Tag: Gangavathi

  • ಕಾಲೇಜಿನ ಅವ್ಯವಸ್ಥೆ ಪ್ರಶ್ನಿಸಿದ್ದೇ ತಪ್ಪಾಯ್ತು- ಹಲ್ಲೆ ಮಾಡಿದ ಪ್ರಿನ್ಸಿಪಾಲ್ ವಿರುದ್ಧ ಗಂಗಾವತಿಯಲ್ಲಿ ಪ್ರತಿಭಟನೆ

    ಕಾಲೇಜಿನ ಅವ್ಯವಸ್ಥೆ ಪ್ರಶ್ನಿಸಿದ್ದೇ ತಪ್ಪಾಯ್ತು- ಹಲ್ಲೆ ಮಾಡಿದ ಪ್ರಿನ್ಸಿಪಾಲ್ ವಿರುದ್ಧ ಗಂಗಾವತಿಯಲ್ಲಿ ಪ್ರತಿಭಟನೆ

    ಕೊಪ್ಪಳ: ಕಾಲೇಜಿನಲ್ಲಿ ಆಗ್ತಿರೋ ತಪ್ಪುಗಳ ಬಗ್ಗೆ ಧ್ವನಿಯೆತ್ತಿದ ಕಾರಣಕ್ಕೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಚಾರ್ಯರೊಬ್ಬರು ಹಲ್ಲೆ ಮಾಡಿದ್ದರು. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆ ಗಂಗಾವತಿ ಕಾಲೇಜಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

    ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ರೋ ಎಸ್‍ಕೆಎನ್ ಜಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪ್ರಾಚಾರ್ಯ ಪ್ರೊ, ಹಸನ್ಮಿಯ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸ್ತಿದ್ದಾರೆ.

    ಇಂದು ಪದವಿ ಪರೀಕ್ಷೆ ನಡೆಯೋ ವೇಳೆಗೆ ಸ್ನಾತಕೋತ್ತರ ವಿದ್ಯಾರ್ಥಿಗಳು ರಮೇಶ್ ಹಾಗೂ ಆನಂದ ಮೇಲ್ಭಾಗದ ಕೊಠಡಿ ಹತ್ತಿರ ಹೋಗಿದ್ದಾರೆ ಇದನ್ನೇ ನೆಪವಾಗಿಟ್ಟುಕೊಂಡು ಪ್ರಾಚಾರ್ಯ ಹಲ್ಲೆ ಮಾಡಿ ನಿಂದಿಸಿದ್ದಾರೆ. ಅಲ್ಲದೇ ಈ ಕಾಲೇಜಿನ ಲ್ಲಿ ಪ್ರಾಚಾರ್ಯರು ಪದೇ ಪದೇ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

  • 5 ರೂ.ಗೆ 2 ಮಸಾಲೆದೋಸೆ- ಇದು ಇಂದಿರಾ ಕ್ಯಾಂಟೀನ್ ಅಲ್ಲ, ಕೊಪ್ಪಳ ಮಹಿಳೆಯರ ಓಪನ್ ದೋಸಾ ಕ್ಯಾಂಟೀನ್

    5 ರೂ.ಗೆ 2 ಮಸಾಲೆದೋಸೆ- ಇದು ಇಂದಿರಾ ಕ್ಯಾಂಟೀನ್ ಅಲ್ಲ, ಕೊಪ್ಪಳ ಮಹಿಳೆಯರ ಓಪನ್ ದೋಸಾ ಕ್ಯಾಂಟೀನ್

    ಕೊಪ್ಪಳ: 3 ರೂಪಾಯಿಗೆ ಮಸಾಲೆ ದೋಸೆ, 5 ರೂಪಾಯಿಗೆ 2 ಮಸಾಲೆ ದೋಸೆ. ಇಂದಿರಾ ಕ್ಯಾಂಟೀನ್‍ನಲ್ಲಿ ಅನ್ಕೋತಿದ್ದೀರಾ. ಖಂಡಿತಾ ಅಲ್ಲ, ಇದು ಕೊಪ್ಪಳದಲ್ಲಿ ಸಮಾಜ ಸೇವೆ ಉದ್ದೇಶದಿಂದ ಮಹಿಳೆಯರು ನಡೆಸುತ್ತಿರುವ ಓಪನ್ ದೋಸಾ ಕ್ಯಾಂಟೀನ್.

    ಮೆಹಬೂಬಿ ಮತ್ತು ಮರ್ತೂಜಾ ಎಂಬವರು ಕಳೆದ 10 ವರ್ಷಗಳಿಂದ ಕೊಪ್ಪಳದ ಗಂಗಾವತಿಯ ಪಾಂಡುರಂಗ ದೇಗುಲದ ಬಳಿ ತೆರೆದ ಹೋಟೆಲ್ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‍ನಲ್ಲಿ 5 ರೂಪಾಯಿಗೆ ತಿಂಡಿ ಕೊಡುತ್ತಿದ್ದರೆ, ಇವರು ಕೇವಲ 3 ರೂಪಾಯಿಗೆ ಒಂದು ದೋಸೆ ನೀಡ್ತಾರೆ. 5 ರೂಪಾಯಿ ಕೊಟ್ರೆ 2 ಮಸಾಲೆ ದೋಸೆ ನೀಡ್ತಾರೆ. ಇದರ ಜೊತೆಗೆ ರುಚಿರುಚಿಯಾದ ಕೊಬ್ಬರಿ ಚಟ್ನಿ ಕೂಡ ಇರುತ್ತದೆ. ಹಾಗಂತ ಇವರು ಲಾಭಕ್ಕಾಗಿ ಈ ಕೆಲಸ ಮಾಡುತ್ತಿಲ್ಲ. ಸಮಾಜಸೇವೆ ಉದ್ದೇಶದಿಂದ ಅಗ್ಗದ ದರದಲ್ಲಿ ದೋಸೆ ನೀಡುತ್ತಿದ್ದು, ಅದಕ್ಕೆ ತಗುಲುವ ಖರ್ಚು ಬಂದ್ರೆ ಸಾಕು ಅಂತ ಮೆಹಬೂಬಿ ಹೇಳಿದ್ದಾರೆ.

    ಬೆಳಗ್ಗೆ 5.30ಕ್ಕೆ ಅಂಗಡಿ ತೆರೆಯುವ ಇವರು 10 ಗಂಟೆವರೆಗೆ ಈ ಸೇವೆ ಮಾಡ್ತಾರೆ. ಬೆಳಗ್ಗೆಯಿಂದಲೇ ಮಕ್ಕಳು, ಕೂಲಿ ಕಾರ್ಮಿಕರು ದೋಸೆ ಸವಿಯಲು ಇವರ ಅಂಗಡಿಗೆ ಮುಗಿಬೀಳ್ತಾರೆ.

  • ಪಬ್ಲಿಕ್ ಟಿವಿ ವರದಿಗೆ ಸ್ಪಂದನೆ- ಗಂಗಾವತಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಪರಿಹಾರ

    ಪಬ್ಲಿಕ್ ಟಿವಿ ವರದಿಗೆ ಸ್ಪಂದನೆ- ಗಂಗಾವತಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಸಿಕ್ತು ಪರಿಹಾರ

    ಕೊಪ್ಪಳ: ಪಬ್ಲಿಕ್ ಟಿವಿ ವರದಿಯ ಬಳಿಕ ಗಂಗಾವತಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿದೆ.

    ಗಂಗಾವತಿ ನಗರಕ್ಕೆ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಇಂದು ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು. ವರದಿಗೆ ಸ್ಪಂದಿಸಿರೋ ನಗರಸಭೆ ಹಂಗಾಮಿ ಅಧ್ಯಕ್ಷ ಹಾಗೂ ಅಧಿಕಾರಿಗಳು ಜಾಕ್ ವೆಲ್ ಗೆ ಭೇಟಿ ನೀಡಿ ಡ್ಯಾಂ ನಿಂದ ನೀರು ಹರಿಸಿ ಗಂಗಾವತಿ ನಗರಕ್ಕೆ ಬುಧವಾರದಿಂದ ಯಥಾ ಸ್ಥಿತಿಯಲ್ಲಿ ಕುಡಿಯೋ ನೀರು ಪೂರೈಕೆ ಮಾಡುವ ಭರವಸೆ ನೀಡಿದ್ದಾರೆ.

    ಹೊಸಪೇಟೆ ತಾಲೂಕಿನ ವೆಂಕಟಾಪುರದಲ್ಲಿರೋ ಜಾಕ್ ವೆಲ್‍ಗೆ ಡ್ಯಾಮ್ ನಿಂದ ನೀರು ಬಿಡುಗಡೆ ಮಾಡಿದ್ದು, ಆನೆಗುಂದಿ ನೂತನ ಸೇತುವೆ ಮಾರ್ಗವಾಗಿ ದೇವಘಾಟ್ ಬಳಿ ನೀರು ಶೇಖರಣೆ ಆಗುವಂತೆ ವ್ಯವಸ್ಥೆ ಮಾಡಿದ್ದಾರೆ.

  • ಮುಖಕ್ಕೆ ಟವಲ್ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

    ಮುಖಕ್ಕೆ ಟವಲ್ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

    ಕೊಪ್ಪಳ: ಗಂಗಾವತಿ ತಾಲೂಕಿನ ಕಾರಟಗಿಯಲ್ಲಿ ಮುಖಕ್ಕೆ ಟವಲ್ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಯುವಕನನ್ನು 33 ವರ್ಷದ ಸಂತೋಷ ಎಂದು ಗುರುತಿಸಲಾಗಿದೆ. ಯುವಕ ಮಂಡ್ಯ ಮೂಲದ ಲಾರಿ ಚಾಲಕನಾಗಿದ್ದಾನೆ.

    ಮೃತ ಯುವಕ ಭಾನುವಾರ ಸಂಜೆ ಲಾರಿಯಲ್ಲಿ ಭತ್ತ ತುಂಬಿಕೊಂಡು ಕೊಪ್ಪಳದ ಕಡೆ ಬಂದಿದ್ದು, ಇಂದು ಬೆಳಗ್ಗಿನ ಜಾವ ಕಾರಟಗಿಯ ವಿಶೇಷ ಎಪಿಎಂಸಿ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

    ಸ್ಥಳಕ್ಕೆ ಕಾರಟಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಗುಂಪು ಚದುರಿಸಲು ಬೂಟ್‍ನಿಂದ ಬಾರಿಸಿದ ಪಿಎಸ್‍ಐ: ವಿಡಿಯೋ ವೈರಲ್

    ಗುಂಪು ಚದುರಿಸಲು ಬೂಟ್‍ನಿಂದ ಬಾರಿಸಿದ ಪಿಎಸ್‍ಐ: ವಿಡಿಯೋ ವೈರಲ್

    ಕೊಪ್ಪಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆಯೇ ಕೈ ಕೈ ಮಿಲಾಯಿಸಿದ ವೇಳೆ ಪಿಎಸ್‍ಐ ಬೂಟ್‍ನಿಂದ ಹೊಡೆದು ದರ್ಪ ತೋರಿಸಿದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.

    ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಇಪ್ಪತ್ತೈದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಮಾಧ್ಯಮಗಳಿಗೆ ತಡವಾಗಿ ವಿಡಿಯೋ ಲಭ್ಯವಾಗಿದೆ. ಸಿಂಗನಾಳ ಗ್ರಾಮದ ಶಿವಬಸಪ್ಪ ಹಾಗೂ ವೀರಭದ್ರಪ್ಪ ನಡುವೆ ಭೂವಿವಾದಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದಿತ್ತು. ಆಗ ಗಂಗಾವತಿ ಗ್ರಾಮೀಣ ಠಾಣೆ ಪಿಎಸ್‍ಐ ಪ್ರಕಾಶ ಮಾಳೆ ಬೂಟ್ ನಿಂದ ಸಾರ್ವಜನಿಕವಾಗಿ ಥಳಿಸಿದ್ದಾರೆ. ಬೂಟ್ ನಿಂದ ಹೊಡೆದು ಗುಂಪನ್ನ ಚದುರಿಸಿದ್ದಾರೆ.

    ಗುಂಪು ಚದುರಿಸಬೇಕಾದ್ರೆ ಲಾಠಿ ಬಳಸಬೇಕು ಆದ್ರೆ ಪಿಎಸ್‍ಐ ಪ್ರಕಾಶ ಮಾಳೆ ಬೂಟ್ ಬಳಸಿರೋದು ವಿವಾದಕ್ಕೆ ಕಾರಣವಾಗಿದೆ. ಇದೀಗ ಪಿಎಸ್‍ಐ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

    https://www.youtube.com/watch?v=1sMur_Y6GmI&feature=youtu.be

  • ಕೊಪ್ಪಳ: ಹನಿ ನೀರಿಗೂ ತತ್ವಾರ, ಆದ್ರೆ ಇಲ್ಲಿ ಪೆಟ್ಟಿ ಅಂಗಡಿಯಲ್ಲೂ ಸಿಗುತ್ತೆ ಮದ್ಯ

    ಕೊಪ್ಪಳ: ಹನಿ ನೀರಿಗೂ ತತ್ವಾರ, ಆದ್ರೆ ಇಲ್ಲಿ ಪೆಟ್ಟಿ ಅಂಗಡಿಯಲ್ಲೂ ಸಿಗುತ್ತೆ ಮದ್ಯ

    ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಬೀದಿಗೊಂದು ಬಾರ್ ಇದೆ. ಸ್ವತಃ ಇಲ್ಲಿನ ಶಾಸಕ ಇಕ್ಬಾಲ್ ಅನ್ಸಾರಿ ಲಿಕ್ಕರ್ ಲಾಬಿ ನಡೆಸ್ತಿದ್ದಾರೆ ಅನ್ನೋದನ್ನ ಮೊನ್ನೆಯಷ್ಟೇ ದಾಖಲೆ ಸಮೇತ ಬಹಿರಂಗಪಡಿಸಿದ್ವಿ. ಆದ್ರೆ ಇಷ್ಟೇ ಅಲ್ಲ ಇಲ್ಲಿ ಸಣ್ಣ ಪುಟ್ಟ ಪಾನ್ ಶಾಪ್, ಕಿರಾಣಿ ಅಂಗಡಿ, ಡಾಬಾ, ಹೋಟೆಲ್‍ಗಳಲ್ಲೂ ಮದ್ಯ ಪೂರೈಕೆ ಆಗ್ತಿದೆ. ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಈ ಅಕ್ರಮ ದಂಧೆ ಬಯಲಾಗಿದೆ.

    ಈ ಕ್ಷೇತ್ರದ ಜನರು ಹನಿ ಹನಿ ನೀರಿಗೂ ಪರದಾಡುತ್ತಿದ್ದಾರೆ. ಈ ಸಮಸ್ಯೆ ಬಗೆಹರಿಸಿ ನೀರು ಪೂರೈಕೆ ಬಗ್ಗೆ ಚಿಂತಿಸಬೇಕಾದ ಇಲ್ಲಿನ ಶಾಸಕರು ಬೀದಿಗೊಂದು ಬಾರ್ ಅಂಗಡಿ ತೆರೆದು ಲಾಭಿ ನಡೆಸ್ತಿದ್ದಾರೆ. ಈ ಕೆಲಸಕ್ಕೆ ಬೇರೆ ಬೇರೆ ಪಕ್ಷದವರ ಕೂಡ ಕೈಜೋಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಬಕಾರಿ ಅಧಿಕಾರಿಯನ್ನ ಕೇಳಿದ್ರೆ ಮೇಲಾಧಿಕಾರಿಗಳನ್ನ ಕೇಳಿ ಎಂದು ಉಡಾಫೆ ಉತ್ತರ ನೀಡಿದ್ದಾರೆ.

    ಇನ್ನು ಈ ಕ್ಷೇತ್ರದ ಜನತೆ ಹನಿ ಹನಿ ನೀರಿಗೆ ಪರದಾಡ್ತಿದ್ದಾರೆ. ಕಿಲೋಮೀಟರ್‍ಗಟ್ಟಲೇ ಸೈಕಲ್‍ನಲ್ಲಿ ಹೋಗಿ ನೀರು ತರೋ ಪರಿಸ್ಥಿತಿ ಇದೆ. ಮದ್ಯವನ್ನ ಸಲೀಸಾಗಿ ಒದಗಿಸೋ ನಮ್ಮ ಶಾಸಕರಿಗೆ ನೀರು ಪೂರೈಸೋದು ಮಾತ್ರ ತಿಳೀತಿಲ್ಲ ಅಂತ ಸ್ಥಳೀಯರು ಆರೋಪಿಸಿದ್ದಾರೆ.

    ಇದನ್ನೂ ಓದಿ: ಕೊಪ್ಪಳದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಮದ್ಯಕೋಟೆ?- ಇಲ್ಲಿ ಎಂಆರ್‍ಪಿಗಿಂತ ದುಪ್ಪಟ್ಟು ವಸೂಲಿ

  • ತೆರೆದ ಕೊಳವಿ ಬಾವಿ ಮುಚ್ಚಿಸಿ ಫೋಟೋ ಕಳಿಸಿದ್ರೆ ಖಾತೆಗೆ ಹಣ

    ತೆರೆದ ಕೊಳವಿ ಬಾವಿ ಮುಚ್ಚಿಸಿ ಫೋಟೋ ಕಳಿಸಿದ್ರೆ ಖಾತೆಗೆ ಹಣ

    ಕೊಪ್ಪಳ: ನೀವು ಕೊಪ್ಪಳ ಜಿಲ್ಲೆಯಲ್ಲಿ ವಾಸವಾಗಿದ್ದೀರಾ? ನಿಮ್ಮ ಸುತ್ತಮುತ್ತಲು ತೆರೆದ ಕೊಳವೆ ಬಾವಿ ಇದೆಯೇ? ಹಾಗಾದ್ರೆ ತಡಮಾಡದೇ ಸ್ಥಳದ ಮಾಹಿತಿಯ ಜೊತೆಗೆ ಫೋಟೋವನ್ನು ವಾಟ್ಸಪ್ ಮಾಡಿದ್ರೆ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ.

    ಆರಂಭದ ಪೀಠಿಕೆ ಓದಿ ಖಾತೆಗೆ ಹಣ ನೀಡುವ ಯೋಜನೆಯನ್ನು ಸರ್ಕಾರ ಪ್ರಕಟಿಸಿದೆ ಎಂದು ನೀವು ಭಾವಿಸಿದರೆ ತಪ್ಪಾದಿತು. ತೆರೆದ ಕೊಳವೆ ಬಾವಿ ದುರಂತಕ್ಕೆ ಮನಮಿಡಿದ ಪ್ರಗತಿಪರ ರೈತರೊಬ್ಬರು ಬಹುಮಾನವನ್ನು ಘೋಷಣೆ ಮಾಡಿದ್ದಾರೆ.

    ಜಿಲ್ಲೆಯ ಗಂಗಾವತಿ ಪಟ್ಟಣದ ಪ್ರಗತಿಪರ ರೈತ ಶಿವಪ್ಪ ಚಳ್ಳಕೇರಿ ಅವರು 500 ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಇಂದು ತೆರೆದ ಕೊಳವೆ ಬಾವಿ ಮುಚ್ಚಿಸೋದಕ್ಕಾಗಿ ಒಂದು ಲಕ್ಷ ರೂಪಾಯಿ ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡಿದ್ದಾರೆ.

    ಕೊಪ್ಪಳ ಜಿಲ್ಲೆಯಲ್ಲಿ ಈಗಾಗ್ಲೇ 338 ವಿಫಲ ಕೊಳವೆ ಬಾವಿಗಳಿವೆ ಅಲ್ದೆ ಕೊಪ್ಪಳ ನಗರದಲ್ಲಿ 21 ವಿಫಲ ಕೊಳವೆ ಬಾವಿಗಳಿವೆ. ತೆರೆದ ಕೊಳವೆ ಬಾವಿ ಮುಚ್ಚಬೇಕಂತ ಮಾತನಾಡೋವ್ರೆ ಹೆಚ್ಚು ಆದ್ರೆ ಯಾರು ಮುಚ್ಚೋಕೆ ಮುಂದಾಗೊಲ್ಲ. ಆದ್ರೆ ಇಂತಹ ಬಹುಮಾನ ಘೋಷಣೆ ಮಾಡೋದ್ರಿಂದ ಮುಚ್ಚುತ್ತಾರೆ ಅನ್ನೋ ನಿರೀಕ್ಷೆಯಿದೆ ಎಂದು ಶಿವಪ್ಪ ಅವರು ತಿಳಿಸಿದ್ದಾರೆ.

    ಬಹುಮಾನ ಪಡೆಯಲು ಹೀಗೆ ಮಾಡ್ಬೇಕು: ಕೊಪ್ಪಳ ಜಿಲ್ಲೆಯಲ್ಲಿ ತೆರೆದ ಕೊಳವೆ ಬಾವಿ ಇರೋ ಫೋಟೋ ಹಾಗೂ ಮುಚ್ಚಿದ ಬಳಿಕ ಫೋಟೋ ಮತ್ತು ಗ್ರಾಮ ಪಂಚಾಯತ್‍ನಿಂದ ದೃಢೀಕರಣ ಪತ್ರದ ಜೊತೆಗೆ ಬ್ಯಾಂಕ್ ಖಾತೆಯ ಮಾಹಿತಿಯನ್ನು 8861318934 ನಂಬರ್ ಗೆ ವಾಟ್ಸಾಪ್ ಮಾಡಿದ್ರೆ 500 ರೂ. ಬಹುಮಾನ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಈ ಬಹುಮಾನದ ನೀಡುವ ಅವಧಿ 6 ತಿಂಗಳು ಆಗಿದ್ದು, ಜನರು ಫೋಟೋಗಳನ್ನು ಕಳುಹಿಸಬಹುದು.

    ರಾಜ್ಯದಲ್ಲಿ ತೆರೆದ ಕೊಳವೆ ಬಾವಿ ಮುಚ್ಚೋ ಅಭಿಯಾನವಾಗ್ತಿದೆ. ಆದ್ರೆ ಕೊಪ್ಪಳದ ಪ್ರಗತಿಪರ ರೈತ ಬಹುಮಾನ ಘೋಷಣೆ ಮಾಡೋ ಮೂಲಕ ಗಮನಸೆಳೆದಿದ್ದಾರೆ. ಇನ್ಮೇಲಾದ್ರೂ ತೆರೆದ ಕೊಳವೆ ಬಾವಿ ಮುಚ್ಚಿ ಮುಂದೆ ಇಂಥ ದುರಂತ ಆಗದಿರಲಿ ಅನ್ನೋದೆ ಎಲ್ಲರ ಆಶಯ.

  • ಸಿಬ್ಬಂದಿಯೆದುರೇ ಕೈ ಕೈ ಮಿಲಾಯಿಸಿದ ಗಂಗಾವತಿಯ ಸರ್ಕಾರಿ ಆಸ್ಪತ್ರೆ ವೈದ್ಯರು

    ಸಿಬ್ಬಂದಿಯೆದುರೇ ಕೈ ಕೈ ಮಿಲಾಯಿಸಿದ ಗಂಗಾವತಿಯ ಸರ್ಕಾರಿ ಆಸ್ಪತ್ರೆ ವೈದ್ಯರು

    ಕೊಪ್ಪಳ: ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಗಲಾಟೆ ಮಾಡಿಕೊಂಡು ಕೈ ಮಿಲಾಯಿಸಿದ ಘಟನೆ ಮಂಗಳವಾರ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ಉಪ ವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ್ ಸವದಿ ಮತ್ತು ಇನ್ನೋರ್ವ ಹಿರಿಯ ವೈದ್ಯರಾದ ಡಾ.ಜುಬೇರ್ ಅಹಮ್ಮದ್ ಆಸ್ಪತ್ರೆಯಲ್ಲೆ ಗಲಾಟೆ ಮಾಡಿಕೊಂಡು ಸಾರ್ವಜನಿಕರು ಮತ್ತು ಸಿಬ್ಬಂದಿ ಎದುರೇ ನಗೆಪಾಟಲಿಗೀಡಾಗಿದ್ದಾರೆ.

    ಡಾ.ಜುಬೇರ್ ಅಹಮ್ಮದ್ ದಿನ ನಿತ್ಯ ಆಸ್ಪತ್ರೆಗೆ ತಡವಾಗಿ ಬರುತ್ತಿದ್ದು ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಅಧಿಕಾರಿ ಡಾ.ಈಶ್ವರ್ ಸವಡಿ ಅವರನ್ನು ತಮ್ಮ ಛೇಂಬರ್‍ಗೆ ಕರೆಸಿ, ಸರಿಯಾಗಿ ಕೆಲಸ ನಿರ್ವಹಿಸಿ ಎಂದು ಹೇಳಿದ್ದಾರೆ. ಇದಕ್ಕೆ ಕುಪಿತರಾದ ಡಾ.ಜುಬೇರ್ ನೀವು ಹೇಳಿದ ಹಾಗೆ ಕೇಳಬೇಕೆಂದೇನಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಈ ನಡುವೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ.

    ಈ ಇಬ್ಬರು ವೈದ್ಯಾಧಿಕಾರಿಗಳ ಜಗಳ ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳ ಮುಂದೆ ನಡೆದಿದೆ. ವೈದ್ಯಾಧಿಕಾರಿಗಳೇ ಈ ರೀತಿ ಜಗಳ ಮಾಡಿಕೊಂಡರೆ ಆಸ್ಪತ್ರೆಗೆ ಬರುವ ರೋಗಿಗಳನ್ನು ನೋಡುವರು ಯಾರು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.