Tag: gattimela

  • ಕನಸಿನ ಮನೆ ಕಟ್ಟಿದ ಸಂಭ್ರಮದಲ್ಲಿ ನಿಶಾ ರವಿಕೃಷ್ಣನ್

    ಕನಸಿನ ಮನೆ ಕಟ್ಟಿದ ಸಂಭ್ರಮದಲ್ಲಿ ನಿಶಾ ರವಿಕೃಷ್ಣನ್

    ‘ಗಟ್ಟಿಮೇಳ’ ಸೀರಿಯಲ್ ಖ್ಯಾತಿಯ ನಿಶಾ ರವಿಕೃಷ್ಣನ್ (Nisha Ravikrishnan) ಅವರು ಕನಸಿನ ಹೊಸ ಮನೆ ಗೃಹಪ್ರವೇಶ (House Warming) ಮಾಡಿದ ಸಂಭ್ರಮದಲ್ಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಿರುತೆರೆ ಕಲಾವಿದರು ಭಾಗಿಯಾಗಿ ಶುಭಕೋರಿದ್ದಾರೆ. ಇದನ್ನೂ ಓದಿ:ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ

     

    View this post on Instagram

     

    A post shared by Manjunath Magaji (@manjunathmagaji24)

    ಹಲವು ವರ್ಷಗಳಿಂದ ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿರುವ ನಿಶಾ ಅವರಿಗೆ ಚೆಂದದ ಮನೆ ಕಟ್ಟಿಸಬೇಕು ಎಂಬ ಕನಸಿತ್ತು. ಅದರಂತೆ ಮೇ 9ರಂದು ಶುಭ ಶುಕ್ರವಾರ ನಿಶಾ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಗಣಪತಿ ಹೋಮ ಹಾಗೂ ಸತ್ಯನಾರಾಯಣ ಪೂಜೆ ಮಾಡಿಸಿ ಅದ್ಧೂರಿಯಾಗಿ ಗೃಹಪ್ರವೇಶ ಮಾಡಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ

    ಈ ಕಾರ್ಯಕ್ರಮದಲ್ಲಿ ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಣ್ಣಯ್ಯ’ ಸೀರಿಯಲ್ ತಂಡ ಕೂಡ ಭಾಗಿಯಾಗಿದ್ದರು. ನಟಿಗೆ ವಿಶ್ ಮಾಡಿದ್ದಾರೆ.

     

    View this post on Instagram

     

    A post shared by Nagashree Begar (@nagashree__begar)

    ‘ಸರ್ವ ಮಂಗಲ ಮಾಂಗಲ್ಯೆ’ ಸೀರಿಯಲ್‌ನಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದ ನಿಶಾ ಆ ನಂತರ ಗಟ್ಟಿಮೇಳ ಸೀರಿಯಲ್‌ನಲ್ಲಿ ನಾಯಕಿಯಾಗಿ ಮಿಂಚಿದ್ದರು. ‘ರೌಡಿ ಬೇಡಿ’ ಎಂದೇ ಫೇಮಸ್ ಆಗಿದ್ದರು. ಈಗ ‘ಅಣ್ಣಯ್ಯ’ ಸೀರಿಯಲ್‌ನಲ್ಲಿ ಪಾರ್ವತಿ ಹೆಸರಿನ ಡಾಕ್ಟರ್ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ತೆಲುಗಿನ ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ.

  • ಶರಣ್ಯ ಶೆಟ್ಟಿ ಹೆಸರಿನಲ್ಲಿ ಹಣ ವಂಚನೆ- ಎಚ್ಚರಿಕೆ ನೀಡಿದ ನಟಿ

    ಶರಣ್ಯ ಶೆಟ್ಟಿ ಹೆಸರಿನಲ್ಲಿ ಹಣ ವಂಚನೆ- ಎಚ್ಚರಿಕೆ ನೀಡಿದ ನಟಿ

    ಸ್ಯಾಂಡಲ್‌ವುಡ್ ನಟಿ ಶರಣ್ಯ ಶೆಟ್ಟಿ (Sharanya Shetty) ಹೆಸರನ್ನು ಬಳಸಿಕೊಂಡು ಖದೀಮರು ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶರಣ್ಯ ಹೆಸರನ್ನು ದುರ್ಬಳಕೆ ಮಾಡಲಾಗಿದೆ. ಈ ಹಿನ್ನೆಲೆ ನನ್ನ ಹೆಸರು ದುರ್ಬಳಕೆ ಆಗುತ್ತಿದೆ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ನಕಲಿ ನಂಬರ್ ತೆಗೆದುಕೊಂಡು ಅದಕ್ಕೆ ನಟಿಯ ಫೋಟೋ ಡಿಪಿ ಹಾಕಿ ವಂಚಕರು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಶರಣ್ಯ ಶೆಟ್ಟಿ ಹೆಸರು ಬಳಸಿ ವಂಚನೆ ಮಾಡುತ್ತಿದ್ದಾರೆ. ಟ್ರು ಕಾಲರ್‌ನಲ್ಲೂ ಶರಣ್ಯ ಶೆಟ್ಟಿ ಹೆಸರು ಹಾಕಿಕೊಂಡು ಹೀರೋಯಿನ್ಸ್ ಡಿಟೈಲ್ಸ್ ಪಡೆಯುತ್ತಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಇದನ್ನೂ ಓದಿ:ಬಿಕಿನಿ ಧರಿಸಿ ಹಾಟ್ ಅವತಾರ ತಾಳಿದ ‘ಬಿಗ್‌ ಬಾಸ್‌’ ಖ್ಯಾತಿಯ ಇಶಾನಿ

    ನನ್ನ ಹೆಸರನ್ನು ಬಳಸಿಕೊಂಡು ಹಣಕ್ಕೆ ಬೇಡಿಕೆಯಿಟ್ಟು ನನ್ನ ಹೆಸರನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆ ನಂಬರ್ ನನ್ನದಲ್ಲ. ಇದೊಂದು ನಕಲಿ ನಂಬರ್, ಅದನ್ನು ನಂಬಿ ಯಾರು ಹಣ ಕಳುಹಿಸಬೇಡಿ. ಅಂತಹ ಖದೀಮರ ವಿರುದ್ಧ ನಾನು ಸೈಬರ್ ಕ್ರೈಂನಲ್ಲಿ ದೂರು ನೀಡೋದಾಗಿ ನಟಿ ತಿಳಿಸಿದ್ದಾರೆ.

    ಅಂದಹಾಗೆ, ಕಿರುತೆರೆಯ ಜನಪ್ರಿಯ ‘ಗಟ್ಟಿಮೇಳ’ ಸೀರಿಯಲ್ ಖಳನಾಯಕಿಯಾಗಿ ಶರಣ್ಯ ಗುರುತಿಸಿಕೊಂಡರು. ಆ ನಂತರ ಹಿರಿತೆರೆಯಲ್ಲೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಶರಣ್ಯ ನಟಿಸಿದ್ದಾರೆ.

  • ‘ಗಟ್ಟಿಮೇಳ’ ಧಾರಾವಾಹಿ ಅಂತ್ಯ: ಕಣ್ಣೀರಿಟ್ಟ ಫ್ಯಾನ್ಸ್

    ‘ಗಟ್ಟಿಮೇಳ’ ಧಾರಾವಾಹಿ ಅಂತ್ಯ: ಕಣ್ಣೀರಿಟ್ಟ ಫ್ಯಾನ್ಸ್

    ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಗಟ್ಟಿ ಮೇಳ’ದ ಕೊನೆಯ ಸಂಚಿಕೆ ಇಂದು ಪ್ರಸಾರವಾಗಲಿದೆ. ಈ ಮೂಲಕ ಜನಪ್ರಿಯ ಧಾರಾವಾಹಿಯೊಂದು ಅಂತ್ಯ ಕಾಣುತ್ತಿದೆ. ಸಾವಿರಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿರುವ ಈ ಧಾರಾವಾಹಿಯಲ್ಲಿ ರಕ್ಷ್ ಮತ್ತು ನಿಶಾ ರವಿಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.

    ಕೊನೆಯ ಸಂಚಿಕೆಯ ಸಂದರ್ಭದಲ್ಲಿ ವಾಹಿನಿಯು ಪ್ರಶ್ನೆಯೊಂದನ್ನು ವೀಕ್ಷಕರಿಗೆ ಕೇಳಿದ್ದು, ನಿಮ್ಮ ನೆಚ್ಚಿನ ಗಟ್ಟಿಮೇಳ ಧಾರಾವಾಹಿ ಕ್ಲೈಮ್ಯಾಕ್ಸ್ ಹಂತದಲ್ಲಿದೆ. ನೀವು ಏನನ್ನು ಮಿಸ್ ಮಾಡಿಕೊಳ್ತೀರಿ’ ಎಂದು ಜೀ ವಾಹಿನಿಯು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ. ಅನೇಕ ನಾನಾ ರೀತಿಯ ಉತ್ತರಗಳನ್ನು ನೀಡಿದ್ದಾರೆ. ಈ ಧಾರಾವಾಹಿಯ ವೇದಾಂತ್ ಮತ್ತು ಅಮೂಲ್ಯ ಜೋಡಿಯನ್ನು ತುಂಬಾ ಮಿಸ್ ಮಾಡಿಕೊಳ್ಳೋದಾಗಿ ಕಾಮೆಂಟ್ ಮಾಡಿದ್ದಾರೆ.

    ಈ ಜನಪ್ರಿಯ ಧಾರಾವಾಹಿ ಆರಂಭವಾಗಿದ್ದು ಮಾರ್ಚ್ 2019ರಂದು. ಈಗಾಗಲೇ 1243 ಸಂಚಿಕೆಗಳನ್ನು ಧಾರಾವಾಹಿ ಪೂರೈಸಿದೆ. ಇಂದು ತನ್ನ ಕೊನೆಯ ಎಪಿಸೋಡ್ ಅನ್ನು ಪ್ರಸಾರ ಮಾಡುವ ಮೂಲಕ  ಜನಪ್ರಿಯ ಧಾರಾವಾಹಿಯೊಂದು ಅಂತ್ಯ ಹಾಡಿದಂತಾಗಿದೆ.

  • ಶೆಟ್ರು ಹುಡುಗಿಯ ಹಾಟ್ ಪೋಸ್‌ಗೆ ಬೋಲ್ಡ್ ಆದ ಪಡ್ಡೆಹುಡುಗರು

    ಶೆಟ್ರು ಹುಡುಗಿಯ ಹಾಟ್ ಪೋಸ್‌ಗೆ ಬೋಲ್ಡ್ ಆದ ಪಡ್ಡೆಹುಡುಗರು

    ಕಿರುತೆರೆಯಲ್ಲಿ ಹಾವಳಿ ಮಾಡಿದ ಮೇಲೆ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಮೋಡಿ ಮಾಡುತ್ತಿರುವ ಶರಣ್ಯ ಶೆಟ್ಟಿ (Sharanya Shetty) ಸದಾ ಒಂದಲ್ಲಾ ಒಂದು ಫೋಟೋಶೂಟ್‌ನಿಂದ ಸಂಚಲನ ಸೃಷ್ಟಿಸುತ್ತಲೇ ಇರುತ್ತಾರೆ. ನಯಾ ಲುಕ್‌ನಲ್ಲಿ ನಟಿ ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ್ದಾರೆ.

    ಹಳದಿ ಬಣ್ಣದ ಮಾಡ್ರರ್ನ್ ಡ್ರೆಸ್‌ನಲ್ಲಿ ಸಖತ್ ಹಾಟ್ ಆಗಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ. ಶರಣ್ಯ ಹೊಸ ಅವತಾರಕ್ಕೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಈ ಫೋಟೋಗಳು ಇದೀಗ ವೈರಲ್ ಆಗುತ್ತಿವೆ. ಇದನ್ನೂ ಓದಿ:ನಟಿ ಸಂಗೀತಾ ಸವಾಲಿಗೆ ತಲೆ ಶೇವ್ ಮಾಡಿಕೊಂಡ ಕಾರ್ತಿಕ್

    ‘ಗಟ್ಟಿಮೇಳ’ (Gattimela) ಸೀರಿಯಲ್‌ನ ಸಾಹಿತ್ಯ ಪಾತ್ರದ ಮೂಲಕ ಟಿವಿ ಪ್ರಿಯರ ಮನೆಗೆದ್ದ ಚೆಲುವೆ ಈಗ ಬೆಳ್ಳಿಪರದೆಯಲ್ಲಿ ಹೀರೋಯಿನ್ ಮಿಂಚ್ತಿದ್ದಾರೆ. ಈಗಾಗಲೇ 1980, ಹುಟ್ಟುಹಬ್ಬದ ಶುಭಾಶಯಗಳು, ಸ್ಫೂಕಿ ಕಾಲೇಜ್ ಸಿನಿಮಾಗಳಲ್ಲಿ ಶರಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ಸದ್ಯ ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ನಾಯಕಿಯಾಗಿ ‘ಕೃಷ್ಣಂ ಪ್ರಣಯ ಸಖಿ’, ಅನೀಶ್‌ಗೆ ಜೋಡಿಯಾಗಿ ಹೊಸ ಚಿತ್ರ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಶರಣ್ಯ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ಎಲಿಮಿನೇಷನ್ ಹಾಟ್ ಸೀಟ್‌ನಲ್ಲಿ 9 ಮಂದಿ- ಯಾರ ಆಟಕ್ಕೆ ಅಂತ್ಯ?

    ಹೊಸ ಬಗೆಯ ಕಥೆಗಳನ್ನ ಕೇಳ್ತಿರೋ ಶರಣ್ಯ, ಸಿನಿಮಾಗಾಗಿ ಸಕಲ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಇಳಿದಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾಗಳ ಅಪ್‌ಡೇಟ್ ನೀಡಲಿದ್ದಾರೆ. ಸಿನಿರಸಿಕರ ಮನಗೆಲ್ಲುವಲ್ಲಿ ಶೆಟ್ರ ಬೆಡಗಿ ಅದೆಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾರೆ ಕಾದುನೋಡಬೇಕಿದೆ.

  • ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ‘ಗಟ್ಟಿಮೇಳ’ ನಟಿ ನಿಶಾ

    ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ‘ಗಟ್ಟಿಮೇಳ’ ನಟಿ ನಿಶಾ

    ನ್ನಡ ಕಿರುತೆರೆಯ ಗಟ್ಟಿಮೇಳ (Gattimela) ನಟಿ ನಿಶಾ ರವಿಕೃಷ್ಣನ್ (Nisha Ravikrishnan) ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ (Kateel Durga Parameshwari) ಭೇಟಿ ನೀಡಿದ್ದಾರೆ. ಕರಾವಳಿ ನಟಿ ಅನ್ವಿತಾ ಸಾಗರ್ (Anvitha Sagar) ಜೊತೆ ನಿಶಾ ದಕ್ಷಿಣ ಕನ್ನಡದ ಕಟೀಲಿಗೆ ಬಂದಿದ್ದಾರೆ.

    ನಿಶಾ ರವಿಕುಮಾರ್ ಮತ್ತು ಅನ್ವಿತಾ ಸಾಗರ್ ಇಬ್ಬರೇ ಕಾರು ಓಡಿಸಿಕೊಂಡು ಮಂಗಳೂರಿಗೆ ಹೋಗಿ ದೇವರ ದರ್ಶನ ಪಡೆದಿದ್ದಾರೆ. ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ:ತುಳು ಭಾಷೆಯಲ್ಲಿ ಅವಕಾಶ ಸಿಕ್ಕರೆ ನಟಿಸುತ್ತೇನೆ- ಅನಂತ್ ನಾಗ್

    ಅಲ್ಲಿನ ಆನೆಯ ಜೊತೆ ಸೆಲ್ಫಿ ತೆಗೆದು ಆನೆಯ ಸೊಂಡಿಲಿಗೆ ಕಿಸ್ ಮಾಡಿದ್ದನ್ನು ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಸಖತ್ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. ನಟಿಯರ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ನಟಿ ನಿಶಾ, ಕನ್ನಡ ಮತ್ತು ತೆಲುಗು ಸೀರಿಯಲ್‌ಗಳಲ್ಲಿ ನಟಿಸುತ್ತಿದ್ದಾರೆ. ‘ಅಂದೊಂದಿತ್ತು ಕಾಲ’ ಎಂಬ ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್, ಅದಿತಿ ಪ್ರಭುದೇವ (Aditi Prabhudeva) ಜೊತೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಅನ್ವಿತಾ, ಗಟ್ಟಿಮೇಳ ಸೀರಿಯಲ್ ಜೊತೆ ತುಳು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲವರ್‌ಗಾಗಿ ಕವಿತೆ ಬರೆದ ‘ಗಟ್ಟಿಮೇಳ’ ನಟಿ ನಿಶಾ? ಹುಡುಗ ಯಾರು?

    ಲವರ್‌ಗಾಗಿ ಕವಿತೆ ಬರೆದ ‘ಗಟ್ಟಿಮೇಳ’ ನಟಿ ನಿಶಾ? ಹುಡುಗ ಯಾರು?

    ಕಿರುತೆರೆಯ ಜನಪ್ರಿಯ ನಟಿ ನಿಶಾ ರವಿಕೃಷ್ಣನ್ (Nisha Ravikrishnan) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸೈಲೆಂಟ್ ಆಗಿ ‘ಗಟ್ಟಿಮೇಳ’ (Gatimela) ನಟಿ ಎಂಗೇಜ್ ಆಗಿದ್ದಾರೆ. ಈ ಕುರಿತ ನಟಿಯ ಪೋಸ್ಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ಟಿವಿ ಪರದೆಯಲ್ಲಿ ಅಮೂಲ್ಯ ಎಂದೇ ಫೇಮಸ್ ಆಗಿರುವ ವೇದಾಂತ್‌ನ ಅರಗಿಣಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಮತ್ತು ತೆಲುಗು ಸೀರಿಯಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ‘ಇಷ್ಟಕಾಮ್ಯ’ (Istakamya) ಸಿನಿಮಾದಲ್ಲಿ ಬ್ಯಾಕ್ ಡ್ಯಾನ್ಸರ್ ಆಗಿದ್ದ ನಿಶಾ, ಬಳಿಕ ‘ಸರ್ವ ಮಂಗಳ ಮಾಂಗಲ್ಯೇ’ ಸೀರಿಯಲ್‌ನಲ್ಲಿ ಹೀರೋ ತಂಗಿ ಪಾತ್ರದಲ್ಲಿ ಗುರುತಿಸಿಕೊಂಡರು. ಬಳಿಕ ‘ಗಟ್ಟಿಮೇಳ’ ಸೀರಿಯಲ್ಲಿ ನಾಯಕಿಯಾಗಿ ಮಿಂಚ್ತಿದ್ದಾರೆ.

    ನಟಿ ನಿಶಾ ಅವರು ಸೀರೆಯುಟ್ಟು ಫೋಟೋಶೂಟ್ ಮಾಡಿಸಿದ್ದಾರೆ. ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಚೆಂದದ ಅಡಿಬರಹ ನೀಡುವ ಮೂಲಕ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಸೈಲೆಂಟ್ ಆಗಿ ನಿಶಾ ಎಂಗೇಜ್ (Engage) ಆದ್ರಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಕಾಡ್ತಿದೆ. ಇದನ್ನೂ ಓದಿ:ಬಾಕ್ಸ್ ಆಫೀಸ್ ಬಾಚುತ್ತಿರುವ ದಿ ಕೇರಳ ಸ್ಟೋರಿ : 7 ದಿನಕ್ಕೆ ₹80 ಕೋಟಿ ಕಲೆಕ್ಷನ್

    ನಿಶಾ ಅವರು ತಮ್ಮ ಫೋಟೋ ಜೊತೆಗೆ ‘ನನ್ನ ಎದೆಯ ಬೀದಿಯಲಿ ಹೊಂಗನಸ ವ್ಯಾಪಾರಿ ನೀ’ ಎಂದು ಅಡಿಬರಹ ನೀಡಿದ್ದಾರೆ. ಮತ್ತೊಂದು ಪೋಸ್ಟ್ನಲ್ಲಿ  ‘ಜೀವನ ಹೂಬನ ಚಂದ ಈಗ ನಿನ್ನಿಂದ’ ಎಂದು ಬರೆದುಕೊಂಡಿದ್ದಾರೆ. ಈಗ ಅಭಿಮಾನಿಗಳು  ‘ಆ ಹೊಂಗನಸ ವ್ಯಾಪಾರಿ ಯಾರು..? ಯಾರಿಂದ ಚೆಂದ’ ಎಂದು ಕೇಳಿದ್ದಾರೆ. ಇನ್ನೂ ಕೆಲವರು ನಿಶಾ ಅವರ ಸಾಲುಗಳಿಗೆ ಸೋತು ಅವರೂ ಕವಿ ಆಗಿದ್ದಾರೆ. ನಿಶಾಳನ್ನು ಗೊಂಬೆ ಎಂದು ಕರೆದು ಖುಷಿಪಟ್ಟಿದ್ದಾರೆ. ಸುಮ್ನೆ ಏನೇನೋ ಊಹಿಸಿಕೊಳ್ಳಬೇಡಿ ಎನ್ನುತ್ತಿದ್ದಾರೆ ಒಟ್ನಲ್ಲಿ ನಿಶಾ ಅವರು ಪ್ರೀತಿಯಲ್ಲಿ ಬಿದ್ದಿದ್ದಾರಾ? ಎಂಬ ಅನುಮಾನ ಶುರುವಾಗಿದೆ. ಆದರೆ, ಈ ಅನುಮಾನಗಳಿಗೆ ನಿಶಾ ಅವರೇ ಉತ್ತರ ನೀಡಬೇಕಿದೆ.

  • `ಗಟ್ಟಿಮೇಳ’ ನಟಿ ಪ್ರಿಯಾ ಜೊತೆ ಸಿದ್ದು ಮದುವೆ ಡೇಟ್ ಫಿಕ್ಸ್

    `ಗಟ್ಟಿಮೇಳ’ ನಟಿ ಪ್ರಿಯಾ ಜೊತೆ ಸಿದ್ದು ಮದುವೆ ಡೇಟ್ ಫಿಕ್ಸ್

    ಹಿರಿತೆರೆ ಮಾತ್ರವಲ್ಲ ಕಿರುತೆರೆಯಲ್ಲೂ ಮದುವೆ ದಿಬ್ಬಣದ ಸೌಂಡ್ ಜೋರಾಗಿದೆ. ಇತ್ತೀಚಿಗೆ `ಪಾರು’ ಸೀರಿಯಲ್ ಹೀರೋ ಶರತ್ ಪದ್ಮನಾಭ್ ಹಸೆಮಣೆ ಏರಿದ್ದರು. ಈಗ ಇದೇ ಸೀರಿಯಲ್‌ನ ಸಿದ್ದು ಮೂಲಿಮನಿ (Siddu Moolimani) ಮತ್ತು `ಗಟ್ಟಿಮೇಳ’ (Gattimela) ನಟಿ ಪ್ರಿಯಾ (Priya) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ಕಿರುತೆರೆಯ ಲವ್ ಬರ್ಡ್ಸ್ ಪ್ರಿಯಾ ಮತ್ತು ಸಿದ್ದು ಮದುವೆಗೆ (Wedding) ಈಗಾಗಲೇ ಕೌಂಟ್‌ಡೌನ್ ಶುರುವಾಗಿದೆ. ವಾಹಿನಿಯ ರಿಯಾಲಿಟಿ ಶೋನಲ್ಲಿ ಶುರುವಾದ ಸ್ನೇಹ, `ಧಮಾಕ’ (Dhamaka) ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಜೋಡಿಹಕ್ಕಿಗಳಾದರು. ಈ ವೇಳೆ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಈಗ ಹಿರಿಯರ ಒಪ್ಪಿಗೆಯ ಮೇರೆಗೆ ಪ್ರಿಯಾ- ಸಿದ್ದು ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ಅಣ್ಣನ ಮದುವೆಯಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ

     

    View this post on Instagram

     

    A post shared by Priya j achar???? (@priya_j_achar)

    ಕಳೆದ ನವೆಂಬರ್‌ನಲ್ಲಿ ಪ್ರಿಯಾ ಮತ್ತು ಸಿದ್ದು ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಸರ್ಪ್ರೈಸ್ ನೀಡಿದ್ದರು. ಈಗ ಮದುವೆಗೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಗಟ್ಟಿಮೇಳ ನಟಿ ಪ್ರಿಯಾ ಜೊತೆ ಇದೇ ಫೆಬ್ರವರಿಯಲ್ಲಿ ಖಾಸಗಿ ರೆಸಾರ್ಟ್‌ವೊಂದರಲ್ಲಿ ಸಿದ್ದು ಮದುವೆಯಾಗುತ್ತಿದ್ದಾರೆ.

     

    View this post on Instagram

     

    A post shared by Priya j achar???? (@priya_j_achar)

    ಇನ್ನೂ ಸಿದ್ದು ಮೂಲಿಮನಿ, ರಂಗಿತರಂಗ, ವಿಕ್ರಾಂತ್ ರೋಣ, ಧಮಾಕ, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿ ಪ್ರಿಯಾ ʻಗಟ್ಟಿಮೇಳʼ ಸೀರಿಯಲ್ ಜೊತೆ ಹೊಸ ಸಿನಿಮಾ ಕೂಡ ಮಾಡ್ತಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಹೊರಬೀಳಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದುಲ್ಕರ್ ಸಲ್ಮಾನ್ ಜೊತೆ `ಗಟ್ಟಿಮೇಳ’ ನಿಶಾ ರವಿಕೃಷ್ಣನ್

    ದುಲ್ಕರ್ ಸಲ್ಮಾನ್ ಜೊತೆ `ಗಟ್ಟಿಮೇಳ’ ನಿಶಾ ರವಿಕೃಷ್ಣನ್

    ನ್ನಡ ಕಿರುತೆರೆಯ `ಗಟ್ಟಿಮೇಳ’ ಸೀರಿಯಲ್ ಮೂಲಕ ಮನೆ ಮಾತಾಗಿರುವ ನಟಿ ನಿಶಾ ರವಿಕೃಷ್ಣನ್ ತೆಲುಗು ಕಿರುತೆರೆಯಲ್ಲೂ ಛಾಪೂ ಮೂಡಿಸುತ್ತಿದ್ದಾರೆ. ಸದ್ಯ ಮಾಲಿವುಡ್ ಸ್ಟಾರ್ ದುಲ್ಕರ್ ಸಲ್ಮಾನ್‌ಗೆ ನಿಶಾ ರವಿಕೃಷ್ಣನ್ ಜೊತೆಯಾಗಿದ್ದಾರೆ.

    `ಗಟ್ಟಿಮೇಳ’ ಸೀರಿಯಲ್‌ನ ಅಮೂಲ್ಯ ಆಗಿ ಸಾಕಷ್ಟು ಅಭಿಮಾನಿಗಳ ಮನಗೆದ್ದಿರುವ ನಿಶಾ ರವಿಕೃಷ್ಣನ್ ಈಗ ತೆಲುಗು ಕಿರುತೆರೆಯಲ್ಲೂ ಸಕ್ರಿಯರಾಗಿದ್ದಾರೆ. ಈ ವೇಳೆ ತೆಲುಗಿನ ಶೋವೊಂದರಲ್ಲಿ ದುಲ್ಕರ್ ಸಲ್ಮಾನ್ ಮತ್ತು ಮೃಣಾಲ್ `ಸೀತಾ ರಾಮಂ’ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದರು. ಈ ವೇಳೆ ದುಲ್ಕರ್ ಸಲ್ಮಾನ್ ಅವರನ್ನು ನಿಶಾ ಭೇಟಿಯಾಗಿದ್ದಾರೆ. ಇದನ್ನೂ ಓದಿ:ನಿರ್ದೇಶಕ ಹೇಳಿದ ಮಾತು ಕೇಳದೇ ಆಸ್ಪತ್ರೆ ಸೇರಿದ ಕಿರಿಕ್ ನಟಿ ಸಂಯುಕ್ತ ಹೆಗ್ಡೆ

    ಶೋನಲ್ಲಿ ಸಹನಟ ಸಿದ್ದು ಜತೆ ನಿಶಾ ಹೆಜ್ಜೆ ಹಾಕಿದ್ದರು. ನಿಶಾ ಅವರ ಡ್ಯಾನ್ಸ್ ನೋಡಿ ದುಲ್ಕರ್ ಸಲ್ಮಾನ್ ಕೂಡ ಮೆಚ್ಚುಗೆ ಸೂಚಿಸಿದ್ದರು. ಈ ವೇಳೆ ದುಲ್ಕರ್ ಸಲ್ಮಾನ್ ಮಾತಿಗೆ ನಿಶಾ ಸಖತ್ ಖುಷಿಪಟ್ಟಿದ್ದಾರೆ. ಇಂದು 36ನೇ ವಸಂತಕ್ಕೆ ಕಾಲಿಟ್ಟಿರುವ ದುಲ್ಕರ್ ಸಲ್ಮಾನ್‌ಗೆ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ದುಲ್ಕರ್ ಜತೆಗಿನ ಫೋಟೋ ಹಂಚಿಕೊಂಡು ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ವಿಶ್ ಮಾಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • 625ಕ್ಕೆ 619 ಅಂಕಗಳನ್ನು ಗಳಿಸಿದ `ಗಟ್ಟಿಮೇಳ’ ಖ್ಯಾತಿಯ ಮಹತಿ ಭಟ್

    625ಕ್ಕೆ 619 ಅಂಕಗಳನ್ನು ಗಳಿಸಿದ `ಗಟ್ಟಿಮೇಳ’ ಖ್ಯಾತಿಯ ಮಹತಿ ಭಟ್

    `ಡ್ರಾಮಾ ಜ್ಯೂನಿಯರ್ಸ್’ ಮತ್ತು ಗಟ್ಟಿಮೇಳ ಸೀರಿಯಲ್ ಮೂಲಕ ಗುರುತಿಸಿಕೊಂಡಿರುವ ಮಹತಿ ವೈಷ್ಣವಿ ಭಟ್ ಎಸ್‌ಎಸ್‌ಎಲ್‌ಸಿನಲ್ಲಿ ಶೇ.99 ಅಂಕ ಪಡೆದು ಪಾಸ್ ಆಗಿದ್ದಾರೆ. ಈ ಕುರಿತಯ ಮಹತಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಮೂಡಿ ಬರುತ್ತಿರುವ `ಗಟ್ಟಿಮೇಳ’ ಸೀರಿಯಲ್ ಜತೆ ಶಿಕ್ಷಣವನ್ನ ಕೂಡ ನಿಭಾಯಿಸುತ್ತಾ ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ ಬರೋಬ್ಬರಿ 619 ಮಾರ್ಕ್ಸ್ಗಳನ್ನು ನಟಿ ಮಹತಿ ಗಳಿಸಿದ್ದಾರೆ. ಈ ಮೂಲಕ ಅವರ ಫಲಿತಾಂಶ ಶೇ.99.04 ಆಗಿದೆ. ಇದು ಅವರಿಗೆ ಅವರ ಕುಟುಂಬಕ್ಕೆ ಖುಷಿ ನೀಡಿದೆ.

    ಗಟ್ಟಿಮೇಳ ನಟಿ ಮಹತಿ ಯಾವ ವಿಷಯಕ್ಕೆ ಎಷ್ಟು ಅಂಕ ಬಂದಿದೆ ಎಂಬ ವಿವರ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಕನ್ನಡದಲ್ಲಿ 124, ಇಂಗ್ಲೀಷ್‌ನಲ್ಲಿ 100, ಹಿಂದಿ 99, ಗಣಿತ 100, ವಿಜ್ಞಾನ 97, ಸಮಾಜ ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದಾರೆ. ರಾಜ್ಯಾದ್ಯಂತ 7ನೇ ಸ್ಥಾನ ಪಡೆದಿದ್ದಾರೆ. ಧಾರಾವಾಹಿ ಶೂಟಿಂಗ್ ಮಧ್ಯೆ ಉತ್ತಮ ಅಂಕ ಪಡೆದಿರೋದಕ್ಕೆ ಮಹತಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಜ್ಯೂ.ಎನ್‌ಟಿಆರ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಹೊಸ ಚಿತ್ರ ಘೋಷಣೆ ಮಾಡಿದ ಪ್ರಶಾಂತ್‌ನೀಲ್-ತಾರಕ್

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮಹತಿ, ನೀವು ಇಲ್ಲದೇ ಇದು ಅಸಾಧ್ಯ ಎಂದು ತಮ್ಮ ಕುಟುಂಬ ಮತ್ತು ಶಿಕ್ಷಕರಿಗೆ ಹಾಗೆಯೇ `ಗಟ್ಟಿಮೇಳ’ ತಂಡಕ್ಕೂ ಮಹತಿ ಅಭಿನಂದನೆ ತಿಳಿಸಿದ್ದಾರೆ. ಅಭಿಮಾನಿಗಳ ಹಾರೈಕೆಗೂ ಧನ್ಯವಾದ ತಿಳಿಸಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗಿದೆ.

  • ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂದ ಗಟ್ಟಿಮೇಳ ರಕ್ಷಿತ್‌ – ಎಫ್‌ಐಆರ್‌ ಕಾಪಿ ಲಭ್ಯ

    ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂದ ಗಟ್ಟಿಮೇಳ ರಕ್ಷಿತ್‌ – ಎಫ್‌ಐಆರ್‌ ಕಾಪಿ ಲಭ್ಯ

    ಬೆಂಗಳೂರು: ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂಬಂತೆ ಗಟ್ಟಿಮೇಳ ಸೀರಿಯಲ್ ಖ್ಯಾತಿಯ ರಕ್ಷಿತ್ ಸುಳ್ಳು ಹೇಳುತ್ತಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ನಾವು ತಪ್ಪು ಮಾಡಿಲ್ಲ. ನಮ್ಮ ಮೇಲೆ ಎಫ್‌ಐಆರ್ ಆಗಿಲ್ಲ. ಮಾಧ್ಯಮಗಳು ನಮ್ಮ ಮೇಲೆ ಸುಳ್ಳು ಸುದ್ದಿ ಪ್ರಸಾರ ಮಾಡಿವೆ ಎಂದು ರಕ್ಷಿತ್ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಆದರೆ ಶುಕ್ರವಾರ ರಾತ್ರಿ ರಕ್ಷಿತ್‌ ಮತ್ತು ಗ್ಯಾಂಗ್‌ ಕೋವಿಡ್‌ ನೈಟ್‌ ಕಾರ್ಫ್‌ಯೂ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪಕ್ಷಕ್ಕೆ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ವಿವಿಧ ಐಪಿಸಿ ಸೆಕ್ಷನ್‌ ಅಡಿಯಲ್ಲಿ ಕೆಂಗೇರಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ,  ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ.

    ಯಾವೆಲ್ಲ ಸೆಕ್ಷನ್?
    ಕೆಂಗೇರಿ ಠಾಣೆಯ ಎಸ್‌ಐ ನಾಗರಾಜ್‌ ಅವರು ನೀಡಿದ ದೂರಿನ ಮೇರೆಗೆ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್‌ 143(ಕಾನೂಬಾಹಿರ ಸಭೆ), 147(ಗಲಾಟೆ),188(ಸರ್ಕಾರದ ಆದೇಶ ಉಲ್ಲಂಘಿಸಿ ಅವಿಧೇಯ ವರ್ತನೆ), 269(ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ಕಾಯಿಲೆ ಸೋಂಕನ್ನು ಹರಡುವುದು) ಅಡಿ ರಕ್ಷಿತ್ ವಿರುದ್ಧ 6 ಎಫ್. ಸೇರಿದೆ. ಇದನ್ನೂ ಓದಿ:  ಗಟ್ಟಿಮೇಳ ಸೀರಿಯಲ್ ಖ್ಯಾತಿಯ ನಟ ರಕ್ಷಿತ್ ಆಯಂಡ್ ಗ್ಯಾಂಗ್‌ನಿಂದ ರಂಪಾಟ

    ಯಾರೆಲ್ಲ ಆರೋಪಿಗಳು?
    ರಕ್ಷಿತ್‌(ಎ1), ಅಭಿಷೇಕ್‌(ಎ2), ರಂಜನ್‌(ಎ3), ರಾಕೇಶ್‌ ಕುಮಾರ್‌(ಎ4), ರವಿಚಂದ್ರನ್‌(ಎ5), ಅನುಷಾ(ಎ6), ಶರಣ್ಯಾ(ಎ7) ಆರೋಪಿಗಳಾಗಿದ್ದಾರೆ.

    ದೂರಿನಲ್ಲಿ ಏನಿದೆ?
    ಶುಕ್ರವಾರ ರಾತ್ರಿ ನಾವು ಮಧ್ಯರಾತ್ರಿ1:35ಕ್ಕೆ ಜಿಂಜರ್‌ ಲೇಕ್ ವ್ಯೂನಲ್ಲಿ ಕುಡಿದು ಯಾರೋ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಠಾಣೆಗೆ ಕರೆ ಮಾಡಿ ತಿಳಿಸಿದ್ದರು. ಈ ಕರೆಯ ಸ್ಥಳಕ್ಕೆ ತೆರಳಿದಾಗ ಹೋಟೆಲ್‌ನಲ್ಲಿ 5 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ಜೋರಾಗಿ ಗಲಾಟೆ ಮಾಡಿ ಶಾಂತಿ ಭಂಗ ಮಾಡುತ್ತಿರುವುದು ತಿಳಿದು ಬಂದಿದೆ.

    ಈ ವೇಳೆ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಸ್ಥಳದಿಂದ ತೆರಳುವಂತೆ ಸೂಚಿಸಿದಾಗ ಏರು ಧ್ವನಿಯಲ್ಲಿ ನಮ್ಮೊಂದಿಗೆ ಮಾತನಾಡುವ ಸ್ಥಳದಿಂದ ತೆರಳಲು ನಿರಾಕರಿಸಲಾಗಿದೆ. ಕೂಡಲೇ ಅವರನ್ನು ಹೊಯ್ಸಳ ಸಿಬ್ಬಂದಿ ಮೂಲಕ ಠಾಣೆಗೆ ಕರೆ ತರಲಾಗಿದೆ. ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಕ್ಕೆ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಈ ಮೂಲಕ ದೂರು ನೀಡಲಾಗಿದೆ.