Tag: Gauri Day

  • ಧೂಮಪಾನ ಆರೋಗ್ಯಕ್ಕೆ ಹಾನಿಕರ ಅನ್ನುವಂತೆ ಇರುತ್ತೆ ಮೋದಿ ಹೇಳಿಕೆ: ಪ್ರಕಾಶ್ ರೈ

    ಧೂಮಪಾನ ಆರೋಗ್ಯಕ್ಕೆ ಹಾನಿಕರ ಅನ್ನುವಂತೆ ಇರುತ್ತೆ ಮೋದಿ ಹೇಳಿಕೆ: ಪ್ರಕಾಶ್ ರೈ

    ಬೆಂಗಳೂರು: ಪ್ರಗತಿಪರರ ಹತ್ಯೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮೌನವಹಿಸಿದ್ದರು ಸಹ ಅವರ ಮೌನದಲ್ಲಿ ಒಳಸಂಚಿರಲಿಲ್ಲ. ಈಗಿರುವ ಪ್ರಧಾನಿ ನರೇಂದ್ರ ಮೋದಿಯವರು ಸಹ ಈ ಕುರಿತು ಮೌನವಹಿಸಿದ್ದಾರೆ. ಆದರೆ ಅವರ ಮೌನದಲ್ಲಿ ರಾಕ್ಷಸ ಅಡಗಿದ್ದಾನೆ ಎಂದು ನಟ ಪ್ರಕಾಶ್ ರೈ ಕಿಡಿಕಾರಿದ್ದಾರೆ.

    ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗೌರಿ ಲಂಕೇಶ್ ಸ್ಮರಣಾರ್ಥ ನಡೆದ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಗತಿಪರರ ಬಾಯಿ ಮುಚ್ಚಿಸಲು ಬೇಕಂತಲೇ ಕೇಸುಗಳನ್ನು ಹಾಕಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಕೊಲೆಗಳನ್ನು ಮಾಡಬಾರದು ಅಂತಾ ಹೇಳಿಕೆಗಳನ್ನು ನೀಡುತ್ತಾರೆ. ಅವರ ಹೇಳಿಕೆಗಳು ಯಾವ ರೀತಿ ಇರುತ್ತವೆ ಅಂದರೆ ಸಿನಿಮಾದಲ್ಲಿ ಸಿಗರೇಟ್ ಸೇದುವ ದೃಶ್ಯಾವಳಿಗಳಲ್ಲಿ ಬರೆದಿರುವ `ಧೂಮಪಾನ ಆರೋಗ್ಯಕ್ಕೆ ಹಾನಿಕರ’ ಎನ್ನುವ ರೀತಿಯಲ್ಲಿ ಇರುತ್ತವೆ. ಅಲ್ಲದೇ ಕೆಲವು ಹಿಂದೂ ಸಂಘಟನೆಗಳು ಹಿಂದೂಗಳನ್ನು ಕುರಿಗಳನ್ನಾಗಿ ಮಾಡಿವೆ ಎಂದು ವಾಗ್ದಾಳಿ ನಡೆಸಿದರು.

    ಈ ಮೊದಲು ಪ್ರಗತಿಪರರ ಹತ್ಯೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮೌನವಹಿಸಿದ್ದರು, ಸಹ ಅವರ ಮೌನದಲ್ಲಿ ಒಳಸಂಚಿರಲಿಲ್ಲ. ಆದರೆ ಈಗಿರುವ ಪ್ರಧಾನಿಯವರು ಸಹ ಮೌನವಹಿಸಿದ್ದಾರೆ. ಆದರೆ ಅವರ ಮೌನದಲ್ಲಿ ರಾಕ್ಷಸ ಅಡಗಿದ್ದಾನೆ. ಹೀಗಾಗಿ ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರೋಣ. ಮೈಮರೆಯುವುದು ಬೇಡ. ಅಲ್ಲದೇ ಇವುಗಳನ್ನು ನಾವುಗಳು ಜನಸಾಮಾನ್ಯರಿಗೆ ತೋರಿಸಬೇಕಾಗಿದೆ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

    ಗೌರಿ ಲಂಕೇಶ್ ಕುರಿತು ಮಾತನಾಡಿದ ಅವರು, ಗೌರಿ ನಮ್ಮನ್ನ ಬಿಟ್ಟು ಒಂದು ವರ್ಷ ಆಗಿ ಹೋಗಿದೆ. ಇದರಿಂದಾಗಿ ಸಾಕಷ್ಟು ಧ್ವನಿಗಳು ಹುಟ್ಟಿಕೊಂಡಿವೆ. ಸಾಕಷ್ಟು ನೋವು, ತುಡಿತಗಳನ್ನು ನಾವು ಅನುಭವಿಸಿದ್ದೇವೆ. ಈ ಬಗ್ಗೆ ಒಂದು ವರ್ಷ ಬಹಳ ಮಾತುಕತೆ ನಡೆಸಿದ್ದೇವೆ. ನಾವು ಇದನ್ನು ಬೇರೆ ಥರ ತನಿಖೆಗೆ ತೆಗೆದುಕೊಂಡು ಹೋಗಬೇಕಾಗಿದೆ. ನಾವು ನಮ್ಮ ನೋವನ್ನು ಮರೆತು, ಗೌರಿಯನ್ನು ಮರೆತು ಮಾತನಾಡಬೇಕಾಗಿದೆ. ಗೌರಿ ಒಂದು ಮುಗಿಯದ ಕಥೆಯಾಗಿದ್ದಾಳೆ. ತಾನು ಬಲಿಯಾಗುವ ಮೂಲಕ ಹಲವಾರು ಅನ್ಯಾಯಗಳನ್ನು ಹೊರಕ್ಕೆ ತಂದಿದ್ದಾಳೆ. ಕಲ್ಬುರ್ಗಿ, ಪನ್ಸಾರೆಯವರನ್ನು ಕೊಂದವರು ಬಯಲಿಗೆ ಬರುತ್ತಿದ್ದಾರೆ ಎಂದು ತಿಳಿಸಿದರು.

    ನಾವು ಈ ಬಗ್ಗೆ ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ತಿಳಿಸಬೇಕಿದೆ. ಇಂದಿನ ದಿನಗಳಲ್ಲಿ ಮನುಷ್ಯ ಜನ್ಮವನ್ನು ಮಾತ್ರವಲ್ಲದೇ ಹಿಂದೂ ಧರ್ಮವನ್ನು ಕಾಪಾಡಬೇಕಿದೆ. ದಾಬೋಲ್ಕರ್, ಕಲ್ಬುರ್ಗಿ ಹಾಗೂ ಪನ್ಸಾರೆಯವರ ಸಾವು ನಮಗೆ ನೋವು ಮಾಡುತ್ತಿದೆ. ಅದು ಸಾವಲ್ಲ ಅದೊಂದು ಕೊಲೆ. ಇದರ ವಿರುದ್ಧ ನಾವು ಹೋರಾಡಬೇಕಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಗೌರಿ ಹತ್ಯೆಯ ಬಳಿಕ ಸ್ಥಗಿತವಾಗಿದ್ದ ಗೌರಿ ಲಂಕೇಶ್ ಪತ್ರಿಕೆಯನ್ನು `ನ್ಯಾಯಪತ’ ಹೆಸರಿನಲ್ಲಿ ಪುನರ್ ಚಾಲನೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ‘ಗೌರಿ ದಿನ’ ಕಾರ್ಯಕ್ರಮ ಮೋದಿ, ಸಂಘ ಪರಿವಾರವನ್ನು ತೆಗಳುವ ಕಾರ್ಯಕ್ರಮವಾಯಿತೇ..?

    ‘ಗೌರಿ ದಿನ’ ಕಾರ್ಯಕ್ರಮ ಮೋದಿ, ಸಂಘ ಪರಿವಾರವನ್ನು ತೆಗಳುವ ಕಾರ್ಯಕ್ರಮವಾಯಿತೇ..?

    ಬೆಂಗಳೂರು: ಗೌರಿ ಲಂಕೇಶ್ ಹುಟ್ಟಿದ ದಿನವಾದ ಸೋಮವಾರ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಆಯೋಜನೆಗೊಂಡಿದ್ದ ‘ಗೌರಿ ದಿನ’ ಕಾರ್ಯಕ್ರಮ ಮೋದಿಗೆ ಮತ್ತು ಸಂಘ ಪರಿವಾರವನ್ನು ತೆಗಳಲು ಸೀಮಿತವಾಯಿತೇ ಎನ್ನುವ ಪ್ರಶ್ನೆ ಎದ್ದಿದೆ.

    ಕಾರ್ಯಕ್ರಮ ನಡೆಯುವ ಮೊದಲು ಸಹೋದರ ಇಂದ್ರಜಿತ್ ಲಂಕೇಶ್ ಟೌನ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮ ಸರ್ಕಾರಿ ಪ್ರಯೋಜಿತವಾಗಿದ್ದು ಸಿಎಂ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದರು.

    ಈ ಹೇಳಿಕೆಗೆ ಪುಷ್ಟಿ ಎನ್ನುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು ಪ್ರಧಾನಿ ಮೋದಿ ಮತ್ತು ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಲು ವೇದಿಕೆಯನ್ನು ಬಳಸಿಕೊಂಡಿದ್ದು ಮಾತ್ರವಲ್ಲದೇ ಸಿಎಂ ಸಿದ್ದರಾಮಯ್ಯಮನವರನ್ನು ಹೊಗಳಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

    ಗೌರಿ ಹತ್ಯೆಯ ಬಗ್ಗೆ ರಾಜ್ಯ ಸರ್ಕಾರ ನೇಮಿಸಿದ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು ಆರೋಪಿಗಳ ರೇಖಾಚಿತ್ರ ಇಂದು ಬಿಡುಗಡೆಯಾಗಿದ್ದು ಬಿಟ್ಟರೆ ಇದೂವರೆಗೂ ಆರೋಪಿಗಳ ಬಂಧನ ಆಗಿಲ್ಲ. ಹೀಗಾಗಿ ಆರೋಪಿಗಳ ಬಂಧಿಸದ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ಕೇಂದ್ರದ ವಿರುದ್ಧ ಟೀಕೆ ಮಾಡಿದ್ದು ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ.

    ಸಹೋದರಿ ಕವಿತಾ ಲಂಕೇಶ್ ರಾಜ್ಯ ಸರ್ಕಾರ ತನಿಖೆಯಲ್ಲಿ ನಮಗೆ ನಂಬಿಕೆ ಇದೆ. ಈ ಪ್ರಕರಣವನ್ನು ಯಾವುದೇ ಕಾರಣಕ್ಕೆ ಸಿಬಿಐ ತನಿಖೆಗೆ ನೀಡಬಾರದು. ಈಗಾಗಲೇ ನೀಡಿರುವ ಪ್ರಕರಣದಲ್ಲಿ ಯಾವುದೇ ಫಲಿತಾಂಶ ಲಭಿಸಿಲ್ಲ. ಎಸ್‍ಐಟಿ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಹಂತಕರನ್ನು ಬಂಧಿಸುವ ವಿಶ್ವಾಸವಿದೆ. ಪ್ರಕರಣವನ್ನು ಮತ್ತೆ ಸಿಬಿಐ ಗೆ ವಹಿಸುವುದರಿಂದ ವಿಚಾರಣೆ ಮತ್ತೆ ಒಂದು ವರ್ಷ ಹಿಂದುಳಿಯುವ ಸಂಭವವಿದೆ ಎಂದು ಪಬ್ಲಿಕ್ ಟಿವಿಗೆ ತಿಳಿಸಿದ್ದರು.

    ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ಹೀಗಿರುವಾಗ ವೇದಿಕೆಯಲ್ಲಿದ್ದ ಜೆಎನ್‍ಯು ಮುಖಂಡ ಕನ್ಹಯ್ಯ ಕುಮಾರ್, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆ ಸ್ವಾಮಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರೆ, ಗುಜರಾತ್ ಪಕ್ಷೇತರ ಶಾಸಕ ದಲಿತ ಮುಖಂಡ ಜಿಗ್ನೇಶ್ ಮೇವಾನಿ ಮೋದಿಯನ್ನು ಟೀಕಿಸುವುದರ ಜೊತೆಗೆ ಸಿದ್ದರಾಮಯ್ಯ ಸರ್ಕಾರವನ್ನು ಹೊಗಳಿದರು.

    ದೊರೆಸ್ವಾಮಿ ನರೇಂದ್ರ ಮೋದಿ ಅವರನ್ನು ದೇಶದಿಂದ ಓಡಿಸಿ ಎಂದು ಕರೆ ನೀಡಿದರೆ, ಕನ್ಹಯ್ಯ ಕುಮಾರ್ ಇಲ್ಲಿ ಸೇರಿದವರೆಲ್ಲ ಗೌರಿ ಪರಿವಾರದವರು, ಇಲ್ಲಿ ಯಾರೂ ಸಂಘ ಪರಿವಾರದವರಿಲ್ಲ. ಗೌರಿ ಪರಿವಾರವು ಸಂಘ ಪರಿವಾರಕ್ಕೆ ಹೊಡೆತ ಕೊಟ್ಟೇ ಕೊಡುತ್ತದೆ ಎಂದು ಹೇಳಿದರು.  ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಓಡಿಸಿ: ಮೋದಿ ವಿರುದ್ಧ ದೊರೆಸ್ವಾಮಿ ಗುಡುಗು

    ಗುಜರಾತ್ ಚುನಾವಣೆಯಲ್ಲಿ ನಿಂತು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಜಿಗ್ನೇಶ್ ಮೇವಾನಿ, ಕರ್ನಾಟಕದಲ್ಲೂ ಚುನಾವಣೆ ಬರುತ್ತಿದ್ದು ಚಡ್ಡಿಗಳನ್ನು ಸೋಲಿಸಲು ಕರ್ನಾಟಕದ ಎಲ್ಲ ರಾಜಕೀಯ ಪಕ್ಷಗಳು ಒಂದಾಗಬೇಕು. ಚುನಾವಣೆ ವೇಳೆ ಮೂರು ವಾರ ಕರ್ನಾಟಕದಲ್ಲಿಯೇ ಇದ್ದು ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತೇನೆ ಎಂದು ಹೇಳಿ ಕರ್ನಾಟಕ ಸರ್ಕಾರಕ್ಕೆ ದಲಿತರ ಬಗ್ಗೆ ಆದಿವಾಸಿಗಳ ಬಗ್ಗೆ ಕಾಳಜಿ ಇದೆ. ಇವರಿಗೆ ಜಮೀನು ನೀಡಿ ಸಹಕರಿಸುತ್ತಿದೆ ಎಂದು ಹೇಳಿ ಸಿಎಂ ಸಿದ್ದರಾಮಯ್ಯನವರನ್ನು ಹೊಗಳಿದರು. ಅಷ್ಟೇ ಅಲ್ಲದೇ ಚಡ್ಡಿಗಳು ಅಧಿಕಾರಕ್ಕೆ ಬರಬಾರದು, ಮೋದಿ ಯಾವುದೇ ಕಾರಣಕ್ಕೆ ಮುಂದೆ ಪ್ರಧಾನಿಯಾಗಬಾರದು. ಮೋದಿ ನಿವೃತ್ತಿ ಪಡೆದುಕೊಳ್ಳುವುದು ಉತ್ತಮ ಎಂದರು. ಇದನ್ನೂ ಓದಿ: ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    2017ರ ಸೆಪ್ಟೆಂಬರ್ ನಲ್ಲಿ ಗೌರಿ ಹತ್ಯೆ ಖಂಡಿಸಿ ‘ನಾನು ಗೌರಿ’ ಹೆಸರಿನಲ್ಲಿ ದೊಡ್ಡ ಮಟ್ಟದ ಪ್ರತಿರೋಧ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲೂ ಅತಿಥಿಗಳು ಮೋದಿ, ಸಂಘ ಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಎರಡನೇ ಬಾರಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆದಿದ್ದು ಮತ್ತೊಮ್ಮೆ ಟೀಕೆಗಳು ರಿಪೀಟ್ ಆಗಿದೆ. ಗೌರಿ ಅಭಿಮಾನಿಗಳು ಮೋದಿ, ಸಂಘ ಪರಿವಾರದ ವಿರುದ್ಧ ಟೀಕೆ ಮಾಡಿದರೂ ಸರ್ಕಾರಕ್ಕೆ ಚುನಾವಣೆಯ ಒಳಗಡೆ ಹಂತಕರನ್ನು ಬಂಧಿಸಲೇಬೇಕಾದ ಅನಿವಾರ್ಯತೆಯಲ್ಲಿದೆ. ಒಂದು ವೇಳೆ ಬಂಧನವಾಗದೇ ಇದ್ದರೆ ಚುನಾವಣೆಯಲ್ಲೂ ಈ ವಿಚಾರ ಪ್ರಚಾರದ ವಸ್ತುವಾಗಿ ರಾಜಕೀಯ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನೂ ಓದಿ: ಗೌರಿಯನ್ನು ಮೌನ ಮಾಡಿದಾಗ ನಾನು, ನನ್ನಂತಹ ಹಲವರು ಹುಟ್ಟುತ್ತಾರೆ: ಪ್ರಕಾಶ್ ರೈ

    ಗೌರಿ ಹತ್ಯೆ ಹಾಗೂ ಮೋದಿ ಸರ್ಕಾರಕ್ಕೆ ಏನು ಸಂಬಂಧ ಎನ್ನುವುದನ್ನು ಯಾವುದೇ ಭಾಷಣಕಾರರೂ ತಿಳಿಸುವ ಯತ್ನ ಮಾಡಲಿಲ್ಲ. ಜೊತೆಗೆ ರಾಜ್ಯ ಸರ್ಕಾರವನ್ನು, ವಿಚಾರಣೆ ನಡೆಸುತ್ತಿರುವ ಎಸ್‍ಐಟಿಯನ್ನೂ ಪ್ರಶ್ನಿಸಲಿಲ್ಲ ಎನ್ನುವುದು ಮಾತ್ರ ವಿಪರ್ಯಾಸದ ವಿಚಾರ. ಇದನ್ನೂ ಓದಿ: `ಗೌರಿ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಹೋದರ ಇಂದ್ರಜಿತ್ ಲಂಕೇಶ್

  • ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಓಡಿಸಿ: ಮೋದಿ ವಿರುದ್ಧ ದೊರೆಸ್ವಾಮಿ ಗುಡುಗು

    ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಓಡಿಸಿ: ಮೋದಿ ವಿರುದ್ಧ ದೊರೆಸ್ವಾಮಿ ಗುಡುಗು

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಲ್ಲರಿಗೂ ಕಾಮನ್ ಎನಮಿ ಆಗಿದ್ದು, ನಾವು ಪ್ರತಿಜ್ಞೆ ಮಾಡುವ ಮೂಲಕ ಕರ್ನಾಟಕದಲ್ಲಿ ಅವರಿಗೆ ಅವಕಾಶ ನೀಡಬಾರದು ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರು ಹೇಳಿದ್ದಾರೆ.

    ಪತ್ರಕರ್ತೆ ಗೌರಿ ಲಂಕೇಶ್‍ಗೆ ಜನ್ಮದಿನ ಪ್ರಯುಕ್ತ ಆಚರಿಸಲಾಗಿದ್ದ `ಗೌರಿ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಹಾಗೂ ಗೌರಿ ಲಂಕೇಶ್ ಅವರ ಒಡನಾಟ ಕೆಲ ದಿನಗಳಾದರೂ, ನಮ್ಮ ನಡುವಿನ ಸಂಪರ್ಕ ಬಹಳಗಾಢವಾದದ್ದು. ಅವರ ಕೆಲವು ದೌರ್ಬಲ್ಯಗಳ ನಡುವೆಯೂ ದೊಡ್ಡ ಮಟ್ಟದ ಅಲೋಚನೆಗಳು, ಕೆಲಸಗಳು ಮಾಡುತ್ತಿದ್ದರು ಎಂದು ಹೇಳಿದರು. ಇದನ್ನೂ ಓದಿ: ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    ಸಮಾರಂಭದಲ್ಲಿ ಸೇರಿರುವ ಎಲ್ಲರೂ ಗೌರಿ ಲಂಕೇಶ್ ಅವರ ಮೇಲಿನ ಅಭಿಮಾನದಿಂದ ಇಲ್ಲಿಗೆ ಆಗಮಿಸಿದ್ದೀರಾ. ಆದರೆ ನೀವು ನಿಮ್ಮ ಜಿಲ್ಲೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಮೂಲಕ ಪ್ರಧಾನಿ ಮೋದಿ ಅವರಿಗೆ ಇಲ್ಲಿ ಅವಕಾಶವನ್ನು ನೀಡದಿರುವ ಪ್ರತಿಜ್ಞೆಯನ್ನು ಮಾಡಬೇಕು. ಇಂತಹ ಸಮಾರಂಭವನ್ನು ಏರ್ಪಡಿಸುವ ಶಕ್ತಿ ನಮಗೇ ಇದೇಯಾ ಎಂಬುವುದರ ಬಗ್ಗೆ ಚರ್ಚೆ ನಡೆಸಬೇಕು. ಬೇರೆ ಬೇರೆ ಪಕ್ಷದಲ್ಲಿ ಇರುವ ನಾಯಕರನ್ನು ಸಂಪರ್ಕಿಸಿ ಅವರಿಗೂ ಇದನ್ನು ಮುಟ್ಟಿಸಿ, ಕಾಮನ್ ಎನಿಮಿಯನ್ನು ತೊಲಗಿಸುವ ಕಾರ್ಯವನ್ನು ಮಾಡಬೇಕು. ಇದು ಒಂದು ಪಕ್ಷದ ಒಲೈಕೆಗಲ್ಲ, ವೇದಿಕೆಯಲ್ಲಿ ಚಪ್ಪಾಳೆ ಸಿಳ್ಳೆ ಪಡೆಯುದಕ್ಕೂ ಅಲ್ಲ. ಇದು ಖಚಿತ ಅಭಿಪ್ರಾಯ ಎಂದರು. ಇದನ್ನೂ ಓದಿ:  ಗೌರಿಯನ್ನು ಮೌನ ಮಾಡಿದಾಗ ನಾನು, ನನ್ನಂತಹ ಹಲವರು ಹುಟ್ಟುತ್ತಾರೆ: ಪ್ರಕಾಶ್ ರೈ

    ಇದೇ ವೇಳೆ ಗೌರಿ ಹಂತಕರ ಕುರಿತು ದಕ್ಷಿಣ ಕನ್ನಡದ ಮೇಲೆ ಒಂದು ಕಣ್ಣಿಡಬೇಕು. ಪೊಲೀಸರು ಯಾರೋ ಇಬ್ಬರನ್ನೂ ಹಿಡಿದಿದ್ದೇವೆ ಎಂದು ಹೇಳುತ್ತಿದ್ದಾರೆ. ಅವರು ಬಂದೂಕು ತಯಾರಿಸುವವರು ಇರಬೇಕು, ಆದರೆ ಬಂದೂಕಿಗೆ ಸುಪಾರಿ ಕೊಟ್ಟವರು ಯಾರು ಎನ್ನುವುದು ಗೊತ್ತಾಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: `ಗೌರಿ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಹೋದರ ಇಂದ್ರಜಿತ್ ಲಂಕೇಶ್

    https://www.youtube.com/watch?v=GA_pyPUe6h4

  • ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    ಗೌರಿ ದಿನಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ, ಪೊಲೀಸ್ ತನಿಖೆ ತೃಪ್ತಿ ನೀಡಿದೆ : ಕವಿತಾ ಲಂಕೇಶ್

    ಬೆಂಗಳೂರು: ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ಗೆ ಜನ್ಮದಿನ ಪ್ರಯುಕ್ತ ಆಚರಿಸಲಾಗಿದ್ದ `ಗೌರಿ ದಿನ’ ಕಾರ್ಯಕ್ರಮ ಆಯೋಜನೆಗೆ ಸರ್ಕಾರ ಪ್ರಯೋಜಕತ್ವ ನೀಡಿಲ್ಲ ಎಂದು ಕವಿತಾ ಲಂಕೇಶ್ ಸ್ಪಷ್ಟಪಡಿಸಿದ್ದಾರೆ.

    ನಗರದ ಟೌನ್ ಹಾಲ್ ಬಳಿ ಆಯೋಜಿಸಿದ್ದ ಗೌರಿ ದಿನ ಕಾರ್ಯಕ್ರಮದ ಬಳಿಕ ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಗೌರಿಹಬ್ಬ ಎಂದು ರಾಜ್ಯಾದ್ಯಂತ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ಗೌರಿ ಹತ್ಯೆ ಆರೋಪಿಗಳನ್ನು ಬಂಧಿಸದ ಕಾರಣ ನಾವು ಇಂದು ವಿಚಾರ ಸಂಕೀರ್ಣವನ್ನು ಮಾತ್ರ ನಡೆಸುತ್ತಿದ್ದೇವೆ ಎಂದರು.

    ಈ ಹಿಂದೆ ಗೌರಿ ಟ್ರಸ್ಟ್ ಸ್ಥಾಪನೆ ವೇಳೆ ಗೌರಿ ಹಬ್ಬ ನಡೆಸುವ ಕುರಿತು ಚರ್ಚೆ ನಡೆಸಲಾಗಿತ್ತು, ಆದರೆ ಟ್ರಸ್ಟ್ ನ ಹಲವರ ಅಭಿಪ್ರಾಯದ ಮೇಲೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅಂತಹ ನಾಯಕರು ಭಾಗವಹಿಸಿದ್ದಾರೆ. ಕಾರ್ಯಕ್ರಮಕ್ಕೆ ಸರ್ಕಾರ ಪ್ರಯೋಜಕತ್ವ ನೀಡಿದೆ ಎಂಬ ಆರೋಪಗಳು ದೊರೆಸ್ವಾಮಿ ಅವರಿಗೆ ಅವಮಾನಿಸುವ ಹಾಗೇ ಆಗುತ್ತದೆ ಎಂದರು.

    ಕಾರ್ಯಕ್ರಮದ ಭಾಗವಹಿಸದಿರುವ ಸಹೋದರ ಇಂದ್ರಜಿತ್ ಲಂಕೇಶ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಮ್ಮ ಸಹೋದರನ ಚಿಂತನೆ, ಅಭಿಪ್ರಾಯ ಭಿನ್ನವಾಗಿದೆ ಅಷ್ಟೇ. ಆದರೆ ನಾವೆಲ್ಲರೂ ಹತ್ಯೆ ಮಾಡಿದವರ ವಿರುದ್ಧ ಹೋರಾಟ ನಡೆಸಿದ್ದೇವೆ. ನಾನು ಮತ್ತು ನಮ್ಮ ಸಹೋದರ ಇಬ್ಬರು ಟ್ರಸ್ಟ್ ನಲ್ಲಿ ಇಲ್ಲ. ಕಾರ್ಯಕ್ರಮಕ್ಕೆ ಖರ್ಚು ಮಾಡಿದ ವಿವರಗಳನ್ನು ಟ್ರಸ್ಟ್ ವತಿಯಿಂದ ಪಡೆಯಬಹುದು. ಮೇವಾನಿ ಹಾಗೂ ಕನ್ನಯ್ಯರನ್ನು ಗೌರಿ ಮಕ್ಕಳಂತೆ ಭಾವಿಸಿದ್ದರು. ಅದೇ ಪ್ರೀತಿಗಾಗಿ ಇವರು ಬಂದಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:  ಗೌರಿಯನ್ನು ಮೌನ ಮಾಡಿದಾಗ ನಾನು, ನನ್ನಂತಹ ಹಲವರು ಹುಟ್ಟುತ್ತಾರೆ: ಪ್ರಕಾಶ್ ರೈ

     

    ಟ್ರಸ್ಟ್ ಮೂಲಕ ನಿರಂತರವಾಗಿ ಗೌರಿ ಅವರ ಸಿದ್ಧಾಂತಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮುಂದುವರೆಸುತ್ತೇವೆ. ವಿಶೇಷ ತನಿಖಾ ದಳ ಪ್ರಕರಣದ ತನಿಖೆಯನ್ನು ಮುಂದುವರೆಸುತ್ತಿದ್ದು, ಪ್ರತಿ ವಾರ ನಮಗೇ ತನಿಖೆಯ ಪ್ರಗತಿಯನ್ನು ತಿಳಿಸುತ್ತಿದ್ದಾರೆ. ಪೊಲೀಸ್ ತನಿಖೆ ನಮಗೇ ತೃಪ್ತಿ ನೀಡಿದೆ. ಆದರೆ ಕೊಲೆ ನಡೆದಿರುವುದು ವಯಕ್ತಿಕ ಕಾರಣದಿಂದ ಅಲ್ಲ. ಅದ್ದರಿಂದ ತನಿಖೆ ನಡೆಸುಲು ಸಮಯ ತೆಗೆದುಕೊಳ್ಳುತ್ತದೆ ಎಂಬ ಅರಿವಿದೆ ಎಂದರು. ಇದನ್ನೂ ಓದಿ: `ಗೌರಿ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದ ಸಹೋದರ ಇಂದ್ರಜಿತ್ ಲಂಕೇಶ್

    ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಉದ್ದೇಶದ ಹಿಂದೆ ಬೇರೆಯಾದ್ದೆ ಕಾರಣಗಳು ಇರಬಹುದು. ಏಕೆಂದರೆ ಕಳೆದ ಹಲವು ವರ್ಷಗಳಲ್ಲಿ ಸಿಬಿಐಗೆ ವಹಿಸಿದ್ದ ಪ್ರಕರಣಣಗಳಲ್ಲಿ ಯಾವುದೇ ಫಲಿತಾಂಶ ಲಭಿಸಿಲ್ಲ. ವಿಶೇಷ ತನಿಖಾ ದಳದ ವಿಚಾರಣೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಹಂತಕರನ್ನು ಬಂಧಿಸುವ ವಿಶ್ವಾಸವಿದೆ. ಪ್ರಕರಣವನ್ನು ಮತ್ತೆ ಸಿಬಿಐ ಗೆ ವಹಿಸುವುದರಿಂದ ವಿಚಾರಣೆ ಮತ್ತೆ ಒಂದು ವರ್ಷ ಹಿಂದುಳಿಯುವ ಸಂಭವವಿದೆ ಎಂದು ಹೇಳಿದರು.

  • ಗೌರಿ ಲಂಕೇಶ್ ಜನ್ಮದಿನ: ಬೆಂಗ್ಳೂರಿನಲ್ಲಿ  ಇಂದು ಗೌರಿದಿನ ಆಯೋಜನೆ

    ಗೌರಿ ಲಂಕೇಶ್ ಜನ್ಮದಿನ: ಬೆಂಗ್ಳೂರಿನಲ್ಲಿ ಇಂದು ಗೌರಿದಿನ ಆಯೋಜನೆ

    ಬೆಂಗಳೂರು: ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ಗೆ ಇಂದು ಜನ್ಮದಿನ. ಹೀಗಾಗಿ ಇಂದು ನಗರದ ಟೌನ್‍ಹಾಲ್‍ನಲ್ಲಿ `ಗೌರಿ ದಿನ’ ಆಯೋಜನೆ ಮಾಡಲಾಗಿದೆ.

    ಗೌರಿ ಹತ್ಯೆಗೆ ನ್ಯಾಯ ಕೇಳಿ ‘ಗೌರಿ ಸ್ಮಾರಕ’ ಇಂದು ಬೀದಿಗಿಳಿದು ಹೋರಾಟ ಮಾಡಲಿದ್ದು, ಈ ಮೂಲಕ `ನಾನು ಗೌರಿ’ ಅನ್ನೋ ಹೋರಾಟವನ್ನ ಮತ್ತೆ ಶುರುಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ, ಕನ್ನಯ್ಯ ಕುಮಾರ್, ದೊರೆಸ್ವಾಮಿ, ಪ್ರಕಾಶ್ ರೈ ಸೇರಿದಂತೆ ಸಾಕಷ್ಟು ಸಾಹಿತಿಗಳು ಆಗಮಿಸಲಿದ್ದಾರೆ. ಇಂದು ಗೌರಿ ಲಂಕೇಶ್ ಕುರಿತಾದ ಪುಸ್ತಕ ಕೂಡ ಬಿಡುಗಡೆಯಾಗಲಿದೆ.

    ಸೆಪ್ಟೆಂಬರ್ 5 2017 ಮಂಗಳವಾರ ರಾತ್ರಿ 7.30 ರ ಸುಮಾರಿಗೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅವರ ಮನೆಯ ಮುಂಭಾಗವೇ ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಗುಂಡಿಟ್ಟು ಹತ್ಯೆ ಮಾಡಿದ್ದರು.

    ತನಿಖೆಯ ನಂತರ ಎಸ್‍ಐಟಿ ಗೌರಿ ಹಂತಕರ ರೇಖಾಚಿತ್ರ ಮತ್ತು ವೀಡಿಯೊವನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಗೆ ಹಂತಕರ ಬಗ್ಗೆ ಸುಳಿವು ನೀಡುವಂತೆ ಮನವಿ ಕೂಡ ಮಾಡಿಕೊಂಡಿದ್ದರು. ಮೂವರು ಆರೋಪಿಗಳಲ್ಲಿ ಇಬ್ಬರು ನೋಡುವುದಕ್ಕೆ ಒಂದೇ ತರಹನಾಗಿ ಕಾಣುತ್ತಿದ್ದರು. ಆರೋಪಿಗಳು ನಗರದಲ್ಲಿ ಮೂರು ವಾರಗಳ ಕಾಲ ಉಳಿದುಕೊಂಡಿದ್ದರು ಎಂದು ಎಸ್‍ಐಟಿ ತಿಳಿಸಿತ್ತು.

    ಪ್ರಕರಣದ ಕುರಿತು ಮತ್ತಷ್ಟು ಸುಳಿವನ್ನು ಪಡೆಯುವ ಸಲುವಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಮತ್ತೆ ಕಾಟ್ರೇಜ್‍ಗಳ ಮರು ಪರೀಕ್ಷೆಯನ್ನು ನಡೆಸುತ್ತಿದ್ದು, ತನಿಖಾ ತಂಡ ಹಂತಕರನ್ನು ಹುಡುಕುವ ಕಾರ್ಯಾಚರಣೆ ಮಾಡುತ್ತಿದೆ. ಇದನ್ನು ಓದಿ: ಗೌರಿ ಲಂಕೇಶ್ ಹತ್ಯೆ ತನಿಖೆ ಈಗ ಎಲ್ಲಿಯವರೆಗೆ ಬಂದಿದೆ?