Tag: garbage truck

  • ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    – ಕೇಸ್‌ ದಾಖಲಾದ 20 ಗಂಟೆಯಲ್ಲೇ ಹಂತಕನ ಬಂಧನ

    ಬೆಂಗಳೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿಯನ್ನ ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು (Chennamanakere Police Station) ಬಂಧಿಸಿದ್ದಾರೆ.

    ಅಸ್ಸಾಂ (Assam) ಮೂಲದ ತಮ್ಸುದ್ದಿನ್ ಬಂಧಿತ ಆರೋಪಿ. ಕೊಲೆಯಾದ ಮಹಿಳೆ ನಿವಾಸಿ ಪುಷ್ಪಾ @ ಆಶಾ ಮತ್ತು ತಮ್ಸುದ್ದೀನ್‌ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದರು. ಇಬ್ಬರ ಭಿನ್ನಾಭಿಪ್ರಾಯ ಉಂಟಾಗಿತ್ತು, ಇದೇ ಕೊಲೆಗೆ ಕಾರಣ ಅನ್ನೋದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

    ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಘಟನೆ?
    ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿತ್ತು. ತಡರಾತ್ರಿ ಆಟೋದಲ್ಲಿ ಬಂದ ಹಂತಕ ಬಿಬಿಎಂಪಿ ಲಾರಿಯಲ್ಲಿ ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದ.

    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

  • ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    – ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್‌

    ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣಾ (Chennamanakere Police Station) ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮಹಿಳೆಯನ್ನು ಕೊಲೆ ಮಾಡಿದ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿದೆ. ತಡರಾತ್ರಿ ಆಟೋದಲ್ಲಿ ಬಂದ ಹಂತಕರು ಬಿಬಿಎಂಪಿ ಲಾರಿಯಲ್ಲಿ (BBMP garbage truck) ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದಾರೆ. ಸುಮಾರು 30-40 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿದೆ. ಈಕೆ ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದರು. ಇದೀಗ ಗಂಡನೇ ಕೊಲೆ ಮಾಡಿ, ಬಳಿಕ ಸಿ.ಕೆ ಅಚ್ಚುಕಟ್ಟು ಪ್ರದೇಶದಲ್ಲಿ ಮೃತದೇಹವನ್ನ ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬಿಬಿಎಂಪಿ ಕಸದ ಲಾರಿಯಲ್ಲಿತ್ತು ಮೃತದೇಹ
    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿದೆ. ಬಳಿಕ ಮೃತದೇಹ ಇರೋದು ಗೊತ್ತಾಗಿದೆ. ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿದೆ. ಇದನ್ನೂ ಓದಿ: ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಒಟ್ಟಾರೆ.. ಮಹಿಳೆಯನ್ನು ಬೇರೆಡೆ ಹತ್ಯೆ ಮಾಡಿ ಇಲ್ಲಿಗೆ ಮೃತದೇಹ ಎಸೆಯಲಾಯ್ತಾ ಅಥವಾ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಯ್ತಾ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

  • ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    – ಅತ್ಯಾಚಾರ ಶಂಕೆ, ಹಂತಕರಿಗಾಗಿ ಹುಡುಕಾಟ

    ಬೆಂಗಳೂರು: ನಗರದಲ್ಲಿ ಮಹಿಳೆಯ (woman) ಭಯಾನಕ ಹತ್ಯೆ ನಡೆದಿದ್ದು, ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಮಹಿಳೆಯನ್ನ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್​ ಆಗಿರುವಂತಹ ಘಟನೆ ಚನ್ನಮ್ಮನಕೆರೆ ಠಾಣಾ (Chennamanakere Police Station) ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯೂ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ.

    ನಿನ್ನೆ‌ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿ, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾನೆ. ಆಟೋದಲ್ಲಿ ಒಬ್ಬನೇ ವ್ಯಕ್ತಿ ಬಂದಿದ್ದ ಎಂದು ಹೇಳಲಾಗುತ್ತಿದೆ. 30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ (Women Dead Body) ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕರೆ ಅಚ್ಚುಕಟ್ಟು ಠಾಣೆಯ ಪೊಲೀಸರು (Chennamanakere Achukattu Police Station) ಕೊಲೆ ಹಂತಕರಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ನಿನ್ನೆ (ಶನಿವಾರ) ತಡರಾತ್ರಿ 1:40ರ ವೇಳೆಗೆ ವ್ಯಕ್ತಿಯೊಬ್ಬರು ಕಸ ಹಾಕಲು ಸ್ಕೇಟಿಂಗ್ ಗ್ರೌಂಡ್ (Skating Ground) ಬಳಿ ಬಂದಿದ್ದರು. ಈ ವೇಳೆ ಕಸದ ಗುಡ್ಡೆಯಲ್ಲಿದ್ದ ಚೀಲವೊಂದರಲ್ಲಿ ತಲೆಕೂದಲು ಕಾಣಿಸಿದೆ. ಚೀಲ ಬಿಚ್ಚಿ ನೋಡಿದಾಗ ಯುವತಿಯ ದೇಹ ಚೀಲದಲ್ಲಿರುವುದು ಗೊತ್ತಾಗಿದೆ. ತಕ್ಷಣವೇ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ್ದಾರೆ. ಈ ವೇಳೆ ಒಬ್ಬನೇ ವ್ಯಕ್ತಿ ಆಟೋದಲ್ಲಿ ಮೂಟೆ ಸಮೇತ ತಂದು ಬಿಸಾಡಿ ಹೋಗಿರುವುದು ಗೊತ್ತಾಗಿದೆ. ಸದ್ಯ ಪೊಲೀಸರು ಮೃತಪಟ್ಟಿರೋದು 25-30ನೇ ವಯಸ್ಸಿನ ಯುವತಿ ಅಂತ ಅಂದಾಜಿಸಿದ್ದಾರೆ.

    ಮೃತ ಯುವತಿ ಅರ್ಬನ್ ಕಂಪನಿ ಟಿ ಶರ್ಟ್ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. ಯುವತಿ ದೇಹದ ಮೇಲೆ ಒಳ ಉಡುಪುಗಳು ಇರಲಿಲ್ಲವಾದ್ದರಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

  • ಕಸದ ವಾಹನಗಳ ಮೇಲೆ BBMP ನಾಮಫಲಕ ಹಾಕುವಂತಿಲ್ಲ – ಹೆಸರು ಹಾಕಿದ ವಾಹನಗಳ ಮೇಲೆ ಕ್ರಿಮಿನಲ್ ಕೇಸ್

    ಕಸದ ವಾಹನಗಳ ಮೇಲೆ BBMP ನಾಮಫಲಕ ಹಾಕುವಂತಿಲ್ಲ – ಹೆಸರು ಹಾಕಿದ ವಾಹನಗಳ ಮೇಲೆ ಕ್ರಿಮಿನಲ್ ಕೇಸ್

    ಬೆಂಗಳೂರು: ನಗರ ಪ್ರದೇಶದಲ್ಲಿ ಪದೇ ಪದೇ ಕಸದ ಲಾರಿಗಳು ಮಾಡುತ್ತಿರುವ ಅಪಘಾತಗಳಿಂದ ಮುಜುಗರಕ್ಕೀಡಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಸಮಸ್ಯೆಯಿಂದ ಪಾರಾಗಲು ಹೊಸ ತಂತ್ರ ರೂಪಿಸಿದೆ.

    ಕಸದ ವಾಹನಗಳಿಗೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಪಾಲಿಕೆ ವ್ಯಾಪ್ತಿಯ ಕಸದ ವಾಹನಗಳ ಮೇಲೆ ಬಿಬಿಎಂಪಿ ನಾಮಫಲಕ ಹಾಕುವಂತಿಲ್ಲ. ಗುತ್ತಿಗೆದಾರರ ಮೂಲಕ ಸರಬರಾಜು ಮಾಡಲಾದ ಎಲ್ಲ ವಾಹನಗಳಿಗೂ ಆದೇಶ ಅನ್ವಯವಾಗಲಿದೆ. ಒಂದೊಮ್ಮೆ ಸದರಿ ಕಸದ ವಾಹನಗಳಿಂದ ಅಪಘಾತ ಸಂಭವಿಸಿ ಸಾವು ನೋವಾದರೆ, ದಂಡದ ರೂಪದಲ್ಲಿ ಆ ವಾಹನ ಮಾಲೀಕರೇ ಪರಿಹಾರ ನೀಡಬೇಕು ಎಂದು ಬಿಬಿಎಂಪಿ ಘನತ್ಯಾಜ್ಯ ವಿಶೇಷ ಆಯುಕ್ತ ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮಂಗಳವಾರ BBMP ಚುನಾವಣಾ ಭವಿಷ್ಯ ನಿರ್ಧಾರ?

    ಪಾಲಿಕೆಗೆ ಸಂಬಂಧಿಸದ ಅನಾಮಧೇಯ ವಾಹನಗಳ ಮೇಲೆ ಪಾಲಿಕೆಯ ಸೇವೆಯಲ್ಲಿ, ಬಿಬಿಎಂಪಿ, ಬಿಬಿಎಂಪಿ ಸೇವೆಯಲ್ಲಿ ಎಂಬ ನಾಮಫಲಕವನ್ನು ಹಾಕಿದ್ದಲ್ಲಿ ಅಂತಹ ವಾಹನಗಳ ಚಾಲಕರ ಮೇಲೆ ಮತ್ತು ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದೆ.

    ಆದೇಶದಲ್ಲಿ ಏನಿದೆ:
    ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ಆಟೋ, ಟಿಪ್ಪರ್, ಕಾಂಪ್ಯಾಕ್ಟರ್‌ಗಳ ಮೇಲೆ ಪಾಲಿಕೆ ಹೆಸರು ಹಾಕುವಂತಿಲ್ಲ. ಗುತ್ತಿಗೆದಾರರ ಮೂಲಕ ಸರಬರಾಜು ಮಾಡಲಾದ ಎಲ್ಲಾ ಆಟೋ, ಟಿಪ್ಪರ್, ಕಾಂಪ್ಯಾಕ್ಟರ್‌ಗಳಿಗೂ ಅನ್ವಯ. ಪಾಲಿಕೆಯ ಸೇವೆಯಲ್ಲಿ, ಬಿಬಿಎಂಪಿ, ಬಿಬಿಎಂಪಿ ಸೇವೆಯಲ್ಲಿ ಎಂದು ನಮೂದಿಸುವಂತಿಲ್ಲ. ಪಾಲಿಕೆ ಹೆಸರು ಹಾಕಿದ್ದಲ್ಲಿ ಅಂತಹ ವಾಹನ, ಮಾಲೀಕರ ಮೇಲೆ ಕ್ರಿಮಿನಲ್ ಕೇಸ್. ಎಲ್ಲಾ ಚಾಲಕರ ಡಿಎಲ್, ದೈಹಿಕ ಸಧೃಡತೆಯ ಪ್ರಮಾಣಪತ್ರ, ಫಿಟ್ನೆಸ್ ಪ್ರಮಾಣಪತ್ರ ಕಡ್ಡಾಯ. ಇನ್ಶುರೆನ್ಸ್ ಪ್ರಮಾಣ ಪತ್ರಗಳ ತಪಾಸಣೆ ಕೂಡ ಕಡ್ಡಾಯ ಮಾಡಲಾಗಿದೆ. ಅನಧಿಕೃತವಾಗಿ ಪಾಲಿಕೆಯ ಹೆಸರನ್ನು ನಮೂದಿಸಿರುವ ನಾಮಫಲಕ ತೆಗೆಸುವುದು ವಲಯ ಮತ್ತು ವಾರ್ಡ್ ಮಾರ್ಷಲ್ಸ್, ಕಿರಿಯ ಆರೋಗ್ಯ ಪರಿವೀಕ್ಷಕರ ಜವಾಬ್ದಾರಿ. ಈ ವಾಹನಗಳಿಂದ ಅಪಘಾತ ಸಂಭವಿಸಿದ್ದಲ್ಲಿ ವಾಹನಗಳ ಮಾಲೀಕರೇ ಪರಿಹಾರ ಕೊಡಬೇಕು ಎಂದು ಆದೇಶಿಸಲಾಗಿದೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳಿಂದ ರೈಲ್ವೇ ಇಲಾಖೆಗೆ 259 ಕೋಟಿ ಲಾಸ್

    Live Tv
    [brid partner=56869869 player=32851 video=960834 autoplay=true]

  • ಕಸದ ಲಾರಿಗೆ ಮತ್ತೊಂದು ಬಲಿ – 39 ವರ್ಷದ ಮಹಿಳೆ ಸಾವು

    ಕಸದ ಲಾರಿಗೆ ಮತ್ತೊಂದು ಬಲಿ – 39 ವರ್ಷದ ಮಹಿಳೆ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿಯಾಗಿರುವ ಬೆಂಗಳೂರಿನಲ್ಲಿ ರಸ್ತೆ ಅಪಘಾತ ಹೆಚ್ಚು. ಅದರಲ್ಲಿಯೂ ಇತ್ತೀಚೆಗೆ ಕಸದ ಲಾರಿ ಡಿಕ್ಕಿಯಿಂದ ಸಾರ್ವಜನಿಕರು ಮೃತರಾಗುತ್ತಿದ್ದಾರೆ. ಸೋಮವಾರ 39 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಕಸದ ಲಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    39 ವರ್ಷದ ಪದ್ಮಿನಿ ಕಸದ ಲಾರಿಗೆ ಬಲಿಯಾದ ದುರ್ದೈವಿ. ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್ ಬಳಿ ಘಟನೆ ನಡೆದಿದೆ. ಪದ್ಮಿನಿ ಅವರು ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಸದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಪದ್ಮಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ರಜೆಗೆ ಬಂದಿದ್ದ ಯೋಧ ಸಾವು – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ 

    ಘಟನೆ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಪದ್ಮಿನಿ ಅವರು ಸೆಂಟ್ ಮಾಕ್ರ್ಸ್ ರೋಡ್‍ನಲ್ಲಿರುವ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ರಾಂಚ್‍ನಲ್ಲಿ ಡೆಪ್ಟಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.

    ಈ ಹಿಂದೆ ಹೆಬ್ಬಾಳದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಸದ ಲಾರಿ ಹರಿದು ವಿದ್ಯಾರ್ಥಿನಿ ಅಕ್ಷಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಬಾಗಲೂರು-ಥಣಿಸಂದ್ರ ರಸ್ತೆಯಲ್ಲಿ ಬಿಬಿಎಂಪಿಯ ಕಸದ ಲಾರಿ 76 ವರ್ಷದ ವೃದ್ಧ ರಾಮಯ್ಯ ಅವರ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಮಯ್ಯ ಅವರು ನೆಲಕ್ಕೆ ಬಿದ್ದದ್ದು ಲಾರಿ ಅವರ ಮೇಲೆಯೇ ಹರಿದಿತ್ತು. ಇದರಿಂದ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಇದನ್ನೂ ಓದಿ: ರಜೆಗೆ ಬಂದಿದ್ದ ಯೋಧ ಸಾವು – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

  • ಕೊರೊನಾ ರೋಗಿಗಳನ್ನು ಕಸದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯ್ತಾ?

    ಕೊರೊನಾ ರೋಗಿಗಳನ್ನು ಕಸದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯ್ತಾ?

    – ವಿಡಿಯೋ ಅಪ್ಲೋಡ್ ಮಾಡಿ ಭಯಾನಕ ಘಟನೆ ಎಂದ ನಾಯ್ಡು

    ಅಮಾರವತಿ: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಅಧಿಕಾರಿಗಳು ಮೂವರು ಕೊರೊನಾ ವೈರಸ್ ಸೋಂಕಿತರನ್ನು ಕಸದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗುತ್ತಿದೆ.

    ವಿಡಿಯೋವೊಂದನ್ನು ತಮ್ಮ ಟ್ವಟ್ಟರ್ ಅಕೌಂಟ್ ನಲ್ಲಿ ಅಪ್ಲೋಡ್ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಭಯಾನಕ ಘಟನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿಜಯನಗರಂ ಜಿಲ್ಲೆಯ ಜಾರ್ಜಪುಪೇಟ ಬಿಸಿ ಕಾಲೊನಿಯ ಮೂವರು ಕೋವಿಡ್ 19 ರೋಗಿಗಳನ್ನು ಕಸದ ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ದೃಶ್ಯ ಎಂದು ಬರೆದುಕೊಂಡಿದ್ದಾರೆ.

    ಕೊರೊನಾ ವೈರಸ್ ಬಗ್ಗೆ ತಿಳಿದಿಲ್ಲ, ಆದರೆ ಅಸಹಾಯಕ ರೋಗಿಗಳು ಇತರ ಅಪಾಯಕಾರಿ ಕಾಯಲೆಗಳಿಗೆ ತುತ್ತಾಗುವ ಸಾಧ್ಯತೆಗಳಿವೆ. ಯಾಕೆ ಅವರನ್ನು ಮನಷ್ಯರಂತೆ ಉಪಚರಿಸಲ್ಲ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಟ್ವಿಟ್ಟರ್‍ನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಟೀಕೆ ವ್ಯಕ್ತಪಡಿಸಿದ ಬಳಿಕ ಕೊರೊನಾ ಪಾಸಿಟಿವ್ ಬಂದಿರುವ ರೋಗಿಗಳನ್ನೇ ಈ ರೀತಿಯಾಗಿ ಕರೆಯೊಯ್ಯಲಾಗಿದೆ ಎಂದು ಬೆಳಕಿಗೆ ಬಂದಿದೆ.

    ಹೀಗೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಜಿಲ್ಲಾ ವೈದ್ಯಕೀಯ ಹಾಗೂ ಆರೋಗ್ಯಾಧಿಕಾರಿ ಡಾ. ರಮಣ ಕುಮಾರಿ, ಈ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಕೇವಲ 2 ದಿನಗಳ ಹಿಂದೆಯಷ್ಟೇ ನಡೆದಿರುವ ಘಟನೆಯಾಗಿದೆ ಎಂದು ಕುಮಾರಿ ಹೇಳಿದ್ದಾರೆ.

    ಇತ್ತ ನಗರ ಪಂಚಾಯತ್ ಕಮಿಷನರ್ ಜೆಎಆರ್ ಅಪ್ಪಲ ನಾಯ್ಡು ಹೇಳಿಕೆ ನೀಡಿದ್ದು, ಜಿಲ್ಲಾಧಿಕಾರಿಗಳ ಅದೇಶದ ಮೇರೆಗೆ ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ. ನನಗೆ ಬಂದ ಮಾಹಿತಿ ಪ್ರಕಾರ, ಆ ವಾಹನವನ್ನು ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಬೇಕಾದ ಅಗತ್ಯ ವಸ್ತುಗಳಾದ ಸೋಡಿಯಂ ಹೈಪೋಕ್ಲೋರೈಟ್, ಬ್ಲೀಚಿಂಗ್ ಪೌಡರ್ ಮತ್ತು 20 ಕೆ.ಜಿಯಷ್ಟು ಉಪ್ಪು ಸಾಗಿಸಲು ಬಳಕೆ ಮಾಡಲಾಗುತ್ತಿದೆ ಎಂದಿದ್ದಾರೆ.

    ವಾಹನದಲ್ಲಿ ಕಾಣುವ ವ್ಯಕ್ತಿಗಳು ಕೊರೊನಾ ರೋಗಿಗಳಲ್ಲ. ಆ ವಾಹನವನ್ನು ರೋಗಿಗಳನ್ನು ಸ್ಥಳಾಂತರಿಸಲು ಕೂಡ ಎಂದಿಗೂ ಬಳಸಿಲ್ಲ. ಪುರಸಭೆ ಸಿಬ್ಬಂದಿ ಕಸದ ಟ್ರಕ್ ನಲ್ಲಿ ಯಾವುದೇ ಕೋವಿಡ್ ರೋಗಿಯನ್ನು ಸಾಗಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.