Tag: Garib Kalyan Anna Yojana

  • ಕೇಂದ್ರದ ಅಕ್ಕಿಗಿನ್ನು ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ, 18 ಕೋಟಿ ವೆಚ್ಚದಲ್ಲಿ 5 ವರ್ಷ ಸಾರವರ್ಧಿತ ಅಕ್ಕಿ ವಿತರಣೆಗೆ ಕ್ರಮ: ಜೋಶಿ

    ಕೇಂದ್ರದ ಅಕ್ಕಿಗಿನ್ನು ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ, 18 ಕೋಟಿ ವೆಚ್ಚದಲ್ಲಿ 5 ವರ್ಷ ಸಾರವರ್ಧಿತ ಅಕ್ಕಿ ವಿತರಣೆಗೆ ಕ್ರಮ: ಜೋಶಿ

    ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ (AAY) ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ. ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ ಎಂದರು. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ – ಆರೋಪಿ ಅರೆಸ್ಟ್‌

    ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ (Garib Kalyan Anna Yojana) ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು ಅಂತ್ಯೋದಯ ಅನ್ನ ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ 35 ಕೆಜಿ ಆಹಾರ ಧಾನ್ಯ ವಿತರಿಸುತ್ತಿದ್ದು, ಇದಕ್ಕೆ ಶೇ.1 ರಷ್ಟು ಪೌಷ್ಟಿಕಾಂಶಗಳನ್ನು ಸೇರಿಸಿ, ಬಲವರ್ಧಿತ ಅಕ್ಕಿಯಾಗಿ ವಿತರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    18 ಕೋಟಿ ರೂ. ವೆಚ್ಚ:
    ದೇಶಾದ್ಯಂತ ಈ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಣೆಗೆ 18 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಕಡುಬಡವರನ್ನು ರಕ್ತಹೀನತೆಯಿಂದ ಕಾಪಾಡಲು ಪ್ರಯೋಜನವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ದಸರಾ ಸಂಭ್ರಮದಲ್ಲಿದ್ದ ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

    ರಾಜ್ಯ ಸರ್ಕಾರದ್ದು ಯಾವ ಭಾಗ್ಯವೂ ಇಲ್ಲ:
    ರಾಜ್ಯ ಸರ್ಕಾರ ಅನ್ನ ಭಾಗ್ಯ ಘೋಷಣೆ ಮಾಡಿದ್ದಷ್ಟೇ. ಯಾವ ಭಾಗ್ಯವೂ ಇಲ್ಲ. ಕೇಂದ್ರ ಸರ್ಕಾರ ಪೂರೈಸುವ 5 ಕೆಜಿ ಅಕ್ಕಿಯನ್ನಷ್ಟೇ ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು. ಇದನ್ನೂ ಓದಿ: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು

  • ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದಿನ ಐದು ವರ್ಷಕ್ಕೆ ವಿಸ್ತರಣೆ: ಮೋದಿ ಘೋಷಣೆ

    ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದಿನ ಐದು ವರ್ಷಕ್ಕೆ ವಿಸ್ತರಣೆ: ಮೋದಿ ಘೋಷಣೆ

    ನವದೆಹಲಿ: ದೇಶವು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಮಹತ್ವದ ಘೋಷಣೆ ಮಾಡಿದ್ದಾರೆ. ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಮುಂದಿನ ಐದು ವರ್ಷಕ್ಕೆ ವಿಸ್ತರಿಸಲಾಗುವುದು ಎಂದು ಮೋದಿ ಹೇಳಿದರು.

    ಛತ್ತೀಸ್‌ಗಢದಲ್ಲಿ (Chattisgarh) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಘೋಷಣೆ ಮಾಡಿದ್ದಾರೆ. ಬಿಜೆಪಿ (BJP) ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲು ನಾನು ನಿರ್ಧರಿಸಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ತಿಂಗಳಲ್ಲಿ ಮೂರು ಬಾರಿ ಕಂಪನ- ದೆಹಲಿಯಲ್ಲಿ ನಿರಂತರ ಭೂಕಂಪನಕ್ಕೆ ಕಾರಣವೇನು?

    ಇದೇ ವೇಳೆ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಆರ್ಥಿಕ ಲಾಭಗಳಿಗೆ ಆದ್ಯತೆ ನೀಡುತ್ತಿದೆ ಮತ್ತು ಆಗಾಗ ಭ್ರಷ್ಟ ಚಟುವಟಿಕೆಗಳಲ್ಲಿ ತೊಡಗಿದೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪರಿಚಯಿಸಲಾಯಿತು. ಇದರ ಅಡಿಯಲ್ಲಿ ಸರ್ಕಾರವು ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ಪೂರೈಸುತ್ತಿದೆ. ಇದನ್ನೂ ಓದಿ: ದೀಪಾವಳಿ ಪ್ರಯುಕ್ತ ಉದ್ಯೋಗಿಗಳಿಗೆ ಕಾರುಗಳನ್ನು ಗಿಫ್ಟ್ ನೀಡಿದ ಕಂಪನಿ!

    ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ರಾಯ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದರು. ‘ಮೋದಿ ಕೀ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯು ಆರೋಗ್ಯ ವಿಮಾ ಯೋಜನೆಗಳು, ಅಡುಗೆ ಅನಿಲ ಸಬ್ಸಿಡಿಗಳು ಮತ್ತು ರಾಜ್ಯದ ಬಡ ಜನರಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಪ್ರಾಯೋಜಿತ ಭೇಟಿ ಸೇರಿದಂತೆ ಇತರ ಭರವಸೆಗಳನ್ನು ಒಳಗೊಂಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಿಷವಾಗುತ್ತಿದೆಯಾ ಉಸಿರಾಡುವ ಗಾಳಿ? – ಪರಿಶೀಲನೆಗೆ 1,119 ಅಧಿಕಾರಿಗಳ 517 ತಂಡ ರಚನೆ

    ಹೂಡಿಕೆಯನ್ನು ಆಕರ್ಷಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ‘ಇನ್ವೆಸ್ಟ್ ಛತ್ತೀಸ್‌ಗಢ’ ಉಪಕ್ರಮವು ಪ್ರಣಾಳಿಕೆಯ ಪ್ರಮುಖ ಹೈಲೈಟ್ ಆಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸುವ ಮೂಲಕ ಛತ್ತೀಸ್‌ಗಢ ಸಾರ್ವಜನಿಕ ಸೇವಾ ಆಯೋಗಕ್ಕೆ (ಸಿಜಿಪಿಎಸ್‌ಸಿ) ಪಾರದರ್ಶಕತೆಯನ್ನು ತರಲು ಬಿಜೆಪಿ ಯೋಚಿಸಿದೆ. ಇದನ್ನೂ ಓದಿ: Nepal Earthquake: ಭೀಕರ ಭೂಕಂಪನಕ್ಕೆ ಬೆಚ್ಚಿಬಿದ್ದ ನೇಪಾಳ- 70 ಮಂದಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]