Tag: gang rape

  • ಜಾತ್ರೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಜಾತ್ರೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಪಾಟ್ನಾ: ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಕಾಮುಕರನ್ನು ಬಿಹಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

    ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಇದೇ ತಿಂಗಳು 18ರಂದು ಘಟನೆ ನಡೆದಿದ್ದು, ಬಾಲಕಿ ತನ್ನ ಪೋಷಕರಿಗೆ ಶನಿವಾರ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಜಾತ್ರೆ ಮುಗಿಸಿ ನಾನು ಮನೆಗೆ ತೆರಳುತ್ತಿದ್ದೆ. ಈ ವೇಳೆ ದಾರಿಯ ಮಧ್ಯೆ ಬಂದ ಇಬ್ಬರು, ಮಾರಕಾಸ್ತ್ರಗಳನ್ನು ಹಿಡಿದು, ನನ್ನನ್ನು ಹೆದರಿಸಿ ಅಪಹರಣ ಮಾಡಿದರು. ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ದೂರಿದ್ದಾಳೆ.

    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇಂತಹದ್ದೇ ಪ್ರಕರಣವೊಂದು ಬಿಹಾರದ ಚಿತ್ರಂಜನ್ ಎಂಬಲ್ಲಿ ನಡೆದಿದ್ದು, ಕಾಮುಕರಿಂದ ತಪ್ಪಿಸಿಕೊಳ್ಳಲು ಹೋಗಿ 9ನೇ ತರಗತಿ ವಿದ್ಯಾರ್ಥಿನಿ ಮೂರು ಅಂತಸ್ತಿನ ಕಟ್ಟದಿಂದ ಜಿಗಿದಿದ್ದಳು. ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಇದನ್ನು ಓದಿ: ಕಾಮುಕರಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಹಾರಿದ್ಳು- ಹೈ ವೋಲ್ಟೆಜ್ ತಂತಿಯಲ್ಲಿ ಸಿಲುಕಿಕೊಂಡ ಬಾಲಕಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದೇ ರಾತ್ರಿ, ಬೇರೆ ಬೇರೆ ಸ್ಥಳದಲ್ಲಿ 10 ಮಂದಿ ಕಾಮುಕರಿಂದ ಗ್ಯಾಂಗ್‍ರೇಪ್

    ಒಂದೇ ರಾತ್ರಿ, ಬೇರೆ ಬೇರೆ ಸ್ಥಳದಲ್ಲಿ 10 ಮಂದಿ ಕಾಮುಕರಿಂದ ಗ್ಯಾಂಗ್‍ರೇಪ್

    -ಆಶ್ರಯ ನೀಡಿದ್ದ ಗೆಳೆಯನು ರೇಪ್ ಮಾಡ್ದ

    ಚಂಡೀಗಢ: 24 ವರ್ಷದ ಯುವತಿ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಒಂದೇ ದಿನ ಹತ್ತು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪಂಜಾಬ್ ನಲ್ಲಿ ನಡೆದಿದೆ.

    ಈ ಘಟನೆ ಅಕ್ಟೋಬರ್ 10 ರಂದು ಪಂಜಾಬ್ ನ ಕಪುರ್ಥಾಲಾ ಜಿಲ್ಲೆಯ ಲಖನ್ಪುರ್ ಖೊಲೆ ಮತ್ತು ದಯಾಲ್ಪುರ್ ಗ್ರಾಮಗಳಲ್ಲಿ ಎರಡು ಕಡೆ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುರಿತಂತೆ ನಾವು ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದೇವೆ. 10 ಮಂದಿ ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದೇವೆ. ಉಳಿದವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ತಂಡಗಳನ್ನು ರಚಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಸತ್ನಾಮ್ ಸಿಂಗ್ ತಿಳಿಸಿದ್ದಾರೆ.

    ಏನಿದು ಪ್ರಕರಣ
    5 ತಿಂಗಳ ಹಿಂದೆ ಸಂತ್ರಸ್ತೆ ಭೋಲು ಎಂಬ ವ್ಯಕ್ತಿಯನ್ನು ಭೇಟಿಯಾಗಿದ್ದಾರೆ. ಆತ ಡ್ರಗ್ ವ್ಯಸನಿಯಾಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾರೆ. ದಿನಕಳೆದಂತೆ ಆಕೆಯೂ ಡ್ರಗ್ ತೆಗೆದುಕೊಳ್ಳಲು ಪ್ರಾರಂಭಿಸಿದ್ದರು. ಭೋಲು ಸೋನು ಎಂಬಾತನ್ನು ಪರಿಚಯಿಸಿದ್ದಾನೆ. ಆತ ಸಂತ್ರಸ್ತೆಯನ್ನು ಪ್ರತಿದಿನ ಭೇಟಿ ಮಾಡಲು ಪ್ರಾರಂಭಿಸಿದ್ದನು. ಸೋನು ಸ್ನೇಹಿತ ಸಿರಿಯಿಂದ ಸಂತ್ರಸ್ತೆ ಬಾಡಿಗೆಗೆ ಮನೆ ತೆಗೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಅಕ್ಟೋಬರ್ 10 ರಂದು ಸಿರಿ ತನ್ನ ಹುಟ್ಟುಹಬ್ಬದ ಆಚರಣೆಗಾಗಿ ತನ್ನ ಸ್ನೇಹಿತರನ್ನು ಆಹ್ವಾನಿಸಿದ್ದನು. ಅಂದಿನ ದಿನವೇ ಸಂತ್ರಸ್ತೆಯನ್ನು ಸಮೀಪದ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆರು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಕಾಮುಕರು ಅತ್ಯಾಚಾರ ಮಾಡುವಾಗ ಸಂತ್ರಸ್ತೆಯ ಕೂಗಿನ ಶಬ್ದ ಯಾರಿಗೂ ಕೇಳಬಾರದು ಎಂದು ಜೋರಾಗಿ ಮ್ಯೂಜಿಕ್ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ನಂತರ ಸಂತ್ರಸ್ತೆ ಅಲ್ಲಿಂದ ತಪ್ಪಿಸಿಕೊಂಡು ದಯಾಲ್ಪುರ್ ಗ್ರಾಮದಲ್ಲಿ ತನ್ನ ಪರಿಚಯಸ್ಥನಾದ ಸತ್ಪಾಲ್ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಆದರೆ ಅದೇ ದಿನ ಸತ್ಪಾಲ್ ಸ್ನೇಹಿತೆ ಎಂದು ನೋಡದೇ ತನ್ನ ಮೂವರು ಸ್ನೇಹಿತರಾದ ಸುಖ್ವಿಂದರ್ ಸಿಂಗ್, ರವೀಂದರ್ ಸಿಂಗ್ ಮತ್ತು ಕುಲ್ವಿಂದರ್ ಸಿಂಗ್ ಜೊತೆ ಸೇರಿ ಸಂತ್ರಸ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇವರೆಲ್ಲರೂ ಸ್ಥಳೀಯ ಕೈಗಾರಿಕಾ ಘಟಕದ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಸಂತ್ರಸ್ತೆ ಅಕ್ಟೋಬರ್ 11ರಂದು ಬೆಳಗ್ಗೆ ತನ್ನ ಬಾಡಿಗೆ ಮನೆಗೆ ಬಂದಿದ್ದಾರೆ. ಅಲ್ಲಿ ನಡೆದ ಘಟನೆಯ ಬಗ್ಗೆ ಆರೋಪಿ ಹಿರಿಯ ಅಜ್ಜಿ ಮತ್ತು ಚಿಕ್ಕಮ್ಮನ ಬಳಿ ಹೇಳಿಕೊಂಡಿದ್ದಾರೆ. ಆದರೆ ಸಂತ್ರಸ್ತೆಗೆ ಸಹಾಯ ಮಾಡುವ ಬದಲು ಆಕೆಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾರೆ. ಕೊನೆಗೆ ನೊಂದ ಸಂತ್ರಸ್ತೆ ಸುಭಾನ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢವಾಗಿದೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು 10 ಮಂದಿ ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದು, ಉಳಿದವರಿಗಾಗಿ ಬಲೆ ಬೀಸಿದ್ದೇವೆ ಎಂದು ಸತ್ನಾಮ್ ಸಿಂಗ್ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಲಾಖ್ ನೀಡಿದ ಪತಿ- ಮತ್ತೊಂದು ಮದ್ವೆಯಾಗಿದ್ದಕ್ಕೆ ಪತಿ, ಮಾವ, ಗ್ರಾಮಸ್ಥರಿಂದ ಮಹಿಳೆ ಮೇಲೆ ಗ್ಯಾಂಗ್ ರೇಪ್

    ತಲಾಖ್ ನೀಡಿದ ಪತಿ- ಮತ್ತೊಂದು ಮದ್ವೆಯಾಗಿದ್ದಕ್ಕೆ ಪತಿ, ಮಾವ, ಗ್ರಾಮಸ್ಥರಿಂದ ಮಹಿಳೆ ಮೇಲೆ ಗ್ಯಾಂಗ್ ರೇಪ್

    ಪಾಟ್ನಾ: ಪತಿ ತಲಾಖ್ ನೀಡಿದ ಬಳಿಕ ಮಹಿಳೆ ಮತ್ತೊಂದು ಮದುವೆ ಆಗಿದ್ದಕ್ಕೆ ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಅಮಾನವೀಯ ಘಟನೆ ಉತ್ತರಪ್ರದೇಶ ರಾಜ್ಯದ ಮುರದಾಬಾದ್ ನಲ್ಲಿ ನಡೆದಿದೆ.

    ಪತಿ ತಲಾಖ್ ನೀಡಿದ ಬಳಿಕ ಮಹಿಳೆ ತನ್ನ ಎರಡನೇ ಪತಿ ಜೊತೆ ಅಲಹಾಬಾದ್ ಕೋರ್ಟ್ ಗೆ ತೆರಳುತ್ತಿದ್ದರು. ಮಹಿಳೆ ಎರಡನೇ ಪತಿ ಜೊತೆ ಬರೇಲಿ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆ ನಿಲ್ದಾಣಕ್ಕೆ ಬಂದ ಪತಿ ಮತ್ತು ಆತನ ಸಹಚರರು ಮಹಿಳೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ.

    ಮಹಿಳೆಯನ್ನು ಡಿಗ್ರಿ ಕಾಲೇಜಿನಲ್ಲಿ ಕೂಡಿ ಹಾಕಿ ಪತಿ, ಮಾವ ಮತ್ತು ಗ್ರಾಮದ ಹಿರಿಯರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ನಿರಂತರವಾಗಿ 8 ದಿನಗಳ ಕಾಲ ಮಹಿಳೆಯ ಮೇಲೆ ಅತ್ಯಚಾರ ನಡೆಸಿದ್ದಾರೆ. ಆರೋಪಿಗಳು ಪ್ರತಿದಿನ ಜಾಗವನ್ನು ಬದಲಿಸುತ್ತಾ ಅತ್ಯಾಚಾರ ನಡೆಸಿದ್ದಾರೆ. ಕೊನೆಗೆ 8ನೇ ದಿನ ಮಹಿಳೆ ಕಾಮುಕರಿಂದ ತಪ್ಪಿಸಿಕೊಂಡು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಒಂದು ವರ್ಷದ ಹಿಂದೆ ಮೈನಾಟೇರ್ ಗ್ರಾಮದ ವ್ಯಕ್ತಿಯೊಂದಿಗೆ ಮಹಿಳೆ ಮದುವೆ ಆಗಿತ್ತು. ಆಗಸ್ಟ್ 17ರಂದು ಪತಿ ಆಕೆಗೆ ತಲಾಖ್ ನೀಡಿದ್ದನು. ತಲಾಖ್ ಬಳಿಕ ಮಹಿಳೆ ಅದೇ ಗ್ರಾಮದ ಯುವಕನೊಂದಿಗೆ ಎರಡನೇ ಮದುವೆ ಆಗಿದ್ದರು.

    ಸದ್ಯ ಕುಂದರಕಿ ಠಾಣೆ ಪೊಲೀಸರಿಗೆ ಪ್ರಕರಣದ ಕುರಿತು 24 ಗಂಟೆಯಲ್ಲಿ ವರದಿ ನೀಡಬೇಕು. ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಬೇಕೆಂದು ಎಸ್‍ಎಸ್‍ಪಿ ರವೀಂದ್ರ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆರಗಿದ 11 ಮಂದಿ ಕಾಮುಕರು!

    ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆರಗಿದ 11 ಮಂದಿ ಕಾಮುಕರು!

    ರಾಂಚಿ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 11 ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

    ಜಾರ್ಖಂಡ್ ನ ಲೋಹರ್ದಾಗಾ ಜಿಲ್ಲೆಯಲ್ಲಿ ಈ ಘಟನೆ ಆಗಸ್ಟ್ 16 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು 18 ಮತ್ತು 28 ವಯಸ್ಸಿನರಾಗಿದ್ದು, ಹಿರಿ ಹರ್ರಾ ಟೋಲಿ ಪ್ರದೇಶದಲ್ಲಿ ದಾಳಿ ಮಾಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಉಪ ಅಧೀಕ್ಷಕ ಆಶಿಶ್ ಕುಮಾರ್ ಮಹ್ಲಿ ಹೇಳಿದ್ದಾರೆ.

    ನಡೆದಿದ್ದೇನು?
    ಆಗಸ್ಟ್ 16 ರಂದು ಇಬ್ಬರು ಬಾಲಕಿಯರು ಪಕ್ಕದ ಮನೆಯ ಮಹಿಳೆ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರು. ದಾರಿ ಮಧ್ಯೆ ಅಂದರೆ ಹಿರಿ ಹೆರ್ರ ಟೋಪಿ ರೈಲ್ವೇ ಪ್ರದೇಶದಲ್ಲಿ ಬೈಕ್ ಕೆಟ್ಟು ನಿಂತು ಹೋಗಿದೆ. ಈ ವೇಳೆ ಬಾಲಕಿಯೊಬ್ಬಳು ಸ್ನೇಹಿತನಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೇಳಿದ್ದಾಳೆ. ಆದರೆ ಸ್ನೇಹಿತ ಸಹಾಯಕ್ಕೆ ಬದಲು 11 ಮಂದಿಯನ್ನು ಸ್ಥಳಕ್ಕೆ ಕಳುಹಿಸಿದ್ದಾನೆ.

    ಸ್ಥಳಕ್ಕೆ ಬಂದ ಆರೋಪಿಗಳು ಮಹಿಳೆಯ ಮೇಲೆ ಹಲ್ಲೆ ಮಾಡಿ ಬೆದರಿಸಿ ಅಲ್ಲಿಂದ ಓಡಿಸಿದ್ದಾರೆ. ಬಳಿಕ ಇಬ್ಬರು ಬಾಲಕಿಯರನ್ನು ಪ್ರತ್ಯೇಕ ಸ್ಥಳಕ್ಕೆ ಕರೆದುಕೊಂಡು ಹೋಗಿ 11 ಮಂದಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಅತ್ಯಾಚಾರ ಎಸಗಿದ್ದಲ್ಲದೆ ಅವರ ಬಳಿಯಿದ್ದ ಮೊಬೈಲ್ ಫೋನ್ ಗಳನ್ನು ಸಹ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಡಿಸಿಪಿ ಹೇಳಿದ್ದಾರೆ.

    ಸದ್ಯಕ್ಕೆ ಇಬ್ಬರು ಬಾಲಕಿಯರ ಹೇಳಿಕೆಯ ಆಧಾರದ ಮೇರೆಗೆ ಸರ್ದಾರ್ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಂಡನ ಸ್ನೇಹಿತರಿಂದಲೇ ಗೃಹಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ!

    ಗಂಡನ ಸ್ನೇಹಿತರಿಂದಲೇ ಗೃಹಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ!

    ರಾಮನಗರ: ಗೃಹಿಣಿಯೋರ್ವರ ಮೇಲೆ ಮೂರು ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಜಿಲ್ಲೆಯ ಮಾಗಡಿ ತಾಲೂಕಿನ ಮಣ್ಣಿಗನಹಳ್ಳಿ ಗ್ರಾಮದಲ್ಲಿ ನನ್ನ ಪತಿಯ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ದೂರು ನೀಡಿದ್ದಾರೆ. ಕರಡಿ, ಪುರುಷೋತ್ತಮ್, ಮಂಜ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ.

    ಗಂಡನ  ಫೋನ್ ನಂಬರ್ ಕೇಳುವ ನೆಪದಲ್ಲಿ ಮನೆಗೆ ಬಂದ ಮೂವರು ಗೃಹಿಣಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ನಂತರ ಸಾಮೂಹಿಕವಾಗಿ ಆತ್ಯಾಚಾರ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆಯನ್ನು ಮಾಗಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

  • ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಮಾಡಿ 10 ಲಕ್ಷಕ್ಕೆ ಡಿಮ್ಯಾಂಡ್

    ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಮಾಡಿ 10 ಲಕ್ಷಕ್ಕೆ ಡಿಮ್ಯಾಂಡ್

    ಅಮರಾವತಿ: ನನ್ನ ಮೇಲೆ ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆಂಧ್ರಪ್ರದೇಶದ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

    ತನ್ನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಳೆದ ವರ್ಷ ಹುಟ್ಟು ಹಬ್ಬದ ಪಾರ್ಟಿಗೆ ಕರೆದುಕೊಂಡು ಹೋಗಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅದನ್ನು ವಿಡಿಯೋ ಮಾಡಿ ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತಂತೆ ಪೊಲೀಸರು ಆರೋಪಿಗಳ ವಿರುದ್ಧ ಗ್ಯಾಂಗ್ ರೇಪ್ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೇ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದಕ್ಕಾಗಿ ಐಟಿ ಕಾಯ್ದೆಗೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಈ ಕುರಿತು ಸಂತ್ರಸ್ತ ವಿದ್ಯಾರ್ಥಿನಿ ಕೃಷ್ಣಾ ಜಿಲ್ಲೆಯಲ್ಲಿರುವ ಅಗಿರಿಪಳ್ಳಿಯಲ್ಲಿನ ತನ್ನ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಳು. ಆದರೆ ಆಡಳಿತ ಮಂಡಳಿ ಈ ಕುರಿತಂತೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬದಲಾಗಿ ಆ ಯುವಕರನ್ನು ಕರೆಸಿ ವಿಡಿಯೋ ಡಿಲೀಟ್ ಮಾಡಿ, ನನ್ನಲ್ಲಿ ಕ್ಷಮೆ ಕೇಳುವಂತೆ ಹೇಳಿದ್ದಾರೆಂದು ಯುವತಿ ಆರೋಪಿಸಿದ್ದಾಳೆ.

    ಕಾಲೇಜಿನ ಆಡಳಿತ ಮಂಡಳಿ ಪ್ರತಿಕ್ರಿಯಿಸಿ, ವಿದ್ಯಾರ್ಥಿನಿಯ ಗೌರವ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಕುರಿತು ಪೊಲೀಸರಿಗೆ ತಿಳಿಸಲಿಲ್ಲ ಎಂದು ಹೇಳಿದೆ. ಕಾಲೇಜಿನ ಮಾತುಕತೆ ನಂತರವೂ ವಂಶಿ ಹಾಗೂ ಶಿವಾ ರೆಡ್ಡಿ ಎಂಬವರು ತಮ್ಮ ಸ್ನೇಹಿತರೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ.

    ಕಳೆದ ಎರಡು ತಿಂಗಳ ಹಿಂದೆ ವಿದ್ಯಾರ್ಥಿ ಪ್ರವೀಣ್ ಎಂಬಾತ ಕರೆ ಮಾಡಿ ನನ್ನ ಹತ್ತಿರ ವಿಡಿಯೋ ಇದೆ. ನನಗೆ 10 ಲಕ್ಷ ರೂ. ನೀಡಬೇಕು. ಅಲ್ಲದೇ ತನ್ನ ಜೊತೆಗೆ ದೈಹಿಕ ಸಂಬಂಧ ಹೊಂದುವಂತೆ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ನೊಂದ ವಿದ್ಯಾರ್ಥಿನಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

    ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರವೀಣ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

  • ಜನರಿಗೆ ಜಾಗೃತಿ ಮೂಡಿಸ್ತಿದ್ದಾಗ 5 ಎನ್‍ಜಿಒ ಕಾರ್ಯಕರ್ತೆಯರನ್ನು ಕಿಡ್ನಾಪ್‍ಗೈದು ಗ್ಯಾಂಗ್‍ರೇಪ್!

    ಜನರಿಗೆ ಜಾಗೃತಿ ಮೂಡಿಸ್ತಿದ್ದಾಗ 5 ಎನ್‍ಜಿಒ ಕಾರ್ಯಕರ್ತೆಯರನ್ನು ಕಿಡ್ನಾಪ್‍ಗೈದು ಗ್ಯಾಂಗ್‍ರೇಪ್!

    ಸಾಂದರ್ಭಿಕ ಚಿತ್ರ

    ರಾಂಚಿ: ಮಾನವ ಕಳ್ಳಸಾಗಾಣಿಕೆ ವಿರೋಧಿಸಿ ಜಾಗೃತಿ ಮೂಡಿಸುತ್ತಿದ್ದ ಐವರು ಸರ್ಕಾರೇತರ ಸಂಸ್ಥೆಯ(ಎನ್‍ಜಿಒ) ಕಾರ್ಯಕರ್ತೆಯರನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರಗೈದ ಘಟನೆ ಜಾರ್ಖಂಡ್ ರಾಜ್ಯದ ಖುಂತಿ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯಲ್ಲಿ ಮಾನವ ಕಳ್ಳಸಾಗಾಣಿಕೆ ವಿರೋಧಿಸಿ ಎನ್‍ಜಿಒ ಕಾರ್ಯಕರ್ತೆಯರು ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಕೊಚಾಂಗ್ ಬ್ಲಾಕ್ ನ ಮಿಶನ್ ಶಾಲೆಯೊಂದರ ಆವರಣದಲ್ಲಿ ಬೀದಿ ನಾಟಕ ಮಾಡುತ್ತಿದ್ದರು. ಅಷ್ಟರಲ್ಲಿ ವಾಹನವೊಂದರಲ್ಲಿ ಬಂದ ಶಸ್ತ್ರಧಾರಿ ವ್ಯಕ್ತಿಗಳು ಕಾರ್ಯಕರ್ತೆಯರನ್ನು ಅಪಹರಿಸಿದ್ದಾರೆ ಎಂದು ರಾಂಚಿ ಡಿಐಜಿ ಎಚ್. ವಲಿ ಹೋಮ್ಕಾರ್ ತಿಳಿಸಿದ್ದಾರೆ

    ಮಹಿಳೆಯರನ್ನು ಬಲವಂತವಾಗಿ ಕಾರಿನಲ್ಲಿ ಬಂದು ಅಪಹರಿಸಿದ ಕಾಮುಕರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಮೂರು ಗಂಟೆಗಳ ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ. ಈ ಕೃತ್ಯ ಪಥಲ್ ಗಡಿ ಬೆಂಬಲಿಗರದ್ದೇ ಎಂದು ಹೇಳಲಾಗಿದೆ.

    ಯುವತಿಯರನ್ನು ಅತ್ಯಾಚಾರಗೈದಿರುವ ಕಿರಾತಕರು ಅದನ್ನು ವಿಡಿಯೊ ಚಿತ್ರೀಕರಣ ಮಾಡಿದ್ದು, ಒಂದು ವೇಳೆ ಪೊಲೀಸರಿಗೆ ದೂರು ನೀಡಿದರೆ ವಿಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ಕಾಮುಕರ ಬೆದರಿಕೆಗೆ ಹೆದರಿದ ಮಹಿಳೆಯರು ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ ಮೂಲಗಳನ್ನು ಪೊಲೀಸರಿಗೆ ಈ ಕೃತ್ಯದ ಬಗ್ಗೆ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಈ ರೀತಿಯಾದ ಯಾವುದೇ ವಿಡಿಯೊ ಕಂಡುಬಂದಲ್ಲಿ ತಕ್ಷಣ ಪೊಲೀಸರ ಗಮನಕ್ಕೆ ತನ್ನಿ. ಈಗಾಗಲೇ ಕಾಮುಕರ ಪತ್ತೆಗೆ ಪ್ರತ್ಯೇಕ ತಂಡಗಳನ್ನು ನಿಯೋಜಿಸಲಾಗಿದೆ. ಆ ಗುಂಪಿನ ಕೆಲವರ ಗುರುತು ಕೂಡ ಪತ್ತೆಯಾಗಿದೆ. ಈ ಕುರಿತು ಹಲವೆಡೆ ತೀವ್ರ ಶೋಧ ನಡೆದಿದೆ ಎಂದು ಡಿಐಜಿ ಎಚ್. ವಲಿ ಹೋಮ್ಕಾರ್ ತಿಳಿಸಿದ್ದಾರೆ.

    ಪಥಲ್ ಗಡಿ ಎಂದರೇನು:
    ಜಖಾರ್ಂಂಡ್ ಬುಡಕಟ್ಟು ಜನಾಂಗಗಳು ಹೆಚ್ಚು ವಾಸವಾಗಿರುವ ಕಡೆ ಈ ಸಮುದಾಯದ ಪ್ರಾಬಲ್ಯ ಹೊಂದಿರುತ್ತದೆ. ಪ್ರಾಬಲ್ಯ ಹೊಂದಿದವರಿಗೆ ಪಥಲ್ ಗಡಿ ಎಂದು ಕರೆಯಲಾಗುತ್ತದೆ. ಪೊಲೀಸರಿಗೆ ಅಥವಾ ಸರ್ಕಾರಿ ಅಧಿಕಾರಿಗಳಿಗೆ ಈ ಗ್ರಾಮಗಳಿಗೆ ಪ್ರವೇಶ ಇರುವುದಿಲ್ಲ. ಪಥಲ್ ಗಡಿಯವರಿಂದ ಅನುಮತಿ ಸಿಕ್ಕಿದರೆ ಮಾತ್ರ ಈ ಗ್ರಾಮಗಳ ಪ್ರವೇಶ ಮಾಡಬಹುದಾಗಿದೆ.

  • ಕಣ್ಣ ಮುಂದೆಯೇ ಪತ್ನಿ, ಮಗಳ ಮೇಲೆ ಗ್ಯಾಂಗ್ ರೇಪ್ – ಕಾಪಾಡದ ಸ್ಥಿತಿಯಲ್ಲಿ ವ್ಯಕ್ತಿ

    ಕಣ್ಣ ಮುಂದೆಯೇ ಪತ್ನಿ, ಮಗಳ ಮೇಲೆ ಗ್ಯಾಂಗ್ ರೇಪ್ – ಕಾಪಾಡದ ಸ್ಥಿತಿಯಲ್ಲಿ ವ್ಯಕ್ತಿ

    ಪಾಟ್ನಾ: ಕುಟುಂಬವೊಂದನ್ನು ಶಸ್ತ್ರಸಜ್ಜಿತ ಯುವಕರ ಗುಂಪೊಂದು ಅಡ್ಡಗಟ್ಟಿದ್ದು, ವ್ಯಕ್ತಿಯ ಮುಂದೆಯೇ ಆತನ ಪತ್ನಿ ಹಾಗೂ 15 ವರ್ಷದ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆಯೊಂದು ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ.

    ಗಯಾ ಜಿಲ್ಲೆಯ ಕೋಂಚ್ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂದಿಹಾ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ವ್ಯಕ್ತಿ ತನ್ನ ಪತ್ನಿ ಹಾಗೂ ಮಗಳೊಂದಿಗೆ ಮೋಟಾರ್ ಬೈಕ್ ನಲ್ಲಿ ಗುರುವಾರ ರಾತ್ರಿ ಹೋಗುತ್ತಿದ್ದರು. ಸೊಂದಿಹಾ ಗ್ರಾಮದ ಬಳಿ ಹೋಗುತ್ತಿದ್ದಂತೆ ಮೂವರು ಯುವಕರು ಬಂದು ಗನ್ ತೋರಿಸಿ ಅಡ್ಡಗಟ್ಟಿದ್ದಾರೆ. ನಂತರ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿದ್ದು, ಆತನ ಮುಂದೆಯೇ ಪತ್ನಿ ಹಾಗೂ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಇನ್ಸ್ ಪೆಕ್ಟರ್ ನಯ್ಯರ್ ಹಸ್ನೈನ್ ಖಾನ್ ಹೇಳಿದ್ದಾರೆ.

    ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಇಬ್ಬರು ಯುವಕರನ್ನು ಗುರುತಿಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಈ ದುಷ್ಕರ್ಮಿಗಳ ಗುಂಪು ಅತ್ಯಾಚಾರ ಕೃತ್ಯ ಎಸಗುವ ಮುನ್ನ ಇದೇ ಮಾರ್ಗದಲ್ಲಿ ತಮ್ಮ ಗ್ರಾಮಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿದ್ದಾರೆ. ಬಳಿಕ ಅವರ ಬಳಿ ಇದ್ದ ಮೊಬೈಲ್ ಫೋನ್ ಹಾಗೂ ಹಣ ದೋಚಿದ್ದರೆಂದು ಅವರು ತಿಳಿಸಿದ್ದಾರೆ.

    ಈ ಪ್ರಕರಣದಲ್ಲಿ ನಾಪತ್ತೆಯಾದ ಆರೋಪಿಗಾಗಿ ಬಲೆ ಬೀಸಿದ್ದೇವೆ. ಕಳ್ಳತನ ಆದ ತಕ್ಷಣ ಸೂಕ್ತಕ್ರಮ ಕೈಗೊಳ್ಳದೆ ತಳ್ಳಿ ಹಾಕಿದ್ದಾರೆ. ಆದ್ದರಿಂದ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕೋಂಚ್ ಪೊಲೀಸ್ ಠಾಣಾಧಿಕಾರಿಯನ್ನು ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ 20 ಯುವಕರನ್ನು ಬಂಧಿಸಲಾಗಿದೆ ಎಂದು ಇನ್ಸ್ ಪೆಕ್ಟರ್ ಹೇಳಿದ್ದಾರೆ.

  • ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

    ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

    ಮಂಡ್ಯ: ದೇವಾಲಯಕ್ಕೆ ತೆರಳುತ್ತಿದ್ದ ಗೃಹಿಣಿಯನ್ನು ಕಾರಿನಲ್ಲಿ ಅಪಹರಿಸಿ ಮೂವರು ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 4ರಂದು ಘಟನೆ ನಡೆದಿದ್ದು, ಬುಧವಾರ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಸಂಜಯ್, ಬಿಡ್ಡಾ ಮತ್ತು ರಮೇಶ್ ಅತ್ಯಾಚಾರ ಪ್ರಕರಣದ ಆರೋಪಿಗಳು. ಎಲ್ಲ ಆರೋಪಿಗಳು ಹಾಗು ಸಂತ್ರಸ್ತ ಮಹಿಳೆ ಒಂದೇ ಗ್ರಾಮದವರಾಗಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಜೂನ್ 4ರಂದು ಮಹಿಳೆ ಕರಿಘಟ್ಟ ದೇವಾಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳೆಯನ್ನು ಅಡ್ಡಗಟ್ಟಿದ ಕಾಮುಕರು ಅಪಹರಿಸಿ, ಗೌತಮಕ್ಷೇತ್ರದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ್ದಾರೆ. ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಇನ್ನೊಮ್ಮೆ ಕರೆದಾಗ ನೀನಾಗಿಯೇ ಬರಬೇಕು, ಇಲ್ಲವಾದ್ರೆ ವಿಡಿಯೋ ತೋರಿಸಿ ಮಾನ ಹರಾಜು ಹಾಕಲಾಗುವುದು. ಒಂದು ವೇಳೆ ವಿಷಯವನ್ನು ಯಾರಿಗಾದ್ರೂ ತಿಳಿಸಿದ್ರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಸಂತ್ರಸ್ತೆ ಬುಧವಾರ ರಾತ್ರಿ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ದೂರು ದಾಖಲಾಗುತ್ತಿದ್ದಂತೆ ಮೂವರು ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿ ವಿಷವುಣಿಸಿ ಕೊಂದ್ರು!

    ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿ ವಿಷವುಣಿಸಿ ಕೊಂದ್ರು!

    ಚಂಡೀಗಢ: ಆಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಗೆ ವಿಷವುಣಿಸಿ ಹತ್ಯೆ ಮಾಡಿದ ಅಮಾನವೀಯ ಘಟನೆ ಹರಿಯಾಣ ರಾಜ್ಯದ ಪತೇಹಬಾದ್ ಜಿಲ್ಲೆಯಲ್ಲಿ ನಡೆದಿದೆ.

    10ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ತನ್ನ ಪೋಷಕರೊಂದಿಗೆ ಬಟ್ಟು ಕಾಳನ್ ಬ್ಲಾಕ್‍ನ ಮನೆಯಲ್ಲಿ ವಾಸವಾಗಿದ್ದಳು. ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೂವರು ಯುವಕರು ಆಕೆಯನ್ನು ಮನೆಯಿಂದಲೇ ಅಪಹರಿಸಿದ್ದಾರೆ. ನಂತರ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಬಾಲಕಿಗೆ ವಿಷವುಣಿಸಿದ್ದಾರೆ. ಸಂಜೆ ವೇಳೆ ಆಕೆಯನ್ನು ಮನೆಯ ಹತ್ತಿರ ಬಿಟ್ಟು, ಪೋಷಕರಿಗೆ ಬಾಲಕಿಯು ಹುಷಾರಿಲ್ಲದ ಕಾರಣ ಔಷಧಿಯನ್ನು ಕೊಡಿಸಿದ್ದೇವೆಂದು ತಿಳಿಸಿ ಹೋಗಿದ್ದಾರೆ.

     

    ಬಾಲಕಿಯ ಆರೋಗ್ಯ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಷ ಹಾಕಿದ್ದಾರೆ ಎಂದು ತಿಳಿಸಿದ್ದಾರೆ. ಈ ವೇಳೆ ಬಾಲಕಿಯು ನಡೆದ ಘಟನೆಯನ್ನು ವಿವರಿಸಿದ್ದಾಳೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

    ಈ ಕುರಿತು ಪೋಷಕರು ಮೂವರ ವಿರುದ್ಧ ದೂರನ್ನು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಒಬ್ಬ ಅಪ್ರಾಪ್ತ ಬಾಲಕ ಆರೋಪಿಯು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಅವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಆರೋಪಿಯು ಪ್ರಾಣಪಾಯದಿಂದ ಪಾರಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರಕರಣ ಕುರಿತು ಬುಧವಾರ ಮಾತನಾಡಿದ ಡಿಸಿಪಿ ಗುದ್ರ್ಯಾಲ್ ಸಿಂಗ್‍ರವರು, ಮೂವರು ಆರೋಪಿಗಳು ಸ್ಥಳೀಯ ನಿವಾಸಿಗಳಾಗಿದ್ದು, ಆರೋಪಿಗಳ ಗುರುತು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಮೂವರ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಕೊಲೆ ಆರೋಪ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದೇವೆ. ಶೀಘ್ರವೇ ಉಳಿದ ಆರೋಪಿಗಳನ್ನು ಬಂಧಿಸುವುದಾಗಿ ಮಾಹಿತಿ ನೀಡಿದ್ದಾರೆ.