Tag: Gas Pipeline

  • ಗ್ಯಾಸ್ ಪೈಪ್‍ಲೈನ್ ಕಟ್ಟಾಗಿ ಭೀಕರ ಸ್ಫೋಟ- ಮನೆಗಳು ಧ್ವಂಸ, ಮೂವರಿಗೆ ಗಂಭೀರ ಗಾಯ

    ಗ್ಯಾಸ್ ಪೈಪ್‍ಲೈನ್ ಕಟ್ಟಾಗಿ ಭೀಕರ ಸ್ಫೋಟ- ಮನೆಗಳು ಧ್ವಂಸ, ಮೂವರಿಗೆ ಗಂಭೀರ ಗಾಯ

    ಬೆಂಗಳೂರು: ಸಿಲಿಕಾನ್ ಸಿಟಿಯ ಎಚ್‍ಎಸ್‍ಆರ್ ಲೇ ಔಟ್‍ (HSR Layout) ನ 7 ನೇ ಸೆಕ್ಟರ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಕಟ್ಟಾಗಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಮನೆಗಳು ಧ್ವಂಸಗೊಂಡು, ಮೂವರು ಗಂಭೀರ ಗಾಯಗಳಾದ ಘಟನೆ ನಡೆದಿದೆ.

    ಅಜ್ಜುಂ(40), ಮುಬಾಷೀರ್, (40) ಹಾಗೂ ಜುಬೇರ್ (26) ಗಾಯಾಳುಗಳು. ಇಬ್ಬರು ಮಹಿಳೆಯರಿಗೆ ಶೇ.30 ರಷ್ಟು ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆ (Victoria Hospital) ಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ನಂತ್ರ ಎರಡೂವರೆ ತಿಂಗಳ ಮಗು ಸಾವು – ನಕಲಿ ಡಾಕ್ಟರ್‌ ವಿರುದ್ಧ ಪ್ರಕರಣ ದಾಖಲು

    ಬಿಡಬ್ಲೂಎಸ್‍ಎಸ್ಬಿ ಕಾಮಗಾರಿ ಮಾಡುವ ವೇಳೆ ಗ್ಯಾಸ್ ಪೈಪ್ ಲೈನ್ ಕಟ್ ಆಗಿದೆ. ಪರಿಣಾಮ ಎರಡು ಮನೆಗಳು ಸಂಪೂರ್ಣ ಧ್ವಂಸಗೊಂಡಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿ ವಾಲ್ ಬಂದ್ ಮಾಡಿದ್ದಾರೆ. ಬಳಿಕ ಸಾರ್ವಜನಿಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದರು. ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

    ಗೇಲ್ ಗ್ಯಾಸ್ ಅಧಿಕಾರಿಗಳಿಂದ ಬಿಡಬ್ಲೂಎಸ್‍ಎಸ್ಬಿ ಅಧಿಕಾರಿಗಳು ಯಾವುದೇ ಅನುಮತಿ ಪಡೆದಿರಲಿಲ್ವಂತೆ. ಈ ಹಿನ್ನೆಲೆಯಲ್ಲಿ ಗುಂಡಿ ತೆಗೆಯುವ ವೇಳೆ ಗ್ಯಾಸ್ ಲೈನ್ ಕಟ್ ಆಗಿದೆ. ಎರಡು ಮನೆಗಳ ಶೌಚಾಲಯದ ಮೂಲಕ ಗ್ಯಾಸ್ ನುಗ್ಗಿದೆ. ಹೀಗಾಗಿ ಕಾಮಗಾರಿ ಮಾಡುವ ವೇಳೆ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಕೇಳಿಬಂದಿದೆ.

  • ಯುರೋಪಿನ ಅತಿ ದೊಡ್ಡ ಗ್ಯಾಸ್ ಪೈಪ್‍ಲೈನ್ ಸ್ಥಗಿತ – ಕೆನಡಾದ ಮೊರೆ ಹೋದ ಜರ್ಮನಿ

    ಯುರೋಪಿನ ಅತಿ ದೊಡ್ಡ ಗ್ಯಾಸ್ ಪೈಪ್‍ಲೈನ್ ಸ್ಥಗಿತ – ಕೆನಡಾದ ಮೊರೆ ಹೋದ ಜರ್ಮನಿ

    ಮಾಸ್ಕೋ: ಯುರೋಪಿನ ಅತಿದೊಡ್ಡ ಗ್ಯಾಸ್ ಪೈಪ್‍ಲೈನ್ ನಾರ್ಡ್ ಸ್ಟ್ರೀಮ್ 1 ಅನ್ನು ಕಾರ್ಯನಿರ್ವಹಣೆಯ ಕಾರಣ ನೀಡಿ ರಷ್ಯಾ ಸ್ಥಗಿತಗೊಳಿಸಿದೆ.

    ಯುರೋಪ್ ರಾಷ್ಟ್ರಗಳಲ್ಲಿ ಸಾಮಾನ್ಯವಾಗಿ ಚಳಿಗಾಲಕ್ಕೆ ಈ ಗ್ಯಾಸ್‍ ಪೈಪ್‍ಲೈನ್‍ಗಳು ಹೆಚ್ಚು ಅವಶ್ಯಕತೆ ಇರುತ್ತದೆ. ಆದರೆ ಇದೀಗ ರಷ್ಯಾ ಈ ಗ್ಯಾಸ್ ಪೈಪ್‍ಲೈನ್‍ನ್ನು ಸ್ಥಗಿತಗೊಳಿಸುವುದರಿಂದ ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮಗಳಿಂದ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೂರೋಪಿಯನ್ ರಾಷ್ಟ್ರಗಳಿಗೆ ಮತ್ತೊಂದು ಆಘಾತ ನೀಡಿದೆ.

    ರಷ್ಯಾದಿಂದ ಜರ್ಮನಿಗೆ ಬಾಲ್ಟಿಕ್ ಸಮುದ್ರದ ಅಡಿಯಲ್ಲಿ ಪ್ರತಿವರ್ಷ ಸುಮಾರು 55 ಶತಕೋಟಿ ಘನ ಮೀ. ಇಂಧನವನ್ನು ಸಾಗಿಸುವ ನಾರ್ಡ್ ಸ್ಟ್ರೀಮ್ ಜುಲೈ 1 ರಿಂದ 21 ರವರೆಗೆ ಯಾಂತ್ರಿಕ ಮತ್ತು ಸ್ವಯಂಚಾಲಿತ ವ್ಯವಸ್ಥೆಗಳನ್ನು ಪರೀಕ್ಷಿಸಲು ಸ್ಥಗಿತಗೊಳ್ಳುತ್ತಿದೆ ಎಂದು ರಷ್ಯಾದ ಗ್ಯಾಸ್ ಕಂಪನಿ ಗಾಜ್‍ಪ್ರೊಮ್ ತಿಳಿಸಿದೆ. ಈ ಮೂಲಕ ಯೂರೋಪ್‍ಗೆ ಸಂಕಷ್ಟ ಎದುರಾದಂತಾಗಿದೆ.

    2011ರಿಂದ ಜರ್ಮನಿಗೆ ಈ ಪೈಪ್ ಲೈನ್ ಮೂಲಕ ನೈಸರ್ಗಿಕ ಅನಿಲ ಸರಬರಾಜು ಆಗುತ್ತಿತ್ತು. ಈಗ ಸ್ಥಗಿತಗೊಳಿಸಿದ್ದರಿಂದ ಜರ್ಮನಿ ಕೆನಡಾದ ಮೊರೆ ಹೋಗಿದೆ.

    ಇತ್ತೀಚೆಗಷ್ಟೆ ಉಕ್ರೇನ್‍ನ ಮೇಲೆ ರಷ್ಯಾ ಯುದ್ಧ ಮಾಡುತ್ತಿರುವುದನ್ನು ವಿರೋಧಿಸಿ ಅನೇಕ ಯುರೋಪ್ ರಾಷ್ಟ್ರಗಳು ರಷ್ಯಾದ ಮೇಲೆ ಆರ್ಥಿಕ ನಿರ್ಬಂಧವನ್ನು ಹೇರಿತ್ತು. ಅಷ್ಟೇ ಅಲ್ಲದೇ ಪ್ರತಿಷ್ಠಿತ ಕಂಪನಿಗಳು ರಷ್ಯಾದಲ್ಲಿರುವ ವ್ಯವಹಾರಕ್ಕೆ ಕೊನೆಗೊಳಿಸಿದ್ದವು. ಈ ಎಲ್ಲಾ ಕಾರಣದಿಂದಾಗಿ ವ್ಲಾಡಿಮಿರ್ ಪುಟಿನ್ ರಷ್ಯಾ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಲು ಹಾಗೂ ರಾಜಕೀಯ ದುರುದ್ದೇಶದಿಂದ ಈ ಗ್ಯಾಸ್ ಪೈಪ್‍ಲೈನ್‍ನ್ನು ಸ್ಥಗಿತಗೊಳಿಸಿದೆ ಎಂದು ಜರ್ಮನ್ ಸೇರಿದಂತೆ ಅನೇಕ ಯುರೋಪ್‍ನ ರಾಷ್ಟ್ರಗಳು ಆರೋಪಿಸಿವೆ.

    ಯುರೋಪ್‍ನಲ್ಲಿ ಇದೀಗ ಚಳಿಗಾಲ ಸಮೀಪಿಸುತ್ತಿದೆ. ಈ ಪರಿಸ್ಥಿತಿಯನ್ನೆದುರಿಸಲು ಅಲ್ಲಿನ ರಾಷ್ಟ್ರಗಳು ನವೆಂಬರ್ ವೇಳೆಗೆ ಕನಿಷ್ಠ 80% ಸಾಮರ್ಥ್ಯದಷ್ಟು ನೈಸರ್ಗಿಕ ಅನಿಲ ಸಂಗ್ರಹಿಸಿಟ್ಟಿರುತ್ತವೆ. ಆದರೂ ಈ ಬಾರಿ ಅನಿಲ ಸಂಗ್ರಹಾಗಾರದಲ್ಲಿ ಅತ್ಯಂತ ಕಡಿಮೆ ಅನಿಲವಿದೆ. ಈ ಸಂದರ್ಭದಲ್ಲಿ ಗ್ಯಾಸ್ ಪೈಪ್‍ಲೈನ್‍ನ್ನು ಬಂದ್ ಮಾಡಿರುವುದರಿಂದ ಭಾರೀ ಬೆಲೆ ಏರಿಕೆ ಸಂಭವಿಸುವ ಭೀತಿಯನ್ನು ಯುರೋಪ್ ರಾಷ್ಟ್ರಗಳು ಎದುರಿಸುತ್ತವೆ.

    ಜರ್ಮನಿ, ಇಟಲಿ, ಆಸ್ಟ್ರಿಯಾ ಮತ್ತು ನೆದರ್‌ಲ್ಯಾಂಡ್‍ಗಳು ಯಾವುದೇ ಹೊಸ ಅನಿಲ ಕೊರತೆಯನ್ನು ಸರಿದೂಗಿಸಲು ಕಲ್ಲಿದ್ದಲು ಸ್ಥಾವರಗಳನ್ನು ಬಳಸಲು ಸಿದ್ಧವಾಗಿವೆ ಎಂದು ಅಲ್ಲಿನ ನಾಯಕರು ಈಗಾಗಲೇ ತಿಳಿಸಿದ್ದಾರೆ. ಇದನ್ನೂ ಓದಿ: ನಟ ದಿ. ಪುನೀತ್ ಹೆಸರಲ್ಲಿ ಆಗಸ್ಟ್ 5ರಿಂದ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ: ಮುನಿರತ್ನ

    ಇದೀಗ ರಷ್ಯಾ ತಾನು ಭರವಸೆ ನೀಡಿದಂತೆ, ಮುಂದಿನ 10 ದಿನಗಳಲ್ಲಿ ಪೈಪ್‍ಲೈನ್ ಮತ್ತೆ ತೆರೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ವಾರದ ನಂತರ ಉಡುಪಿಯಲ್ಲಿ ಶಾಲೆ ಶುರು- ನೆರೆ ಲೆಕ್ಕಿಸದೇ ದೋಣಿ ಹತ್ತಿದ ವಿದ್ಯಾರ್ಥಿಗಳು

    Live Tv
    [brid partner=56869869 player=32851 video=960834 autoplay=true]

  • ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕೀವ್: ಉಕ್ರೇನ್ ಮೇಲೆ ರಷ್ಯಾ ಸೈನಿಕರ ಆಕ್ರಮಣ ದಾಳಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಕ್ರೇನ್‍ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್‍ನಲ್ಲಿರುವ ಗ್ಯಾಸ್ ಪೈಪ್‍ಲೈನ್ ಅನ್ನು ರಷ್ಯಾ ಸೇನೆ ಸ್ಫೋಟಿಸಿದೆ.

    ಈ ವಿಚಾರವನ್ನು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಸ್ಫೋಟದ ಪರಿಣಾಮ ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಆಗಸದಲ್ಲಿ ದೊಡ್ಡ ಅಣಬೆಯಾಕಾರದ ಮೋಡ ಆವರಿಸಿಕೊಂಡಿದೆ. ಇದು ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

    https://twitter.com/WW32022/status/1497721984339349512

    ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸುವಂತೆ ಉಕ್ರೇನ್ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    https://twitter.com/WW32022/status/1497758655407665165

    ಕರ್ಕಿವ್ ನಗರದಲ್ಲಿ ಉಕ್ರೇನ್ ಹಾಗೂ ರಷ್ಯಾ ಸೇನೆಗಳ ನಡುವೆ ಭಾರೀ ಯುದ್ಧ ನಡೆಯುತ್ತಿದೆ ಎಂದು ತಿಳಿದುಬಂದಿದೆ. ರಷ್ಯಾ ಗಡಿಯಿಂದ ಈ ನಗರ 40 ಕಿಲೋ ಮೀಟರ್ ದೂರದಲ್ಲಿದ್ದು, ಇಲ್ಲಿ ಸುಮಾರು 15 ಲಕ್ಷ ಜನರು ವಾಸಿಸುತ್ತಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

  • ಕೊಚ್ಚಿ- ಮಂಗಳೂರು ಗ್ಯಾಸ್‌ ಪೈಪ್‌ಲೈನ್ ಯೋಜನೆ‌ ತಾಂತ್ರಿಕತೆಯ ಅದ್ಭುತ – ಮೋದಿ

    ಕೊಚ್ಚಿ- ಮಂಗಳೂರು ಗ್ಯಾಸ್‌ ಪೈಪ್‌ಲೈನ್ ಯೋಜನೆ‌ ತಾಂತ್ರಿಕತೆಯ ಅದ್ಭುತ – ಮೋದಿ

    – ಇಂಧನ ಪೊರೈಕೆಗೆ ಸಮಗ್ರ ಯೋಜನೆ
    – 6 ವರ್ಷದಲ್ಲಿ 16 ಸಾವಿರ ಕಿ.ಮೀ.
    – ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

    ನವದೆಹಲಿ/ಮಂಗಳೂರು: ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ತಾಂತ್ರಿಕತೆಯ ಅದ್ಭುತ, ಇದೊಂದು ಭವಿಷ್ಯದ ಯೋಜನೆಯಾಗಿದ್ದು, ಭಾರತದ ಅಭಿವೃದ್ಧಿಯ ಚಾಲನಾ ಶಕ್ತಿಯಾಗಿದೆ. ಮುಂದಿನ 6 ವರ್ಷದಲ್ಲಿ ಗ್ಯಾಸ್‌ ಪೈಪ್‌ಲೈನ್‌ ನೆಟ್‌ವರ್ಕ್‌ ದ್ವಿಗುಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ವಿಡಿಯೋ ಕಾನ್ಫರೆನ್ಸ್‌ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ದೇಶಕ್ಕೆ ಸಮರ್ಪಿಸಿ ಮಾತನಾಡಿದ ಅವರು, 1987 ರಿಂದ 2014 ರ ಅವಧಿಯಲ್ಲಿ ದೇಶದಲ್ಲಿ 15 ಸಾವಿರ ಕಿ.ಮೀ. ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸಲಾಗಿತ್ತು. ಆದರೆ ಕಳೆದ ಆರು ವರ್ಷಗಳ ಅವಧಿಯಲ್ಲಿ 16 ಸಾವಿರ ಕಿ.ಮೀ. ನಷ್ಟು ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸುವ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ 5-6 ವರ್ಷದಲ್ಲಿ ಈ ಯೋಜನೆಗಳೆಲ್ಲ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

    ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಈ ಪೈಪ್‌ಲೈನ್‌ ಯೋಜನೆ ನಮ್ಮ ನಾಗರಿಕರ ಜೀವನವನ್ನು ಮತ್ತಷ್ಟು ಸುಗಮಗೊಳಿಸುತ್ತದೆ. ಕರಾವಳಿ ಪ್ರದೇಶಗಳ ಅಭಿವೃದ್ಧಿ ಮತ್ತು ಶ್ರಮಿಕ ಮೀನುಗಾರರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ನೀಲಿ ಆರ್ಥಿಕತೆಯ ಪರಿವರ್ತನೆ, ಕರಾವಳಿ ಮೂಲಸೌಕರ್ಯ ಸುಧಾರಣೆ, ಕಡಲ ಪರಿಸರ ವ್ಯವಸ್ಥೆಯ ರಕ್ಷಣೆಗಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.

    ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ. ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಈ ಯೋಜನೆ ಪ್ರಮುಖ ಮೈಲಿಗಲ್ಲಾಗಿದೆ. ಇಂಧನ ಪೂರೈಕೆಗೆ ಒಂದು ಸಮಗ್ರ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದು ಹೇಳಿದರು.

    ಈಗ ಭಾರತದಲ್ಲಿ ನೈಸರ್ಗಿಕ ಅನಿಲ ಬಳಕೆ ಶೇ.6.3 ರಷ್ಟಿದ್ದು, 2030ರ ವೇಳೆಗೆ ಇದನ್ನು ಶೇ.15ಕ್ಕೆ ಹೆಚ್ಚಿಸುವ ಗುರಿಯನ್ನು ಹಾಕಲಾಗಿದೆ. ಒಂದು ದೇಶ ಒಂದು ಗ್ಯಾಸ್ ಗ್ರಿಡ್ ಕಲ್ಪನೆಯು ಪೂರ್ಣಗೊಂಡರೆ ರಸಗೊಬ್ಬರ, ರಾಸಾಯನಿಕ, ಪೆಟ್ರೋಲಿಯಂ ಮತ್ತು ಇಂಧನ ವಲಯಗಳಿಗೆ ಹೆಚ್ಚಿನ ಲಾಭವಾಗಲಿದೆ. ಬಡ, ಮಧ್ಯಮ ವರ್ಗದ ಜನರು ಮತ್ತು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗಲಿದೆ. ಇದರಿಂದ ಸಾವಿರಾರು ಕೋಟಿ ವಿದೇಶಿ ವಿನಿಮಯ ಮೊತ್ತ ಉಳಿತಾಯವಾಗಲಿದೆ ಎಂದು ಅವರು ತಿಳಿಸಿದರು.

    ಕೊಚ್ಚಿ-ಮಂಗಳೂರು ಪೈಪ್ ಲೈನ್ ನಿಂದ ಈ ಭಾಗದ ಕೈಗಾರಿಕೋದ್ಯಮಗಳಿಗೆ ಅನುಕೂಲವಾಗಲಿದೆ. ಜೊತೆಗೆ ವಾಹನಗಳಲ್ಲಿ ಸಿಎನ್‌ಜಿ ಬಳಕೆಗೂ ಉತ್ತೇಜನ ದೊರೆಯಲಿದೆ. ಈ ವ್ಯಾಪ್ತಿಯಲ್ಲಿ ಸುಮಾರು 700 ಸಿಎನ್ ಜಿ ಸ್ಟೇಷನ್ ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

    ಕೇಂದ್ರ ಪೆಟ್ರೋಲಿಯಂ ಮತ್ತು ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್, ಕರ್ನಾಟಕ ಸಿಎಂ ಯಡಿಯೂರಪ್ಪ, ಕೇರಳ ಸಿಎಂ ಪಿಣರಾಯಿ ವಿಜಯನ್, ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ವಿದೇಶಾಂಗ ವ್ಯವಹಾರ ಖಾತೆ ರಾಜ್ಯ ಸಚಿವ ವಿ. ಮುರಳೀಧರನ್ ಭಾಗವಹಿಸಿದ್ದರು.

    ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರುವರೆಗೆ 450 ಕಿ.ಮೀ ಉದ್ದ ಈ ಗ್ಯಾಸ್ ಪೈಪ್ ಲೈನ್ ಅಳವಡಿಸಲಾಗಿದೆ. ಸುಮಾರು 3000 ಕೋಟಿ ರೂ ವೆಚ್ಚದ ಯೋಜನೆ ಇದಾಗಿದ್ದು, ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ನೈಸರ್ಗಿಕ ಅನಿಲ ಸಾಗಿಸುವ ಸಾಮರ್ಥ್ಯ ಹೊಂದಿದೆ. ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ ಮಂಗಳೂರಿನ ಎಂಸಿಎಫ್‌ ಈಗಾಗಲೇ ಈ ನೈಸರ್ಗಿಕ ಅನಿಲದ ಸಂಪರ್ಕವನ್ನು ಹೊಂದಿದ್ದು, ಮುಂದಿನ ಒಂದು ತಿಂಗಳಲ್ಲಿ ಎಂ.ಆರ್.ಪಿ‌ಎಲ್ ಮತ್ತು ಒ.ಎಂ.ಪಿ.ಎಲ್ ಕಾರ್ಖಾನೆಗೂ ಗ್ಯಾಸ್ ಸಂಪರ್ಕವಾಗಲಿದೆ. ಈ ಮೂಲಕ ಒಂದೇ ರಾಷ್ಟ್ರ, ಒಂದೇ ಗ್ಯಾಸ್ ಗ್ರಿಡ್ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

    ಈ ಯೋಜನೆಯಿಂದ ಕೇರಳ ಹಾಗೂ ಕರ್ನಾಟಕದ ಮಂಗಳೂರಿನ ಅನಿಲ ಆಧಾರಿತ ಕೈಗಾರಿಕೆಗಳಿಗೆ ಶುದ್ದ ಇಂಧನ ಸಿಗಲಿದೆ. ಗೇಲ್ ಸಂಸ್ಥೆಯೂ ಕಾಮಗಾರಿಯನ್ನು ನಡೆಸುತ್ತಿದ್ದು, ಅನಿಲ ಪೊರೈಕೆ ಮಾಡುತ್ತಿದೆ. ಮುಂದೆ ವಾಹನಗಳಿಗೆ, ಗೃಹ ಬಳಕೆ, ವಾಣಿಜ್ಯ ಬಳಕೆಗೂ ಲಭಿಸುವಂತೆ ಮಾಡಲಿದೆ. ಇದಕ್ಕಾಗಿ ಸದ್ಯ ನೋಂದಣಿ ನಡೆಯುತ್ತಿದ್ದು ವರ್ಷಾಂತ್ಯದೊಳಗೆ ಮಂಗಳೂರು ನಗರದ ಮನೆ ಮನೆಗಳಿಗೂ ಈ ನೈಸರ್ಗಿಕ ಅಡುಗೆ ಅನಿಲ‌ದ ಸಂಪರ್ಕ ಸಿಗಲಿದೆ. ಸದ್ಯ ಎಂ.ಸಿ.ಎಫ್ ತಿಂಗಳಿಗೆ 60 ಕೋಟಿ ರೂಗಳ ಈ ನೈಸರ್ಗಿಕ ಅನಿಲವನ್ನು ಪಡೆಯುತ್ತಿದೆ. ಈ ನೈಸರ್ಗಿಕ ಅನಿಲವು ಅಧಿಕ ಇಂಧನ ದಕ್ಷತೆ ಹೊಂದಿದೆ ಹಾಗೂ ಪರಿಸರ ಸ್ನೇಹಿಯಾಗಿದೆ. ಕೈಗಾರಿಕೆಗಳಿಗೂ ನಫ್ತಾದಂತ ಇಂಧನಕ್ಕಿಂತ ಕಡಿಮೆ ದರದಲ್ಲಿ ಇದು ಸಿಗಲಿದ್ದು, ಕೈಗಾರಿಕಾ ಉತ್ಪನ್ನಗಳ ಖರ್ಚು ಕಡಿಮೆಯಾಗಿ ಲಾಭದಾಯವಾಗಲಿದೆ. ಒಟ್ಟಿನಲ್ಲಿ ಈ ಪೈಪ್‌ಲೈನ್‌ನಿಂದಾಗಿ ಕರಾವಳಿಯ ಉದ್ದಿಮೆಗಳಿಗೆ ಶುದ್ದ ಇಂಧನ ಲಭಿಸಿದಂತಾಗಿದೆ. ಲಕ್ಷಾಂತರ ಮನೆಗಳಿಗೆ ಕಡಿಮೆ ವೆಚ್ಚದಲ್ಲಿ ಅನಿಲ ಪೂರೈಕೆಯಾಗಲಿದೆ.

    ಕೇರಳದ ಕೊಚ್ಚಿಯ ದ್ರವೀಕೃತ ನೈಸರ್ಗಿಕ ಅನಿಲ (ಎನ್‌ಎನ್‌ಜಿ)  ಮರುಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಶ್ಯೂರ್‌, ಪಾಲಕ್ಕಾಡ್, ಮಲ್ಲಪುರಂ, ಕೋಳಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಮೂಲಕ ಸಾಗಿ  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ.

    ಪೈಪ್‌ಲೈನ್‌ ನಿರ್ಮಾಣವು 12 ಲಕ್ಷ ಮಾನವ-ದಿನಗಳ ಉದ್ಯೋಗವನ್ನು ಸೃಷ್ಟಿಸಿತ್ತು. ಕೊಳವೆ ಮಾರ್ಗ ಅಳವಡಿಕೆಯು ಎಂಜಿನಿಯರಿಂಗ್ ಸವಾಲಾಗಿತ್ತು, ಏಕೆಂದರೆ ಕೊಳವೆ ಮಾರ್ಗವು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಲಮೂಲಗಳನ್ನು ದಾಟುವುದು ಅನಿವಾರ್ಯವಾಗಿತ್ತು. ಇದನ್ನು ಅಡ್ಡಡ್ಡ ಕೊರೆಯುವ ವಿಧಾನದ ವಿಶೇಷ ತಂತ್ರಜ್ಞಾನದ ಮೂಲಕ ಮಾಡಲಾಯಿತು.