Tag: gauribidanur

  • ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು

    ಚಿಕ್ಕಬಳ್ಳಾಪುರ: ಗೌರಿಬಿದನೂರಿನ (Gauribidanur) ಬೈಪಾಸ್ ಗಣೇಶ ವಿಸರ್ಜನೆ (Ganesha Immersion) ವೀಕ್ಷಿಸಲು ಹೊರಟ ಇಬ್ಬರು ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಡ್ಡರಬಂಡೆ ಗ್ರಾಮದ ಸಮೀಪ ನಡೆದಿದೆ.

    ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದ ವಡ್ಡರಬಂಡೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ನೀಲಗಿರಿ ಮರದೊಳಗೆ ತೂರಿಕೊಂಡಿದೆ. ಕಾರಿನಲ್ಲಿದ್ದ ಮಂಚೇನಹಳ್ಳಿ ವಾಸಿ ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್‌ಡಿಎ ಶಶಿ (42) ಹಾಗೂ ಮಂಚೇನಹಳ್ಳಿ ತಾಲೂಕಿನ ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು (28) ಮೃತಪಟ್ಟಿದ್ದಾರೆ. ಇನ್ನೂ ಕಾರಿನಲ್ಲಿದ್ದ ಮಂಚೇನಹಳ್ಳಿಯ ಮುಕ್ಕಡಿಪೇಟೆಯ ರಮೇಶ್ (40) ತೀವ್ರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

    ಮಂಚೇನಹಳ್ಳಿಯಿಂದ ಗೌರಿಬಿದನೂರಿನತ್ತ ಸಾಗುವಾಗ ವಡ್ಡರ ಬಂಡೆ ಬಳಿ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಮೃತ ಶಶಿ ಅವರ ಪತ್ನಿ ನಾಜಿಯಾ ಈ ಬಗ್ಗೆ ಮಂಚೇನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಂದಹಾಗೆ ಇಂದು ಗೌರಿಬಿದನೂರು ಬೈಪಾಸ್ ಗಣೇಶನ ಗಂಗಾವೀಲೀನ ಕಾರ್ಯ ವಿಜೃಂಭಣೆಯಿಂದ ನೇರವೇರಿತ್ತು. ಇದನ್ನೂ ಓದಿ: ಟೀಂ ಇಂಡಿಯಾ ಬೌಲಿಂಗ್‌ ದಾಳಿಗೆ ಪತರುಗುಟ್ಟಿದ ಪಾಕ್‌ – ಸೂರ್ಯ ಪಡೆ ಗೆಲುವಿಗೆ ಬೇಕು 128 ರನ್‌

  • ಸಂಸಾರ ಸಾಗಿಸೋಕೆ ಸರಗಳ್ಳತನ ಮಾಡಿದ್ದ ಲವರ್ಸ್ ಅರೆಸ್ಟ್!

    ಸಂಸಾರ ಸಾಗಿಸೋಕೆ ಸರಗಳ್ಳತನ ಮಾಡಿದ್ದ ಲವರ್ಸ್ ಅರೆಸ್ಟ್!

    ಚಿಕ್ಕಬಳ್ಳಾಪುರ: ಅವನಿಗೆ ಮದುವೆಯಾಗಿ ಮಕ್ಕಳಿದ್ದರೂ ಮತ್ತೊಬ್ಬ ಯುವತಿಯನ್ನ ಗರ್ಭಿಣಿ ಮಾಡಿ, ಆಕೆ ಜೊತೆ ಕದ್ದು ಮುಚ್ಚಿ ಸಂಸಾರ ನಡೆಸುತ್ತಿದ್ದ. ಈ ವಿಚಾರ ಎರಡು ಮನೆಯ ಕಡೆಯವರಿಗೂ ಗೊತ್ತಾಗಿ, ಇಬ್ಬರೂ ಮನೆ ಬಿಟ್ಟು ಊರೂರು ಅಲೆಯುವಂತಾಗಿತ್ತು. ಹೀಗಾಗಿ ಇಬ್ಬರಿಗೂ ಇರೋಕೆ ನೆಲೆ ಇರಲಿಲ್ಲ. ಇದರಿಂದ ಮನೆ ಬಾಡಿಗೆಗೆ ಪಡೆದು, ಸಂಸಾರ ಸಾಗಿಸೋಕೆ ಹೋಗಿ ಪ್ರೇಮಿಗಳಿಬ್ಬರು ಸರಗಳ್ಳತನ ಮಾಡಿ ಈಗ ಚಿಕ್ಕಬಳ್ಳಾಪುರ (Chikkaballapur) ಪೊಲೀಸರ ಅತಿಥಿಗಳಾಗಿದ್ದಾರೆ.

    ಬಂಧಿತರನ್ನು ಗೌರಿಬಿದನೂರು (Gauribidanur) ತಾಲೂಕಿನ ಮುದುಗೆರೆ ಗ್ರಾಮದ ಅಶ್ವಿನಿ ಹಾಗೂ ಗೋವಿಂದರಾಜು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Belagavi | ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಹರಿದ ಟ್ಯಾಂಕರ್ – ಮೂವರು ದುರ್ಮರಣ

    ಏನಿದು ಘಟನೆ?
    ಕಳೆದ ಮೇ 26 ರಂದು ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಗ್ರಾಮದ ಬಳಿ ನಿರ್ಮಾಣ ಹಂತದ ತೋಟದ ಮನೆಯಲ್ಲಿ ಒಂಟಿಯಾಗಿದ್ದ ಅಂಜನಮ್ಮಳ ಬಾಯಿಗೆ ಬಟ್ಟೆ ತುರುಕಿ ಹಲ್ಲೆ ಮಾಡಿ 50 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ನಂದಿಗಿರಿಧಾಮ ಪೊಲೀಸರು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮುದುಗೆರೆ ಗ್ರಾಮದ ಅಶ್ವಿನಿ ಹಾಗೂ ಗೋವಿಂದರಾಜುನನ್ನು ಬಂಧಿಸಿದ್ದಾರೆ.

    ಅಂದಹಾಗೆ ಗೋವಿಂದರಾಜುಗೆ ಮದುವೆಯಾಗಿ ಮಕ್ಕಳಿದ್ರೂ ತಮ್ಮದೇ ಗ್ರಾಮದ ತಂದೆ ತಾಯಿ ಇಲ್ಲದೆ ಅಜ್ಜಿಯ ಆಸರೆಯಲ್ಲಿದ್ದ ಅಶ್ವಿನಿಯನ್ನ ಪುಸಲಾಯಿಸಿ ಆಕೆಯನ್ನ ಗರ್ಭಿಣಿ ಮಾಡಿದ್ದ. ಹೀಗಾಗಿ ಮನೆಯಲ್ಲಿ ಊರೆಲ್ಲೆಲ್ಲಾ ವಿಚಾರ ಗೊತ್ತಾಗಿ ಊರು ಬಿಟ್ಟು ಬಂದಿದ್ದರು. ವಾಸ ಮಾಡೋಕೆ ಮನೆ ಇರದೇ ಬಾಡಿಗೆಗೆ ಮನೆ ಮಾಡೋಣ ಎಂದು ಯೋಚಿಸಿದ್ದರು. ಆದರೆ ಹಣವಿರದೇ ಬೈಕ್‌ ಒಂದನ್ನು ಕದ್ದಿದ್ದರು. ಅದೇ ಬೈಕ್‌ಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದರು ಎಂದು ತಿಳಿದು ಬಂದಿದೆ.

    ಸರ ಕದ್ದು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದೇ ದಶ್ಯ ಆಧರಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಿಸಿದ ಬೈಕ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಗೆಳೆಯ ಲಾಟರಿಯಲ್ಲಿ ಗೆದ್ದ 30 ಕೋಟಿ ರೂ. ಕದ್ದು ಪ್ರಿಯಕರನೊಂದಿಗೆ ಪರಾರಿಯಾದ ಕೇಡಿ ಲೇಡಿ!

  • ರಾತ್ರಿ ಲೈಟ್ ಹಾಕಿರೋ ಮನೆಗಳನ್ನೇ ಟಾರ್ಗೆಟ್‌ ಮಾಡಿ ಕಳ್ಳತನ – ಪತಿ ಕಾರ್ಯಕ್ಕೆ ಹೆಂಡ್ತಿ, ಸ್ನೇಹಿತರ ಸಾಥ್!

    ರಾತ್ರಿ ಲೈಟ್ ಹಾಕಿರೋ ಮನೆಗಳನ್ನೇ ಟಾರ್ಗೆಟ್‌ ಮಾಡಿ ಕಳ್ಳತನ – ಪತಿ ಕಾರ್ಯಕ್ಕೆ ಹೆಂಡ್ತಿ, ಸ್ನೇಹಿತರ ಸಾಥ್!

    – 412 ಗ್ರಾಂ ಚಿನ್ನ 2.5 ಕೆಜಿ ಬೆಳ್ಳಿ ವಶ

    ಚಿಕ್ಕಬಳ್ಳಾಪುರ: ಎರಡು ಮೂರು ದಿನ ಸಂಬಂಧಿಕರ ಮನೆಗೆ ಕುಟುಂಬ ಸಮೇತ ಹೋಗುವಾಗ ಮನೆಯಲ್ಲಿ ಲೈಟ್ ಹಾಕಿ ಹೋಗೋದು ಸಾಮಾನ್ಯ, ಬೆಳಕಿದ್ರೆ ಯಾರೋ ಮನೆಯಲ್ಲಿದ್ದಾರೆ. ಕಳ್ಳರು ಮನೆಗೆ ನುಗ್ಗಲ್ಲ ಎಂಬ ಗ್ಯಾರಂಟಿ! ಆದರೆ ಇಲ್ಲೊಬ್ಬ ಕಿಲಾಡಿ ಕಳ್ಳ ದಂಪತಿ ಅಂತಹ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ.

    ಬಂಧಿತ ಆರೋಪಿಗಳನ್ನು ನೂರುಲ್ಲಾ ಅಲಿಯಾಸ್ ಖಾರದಪುಡಿ ನೂರುಲ್ಲಾ, ಆತನ ಸ್ನೇಹಿತ ವಿನೋದ್ ಮಾರ್ಕಕರ್ ಹಾಗೂ ಸಾಗಾರ್ ಎಂದು ಗುರುತಿಸಲಾಗಿದೆ. ಈತ ಹೋದ ಕಡೆಯಲ್ಲೆಲ್ಲಾ ಒಂದೊಂದು ಹೆಸರು ಹೇಳಿಕೊಂಡು ಮನೆಗಳ್ಳತನ ಮಾಡೋದನ್ನ ಕಾಯಕ ಮಾಡಿಕೊಂಡಿದ್ದ. ಈತನಿಗೆ ಸ್ವತಃ ಈತನ ಹೆಂಡತಿ ಹಮೀನಾಬಿ ಹಾಗೂ ಸ್ನೇಹಿತರಾದ ವಿನೋದ್ ಮಾರ್ಕಕರ್, ಸೇರಿದಂತೆ ಸಾಗಾರ್ ಸಾಥ್ ಕೊಡುತ್ತಿದ್ದರು. ಆರೋಪಿ ಹಮೀನಾಬಿ ತಲೆ ಮರೆಸಿಕೊಂಡಿದ್ದಾಳೆ.

    ಈ ನಾಲ್ಕು ಮಂದಿ ಜ.10 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ತ್ಯಾಗರಾಜ ಕಾಲೋನಿಯಲ್ಲಿ ಅಶ್ವತ್ಥನಾರಾಯಣಶೆಟ್ಟಿ ಎಂಬವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ಅಶ್ವತ್ಥನಾರಾಯಣಶೆಟ್ಟಿ ಪತ್ನಿ ಸಮೇತ ಮಗನ ಮನೆಗೆ ಬೆಂಗಳೂರಿಗೆ ಹೋಗಿದ್ದರು. ಈ ವೇಳೆ ಕಳ್ಳರ ಭಯದಿಂದ ಮನೆಯಲ್ಲಿ ಒಂದು ಲೈಟ್‌ ಆನ್‌ ಮಾಡಿ ಹೋಗಿದ್ದರು. ಆದರೂ ಕೈಚಳಕ ತೋರಿದ್ದ ನೂರುಲ್ಲಾ ಹಾಗೂ ಆತನ ಗ್ಯಾಂಗ್ ಮನೆಯ ಬಿರುವಿನಲ್ಲಿದ್ದ 412 ಗ್ರಾಂ ಚಿನ್ನಾಭರಣ ಸೇರಿದಂತೆ ಎರಡೂವರೆ ಕೆಜಿ ಬೆಳ್ಳಿ ಅಭರಣಗಳು ಹಾಗೂ 1 ಲಕ್ಷ ರೂ. ನಗದನ್ನು ದೋಚಿತ್ತು.

    ಗೌರಿಬಿದನೂರು (Gauribidanur) ಪೊಲೀಸರು ಆರೋಪಿಗಳನ್ನ ಹಿಡಿಯಲು ಹೋದಾಗ ಕಾರು ಅಪಘಾತವಾಗಿ ಗಾಯಗೊಂಡಿದ್ದರು. ಆದರೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪೊಲೀಸರು ಪಾರಾಗಿದ್ದರು. ಇದೀಗ ಪಟ್ಟು ಬಿಡದೆ ಕಳ್ಳರನ್ನ ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ.

    ವಿಚಾರಣೆ ವೇಳೆ ಮನೆಯಲ್ಲಿ ಲೈಟ್ ಹಾಕಿ ಮನೆಗೆ ಬೀಗ ಹಾಕಲಾಗಿತ್ತು. ಇದ್ರಿಂದಲೇ ಮನೆಯಲ್ಲಿ ಕಳ್ಳತನ ಮಾಡಿರೋದಾಗಿ ಪೊಲೀಸರು ಬಳಿ ಕಳ್ಳರು ಬಾಯ್ಬಿಟ್ಟಿದ್ದಾರೆ.

  • ಚಿಕ್ಕಪ್ಪನನ್ನೇ ಕೊಂದ ಪ್ರಕರಣ – ಜ್ಯೂಸ್ ಅಂತ ಹೇಳಿ ಮದ್ಯ ಕುಡಿಸಿದ್ದಕ್ಕೆ ಬರ್ಬರ ಹತ್ಯೆ

    ಚಿಕ್ಕಪ್ಪನನ್ನೇ ಕೊಂದ ಪ್ರಕರಣ – ಜ್ಯೂಸ್ ಅಂತ ಹೇಳಿ ಮದ್ಯ ಕುಡಿಸಿದ್ದಕ್ಕೆ ಬರ್ಬರ ಹತ್ಯೆ

    ಚಿಕ್ಕಬಳ್ಳಾಪುರ: ಚಿಕ್ಕಪ್ಪನನ್ನೇ (Uncle) ಅಣ್ಣನ ಮಗ ಕೊಚ್ಚಿ ಕೊಲೆ (Murder) ಮಾಡಿದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರು (Gauribidanur) ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಚಿಕ್ಕಪ್ಪ ಮೋಸದಿಂದ ಮದ್ಯ (Alcohol) ಕುಡಿಸಿದ್ದಕ್ಕೆ ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

    ಅಂದಹಾಗೆ ಸೋಮವಾರ ಬೆಳಗ್ಗೆ ಗೌರಿಬಿದನೂರು ತಾಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಹಾಲು ತರಲು ಡೈರಿ ಬಳಿ ಬಂದಿದ್ದ ರಾಮಕೃಷ್ಣಪ್ಪನನ್ನು ಆತನ ಅಣ್ಣನ ಮಗ ನಾಗರಾಜು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಇದೀಗ ಪೊಲೀಸರ ಬಳಿ ಆರೋಪಿ ಕೊಲೆಯ ಕಾರಣವನ್ನು ಬಿಚ್ಚಿಟ್ಟಿದ್ದಾನೆ.

    ಕೊಲೆಗಾರ ನಾಗರಾಜು ಈ ಹಿಂದೆ ಮದ್ಯವ್ಯಸನಿಯಾಗಿದ್ದು ಕುಟುಂಬಸ್ಥರು ಮದ್ಯಪಾನ ಮುಕ್ತ ಕೇಂದ್ರಕ್ಕೆ ಸೇರಿಸಿ ಮದ್ಯ ಸೇವನೆ ಬಿಡಿಸಿದ್ದರು. ಕಳೆದ 8 ವರ್ಷಗಳಿಂದ ಸಂತೋಷದ ಜೀವನ ಮಾಡಿಕೊಂಡಿದ್ದ ನಾಗರಾಜುಗೆ ರಾಮಕೃಷ್ಣಪ್ಪ ಕೊಲೆಯಾದ ಹಿಂದಿನ ದಿನ ಜ್ಯೂಸ್ (Juice) ಬಾಟಲಿಗೆ ಮದ್ಯ ಬೆರೆಸಿ ನೀಡಿದ್ದ. ಇದನ್ನೂ ಓದಿ: ಉತ್ತರಕಾಶಿ ಸುರಂಗದಲ್ಲಿ ಗ್ರೇಟ್ ಆಪರೇಷನ್ – 17 ದಿನಗಳ ಬಳಿಕ ಸಾವು ಗೆದ್ದ 41 ಕಾರ್ಮಿಕರು

    ಬಾಟಲಿಯಲ್ಲಿರುವುದು ಜ್ಯೂಸ್ ಎಂದು ನಂಬಿಸಿ ನಾಗರಾಜುಗೆ ಮೋಸದಿಂದ ಮದ್ಯ ಕುಡಿಸಿದ್ದರಿಂದ ಅಮಲೇರಿದ ಆತ ರಾತ್ರಿ ಮನೆಯಲ್ಲಿ ಹೆಂಡತಿ ಜೊತೆ ಗಲಾಟೆ ಮಾಡಿಕೊಂಡಿದ್ದಾನೆ. ಮರುದಿನ ಬೆಳಗ್ಗೆ ನಡೆದ ಘಟನೆ ಬಗ್ಗೆ ಸಾಕಷ್ಟು ವಿಚಲಿತನಾದ ನಾಗರಾಜು ಚಿಕ್ಕಪ್ಪ ರಾಮಕೃಷ್ಣಪ್ಪ ಹಾಲು ತರಲು ಬರುವುದನ್ನೇ ಕಾದು ಕುಳಿತು ಬಳಿಕ ಬರ್ಬರ ಹತ್ಯೆ ನಡೆಸಿ ಪರಾರಿಯಾಗಿದ್ದ.

    ಘಟನೆ ನಂತರ ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾನೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?

  • ಜನರ ಎದುರೇ ಚಿಕ್ಕಪ್ಪನನ್ನು ಕೊಚ್ಚಿ ಕೊಂದ ಅಣ್ಣನ ಮಗ!

    ಜನರ ಎದುರೇ ಚಿಕ್ಕಪ್ಪನನ್ನು ಕೊಚ್ಚಿ ಕೊಂದ ಅಣ್ಣನ ಮಗ!

    ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ಜನರ ಎದುರೇ ತನ್ನ ಚಿಕ್ಕಪ್ಪನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗೌರಿಬಿದನೂರಿನ (Gauribidanur) ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಹತ್ಯೆಯಾದ ವ್ಯಕ್ತಿಯನ್ನು ಕೊತ್ತೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗಂಗರತ್ನಮ್ಮ ಅವರ ಪತಿ ರಾಮಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಈತನನ್ನ ಬರ್ಬರವಾಗಿ ಕೊಲೆ ಮಾಡಿರುವುದು ಸ್ವತಃ ರಾಮಕೃಷ್ಣಪ್ಪನ ಅಣ್ಣನ ಮಗ ನಾಗರಾಜ್ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಹಾಲು ತರಲು ಡೈರಿ ಬಳಿ ತೆರಳಿದ್ದ ವೇಳೆ ಆರೋಪಿ, ರಾಮಕೃಷ್ಣಪ್ಪನ ಮೇಲೆ ಏಕಾಏಕಿ ಮನಸ್ಸೋ ಇಚ್ಛೇ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಿಂದ ಆತ ಸಾವಿಗೀಡಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಜೂಜಾಟಕ್ಕೆ ಹಣ ಕೊಡದ ಪತ್ನಿಯ ತಲೆ ಒಡೆದು ಹತ್ಯೆ – ಆರೋಪಿ ಅರೆಸ್ಟ್

    ರಾಮಕೃಷ್ಣಪ್ಪ ಊರಲ್ಲಿ ನ್ಯಾಯ ಪಂಚಾಯತಿ ಮಾಡೋದು, ಸಮಾಜಸೇವೆ ಕೆಲಸ ಮಾಡಿಕೊಂಡು ಒಳ್ಳೆಯವನು ಎನಿಸಿಕೊಂಡಿದ್ದ. ಈತನ ಅಣ್ಣನ ಮಗ ನಾಗರಾಜ್ ಪಂಚಾಯತಿ ಕೊಳವೆ ಬಾವಿಯ ಕೇಬಲ್ ಕದ್ದು ಸಿಕ್ಕಿಬಿದ್ದಿದ್ದು ಪ್ರಕರಣದಲ್ಲಿ ಜೈಲುಪಾಲಾಗಿದ್ದ ಎನ್ನಲಾಗಿದೆ. ಇನ್ನೂ ಜೈಲಿಂದ ಬಂದವನು ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೆಲ್ಲಾ ತಿಳಿದಿದ್ದ ರಾಮಕೃಷ್ಣಪ್ಪ ಪೊಲೀಸರಿಗೆ (Police) ಹಾಗೂ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದನಂತೆ. ಬೇಟೆಯಾಡಲು ನಾಗರಾಜ್ ಸಾಕಿಕೊಂಡಿದ್ದ ಬೇಟೆ ನಾಯಿಗಳು ಸಹ ಇತ್ತೀಚೆಗೆ ಸಾವನ್ನಪ್ಪಿದ್ದು, ಅದಕ್ಕೆ ರಾಮಕೃಷ್ಣಪ್ಪನೇ ಕಾರಣ ಎನ್ನುವ ಅನುಮಾನ ಸಹ ಇತ್ತು ಎನ್ನಲಾಗಿದೆ. ಇಷ್ಟೇ ಅಲ್ಲದೆ ಅನೈತಿಕ ಸಂಬಂಧದ ಶಂಕೆ ಸಹ ವ್ಯಕ್ತವಾಗಿದ್ದು ಇದೆಲ್ಲ ಕೊಲೆಗೆ ಕಾರಣ ಆಗಿರಬಹುದು ಎನ್ನಲಾಗಿದೆ.

    ಕೊಲೆಯ ಬಳಿಕ ಆರೋಪಿ ಊರು ತೊರೆದು ಕಾಡು ಸೇರಿದ್ದಾನೆ ಎನ್ನಲಾಗಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್‍ಪಿ ನಾಗೇಶ್ ನೇತೃತ್ವದಲ್ಲಿ ಬೆರಳಚ್ಚು ತಜ್ಞರ ತಂಡ ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ಅಪರಿಚಿತೆಯ ಮಾತುಕೇಳಿ ವೀಡಿಯೋ ಕಾಲ್‍ನಲ್ಲಿ ನಗ್ನವಾಗಿ ಲಕ್ಷಾಂತರ ರೂ. ಕಳೆದುಕೊಂಡ!

  • ಮಾಜಿ ಸೈನಿಕರಿಗೆ 35 ಲಕ್ಷ ರೂ. ವಂಚನೆ- ಜ್ಯುವೆಲ್ಲರಿ ಶಾಪ್ ಮಾಲೀಕ ಅರೆಸ್ಟ್

    ಮಾಜಿ ಸೈನಿಕರಿಗೆ 35 ಲಕ್ಷ ರೂ. ವಂಚನೆ- ಜ್ಯುವೆಲ್ಲರಿ ಶಾಪ್ ಮಾಲೀಕ ಅರೆಸ್ಟ್

    ಚಿಕ್ಕಬಳ್ಳಾಪುರ: ಇಬ್ಬರು ನಿವೃತ್ತ ಸೈನಿಕರಿಗೆ ಜಮೀನು ಮಂಜೂರು ಮಾಡಿಸಿ ಕೊಡುವುದಾಗಿ ಡಿಸಿ ಆರ್ಡರ್ ಮಾಡಿಸಿ ಕೊಡುತ್ತೇನೆ ಎಂದು 35 ಲಕ್ಷ ರೂ. ವಸೂಲಿ ಮಾಡಿದ ವ್ಯಕ್ತಿಯೊಬ್ಬನನ್ನು ಪೊಲೀಸರು (Police) ಬಂಧಿಸಿದ್ದಾರೆ.

    ನಗರದ ಗಂಗಮ್ಮ ಗುಡಿ ಬಜಾರ್ ರಸ್ತೆಯಲ್ಲಿರುವ ಜ್ಯುವೆಲ್ಲರಿ ಶಾಪ್ ಮಾಲೀಕ ಸೂರ್ಯನಾರಾಯಣಚಾರಿ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ, ನನಗೆ ಆ ಅಧಿಕಾರಿ ಗೊತ್ತು, ಈ ಅಧಿಕಾರಿ ಗೊತ್ತು ಎಂದು ನಿವೃತ್ತ ಸೈನಿಕನಿಗೆ ಸರ್ಕಾರದಿಂದ ಜಮೀನು ಮಂಜೂರು ಮಾಡಿಸಿ ಕೊಡುತ್ತೇನೆ ಎಂದು ಇಬ್ಬರು ನಿವೃತ್ತ ಸೈನಿಕರಿಗೆ ಲಕ್ಷ ಲಕ್ಷ ರೂ. ಹಣವನ್ನು (Fraud Case) ವಂಚಿಸಿದ್ದಾನೆ. ಇದನ್ನೂ ಓದಿ: ಎಂಗೇಜ್‍ಮೆಂಟ್ ರಿಂಗ್ ಕಳೆದು ಹೋಗಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಆರೋಪಿ, ಗೌರಿಬಿದನೂರಿನ (Gauribidanur) ದೊಡ್ಡಕುರುಗೋಡು ಗ್ರಾಮದ ಮಾಜಿ ಸೈನಿಕ ಮಾಕರ್ಂಡೇಯ ಹಾಗೂ ಮರಿಯಪ್ಪನಪಾಳ್ಯದ ಮಾಜಿ ಸೈನಿಕ ಅನಂದ್ ಕುಮಾರ್ ಬಳಿ ಡಿಸಿ ಆರ್ಡರ್ ಮಾಡಿಸಿಕೊಡುವುದಾಗಿ ಹೇಳಿ ಬರೋಬ್ಬರಿ 35 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾನೆ.

    2019 ರಲ್ಲಿ ಜಮೀನು ಮಂಜೂರು ಮಾಡುವಂತೆ ಮಾಕರ್ಂಡೇಯ ಹಾಗೂ ಆನಂದ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಗೌರಿಬಿದನೂರು ತಹಶೀಲ್ದಾರ್ ಹಾಗೂ ಚಿಕ್ಕಬಳ್ಳಾಪುರ ಎಸಿ ಕಚೇರಿಯಲ್ಲಿ ಫೈಲ್ ಮೂವ್ ಆಗಿತ್ತು. ಕೊನೆಗೆ ಡಿಸಿ ಕಚೇರಿಯಲ್ಲಿ ಕಡತ ಹಾಗೆಯೇ ಒಂದು ವರ್ಷ ಉಳಿದಿತ್ತು. ಇದರಿಂದ ದಿಕ್ಕು ತೋಚದ ಇಬ್ಬರು ಮಾಜಿ ಸೈನಿಕರು, ಸಂಬಂಧಿಕರೊಬ್ಬರಿಂದ ಸೂರ್ಯನಾರಾಯಣಚಾರಿಯ ಪರಿಚಯ ಮಾಡಿಕೊಂಡು ಅರ್ಜಿ ಮೂವ್ ಮಾಡಲು ಮುಂದಾಗಿದ್ದಾರೆ.

    ಮಾಜಿ ಸೈನಿಕರ ಅಸಹಾಯಕತೆಯನ್ನು ದುರುಪಯೋಗ ಮಾಡಿಕೊಂಡ ಆರೋಪಿ ಲಕ್ಷ ಲಕ್ಷ ಹಣ ಪಡೆದಿದ್ದಾನೆ. ಬಳಿಕ ಆರೋಪಿ ವಂಚಿಸುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಮಾಜಿ ಸೈನಿಕರು ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾಗಿದ್ದರೂ ಕ್ರಮ ಕೈಗೊಳ್ಳದ ಕಾರಣ ಶಾಸಕ ಪ್ರದೀಪ್ ಈಶ್ವರ್ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬಳಿಕ ಶಾಸಕರು ಜಿಲ್ಲಾಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

    ಬಂಧನದ ವೇಳೆ ಪೊಲೀಸರ ಮೇಲೆಯೇ ಆರೋಪಿ ದರ್ಪ ತೋರಿಸಿದ್ದಾನೆ. ಹೀಗಾಗಿ ವಂಚನೆ ಪ್ರಕರಣದ ಜೊತೆಗೆ ಕರ್ತವ್ಯಕ್ಕೆ ಅಡ್ಡಿ ಆರೋಪದಡಿಯೂ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ವಿಚ್ಛೇದನ ತೀರ್ಪಿನ ದಿನವೇ ಪತ್ನಿಗೆ ಮಚ್ಚೇಟು – ಆರೋಪಿ ಅರೆಸ್ಟ್

  • ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿ ಹತ್ಯೆ- ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

    ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿ ಹತ್ಯೆ- ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

    ಚಿಕ್ಕಬಳ್ಳಾಪುರ: ಬೈಕ್ (Bike) ರಿಪೇರಿ ಹಣದ ವಿಚಾರದಲ್ಲಿ ನಡೆದ ಗಲಾಟೆ ಬೈಕ್ ಮಾಲೀಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಗೌರಿಬಿದನೂರಿನ  (Gauribidanur) ಚನ್ನಬೈರನಹಳ್ಳಿಯಲ್ಲಿ ನಡೆದಿದೆ.

    ಚನ್ನಬೈರನಹಳ್ಳಿಯ ಸತ್ಯನಾರಾಯಣ (45) ಹತ್ಯೆಯಾದ ವ್ಯಕ್ತಿ. ಮೆಕ್ಯಾನಿಕ್ ಚೇತನ್ ಆತನ ಸ್ನೇಹಿತ ಜ್ವಾಲೇಂದ್ರ, ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಇದನ್ನೂ ಓದಿ: 20 ಕೋಟಿ ಬಳಿಕ 200 ಕೋಟಿಗೆ ಬೇಡಿಕೆ- ಅಂಬಾನಿಗೆ ಬಂತು ಮತ್ತೊಂದು ಜೀವಬೆದರಿಕೆ ಇಮೇಲ್

    ಕಲ್ಲೋಡಿ ಎಂಬಲ್ಲಿ ಚೇತನ್ ಗ್ಯಾರೆಜ್ ನಡೆಸುತ್ತಿದ್ದ. ಈತನ ಬಳಿ ಹತ್ಯೆಗೀಡಾದ ಸತ್ಯನಾರಾಯಣ ಬೈಕ್ ರಿಪೇರಿ ಮಾಡಿಸಿ ಹಣ ಕೊಟ್ಟಿರಲಿಲ್ಲ. ತನಗೆ ಬರಬೇಕಿದ್ದ ಹಣದ ವಸೂಲಿಗೆ ಚೇತನ್ ಹಾಗೂ ಸ್ನೇಹಿತರು ಆತನ ಮನೆಯ ಬಳಿಗೆ ಹೋಗಿದ್ದಾಗ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸತ್ಯನಾರಾಯಣ ದೊಣ್ಣೆಯಿಂದ ಚೇತನ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಅದೇ ದೊಣ್ಣೆಯನ್ನು ಚೇತನ್‍ನ ಸ್ನೇಹಿತ ಜ್ವಾಲೇಂದ್ರ ಎಂಬಾತ ಕಸಿದುಕೊಂಡು ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಸತ್ಯನಾರಾಯಣ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆತ ಸಾವಿಗೀಡಾಗಿದ್ದಾನೆ.

    ಪೊಲೀಸರು (Police) ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕೆರೆಗೆ ಧುಮುಕಿದ ಕಾರು- ಓರ್ವ ಪಾರು, ಇಬ್ಬರು ನೀರುಪಾಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಡು ರಸ್ತೆಯಲ್ಲೇ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

    ನಡು ರಸ್ತೆಯಲ್ಲೇ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

    ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಪತ್ನಿಗೆ (Wife) ಚಾಕು ಇರಿದು ಹತ್ಯೆಗೈದು (Murder) ಬಳಿಕ ಪೊಲೀಸರಿಗೆ ಶರಣಾದ ಘಟನೆ ಗೌರಿಬಿದನೂರಿನ (Gauribidanur) ಅಲಕಾಪುರದಲ್ಲಿ ನಡೆದಿದೆ.

    ಶಹನಾಜ್ ಕೊಲೆಯಾದ ದುರ್ದೈವಿ, ಕೊಲೆಗೈದ ಆರೋಪಿಯನ್ನು ಅಂಜುಂ ಖಾನ್ ಎಂದು ಗುರುತಿಸಲಾಗಿದೆ. ಆರೋಪಿ ಲಾರಿ ಚಾಲಕನಾಗಿದ್ದು ಆತ ಮನೆಯಲ್ಲಿ ಇಲ್ಲದಿರುವಾಗ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆಗಾಗ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಸಂಚು ರೂಪಿಸಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಚಾಟಿಂಗ್ ವಿಚಾರದಲ್ಲಿ ಗಲಾಟೆ – ಯುವತಿ ಅನುಮಾನಾಸ್ಪದ ಸಾವು

    ಆರೋಪಿ ಪತ್ನಿಯನ್ನು ಗ್ರಾಮದ ಹೊರ ವಲಯಕ್ಕೆ ಕರೆದೊಯ್ದು ಚಾಕು ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಮೃತ ದೇಹವನ್ನು ನಡು ರಸ್ತೆಯಲ್ಲೇ ಬಿಟ್ಟು ಗೌರಿಬಿದನೂರು ಗ್ರಾಮಾಂತರ ಪೊಲೀಸ್ (Police) ಠಾಣೆಗೆ ಬಂದು ಶರಣಾಗಿದ್ದಾನೆ. ವಿಚಾರಣೆ ವೇಳೆ ಪೊಲೀಸರ ಬಳಿ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕೊಲೆಗೈದಿರುವುದಾಗಿ ಆರೋಪಿ ತಿಳಿಸಿದ್ದಾನೆ.

    ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗೌರಿಬಿದನೂರು ಪೊಲೀಸರು ಆ ಠಾಣೆ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬ್ರೆಜಿಲ್‍ನಲ್ಲಿ ವಿಮಾನ ಪತನ – 14 ಮಂದಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ನದಿಗೆ ಹಾರಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

    ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ನದಿಗೆ ಹಾರಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನದಿಗೆ ಹಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ (SSLC Student) ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ನಡೆದಿದೆ.

    ಗೌರಿಬಿದನೂರು ನಗರದ ಸುಮಂಗಲಿ ಬಡಾವಣೆ ನಿವಾಸಿ ವಿಂಧ್ಯಶ್ರೀ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಗೌರಿಬಿದನೂರು ನಗರದ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಸಹ ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು.

    ತಡರಾತ್ರಿ ಆಟವಾಡುತ್ತಿದ್ದ ಮಗಳಿಗೆ ಓದುವಂತೆ ತಾಯಿ ಬುದ್ಧಿವಾದ ಹೇಳಿದ್ದು, ಇಲ್ಲವಾದರೆ ಮನೆ ಬಿಟ್ಟು ಹೋಗುವಂತೆ ತಾಕೀತು ಮಾಡಿದ್ದರು. ಇದೇ ಮಾತನ್ನು ಬಹಳ ಗಂಭೀರವಾಗಿ ತೆಗೆದುಕೊಂಡ ವಿಂಧ್ಯಶ್ರೀ ಸೀದಾ ಮನೆಯಿಂದ ಹೊರ ಹೋಗಿ ಗೌರಿಬಿದನೂರು ನಗರದ ಬೈಪಾಸ್ ರಸ್ತೆಯ ಉತ್ತರಪಿನಾಕಿನ ನದಿಯ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್ – ಸಹಾಯಕ್ಕೆ ಬಂದ ಇಬ್ಬರು ಸಾವು

    ಇತ್ತ ತಡರಾತ್ರಿ ಮಗಳಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಆಕೆಯ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆ ನಿರಾಕರಿಸಿದ್ದಕ್ಕೆ ರಾಡ್‌ನಿಂದ ಹೊಡೆದು ಪ್ರೇಯಸಿಯನ್ನು ಕೊಂದ ಪ್ರಿಯಕರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರರದ್ದೇ ನಿರ್ಣಾಯಕ ಪಾತ್ರ – ಈ ಬಾರಿ ಶಿವಶಂಕರ ರೆಡ್ಡಿ ಗೆಲ್ತಾರಾ?

    ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರರದ್ದೇ ನಿರ್ಣಾಯಕ ಪಾತ್ರ – ಈ ಬಾರಿ ಶಿವಶಂಕರ ರೆಡ್ಡಿ ಗೆಲ್ತಾರಾ?

    ಚಿಕ್ಕಬಳ್ಳಾಪುರ: ಗೌರಿಬಿದನೂರು ವಿಧಾನಸಭಾ ಕ್ಷೇತ್ರ (Gauribidanur Assembly Constituency) ಖಂಡಿತವಾಗಿ ಈ ಹಿಂದಿನಂತಿಲ್ಲ. ಪ್ರಬಲ ಮೂರು ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಪಕ್ಷೇತರ ಅಭ್ಯರ್ಥಿಗಳ ಪಾತ್ರವೇ ನಿರ್ಣಾಯಕವಾಗಲಿದ್ದು ಪ್ರಬಲ ಪೈಪೋಟಿ ನೀಡುವ ಸುಳಿವು ನೀಡಿದ್ದಾರೆ.

    ಕೆಎಚ್‌ಪಿ ಫೌಂಡೇಷನ್ ಮೂಲಕ ಉದ್ಯಮಿ ಪುಟ್ಟಸ್ವಾಮಿಗೌಡ (Puttaswamy Gowda) ಈ ಬಾರಿ ಪ್ರಬಲ ಪೈಪೋಟಿಯಲ್ಲಿದ್ದಾರೆ. ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಗೌರಿಬಿದನೂರಿಗೆ ಎಂಟ್ರಿ ಕೊಟ್ಟ ಉದ್ಯಮಿ ಪುಟ್ಟಸ್ವಾಮಿ ಗೌಡರಿಗೆ ಕಾರಣಾಂತರಗಳಿಂದ ರಾಜಕೀಯ ಇಚ್ಚೆ ಇಲ್ಲದಿದ್ದರೂ ಈಗ ಧುಮುಕಿದ್ದಾರೆ.

    ಸುತ್ತಲೂ ರೆಡ್ಡಿಗಳ ವಿರೋಧ ಬಣದವರನ್ನು ಜೊತೆಯಲ್ಲಿಟ್ಟುಕೊಂಡು ರಾಜಕಾರಣಕ್ಕೆ ಇಳಿದಿರುವ ಪುಟ್ಟಸ್ವಾಮಿಗೌಡ, ಶತಾಯಗತಾಯ ಈ ಬಾರಿ ಗೌರಿಬಿದನೂರಿನಲ್ಲೇ ತಾವೇ ಶಾಸಕರಾಗಬೇಕು ಅಂತ ಟೊಂಕ ಕಟ್ಟಿ ನಿಂತು ಹಗಲು ರಾತ್ರಿ ಅನ್ನದೇ ಚುನಾವಣಾ ತಯಾರಿಗಳನ್ನು ಮಾಡಿಕೊಂಡಿದ್ದಾರೆ.

    ಕೊರೊನಾ ಕಾಲದಲ್ಲಿ ಪುಡ್ ಕಿಟ್, ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ, ಉಚಿತ ಬಸ್ ಪಾಸ್ ಸೌಲಭ್ಯ, ಸಾಮೂಹಿಕ ವಿವಾಹ ಕಾರ್ಯಕ್ರಮಗಳು, ಶ್ರೀನಿವಾಸ ಕಲ್ಯಾಣೋತ್ಸವ, ಗೌರಿ ಗಣೇಶ ಹಬ್ಬಕ್ಕೆ ಮನೆ ಮನೆಗೆ ಭೇಟಿ ನೀಡಿ ಸೀರೆ-ಪಂಚೆ- ಅಂತ ಉಡುಗೊರೆ, ಈಗ ಯುಗಾದಿ ಹಬ್ಬಕ್ಕೆ ಹಳ್ಳಿ ಹಳ್ಳಿಗೂ ಹೋಗಿ ಡೈನಿಂಗ್ ಪಾತ್ರೆ ಸೆಟ್ ಕೊಟ್ಟು ಮತಯಾಚನೆ ಮಾಡುತ್ತಿದ್ದಾರೆ.

    ಈ ನಡುವೆಯೇ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿರುವ ಕೆಂಪರಾಜು ಸಹ ನಾನೇನು ಕಡಿಮೆ ಇಲ್ಲ ಎಂಬಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಮನೆ ಮನೆಗೆ ತೆರಳಿ ಮತಯಾಚನೆ ಮಾಡ್ತಿದ್ದಾರೆ. ಕುಕ್ಕರ್ ಕೊಟ್ಟು ವೋಟ್ ಕೇಳ್ತಿದ್ದು, ಕೈ ಮುಗಿದು ಕಾಲಿಗೆ ಬಿದ್ದು ಈ ಬಾರಿ ನಾನೇ ಶಾಸಕ ಅಂತ ವಿಶ್ವಾಸದ ಮಾತಗಳನ್ನಾಡಿಕೊಳ್ತಿದ್ದಾರೆ.

    ಕಾಂಗ್ರೆಸ್‌ ಭದ್ರಕೋಟೆ:
    ಗೌರಿಬಿದನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ (Congress) ಭದ್ರಕೋಟೆಯಾಗಿದ್ದು ಇದಕ್ಕೆ ಕಾರಣ ಶಿವಶಂಕರ ರೆಡ್ಡಿ. ತಮ್ಮ ರಾಜಕೀಯ ಗುರು ಅಶ್ವತ್ಥನಾರಾಯಣರೆಡ್ಡಿ ವಿರುದ್ದವೇ ಗುಡುಗಿ ಪಕ್ಷೇತರರಾಗಿ ಕಣಕ್ಕಿಳಿದ್ದು ಗೆದ್ದು ಬೀಗಿದ್ದ ಶಿವಶಂಕರ ರೆಡ್ಡಿ (Shivashnkar Reddy) ತದನಂತರ ಕಾಂಗ್ರೆಸ್ ಸೇರ್ಪಡೆಯಾಗಿ ಅಂದಿನಿಂದ ಇದುವರೆಗೂ ಸುದೀರ್ಘ 5 ಬಾರಿ 24 ವರ್ಷಗಳ ಕಾಲ ಶಾಸಕರಾಗಿ ಮುಂದುವರೆದಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದ ಇವರು ಹಣದ ರಾಜಕಾರಣಕ್ಕಿಂತ ಅಭಿವೃದ್ದಿಯೇ ರಾಜಕಾರಣವೇ ಮುಖ್ಯ ಅಂತ ನಂಬಿಕೆ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಹಣ ಖರ್ಚು ಮಾಡದೇ ಗೆದ್ದು ಬೀಗುತ್ತಿದ್ದ ಶಿವಶಂಕರರೆಡ್ಡಿಯವರಿಗೆ ಈ ಬಾರಿ ಪಕ್ಷೇತರರ ಹಣದ ಹೊಳೆ ಮುಂದೆ ಎದುರಿಸೋದು ಸಹ ಚಿಂತೆಯಾಗಿ ಕಾಡಲು ಶುರುವಾಗಿದೆ.

    ಏನೇ ಖರ್ಚು ಮಾಡಿದರೂ ಎಷ್ಟೇ ಅಮಿಷ ಒಡ್ಡಿದರೂ ಹೊರಗಿನವರಿಗೆ ಕ್ಷೇತ್ರದ ಜನ ಮಣೆ ಹಾಕಲ್ಲ ಎಂಬ ಅತೀವ ನಂಬಿಕೆಯನ್ನು ಶಿವಶಂಕರ ರೆಡ್ಡಿ ಹೊಂದಿದ್ದಾರೆ. ಇವೆಲ್ಲದರ ನಡುವೆ ಕ್ಷೇತ್ರದ್ಯಂತ ಪಂಚಾಯತಿ ಮಟ್ಟದಲ್ಲಿ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುತ್ತಾ ಈ ಬಾರಿಯೂ ತಮ್ಮ ಮತ ತನಗೆ, ಕಾಂಗ್ರೆಸ್ ಗೆ ಕೊಡಬೇಕು ಅಂತ ಪ್ರಚಾರ ಸಭೆಗಳನ್ನ ಕೈಗೊಳ್ಳುತ್ತಿದ್ದಾರೆ. ಪಕ್ಷೇತರರ ಮತ ವಿಭಜನೆಯಿಂದ ಈ ಬಾರಿಯೂ ಸುಲಭವಾಗಿ ಗೆಲ್ಲಬಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    ಜೆಡಿಎಸ್ ಅಭ್ಯರ್ಥಿ ಯಾರು?
    ಕ್ಷೇತ್ರದಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಹಾಗೂ ಜನತಾ ಪಾರ್ಟಿ ನಡುವೆಯೇ ರಾಜಕೀಯ ಸಂಘರ್ಷ. ಜನತಾ ಪಾರ್ಟಿಯಿಂದ 1983 ರಲ್ಲಿ ಲಕ್ಷ್ಮೀಪತಿ ಹಾಗೂ 1985ರಲ್ಲಿ ಕಲಾವಿದರಾದ ಮುಖ್ಯಮಂತ್ರಿ ಚಂದ್ರು ಅವರು ಸಹ ಇದೇ ಗೌರಿಬಿದನೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಇತಿಹಾಸವಿದೆ.

    ತದನಂತರ ಜೆಡಿಎಸ್‌ (JDS) ನಿಂದ ರೆಡ್ಡಿಗಳ ಕುಟುಂಬದ ಹೆಣ್ಣು ಮಗಳು ಜ್ಯೋತಿರಡ್ಡಿ ಜೆಡಿಎಸ್‌ನಿಂದ ಶಾಸಕಿಯಾಗಿ ಆಯ್ಕೆಯಾದ ನಿದರ್ಶನವಿದೆ. ಹಾಗಾಗಿ ಕ್ಷೇತ್ರದಲ್ಲಿ ಜೆಡಿಎಸ್ ತನ್ನದೇ ಆದ ವೋಟ್ ಬ್ಯಾಂಕ್, ವರ್ಚಸ್ಸು, ಹಿಡಿತ ಹೊಂದಿದೆ. ಜೊತೆಗೆ ಸಾಧರು ಸಮುದಾಯದ ಅಭ್ಯರ್ಥಿ ಜೆಡ್ ಪಿ ನರಸಿಂಹಮೂರ್ತಿ ಅಂತಲೇ ಫೇಮಸ್ ಆಗಿರುವ ಮಾಜಿ ಸೈನಿಕ ಚಂದನದೂರು ಗ್ರಾಮದ ನರಸಿಂಹಮೂರ್ತಿಯೇ ಈ ಬಾರಿಯೂ ಜೆಡಿಎಸ್ ಅಭ್ಯರ್ಥಿ ಅಂತ ಪಂಚರತ್ನ ಯಾತ್ರೆ ವೇಳೆ ಎಚ್‌ಡಿಕೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಡಿನೋಟಿಫಿಕೇಶನ್‌ ಕೇಸ್‌ – ಅಧಿಕ ರಕ್ತದೊತ್ತಡ ಕಾರಣ ನೀಡಿ ಕೋರ್ಟ್‌ ವಿಚಾರಣೆಗೆ ಎಚ್‌ಡಿಕೆ ಗೈರು

    ಸಮುದಾಯದ ಮತ ಬ್ಯಾಂಕ್, ಕ್ಷೇತ್ರದ ಮೇಲಿನ ಹಿಡಿತ, ಹಳ್ಳಿ ಹಳ್ಳಿಯಲ್ಲೂ ಕಾರ್ಯಕರ್ತರ ಬೆಂಬಲಿತರ ಪಡೆ ಹೊಂದಿರುವ ನರಸಿಂಹಮೂರ್ತಿ ಕಳೆದ ಬಾರಿ ಶಿವಶಂಕರರೆಡ್ಡಿ ತಿರುಗಿ ನೋಡಿಕೊಳ್ಳುವಂತಹ ಫೈಟ್ ನೀಡಿದ್ದರು. 9,168 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದರು. ಸ್ವಲ್ಪ ದುಡ್ಡು ಖರ್ಚು ಮಾಡಿದರೆ ಗೆದ್ದುಬಿಡುತ್ತಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈ ಬಾರಿ ಅದೇ ಫೈಟ್ ಕೊಡ್ತಾರಾ ಎನ್ನುವುದು ಅನುಮಾನ ಮೂಡಿಸಿದೆ. ಕಾರಣ ಪಕ್ಷೇತರರ ಅಬ್ಬರದಿಂದ ಮತಗಳ ವಿಭಜನೆ, ಪ್ರಮುಖವಾಗಿ ಹಣ ಬಲ ಇಲ್ಲದೇ ಇರುವುದು ಜೆಡಿಎಸ್ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.

    ಬಿಜೆಪಿಯಲ್ಲಿ ಅಭ್ಯರ್ಥಿ ಯಾರು?
    ಗೌರಿಬಿದನೂರು ಕ್ಷೇತ್ರದಿಂದ ಬಿಜೆಪಿ (BJP) ಪಕ್ಷದಲ್ಲಿ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಒಂದು ಕಡೆ ಎಚ್.ವಿ.ಶಿವಶಂಕರ್ ಹಾಗೂ ಮತ್ತೊಂದು ಕಡೆ ಮಾನಸ ಸಮೂಹ ಆಸ್ಪತ್ರೆಗಳ ವೈದ್ಯರು ಡಾ.ಎಚ್.ಎಸ್.ಶಶಿಧರ್ ಕುಮಾರ್ ಅವರ ಹೆಸರು ರೇಸ್‍ನಲ್ಲಿದೆ. ಆದರೆ ಯಾರಿಗೆ ಟಿಕೆಟ್ ಸಿಗಲಿದೆ ಎಂಬುದನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸಬೇಕಿದೆ. ಬಿಜೆಪಿಯಲ್ಲಿ ರೆಡ್ಡಿ ಕುಟುಂಬದ ರವಿನಾರಾಯಣರೆಡ್ಡಿ ಪ್ರಭಾವ ಇದ್ದು ಬಿಜೆಪಿ ತನ್ನದೇ ಆದ ಮತಬ್ಯಾಂಕ್‍ನ್ನು ಹೊಂದಿದ್ದು ಈ ಬಾರಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಭರ್ಜರಿ ಪೈಫೋಟಿ ನೀಡುವ ಯತ್ನ ನಡೆಸುತ್ತಿದೆ.

    ಈ ಬಾರಿಯೂ ಜೈಪಾಲ್ ರೆಡ್ಡಿ ಸ್ಪರ್ಧೆ
    ದಶಕಗಳಿಂದ ತಾನು ಕೂಡ ಶಾಸಕನಾಗಬೇಕು ಅಂತ ಹಾಲಿ ಪಕ್ಷೇತರರಿಗಿಂತ ಮೊದಲೇ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿದ್ದ ಜೈಪಾಲ್ ರೆಡ್ಡಿ ಹೆಸರು ಕ್ಷೇತ್ರದಲ್ಲಿ ಚಿರಪರಿಚಿತ. ಬರಗಾಲದ ಸಂದರ್ಭದಲ್ಲಿ ಟ್ಯಾಂಕರ್ ಗಳ ಮೂಲಕ ಉಚಿತವಾಗಿ ನೀರು, ಉಚಿತ ಅನ್ನದಾಸೋಹ ಹಲವು ಸಮಾಜಮುಖಿ ಸೇವೆಗಳ ಜೊತೆಗೆ ಯುವಕರ ಪಡೆ ಹೊಂದಿರುವ ಜೈಪಾಲ್ ರೆಡ್ಡಿ 2013 ರ ಚುನಾವಣೆಯಲ್ಲಿ ಶಿವಶಂಕರೆರಡ್ಡಿಯವರ ಎದುರು ಕೇವಲ 6,075 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಆದರೆ ಸೋತ ನಂತರ ಕ್ಷೇತ್ರದಿಂದ ದೂರವಾಗಿರುವ ಜೈಪಾಲ್ ರೆಡಿ ಎಲೆಕ್ಷನ್ ಹತ್ತಿರ ಬಂದಾಗ ಮತ್ತೆ ಸಕ್ರಿಯವಾಗುತ್ತಾರೆ. ಅದೇ ರೀತಿ ಈ ಬಾರಿಯೂ ಕಳೆದ 2 ತಿಂಗಳ ಹಿಂದೆ ಎಂಟ್ರಿ ಕೊಟ್ಟು ಗೌರಿಬಿದನೂರು ನಗರದಲ್ಲಿ ಪ್ರತಿ ನಿತ್ಯ ನೂರಾರು ಮಂದಿಗೆ ಉಚಿತ ಊಟದ ವ್ಯವಸ್ಥೆ ಮಾಡಿರುವ ಜೈಪಾಲ್ ರೆಡ್ಡಿ ಚುನಾವಣಾ ಪ್ರಚಾರ ನಡೆಸುತ್ತಿಲ್ಲ. ಹಾಗಾಗಿ ಈ ಬಾರಿ ಸ್ಫರ್ಧೆ ಮಾಡುತ್ತಾರಾ ಇಲ್ಲವಾ ಎಂಬ ಗೊಂದಲ ಮನೆ ಮಾಡಿದ್ದು ಸ್ಪಷ್ಟತೆ ಇಲ್ಲವಾಗಿದೆ.

    ಗೌರಿಬಿದನೂರು ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?
    ಒಟ್ಟು ಮತದಾರರು – 2,06,241
    ಪುರುಷರು – 1,02,062
    ಮಹಿಳೆಯರು – 1,04,179

    ಜಾತಿವಾರು ಲೆಕ್ಕಾಚಾರ
    ಎಸ್‌ಸಿ – 30 ಸಾವಿರ, ಎಸ್‌ಟಿ-40 ಸಾವಿರ , ಸಾಧರ ಗೌಡರು-20 ಸಾವಿರ, ರೆಡ್ಡಿ-ಒಕ್ಕಲಿಗ-18 ಸಾವಿರ, ಅಲ್ಪಸಂಖ್ಯಾತರು-8 ಸಾವಿರ, ಬಲಜಿಗರು-17 ಸಾವಿರ, ಕುರುಬರು-25 ಸಾವಿರ, ಇತರೆ 30 ಸಾವಿರ

    ಗೆಲುವಿನ ಅಂತರ ಎಷ್ಟು?
    2008 ಶಿವಶಂಕರರೆಡ್ಡಿ 11,168 ಮತಗಳಿಂದ ಬಿಜೆಪಿಯ ರವಿನಾರಾಯಣರೆಡ್ಡಿ ವಿರುದ್ಧ ಗೆದ್ದಿದ್ದರೆ 2013ರಲ್ಲಿ ಪಕ್ಷೇತರ ಅಭ್ಯರ್ಥಿ ಜೈಪಾಲ್‌ ರೆಡ್ಡಿ ವಿರುದ್ಧ 6,075 ಮತಗಳಿದ್ದ ಗೆದ್ದಿದ್ದರು. 2018ರಲ್ಲಿ ಜೆಡಿಎಸ್‌ನ ಸಿ.ಆರ್.ನರಸಿಂಹಮೂರ್ತಿ ವಿರುದ್ಧ 9,168 ಮತಗಳಿಂದ ಜಯಗಳಿಸಿದ್ದರು.