Tag: Ganguly

  • ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯ ಲಾರ್ಡ್ಸ್ ನಿಂದ ನ್ಯೂಜಿಲ್ಯಾಂಡ್‍ಗೆ ಶಿಫ್ಟ್

    ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯ ಲಾರ್ಡ್ಸ್ ನಿಂದ ನ್ಯೂಜಿಲ್ಯಾಂಡ್‍ಗೆ ಶಿಫ್ಟ್

    ಮುಂಬೈ: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆಯಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯವನ್ನು ಐತಿಹಾಸಿಕ ಇಂಗ್ಲೆಂಡ್‍ನ ಲಾರ್ಡ್ಸ್ ಅಂಗಳದಿಂದ ನ್ಯೂಜಿಲ್ಯಾಂಡ್‍ನ ಸೌತಾಂಪ್ಟನ್ ಅಂಗಳಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.

    ಸ್ಥಳೀಯ ಮಾಧ್ಯಗಳೊಂದಿಗೆ ಮಾತನಾಡಿದ ಗಂಗೂಲಿ, ಫೈವ್ ಸ್ಟಾರ್ ಸೌಲಭ್ಯವನ್ನು ಹೊಂದಿರುವ ಕಾರಣ ಮತ್ತು ಬಯೋ ಬಬಲ್‍ನಲ್ಲಿ ಆಟಗಾರರನ್ನು ಇರಿಸಲು ಸುಲಭವಾಗುವ ರೀತಿಯಿಂದಾಗಿ ಪಂದ್ಯವನ್ನು ನ್ಯೂಜಿಲ್ಯಾಂಡ್‍ನ ಸೌತಾಂಪ್ಟನ್ ಅಂಕಣದಲ್ಲಿ ಜೂನ್ 18 ರಿಂದ 22 ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಭಾರತ, ಇಂಗ್ಲೆಂಡ್ ವಿರುದ್ಧ 3-1 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುತ್ತಿದ್ದಂತೆ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‍ಗೆ ಅರ್ಹತೆ ಪಡೆದುಕೊಂಡಿತ್ತು. ಈ ಮೂಲಕ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಈ ಮೊದಲು ಟೆಸ್ಟ್ ಚಾಂಪಿಯನ್ ಶಿಪ್ ಇಂಗ್ಲೆಂಡ್‍ನ ಲಾರ್ಡ್ಸ್ ನಲ್ಲಿ ನಿಗದಿಯಾಗಿತ್ತು. ಆದರೆ ಇದೀಗ ನ್ಯೂಜಿಲ್ಯಾಂಡ್‍ನಲ್ಲಿ ನಡೆಯಲಿದೆ.

    ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ನೋಡಲು ನಾನು ಕಾತರನಾಗಿದ್ದು, ಇದಕ್ಕಾಗಿ ನ್ಯೂಜಿಲ್ಯಾಂಡ್‍ಗೆ ತೆರಳಲು ಸಿದ್ಧನಾಗುತ್ತಿದ್ದೇನೆ. ನ್ಯೂಜಿಲ್ಯಾಂಡ್‍ನ ನ ಸೌತಾಂಪ್ಟನ್‍ನಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ಗಂಗೂಲಿ ಹೇಳಿದ್ದಾರೆ.

    ಗಂಗೂಲಿ ಭಾರತದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಗೆಲುವಿನ ಬಗ್ಗೆ ಮಾತನಾಡಿ, ಭಾರತ ತಂಡ ಉತ್ತಮವಾಗಿ ಆಡಿ ಸರಣಿ ಜಯದೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್‍ಗೆ ಅರ್ಹತೆ ಪಡೆದುಕೊಂಡಿದೆ. ಆಟಗಾರರು ಕೊರೊನಾ ಬಳಿಕ ಬಯೋ ಬಬಲ್‍ನಲ್ಲಿದ್ದುಕೊಂಡು ಕ್ರಿಕೆಟ್ ಆಡುತ್ತಿದ್ದರೆ ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ ಕೂಡ ನಡೆಯಲಿದೆ ಎಂದರು.

    ಭಾರತ, ಆಸ್ಟ್ರೇಲಿಯಾದಲ್ಲಿ ಅಜಿಂಕ್ಯ ರಹಾನೆ ಸಾರಥ್ಯದಲ್ಲಿ ಟೆಸ್ಟ್ ಸರಣಿ ಗೆದ್ದರೆ, ತವರಿನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೆಸ್ಟ್ ಸರಣಿ ಜಯಿಸಿದೆ. ಭಾರತ ತಂಡದ ಪರ ರಿಷಬ್ ಪಂತ್ ಮಿಂಚುಹರಿಸುವ ಮೂಲಕ ತಂಡದಲ್ಲಿದ್ದ ಮಾಜಿ ಆಟಗಾರರಾದ ಸೆಹ್ವಾಗ್, ಯುವರಾಜ್, ಧೋನಿ ಬಳಿಕ ಉತ್ತಮ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

  • ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಎದೆನೋವು ಕಾಣಿಸಿಕೊಂಡ ಕಾರಣ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಗಂಗೂಲಿ ಕಳೆದ ಕೆಲದಿನಗಳ ಹಿಂದೆ ಎದೆ ನೋವಿಗಾಗಿ ಚಿಕಿತ್ಸೆ ಪಡೆದಿದ್ದರು. ಆದಾದ ಬಳಿಕ ಮತ್ತೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಜನವರಿ 27 ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ನಂತರ ಆ್ಯಂಜಿಯೋಪ್ಲಾಸ್ಟಿ ನಡೆಸಿ ಎರಡು ಸ್ಟಂಟ್ ಆಳವಡಿಸಿದ್ದಾರೆ.

    ಹೃದಯನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಗಂಗೂಲಿಯವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಈ ಮೂಲಕ ಕಳೆದ 20 ದಿನಗಳ ಅಂತರದಲ್ಲಿ 2 ಬಾರಿ ಆಸ್ಪತ್ರೆಯಲ್ಲಿ ಎದೆ ನೋವಿಗಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳಲ್ಲಿ ಸಹಜ ಜೀವನ ಕ್ರಮಕ್ಕೆ ಮರಳುತ್ತಾರೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ಖ್ಯಾತ ತಜ್ಞ ವೈದ್ಯರಾದ ಡಾ.ದೇವಿ ಶೆಟ್ಟಿಯವರನ್ನು ಒಳಗೊಂಡ ವೈದ್ಯರ ತಂಡ ಗಂಗೂಲಿಯವರ ಆರೋಗ್ಯದ ಮೇಲೆ ನಿಗಾ ವಹಿಸಿತ್ತು.

  • ಸರಣಿ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ದೊಡ್ಡ ಮೊತ್ತದ ಬಹುಮಾನ: ಸೌರವ್ ಗಂಗೂಲಿ

    ಸರಣಿ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ದೊಡ್ಡ ಮೊತ್ತದ ಬಹುಮಾನ: ಸೌರವ್ ಗಂಗೂಲಿ

    – ಗೆಲುವಿನ ಮುಂದೆ ಬಹುಮಾನ ಶೂನ್ಯ ಎಂದ ದಾದಾ

    ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯಾಟದಲ್ಲಿ ಗೆಲ್ಲುವ ಮೂಲಕ ಭಾರತ ಸರಣಿ ವಶಪಡಿಸಿಕೊಂಡು ಸಂಭ್ರಮಿಸಿತ್ತು. ಈ ಖುಷಿಯ ನಡುವೆ ಸರಣಿ ಗೆದ್ದ ಭಾರತೀಯ ಆಟಗಾರರಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಂಪರ್ ಗಿಫ್ಟ್ ನೀಡಿದ್ದಾರೆ. 2-1 ಅಂತರದಲ್ಲಿ ಸರಣಿಗೆದ್ದ ಭಾರತ ತಂಡಕ್ಕೆ 5 ಕೋಟಿ ರೂಪಾಯಿ ಬೋನಸ್ ಆಗಿ ನೀಡಿರುವುದಾಗಿ ಗಂಗೂಲಿ ಟ್ವಿಟ್ಟರ್ ನ ಮೂಲಕ ತಿಳಿಸಿದ್ದಾರೆ.

    ಇದು ಭಾರತದ ಐತಿಹಾಸಿಕ ಗೆಲುವು ಆಸ್ಟ್ರೇಲಿಯಾ ನೆಲದಲ್ಲಿ ಅವರನ್ನೆ ಸೋಲಿಸಿ ಸರಣಿ ಗೆದ್ದಿರುವುದು ಭಾರತದ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ಎಂದಿಗೂ ಅಚ್ಚಳಿಯದೆ ಉಳಿಯಲಿದೆ. ಗೆಲುವಿನ ಕಾಣಿಕೆಯಾಗಿ 5 ಕೋಟಿ ಬೋನಸ್ ನೀಡುತ್ತಿದ್ದು, ಇದು ಈ ಗೆಲುವಿನ ಮುಂದೆ ಶೂನ್ಯವಾಗಿದೆ. ಆಸ್ಟ್ರೇಲಿಯಾ ಸರಣಿಗೆ ಪ್ರವಾಸ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಉತ್ತಮವಾಗಿ ಆಡಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.

    ಕೆಲ ದಿನಗಳ ಹಿಂದೆ ಸಂಭವಿಸಿದ್ದ ಲಘು ಹೃದಯಾಘಾತದಿಂದ ಚೇತರಿಸಿಕೊಂಡು ಮನೆಯಲ್ಲೇ ಕುಳಿತು ವಿಶ್ರಾಂತಿ ಪಡೆಯುತ್ತಿದ್ದಾರೆ. ಡಾಕ್ಟರ್‍ಗಳ ಸೂಚನೆಯಂತೆ ಅಂಜಿಯೋಪ್ಲ್ಯಾಸ್ಟಿ ಟೆಸ್ಟ್ ಮಾಡಿದ ಬಳಿಕ ಆಸ್ಪತ್ರೆಯಿಂದ ಮನೆಗೆ ಬಂದಿರುವ ಗಂಗೂಲಿ ಟ್ವೀಟ್ ಮೂಲಕ ಭಾರತೀಯ ಆಟಗಾರರಿಗೆ ಶುಭ ಕೋರಿದ್ದಾರೆ.

    ಭಾರತದ ವಿಜಯದ ಬಳಿಕ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಬಿಸಿಸಿಐ 5 ಕೋಟಿ ಬೋನಸ್ ಬಹುಮಾನವನ್ನು ಘೋಷಿಸುತ್ತಿದೆ. ಇದು ಭಾರತ ಕ್ರಿಕೆಟ್‍ಗೆ ಸಿಕ್ಕ ವಿಶೇಷ ಗೌರವ. ಇದು ನಿಮ್ಮ ಪಾತ್ರ ಮತ್ತು ಆಟದ ಬದ್ಧತೆಗೆ ಸಿಕ್ಕ ಜಯ ಎಂದಿದ್ದಾರೆ.

    ಭಾರತ ತಂಡ ಐತಿಹಾಸಿಕ ಗೆಲುವು ದಾಖಲಿಸುತ್ತಿದ್ದಂತೆ ಪ್ರಧಾನಿ ಮೋದಿ, ಸಹಿತ ಹಲವು ಹಿರಿಯ ಕ್ರಿಕೆಟ್ ಆಟಗಾರರು ತಂಡದ ಗೆಲುವನ್ನು ಟ್ವಿಟ್ಟರ್ ನಲ್ಲಿ ಶ್ಲಾಘಿಸಿದ್ದಾರೆ.

  • ಬಾಲ್ಯದ ಗೆಳೆಯರೊಂದಿಗೆ ಧೋನಿ ಎಂಜಾಯ್

    ಬಾಲ್ಯದ ಗೆಳೆಯರೊಂದಿಗೆ ಧೋನಿ ಎಂಜಾಯ್

    – ನಾಗ್ಪುರ ಪಂದ್ಯದಲ್ಲಿ ಧೋನಿ ಜಪ ಮಾಡಿದ ಅಭಿಮಾನಿಗಳು

    ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ಕುರಿತ ವರದಿಗಳು ಅಭಿಮಾನಿಗಳಲ್ಲಿ ಗೊಂದಲವನ್ನು ಮೂಡಿಸಿದ್ದು, ಇತ್ತ ಧೋನಿ ಮಾತ್ರ ತವರು ರಾಂಚಿಯಲ್ಲಿ ಬಾಲ್ಯದ ಗೆಳೆಯರೊಂದಿಗೆ ಸಮಯ ಕಳೆಯುತ್ತಿದ್ದಾರೆ.

    ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಳಿಕ ಸತತ 4 ತಿಂಗಳಿನಿಂದ ವಿಶ್ರಾಂತಿ ಪಡೆದಿರುವ ಧೋನಿ, ತಮ್ಮ ಕ್ರಿಕೆಟ್ ಭವಿಷ್ಯ ಕುರಿತು ಯಾವುದೇ ಸ್ಪಷ್ಟನೆ ನೀಡಿಲ್ಲ. ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಅಧಿಕಾರ ವಹಿಸಿಕೊಂಡ ಬಳಿಕ ಈ ಕುರಿತು ಸ್ಪಷ್ಟನೆ ಲಭಿಸಲಿದೆ ಎಂಬ ಭಾವನೆಯನ್ನು ಅಭಿಮಾನಿಗಳು ಹೊಂದಿದ್ದರು. ಆದರೆ ನಿವೃತ್ತಿ ಎಂಬುವುದು ಆಟಗಾರರ ವೈಯಕ್ತಿಕ ಅಭಿಪ್ರಾಯ ಎಂದು ಹೇಳುವ ಮೂಲಕ ಗಂಗೂಲಿ ಕೂಡ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳಲಿಲ್ಲ.

     

    View this post on Instagram

     

    Happy Birthday Chittu Bhaiya ???? #SeemantLohani

    A post shared by MS Dhoni 7781 | Mahi7781 ???????? (@msdhoni.7781) on

    ಅಭಿಮಾನಿಗಳಲ್ಲಿ ಧೋನಿ ಕಮ್ ಬ್ಯಾಕ್ ಕುರಿತ ಗೊಂದಲ ಹೆಚ್ಚಾಗುತ್ತಿದ್ದು, ಆದರೆ ಧೋನಿ ಮಾತ್ರ ತಮ್ಮ ಗೆಳೆಯರೊಂದಿಗೆ ಸಮಯ ಕಳೆಯುತ್ತಿದ್ದಾರೆ. ರಾಂಚಿಗೆ ಸಮೀಪವಿರುವ ಫಾರ್ಮ್ ಹೌಸ್‍ನಲ್ಲಿ ಧೋನಿರ ಬಾಲ್ಯದ ಗೆಳೆಯನ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋಗಳಿಗೆ ಪ್ರತಿಕ್ರಿಯೆ ನೀಡಿರುವ ಅಭಿಮಾನಿಗಳು, ನಿವೃತ್ತಿಯ ಕುರಿತು ಎಷ್ಟೇ ಟೀಕೆಗಳು ಕೇಳಿ ಬಂದರು ನೀವು ತಾಳ್ಮೆಯಿಂದ ಇದ್ದೀರಿ. ಈ ನಿಮ್ಮ ಗುಣವೇ ಎಲ್ಲರಿಗೂ ಇಷ್ಟ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಧೋನಿ ಮುಂದಿನ ಟಿ20 ವಿಶ್ವಕಪ್ ಟೂರ್ನಿಗೆ ತಂಡದಲ್ಲಿರುವುದು ಲಾಭವಾಗಲಿದೆ ಎಂದು ಹಲವು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

    https://twitter.com/barainishant/status/1193823683145609216?

    ಇತ್ತ ಭಾನುವಾರ ನಡೆದ ಬಾಂಗ್ಲಾ ದೇಶದ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತೊಮ್ಮೆ ಡಿಆರ್ ಎಸ್ ಮನವಿ ಪಡೆದು ವಿಫಲರಾಗಿದ್ದ ಪರಿಣಾಮ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಟ್ರೋಲ್ ಆಗಿದ್ದಾರೆ. ಅಲ್ಲದೇ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಧೋನಿ ಧೋನಿ ಎಂದು ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    https://twitter.com/8pareek26/status/1193579004768522240

  • ಗಂಗೂಲಿ ಮೈದಾನದಲ್ಲಿ ಹೇಗಿರುತ್ತಾರೆ: ಸೆಹ್ವಾಗ್ ಶುಭಾಶಯಕ್ಕೆ ಮನಸೋತ ಅಭಿಮಾನಿಗಳು

    ಗಂಗೂಲಿ ಮೈದಾನದಲ್ಲಿ ಹೇಗಿರುತ್ತಾರೆ: ಸೆಹ್ವಾಗ್ ಶುಭಾಶಯಕ್ಕೆ ಮನಸೋತ ಅಭಿಮಾನಿಗಳು

    ಬೆಂಗಳೂರು: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು 46ನೇ ಹುಟ್ಟುಹಬ್ಬವನ್ನು ಇಂದು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಹ್ವಾಗ್ ದಾದಾ ಬ್ಯಾಟಿಂಗ್ ವರ್ಣಿಸಿ ಮಾಡಿದ ಟ್ವೀಟ್‍ಗೆ ನೆಟ್ಟಿಗರು ಮನಸೋತಿದ್ದಾರೆ.

    ಗಂಗೂಲಿ ಮೈದಾನದಲ್ಲಿ ಹೇಗಿರುತ್ತಾರೆ ಎನ್ನುವುದಕ್ಕೆ ಸೆಹ್ವಾಗ್ 4 ಹಂತ ಮತ್ತು 4 ಫೋಟೋದಲ್ಲಿ ವಿವರಿಸಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟನ್ನು 8 ಸಾವಿರ ಮಂದಿ ರೀ ಟ್ವೀಟ್ ಮಾಡಿದ್ದರೆ, 39 ಸಾವಿರಕ್ಕೂ ಅಧಿಕ ಮಂದಿ ರೀ ಟ್ವೀಟ್ ಮಾಡಿದ್ದಾರೆ.

    ಟ್ವೀಟ್ ನಲ್ಲಿ ಏನಿತ್ತು?
    ಸ್ಟೆಪ್ 1: ಎಚ್ಚೆತ್ತುಕೊಳ್ಳುವುದು, ಎರಡು ಬಾರಿ ಕಣ್ಣು ಮಿಟುಕಿಸುವುದು ಮತ್ತು ಟ್ರಾಕ್ ನಲ್ಲಿ ಕುಣಿಯುದು.
    ಸ್ಟೆಪ್ 2: ಎದುರಾಳಿ ಬೌಲರ್ ಅಲ್ಲದೇ ಗ್ಯಾಲರಿಯಲ್ಲಿ ಕುಳಿತ ಪ್ರೇಕ್ಷಕರನ್ನು ಚಚ್ಚುವುದು (ಉದ್ದೇಶಪೂರ್ವಕವಾಗಿ ಅಲ್ಲ)
    ಸ್ಟೆಪ್ 3: ಚೆಂಡನ್ನಷ್ಟೇ ಅಲ್ಲದೇ ಕೂದಲನ್ನು ತಿರುಗಿಸುತ್ತ ಹೃದಯದಿಂದ ಬೌಲಿಂಗ್ ಮಾಡುವುದು.
    ಸ್ಟೆಪ್ 4: ಯಾರು ನನ್ನನ್ನು ನೋಡುತ್ತಿಲ್ಲ ಎಂದು ಭಾವಿಸಿ ಮನಸ್ಫೂರ್ತಿಯಾಗಿ ಸಂಭ್ರಮಿಸುವ ಅದ್ಭುತ ಮನುಷ್ಯ ಎಂದು ಸೆಹ್ವಾಗ್ ಬರೆದಿದ್ದಾರೆ.

    ಈ ಟ್ವೀಟ್ ಗೆ ಪೂರಕವಾಗಿ ನಾಲ್ಕು ಫೋಟೋಗಳನ್ನು ಸೆಹ್ವಾಗ್ ಅಪ್ಲೋಡ್ ಮಾಡಿದ್ದಾರೆ. 1999ರ ಇಂಗ್ಲೆಂಡಿನಲ್ಲಿ ನಡೆದ ವಿಶ್ವಕಪ್ ನಲ್ಲಿ ಗಂಗೂಲಿ ಬ್ಯಾಟಿಂಗ್ ಮಾಡುತ್ತಿರುವ ಫೋಟೋ ಹಾಕಿದ್ದಾರೆ. ವಿಶೇಷ ಏನೆಂದರೆ ಈ ವಿಶ್ವಕಪ್ ನಲ್ಲಿ ಗಂಗೂಲಿ ಶ್ರೀಲಂಕಾ ವಿರುದ್ಧ ಜೀವನಶ್ರೇಷ್ಠ 183 ರನ್ ಗಳಿಸಿದ್ದರು. ಎರಡನೇ ಫೋಟೋದಲ್ಲಿ ಗಾಯಗೊಂಡ ಅಭಿಮಾನಿಯ ಚಿತ್ರವನ್ನು ಹಾಕಿದರೆ ಮೂರನೇಯದಾಗಿ ಗಂಗೂಲಿ ಬಾಲಿಂಗ್ ಮಾಡುವ ಚಿತ್ರ ಹಾಕಿದ್ದಾರೆ. ಕೊನೆಯದಾಗಿ ಇಂಗ್ಲೆಂಡ್ ವಿರುದ್ಧ ಭಾರತ ನ್ಯಾಟ್‍ವೆಸ್ಟ್ ಸರಣಿ ಗೆದ್ದ ಹಿನ್ನೆಲೆಯಲ್ಲಿ ಶರ್ಟ್ ಬಿಚ್ಚಿ ಸಂಭ್ರಮಿಸಿದ ಫೋಟೋವನ್ನು ಅಪ್ಲೋಡ್ ಮಾಡಿ ವಿಶೇಷವಾಗಿ ಸೆಹ್ವಾಗ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ: ಗಂಗೂಲಿ ಶರ್ಟ್ ಬಿಚ್ಚಿ ಸಂಭ್ರಮಿಸಿದ್ದು ಯಾಕೆ?

  • ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಯೋ-ಯೋ ಟೆಸ್ಟ್ ಮಾನದಂಡವಾಗಬಾರದು: ಕಪಿಲ್ ದೇವ್

    ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಯೋ-ಯೋ ಟೆಸ್ಟ್ ಮಾನದಂಡವಾಗಬಾರದು: ಕಪಿಲ್ ದೇವ್

    ಮುಂಬೈ: ಟೀಂ ಇಂಡಿಯಾ ತಂಡಕ್ಕೆ ಆಯ್ಕೆ ಆಗಲು ಕಡ್ಡಾಯ ಪಡಿಸಿರುವ ಯೋ-ಯೋ ಟೆಸ್ಟ್ ಕುರಿತು ಹಲವರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಸಹ ಯೋಯೋ ಟೆಸ್ಟ್ ವಿರುದ್ಧ ಹೇಳಿಕೆ ನೀಡಿದ್ದಾರೆ.

    ಖಾಸಗಿ ಮಾಧ್ಯಮ ಕಾರ್ಯಕ್ರಮದಲ್ಲಿ ಕಪಿಲ್ ದೇವ್ ಅವರಿಗೆ ಎದುರಾದ ಯೋ-ಯೋ ಟೆಸ್ಟ್ ಕುರಿತು ಪ್ರಶ್ನೆಗೆ ಉತ್ತರಿಸಿ, ಯಾವುದೇ ಒಬ್ಬ ಆಟಗಾರ ಫಿಟ್ ಆಗಿದ್ದರಾ ಎಂಬುವುದು ಅವರು ಆನ್ ಫೀಲ್ಡ್ ನಲ್ಲಿ ನೀಡುವ ಪ್ರದರ್ಶನದ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಯೋ-ಯೋ ಫಿಟ್ ನೆಸ್ ಟೆಸ್ಟ್ ಬೌಲರ್ ಗಳ ಪಾಲಿಗೆ ಸಲುಭವಾಗಿದ್ದು, ಬ್ಯಾಟ್ಸ್ ಮನ್ ಪಾಲಿಗೆ ಕಠಿಣ ವಾಗಿದೆ. ಕೇವಲ ಈ ಪರೀಕ್ಷೆ ಒಂದರಿಂದಲೇ ಆಟಗಾರರ ಸಾಮರ್ಥ್ಯವನ್ನು ಅಳೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಇದೇ ವೇಳೆ ಟೀಂ ಇಂಡಿಯಾ ಮಾಜಿ ಆಟಗಾರರು ಯಾರು ಈ ಟೆಸ್ಟ್ ಪೂರ್ಣಗೊಳಿಸಲು ಸಾಧ್ಯ ಎಂಬ ಪ್ರಶ್ನೆಗೆ ಉತ್ತರಿಸಿ, ಸುನೀಲ್ ಗವಾಸ್ಕರ್ 15 ನಿಮಿಷಕ್ಕಿಂತ ಹೆಚ್ಚು ಸಮಯ ರನ್ ಮಾಡಲು ಬಯಸುವುದಿಲ್ಲ. ಆದರೆ 3 ದಿನಗಳು ಮೈದಾನದಲ್ಲಿ ಬ್ಯಾಟ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಲ್ಲದೇ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್, ಸೌರವ್ ಗಂಗೂಲಿ ಸಹ ಯೋಯೋ ಟೆಸ್ಟ್ ಪೂರ್ಣಗೊಳಿಸಲು ವಿಫಲರಾಗಬಹುದು ಎಂದು ಹೇಳಿದ್ದಾರೆ.

    ಫುಟ್‍ಬಾಲ್ ದಂತಕತೆ ಅರ್ಜೆಂಟೀನಾದ ಡಿಯಾಗೋ ಮರಡೋನಾ ವೇಗವಾಗಿ ಓಡುಲಾರರು. ಆದರೆ ಆಟದ ವೇಳೆ ಬಾಲ್ ಸಿಕ್ಕರೆ ವೇಗವಾಗಿ ಓಡುತ್ತಾರೆ ಎಂದು ಉದಹಾರಣೆ ನೀಡಿ ತನ್ನ ವಾದವನ್ನು ಸಮರ್ಥಿಸಿಕೊಂಡರು.

    ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೂರ್ನಿಗೆ ಟೀಂ ಇಂಡಿಯಾ ತಂಡದಿಂದ ಅಂಬಟಿ ರಾಯುಡು ಯೋಯೋ ಟೆಸ್ಟ್ ಫೈಲ್ ಆದ ಬಳಿಕ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ. ಇಂಗ್ಲೆಂಡ್ ವಿರುದ್ಧದ ಟೂರ್ನಿಗೆ ಅಂಬಟಿ ರಾಯುಡು ಸ್ಥಾನದಲ್ಲಿ ಸುರೇಶ್ ರೈನಾರನ್ನು ಆಯ್ಕೆ ಮಾಡಲಾಗಿತ್ತು.

    ಏನಿದು ಯೋ ಯೋ ಫಿಟ್‍ನೆಸ್ ಟೆಸ್ಟ್:
    ಕ್ರಮಬದ್ಧ ಹಾಗೂ ವೇಗವಾಗಿ ಓಡುವ ಮೂಲಕ ತಮ್ಮ ದೈಹಿಕ ಸಾಮಥ್ರ್ಯ ವನ್ನು ಈ ಪರೀಕ್ಷೆಯಲ್ಲಿ ಆಟಗಾರ ತೋರಿಸಬೇಕಾಗುತ್ತದೆ. ಯೋ-ಯೋ ಫಿಟ್‍ನೆಸ್ 20 ಮೀ ಅಳತೆಯಲ್ಲಿ ಎರಡು ಕೋನ್ ಗಳನ್ನು ನೇರವಾಗಿ ಇರಿಸಲಾಗಿರುತ್ತದೆ. ಆಟಗಾರ ಒಂದು ಲೈನ್ ನಿಂದ ಓಟವನ್ನು ಆರಂಭಿಸಬೇಕು. ಎರಡೂ ಲೈನ್ ನಲ್ಲಿಟ್ಟ ಕೋನ್ ಗಳನ್ನು ಬೀಪ್ ಧ್ವನಿ ಅನುಸರಿಸಿ ಸುತ್ತಬೇಕು. ಒಟ್ಟಾರೆ ಮೂರು ಬೀಪ್ ಧ್ವನಿ ಒಳಗಾಗಿ ಸುತ್ತಬೇಕು. ಈ ಬೀಪ್ ಸ್ಟಾರ್ಟ್, ಟರ್ನ್ ಹಾಗೂ ಫಿನಿಶ್ ಸೂಚನೆಯಾಗಿರುತ್ತದೆ. ಪ್ರತೀ ಬಾರಿ ಸುತ್ತಿದಾಗಲೂ ಬೀಪ್ ಧ್ವನಿಯ ಅಂತರ ಕಡಿಮೆಯಾಗುತ್ತ ಹೋಗುತ್ತದೆ. 2 ಬಾರಿ ಬೀಪ್ ಸಮಯದೊಳಗೆ 40 ಮೀ ಕ್ರಮಿಸಲಾಗದೇ ಹೋದರೆ ಪರೀಕ್ಷೆ ಮುಕ್ತಾಯಗೊಳ್ಳುತ್ತದೆ. ಲ್ಯಾಪ್ಸ್ ಹಾಗೂ ಓಟದ ವೇಗ ಆಧರಿಸಿ ಅಂಕ ನೀಡಿ ಆಯ್ಕೆ ಮಾಡಲಾಗುತ್ತದೆ.

     

  • ಗಂಗೂಲಿಗೆ ಚಾಪೆಲ್ ಸಂಚನ್ನು ಮೊದಲು ತಿಳಿಸಿದ ವ್ಯಕ್ತಿ ನಾನು: ಸೆಹ್ವಾಗ್

    ಗಂಗೂಲಿಗೆ ಚಾಪೆಲ್ ಸಂಚನ್ನು ಮೊದಲು ತಿಳಿಸಿದ ವ್ಯಕ್ತಿ ನಾನು: ಸೆಹ್ವಾಗ್

    ಕೋಲ್ಕತ್ತಾ: ಮಾಜಿ ಕೋಚ್ ಗ್ರೇಗ್ ಚಾಪೆಲ್ ಅವರ ಸಂಚಿನ ವಿಚಾರವನ್ನು ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ತಿಳಿಸಿದ ಮೊದಲ ವ್ಯಕ್ತಿ ನಾನು ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

    ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2005ರ ಜಿಂಬಾಬ್ವೆ ಪ್ರವಾಸದಲ್ಲಿ ಪಂದ್ಯದ ವೇಳೆ ಹೊಟ್ಟೆನೋವು ಬಂದಿತ್ತು. ಹೀಗಾಗಿ 5 ಓವರ್ ಕಾಲ ನನಗೆ ಬ್ರೇಕ್ ಬೇಕು ಎಂದು ಅಂಪೈರ್ ಗೆ ತಿಳಿಸಿದ್ದೆ. ಬ್ರೇಕ್ ಪಡೆದು ಪೆವಿಲಿಯನ್ ಗೆ ತೆರಳಿದ್ದಾಗ ನನ್ನ ಮುಂದೆ ಚಾಪೆಲ್ ಕುಳಿತ್ತಿದ್ದರು. ಈ ವೇಳೆ ಚಾಪೆಲ್ ಅನುಮಾನಾಸ್ಪದವಾಗಿ ಏನೋ ಬರೆದು ಬಿಸಿಸಿಐಗೆ ಮೇಲ್ ಮಾಡಿದ್ದನ್ನು ಗಮನಿಸಿದೆ. ಕೂಡಲೇ ಈ ವಿಚಾರವನ್ನು ನಾನು ಗಂಗೂಲಿಗೆ ತಿಳಿಸಿದೆ. ಮಹತ್ವದ ವಿಚಾರದ ಬಗ್ಗೆ ಚಾಪೆಲ್ ಮೇಲ್ ಮಾಡಿದ್ದಾರೆ ಎಂದು ಗಂಗೂಲಿ ಅವರಲ್ಲಿ ಹೇಳಿದ್ದೆ ಎಂದು ಅಂದಿನ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

    ಗಂಗೂಲಿ ಮತ್ತು ಮಾಜಿ ಕೋಚ್ ಜಾನ್ ರೈಟ್ ನನ್ನನ್ನು ಆರಂಭಿಕ ಬ್ಯಾಟ್ಸ್ ಮನ್ ಆಗಿ ಕಣಕ್ಕೆ ಇಳಿಸಿದ್ದನ್ನು ಹೇಳಿಕೊಂಡ ಸೆಹ್ವಾಗ್, ನನ್ನ ಯಾಕೆ ಓಪನಿಂಗ್ ಬ್ಯಾಟ್ಸ್ ಮನ್ ಆಗಿ ಕಳುಹಿಸುತ್ತಿದ್ದೀರಿ ಎಂದು ಗಂಗೂಲಿ ಅವರನ್ನು ಕೇಳಿದ್ದೆ. ಅದಕ್ಕೆ ಅವರು, ನಿನ್ನಲ್ಲಿ ಸಾಮರ್ಥ್ಯವಿದೆ ಎಂದು ಉತ್ತರಿಸಿದರು. ಈ ಉತ್ತರ ಬಂದ ಕೂಡಲೇ ನಾನು, 1998ರಿಂದ ನೀವು ಆರಂಭಿಕ ಆಟಗಾರರಾಗಿ ಕಣಕ್ಕೆ ಇಳಿಯುತ್ತಿದ್ದೀರಿ. ನಾನು ಮಧ್ಯಮ ಕ್ರಮಾಂಕದಲ್ಲಿ ಬರುತ್ತೇನೆ. ಯಾಕೆ ನೀವು ಸಚಿನ್ ಜೊತೆಗೆ ಇಳಿಯಬಾರದು ಎಂದು ಮರು ಪ್ರಶ್ನೆ ಹಾಕಿದೆ.

    ಈ ಪ್ರಶ್ನೆಗೆ ಜಾಸ್ತಿ ನನ್ನಲ್ಲಿ ಪ್ರಶ್ನೆ ಕೇಳಬೇಡ. ಆರಂಭಿಕ ಆಟಗಾರನಾಗಿ ಇಳಿಯುವುದಿದ್ದರೆ ಇಳಿ. ಒಂದು ವೇಳೆ ಸಾಧ್ಯವಾಗದೇ ಇದ್ದರೆ ಬೆಂಚ್ ಮೇಲೆ ಕುಳಿತಿಕೋ ಎಂದು ಖಡಕ್ ಆಗಿ ಗಂಗೂಲಿ ಹೇಳಿದರು. ಇದಕ್ಕೆ ನಾನು ಅವರಲ್ಲಿ, ಒಂದು ವೇಳೆ ಮೊದಲ ಆಟಗಾರನಾಗಿ ಇಳಿದು ವೈಫಲ್ಯಗೊಂಡರೆ ಮಧ್ಯಮ ಕ್ರಮಾಂಕದಲ್ಲಿ ಕಳುಹಿಸಬೇಕು ಎಂದು ಕೇಳಿಕೊಂಡಿದ್ದೆ. ನನ್ನ ಭರವಸೆಯನ್ನು ದಾದಾ ಒಪ್ಪಿಕೊಂಡರು. ನಂತರ ನಾನು ಕೋಚ್ ಜಾನ್ ರೈಟ್ ಬಳಿ ತೆರಳಿ ಗಂಗೂಲಿ ಅವರ ಆಸೆಯನ್ನು ನಾನು ಈಡೇರಿಸುತ್ತೇನೆ ಎಂದು ತಿಳಿಸಿದೆ ಎಂಬುದಾಗಿ ಸೆಹ್ವಾಗ್ ವಿವರಿಸಿದರು.

    ಇಂಗ್ಲೆಂಡ್ ವಿರುದ್ಧ ನಾನು ಮೊದಲ ಪಂದ್ಯವನ್ನು ಆಡಿದ್ದು 84 ರನ್ ಗಳಿಸಿ ಔಟಾಗಿದ್ದೆ. ಇದಾದ ನಂತರ ಸಚಿನ್, ಗಂಗೂಲಿ, ದ್ರಾವಿಡ್ ನನ್ನನ್ನು `ಸ್ಟುಪಿಡ್’ ಎಂದು ಕರೆದರು. ಯಾಕೆ ಈ ರೀತಿ ಕರೆದಿದ್ದು ಎಂದು ಕೇಳಿದ್ದಕ್ಕೆ ಅವರು, ಲಾರ್ಡ್ಸ್ ಮೈದಾನದಲ್ಲಿ ಯಾರೂ ಮೊದಲ ಪಂದ್ಯದಲ್ಲಿ ಶತಕ ಹೊಡೆದಿರಲಿಲ್ಲ. ಆ ಸುವರ್ಣ ಅವಕಾಶವನ್ನು ನೀನು ಕಳೆದುಕೊಂಡಿದ್ದಿ ಎಂದು ತಿಳಿಸಿದರು. ಅದಕ್ಕೆ ನಾನು, ಕನಿಷ್ಟ ಪಕ್ಷ 84 ರನ್ ಹೊಡೆದಿದ್ದಕ್ಕೆ ನನಗೆ ಸಂಪೂರ್ಣ ತೃಪ್ತಿ ಸಿಕ್ಕಿದೆ ಎಂದು ಅಂದು ನಾನು ಹೇಳಿದ್ದೆ ಎಂದು ತಿಳಿಸಿದರು.

    2005 ರಿಂದ 2007ರವರೆಗೆ ಚಾಪೆಲ್ ಟೀಂ ಇಂಡಿಯಾದ ಕೋಚ್ ಆಗಿ ನೇಮಕವಾಗಿದ್ದರು. ಜಿಂಬಾಬ್ವೆ ಪ್ರವಾಸದಲ್ಲೇ ಸೌರವ್ ಗಂಗೂಲಿ ಅವರನ್ನು ತಂಡದಿಂದ ಚಾಪೆಲ್ ಹೊರಹಾಕಿದ್ದರು. ಇವರ ಅವಧಿಯಲ್ಲಿ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂ ವಿಚಾರದಿಂದಲೇ ಹೆಚ್ಚು ಸುದ್ದಿಯಾಗುತಿತ್ತು. ಗಂಗೂಲಿ, ಸೆಹ್ವಾಗ್ ಅಲ್ಲದೇ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಜಹೀರ್ ಖಾನ್ ಸಹ ಚಾಪೆಲ್ ಹಲವು ವೇದಿಕೆಗಳಲ್ಲಿ ಚಾಪೆಲ್ ಅವರ ವಿರುದ್ಧ ಅಸಮಾಧಾವನ್ನು ವ್ಯಕ್ತಪಡಿಸಿದ್ದರು.

     

  • ಸೌರವ್ ಗಂಗೂಲಿ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ

    ಸೌರವ್ ಗಂಗೂಲಿ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ

    ಡರ್ಬನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

    ಡರ್ಬನ್ ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 6 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಶತಕವನ್ನು ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕರಾಗಿ ಹೆಚ್ಚು ಶತಕ ಗಳಿಸಿದ ಗಂಗೂಲಿ ಹೆಸರಿನಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಗುರುವಾರ ನಡೆದ ಪಂದ್ಯದಲ್ಲಿ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿಗಳ ನೆರವಿನಿಂದ 112 ರನ್ ಸಿಡಿಸಿದರು. ಈ ಮೂಲಕ ಕೊಹ್ಲಿ ಟೀಂ ಇಂಡಿಯಾ ನಾಯಕರಾಗಿ 11 ನೇ ಶತಕ ಗಳಿಸಿದರು, ವೃತ್ತಿ ಜೀವನದಲ್ಲಿ ತಮ್ಮ 33 ನೇ ಏಕದಿನ ಶತಕವನ್ನು ಪೂರೈಸಿದರು. ಈ ಹಿಂದೆ ಸೌರವ್ ಗಂಗೂಲಿ ಟೀಂ ಇಂಡಿಯಾ ನಾಯಕರಾಗಿ 11 ಶತಕಗಳನ್ನು ಸಿಡಿಸಿದರು.

    ಕೊಹ್ಲಿ ಕೇವಲ 44 ಪಂದ್ಯಗಳಲ್ಲಿ 11 ಶತಕಗಳನ್ನು ಸಿಡಿಸಿದರೆ, ಗಂಗೂಲಿ ಅವರು 146 ಪಂದ್ಯಗಳಲ್ಲಿ 38.79 ಸರಾಸರಿಯಲ್ಲಿ 5,082 ರನ್ ಗಳನ್ನು ಗಳಿಸುವ ಮೂಲಕ 11 ಶತಕ, 30 ಅರ್ಧ ಶತಕಗಳನ್ನು ಸಿಡಿಸಿದ ಸಾಧನೆ ಮಾಡಿದ್ದರು. ನಂತರದ ಸ್ಥಾನದಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಇದ್ದು, ತಲಾ 6 ಶತಕಗಳನ್ನು ಗಳಿಸಿದ್ದಾರೆ.

    ಕೊಹ್ಲಿ ಡರ್ಬನ್ ನಲ್ಲಿ ಶತಕ ಗಳಿಸುವ ಮೂಲಕ ಆಫ್ರಿಕಾದಲ್ಲಿ ತಮ್ಮ ಮೊದಲ ಶತಕವನ್ನು ಸಿಡಿಸಿದ್ರು. ಈ ಮೂಲಕ ಕೊಹ್ಲಿ ಆಡಿದ 9 ದೇಶಗಳಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದರು.

    ಈ ಹಿಂದೆ ಡರ್ಬನ್ ಮೈದಾನದಲ್ಲಿ ಆಡಿದ್ದ 07 ಪಂದ್ಯಗಳಲ್ಲಿ ಭಾರತ 06 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಉಳಿದ ಒಂದು ಪಂದ್ಯ ಫಲಿತಾಂಶ ಕಾಣದೆ ರದ್ದಾಗಿತ್ತು. ಮತ್ತೊಂದೆಡೆ ತನ್ನ ನೆಲದಲ್ಲಿ ಸತತ 17 ಏಕದಿನ ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದ ಹರಿಣಗಳಿಗೆ ಟೀಂ ಇಂಡಿಯಾ ಸೋಲಿನ ರುಚಿ ತೋರಿಸಿದೆ.

    06 ಏಕದಿನಗಳ ಸರಣಿಯ 2ನೇ ಪಂದ್ಯ ಸೆಂಚೂರಿಯನ್ ನ ಸೂಪರ್ ಸ್ಪೋಟ್ರ್ಸ್ ಪಾರ್ಕ್ ನಲ್ಲಿ ಭಾನುವಾರ ನಡೆಯಲಿದೆ.

     

  • ಧೋನಿಯ ಶ್ರೇಷ್ಠ ಆಟದ ಹಿಂದೆ ಸೌರವ್ ತ್ಯಾಗವಿದೆ: ಸೆಹ್ವಾಗ್

    ಧೋನಿಯ ಶ್ರೇಷ್ಠ ಆಟದ ಹಿಂದೆ ಸೌರವ್ ತ್ಯಾಗವಿದೆ: ಸೆಹ್ವಾಗ್

    ನವದೆಹಲಿ: ಸೌರವ್ ಗಂಗೂಲಿ ತ್ಯಾಗಮಾಡಿ ಅವಕಾಶ ನೀಡದೇ ಇದ್ದಲ್ಲಿ ಧೋನಿ ಕ್ರಿಕೆಟ್ ಜಗತ್ತಿನಲ್ಲಿ ಶ್ರೇಷ್ಠ ಆಟಗಾರನಾಗಿ ಹೊರ ಹೊಮ್ಮುತ್ತಿರಲಿಲ್ಲ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

    ಶನಿವಾರ ಖಾಸಗಿ ವಾಹಿನಿಯ ಸಂದರ್ಶನದ ವೇಳೆ ಮಾತನಾಡಿದ ಸೆಹ್ವಾಗ್, 2004ರಲ್ಲಿ ಸೌರವ್ ಗಂಗೂಲಿ ಭಾರತ ತಂಡದ ನಾಯಕರಾಗಿದ್ದ ವೇಳೆ ಧೋನಿ ಟೀಂ ಇಂಡಿಯಾಕ್ಕೆ ಸೇರಿದ್ದರು. ಒಂದೇ ವರ್ಷದಲ್ಲಿ ಧೋನಿ ಪಾಕಿಸ್ತಾನದ ವಿರುದ್ಧ 148 ಮತ್ತು ಶ್ರೀಲಂಕಾ ವಿರುದ್ಧ 183 ರನ್ ಬಾರಿಸಿ ಉತ್ತಮ ಪ್ರದರ್ಶನ ನೀಡಿದ್ದರು. ಅಂದು 3ನೇ ಕ್ರಮಾಂಕವನ್ನು ಸೌರವ್ ತ್ಯಾಗ ಮಾಡಿ ಅವಕಾಶ ನೀಡಿದ ಕಾರಣ ಧೋನಿ ಇಂದು ಶ್ರೇಷ್ಠ ಆಟಗಾರನಾಗಿ ಹೊರಹೊಮ್ಮಿದ್ದಾರೆ ಎಂದರು.

    ದಾದಾ ಯಾವಾಗಲೂ ಹೊಸತನ್ನ ಬಯಸುವ ನಾಯಕರಾಗಿದ್ದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ನಾನಾ ಬದಲಾವಣೆ ಮಾಡಿ ತಂಡದ ಗೆಲುವಿಗೆ ಶ್ರಮಿಸುತ್ತಿದ್ದರು. ನಾನು ಆರಂಭಿಕನಾಗಿ ಕ್ರೀಸ್‍ಗೆ ಇಳಿದರೆ ನಾಯಕರಾಗಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬರುತ್ತಿದ್ದರು. ಒಂದು ವೇಳೆ ಸ್ಕೋರ್ ಕಡಿಮೆ ಇದ್ದಾಗ ಪಿಂಚ್ ಹಿಟ್ಟರ್ ಇರ್ಫಾನ್ ಪಠಾಣ್ ಅಥವಾ ಧೋನಿಯನ್ನು ಕಣಕ್ಕಿಳಿಸಿ ಸ್ಕೋರ್ ಹೆಚ್ಚಿಸುವತ್ತ ಗಮನ ಹರಿಸುತ್ತಿದ್ದರು ಎಂದು ಅಂದಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

    http://www.youtube.com/watch?v=d3lNdHi5wyY

    ಭಾರತದ ಕೆಲವು ಶ್ರೇಷ್ಠ ನಾಯಕರಲ್ಲಿ ಸೌರವ್ ಗಂಗೂಲಿ ಕೂಡ ಒಬ್ಬರು. ಅಂತಹ ಶ್ರೇಷ್ಠ ನಾಯಕ ನನಗೆ ಆರಂಭಿಕನಾಗಿ ಕಣಕ್ಕಿಳಿಯುವ ಅವಕಾಶ ನೀಡುತ್ತಿದ್ದರು. ಅಲ್ಲದೇ ಮೂರು ನಾಲ್ಕು ಪಂದ್ಯಗಳಲ್ಲಿ 3ನೇ ಕ್ರಮಾಂಕದಲ್ಲಿ ಆಡಬೇಕಿದ್ದ ಸೌರವ್ ತ್ಯಾಗ ಮಾಡಿ ಧೋನಿಗೆ ಅವಕಾಶ ನೀಡಿದ್ದರು. ಯಾವಾಗಲೂ ಹೊಸಬರ ಮೇಲೆ ನಂಬಿಕೆ ಇಟ್ಟು ಪ್ರೋತ್ಸಾಹ ನೀಡುತ್ತಿದ್ದ ಸೌರವ್, ಧೋನಿಗೂ ಸಹ ಉತ್ತಮ ಅವಕಾಶ ನೀಡಿದ್ದರು ಎಂದು ತಿಳಿಸಿದರು.

    ದಾದಾ ನಂತರ ರಾಹುಲ್ ದ್ರಾವಿಡ್ ಸಮಯದಲ್ಲೂ ಕೂಡ ಧೋನಿ ಬೆಸ್ಟ್ ಫಿನಿಷರ್ ಆಗಿ ಹೊರಹೊಮ್ಮಿದರು. ಅಲ್ಲದೇ ಯುವರಾಜ್ ಮತ್ತು ಧೋನಿ ಜೊತೆಯಾಟವು ಒಂದು ಉತ್ತಮವಾಗಿತ್ತು ಎಂದು ಸೆಹ್ವಾಗ್ ಸ್ಮರಿಸಿದರು.