Tag: Gas Agency

  • Ex ಜೊತೆ ಲಿವ್‌ಇನ್‌ ಗೆಳೆಯನಿಗೆ ಚಟ್ಟ; ಖಾಸಗಿ ವಿಡಿಯೋ ಡಿಲೀಟ್‌ ಮಾಡದ್ದಕ್ಕೆ ಬೆಂಕಿ

    Ex ಜೊತೆ ಲಿವ್‌ಇನ್‌ ಗೆಳೆಯನಿಗೆ ಚಟ್ಟ; ಖಾಸಗಿ ವಿಡಿಯೋ ಡಿಲೀಟ್‌ ಮಾಡದ್ದಕ್ಕೆ ಬೆಂಕಿ

    – UPSC ಆಕಾಂಕ್ಷಿ ಗೆಳೆಯ; ಫೋರೆನ್ಸಿಕ್ ಸೈನ್ಸ್ ಗೆಳತಿ; ಗ್ಯಾಸ್‌ ಏಜೆನ್ಸಿಯ ಎಕ್ಸ್‌ ಬಾಯ್‌ಫ್ರೆಂಡ್‌
    – ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ಹತ್ಯೆ

    ನವದೆಹಲಿ: ಇದೇ ಅಕ್ಟೋಬರ್‌ 6ರಂದು ಉತ್ತರ ದೆಹಲಿಯ ಗಾಂಧಿ ವಿಹಾರ್‌ ಬಿಲ್ಡಿಂಗ್‌ನ ಫ್ಲಾಟ್‌ನಲ್ಲಿ (Delhi’s Gandhi Vihar Flat) ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಲ್ಲಿಗೆ ಧಾವಿಸಿದ್ದ ಅಗ್ನಿಶಾಮಕ ಸಿಬ್ಬಂದಿ 35 ವರ್ಷದ ಯುಪಿಎಸ್ಸಿ ಆಕಾಂಕ್ಷಿ ರಾಮಕೇಶ್‌ ಮೀನಾ ಅವರ ಸುಟ್ಟ ದೇಹವನ್ನ ಪತ್ತೆ ಮಾಡಿದ್ರು. ಮೊದಲಿಗೆ ಇದು AC (ಹವಾ ನಿಯಂತ್ರಣ) ಸ್ಫೋಟದಿಂದ ಆಗಿರುವ ದುರಂತ ಎಂದೇ ನಂಬಲಾಗಿತ್ತು. ಆದ್ರೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿ, ದೆಹಲಿ ಪೊಲೀಸರ ಅನುಮಾನ, ಕೃತ್ಯದ ಬಳಿಕ ಸಿಕ್ಕ ಒಂದೇ ಒಂದೇ ಸುಳಿವು ರೋಚಕ ಸತ್ಯ ಬಯಲಿಗೆಳೆಯುವಲ್ಲಿ ಯಶಸ್ವಿಯಾಯ್ತು.

    ಈ ಪ್ರಕರಣದ ಮಾಸ್ಟರ್‌ ಮೈಂಡ್‌, ಸೂತ್ರಧಾರಿ ಎಲ್ಲವೂ 21 ವರ್ಷದ ಫೋರೆನ್ಸಿಕ್ ಸೈನ್ಸ್ ವಿದ್ಯಾರ್ಥಿನಿ (Forensic Science Student) ಅಮೃತಾ. ಹತ್ಯೆಯಾದ ರಾಮಕೇಶ್‌ ಮೀನಾ ಆಕೆಯ ಲಿವ್‌ ಇನ್‌ ಪಾರ್ಟ್ನರ್‌.

    ಎಕ್ಸ್‌ ಬಾಯ್‌ಫ್ರೆಂಡ್‌ ಜೊತೆ ಸೇರಿ‌ ಹಾಕಿದ್ಳು ಸ್ಕೆಚ್‌
    ಯೆಸ್‌. ಅಮೃತಾ, ಮೀನಾ ಇಬ್ಬರು ಲಿವ್‌ ಇನ್‌ ಪಾರ್ಟ್ನರ್‌. ಆದ್ರೆ ರಾಮಕೇಶ್‌ ಅಮೃತಾಳ ಖಾಸಗಿ ವಿಡಿಯೋವನ್ನ ರಹಸ್ಯವಾಗಿ ರೆಕಾರ್ಡ್‌ ಮಾಡಿಟ್ಟುಕೊಂಡಿದ್ದ. ವಿಡಿಯೋಗಳನ್ನ ಡಿಲೀಟ್ ಮಾಡುವಂತೆ ಕೇಳಿಕೊಂಡರೂ ನಿರಾಕರಿಸಿದ್ದ. ಇದರಿಂದ ಅಮೃತಾ, ಮೀನಾ ಮೇಲೆ ಸಿಟ್ಟಾಗಿದ್ದಳು. ಕೊನೆಗೆ ಮೊರಾಬಾದ್‌ನಲ್ಲಿ ಗ್ಯಾಸ್‌ ಏಜೆನ್ಸಿ (Gas Agency) ಹೊಂದಿದ್ದ ತನ್ನ ಎಕ್ಸ್‌ ಬಾಯ್‌ಫ್ರೆಂಡ್‌ಗೆ (Boyfriend) ಈ ವಿಷಯವನ್ನೆಲ್ಲ ತಿಳಿಸಿದಳು. ಆ ನಂತರ ಇಬ್ಬರು ಒಟ್ಟಾಗಿ ಸೇರಿ ಕೊಲೆಗೆ ಪ್ಲ್ಯಾನ್‌ ಮಾಡಿದ್ರು.

    ತಾನು ಫೋರೆನ್ಸಿಕ್‌ ಸೈನ್ಸ್‌ ವಿದ್ಯಾರ್ಥಿನಿ ಆಗಿದ್ದರಿಂದ ಕೃತ್ಯ ನಡೆದ ಸ್ಥಳ ಸಂಪೂರ್ಣ ಸುಟ್ಟುಹೋದ್ರೆ, ಫೋರೆನ್ಸಿಕ್‌ ಅಧಿಕಾರಿಗಳಿಗೆ ಯಾವುದೇ ಸಾಕ್ಷ್ಯ ಸಿಗಲ್ಲ ಅಂತ ಅಮೃತಾ ನಂಬಿದ್ದಳು. ಇತ್ತ ಎಕ್ಸ್‌ ಬಾಯ್‌ಫ್ರೆಂಡ್‌ ಗ್ಯಾಸ್‌ ಎಜೆನ್ಸಿ ಹೊಂದಿದ್ದರಿಂದ ಸುಲಭವಾಗಿ ಗ್ಯಾಸ್‌ ಸಿಲಿಂಡರ್‌ ಲಭ್ಯವಿರುತ್ತಿತ್ತು. ಜೊತೆಗೆ ಅವನಿಗೆ ಸ್ಫೋಟಿಸುವುದೂ ಗೊತ್ತಿತ್ತು. ಇಬ್ಬರಷ್ಟೇ ಈ ಕೆಲಸಕ್ಕೆ ಸಾಲೋದಿಲ್ಲ ಅಂತ ಎಕ್ಸ್‌ಬಾಯ್‌ಫ್ರೆಂಡ್‌ ಗೆಳೆಯನನ್ನೂ ಸೇರಿಸಿಕೊಂಡು ಸ್ಕೆಚ್‌ ಹಾಕಿದ್ರು.

    ಹತ್ಯೆ ನಡೆದಿದ್ದು ಹೇಗೆ?
    ಇದೇ ಅಕ್ಟೋಬರ್‌ 6ರ ಮುಂಜಾನೆ ಮೂವರು ಗಾಂಧಿವಿಹಾರ್‌ ಬಿಲ್ಡಿಂಗ್‌ನ ಫ್ಲ್ಯಾಟ್‌ಗೆ ಪ್ರವೇಶಿಸಿದ್ರು. ಫ್ಲ್ಯಾಟ್‌ನಲ್ಲಿದ್ದ ಮೀನಾನನ್ನ ಮೊದಲು ಕತ್ತು ಹಿಸುಕಿ ಕೊಲೆ ಮಾಡಿದ್ರು. ಬಳಿಕ ಅವನ ಹಾರ್ಡ್‌ ಡಿಸ್ಕ್‌, ಲ್ಯಾಪ್‌ಟಾಪ್‌ ಹಾಗೂ ಬೆಲೆ ಬಾಳುವ ವಸ್ತುಗಳೆಲ್ಲವನ್ನೂ ಎತ್ತಿಟ್ಟುಕೊಂಡರು. ಸಾಕ್ಷ್ಯ ಸುಳಿವು ಸಿಗುವ ಎಲ್ಲಾ ವಸ್ತುಗಳನ್ನ ಎತ್ತಿಟ್ಟುಕೊಂಡಿದ್ರು. ಇದು ಕೊಲೆ ಅಂತ ಗೊತ್ತೇ ಆಗದಂತೆ ಮಾಡಲು ರಾಮಕೇಶ್‌ ದೇಹವನ್ನ ಎಣ್ಣೆ, ತುಪ್ಪ ಹಾಗೂ ಮದ್ಯ ಸುರಿದು ಸುಟ್ಟುಬಿಟ್ಟರು. ನಂತರ ಓಪನ್‌ ಸಿಲಿಂಡರ್‌ ಬಳಸಿ ಸ್ಫೋಟಿಸಿದ್ರು. ಫ್ಲ್ಯಾಟ್‌ಗೆ ಉಳಿದ ವಸ್ತುಗಳಿಗೆ ಬೆಂಕಿ ಹಚ್ಚಿ ಯಾವುದೇ ಸಾಕ್ಷ್ಯ ಸಿಗದಂತೆ ಮಾಡಿದ್ರು. ತಾವು ಬಚಾವ್‌ ಆಗ್ತೀವಿ ಅಂತ ತಿಳಿದುಕೊಂಡು ಗ್ಯಾಸ್‌ ಸ್ಫೋಟಿಸಿ ಅಲ್ಲಿಂದ ಪರಾರಿಯಾಗಿದ್ದರು. ಅವರು ಅಲ್ಲಿಂದ ಪರಾರಿಯಾದ 15 ನಿಮಿಷಗಳಲ್ಲಿ ಅವರಿದ್ದ ಫ್ಲ್ಯಾಟ್‌ ಸಂಪೂರ್ಣ ಸ್ಫೋಟಗೊಂಡು ಬೆಂಕಿಯಲ್ಲಿ ಉರಿಯಿತು.

    ಸಿಕ್ಕಿಬಿದ್ದದ್ದು ಹೇಗೆ?
    ಇನ್ನೂ ಪ್ರಕರಣ ಭೇದಿಸಿದ ಪೊಲೀಸರು ಸ್ಫೋಟಕ ವಿಚಾರಗಳನ್ನ ಬಯಲಿಗೆಳೆದಿದ್ದಾರೆ. ಆಕೆ ಸಿಕ್ಕಿಬಿದ್ದ ವಿಚಾರವನ್ನೂ ತಿಳಿಸಿದ್ದಾರೆ. ಕೊಲೆ ಮಾಡಿಸಿದ ಅಮೃತಾ ಇದೊಂದು ಆಕಸ್ಮಿಕ ಘಟನೆ ಅಂತ ಬಿಂಬಿಸಲು ಪ್ರಯತ್ನಿಸಿದ್ದಳು. ಆದ್ರೆ ಅನೇಕ ಸುಳಿವುಗಳನ್ನ ಬಿಟ್ಟುಹೋಗಿದ್ದಳು ಅಂತ ತಿಳಿಸಿದ್ದಾರೆ.

    ಸುಳಿವು ಸಿಕ್ಕಿದ್ದು ಎಲ್ಲಿ?
    * ಸುಳಿವು 1: ದೇಹದ ಭಾಗಗಳು ಭಾಗಶಃ ಸುಟ್ಟುಹೋಗಿತ್ತು, ಮೂಳೆಗಳು ಬೆಂಕಿಗೆ ಬೂದಿಯಾಗಿತ್ತು. ಆದ್ರೆ ಎಸಿ ಸ್ಫೋಟದಿಂದ ಇಷ್ಟು ಪ್ರಮಾಣದಲ್ಲಿ ದೇಹ ಸುಡಲು ಸಾಧ್ಯವಿಲ್ಲ ಎಂದು ತನಿಖಾಧಿಕಾರಿಗಳು ಅದಾಜಿಸಿದ್ರು. ಇದು ಕೊಲೆ ಅನುಮಾನಕ್ಕೆ ಕಾರಣವಾಯಿತು.
    * ಸುಳಿವು 2: ಗ್ಯಾಸ್‌ ಸಿಲಿಂಡರ್‌ ಸುಟ್ಟ ದೇಹಕ್ಕೆ ಸಲ್ಪ ಹತ್ತಿರದಲ್ಲೇ ಇತ್ತು. ಅಲ್ಲದೇ ಇದು ಫ್ಲ್ಯಾಟ್‌ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧವಿಲ್ಲ ಎಂಬುದನ್ನ ಫೋರೆನ್ಸಿಕ್‌ ಮೂಲಕ ಅಧಿಕಾರಿಗಳು ಖಚಿತಪಡಿಸಿಕೊಂಡರು.
    * ಸುಳಿವು 3: ಆರಂಭದಲ್ಲಿ ಎಸಿ ಸ್ಫೋಟದಿಂದ ದುರಂತ ಸಂಭವಿಸಿದೆ ಎಂದು ನಂಬಲಾಗಿತ್ತು. ಆದ್ರೆ ಎಸಿ ಘಟಕಕ್ಕೆ ಯಾವುದೇ ಹಾನಿಯಾಗಿರಲಿಲ್ಲ. ಇದರಿಂದ ಪೊಲೀಸರ ಅನುಮಾನ ನಿಜವಾಯ್ತು.
    * ಸುಳಿವು 4: ಘಟನೆ ನಡೆದ ನಂತರ ಅಮೃತಾಳ ಫೋನ್‌ ಸ್ವಿಚ್‌ಆಫ್‌ ಆಗಿತ್ತು.
    * ಸುಳಿವು 5: ಘಟನೆಗೂ ಮುನ್ನ ಮೂವರು ಮುಸುಕುಧಾರಿಗಳು ಫ್ಲ್ಯಾಟ್‌ ಪ್ರವೇಶ ಮಾಡಿದ್ದರು. ಅವರಲ್ಲಿ ಅಮೃತಾ ಕೂಡ ಒಬ್ಬಳಾಗಿದ್ದಳು. ಸ್ಫೋಟ ಸಂಭವಿಸುವ 15 ನಿಮಿಷಕ್ಕೂ ಮುನ್ನ ಅವರು ಅಲ್ಲಿಂದ ಎಸ್ಕೇಪ್‌ ಆಗಿದ್ದರು. ಇದೆಲ್ಲವು ಸೆರೆಯಾಗಿದ್ದ ಸಿಸಿಟಿವಿ ದೃಶ್ಯ ಪೊಲೀಸರಿಗೆ ಲಭ್ಯವಾಯಿತು.

    ಇದೆಲ್ಲದರ ಆಧಾರದ ಮೇಲೆ ತೀವ್ರ ವಿಚಾರಣೆ ನಡೆಸಿದಾಗ ಅಮೃತಾ ಕೃತ್ಯ ಎಸಿಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಸದ್ಯ ಬಂಧಿತರಿಂದ ಅನೇಕ ಡಿಜಿಟಲ್ ಸಾಧನಗಳು ಹಾಗೂ ಕದ್ದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ಅಮೃತಾ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  • ಗ್ಯಾಸ್ ಸೋರಿಕೆಯಿಂದ ಪದೇ ಪದೇ ಅಗ್ನಿ ಅವಘಡ – ಏಜೆನ್ಸಿ ವಿರುದ್ಧ ಎಫ್‌ಐಆರ್‌

    ಗ್ಯಾಸ್ ಸೋರಿಕೆಯಿಂದ ಪದೇ ಪದೇ ಅಗ್ನಿ ಅವಘಡ – ಏಜೆನ್ಸಿ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಪದೇ ಪದೇ ಗ್ಯಾಸ್ ಸೋರಿಕೆಯಿಂದ (Gas Leakage) ಅಗ್ನಿ ಅವಘಡದಲ್ಲಿ ಸಾಕಷ್ಟು ಸಾವು ನೋವುಗಳ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತಿದೆ.

    ಇದೇ ಮೊದಲ ಬಾರಿಗೆ ಗ್ಯಾಸ್ ಕಂಪನಿ ಹಾಗೂ ಏಜೆನ್ಸಿ (Gas Agency) ವಿರುದ್ಧ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಗ್ಯಾಸ್ ಲೀಕ್, ಗ್ಯಾಸ್ ಸ್ಫೋಟಕ್ಕೆ ಯಾವುದೇ ಕೇಸ್ ದಾಖಲಾಗುತ್ತಿರಲಿಲ್ಲ. ಇದೀಗ ಪ್ರೈವೆಟ್ ಗ್ಯಾಸ್ ಕಂಪನಿ ಮಾಲೀಕ ಚೋಟಾ ಸಿಕಂದರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

    ಎಲ್‌ಎಲ್‌ಬಿ ವಿದ್ಯಾರ್ಥಿನಿ ಜಾಹ್ನವಿ ನೀಡಿದ ದೂರಿನ ಮೇಲೆ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಹ್ನವಿ ತಂದೆ ಪಶ್ಚಿಮ ಬಂಗಾಳ ಮೂಲದ ನೇತ್ಯಾ ನಯ್ಯ ಎಂಬುವರಿಗೆ ಮನೆ ಬಾಡಿಗೆಗೆ ಕೊಟ್ಟಿದ್ರು. ಇದೇ ತಿಂಗಳ 1ನೇ ತಾರೀಖು ಸಿಲಿಂಡರ್ ಬ್ಲ್ಯಾಸ್ಟ್‌ ಆಗಿ ನೇತ್ಯಾ ನಯ್ಯ ಹಾಗೂ ಅವರ ಪತ್ನಿ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಸಿಲಿಂಡರ್ ಬ್ಲ್ಯಾಸ್ಟ್‌ಗೆ ಖಾಸಗಿ ಪ್ರೈವೆಟ್ ಸಿಲಿಂಡರ್ ಕಂಪನಿ ಏಜೆನ್ಸಿಯೇ ಕಾರಣ. ಹೀಗಾಗಿ ಮಾಲೀಕ ಚೋಟಾ ಸಿಕಂದರ್ ಡಿಸ್ಟ್ರಿಬ್ಯೂಟರ್ ನೈಸ್ ಎಸ್‌ಕೆಎಲ್ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದೂರಿನನ್ವಯ ಇದೀ ಬಿಎನ್‌ಎಸ್ 125(ಎ), 287, 324(2) ಅಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: RBI: 5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ

  • ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

    ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

    ಬೆಂಗಳೂರು: ಗೋಡೌನಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಬಸ್ (Bus Fire) ಗಳು ಬೆಂಕಿಗಾಹುತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಆರ್‍ಆರ್ ನಗರ (RR Nagar) ದ ಐಟಿಐ ಲೇಔಟ್ ನ ಇಂಡೆನ್ ಗ್ಯಾಸ್ ಏಜೆನ್ಸಿ ಸಮೀಪದಲ್ಲಿರುವ ಸ್ಕ್ರಾಪ್ ಗೋಡೌನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತಗುಲಿ ಇಡೀ ಗೋಡೌನ್ ಧಗ-ಧಗನೆ ಹೊತ್ತಿ ಉರಿದಿದೆ. ಪರಿಣಾಮ ಮೂರು ಬಸ್‍ಗಳು ಸುಟ್ಟು ಕರಕಲಾಗಿವೆ. ಬೆಂಕಿ ಜ್ವಾಲೆ ವ್ಯಾಪಿಸದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

    ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

  • ವಾರಕ್ಕೊಮ್ಮೆ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ ಗ್ಯಾಸ್ ಏಜೆನ್ಸಿ ಮಾಲೀಕ

    ವಾರಕ್ಕೊಮ್ಮೆ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ ಗ್ಯಾಸ್ ಏಜೆನ್ಸಿ ಮಾಲೀಕ

    ಕೋಲಾರ: ಕೊರೊನಾ ಮಹಾಮಾರಿ ಆವರಿಸಿದ್ದರಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಕಳೆದ 21 ದಿನಗಳಿಂದ ನಮ್ಮನ್ನು ಕಾಯುತ್ತಿರುವ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಗೆ ಕೋಲಾರದಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು.

    ಕೋಲಾರದ ರೇವತಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಿಂದ ವಾರಕ್ಕೊಮ್ಮೆ ಬಿರಿಯಾನಿ ವಿತರಣೆ ಮಾಡಲಾಗುತ್ತಿದೆ. ಕೋಲಾರ ನಗರ ಹಾಗೂ ಬಂಗಾರಪೇಟೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಲಾಯಿತು.

    ಕಳೆದ ಬುಧವಾರವೂ ಹೀಗೆ ಕರ್ತವ್ಯದಲ್ಲಿದ್ದ ನೂರಾರು ಪೊಲೀಸರಿಗೆ ಬಿರಿಯಾನಿ ಮಾಡಿ, ಅದನ್ನು ಪ್ಯಾಕ್ ಮಾಡಿ ವಿತರಣೆ ಮಾಡಲಾಗಿತ್ತು. ಇಂದು ಕೂಡ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಿ ಗ್ಯಾಸ್ ಏಜೆನ್ಸಿ ಮಾಲೀಕರು ಮಾನವೀಯತೆ ಮೆರೆದಿದ್ದಾರೆ. ಕೇವಲ ಪೊಲೀಸರಿಗೆ ಮಾತ್ರವಲ್ಲ ಪೌರ ಕಾರ್ಮಿಕರಿಗೂ ಬಿರಿಯಾನಿ ವಿತರಿಸಿ ಸಾರ್ಥಕತೆ ಮೆರೆದಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

  • ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟ!

    ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟ!

    ಚಾಮರಾಜನಗರ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಆಹುತಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಜರುಗಿದೆ.

    ಗ್ರಾಮದ ನಾಗರಾಜು ಮನೆಯಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದ್ದ ಹಿನ್ನೆಲೆಯಲ್ಲಿ, ನಾಗರಾಜು ಗ್ಯಾಸ್ ಏಜೆನ್ಸಿಗೆ ಫೋನ್ ಮೂಲಕ ವಿಷಯ ತಿಳಿಸಿದ್ದಾರೆ. ನಂತರ ಮನೆಗೆ ಬಂದ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಸಿಲಿಂಡರ್ ನ ಸೋರಿಕೆ ತಡೆಗಟ್ಟುವಲ್ಲಿ ಮುಂದಾಗಿದ್ದಾನೆ. ಈ ವೇಳೆ ಇದ್ದಕ್ಕಿದ್ದ ಹಾಗೆ ಗ್ಯಾಸ್ ಸ್ಫೋಟಗೊಂಡಿದೆ.

    ಅದೃಷ್ಟವಶಾತ್ ಗ್ಯಾಸ್ ಏಜೆನ್ಸಿ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಮಾರಾಜನಗರ ಗ್ರಾಮಾಂತರ ಆಸ್ಪತ್ರೆಯಲಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಲಿಂಡರ್ ಸ್ಫೋಟಗೊಂಡ ಕಾರಣ ಮನೆಯಲ್ಲಿದ್ದ ಅನೇಕ ವಸ್ತಗಳು ಸುಟ್ಟು ಕರಕಲಾಗಿವೆ.

    ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv