ಚಿಕ್ಕಮಗಳೂರು: ಗಣಪತಿ ಹಬ್ಬದಂದು ರೈತನೊಬ್ಬ ಜೀವಂತ ಇಲಿಯರ್ಣಣೂ ಗಣೇಶನಿಗೆ ನೀಡಿ, ಬೆಳೆಗಳನ್ನು ಉಳಿಸು ಎಂದು ಬೇಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದಿದೆ.
ಮರ್ಕಲ್ ಗ್ರಾಮದ ರೈತ ನಿತಿನ್ ಅವರ ಹೊಲದಲ್ಲಿ ಇಲಿಗಳ ಕಾಟ ಯತೇಚ್ಛವಾಗಿತ್ತು. ಯಾವುದೇ ಔಷಧಿ ಇಟ್ಟರೂ, ಏನೇ ಮಾಡಿದರೂ ಇಲಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಕಷ್ಟಪಟ್ಟು ಬೆಳೆದ ಬೆಳೆಯೂ ಇಲಿ ಹಾಗೂ ಮಣ್ಣು ಪಾಲಾಗುತ್ತಿತ್ತು. ಇದರಿಂದ ಮನನೊಂದ ರೈತ ನಿನ್ನ ವಾಹನದಿಂದ ನಮ್ಮ ಬೆಳೆಗಳು ನಾಶವಾಗುತ್ತವೆ, ಬೆಳೆಗಳನ್ನ ಉಳಿಸಿಕೊಳ್ಳುವುದೇ ಕಷ್ಟವಾಗಿದೆ ಎಂದು ಗಣಪತಿ ಹಬ್ಬವಾದ ಇಂದು, ತಮ್ಮ ಹೊಲದಲ್ಲಿ ಜೀವಂತ ಇಲಿಯನ್ನು ಹಿಡಿದು ಗ್ರಾಮದಲ್ಲಿ ಕೂರಿಸಿದ್ದ ಗಣೇಶನಿಗೆ ನೀಡಿ ಬೆಳೆ ಉಳಿಸು ಎಂದು ಬೇಡಿಕೊಂಡಿದ್ದಾನೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.57ಕ್ಕೆ ಇಳಿಕೆ- ರಾಜ್ಯದಲ್ಲಿಂದು 967 ಹೊಸ ಕೊರೊನಾ ಕೇಸ್, 10 ಸಾವು
ತಮ್ಮ ಹೊಲದಲ್ಲಿ ಹಿಡಿದ ಗಣೇಶನನ್ನ ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಕೊಂಡು ಬಂದು ಗಣೇಶನ ಮುಂದೆ ಬಿಟ್ಟಿದ್ದಾನೆ. ಸುಮಾರು ಒಂದು ಗಂಟೆಗಳ ಕಾಲ ಪ್ಲಾಸ್ಟಿಕ್ ಕವರ್ ನಲ್ಲಿ ಬಂಧಿಯಾಗಿದ್ದ ಮೂಷಿಕ ಕೆಳಗೆ ಬಿಡುತ್ತಿದ್ದಂತೆ ಬದುಕಿತು ಬಡ ಜೀವ ಎಂದು ಎದ್ನೋ-ಬಿದ್ನೋ ಅಂತ ಅಲ್ಲಿಂದ ಓಡಿದೆ.
ಚಿಕ್ಕಮಗಳೂರು: ಗಣೇಶ ಚತುರ್ಥಿ ದಿನದಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಹೊಲದಲ್ಲಿ ಉಳುಮೆ ಮಾಡುವ ಮೂಲಕ ರೈತರ ಯೋಗಕ್ಷೇಮ ವಿಚಾರಿಸಿ ವಿನೂತನವಾಗಿ ಹಬ್ಬ ಆಚರಿಸಿದ್ದಾರೆ.
ಇಂದು ತಾಲೂಕಿನ ಹಿರೇಮಗಳೂರು ಬಳಿ ನಡೆಯುತ್ತಿದ್ದ ಕೆರೆ ಏರಿ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಅವರು, ಇದೇ ವೇಳೆ ಸಗನೀಪುರ ಗ್ರಾಮದ ಹೊಲದಲ್ಲಿ ರೈತರು ಉಳುಮೆ ಮಾಡುತ್ತಿರುವುದ್ದನ್ನು ಕಂಡು ಹೊಲಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಹಬ್ಬದ ದಿನ ಉಳುಮೆ ಮಾಡುತ್ತಿದ್ದೀರಾ, ಬನ್ನಿ ನಿಮ್ಮ ಜೊತೆ ನಾನು ಸೇರಿಕೊಳ್ಳುತ್ತೇನೆ ಅಂತ ರೈತರಿಂದ ಎತ್ತುಗಳನ್ನು ಪಡೆದು ಹೊಲದಲ್ಲಿ ಉಳುಮೆ ಮಾಡಿದ್ದಾರೆ. ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅನ್ನಲು ಸಂಬರ್ಗಿ ಬಳಿ ದಾಖಲೆ ಏನಿದೆ..?: ಚಂದ್ರಚೂಡ್
ಉಳುಮೆ ಮಾಡುವಾಗ ರೈತರಂತೆ ನೇಗಲನ್ನು ಕಾಲಿನಲ್ಲಿ ಮೆಟ್ಟಿ ಉಳುಮೆ ಮಾಡಿ, ಎಲ್ಲರ ಗಮನ ಸೆಳೆದಿದ್ದಾರೆ. ಸಿ.ಟಿ. ರವಿ ಉಳುಮೆ ಶೈಲಿಯನ್ನು ಕಂಡು ರೈತರು ಕೂಡ ಆಶ್ಚರ್ಯಗೊಂಡಿದ್ದಾರೆ. ಭಾಷಣಗಳಲ್ಲಿ ಆಗಾಗ ನಾನು ರೈತರ ಮಗ ಎಂದು ಹೇಳುತ್ತಿದ್ದ ಅವರು, ಹಬ್ಬದಂದೇ ರೈತರ ಹೊಲದಲ್ಲಿ ಉಳುಮೆ ಮಾಡಿ ಹೊಲದಲ್ಲಿ ಹಬ್ಬ ಆಚರಿಸಿ, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ಬಳಿಕ ರೈತರ ಯೋಗಕ್ಷೇಮ ವಿಚಾರಿಸಿ, ರೈತರಿಗೆ ಗಣಪತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ ತಾಲೂಕಿನ ಕುರುವಂಗಿ, ಸಗನೀಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಒಂದು ರೌಂಡ್ ಹಾಕಿ ರೈತರ ಆರೋಗ್ಯ, ಬೇಕು-ಬೇಡಗಳನ್ನು ವಿಚಾರಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ – ಮಷಿನ್ ಸಂಪೂರ್ಣ ಜಖಂ
ಬೆಂಗಳೂರು: ಇಂದು ದೇಶಾದ್ಯಂತ ಗಣೇಶ ಹಬ್ಬವನ್ನು ಜನರು ಸಡಗರದಿಂದ ಆಚರಿಸುತ್ತಿದ್ದಾರೆ. ಈ ಮಧ್ಯೆ ಸ್ಯಾಂಡಲ್ವುಡ್ ಕಲಾವಿದರು ಗಣೇಶನ ಮೂರ್ತಿ ಜೊತೆಗೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮುಂಜಾನೆ ಗೌರಿ, ಗಣೇಶ ವಿಗ್ರಹವನ್ನು ಮನೆಗೆ ತಂದು ಪೂಜೆ ಸಲ್ಲಿಸಿ ಹಬ್ಬ ಆಚರಿಸುತ್ತಿವುದರಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ವುಡ್ ತಾರೆಯರು, ಸಂಪ್ರದಾಯಿಕ ಉಡುಗೆಯಲ್ಲಿ ಬಣ್ಣ-ಬಣ್ಣದ ಗಣೇಶನ ಮೂರ್ತಿಯೊಂದಿಗೆ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಸೇನಾ ವಾಹನಕ್ಕೆ ಒದ್ದು ಯುವತಿ ರಂಪಾಟ – ವೀಡಿಯೋ ವೈರಲ್
ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ಮನೆಯಲ್ಲಿ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಉಪೇಂದ್ರರವರು ಪತ್ನಿಯೊಂದಿಗೆ ಕುಳಿತುಕೊಂಡು ಪೂಜೆ ಸಲ್ಲಿಸುತ್ತಿರುವ ವೀಡಿಯೋವನ್ನು ಪ್ರಿಯಾಂಕ ಉಪೇಂದ್ರವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ನವರಸ ನಾಯಕ ಜಗ್ಗೇಶ್ರವರು ಗರಿಕೆ ಮತ್ತು ಹೂವಿನಿಂದ ಅಲಂಕರಿಸಿರುವ ಗಣೇಶನ ಮೂರ್ತಿಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, ಸಣ್ಣ ಕಥೆಯನ್ನು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ. ಈ ಗಣಪನಿಗೆ 34 ವರ್ಷ. 1987ರಲ್ಲಿ ಬಿಡಿಗಾಸಿಲ್ಲದ ದಿನಗಳು. ರವಿಚಂದ್ರನ್ ರವರ ರಣಧೀರ ಚಿತ್ರಿಕರಣ ಸಮಯ. ಅವರ ಸಂಸ್ಥೆಯಲ್ಲಿ 500ರೂ ಸಂಬಳ ಪಡೆದು ನಾನು ಪರಿಮಳ ಮಲ್ಲೇಶ್ವರ 10ನೇ ಕ್ರಾಸ್ ಜೀರಿಗೆ ವ್ಯಾಯಾಮ ಶಾಲೆ ಬಳಿ 20ರೂ.ಗೆ ಈ ಗಣಪನನ್ನು ಕೊಂಡು ಮನೆಯಲ್ಲಿ ಇಟ್ಟು ಚಿತ್ರಿಕರಣಕ್ಕೆ 8ನೇ ಮೈಲಿ ಸ್ಟೋನ್ ಮೆಡೋ ಮನೆಗೆ ಓಡಿದೆ. ನನ್ನ ಗ್ರಹಚಾರಕ್ಕೆ ಅಂದು ರಾತ್ರಿ 2 ಗಂಟೆಗೆ ಮುಗಿಯಿತು. ಪಾಪ ಪರಿಮಳ ನನಗಾಗಿ ನಿದ್ರೆ ಮಾಡದೇ ಕಾಯುತ್ತಿದ್ದಳು. ಆಗ ಮನೆಗೆ ಬಂದು ಸ್ನಾನ ಮಾಡಿ ಗಣಪತಿ ವ್ರತ ಶುರು ಮಾಡಿ ಬೆಳಗಿನ ಜಾವ 5ಕ್ಕೆ ಪೂಜೆ ಮುಗಿಸಿ ಗಣಪನಿಗೆ ಪ್ರಾರ್ಥಿಸಿದೆ.
ಗಣಪ ಎಲ್ಲರು ಪೂಜೆ ನಂತರ ನಿನ್ನ ವಿಸರ್ಜನೆ ಮಾಡಿ ಬಿಡುತ್ತಾರೆ. ನಾನು ಮಾತ್ರ ನಿನ್ನ ನನ್ನ ಕೊನೆ ಉಸಿರಿನವರೆಗೂ ಇಟ್ಟುಕೊಳ್ಳುವೆ ಎಂದು ಸಂಕಲ್ಪ ಮಾಡಿದೆ. ಅದರಂತೆ ಇಂದಿಗೂ ಈ ಗಣಪನೇ ನನ್ನ ಆತ್ಮೀಯ ಬಂಧು. ಇಂದು ಇವನಿಗೆ ಪೂಜೆ ಮಾಡುವಾಗ ನನ್ನ ಬೆಳವಣಿಗೆ ನೆನೆದು ಆಶ್ಚರ್ಯ ಅನುಭವ ಆಯಿತು. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ ಮಾತು ‘ಶ್ರದ್ಧಾವಾನ್ ಲಭತೆ ಜ್ಞಾನಂ’ ಶ್ರದ್ಧೆ ಇದ್ದ ಜಾಗದಲ್ಲಿ ಸರ್ವ ಜ್ಞಾನ ನೀಡುವೆ ಎಂದು ಧನ್ಯೋಸ್ಮಿ. ಈ ಗಣಪನಿಗೆ ನನ್ನ ಹಿರಿಮಗ ಗುರು ರಾಜನಿಗೆ ಒಂದೇ ವಯಸ್ಸು 34 ವರ್ಷಗಳು. ನಂಬಿಕೆಗೆ ಕೆಡುಕಿಲ್ಲಾ ಗೆದ್ದೆ ಗೆಲ್ಲುವ. ಅದಕ್ಕೆ 4 ಬಾರಿ ತೀರ್ಪು ಎಂದರು ತಮಿಳುಕವಿ ಭಾರತೀಯಾರ್ ಸರ್ವರಿಗೂ ಗಣಪನ ಹಬ್ಬದ ಶುಭಾಶಯ. ಶುಭಮಸ್ತು ಎಂದು ಶುಭಾಶಯ ತಿಳಿಸಿದ್ದಾರೆ.
ಗಂಡ-ಹೆಂಡತಿ ಸಿನಿಮಾ ಖ್ಯಾತಿಯ ನಟಿ ಸಂಜನಾ ಗಲ್ರಾನಿ ಕೂಡ ಗಣೇಶನ ವಿಗ್ರದ ಮುಂದೆ ಕುಳಿತು ಬೇಡುತ್ತಿರುವ ವೀಡಿಯೋಗೆ ಸಾಂಗ್ ಸೆಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಬಿಗ್ಬಾಸ್ ಸೀಸನ್-8 ಸ್ಪರ್ಧಿಯಾಗಿದ್ದ ದಿವ್ಯಾ ಉರುಡುಗ ಗಣೇಶನ ಮೂರ್ತಿಯನ್ನು ತಬ್ಬಿಕೊಂಡಿರುವ ಫೋಟೋವನ್ನು ಹಂಚಿಕೊಂಡು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
ಕನ್ನಡ ಕಿರುತೆರೆ ನಟಿ ಅಮೃತಾ ರಾಮ್ ಮೂರ್ತಿ ಗರ್ಭಿಣಿಯಾಗಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಹೀಗಿದ್ದರೂ ಅಮೃತಾ ಬೆಳ್ಳಿ ಗಣೇಶನ ವಿಗ್ರಹವನ್ನಿಟ್ಟು ದೇವರಿಗೆ ಪುಷ್ಪ ಅರ್ಪಿಸುತ್ತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೇ ನಟಿ ದೀಪಿಕಾ ದಾಸ್, ನಟ ಕಾರ್ತಿಕ್ ಜಯರಾಮ್ ಸೇರಿದಂತೆ ಹಲವು ಕಲಾವಿದರು ಗಣೇಶನ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಭುವನೇಶ್ವರ: ಗಣೇಶ ಹಬ್ಬದ ಪ್ರಯುಕ್ತ ಒಡಿಶಾದ ಕಲಾವಿದರೊಬ್ಬರು ಬೆಂಕಿ ಕಡ್ಡಿಗಳನ್ನು ಬಳಸಿ ಗಣೇಶನ ಮೂರ್ತಿಯನ್ನು ರಚಿಸಿದ್ದಾರೆ. ಈ ಮೂರ್ತಿ 5,621 ಬೆಂಕಿ ಕಡ್ಡಿಗಳನ್ನು ಒಳಗೊಂಡಿರುವ ಕಲಾಕೃತಿಯಾಗಿದ್ದು, 23 ಇಂಚು ಉದ್ದ ಮತ್ತು 22 ಇಂಚು ಅಗಲವಿದೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಸ್ವಯಂ ಅನುಶಾಸನ ಅಗತ್ಯ: ಸುನಿಲ್ ಕುಮಾರ್
ಕಲಾವಿದ ಸಾಸ್ವತ್ ಸಾಹೂ ಈ ಮೂರ್ತಿಯನ್ನು ಸಿದ್ಧ ಪಡಿಸಲು ಎಂಟು ದಿನಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಕೋವಿಡ್-19 ಮಧ್ಯೆ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಈ ಬಾರಿ ನಾನು ಹೊಸದಾಗಿ ಏನಾದರೂ ಮಾಡಬೇಕೆಂದು ಯೋಚಿಸಿ, ಈ ಮೂರ್ತಿಯನ್ನು ಸಿದ್ಧ ಪಡಿಸಿದ್ದೇನೆ ಮತ್ತು ಹಬ್ಬದ ದಿನ ಈ ಮೂರ್ತಿಯನ್ನು ಮನೆಯಲ್ಲಿಟ್ಟು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಗಣೇಶ ಹಬ್ಬ ಹತ್ತು ದಿನಗಳ ಕಾಲ ಆಚರಿಸುವ ಹಬ್ಬವಾಗಿದ್ದು, ದೇಶಾದ್ಯಾಂತ ಜನರು ಬಹಳ ಅದ್ದೂರಿಯಾಗಿ ಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ಬಾರಿ ಕೋವಿಡ್-19 ನಿಂದಾಗಿ ಗಣೇಶೋತ್ಸವವನ್ನು ಸರಳವಾಗಿ ಆಚರಿಸುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಬೆಳಗಾವಿ ಕದನ, ಮರಾಠಿ ಜನರಿಗೆ ಪಾಠ – ಮತ್ತೆ ಕೆಣಕಿದ ಶಿವಸೇನೆ
ಉಡುಪಿ: ಗಣೇಶೋತ್ಸವ ವಿಜೃಂಭಣೆಯಿಂದ ಆಚರಣೆ ಮಾಡಲು ನಮ್ಮ ಅಡ್ಡಿ ಇರಲಿಲ್ಲ. ಕೊರೊನಾ ಸಂದರ್ಭ ಎಲ್ಲರಿಗೂ ಸಾಮಾಜಿಕ ಜವಾಬ್ದಾರಿ ಇದೆ. ಸ್ವಯಂ ನಿಯಂತ್ರಣ ಹಾಕಿಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಹಬ್ಬ ಆಚರಿಸುವವರು ಸ್ವಯಂ ನಿಯಂತ್ರಣ ಹಾಕಿ ಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕವಾಗಿ ನಾವು ಹಬ್ಬ ಆಚರಿಸುವಾಗ, ವಿಜೃಂಭಣೆ ಮಾಡುವಾಗ ನಮ್ಮ ಕಾರ್ಯಕ್ರಮಗಳಿಂದ ಯಾರಿಗೂ ಅಡ್ಡಿಯಾಗಬಾರದು. ಸಮಾರಂಭ ಮಾಡುವ ಮೂಲಕ ನಮ್ಮಿಂದ ಯಾರಿಗೂ ಕೊರೊನಾ ಬರಬಾರದು. ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸ್ವಯಂ ಅನುಶಾಸನವನ್ನು ಹಾಕಿಕೊಳ್ಳುವ ಅನಿವಾರ್ಯಯತೆ ಇದೆ ಎಂದರು. ಇದನ್ನೂ ಓದಿ: ಅವನು ಎಷ್ಟೇ ದೊಡ್ಡವನಾದರೂ ಬಿಡಲ್ಲ: ಅನುಶ್ರೀ
ಸಾಂಕ್ರಾಮಿಕ ರೋಗ ಕೊರೊನಾದ ಭೀತಿ ನಡುವೆ ಹಲವಾರು ಕಠಿಣ ನಿಯಮಗಳನ್ನು ಹಾಕಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅವಕಾಶ ಕೊಟ್ಟಿದೆ. ವಿಜೃಂಭಣೆಯ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳು ಅಡ್ಡಿಯಾಗುತ್ತಿವೆ. ಗಣೇಶೋತ್ಸವ ಆಚರಣೆಗೆ ಅಡ್ಡ ಬಂದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಶ್ರೀರಾಮಸೇನೆ ಎಚ್ಚರಿಕೆ ನೀಡಿತ್ತು. ಇದಕ್ಕೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಗದಗ: ಗಣೇಶೋತ್ಸವ ಆಚರಣೆಗೆ ಅಡೆತಡೆ ಮಾಡಿ ನಿಮ್ಮ ಲಾಠಿ ಏಟು ಹಾಗೂ ಬಂದೂಕಿನ ಗುಂಡಿಗೂ ಹೆದರುವುದಿಲ್ಲ. ನಿಮ್ಮ ಗುಂಡಿಗೆ ನಮ್ಮ ಎದೆ ಗುಂಡಿಗೆ ಒಡ್ಡಲು ಸಿದ್ದರಿದ್ದೇವೆ. ಯಾವುದಕ್ಕೂ ಬಗ್ಗುವ ಜಗ್ಗುವ ಮಾತೇ ಇಲ್ಲ. ತಾಖತ್ ಇದರೆ ಆಚರಣೆ ತಡೆಯಲಿ ಎಂದು ಶ್ರೀ ರಾಮಸೇನೆ ಸಂಘಟಿಕರು ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
9 ದಿನದ ಗಣೇಶೋತ್ಸವ ಆಚರಣೆಗೆ ಅವಕಾಶ ಕೊಡುವಂತೆ ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ಡಿಸಿ ಆಫೀಸ್ ಬಳಿ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿ, ಕೂಡಲೇ ಗಣೇಶ ಹಬ್ಬದ ಮಾರ್ಗಸೂಚಿಗಳ ಪರಿಷ್ಕರಣೆ ಆಗಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ
ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ 5 ದಿನದ ಬದಲು ಜಿಲ್ಲೆಯಾದ್ಯಂತ 9 ದಿನ ಆಚರಿಸಲು ಶ್ರೀರಾಮಸೇನೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಸರ್ಕಾರ ಸಹಕಾರ ನೀಡಬೇಕು. ಜೊತೆಗೆ ಶಾಲಾ-ಕಾಲೇಜುಗಳಲ್ಲೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಸಂಘಟಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೋಚಲು ಹಣವಿಲ್ಲದಾಗ ಹಲ್ಲೆಗೈದು ರೇಪ್ ಮಾಡಿದೆವು – ಸತ್ಯ ಬಿಚ್ಚಿಟ್ಟ 7ನೇ ಆರೋಪಿ
ಶ್ರೀರಾಮಸೇನೆ ಧಾರವಾಡ ವಿಭಾಗದ ಸಂಚಾಲಕ ರಾಜು ಖಾನಪ್ಪನವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಅನೇಕ ಕಾರ್ಯಕರ್ತರು ಈ ಧರಣಿಯಲ್ಲಿ ಭಾಗವಹಿಸಿದ್ದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಸುಬ್ರಮಣ್ಯನಗರದ ಈಸ್ಟ್ ವೆಸ್ಟ್ ಸ್ಕೂಲ್ ಬಳಿ ಕೆಂಗಲ್ ಹನುಮಂತಯ್ಯ ಟ್ರಸ್ಟ್ ಮತ್ತು ಮಲ್ಲೇಶ್ವರಂ ವಿಧಾನಸಭಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ಪರಿಸರ ಸ್ನೇಹಿ 3,000 ಗಣೇಶ ಮೂರ್ತಿಗಳನ್ನು ಟ್ರಸ್ಟ್ ನ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಪಾದರೇಣುರವರು ಮಕ್ಕಳಿಗೆ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯ ಟ್ರಸ್ಟ್ ಅಧ್ಯಕ್ಷರಾದ ಪಾದರೇಣುರವರು ಮಾತನಾಡಿ, ಇಂದಿನ ಮಕ್ಕಳೇ ದೇಶದ ಮುಂದಿನ ಮುಂದಿನ ಉತ್ತಮ ಪ್ರಜೆಗಳಾಗಬೇಕು. ತಂದೆ, ತಾಯಿ ಮತ್ತು ಗುರುಗಳಿಗೆ ಗೌರವ ತರುವ ಹಾಗೇ ಉತ್ತಮ ನಡತೆ ಬೆಳೆಸಿಕೊಳ್ಳಬೇಕು. ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಎಂದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ
ಗಣೇಶ ಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಗಾಯಿತ್ರಿನಗರ, ಸುಬ್ರಮಣ್ಯನಗರ ಮತ್ತು ಪ್ಯಾಲೇಸ್ ಗುಟ್ಟಹಳ್ಳಿ, ಅರಮನೆ ನಗರ, ಅಶ್ವಥ್ ನಗರ ಎಸ್.ಸಿ/ಎಸ್.ಟಿ ಕಾಲೋನಿ ಮಕ್ಕಳಿಗೆ 3 ಸಾವಿರ ಪರಿಸರ ಸ್ನೇಹಿ ಮತ್ತು ನೈಸರ್ಗಿಕ ಬಣ್ಣ ಬಳಸಿದ ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ದೋಚಲು ಹಣವಿಲ್ಲದಾಗ ಹಲ್ಲೆಗೈದು ರೇಪ್ ಮಾಡಿದೆವು – ಸತ್ಯ ಬಿಚ್ಚಿಟ್ಟ 7ನೇ ಆರೋಪಿ
ಬೆಂಗಳೂರು: ಇಂದು ದೇಶಾದ್ಯಂತ ಗಣೇಶ ಹಬ್ಬವನ್ನು ಜನರು ಸಡಗರದಿಂದ ಆಚರಿಸುತ್ತಿದ್ದಾರೆ. ಈ ಮಧ್ಯೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ವಂಡರ್ ಲಾ ಈ ಬಾರಿ ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದೆ. ಇದನ್ನೂ ಓದಿ: ಗಣೇಶನಿಗೆ ಪ್ರಿಯವಾದ ಬೇಸನ್ ಲಾಡು ಮಾಡುವ ಸರಳ ವಿಧಾನ
ಹೌದು, ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲಾಗಿದೆ. ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ, ಅವರಿಗೆ ಸೆಪ್ಟೆಂಬರ್ 10ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ. ಇಂಥ 100 ಪಾಸ್ ನೀಡಲು ನಿರ್ಧರಿಸಿದೆ. ಇದನ್ನೂ ಓದಿ: 6,50,000 ರೂ.ಗೆ ದೇವರ ತೆಂಗಿನಕಾಯಿ ಖರೀದಿಸಿದ ಭಕ್ತ!
ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು ವಂಡರ್ ಲಾಗೆ ನೇರವಾಗಿ ಭೇಟಿ ನೀಡಿ ಉಚಿತ ಪಾಸ್ ಪಡೆಯಬಹುದು. ಈ ಕೊಡುಗೆ ಪಡೆಯಲು ಅರ್ಹರಾಗಿರುವವರು ನಿಮ್ಮ ಹೆಸರನ್ನು ಸೂಚಿಸುವ ಯಾವುದಾದರೂ ಗುರುತಿನ ಚೀಟಿ ತರುವುದು ಕಡ್ಡಾಯ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 080-37230333, 080-35073966.
ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ ಗಣೇಶ ಹಬ್ಬಕ್ಕೆ ಅನುಮತಿ ನೀಡಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಾರ್ಡ್ಗೆ ಒಂದೇ ಗಣೇಶ ಮೂರ್ತಿ, ಐದು ದಿನದ ಒಳಗೆ ಗಣೇಶ ಮೂರ್ತಿ ವಿಸರ್ಜನೆ ಸೇರಿದಂತೆ ಸರ್ಕಾರ ನಿಯಮ ಜಾರಿಗೆ ತಂದಿದೆ.
ನಾಳೆ ಗೌರಿ ಹಬ್ಬ, ನಾಡಿದ್ದು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದೇ ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯಬೇಕಿದೆ. ವಾರ್ಡ್ ಗೆ ಒಂದೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡೋಬೇಕಿರೋ ಹಿನ್ನೆಲೆಯಲ್ಲಿ, ಇಂದೇ ಅಯಾ ವಲಯದ ಡಿಸಿಪಿ ಮತ್ತು ಸ್ಥಳೀಯ ಪೊಲೀಸ್ ಇನ್ಸ್ ಪೆಕ್ಟರ್, ಬಿಬಿಎಂಪಿ ಎಇಇ ಬಳಿ ಅನುಮತಿ ಪಡೆಯಬೇಕು. ಅದಕ್ಕೂ ಮುನ್ನ, ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಫಾಲೋ ಮಾಡುವುದಾಗಿ ಪತ್ರ ಬರೆದುಕೊಡಬೇಕು. ಇದನ್ನೂ ಓದಿ: ಧವನ್ ದಾಂಪತ್ಯ ಜೀವನದಲ್ಲಿ ಬಿರುಕು- ವಿಚ್ಛೇದನಕ್ಕೆ ಮುಂದಾದ ಪತ್ನಿ
ಒಂದು ವೇಳೆ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವ ಸೂಚನೆ ಕೂಡ ನೀಡಲಾಗಿದೆ. ಈ ನಡುವೆ ಪ್ರತಿ ಏರಿಯಾದಲ್ಲಿ ಬೇರೆ ಬೇರೆ ಸಂಘಟನೆಗಳುಣ ಸಮಿತಿಗಳು ಇದ್ದು, ಅವುಗಳ ಮಧ್ಯೆ ಅನುಮತಿಗಾಗಿ ಪೈಪೋಟಿ ಬಿಳುವ ಸಾಧ್ಯತೆ ಇದೆ. ಕೆಲವರು ಈಗಾಗಲೇ ಅನುಮತಿ ಪಡೆದಿದ್ದು, ಇನ್ನೂ ಕೆಲವರು ಇಂದು ಅನುಮತಿ ಪಡೆಯಲು ಕಾದಿದ್ದಾರೆ. ಒಬ್ಬರಿಗೆ ಅನುಮತಿ ಕೊಟ್ರೆ, ಅದೇ ಏರಿಯಾದ ಮತ್ತೊಬ್ಬರು ನಮಗೂ ಅನುಮತಿ ಕೊಡಿ ಅಂತಾ ಕೇಳುವ ಸಾಧ್ಯತೆ ಇದೆ. ಹಾಗಾಗಿ ಖುದ್ದು ಡಿಸಿಪಿ ನೇತೃತ್ವದಲ್ಲಿ ಈ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಯನ್ನು ನೋಡಿಕೊಂಡು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಪ್ರಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ
– ಮಹಿಳೆ ಸಮಾಜದ ಕಣ್ಣು, ಮಹಿಳೆಯರಿಗೆ ಗೌರವದ ಸಂಕೇತ ಬಾಗಿನ ವಿತರಣೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು ಎಂದು ಕೆಪಿಸಿಸಿ ಶಾಸಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಜಯನಗರ, ಸಾರಕ್ಕಿ ಸಿಂಧೂರ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಸೇವಕ್ ಮಹಿಳಾ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ 500 ಮಹಿಳೆಯರಿಗೆ ಬಾಗಿನ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಜನಜಾಗೃತಿ ಅಭಿಯಾನ ಮಾಡಲಾಗಿದೆ. ಈ ಅಭಿಯಾನಕ್ಕೆ ರಾಮಲಿಂಗಾರೆಡ್ಡಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದನ್ನೂ ಓದಿ:ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!
ರಾಮಲಿಂಗಾರೆಡ್ಡಿ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ್ದು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು. ಇಂದು ಸ್ವ-ಸಹಾಯ ಗುಂಪಿನಿಂದ ಮಹಿಳೆಯರಿಗೆ ಸಾಲ ಸೌಲಭ್ಯ, ಸ್ವಯಂ ಉದ್ಯೋಗ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸಲು ಸ್ವಸಹಾಯ ಸಂಘ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಬಾಗಿನ ನೀಡುವುದು ಶುಭಕರದ ಸಂಕೇತ. ಮಹಿಳೆಯರಿಗೆ ಪ್ರಮುಖ ಹಬ್ಬಗಳಲ್ಲಿ ಸಂಪ್ರದಾಯ ಪ್ರಕಾರ ಅರಿಶಿನ, ಕುಂಕುಮ, ಹಸಿರು ಗಾಜಿನ ಬಳೆ ವಿವಿಧ ಶುಭಕರವಾದ ವಸ್ತುಗಳ ಕೊಟ್ಟು, ಶುಭಾಶಯ ಕೋರುವುದು ವಿಶೇಷವಾಗಿದೆ. ಜೆ.ಪಿ.ನಗರದಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ಮೂಲಕ ಒಂದೇ ಕುಟುಂಬದವರಂತೆ ಸಹಬಾಳ್ಮೆ ಮೂಲಕ ಬದುಕೋಣ ಎಂಬ ಸಂದೇಶ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ನನ್ನ ಹೃದಯ ನಿನ್ನ ಬಳಿ ಇದೆ – ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ ಕತ್ರಿನಾ ಪೋಸ್ಟ್
ಕೊರೊನಾ ಸಾಂಕ್ರಮಿಕ ರೋಗ ಇನ್ನೂ ಮುಕ್ತವಾಗಿಲ್ಲ. ಜನರು ಜಾಗೃತಿಯಿಂದ ಗಣೇಶ ಹಬ್ಬವನ್ನು ಮನೆಯಲ್ಲಿ ಅಚರಣೆ ಮಾಡಬೇಕು. ಸಾಮೂಹಿಕ ಗಣೇಶ ಹಬ್ಬ ಅಚರಣೆಗೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ತರಬೇಕು ಎಂದು ಆಗ್ರಹಿಸಿದ್ದಾರೆ. ಪರಿಸರ ಉಳಿದರೆ ಮಾತ್ರ ಮನುಷ್ಯ ಉಳಿಯುತ್ತಾನೆ. ಈ ಬಾರಿ ಗಣೇಶ ಪ್ರತಿಷ್ಠಾಪನೆ ಮಾಡುವ ಮನೆಗಳಲ್ಲಿ ಬಣ್ಣದ ರಾಸಯನಿಕ ಗಣೇಶ ಮೂರ್ತಿಗಳು ಬೇಡ ಅದರ ಬದಲು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ತನ್ನಿ. ಮಣ್ಣಿನ ಗಣೇಶ ನೀರಿನಲ್ಲಿ ಕರಗಿದರೆ ಯಾವುದೇ ಹಾನಿಯಿಲ್ಲ, ಪರಿಸರವು ಉಳಿಯುತ್ತೆ ಎಂದು ಸಂದೇಶವನ್ನು ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶಾಸಕಿ ಸೌಮ್ಯರೆಡ್ಡಿ, ಕಾಂಗ್ರೆಸ್ ನ ಮುಖಂಡ ಅರುಣ್ ಕುಮಾರ್ ಸೇವಕ್, ಮಹಿಳಾ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಮಂಜುಳಾ ಅರುಣ್ ಕುಮಾರ್, ಚಲನಚಿತ್ರ ನಟಿ ರಾಧ ಮತ್ತು ಡಾ||ಗೀತಾ ಅವರು ಉದ್ಘಾಟನೆಯನ್ನು ನೆರವೇರಿಸಿದರು. ಇದನ್ನೂ ಓದಿ: ಬೆಳ್ಳಿ ಹುಡುಗ ಸುಹಾಸ್ಗೆ ಕುಟುಂಬಸ್ಥರ ಅಭಿನಂದನೆ