ಅಂತೆಯೇ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆ ಜಿಲ್ಲಾಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ. ನಿತೇಶ್ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಗುರುದತ್ ಹೆಗಡೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ನಡೆಸಿಕೊಡುವ ಲಾಕ್ ಅಪ್ ರಿಯಾಲಿಟಿ ಶೋನಲ್ಲಿ ನಟಿ ಮಂದಾನಾ ಕರೀಮಿ ಮಾತನಾಡುತ್ತಾ, ತಾವು ಪತಿಯಿಂದ ದೂರವಾದ ನಂತರ ಸಾಂತ್ವಾನ ಹೇಳುವಂತೆ ನಟಿಸಿ ಖ್ಯಾತ ನಿರ್ದೇಶಕರೊಬ್ಬರು ತಮ್ಮನ್ನು ಬಳಸಿಕೊಂಡು, ಬೀಸಾಕಿದರು ಎಂದು ಹೇಳಿಕೆ ನೀಡಿದ್ದರು. ಮಂದಾನಾ ಮತ್ತು ಬಾಲಿವುಡ್ ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ತುಂಬಾ ಕ್ಲೋಸ್ ಆಗಿದ್ದು, ನಂತರ ದೂರ ದೂರವಾಗಿದ್ದರಿಂದ ಆ ನಿರ್ದೇಶಕ ಅನುರಾಗ್ ಕಶ್ಯಪ್ ಎಂದೇ ಬಿಂಬಿಸಲಾಯಿತು. ಸೋಷಿಯಲ್ ಮೀಡಿಯಾ ಸೇರಿದಂತೆ ಹಲವರು ಅನುರಾಗ್ ಕಶ್ಯಪ್ ಅವರತ್ತು ಬೊಟ್ಟು ಮಾಡಿ ತೋರಿಸಿದ್ದರು. ಇದೀಗ ಮಂದಾನಾ ಮಾತಿಗೆ ಟ್ವಿಸ್ಟ್ ಸಿಕ್ಕಿದೆ. ಇದನ್ನೂ ಓದಿ : ಗಮನ ಸೆಳೆದ ‘ಒಂದಂಕೆ ಕಾಡು’ ಮೋಷನ್ ಪೋಸ್ಟರ್
ಲಾಕ್ ಅಪ್ ಶೋ ನಿಂದ ಎಲಿಮಿನೇಟ್ ಆಗಿ ಆಚೆ ಬಂದಿರುವ ಮಂದಾನಾ ಕರೀಮಿ ಈ ಕುರಿತಾಗಿ ಮಾತನಾಡಿದ್ದಾರೆ. ತಮಗೆ ಅನ್ಯಾಯ ಆಗಿದ್ದು ಹೇಗೆ? ಆ ನಿರ್ದೇಶಕ ಇವರೊಂದಿಗೆ ಹೇಗೆ ಸಂಬಂಧ ಹೊಂದಿದ. ಯಾಕೆ ದೂರವಾದ ಎನ್ನುವ ಎಲ್ಲ ಮಾಹಿತಿಯನ್ನೂ ಆಚೆ ಹಾಕಿದ್ದಾರೆ. ಈ ಮೂಲಕ ಮತ್ತೊಂದು ವಿವಾದಕ್ಕೂ ಅವರು ಕಾರಣವಾಗಿದ್ದಾರೆ. ಇದನ್ನೂ ಓದಿ : Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್ ಹೇಗಿದೆ ಗೊತ್ತಾ?
ಮಂದಾನಾ ಕರೀಮಿ ಅವರು ಗೌರವ್ ಗುಪ್ತಾ ಎನ್ನುವವರ ಜತೆ ಮದುವೆ ಆಗಿದ್ದರು. ಈ ಜೋಡಿ ತುಂಬಾ ದಿನಗಳ ಕಾಲ ಸತಿಪತಿಗಳಾಗಿ ಉಳಿಯಲಿಲ್ಲ. ಮಂದಾನಾ ನಿರ್ವಹಿಸುತ್ತಿದ್ದ ಪಾತ್ರಗಳು ಪತಿ ಇಷ್ಟವಾಗುತ್ತಿರಲಿಲ್ಲ ಎನ್ನುವ ಕಾರಣಕ್ಕೆ ಮತ್ತು ವೈಯಕ್ತಿಕ ಹಲವು ಕಾರಣಗಳಿಂದಾಗಿ ಇಬ್ಬರೂ ದೂರವಾದರು. ಪತಿಯು ದೂರವಾದ ನಂತರ ಮಂದಾನಾ ಮಾನಸಿಕ ಖಿನ್ನತೆಗೂ ಒಳಗಾದರು. ಈ ಸಂದರ್ಭದಲ್ಲಿ ಅವರಿಗೆ ನೆರವಿಗೆ ಬಂದಿದ್ದು ಬಾಲಿವುಡ್ ನ ಖ್ಯಾತ ನಿರ್ದೇಶಕ. ಇದನ್ನೂ ಓದಿ:`ಅದ್ದೂರಿ ಲವರ್’ಗಾಗಿ `ಕಿಸ್’ ಹೀರೋ ವಿರಾಟ್ ಭರ್ಜರಿ ವರ್ಕೌಟ್
ಲಾಕ್ ಅಪ್ ಶೋನಿಂದ ಆಚೆ ಬಂದ ನಂತರ ಮಂದಾನಾ ಅವರಿಗೆ ಆ ನಿರ್ದೇಶಕರು ಯಾರು? ಅನುರಾಗ್ ಕಶ್ಯಪ್ ಹೆಸರು ತಳುಕು ಹಾಕಿಕೊಂಡಿದೆ. ಅದು ನಿಜನಾ? ಎಂದು ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿದ್ದಾರೆ. ತಾವು ಯಾವತ್ತೂ ಅನುರಾಗ್ ಅವರ ಹೆಸರನ್ನು ಹೇಳಿಲ್ಲ. ಶೋನಲ್ಲೂ ಆ ನಿರ್ದೇಶಕರು ಯಾರು ಎಂದೂ ಹೇಳಿರಲಿಲ್ಲ. ಸುಖಾಸುಮ್ಮನೆ ಅವರು ಹೆಸರನ್ನು ಈ ವಿವಾದಕ್ಕೆ ತಳುಕು ಹಾಕುವುದು ಬೇಡ ಎಂದು ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ:ನಿಮ್ಮ ಹೃದಯವೇ ನನ್ನ ಸಾಮ್ರಾಜ್ಯ: ಅಭಿಮಾನಿಗಳಿಗೆ ಸುಂದರ ಕಥೆ ಹೇಳಿದ ರಾಕಿಭಾಯ್
ತಮಗೆ ನಿರ್ದೇಶಕನೊಬ್ಬನಿಂದ ಅನ್ಯಾಯವಾಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು, ಆ ನಿರ್ದೇಶಕ ಯಾರು ಎನ್ನುವುದನ್ನು ಹೇಳಲಾರೆ ಅಂದಿದ್ದಾರೆ. ಲಾಕ್ ಅಪ್ ಶೋನ ಫಾರ್ಮೆಟ್ ಹಾಗಿದ್ದರಿಂದ ಅನಿವಾರ್ಯವಾಗಿಯೇ ಈ ವಿಷಯವನ್ನು ಪ್ರಸ್ತಾಪ ಮಾಡಲಾಯಿತು. ನಾನು ಯಾವತ್ತೂ ಅನುರಾಗ್ ಕಶ್ಯಪ್ ಅವರ ಹೆಸರನ್ನು ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ಉತ್ತರಿಸಿದ್ದಾರೆ ಮಂದಾನಾ.
ಬೆಂಗಳೂರು: ನಗರದಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ಗಳನ್ನು ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಬೇಕಿದ್ದು, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಧಿಕಾರಿಗಳು ತತ್ಕ್ಷಣ ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಬ್ಯಾನರ್ಸ್ಗಳ ತೆರವುಗೊಳಿಸುವಿಕೆ ಬಗ್ಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳನ್ನು ವ್ಯಾಪಕವಾಗಿ ಅಳವಡಿಸಲಾಗುತ್ತಿದೆ. ಆಯಾ ವಲಯ ವ್ಯಾಪ್ತಿಯಲ್ಲಿಯ ಸ್ಥಳೀಯ ಅಧಿಕಾರಿಗಳು ಯಾವುದೇ ಫ್ಲೆಕ್ಸ್ಗಳನ್ನು ಅಳವಡಿಸಲು ಬಿಡಬಾರದು. ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸುವಂತಹವರ ಮೇಲೆ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ
ಚುನಾವಣೆಯ ಸಂದರ್ಭದಲ್ಲಿ ಹೇಗೆ ನಗರವು ಬ್ಯಾನರ್ಸ್, ಫ್ಲೆಕ್ಸ್ಗಳಿಂದ ಮುಕ್ತವಾಗಿರುತ್ತದೆಯೋ ಅದೇ ರೀತಿ ಈಗಲೂ ಕೂಡ ನಗರವು ಬ್ಯಾನರ್ಸ್, ಫ್ಲೆಕ್ಸ್ಗಳಿಂದ ಮುಕ್ತವಾಗಿರಬೇಕು. ನಗರದಲ್ಲಿ ಎಲ್ಲೆಲ್ಲಿ ಹೆಚ್ಚಾಗಿ ಫ್ಲೆಕ್ಸ್, ಬ್ಯಾನರ್ಗಳನ್ನು ಅಳವಡಿಸಲಾಗಿದೆಯೋ ಅಂತಹ ಸ್ಥಳಗಳಲ್ಲಿ ಪೊಲೀಸ್ ಸಹಯೋಗದ ಜೊತೆಗೆ ಮಾರ್ಷಲ್ಗಳನ್ನು ಸಹ ನಿಯೋಜನೆ ಮಾಡಿಕೊಂಡು ತೆರವುಗೊಳಿಸಲು ಮುಂದಾಗಬೇಕು. ಪಾಲಿಕೆಯ ಶಿಲ್ಟ್ ಅಂಡ್ ಟ್ರ್ಯಾಕ್ಟರ್, ಪ್ರಹಾರಿ ಸೇರಿದಂತೆ ಹೆಚ್ಚುವರಿಯಾಗಿ ಇನ್ನಿತರೆ ವಾಹನಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ತೆರವು ಕಾರ್ಯಾರಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್, ಭಿತ್ತಿಪತ್ರ, ಬಾವುಟಗಳು ಸೇರಿದಂತೆ ಇತ್ಯಾದಿ ಜಾಹೀರಾತು/ಪ್ರಕಟಣೆಗಳ ಅಳವಡಿಕೆಯು ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದರು.
ಆದರೂ ಸಹ ನಗರದಲ್ಲಿ ಮತ್ತೆ ಮತ್ತೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾರ್ನರ್ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳಾಗುವಂತಹ ಕೆಲಸ ಮಾಡಲಾಗುತ್ತಿದೆ. ಈ ಸಂಬಂಧ ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ತೆರವು ಕಾರ್ಯಾಚರಣೆ ಮಾಡಿ, ಯಾವುದೇ ಅನಧಿಕೃತ ಫ್ಲೆಕ್ಸ್ಗಳು ಇರದಂತೆ ಕ್ರಮವಹಿಸಲು ಸೂಚನೆ ನೀಡಿದರು. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ
ಪೊಲೀಸ್ ಇಲಾಖೆಯಿಂದ ಸಹಯೋಗ ನೀಡಲು ಮನವಿ:
ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್ಗಳನ್ನು ಅಳವಡಿಸುವ ಪ್ರಕ್ರಿಯೆ ಹೆಚ್ಚಾಗಿದ್ದು, ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಸಿಬ್ಬಂದಿಯು ಅನಧಿಕೃತ ಫ್ಲೆಕ್ಸ್ಗಳನ್ನು ತೆರವುಗೊಳಿಸುವ ವೇಳೆ ಪಾಲಿಕೆ ಅಧಿಕಾರಿಗಳ ಜೊತೆ ತೆರಳಿ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು.
ಇದಕ್ಕೆ ಪೊಲೀಸ್ ಇಲಾಖೆಗೆ ಸಹಕಾರ ಅತ್ಯಗತ್ಯ ಎಂದು ಮುಖ್ಯ ಆಯುಕ್ತರು ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್ರವರಿಗೆ ಮನವಿ ಮಾಡಿದರು. ಈ ವೇಳೆ ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್ರವರು ಪ್ರತಿಕ್ರಿಯಿಸಿ, ಪಾಲಿಕೆಯ ಜೊತೆಗೆ ನಮ್ಮ ಅಧಿಕಾರಿಗಳು ಕೈಜೋಡಿಸಿ ಕಾರ್ಯನಿರ್ವಹಿಸಲಿದ್ದು, ಪಾಲಿಕೆ ಅಧಿಕಾರಿಗಳಿಗೆ ಬೇಕಾದಂತಹ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಪಾಲಿಕೆಯ ಎಲ್ಲಾ ವಲಯ ಆಯುಕ್ತರುಗಳು, ಹಣಕಾಸು ವಿಭಾಗದ ಅಪರ ಆಯುಕ್ತರು ವೆಂಕಟೇಶ್. ಎಸ್, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಎಲ್ಲಾ ವಲಯ ಮುಖ್ಯ ಇಂಜಿನಿಯರ್ಗಳು ಎಲ್ಲಾ ವಿಭಾಗೀಯ ಕಾರ್ಯಪಾಲಕ ಇಂಜಿನಿಯರ್ಗಳು ಇತರ ಅಧಿಕಾರಿಗಳು ಉಪಸ್ಥಿರಿದ್ದರು.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಹಯೋಗದೊಂದಿಗೆ ಜನಾಗ್ರಹ ಪ್ರತಿಷ್ಠಾನವು ವಾರ್ಷಿಕ ನಗರ ಬಜೆಟ್ಗಾಗಿ ಸಾರ್ವಜನಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಈ ಬಾರಿ ವಿಶೇಷವಾಗಿ ಉದ್ಯಾನವನ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಾಗರಿಕರ ಪ್ರತಿಕ್ರಿಯೆ ಪಡೆಯುವ ಅಭಿಯಾನಕ್ಕೆ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಚಾಲನೆ ನೀಡಿದರು.
ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರು ಮಾತನಾಡಿದ್ದು, ಜನಾಗ್ರಹ ಪ್ರತಿಷ್ಠಾನದ ಮೂಲಕ ‘ನನ್ನ ನಗರ ನನ್ನ ಬಜೆಟ್’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. 2015 ರಿಂದಲೂ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದ್ದು, ಆ ಮೂಲಕ ನಗರದ ಬಜೆಟ್ನಲ್ಲಿ ಜನರು ಭಾಗವಹಿಸುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು
‘ಮೈ ಸಿಟಿ ಮೈ ಬಜೆಟ್’ ವಾಹನವು ಎಲ್ಲ ವಾರ್ಡ್ಗಳಿಗೆ ತೆರಳಿ ನಾಗರಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಕಳೆದ ಬಾರಿ ಪಾದಚಾರಿ ಮಾರ್ಗ ಮತ್ತು ಯೆಲ್ಲೋ ಸ್ಪಾಟ್(ತೆರೆದ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ) ಬಗ್ಗೆ ಗಮನ ಹರಿಸಲಾಗಿತ್ತು. ಈ ಬಾರಿ ಉದ್ಯಾನವನ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಾಗರಿಕರ ಸಲಹೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.
ಇಂತಹ ಕಾರ್ಯಕ್ರಮ ಸಕ್ರಿಯವಾಗಿ ನಡೆಯಲಿ. ಇತರ ದೊಡ್ಡ-ದೊಡ್ಡ ಮಹಾನಗರಗಳಿಗೆ ಹೋಲಿಸಿದರೆ ಪಾಲ್ಗೊಳ್ಳುವಿಕೆಯಲ್ಲಿ ಬೆಂಗಳೂರು ಸಾಕಷ್ಟು ಮುಂದಿದೆ. ನಗರದಲ್ಲಿ ವಾರ್ಡ್ ಸಮಿತಿಗಳು ಕೂಡ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ ವರ್ಷದ ಆಯವ್ಯಯದಲ್ಲಿ ಪ್ರತಿ ವಾರ್ಡ್ಗೆ 60 ಲಕ್ಷ ರೂ. ಅನುದಾನವನ್ನು ಬಜೆಟ್ನಲ್ಲಿ ಮೀಸಲಿಡಲಾಗಿತ್ತು. ಇದನ್ನು ಮುಂದುವರಿಸಿಕೊಂಡು ಹೋಗುವ ಅವಶ್ಯಕತೆ ಇದೆ ಎಂದು ಹೇಳಿದರು.
‘ಮೈ ಸಿಟಿ ಮೈ ಬಜೆಟ್’ ಅಭಿಯಾನವು ವಿವಿಧ ಎನ್.ಜಿ.ಒ, ಆರ್.ಡಬ್ಲ್ಯೂ.ಎಗಳು ಸೇರಿದಂತೆ 40ಕ್ಕೂ ಹೆಚ್ಚು ಸಂಸ್ಥೆಗಳ ಸಹಯೋಗದಲ್ಲಿ ಮಾರ್ಚ್ 15 ರವರೆಗೆ ನಡೆಯಲಿದೆ. ಬಜೆಟ್ ವಾಹನವು ನಗರದ ಎಲ್ಲ ವಾರ್ಡ್ಗಳಲ್ಲಿ ಸಂಚರಿಸಿ ನಾಗರಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಇದಲ್ಲದೆ ವೆಬ್ಸೈಟ್ http://mycitymybudget.in/ ಗೆ ನಾಗರಿಕರು ಭೇಟಿ ನೀಡಿ ಅಭಿಪ್ರಾಯಗಳನ್ನು ತಿಳಿಸಬಹುದು ಎಂದರು. ಇದನ್ನೂ ಓದಿ: ನಯನತಾರಾ ಜೊತೆಗಿನ ಫೋಟೋ ಹಂಚಿಕೊಂಡ ಸಮಂತಾ – ಕುಚಿಕು ಗೆಳೆತಿಯರ ಫೋಟೋ ಕಹಾನಿ
ಬೆಂಗಳೂರು: ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್ಐಆರ್ ದಾಖಲಿಸಲು ಎಲ್ಲಾ ವಲಯದ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: 9 ಎಫ್ಐಆರ್, 7 ಮಂದಿ ಅರೆಸ್ಟ್ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ
ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಮುಖ್ಯ ಇಂಜಿನಿಯರ್ಗಳ ನೇತೃತ್ವದ ತಂಡವು ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ಸ್, ಫ್ಲೆಕ್ಸ್ , ಪೋಸ್ಟರ್ಸ್, ಬಂಟಿಂಗ್ಸ್ಗಳ ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ನಗರದಲ್ಲಿ ಇನ್ನು ಮುಂದೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಗಳನ್ನು ಅಳವಡಿಸುವುದು ಕಂಡುಬಂದಲ್ಲಿ, ಕೂಡಲೇ ತಪ್ಪಿತಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಒಂದು ಟ್ವೀಟ್ ಎಡವಟ್ – ಶೇಷಾದ್ರಿಪುರಂ ಪೊಲೀಸರ ವಶದಲ್ಲಿ ಚೇತನ್
ಬೆಂಗಳೂರು: ಕೊರೊನಾ ಮೂರನೇ ಅಲೆಯನ್ನು ಎಲ್ಲರ ಸಹಾಯದಿಂದ ಯಶಸ್ವಿಯಾಗಿ ನಿಭಾಯಿಸಲಾಗಿದ್ದು, ನಮ್ಮ ಮುಂದಿನ ಗುರಿ ಭವಿಷ್ಯದಲ್ಲಿ ಸಂಭಾವ್ಯ ಅಲೆಗಳನ್ನು ಎದುರಿಸುವ ಬಗೆಗಿರಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.
ಪಾಲಿಕೆಯ ಕೋವಿಡ್-19 ತಜ್ಞರ ಸಮಿತಿಯೊಂದಿಗೆ ಇಂದು ನಡೆದ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಕ್ರಿಯಾಶೀಲ ಸಂಚಾರಿ ಟ್ರಯಾಜ್ ಘಟಕ ಮತ್ತು ಟೆಲಿ ಟ್ರಯಾಜ್ ಘಟಕ ನಿರ್ಮಿಸಲಾಗಿದೆ. ವೈದ್ಯರು ಮತ್ತು ಸಿಬ್ಬಂದಿ ತಂಡದ ನೆರವಿನಿಂದ ದಿನಕ್ಕೆ 3,000ಕ್ಕೂ ಹೆಚ್ಚು ಕೊರೊನಾ ಸೋಂಕಿತರಿಗೆ ಅವರವರ ಮನೆಯಲ್ಲಿ ಟ್ರಯಾಜ್ ಮಾಡಲಾಗುತ್ತಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ತಗ್ಗುತ್ತಿದ್ದು, ಎಲ್ಲರ ಶ್ರಮದಿಂದ ಕೊರೊನಾ ಮೂರನೇ ಅಲೆಯನ್ನು ನಿಭಾಯಿಸಲಾಗುತ್ತಿದೆ. ಮುಂದೇನಾದರೂ ಹೊಸ ಅಲೆಗಳು ಬಂದಲ್ಲಿ, ಎದುರಿಸುವ ಬಗ್ಗೆ ನಾವು ಸಿದ್ಧರಾಗಿರಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ
ನಗರದಲ್ಲಿ ಮೂರನೇ ಅಲೆಯ ಬಗ್ಗೆ ಜನರಲ್ಲಿನ ಭಯ ಹೋಗಲಾಡಿಸಿ ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಾಯಿತು. ಪರಿಸ್ಥಿತಿಯನ್ನು ಎದುರಿಸುವ ಬಗ್ಗೆ ಗಮನಹರಿಸಲಾಯಿತು. ಲಸಿಕಾಕರಣವನ್ನೂ ಮಾಡಲಾಗುತ್ತಿದೆ. ಶೀಘ್ರದಲ್ಲಿಯೇ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣವು ನಿರ್ದೇಶಿತ ಗುರಿ ತಲುಪಲಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಕಡಿಮೆಯಿದೆ ಎಂದರು.
ಜನವರಿ ತಿಂಗಳಲ್ಲಿ ಶೇ. 1.8 ಸಕ್ರಿಯ ಪ್ರಕರಣಗಳಿದ್ದವು. ಅದರಲ್ಲಿ ಹೆಚ್ಚಿನವರು 60 ವರ್ಷ ಮೇಲ್ಪಟ್ಟವರು. ನಗರದಲ್ಲಿ ಕೊರೊನಾ ಸೋಂಕು ದೃಢಪಟ್ಟು ಐಸಿಯುನಲ್ಲಿ ದಾಖಲಾಗುವ ಎಲ್ಲ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು ಸೂಚಿಸಲಾಗಿದೆ. ಈ ಸಂಬಂಧ ಗಂಭೀರ ಪ್ರಕರಣಗಳ ಪೈಕಿ ಆಸ್ಪತ್ರೆಗೆ ದಾಖಲಾಗಿರುವವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುತ್ತದೆ. ಪ್ರಸ್ತುತ ಅಂತಹ ಎಲ್ಲ ಮಾದರಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್ರನ್ನು ನಾವು ಬೆಂಬಲಿಸುತ್ತೇವೆ: ಮಮತಾ ಬ್ಯಾನರ್ಜಿ
ಸಭೆಯಲ್ಲಿ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್, ಕೋವಿಡ್ ತಜ್ಞರ ಸಮಿತಿ ಸದಸ್ಯರು ಹಾಗೂ ಇನ್ನಿತರು ಉಪಸ್ಥಿತರಿದ್ದರು.
ಬೆಂಗಳೂರು: ಜೆರೋಧಾ ಪ್ರಾಯೋಜಕತ್ವ, ಮಂತ್ರ 4 ಚೇಂಜ್ ಹಾಗೂ ಸೂರ್ಯ ಫೌಂಡೇಶನ್ ಸಂಸ್ಥೆಗಳು ಬಿಬಿಎಂಪಿ ಸಹಯೋಗದೊಂದಿಗೆ ದಕ್ಷಿಣವಲಯ ವ್ಯಾಪ್ತಿಗೆ ಒಂದು ಸಂಚಾರಿ ಪರೀಕ್ಷಾ ಘಟಕ(ಮೊಬೈಲ್ ಟೆಸ್ಟಿಂಗ್ ಯುನಿಟ್-ಎಂಟಿಯು)ವನ್ನು ಪಾಲಿಕೆಗೆ ಹಸ್ತಾಂತರಿಸಿದೆ. ಮುಖ್ಯ ಆಯುಕ್ತರು ಗೌರವ್ ಗುಪ್ತ ಅವರು ಇಂದು ಎಂಟಿಯುಗೆ ಚಾಲನೆ ನೀಡಿದರು.
ಈ ಸಂಚಾರಿ ಪರೀಕ್ಷಾ ಘಟಕವು ಪಾಲಿಕೆಯ ದಕ್ಷಿಣ ವಲಯದ ವಾರ್ ರೂಂ ಮತ್ತು ಸಂಚಾರಿ ಟ್ರಯಾಜ್ ಘಟಕದೊಂದಿಗೆ ಸಂಪರ್ಕ ಹೊಂದಿರುತ್ತದೆ. ವಾರ್ ರೂಂನಲ್ಲಿ ಸ್ವೀಕರಿಸಲ್ಪಡುವ ಕರೆಗಳಿಗೆ ಅನುಸಾರವಾಗಿ ಸಂಚಾರಿ ಪರೀಕ್ಷಾ ಘಟಕವು ವಲಯದ 44 ವಾರ್ಡ್ಗಳಲ್ಲಿಯೂ 24/7 ಕಾರ್ಯನಿರ್ವಹಿಸಲಿದ್ದು, ದಕ್ಷಿಣ ವಲಯದಲ್ಲಿ ಯಶಸ್ವಿಯಾದರೆ ಉಳಿದ 7 ವಲಯಗಳಿಗೂ ಒಂದೊಂದು ಸಂಚಾರಿ ಪರೀಕ್ಷಾ ಘಟಕ ನಿಯೋಜನೆ ಮಾಡಲಾಗುವುದು. ಇದನ್ನೂ ಓದಿ: ಮಹಿಳಾ ಉದ್ದೇಶಿತ ಆಯವ್ಯಯದಡಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ
ಈ ಸಂಚಾರಿ ಪರೀಕ್ಷಾ ಘಟಕದಲ್ಲಿ ಓರ್ವ ಚಾಲಕ ಮತ್ತು ಓರ್ವ ಪ್ಯಾರಾಮೆಡಿಕ್ ಇರಲಿದ್ದು, ಪ್ಯಾರಾಮೆಡಿಕ್ ಸಿಬ್ಬಂದಿಯು ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡುತ್ತಾರೆ. ಪಾಸಿಟಿವ್ ದೃಢಪಟ್ಟಲ್ಲಿ ವ್ಯಕ್ತಿಗೆ ಪಾಲಿಕೆಯಿಂದ ಕರೆ ಬರುತ್ತದೆ. ಪ್ರಕರಣದ ಗಂಭೀರತೆಯ ಆಧಾರದ ಮೇಲೆ, ಟ್ರಯಾಜ್ ಬಳಿಕ ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತದೆ.
ಬೆಂಗಳೂರು: ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಇಬ್ಬರಲ್ಲಿ ದೃಢಪಟ್ಟಿದ್ದು, ಒಬ್ಬರ ಸಂಪರ್ಕಿತರ ಟ್ರಾವೆಲ್ ಹಿಸ್ಟರಿ ಲಭ್ಯವಾಗಿಲ್ಲ. ಹೀಗಾಗಿ ಹಲವರಲ್ಲಿ ರೂಪಾಂತರಿ ಇರುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎರಡು ಪ್ರಕರಣ ದೃಢಪಟ್ಟಿರುವ ಬಗ್ಗೆ ಭಾರತ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಓಮಿಕ್ರಾನ್ ದೃಢಪಟ್ಟ 66 ವಯಸ್ಸಿನ ಒಬ್ಬ ವ್ಯಕ್ತಿ ನ.20ಕ್ಕೆ ಬೆಂಗಳೂರಿಗೆ ಬಂದಿದ್ದರು. ಪರೀಕ್ಷೆ ವೇಳೆ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಅವರ ಸ್ವಾಬ್ ಅನ್ನು ಜಿನೋಟಿಕ್ ಲ್ಯಾಬ್ಗೆ ಕಳಿಸಲಾಗಿತ್ತು. ಒಮಿಕ್ರಾನ್ ಎಂದು ದೃಢಪಟ್ಟಿದೆ. ಅವರನ್ನು ಹೋಟೆಲ್ನಲ್ಲಿ ಕ್ವಾರಂಟೈನ್ಲ್ಲಿರಿಸಲಾಗಿತ್ತು. ಮೊದಲ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿದ್ದವರ ಮೇಲೆ ನಿಗಾವಹಿಸಲಾಗಿದೆ. ಎಲ್ಲರ ವರದಿಯೂ ನಗೆಟಿವ್ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್: ಸುಧಾಕರ್
ಎರಡನೇ ವ್ಯಕ್ತಿ 46 ವಯಸ್ಸಿನವರಾಗಿದ್ದು, ನ.24 ರಂದು ಬೆಂಗಳೂರಿಗೆ ಆಗಮಿಸಿದ್ದರು. ಮೊದಲು ಹೋಂ ಐಸೋಲೇಷನ್ ಮಾಡಲಾಗಿತ್ತು. ಅ ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ 12 ಹಾಗೂ ದ್ವಿತೀಯ ಸಂಪರ್ಕದಲ್ಲಿ 205 ಮಂದಿ ಇದ್ದಾರೆ ಎಂದು ಗುರುತಿಸಲಾಗಿದೆ. ಅದರಲ್ಲಿ 5 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಈಗ 5 ಜನರ ಸ್ವಾಬ್ ಅನ್ನು ಜಿನೋಟಿಕ್ ಲ್ಯಾಬ್ಗೆ ಕಳಿಸಲಾಗಿದೆ. ಆದರೆ ಈ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಇಲ್ಲ. ಅತನಿಗೆ ಸ್ಥಳೀಯವಾಗಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಇಬ್ಬರಿಗೆ ಪಾಸಿಟಿವ್ ಬಂದಿದೆ. ಓಮಿಕ್ರಾನ್ ದೃಢಪಟ್ಟಿರುವ ಎರಡನೇ ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಬೌರಿಂಗ್ ಆಸ್ಪತ್ರೆಯಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್ ಸೋಂಕಿತರಿಗೆ ಬೆಡ್ ಮೀಸಲಿಡಲಾಗಿದೆ. ಓಮಿಕ್ರಾನ್ ಸೋಂಕಿತರು ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಅವರ ಸಂಪರ್ಕದಲ್ಲಿದ್ದು, ಕೋವಿಡ್ ಪಾಸಿಟಿವ್ ಬಂದವರ ಸ್ವಾಬ್ ಅನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದರು.
– ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ದೂರು
ಬೆಂಗಳೂರು: 2020-21ನೇ ಸಾಲಿನಲ್ಲಿ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಬೆಲ್ಟ್, ಸ್ವೆಟರ್ ಗಳನ್ನು ನೀಡದೇ ಬೋಗಸ್ ಬಿಲ್ ಮಾಡಿ ಬಿಬಿಎಂಪಿಗೆ ಆರ್ಥಿಕ ನಷ್ಟ ಉಂಟುಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾಧ್ಯಕ್ಷ ಡಾ.ಸಿ.ಎಸ್ ರಘು ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ದೂರು ನೀಡಿದ್ದಾರೆ.
ಆಯುಕ್ತರನ್ನು ಶನಿವಾರ ಭೇಟಿಯಾದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಸಿ.ಎಸ್. ರಘು ಅವರು, ಈ ಅಕ್ರಮದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೋಲಾಗಿರುವ ಸಾರ್ವಜನಿಕರ ತೆರಿಗೆ ಹಣವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಬೇಕು, “2020-21ನೇ ಸಾಲಿನ ಪಾಲಿಕೆ ಆಯವ್ಯಯದಲ್ಲಿ ಶಾಲಾ ಕಾಲೇಜುಗಳಿಗೆ ಅವಶ್ಯವಿರುವ ಮೂಲ ಸೌಕರ್ಯ ಹಾಗೂ ಇತರ ಸೌಲಭ್ಯಗಳನ್ನು ತುರ್ತಾಗಿ ಒದಗಿಸಲು ಕೆಹೆಚ್ಡಿಸಿ ಹಾಗೂ ಎಂಎಸ್ಐಎಲ್ ಸಂಸ್ಥೆ ವತಿಯಿಂದ ಅಗತ್ಯ ಸಲಕರಣೆಗಳನ್ನು ಖರೀದಿಸಿರುವುದಾಗಿ ಹೇಳಲಾಗಿದೆ. 2021ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳೀಗೆ ಶೂ, ಸಾಕ್ಸ್, ಬೆಲ್ಟ್ ವಿತರಿಸಲು ಪಾಲಿಕೆಯಿಂದ 1.72 ಕೋಟಿ ರೂ.ಪಾವತಿ ಆಗಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಇವುಗಳನ್ನು ವಿತರಿಸುವ ಪ್ರಮೇಯವೇ ಬರುವುದಿಲ್ಲ. ಹೀಗಾಗಿ ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗುತ್ತದೆ,” ಎಂದು ರಘು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಅದೇ ರೀತಿ 400 ರೂಪಾಯಿ ಬೆಲೆಯ ಸ್ವೆಟರ್ ಅನ್ನು 1,400 ರೂಪಾಯಿ ಎಂದು ನಮೂದಿಸಿ ಬಿಲ್ ಮಾಡಲಾಗಿದೆ. ಈ ಕುರಿತು ಆರ್ಟಿಐ ಮೂಲಕ ಮಾಹಿತಿ ಪಡೆದಿದ್ದೇವೆ. ಬಿಬಿಎಂಪಿಯಲ್ಲಿ ಬಿಲ್ ಕ್ಲಿಯರ್ ಆಗುವುದೇ ಕಷ್ಟ. ಆದರೆ ಈ ಖರೀದಿ ಪ್ರಕರಣಗಳಲ್ಲಿ ದಿಢೀರ್ ಬಿಲ್ ಪಾವತಿಯಾಗಿದ್ದು, ಇದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಆದ್ದರಿಂದ ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ದಲಿತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಒದಗಿಸಿ,” ಎಂದು ಅವರು ಮನವಿ ಮಾಡಿದರು. ಇದನ್ನೂ ಓದಿ: SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸುರೇಶ್ ಕುಮಾರ್
ಈ ಪ್ರಕರಣದಲ್ಲಿ ಪ್ರಮುಖವಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಹಾಗೂ ವಿಶೇಷ ಹಣಕಾಸು ಆಯುಕ್ತೆ ತುಳಸಿ ಮೇದಿನೇನಿ ತಪ್ಪಿತಸ್ಥರಾಗಿದ್ದಾರೆ. 6-3-21 ರಲ್ಲಿ ಕಾರ್ಯಾದೇಶ ನೀಡಿದ್ದು ನಂತರ ಶಾಲಾ ಕಾಲೇಜುಗಳು ಪ್ರಾರಂಭವೇ ಆಗಿಲ್ಲ. ಕಾರ್ಯಾದೇಶದಲ್ಲಿ ಒಂದು ಕಡೆ ಸ್ವೆಟರ್ ಮತ್ತಿತರ ವಸ್ತುಗಳು ಎಂದು ಉಲ್ಲೇಖ ಆಗಿದ್ದರೆ, ಡಿ.ಸಿ.ಬಿಲ್ ನಲ್ಲಿ ಪುಸ್ತಕ ಎಂದು ನಮುದಾಗಿದೆ. ಮಕ್ಕಳಿಗೆ ಯಾವುದೇ ವಸ್ತುಗಳನ್ನು ಕೊಟ್ಟಿರುವ ಛಾಯಾಚಿತ್ರ ವರದಿಯಲ್ಲಿ ಉಲ್ಲೇಖಿಸಲಾಗಿಲ್ಲ. ಅಲ್ಲದೆ ಕೇವಲ ಶಾಲೆಗಳಿಗೆ ನೀಡಿದ್ದೇವೆ ಎಂದು ಮುಚ್ಚಳಿಕೆ ಮೇಲೇ ಹಣ ಪಾವತಿ ಮಾಡಲಾಗಿದೆ. ಕೆಲಸ ಮಾಡಿ ನಾಲ್ಕಾರು ವರ್ಷದ ಕಾಲ ಚಪ್ಪಲಿ ಸವೇದರು ಹಣ ನೀಡದೆ ಸತಾಯಿಸುವ ಬಿಬಿಎಂಪಿ ಅಧಿಕಾರಿಗಳು ಇಷ್ಟು ಬೇಗ ಹಣ ನೀಡಿದ್ದು ಹೇಗೆ ಎಂದು ಅವರು ಪ್ರಶ್ನಿಸಿದರು.
ತಾವು ನೀಡಿದ ದೂರಿನ ಕುರಿತಂತೆ ಆಯುಕ್ತರಾದ ಗೌರವ್ ಗುಪ್ತಾ ಅವರು ಪೂರಕವಾಗಿ ಸ್ಪಂದಿಸಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಡಾ.ಸಿ.ಎಸ್. ರಘು ತಿಳಿಸಿದ್ದಾರೆ.
ಬೆಂಗಳೂರು: ನಗರದಲ್ಲಿ ಡೆಲ್ಟಾ ಪ್ರಕರಣಗಳು ಮಹಾ ಸ್ಫೋಟ ಆಗುತ್ತಿರುವ ಹೊತ್ತಲ್ಲೇ ಬಿಬಿಎಂ ಕಮಿಷನರ್ ಗೌರವ್ ಗುಪ್ತಾ ಆತಂಕಕಾರಿ ಹೇಳಿಕೆಯನ್ನು ನೀಡಿದ್ದಾರೆ. ಡೆಲ್ಟಾ ವೇರಿಯಂಟ್ ವೈರಾಣು ತಳಿ, 10 ಕೇಸ್ ಗಳು ದೃಢವಾದ್ರೆ, ಅದ್ರಲ್ಲಿ 6-7 ಕೇಸ್ ಗಳು ಡೆಲ್ಟಾ ಕೇಸ್ ಗಳು ಪತ್ತೆಯಾಗುತ್ತಿವೆ. ಎರಡನೇ ಅಲೆಯಲ್ಲಾದ ಸಾವು ನೋವುಗಳಿಗೆ ಇದರ ಹಬ್ಬುವಿಕೆಯೇ ಕಾರಣ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ, ಡೆಲ್ಟಾ ವೆರಿಯಂಟ್ ಕೇಸ್ ಗಳ ಬಗ್ಗೆ ಮಾಹಿತಿಯನ್ನು ನೀಡಿದ್ದು, ಪ್ರತಿನಿತ್ಯದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಡೆಲ್ಟಾ ರೂಪಾಂತರ ವೈರಸ್ನ ಪ್ರಕರಣಗಳು ಪತ್ತೆಯಾಗುತ್ತಿವೆ. ಡೆಲ್ಟಾ ವೇರಿಯಂಟ್ನ ಮತ್ತೊಂದು ರೂಪವೇ ಡೆಲ್ಟಾ ಪ್ಲಸ್. ಜನರ ಕೈಯಲ್ಲಿಯೇ ಎಲ್ಲವೂ. ಜನರ ಸುರಕ್ಷತೆ ಮುಖ್ಯ. ಜನ ಗಾಬರಿ ಪಡುವಂತಹ ಅವಶ್ಯಕತೆಯಿಲ್ಲ ಎಂದರು. ಇದನ್ನೂ ಓದಿ: ಮೈಸೂರಲ್ಲಿ ಶೀಘ್ರವೇ ಡೆಲ್ಟಾ ಪ್ಲಸ್ ಪರೀಕ್ಷಾ ಲ್ಯಾಬ್ ಆರಂಭ
ಬೆಂಗಳೂರಿನಲ್ಲಿ ಒಟ್ಟು 525 ಡೆಲ್ಟಾ ವೆರಿಯಂಟ್ ಪ್ರಕರಣಗಳು ಪತ್ತೆಯಾಗಿದ್ದು, ಸ್ಯಾಂಪಲ್ಸ್ ನ್ನು ನಿಮಾನ್ಸ್ ಹಾಗೂ ಎನ್ಸಿಬಿಎಸ್ಗೆ ಕಳುಹಿಸಲಾಗಿದೆ. ಮುಂದಿನ ದಿನಗಳಲ್ಲಿ ಜನರು ಆದಷ್ಟು ಸುರಕ್ಷತೆಯಿಂದ ಇರಬೇಕೆಂದು ಸಲಹೆ ನೀಡಿದರು.