ಸೇರಿಸಿ ತಿಂದರೆ ಟೇಸ್ಟೇ ಬೇರೆಯಾಗಿರುತ್ತದೆ. ಇದನ್ನೂ ಓದಿ: ಒಂದು ಬೈಟ್ ಸಾಕಾಗಲ್ಲ – ಮತ್ತೆ ಮತ್ತೆ ಬೇಕೆನಿಸೋ ಕ್ಯಾರಮೆಲ್ ಮಿಠಾಯಿ ರೆಸಿಪಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೈಕೋರ್ಟ್ ವರ ಕೊಟ್ರೂ ಆಯುಕ್ತರು ಬಿಡ್ತಿಲ್ಲ- ಹುಬ್ಬಳ್ಳಿ ಈದ್ಗಾದಲ್ಲಿ ಗಣೇಶ ಹಬ್ಬಕ್ಕೆ ಸಿಗದ ಅನುಮತಿ

    ಹೈಕೋರ್ಟ್ ವರ ಕೊಟ್ರೂ ಆಯುಕ್ತರು ಬಿಡ್ತಿಲ್ಲ- ಹುಬ್ಬಳ್ಳಿ ಈದ್ಗಾದಲ್ಲಿ ಗಣೇಶ ಹಬ್ಬಕ್ಕೆ ಸಿಗದ ಅನುಮತಿ

    – ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

    ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ (Hubballi Idgah Maidan )ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡದರೂ ಪಾಲಿಕೆ ಆಯುಕ್ತರು ಬಿಡುತ್ತಿಲ್ಲ.

    ಈದ್ಗಾದಲ್ಲಿ ಗಣೇಶೋತ್ಸವ ಸಂಬಂಧ ಪಾಲಿಕೆ ಹೊರಡಿಸಿದ್ದ ಠರಾವು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾ ಮಾಡಿದೆ. ಈ ಮೂಲಕ ಪಾಲಿಕೆ ಹೊರಡಿಸಿದ್ದ ಠರಾವು ಪ್ರಕಾರ ಮೂರು ದಿನ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಇದ್ದ ಅಡೆತಡೆ ನಿವಾರಣೆಯಾಯ್ತು ಎಂದು ಎಲ್ಲರೂ ಭಾವಿಸಿದ್ರು. ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಂಭ್ರಮಾಚರಣೆ ಕೂಡ ಮಾಡಿದ್ರು.

    ದಲಿತ ಸಂಘಟನೆಗಳು ಮಾತ್ರ ಈದ್ಗಾದಲ್ಲಿ ಗಣೇಶನನ್ನು ಕೂರಿಸಲು ಅವಕಾಶ ನೀಡಬಾರದು ಎಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದವು. ಆದರೆ ಇದಕ್ಕೆ ಮಣೆ ಹಾಕಲ್ಲ ಅಂತಾ ಮೇಯರ್ ಹೇಳಿದ್ರು. ಇಷ್ಟೆಲ್ಲಾ ಆದ್ಮೇಲೂ ಪಾಲಿಕೆ ಆಯುಕ್ತರ ತಕರಾರು ಮುಂದುವರಿದಿದೆ. ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಆಯುಕ್ತರು ಇನ್ನೂ ಮೀನಾಮೇಷ ಎಣಿಸ್ತಿದ್ದಾರೆ. ನನಗೆ ಇನ್ನೂ ಕೋರ್ಟ್ ಪ್ರತಿ ಸಿಕ್ಕಿಲ್ಲ ಎಂಬ ಸಬೂಬು ಹೇಳ್ತಿದ್ದಾರೆ. ಇದರಿಂದ ಕೇಸರಿ ಪಡೆ ಮತ್ತೆ ಕೆರಳಿದೆ.

    ಹುಬ್ಬಳ್ಳಿ-ಗದಗ ಮುಖ್ಯರಸ್ತೆ ತಡೆದು, ಕಾಂಗ್ರೆಸ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಿಂದ ಶಾಸಕ ಅರವಿಂದ್ ಬೆಲ್ಲದ್ ನೇತೃತ್ವದಲ್ಲಿ ಬಿಜೆಪಿ ಆಹೋರಾತ್ರಿ ಧರಣಿ ನಡೆಸಿತ್ತು. ಇದಕ್ಕೆ ಶ್ರೀರಾಮಸೇನೆ ಸೇರಿ ಹಲವು ಸಂಘಟನೆಗಳು ಸಾಥ್ ನೀಡಿದ್ದವು. ಗಣೇಶೋತ್ಸವ ಬೇಡ ಅನ್ನೋರು ಪಾಕಿಸ್ತಾನಕ್ಕೆ ಹೋಗಲಿ ಎಂದು ಪ್ರಮೋದ್ ಮುತಾಲಿಕ್ ಗುಡುಗಿದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶೋತ್ಸವದ ಲಾಟರಿ ಖರೀದಿಗೆ ಮುಗಿಬಿದ್ದ ಜನ- ಕಿ.ಮೀ ಉದ್ದದ ಸಾಲು

    ಗಣೇಶೋತ್ಸವದ ಲಾಟರಿ ಖರೀದಿಗೆ ಮುಗಿಬಿದ್ದ ಜನ- ಕಿ.ಮೀ ಉದ್ದದ ಸಾಲು

    – ಒಂದೇ ದಿನ 1 ಲಕ್ಷ ಲಾಟರಿ ಟಿಕೆಟ್ ಸೋಲ್ಡ್ ಔಟ್

    ಕಾರವಾರ/ಪಣಜಿ: ಗೌರಿ -ಗಣೇಶ ಹಬ್ಬ (Ganesha Festival) ಇನ್ನೇನು ಬಂದೇ ಬಿಟ್ಟಿತು. ಬೀದಿ ಬೀದಿಗಳಲ್ಲಿ ವಿವಿಧ ರಂಗಿನ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆಯಾಗುತ್ತದೆ. ಹಲವು ಸಂಘ-ಸಂಸ್ಥೆಗಳು ಜನರನ್ನು ಸೆಳೆಯಲು ಹಬ್ಬದ ವಿಶೇಷವಾಗಿ ಲಾಟರಿ ಸಹ ಇಟ್ಟು ಹಬ್ಬ ಮುಗಿದ ನಂತರ ಡ್ರಾ ಮಾಡಿ ಬಹುಮಾನ ಘೋಷಿಸುತ್ತದೆ.

    ಹೌದು. ಗೋವಾ ರಾಜ್ಯದ ಪಣಜಿಯ ಕೆಪೆಮ್ (Quepem))ನಲ್ಲಿ ಪ್ರತಿ ವರ್ಷ ಕೆಪೆಮ್ ಸಾರ್ವಜನಿಕ ಗಣೇಶೋತ್ಸವ ಉತ್ಸವ ಸಮಿತಿ ಗಣೇಶೋತ್ಸವ ಆಚರಿಸುತ್ತದೆ. ಈ ವೇಳೆ ಬರುವ ಭಕ್ತರಿಗೆ ಲಾಟರಿಯನ್ನು ಇಟ್ಟು ದೊಡ್ಡ ಮೊತ್ತದ ಬಹುಮಾನ ನೀಡುತ್ತದೆ. ಈ ಬಾರಿ 36 ನೇ ವಾರ್ಷಿಕ ಗಣೇಶೋತ್ಸವ ಆಚರಣೆಗೆ ಸಮಿತಿ ದೊಡ್ಡ ಮಟ್ಟದ ಲಾಟರಿ ಬಹುಮಾನವನ್ನು ಇಟ್ಟಿದೆ. 10 ಹೈ ಎಂಡ್ ಕಾರುಗಳು, 10 ಸ್ಕೂಟರ್ ಗಳು, ಜೊತೆಗೆ ಈ 20 ಬಂಪರ್ ಬಹುಮಾನ ಗೆಲ್ಲುವವರಿಗೆ 70 ಲಕ್ಷ ರೂಪಾಯಿಗೂ ಅಧಿಕ ನಗದು ಬಹುಮಾನ ಈ ಕೆಪೆಮ್ ಸಾರ್ವಜನಿಕ ಗಣೇಶೋತ್ಸವ ಮಂಡಳಿಯ ಲಾಟರಿಯಲ್ಲಿ ಘೋಷಣೆ ಮಾಡಿದೆ. ಇದನ್ನೂ ಓದಿ: ಜಾತಿ ಕಟ್ಟು ಪಾಡುಗಳನ್ನ ಮೀರಲು ಮಾನವೀಯತೆ, ವಿಚಾರವಂತಿಕೆಯ ದಾರಿ – ಮರ್ಯಾದಾ ಹತ್ಯೆಗೆ ಸಿಎಂ ಆತಂಕ

    ಭಾನುವಾರ ಸಂಜೆಯಷ್ಟೇ ಲಾಟರಿ ಉದ್ಘಾಟನೆ ಮಾಡಲಾಗಿದ್ದು, ಸೋಮವಾರ ಎನ್ನುವಷ್ಟರಲ್ಲಿ ಸಾವಿರಾರು ಜನ ಮುಗಿಬಿದ್ದು ಖರೀದಿಗೆ ಮುಂದಾಗಿದ್ದಾರೆ. ಇನ್ನು ಕಾರವಾರದಿಂದ ಸಹ ಜನ ಖರೀದಿಗೆ ತೆರಳಿದ್ದು, ಖರೀದಿಸಲು ಬಂದ ಜನ ಇಡೀ ದಿನ ಕಿಲೋಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದು ಒಂದೇ ದಿನದಲ್ಲಿ 1 ಲಕ್ಷ ಲಾಟರಿ ಖರೀದಿಯಾಗಿದೆ. ಒಂದು ಲಾಟರಿಗೆ 300 ರೂಪಾಯಿ ದರವಿದ್ದು ಇದೀಗ ನಿಗದಿ ಲಾಟರಿ ಖರ್ಚಾಗಿದ್ದರೂ ಜನ ಟಿಕೆಟ್ ಕೊಳ್ಳಲು ಇಂದು ಸಹ ಸರತಿ ಸಾಲಿನಲ್ಲಿ ಸಮಿತಿ ಮುಂದೆ ನಿಂತಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಮತ್ತು ಸಮಿತಿ ಸದಸ್ಯರು ಹರಸಾಹಸ ಪಡುವಂತಾಯಿತು. ಇನ್ನು ಒಂದು ಲಕ್ಷ ಲಾಟರಿ ಒಂದೇ ದಿನದಲ್ಲಿ ಖರ್ಚಾದ್ದರಿಂದ ಲಾಟರಿ ಮಾರಾಟವನ್ನು ನಿಲ್ಲಿಸಲಾಗಿದ್ದು, ರಾಜ್ಯ ಹೊರ ರಾಜ್ಯದಿಂದಲೂ ಆಗಿಮಿಸಿದ್ದ ಜನ ಲಾಟರಿ ಟಿಕೆಟ್ ಸಿಗದೆ ಹಿಂದಿರುಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ

    ಗಣೇಶ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ

    ಹುಬ್ಬಳ್ಳಿ: ಹಿಂದೂ ಕಾರ್ಯಕರ್ತರ (Hindu Activists) ರಕ್ಷಣೆ ವಿಚಾರದಲ್ಲಿ ವಿಫಲವಾಗಿರುವ ರಾಜ್ಯ ಬಿಜೆಪಿ ಸರ್ಕಾರದ (BJP State Government) ವಿರುದ್ಧ ಹಿಂದೂ ಯುವಕರ (Hindhu Youth) ಆಕ್ರೋಶ ಮುಂದುವರಿದಿದೆ. ಇದಕ್ಕೆ ಗಣೇಶ ವಿಸರ್ಜನೆ ಮೆರಣಿಗೆಯಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ.

    ಗಣೇಶಮೂರ್ತಿಗಳ ವಿಸರ್ಜನೆ ಮೆರವಣಿಗೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಯುವಕರು ಘೋಷಣೆ ಕೂಗಿರುವ ವಿಡಿಯೋ (Video) ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆಗೆ ಕಸಾಪ ಮುಂದಾಗಿಲ್ಲ: ಮಹೇಶ್‌ ಜೋಶಿ ಸ್ಪಷ್ಟನೆ

    ಹುಬ್ಬಳ್ಳಿಯಲ್ಲಿ ನಡೆದ 11 ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಯುವಕರು ಘೋಷಣೆ ಕೂಗಿರುವ ವೀಡಿಯೋ ವೈರಲ್ ಆಗಿದ್ದು, `ಬಿಜೆಪಿ 40 ಪರ್ಸೆಂಟ್ ಕಮಿಷನ್ ಸರ್ಕಾರ, ಗಲ್ಲಿಗಲ್ಲಿ ಮೇ ಚೋರ್ ಹೈ, ಬಿಜೆಪಿ ಚೋರ್ ಹೈ’ ಎಂಬ ಘೋಷಣೆಯನ್ನು ನೂರಾರು ಯುವಕರು ಮೆರವಣಿಗೆಯಲ್ಲಿ ಕೂಗಿದ್ದಾರೆ. ಇದನ್ನೂ ಓದಿ: ಗಣೇಶನ ಪ್ರಸಾದಕ್ಕೆ ಫುಲ್ ಡಿಮ್ಯಾಂಡ್ – 12 ಕೆಜಿ ಲಡ್ಡು 60 ಲಕ್ಷಕ್ಕೆ ಹರಾಜು

    ಈಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವಾರು ಜನ ವಿಡಿಯೋ ಎಲ್ಲೆಡೆ ಶೆರ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]