Tag: Gangadharaiah

  • ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

    ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

    ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಬೆಂಗಳೂರಿನ (Bengaluru) ಯಲಹಂಕದಲ್ಲಿರುವ ಬಿಬಿಎಂಪಿ (BBMP) ಎಡಿಟಿಪಿ ಗಂಗಾಧರಯ್ಯ (Gangadharaiah) ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

    ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ

    ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಟ, ನಿರ್ದೇಶಕ ಟಪೋರಿ ಸತ್ಯ ನಿಧನ

  • ಕೋವಿಡ್-19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಗಂಗಾಧರಯ್ಯ ಹೃದಯಾಘಾತದಿಂದ ಸಾವು

    ಕೋವಿಡ್-19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಗಂಗಾಧರಯ್ಯ ಹೃದಯಾಘಾತದಿಂದ ಸಾವು

    ಬೆಂಗಳೂರು: ಕೆಎಎಸ್ ಅಧಿಕಾರಿ ಎಚ್.ಗಂಗಾಧರಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ(ಕೆಎಎಸ್) ಕೋವಿಡ್-19 ಕರ್ತವ್ಯದಲ್ಲಿದ್ದ ಎಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಮರಣ ಹೊಂದಿದ್ದು, ಸಪ್ತಗಿರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಕರ್ತವ್ಯದ ವೇಳೆ ಕುಸಿದು ಬಿದ್ದು ಗಂಗಾಧರಯ್ಯ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ.ಗಳ ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸೇರಿದಂತೆ ಪೋಲೀಸ್ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

    ದಕ್ಷ ಅಧಿಕಾರಿಯಾಗಿದ್ದ ಗಂಗಾಧರಯ್ಯ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.