Tag: Gauri Shikar

  • ರಾಜಹಂಸಕ್ಕೆ ಮೆಚ್ಚುಗೆ: ಹೆಚ್ಚಾಗ್ತಿದೆ ಶೋ, ಉತ್ತರ ಕರ್ನಾಟಕದಲ್ಲಿ ಹೌಸ್‍ಫುಲ್!

    ರಾಜಹಂಸಕ್ಕೆ ಮೆಚ್ಚುಗೆ: ಹೆಚ್ಚಾಗ್ತಿದೆ ಶೋ, ಉತ್ತರ ಕರ್ನಾಟಕದಲ್ಲಿ ಹೌಸ್‍ಫುಲ್!

    ಬೆಂಗಳೂರು: ರಾಜಹಂಸ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಶೋಗಳು ಹೆಚ್ಚಾಗುತ್ತಿದೆ. ಉತ್ತರ ಕರ್ನಾಟಕದ ಹಲವು ಕಡೆ ಥಿಯೇಟರ್ ಭರ್ತಿಯಾಗುತ್ತಿರುವುದು ಚಿತ್ರ ತಂಡಕ್ಕೆ ಖುಷಿಕೊಟ್ಟಿದೆ.

    ಈ ಸಂಬಂಧ ಚಿತ್ರ ತಂಡ ಇಂದು ಬೆಂಗಳೂರಿನ ಮಾಲ್‍ಗಳಿಗೆ ಭೇಟಿ ನೀಡುತ್ತಿದೆ ಎಂದು ಚಿತ್ರ ತಂಡ ಪರವಾಗಿ ನಾಯಕಿ ರಂಜನಿ ಅವರು ಫೇಸ್‍ಬುಕ್ ಲೈವ್ ನಲ್ಲಿ ಹೇಳಿದ್ದಾರೆ.

    ಹೊಸಬರಾಗಿ ನಿರ್ಮಿಸಿರುವ ಚಿತ್ರವನ್ನು ಪ್ರೇಕ್ಷಕ ಹೇಗೆ ನೋಡುತ್ತಾನೆ ಎನ್ನುವ ಒಂದು ಹೆದರಿಕೆ ಇತ್ತು. ಆದರೆ ಅಭಿಮಾನಿಗಳು ಮೆಚ್ಚಿರುವುದು ನಮಗೆ ಸಂತೋಷ ನೀಡಿದೆ ಎಂದು ಚಿತ್ರದ ನಾಯಕ ನಟ ಗೌರಿ ಶಿಕರ್ ಹೇಳಿದ್ದಾರೆ.

    ಎರಡು ಶೋ ಇರುವಲ್ಲಿ ನಾಲ್ಕು ಶೋ ಆಗುತ್ತಿದೆ. ಒಬ್ಬೊಬ್ಬರೇ ವೀಕ್ಷಿಸುವುದಕ್ಕಿಂತ ಇಡೀ ಕುಟುಂಬವೇ ನೋಡಬಹುದಾದ ಚಿತ್ರ ಇದಾಗಿದ್ದು, ಅಭಿಮಾನಿಗಳು ಇಷ್ಟ ಪಟ್ಟಿದ್ದು, ಇಂದು ನಾವು ಅಭಿಮಾನಿಗಳನ್ನು ಭೇಟಿ ಮಾಡುತ್ತೇವೆ ಎಂದು ರಂಜಿನಿ ಹೇಳಿದ್ದಾರೆ.

    ಸಿನಿಮಾದ ಒಳಗಡೆ ನಾಟಕವನ್ನು ತಂದಿದ್ದು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದ್ದು, ನಾಟಕ ಕುಟುಂಬದಿಂದ ಬಂದ ಹಂಸಳನ್ನು(ರಂಜಿನಿ) ಶ್ರೀಮಂತ ಕುಟುಂಬದಿಂದ ಬಂದ ಶೋಕಿಲಾಲನ ಪಾತ್ರದಲ್ಲಿರುವ ನಾಯಕ ರಾಜ(ಶಿಕರ್) ಪ್ರೀತಿ ಮಾಡಿ ಹೇಗೆ ಮದುವೆಯಾಗುತ್ತಾನೆ? ಆತನ ಕುಟುಂಬ ಏನು ಮಾಡುತ್ತದೆ ಎನ್ನುವುದೇ ಚಿತ್ರದ ಕತೆ.

    ಇದನ್ನೂ ಓದಿ: `ರಾಜಹಂಸ’ ಶೂಟಿಂಗ್ ವೇಳೆ ತಪ್ಪಿದ ದೋಣಿ ದುರಂತ

    ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿರುವ ಪುಟ್ಟ ಗೌರಿ (ರಂಜಿನಿ ರಾಘವನ್) ಮೊದಲ ಬಾರಿಗೆ ಬೆಳ್ಳಿ ಪರದೆಯಲ್ಲಿ ಮಿಂಚಿದ್ದಾರೆ. ಜಡೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೀಧರ್, ಬಿ.ಸಿ.ಪಾಟೀಲ್, ಯಮುನಾ, ತಬಲಾ ನಾಣಿ, ವಿಜಯ್ ಚಂಡೂರ್, ಬುಲೆಟ್ ಪ್ರಕಾಶ್ ಸೇರಿದಂತೆ 70ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ನಾಯಕನ ತಂದೆಯಾಗಿ ನಟ ಶ್ರೀಧರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಸಿನಿಮಾದಲ್ಲಿ ಒಟ್ಟು 6 ಹಾಡುಗಳಿದ್ದು, ಬಾರಮ್ಮ ಬಾರಮ್ಮ ಭಾರತಿ, ಮುಲಾ ಮುಲಾ ಸೇರಿದಂತೆ ಎಲ್ಲ ಹಾಡುಗಳು ಸಿನಿರಸಿಕರ ಮನ ಸೆಳೆದಿದೆ.

     

     

  • `ರಾಜಹಂಸ’ ಶೂಟಿಂಗ್ ವೇಳೆ ತಪ್ಪಿದ ದೋಣಿ ದುರಂತ

    `ರಾಜಹಂಸ’ ಶೂಟಿಂಗ್ ವೇಳೆ ತಪ್ಪಿದ ದೋಣಿ ದುರಂತ

    ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಶುಕ್ರವಾರ ಬಿಡುಗಡೆಯಾಗುತ್ತಿರುವ `ರಾಜಹಂಸ’ ಸಿನಿಮಾದ ಚಿತ್ರೀಕರಣ ವೇಳೆ ಭಾರೀ ದೋಣಿ ದುರಂತ ಸಂಭವಿಸಿದ್ದು ನಟ, ನಟಿ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

    ಚಿತ್ರತಂಡ ಕಳೆದ ವರ್ಷ ನವೆಂಬರ್ ನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ತುಂಗಾ ನದಿ ಬಳಿ ಚಿತ್ರೀಕರಣಕ್ಕೆ ತೆರಳಿತ್ತು. ಶೂಟಿಂಗ್ ನಲ್ಲಿ ದೋಣಿಯಲ್ಲಿ ಸಿನಿಮಾದ ನಾಯಕ ಗೌರಿ ಶಿಕರ್ ಮತ್ತು ನಾಯಕಿ ರಂಜಿನಿ ಇಬ್ಬರೇ ದೋಣಿಯಲ್ಲಿ ವಿಹರಿಸುವ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು.

    ನದಿಯ ದಡದಲ್ಲಿಯೇ ಚಿತ್ರೀಕರಣ ಭರದಿಂದ ಸಾಗುತ್ತಿತ್ತು. ಡ್ರೋಣ್ ಕ್ಯಾಮೆರಾದಿಂದ ದೃಶ್ಯಗಳನ್ನು ಶೂಟ್ ಮಾಡುತ್ತಿದ್ದರಿಂದ ತಂತ್ರಜ್ಞರು ಮತ್ತು ಸಹ ನಟರು ಸಹಜವಾಗಿಯೇ ದೂರದಲ್ಲಿ ನಿಂತಿದ್ದರು. ಈ ವೇಳೆ ದೋಣಿ ತನ್ನಷ್ಟಕ್ಕೆ ತಾನೇ ಚಲಿಸಲು ಆರಂಭಿಸಿದೆ. ಗೌರಿಶಿಕರವರಿಗೂ ಹುಟ್ಟು ಹಾಕುವುದು ಗೊತ್ತಿಲ್ಲ ಮತ್ತು ನಟಿ ರಂಜಿನಿವರಿಗೂ ಈಜು ಬರುತ್ತಿಲ್ಲವಾದ್ದರಿಂದ ಚಿತ್ರತಂಡ ಒಂದು ಕ್ಷಣ ಗಾಬರಿಗೊಂಡಿತ್ತು.

    ದೋಣಿ ಗಾಳಿಯೊ0ದಿಗೆ ಒಂದು ದಡದಿಂದ ಮತ್ತೊಂದು ದಡಕ್ಕೆ ಚಲಿಸಲಾರಂಭಿಸಿದೆ. ಈ ವೇಳೆ ಗೌರಿ ಶಿಕರ್ ಮತ್ತು ರಂಜಿನಿ ಸಿಲುಕಿದ್ದ ದೋಣಿ ಚಿಕ್ಕದಾದ ಬಂಡೆಗೆ ತಾಗಿ ನಿಂತುಕೊಂಡಿದೆ. ಕೂಡಲೇ ಚಿತ್ರತಂಡದ ಸಹಾಯಕರು, ಸಹನಟರು ನದಿಗೆ ಇಳಿದು ಇಬ್ಬರನ್ನು ರಕ್ಷಿಸಿದ್ದಾರೆ.

    ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿರುವ ಪುಟ್ಟ ಗೌರಿ (ರಂಜಿನಿ ರಾಘವನ್) ಮೊದಲ ಬಾರಿಗೆ ಬೆಳ್ಳಿ ಪರದೆಯಲ್ಲಿ ಮಿಂಚಲಿದ್ದಾರೆ. ಇನ್ನೂ ಸಿನಿಮಾದಲ್ಲಿ ರಂಜಿನಿ (ಹಂಸಾಕ್ಷಿ)ಗೆ ಜೊತೆಯಾಗಿ ಗೌರಿಶಿಕರ್ ನಾಯಕರಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಶ್ರೀಧರ್, ಬಿ.ಸಿ.ಪಾಟೀಲ್, ಯಮುನಾ, ತಬಲಾ ನಾಣಿ, ವಿಜಯ್ ಚಂಡೂರ್, ಬುಲೆಟ್ ಪ್ರಕಾಶ್ ಸೇರಿದಂತೆ 70ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ನಾಯಕನ ತಂದೆಯಾಗಿ ನಟ ಶ್ರೀಧರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

    ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ. ಈಗಾಗಲೇ ಹಾಡುಗಳು ಎಲ್ಲರ ಮನದಲ್ಲಿ ಗುನುಗುಟ್ಟುತ್ತಿವೆ. ಬಾರಮ್ಮ ಬಾರಮ್ಮ ಭಾರತಿ, ಮುಲಾ ಮುಲಾ ಸೇರಿದಂತೆ ಎಲ್ಲ ಹಾಡುಗಳು ಸಿನಿರಸಿಕರ ಮನ ಸೆಳೆಯುತ್ತಿದ್ದು, ಯುಟ್ಯೂಬ್ ನಲ್ಲಿ ಟ್ರೆಂಡ್ ಸೃಷ್ಟಿ ಮಾಡಿವೆ. ರಘು ದೀಕ್ಷಿತ್ ಹಾಡಿರುವ ಹಾಡನ್ನು ಉತ್ತರ ಭಾರತದ ಒಟ್ಟು 8 ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಬಾರಮ್ಮ ಬಾರಮ್ಮ ಹಾಡು ಚಂದನ್ ಶೆಟ್ಟಿ ಧ್ವನಿಯಲ್ಲಿ ಮೂಡಿಬಂದಿದೆ. ಸಿನಿಮಾ ಸೆಪ್ಟೆಂಬರ್ 8ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಲಗ್ಗೆಯಿಡಲಿದೆ.

     

     

  • ‘ರಾಜಹಂಸ’ದ ಹೀರೋ ರಾಜಸ್ಥಾನ ಪೊಲೀಸ್ ವಶಕ್ಕೆ – ಅಲ್ಲಿಂದ ವಾಪಸ್ ಬಂದ ಕತೆ ಓದಿ!

    ‘ರಾಜಹಂಸ’ದ ಹೀರೋ ರಾಜಸ್ಥಾನ ಪೊಲೀಸ್ ವಶಕ್ಕೆ – ಅಲ್ಲಿಂದ ವಾಪಸ್ ಬಂದ ಕತೆ ಓದಿ!

    ಬೆಂಗಳೂರು: ಕನ್ನಡದ `ರಾಜಹಂಸ’ ಸಿನಿಮಾದ ನಾಯಕ ನಟ ಗೌರಿ ಶಿಕರ್ ಅವರನ್ನು ಜೈಪುರದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆಗೊಳಿಸಿದ್ರಂತೆ. ಹೌದು, ರಾಜಹಂಸದ ಚಿತ್ರತಂಡ ಚಿತ್ರೀಕರಣಕ್ಕಾಗಿ ರಾಜಸ್ಥಾನದ ಜೈಪುರ ನಗರಕ್ಕೆ ತೆರಳಿತ್ತು. ಈ ವೇಳೆ ಜೈಪುರನ ಐತಿಹಾಸಿಕ ಕೋಟೆಯ ಒಳಭಾಗದಲ್ಲಿ ಚಿತ್ರೀಕರಣ ಮುಗಿಸಿಕೊಂಡು ಬರುವಾಗ ಪೊಲೀಸರು ನಾಯಕ ಗೌರಿಶಿಕರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ನಂತರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ್ದಾರೆ.

    ಏನಾಗಿತ್ತು?: ಜೈಪುರ ಕೋಟೆಯಲ್ಲಿ ಶೂಟಿಂಗ್ ಮುಗಿದ ಬಳಿಕ ಚಿತ್ರತಂಡ ಹೊರ ನಡೆದಿತ್ತು. ಕೊನೆಯಲ್ಲಿ ಉಳಿದ ನಾಯಕ ನಟ ಗೌರಿ ಶಿಕರ್‍ ಹೊರ ಹೋಗುವಷ್ಟರಲ್ಲಿ ಇಡೀ ಚಿತ್ರತಂಡ ಹೊರಟಿತ್ತು. ಇನ್ನೇನು ಹೊರಡುವಷ್ಟರಲ್ಲಿ ಬಂದ ಪೊಲೀಸರು ಕೋಟೆಯ ಪ್ರವೇಶದ ಟಿಕೆಟ್ ಕೇಳಿದ್ದಾರೆ. ಈ ವೇಳೆ ಗೌರಿ ಶಿಖರ್ ತಾವು ಸಿನಿಮಾ ಶೂಟಿಂಗ್ ಗಾಗಿ ಬಂದು ಚಿತ್ರತಂಡದ ಸದಸ್ಯರು ಮುಂದೆ ಹೋಗಿದ್ದು, ಹಾಗಾಗಿ ತಮ್ಮ ಬಳಿ ಟಿಕೆಟ್ ಇಲ್ಲವೆಂದು ತಿಳಿಸಿದ್ದಾರೆ.

    ಗೌರಿಶಿಕರ್ ತಾವು ಬಂದ ಉದ್ದೇಶವನ್ನು ಪೊಲೀಸರಿಗೆ ತಿಳಿಸಿದ್ರೂ, ಬೇರೆ ಭಾಷೆಯಾಗಿದ್ದರಿಂದ ಅರ್ಥವಾಗಿಲ್ಲ. ಹಾಗಾಗಿ ನನ್ನನ್ನು ನಾಲ್ಕು ಗಂಟೆಗಳ ಕಾಲ ಠಾಣೆಯಲ್ಲಿ ಕೂರಿಸಲಾಯಿತು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಬಂದಾಗ ಮೊಬೈಲ್ ನಲ್ಲಿ ಸಿನಿಮಾದ ಟೀಸರ್ ತೋರಿಸಿದಾಗ ನನ್ನನ್ನು ಬಿಟ್ಟು ಬಿಟ್ಟರು ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ನಟ ಗೌರಿಶಿಕರ್ ಹೇಳಿದ್ದಾರೆ.

    ಇದನ್ನೂ ಓದಿ: ನಿಮ್ಗೆ ಸೆಲ್ಫೀ ಕ್ರೇಝ್ ಇದ್ರೆ ಸೆಪ್ಟೆಂಬರ್ 8ಕ್ಕೆ ‘ರಾಜಹಂಸ’ ನೋಡಿ

    ಪೀ..ಪೀ..ಸಾಂಗ್ ಕೇಳಿ: ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಗಮನ ಸೆಳೆದಿರುವ `ರಾಜಹಂಸ’ ಯುಟ್ಯೂಬ್ ನಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದೆ. ಹಳ್ಳಿ ಬೇರುಗಳು ಮತ್ತು ನಗರದ ಚಿಗುರುಗಳು ಜೊತೆಗೂಡಿ ಹ್ಯಾಪಿ ಅನ್ನೋ ಪೀಪಿ ಊದ್ತಾ ಕುಣಿದು ಕುಪ್ಪಳಿಸೋ ಪಕ್ಕಾ ಫ್ಯಾಮಿಲಿ ಹಾಡು ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ತನ್ನ ಸಂಗೀತದ ಅಲೆಗಳನ್ನು ಹರಿಸಿದೆ. ಜಾತ್ರೆಯ ಸನ್ನಿವೇಶವನ್ನು ಒಳಗೊಂಡಿರುವ ಪೀ..ಪೀ.. ಹಾಡಿನಲ್ಲಿ ಸಿನಿಮಾದ ಇಡೀ ಚಿತ್ರತಂಡ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

    ನಗರದ ಹುಡುಗ ಮತ್ತು ಹಳ್ಳಿ ಹುಡುಗಿಯ ಕುಟುಂಬಸ್ಥರು ದೇವರ ಸನ್ನಿಧಿಯಲ್ಲಿ ಒಂದಾಗಿ ಪೂಜೆ ಸಲ್ಲಿಸುವ ವಿಶೇಷ ಹಾಡು ಇದಾಗಿದೆ. ಹಾಡಿನ ಲಿರಿಕ್ಸ್ ಮಾತ್ರ ಅರ್ಥಪೂರ್ಣವಾಗಿದ್ದು, ಗ್ರಾಮೀಣ ಮತ್ತು ನಗರದ ಜೀವನ ಶೈಲಿಯನ್ನು ಹೇಳುತ್ತದೆ. ಹಾಡಿನ ಸಂಗೀತವೂ ಚೆನ್ನಾಗಿದ್ದು ಕೇಳುಗರನ್ನು ಸಹ ನಾಲ್ಕು ಸ್ಟೆಪ್ ಹಾಕುವಂತೆ ಮಾಡುತ್ತದೆ.

    ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿರುವ ಪುಟ್ಟ ಗೌರಿ (ರಂಜಿನಿ ರಾಘವನ್) ಮೊದಲ ಬಾರಿಗೆ ಬೆಳ್ಳಿ ಪರದೆಯಲ್ಲಿ ಮಿಂಚಲಿದ್ದಾರೆ. ಇನ್ನೂ ಸಿನಿಮಾದಲ್ಲಿ ರಂಜಿನಿ (ಹಂಸಾಕ್ಷಿ)ಗೆ ಜೊತೆಯಾಗಿ ಗೌರಿಶಿಕರ್ ನಾಯಕರಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಶ್ರೀಧರ್, ಬಿ.ಸಿ.ಪಾಟೀಲ್, ಯಮುನಾ, ತಬಲಾ ನಾಣಿ, ವಿಜಯ್ ಚಂಡೂರ್, ಬುಲೆಟ್ ಪ್ರಕಾಶ್ ಸೇರಿದಂತೆ 70ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ನಾಯಕನ ತಂದೆಯಾಗಿ ನಟ ಶ್ರೀಧರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

    ಇದನ್ನೂ ಓದಿ:  ಸೀನು, ಲವ್ ಎರಡನ್ನೂ ಕಂಟ್ರೋಲ್ ಮಾಡೋದು ಹೇಗೆ?

    ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ. ಈಗಾಗಲೇ ಹಾಡುಗಳು ಎಲ್ಲರ ಮನದಲ್ಲಿ ಗುನುಗುಟ್ಟುತ್ತಿವೆ. ಬಾರಮ್ಮ ಬಾರಮ್ಮ ಭಾರತಿ, ಮುಲಾ ಮುಲಾ ಸೇರಿದಂತೆ ಎಲ್ಲ ಹಾಡುಗಳು ಸಿನಿರಸಿಕರ ಮನ ಸೆಳೆಯುತ್ತಿದ್ದು, ಯುಟ್ಯೂಬ್ ನಲ್ಲಿ ಟ್ರೆಂಡ್ ಸೃಷ್ಟಿ ಮಾಡಿವೆ. ರಘು ದೀಕ್ಷಿತ್ ಹಾಡಿರುವ ಹಾಡನ್ನು ಉತ್ತರ ಭಾರತದ ಒಟ್ಟು 8 ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಬಾರಮ್ಮ ಬಾರಮ್ಮ ಹಾಡು ಚಂದನ್ ಶೆಟ್ಟಿ ಧ್ವನಿಯಲ್ಲಿ ಮೂಡಿಬಂದಿದೆ. ಸಿನಿಮಾ ಸೆಪ್ಟೆಂಬರ್ 8ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಲಗ್ಗೆಯಿಡಲಿದೆ.