ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಬೆಂಗಳೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ ಈದ್ಗಾ ಬಂದೋಬಸ್ತ್ಗೆ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 1,600 ಪೊಲೀಸರು ಹಗಲು, ಗ್ರೌಂಡ್ಬಳಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಗಣೇಶೋತ್ಸವಕ್ಕೆ ಅವಕಾಶ ಕೊಡಲಿ ಬಿಡಲಿ, ಶಾಂತಿ ಭಂಗಕ್ಕೆ ಅವಕಾಶವಿಲ್ಲ ಅನ್ನೋ ಸಂದೇಶ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ- ತಂದೆಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 7ರ ಬಾಲಕ
ಹೇಗಿದೆ ಬಂದೋಬಸ್ತ್?
ಮೈದಾನದ ಸುತ್ತ 3 ಡಿಸಿಪಿ, 21 ಎಸಿಪಿ, 47 ಪಿಐ, 130 ಪಿಎಸ್ಐ, 126 ಎಎಸ್ಐ, 900 ಹೆಚ್ಇ ಪಿಸಿ, 120 ಆರ್ಎಎಫ್, 100 ಸ್ವಾಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮಂಗಳವಾರ ಪಥಸಂಚಲನ ನಡೆಸಿ ಸ್ಥಳೀಯರಲ್ಲಿ ಧೈರ್ಯ ತುಂಬಿದ್ದಾರೆ.
Live Tv
[brid partner=56869869 player=32851 video=960834 autoplay=true]
ಧಾರವಾಡ: ಬ್ರಿಟಿಷರು ಇದ್ದಾಗಲೇ ಗಣೇಶೋತ್ಸವಕ್ಕೆ ಅಡ್ಡಿ ಇರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಗಣೇಶೋತ್ಸವ ಆಚರಣೆಗೆ ಪರದಾಡುವಂತಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬೇಸರ ವ್ಯಕ್ತಪಡಿಸಿದ್ದಾರೆ
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸುಪ್ರೀಂ ಕೋರ್ಟ್ ಆದೇಶವನ್ನು ನಾವೆಲ್ಲರೂ ಪಾಲನೆ ಮಾಡಲೇಬೇಕು. ಆದರೆ ಸಮಸ್ಯೆ ಹಾಗೆಯೇ ಉಳಿಯಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಥಾಸ್ಥಿತಿ ಕಾಪಾಡಿ – ಈದ್ಗಾ ಮೈದಾನದಲ್ಲಿ ಗಣೋಶೋತ್ಸವ ಆಚರಣೆ ಇಲ್ಲ
ಸುಪ್ರೀಂ ಕೋರ್ಟ್ನಲ್ಲಿ ದಾರಿ ತಪ್ಪಿಸುವ ವಾದಗಳು ನಡೆದಿವೆ. ವಕ್ಫ್ ಬೋರ್ಡ್ ಪಾರ್ಟಿಯಾಗೇ ಇರಲಿಲ್ಲ. ಅದರೆ ಏಕಾಏಕಿ ವಕ್ಫ್ ಬೋರ್ಡ್ ಪ್ರವೇಶವಾಗಿದೆ. ವಕ್ಫ್ ಬೋರ್ಡ್ ಅಧ್ಯಕ್ಷ 3 ದಿನಗಳಿಂದ ದೆಹಲಿಗೆ ಹೋಗಿ ಕೂತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಗಣೇಶನ ವಿರೋಧಿಗಳ ರೀತಿ ವರ್ತಿಸಬಾರದು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಇರಾಕ್ನಲ್ಲಿ ಭುಗಿಲೆದ್ದ ಪ್ರತಿಭಟನೆ – ಗುಂಡಿನ ದಾಳಿಗೆ 23 ಮಂದಿ ಸಾವು, 300 ಜನರಿಗೆ ಗಾಯ
ಕಾಂಗ್ರೆಸ್ ಹಾಗೂ ವಕ್ಫ್ ಬೋರ್ಡಿನಿಂದ ಗಣೇಶೋತ್ಸವಕ್ಕೆ ಅಡ್ಡಿಯಾಗುತ್ತಿದೆ. ಸುಪ್ರೀಂ ಕೋರ್ಟ್ ಹೈಕೋರ್ಟ್ಗೆ ಹೋಗಿ ಅಂತ ಹೇಳಿರುವುದರಿಂದ ಸರ್ಕಾರವೇ ಹೈಕೋರ್ಟ್ ಮೂಲಕ ಗಣೇಶೋತ್ಸವ ಆಚರಣೆಗೆ ಅವಕಾಶ ಕೊಡಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಒಂದು ಸಾರಿ ಯಮಲೋಕದಲ್ಲಿ ಉತ್ಸವ ನಡೆದಿತ್ತು. ಉತ್ಸವದಲ್ಲಿ ಅಪ್ಸರೆಯರು ಮತ್ತು ನರ್ತಕಿಯರು ನೃತ್ಯ ಮಾಡುತ್ತಿದ್ದರು. ತಿಲೋತ್ತೆಮೆ ನೃತ್ಯ ಕಂಡ ಯಮ ಮೋಹಿತನಾದನು. ಯಮ ಅನುರಕ್ತನಾದ ಪರಿಣಾಮ ತಿಲೋತ್ತಮೆಯ ಗರ್ಭದಲ್ಲಿ ಭಯಂಕರ, ಕ್ರೂರ ಮತ್ತು ವಿಕಾರವಾದ ಅನಲಾಸುರ ಎಂಬ ರಾಕ್ಷಸ ಹುಟ್ಟಿಕೊಂಡನು. ಅನಲಾಸುರ ಹೋದ ಸ್ಥಳದಲ್ಲಿ ಅಗ್ನಿ ನಿರ್ಮಾಣವಾಗಿ ಎಲ್ಲವೂ ಭಸ್ಮವಾಗುತಿತ್ತು. ಇಂತಹ ಭಯಂಕರ ರಾಕ್ಷಸ ದೇವತೆಗಳನ್ನು ಬೆನ್ನಟ್ಟಲು ಆರಂಭಿಸಿದನು.
ಅನಲಾಸುರನಿಂದ ಭಯಭೀತರಾದ ದೇವತೆಗಳು ಗಜಾನನ್ನು ಪ್ರಾರ್ಥಿಸಲು ಆರಂಭಿಸಿದರು. ಆಗ ಗಜಾನನ ಬಾಲ ರೂಪದಲ್ಲಿ ದೇವತೆಗಳ ಮುಂದೆ ಪ್ರತ್ಯಕ್ಷನಾಗಿ ಅನಲಾಸುರನನ್ನು ವಧೆ ಮಾಡಲಾಗುವುದು ಎಂದು ಭರವಸೆ ನೀಡಿದನು. ಅಷ್ಟರಲ್ಲಿ ದಶ ದಿಕ್ಕುಗಳನ್ನು ಭಸ್ಮ ಮಾಡುತ್ತ ಅನಲಾಸುರ ದೇವತೆಗಳ ಬಳಿ ಬಂದನು. ಎಲ್ಲ ದೇವತೆಗಳು ಭಯಗೊಂಡು ಅತ್ತಿತ್ತ ಓಡಾಡ ತೊಡಗಿದರು. ಇದನ್ನೂ ಓದಿ: ಗಣೇಶ ಮೋದಕ ಪ್ರಿಯ ಯಾಕೆ?
ಬಾಲಗಣೇಶ ಮಾತ್ರ ನಿಂತಲ್ಲಿಯೇ ನಿಂತಿದ್ದನು. ಗಜಾನನ ಬಳಿ ಬಂದ ಅನಲಾಸುರ ಬಾಲಗಣೇಶನನ್ನು ನುಂಗಲು ಮುಂದೆ ಬಂದನು. ಅಷ್ಟರಲ್ಲಿಯೇ ಬಾಲ ಗಣೇಶ ದೈತ್ಯ ರೂಪ ತಾಳಿ ಅನಲಾಸುರನ್ನು ನುಂಗಿ ಬಿಟ್ಟನು. ಸಾಕ್ಷಾತ್ ಅಗ್ನಿ ಸ್ವರೂಪನಾದ ಅನಲಾಸುರನನ್ನು ನುಂಗಿದ್ದರಿಂದ ಗಜಾನನ ಶರೀರದಲ್ಲಿ ದಾಹ ಉದ್ಭವಿಸಿತು. ಇದನ್ನೂ ಓದಿ: ಗೌರಿ ಹಬ್ಬ ಆಚರಣೆ ಯಾಕೆ ಬಂತು?
ಗಣೇಶನ ಬಳಿ ಬಂದ ಸರ್ವ ದೇವತೆಗಳು ಆತನ ದಾಹವನ್ನು ಉಪಶಮನಿಸಲು ವಿವಿಧ ಉಪಾಯಗಳನ್ನು ಮಾಡಿದರು. ಇಂದ್ರದೇವ ಶೀತಲ ಚಂದ್ರ ಮತ್ತು ಅಮೃತವನ್ನು ಗಜಾನನ ತಲೆಯ ಮೇಲಿಟ್ಟರೂ ದಾಹ ಕಡಿಮೆಯಾಗಲಿಲ್ಲ. ಬ್ರಹ್ಮ ಸಿದ್ಧಿ ಮತ್ತು ಬುದ್ಧಿ ಎಂಬ ಮಾನಸ ಕನ್ಯೆಗಳನ್ನು ನೀಡಿದರೆ, ವಿಷ್ಣು ತನ್ನ ಕೈಯಲ್ಲಿದ್ದ ತಂಪಾದ ಕಮಲ ನೀಡಿದ. ವರುಣ ದೇವ ತಂಪಾದ ಜಲಾಭಿಷೇಕ ಮಾಡಿದ. ಪರಮೇಶ್ವರ ತನ್ನ ಶೇಷನಾಗನನ್ನು ಗಣೇಶನ ಹೊಟ್ಟೆಯ ಮೇಲೆ ಸುತ್ತಿದ. ದೇವತೆಗಳು ಎಲ್ಲಾ ರೀತಿಯಿಂದಲೂ ಉಪಾಯ ಮಾಡಿದರೂ ಗಜಾನನ ದಾಹ ಮಾತ್ರ ಕಡಿಮೆಯಾಗಲಿಲ್ಲ. ಇದನ್ನೂ ಓದಿ:ಚೌತಿ ದಿನ ಚಂದ್ರನನ್ನು ನೋಡಿದ್ದಕ್ಕೆ ‘ಕಳ್ಳ’ನಾದ ಕೃಷ್ಣ
ಕೊನೆಗೆ 88 ಸಹಸ್ರ ಮುನಿಗಳು 21 ಹಚ್ಚ ಹಸಿರಾದ ದ್ರುವ (ಗರಿಕೆ) ಗಣೇಶನ ಮಸ್ತಕದ ಮೇಲೆ ಸುರಿದರು. ಆಗ ಗಜಾನನ ದಾಹ ಕಡಿಮೆ ಆಯ್ತು. ಇದರಿಂದ ಗಣೇಶ ಪ್ರಸನ್ನಗೊಂಡು, ಅನೇಕ ಉಪಾಯದಿಂದ ನನ್ನ ಅಂಗದ ದಾಹ ಕಡಿಮೆ ಆಗಲಿಲ್ಲ. ದ್ರುವದಿಂದ ಮಾತ್ರ ನನ್ನ ಅಂಗದ ದಾಹ ಕಡಿಮೆ ಆಯ್ತು. ಇನ್ನ್ಮುಂದೆ ನನಗೆ ದ್ರುವ ಅರ್ಪಣೆ ಮಾಡುವವರಿಗೆ ಸಾವಿರಾರು ಯಜ್ಞ, ವ್ರತ, ತೀರ್ಥಯಾತ್ರೆ ಮತ್ತು ದಾನ ಮಾಡಿದ ಪುಣ್ಯ ಲಭಿಸಲಿದೆ ಎಂದು ಹೇಳಿದ. ಹೀಗಾಗಿ ಈಗಲೂ ಗಣಪತಿಗೆ ಗರಿಕೆಯನ್ನು ಇಟ್ಟು ಪೂಜೆ ಮಾಡಲಾಗುತ್ತದೆ.
Live Tv
[brid partner=56869869 player=32851 video=960834 autoplay=true]
ಇಡೀ ಭಾರತ ದೇಶವೇ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಗಣೇಶ ಚತುರ್ಥಿ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬ ಆಚರಿಸಲಾಗುತ್ತದೆ. ಮೊದಲು ಗೌರಿ ಪೂಜೆ ನಡೆಯುತ್ತದೆ. ನಂತರ ಗಣಪತಿಯನ್ನು ಪೂಜಿಸಲಾಗುತ್ತದೆ.
ಸಾಮಾನ್ಯವಾಗಿ ಗಣೇಶ ಚತುರ್ಥಿಯಂದು ಬಹುತೇಕ ಎಲ್ಲರೂ ತಿಂಡಿಗಳನ್ನು ತಯಾರಿಸಿ ನೈವೇದ್ಯ ಮಾಡಿ ಪ್ರಸಾದ ಸ್ವೀಕರಿಸುತ್ತಾರೆ. ಹಣ್ಣು ಕಾಯಿಯನ್ನೂ ನೈವೇದ್ಯ ಮಾಡುವುದು ಪದ್ಧತಿ. ಗಣೇಶನಿಗೆ ಪ್ರಿಯವಾದ ಮೋದಕ, ಚಕ್ಕುಲಿ, ಉಂಡೆ, ಎಳ್ಳುಂಡೆ, ಕರ್ಜಿಕಾಯಿ, ಕಡುಬು, ಸಿಹಿ ಕಡುಬು, ಖಾರ ಕಡುಬು ಈ ರೀತಿ ಅನೇಕ ತಿಂಡಿಗಳನ್ನು ಮಾಡಿ ನೈವೇದ್ಯಗೆ ಇಡಲಾಗುತ್ತದೆ. ಆದರೆ ಗಣೇಶ ಚತುರ್ಥಿಯಂದು ವಿಘ್ನ ವಿನಾಯಕ ಗಣೇಶನಿಗೆ ಮೋದಕವನ್ನು ಮಾಡಿ ನೈವೇದ್ಯ ಮಾಡುತ್ತಾರೆ. ಅಷ್ಟೇ ಅಲ್ಲದೆ ಗಣೇಶನನ್ನು ಮೋದಕ ಎಂದು ಕೂಡ ಕರೆಯುತ್ತಾರೆ. ಇದನ್ನೂ ಓದಿ: ಗಣೇಶನಿಗಾಗಿ ಪಂಚಕಜ್ಜಾಯ ಪ್ರಸಾದ
ಮೋದಕ ನೈವೇದ್ಯದ ಹಿನ್ನೆಲೆ:
ಪಾರ್ವತಿ ದೇವಿ ಗಣೇಶನ ಜನ್ಮದಿನದಂದು ಮಗನಿಗೆ ಮೋದಕವನ್ನು ಮಾಡಿ ಉಣಬಡಿಸುತ್ತಿದ್ದಳು. ಅದಕ್ಕಾಗಿ ಗಣೇಶ ಚತುರ್ಥಿಯಂದು ಮೋದಕವನ್ನು ಮನೆಗಳಲ್ಲಿ ಮಾಡಿ ಗಣೇಶನಿಗೆ ನೈವೇದ್ಯಕ್ಕೆ ಇಡುವುದು ಪದ್ಧತಿಯಾಗಿದೆ. ಚೌತಿಯ ದಿನ ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸಿ ನೈವೇದ್ಯ ಮಾಡದಿದ್ದರೆ ಹಬ್ಬವೇ ಅಪೂರ್ಣ ಆದ್ದಂತೆ. ಹಾಗಾಗಿ ಗಣೇಶ ಹಬ್ಬದಂದು ಮೋದಕವನ್ನು ಮಾಡಿ ನೈವೇದ್ಯ ಮಾಡಲಾಗುತ್ತದೆ.
ಇನ್ನೊಂದು ಕಥೆಯೆಂದರೆ ಒಮ್ಮೆ ದೇವಾನುದೇವತೆಗಳು ಶಿವ-ಪಾರ್ವತಿ ಮನೆಗೆ ಹೋಗಿರುತ್ತಾರೆ. ಆಗ ವಿಶಿಷ್ಟ ಪರಿಮಳ ಮತ್ತು ತುಂಬಾ ರುಚಿಯಾಗಿರುವ ಮೋದಕವನ್ನು ತರುತ್ತಾರೆ. ಇದನ್ನು ಸೇವಿಸಿದವರು ಬುದ್ಧಿಶಾಲಿಯೂ, ಶಕ್ತಿವಂತರೂ ಆಗುತ್ತಾರೆ ಎಂಬುದು ಪಾರ್ವತಿಯ ನಂಬಿಕೆಯಾಗಿತ್ತು.
ಆಗ ಒಂದೇ ಒಂದು ಮೋದಕ ಇತ್ತು. ಪಾರ್ವತಿ ಗಣೇಶ ಮತ್ತು ಕಾರ್ತಿಕ ಇಬ್ಬರಲ್ಲಿ ಯಾರಿಗೆ ಕೊಡುವುದು ಎಂದು ಗೊಂದಲಕ್ಕೊಳಗಾಗಿದ್ದಳು. ಕೊನೆಗೆ ಮಕ್ಕಳಿಬ್ಬರನ್ನು ಕರೆದು, ನಿಮ್ಮಿಬ್ಬರಲ್ಲಿ ಯಾರಲ್ಲಿ ನಿಜವಾದ ಶ್ರದ್ಧೆ, ಭಕ್ತಿ ಇದೆಯೆಂದು ಸಾಧಿಸಿ ತೋರಿಸುವಿರೋ ಅವರಿಗೆ ಮೋದಕ ಸಿಗುತ್ತದೆ ಎಂದು ಹೇಳುತ್ತಾಳೆ.
ತಕ್ಷಣ ಕಾರ್ತಿಕ ತನ್ನ ವಾಹನ ಏರಿ ಆಧ್ಯಾತ್ಮ ಮತ್ತು ಭಕ್ತಿ ಕ್ಷೇತ್ರಗಳನ್ನು ಹುಡುಕುತ್ತಾ ಹೊರಡುತ್ತಾನೆ. ಆದರೆ ಗಣೇಶ ಮಾತ್ರ ಶಿವ-ಪಾರ್ವತಿಯರ ಹತ್ತಿರವೇ ಇದ್ದುಬಿಡುತ್ತಾನೆ. ತಂದೆ ತಾಯಿಯನ್ನು ಭಕ್ತಿಯಿಂದ, ಪ್ರೀತಿಯಿಂದ ಕಾಣುವುದಕ್ಕಿಂತ ಹೆಚ್ಚಿನ ಶ್ರದ್ಧೆ, ಭಕ್ತಿ ಯಾವುದೇ ಪವಿತ್ರ ಸ್ಥಳಗಳನ್ನು ಭೇಟಿ ಮಾಡುವುದರಿಂದ ಸಿಗುವುದಿಲ್ಲ ಎಂದು ಹೇಳುತ್ತಾನೆ. ಇದರಿಂದ ಪ್ರಭಾವಿತಳಾದ ಪಾರ್ವತಿ ಮೋದಕವನ್ನು ಗಣೇಶನಿಗೆ ನೀಡುತ್ತಾಳೆ. ಅಂದಿನಿಂದ ಗಣೇಶ ಹಬ್ಬಕ್ಕೆ ಮೋದಕ ನೈವೇದ್ಯ ಮಾಡುವುದು ಚಾಲ್ತಿಗೆ ಬಂದಿದೆ.
ಒಮ್ಮೆ ಕುಬೇರ ತನ್ನ ಸಂಪತ್ತು ತೋರ್ಪಡಿಸಲು ಸರ್ವದೇವತಗೆಗಳನ್ನು ಬೋಜನಕೂಟಕ್ಕೆ ಆಹ್ವಾನಿಸುತ್ತಾನೆ. ಪರಮೇಶ್ವರನ ಅನುಪಸ್ಥಿತಿಯಲ್ಲಿ ಗಣೇಶ ಊಟಕ್ಕೆ ತೆರಳುತ್ತಾನೆ. ಆದರೆ ಗಣೇಶನ ಹೊಟ್ಟೆ ತುಂಬಲ್ಲ. ಕುಬೇರನ ಆಹಾರ ದಾಸ್ತಾನು ಖಾಲಿಯಾದರೂ ಗಣೇಶನ ಹೊಟ್ಟೆ ತುಂಬಲ್ಲ. ಕೊನೆಗೆ ತನ್ನನ್ನು ಕಾಪಾಡಬೇಕೆಂದು ಪರಮೇಶ್ವರನ ಬಳಿ ಬರುತ್ತಾನೆ. ಹೊಟ್ಟೆ ಹಸಿದುಕೊಂಡಿದ್ದ ಗಣೇಶನಿಗೆ ತಾಯಿ ಪಾರ್ವತಿ ರುಚಿಯಾದ ಮೋದಕ ನೀಡುತ್ತಾಳೆ. ಮೋದಕ ತಿಂದ ಕೂಡಲೇ ಗಣೇಶನ ಹೊಟ್ಟೆ ತುಂಬುತ್ತದೆ. ಹಾಗಾಗಿ ಗಣೇಶ ಮೋದಕ ಪ್ರಿಯನಾದ ಎಂಬುವುದು ಮತ್ತೊಂದು ಕಥೆ.
Live Tv
[brid partner=56869869 player=32851 video=960834 autoplay=true]
ಒಟ್ಟು 6 ಸಂಘಟನೆಗಳಿಂದ ಗಣೇಶೋತ್ಸವಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು, ಅನುಮತಿ ವಿರೋಧಿಸಿ 11 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸರ್ವ ಪಕ್ಷಗಳು ಈ ಬಗ್ಗೆ ಸತತವಾಗಿ ಚರ್ಚಿಸಿ ಒಂದು ಅಂತಿಮ ನಿರ್ಣಯ ತೆಗೆದುಕೊಂಡಿದ್ದೆವೆ. ಸರ್ವ ಪಕ್ಷಗಳ ಸಮಿತಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ವರದಿ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂಧನ ಸೋರಿಕೆ – ಆರ್ಟೆಮಿಸ್-1 ರಾಕೆಟ್ ಲಾಂಚಿಂಗ್ ಸ್ಥಗಿತ
ಇನ್ನು ಮುಂದೆ ಪ್ರತಿ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುತ್ತದೆ. ಆದರೆ ಮೂರು ದಿನ ಗಣೇಶೋತ್ಸವ ಆಚರಣೆ ಮಾತ್ರ ಇರುತ್ತದೆ. ಮುಂದಿನ ವರ್ಷ ಪರಿಸ್ಥಿತಿ ನೋಡಿಕೊಂಡು ದಿನಗಳನ್ನು ಹೆಚ್ಚಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ.
ಕೆಎಸ್ಆರ್ಟಿಸಿ ಬಸ್ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. ಇದನ್ನೂ ಓದಿ: ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ
22 ಸಾವಿರ ಸೀಟುಗಳು ಬುಕ್: ಇಂದು (ಆ.29) 8, 8,006, ಆ.30 ರಂದು 9,206, ಆ.31 ರಂದು 5,692 ಸೀಟುಗಳು ಈಗಾಗಲೇ ಕಾಯ್ದಿರಿಸಲಾಗಿದೆ. ಇಂದು 40 ಬಸ್ಸುಗಳು ಹಾಗೂ ನಾಳೆ ಆಗಸ್ಟ್ 30 ರಂದು 67 ಬಸ್ಸುಗಳನ್ನು ಕಾಯ್ದಿರಿಸಲಾಗಿದ್ದು, ಹೆಚ್ಚುವರಿಯಾಗಿ 500 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೊರೊನಾ ನಂತರ ಮೊದಲ ಬಾರಿಗೆ ಗಣೇಶ ಹಬ್ಬವನ್ನು ಆಚರಿಸಲು ಜನ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪಶುಪಾಲನೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, 2022ರ ಆಗಸ್ಟ್ 31ರ ಬುಧವಾರದಂದು ‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಠಕ್ಕೆ ಮುರುಘಾ ಶ್ರೀಗಳು ವಾಪಸ್- ಶಾಂತಿ, ಸಹನೆಯಿಂದ ಇರುವಂತೆ ಮನವಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾವರ್ಕರ್ ಫೋಟೊವನ್ನು ಮುಸ್ಲಿಂ ಏರಿಯಾದಲ್ಲಿ ಹಾಕಬಾರದು, ಅವರ ಫೋಟೊವನ್ನು ಹಾಕಲೇಬಾರದು ಎಂಬ ಚಿಂತನೆಯನ್ನು ಹೊತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಈ ಬಾರಿ ಗಣೇಶ ಪೆಂಡಾಲ್ಗಳಲ್ಲಿ ಸಾವರ್ಕರ್ ಫೋಟೊ ಹಾಕಬೇಕು ಎಂದು ಗಜಾನನ, ಹಿಂದೂಪರ ಸಂಘಟನೆಗಳು ಹಾಗೂ ರಾಷ್ಟ್ರಭಕ್ತರು ಆಲೋಚನೆ ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ಇಂದು ವಿಜಯಪುರದಲ್ಲಿ ಬೈಠಕ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬ್ಯಾಡ್ ಕಾಮೆಂಟ್ ಮಾಡಿದವನಿಗೆ ಮುಟ್ಟಿ ನೋಡಿಕೊಳ್ಳುವಂತೆ ಖಡಕ್ ಉತ್ತರ ಕೊಟ್ಟ ಅನಸೂಯ
ಗಣೇಶನನ್ನು ಕೂರಿಸುವಾಗ ಸಾವರ್ಕರ್ ಫೋಟೊ ಅನ್ನು ಇಡುವ ವಿಚಾರ ಮಾಡಲಾಗಿದೆ. ಇದಕ್ಕೆ ಪೂರಕವಾಗಿ ಪುಸ್ತಕವನ್ನು ತರಲಾಗಿದೆ. ಅದನ್ನು ಕಡಿಮೆ ಬೆಲೆಗೆ ಪ್ರತಿಯೊಬ್ಬರಿಗೂ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೇ ಸಾವರ್ಕರ್ ಕುರಿತು ಯುವಕರಿಗೆ ಕಾರ್ಯಾಗಾರ ಮಾಡಲಾಗುತ್ತಿದೆ. ರಾಷ್ಟ್ರ ಪುರುಷರ ಬಗ್ಗೆ ಯಾರಾದ್ರೂ ಕೇವಲವಾಗಿ ಮಾತನಾಡಿದ್ರೆ ಅವರಿಗೆ ಪ್ರತಿಕ್ರಿಯೆ ಕೊಡಲು ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
12 ವರ್ಷಗಳ ಕಾಲ ಕಾಲಾಪಾನಿ ಅಂತಹ ಜೈಲಿನಲ್ಲಿರುವಾಗ ಬೇರೆ ಅವಕಾಶಗಳೇ ಇರಲಿಲ್ಲ. ಆ ಸಂದರ್ಭದಲ್ಲಿ ಭಾರತದ ಕುರಿತು ಅವರು ತಮ್ಮದೇ ಶೈಲಿಯಲ್ಲಿ ತಮ್ಮದೇ ಕೃತಿಯಲ್ಲಿ ವರ್ಣಿಸಿದ್ದರು. ಅದನ್ನೇ ಪುಸ್ತಕದಲ್ಲಿ ತಿಳಿಸಲಾಗಿದೆ. ಅದನ್ನು ಅರ್ಥ ಮಾಡಿಕೊಳ್ಳುವ ವಿಶಾಲ ಮನಸ್ಸು ಎಲ್ಲರಿಗೂ ಇದೆ ಎಂದು ಟೀಕಾಕಾರರಿಗೆ ಕುಟುಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕೆ ಬೇಡವೇ ಅನ್ನೋ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಸಿಎಂ ಜೊತೆ ಸುಮಾರು 2 ಗಂಟೆಗಳ ಕಾಲ ಇದರ ಬಗ್ಗೆ ಚರ್ಚೆ ನಡೆಸಿದ್ದೇನೆ. ಇವತ್ತು ಸಭೆ ನಡೆಸುವಂತೆ ಸೂಚಿಸಿದ್ದರು. ಅದರಂತೆ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಗಣೇಶೋತ್ಸವ ಮಾಡೋದಾದರೇ ಹೇಗೆ ಮಾಡಬೇಕು? ಮುಂಜಾಗ್ರತಾ ಕ್ರಮಗಳೇನು ತೆಗೆದುಕೊಳ್ಳಬೇಕು? ಎಲ್ಲಿ ಕೂರಿಸಬೇಕು? ಸಂಭ್ರಮಾಚರಣೆ ಬಗ್ಗೆ ಹಾಗೂ ಮೆರವಣಿಗೆ ಎಲ್ಲಿಂದ ಸಾಗಬೇಕು? ಹೀಗೆ ಪ್ರತಿಯೊಂದರ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ
ಗಣೇಶೋತ್ಸವಕ್ಕೆ 5 ಅರ್ಜಿಗಳು ಸಲ್ಲಿಕೆ ಅಗಿದ್ದು, 2 ಅರ್ಜಿಗಳು ಸ್ಥಳೀಯರದ್ದಾಗಿದೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು. ಈದ್ಗಾ ಮೈದಾನದಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.
ರಂಜಾನ್ ಹಾಗೂ ಬಕ್ರೀದ್ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಇದೆ. ಆದರೆ ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ. ಜೊತೆಗೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಯಾವುದೇ ಅನುಮತಿ ಬೇಕಿಲ್ಲ ಎಂದು ಹೇಳಿರುವ ಪೀಠವು ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ (ವಿವಾದ) ರೀತಿಯಲ್ಲಿ ಮಾಡಬೇಡಿ. ಯಾವುದೇ ವಿವಾದಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಿ ಎಂದು ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ. ಇದನ್ನೂ ಓದಿ: ಉರಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಈ ಸಂಬಂಧ ಮಾತನಾಡಿದ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ, ನಾನು ಶಾಸಕಿ ಆಗಿದ್ದಾಗ ಗಣೇಶ ಉತ್ಸವ, ದಸರಾ ಕನ್ನೆ ರಾಜೋತ್ಸವ ಮಾಡಬಹುದು ಅಂತಾ ಹೇಳಿದ್ದೆವು. ಆದರೆ ಈ ಬಾರಿ ಕೋರ್ಟ್ ಯಥಾಸ್ಥಿತಿ ಕಾಪಾಡಿ ಎಂದು ಹೇಳಿದೆ.
ನಾನು, ಶಾಸಕ ಜಮೀರ್ ಸಾಹೇಬ್ರು ಇದ್ದಾಗ ಈ ಮೈದಾನದಲ್ಲಿ ಗಣೇಶ ಉತ್ಸವ, ರಂಜಾನ್, ದಸರಾ ಉತ್ಸವ ಎಲ್ಲವೂ ಆಗ್ಬೇಕು ಅಂತಾ ಮಾತಾಡಿಕೊಂಡಿದ್ವಿ. ಅದು ಯಥಾಸ್ಥಿತಿ ಅಂತಾ ನಾವು ಅಂದ್ಕೊಂಡಿದ್ವಿ. ಈಗ ಹೈಕೋರ್ಟ್ ಯಥಾಸ್ಥಿತಿ ಅಂತಾ ಆದೇಶ ನೀಡಿದೆ. ಆದೇಶದಲ್ಲಿ ಇದೊಂದು ಮೈದಾನ ಇಲ್ಲಿ ಆಟ ಆಡಬಹುದು ಎಂದಿದೆ. ಈ ಜಾಗ ಸಾರ್ವಜನಿಕರ ಜಾಗವೇ ಹೊರತು ವಕ್ಫ್ ಬೋರ್ಡ್ ಜಾಗ ಅಲ್ಲ. ಕಾರ್ಪೊರೇಷನ್ ಅವ್ರ ಜಾಗವೂ ಅಲ್ಲ ಎಂದು ಹೇಳಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋರ್ಟ್ ಆದೇಶದಲ್ಲಿ ವರ್ಷದಲ್ಲಿ 2 ಬಾರಿ ಮಾತ್ರ ಪ್ರಾರ್ಥನೆ ಮಾಡೋದಕ್ಕೆ ಅವಕಾಶ ಇದೆ. ಕೋರ್ಟ್ ಮಕ್ಕಳು ಆಟ ಆಡಬಹುದು, ರಂಜಾನ್, ಬಕ್ರೀದ್ಗೆ ಪ್ರಾರ್ಥನೆ ಸಲ್ಲಿಸಬಹುದು ಎಂದು ಹೇಳಿದೆಯೇ ಹೊರತು ಬೇರೆ ಆಚರಣೆ ಮಾಡಬೇಡಿ ಎಂದು ಹೇಳಿಲ್ಲ. ಹಾಗಾಗಿ ನಾವು ಗಣೇಶ ಹಬ್ಬ ಮಾಡೇ ಮಾಡ್ತೀವಿ. ಅದು ಸಾರ್ವಜನಿಕ ಆಸ್ತಿ ಅದರಲ್ಲಿ ನಮಗೂ ಸಮಾನ ಹಕ್ಕಿದೆ. ನಾವು ಗಣೇಶ ಹಬ್ಬ ಆಚರಣೆ ಮಾಡೇ ಮಾಡ್ತೀವಿ ಎಂದು ಪಟ್ಟು ಹಿಡಿದಿದ್ದಾರೆ.
Live Tv
[brid partner=56869869 player=32851 video=960834 autoplay=true]