Tag: Gautam Gambhir

  • ರಾಜಕೀಯದಲ್ಲಿ ಸಿಕ್ಸರ್ ಸಿಡಿಸಿದ ಗಂಭೀರ್

    ರಾಜಕೀಯದಲ್ಲಿ ಸಿಕ್ಸರ್ ಸಿಡಿಸಿದ ಗಂಭೀರ್

    ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಗೆಲುವಿನೊಂದಿಗೆ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ.

    ನವದೆಹಲಿಯ ಪೂರ್ವ ಡೆಲ್ಲಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಗಂಭೀರ್ 3,91,22 ಭಾರೀ ಅಂತರದ ಮತಗಳ ಗೆಲುವು ಪಡೆದಿದ್ದಾರೆ. ಕಳೆದ ತಿಂಗಳಷ್ಟೇ ಬಿಜೆಪಿ ಸೇರಿ ರಾಜಕೀಯ ಪ್ರವೇಶ ಮಾಡಿದ್ದ 37 ವರ್ಷದ ಗಂಭೀರ್, ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಭಾವಿತರಾಗಿ ರಾಜಕೀಯ ಪ್ರವೇಶ ಮಾಡುತ್ತಿರುವುದಾಗಿ ತಿಳಿಸಿದ್ದರು.

    ಗಂಭೀರ್ 6,96,156 ಮತ ಪಡೆದಿದ್ದರೆ, ಆಪ್ ಪಕ್ಷದ ಅತೀಶಿ 2,19,328 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅರವಿಂದ್ 3,04,934 ಮತ ಪಡೆದು 2ನೇ ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿಯಾಗಿದ್ದಾರೆ. ಈ ಮೂಲಕ ಎಎಪಿ ಪಕ್ಷ ಮುಖಭಂಗ ಅನುಭವಿಸಿದೆ. ದೆಹಲಿಯ 7 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಪಡೆದಿದೆ.

    2011 ವಿಶ್ವಕಪ್ ಹಾಗೂ 2007ರ ಟಿ20 ವಿಶ್ವಕಪ್ ತಂಡದ ಸದಸ್ಯರಾಗಿದ್ದ ಗಂಭೀರ್, ಟೀಂ ಇಂಡಿಯಾ ಪರ 58 ಟೆಸ್ಟ್ ಮತ್ತು 147 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೀಂ ಇಂಡಿಯಾ ಪರ ಆರಂಭಿಕರಾಗಿ 15 ವರ್ಷ ಆಡಿದ್ದು, ಪದ್ಮ ಶ್ರೀ ಪ್ರಶಸ್ತಿ ಕೂಡ ಲಭಿಸಿದೆ.

  • ಭಾರತ ಮನೋವೈದ್ಯರ ಬಳಿ ಕರೆದ್ಯೊಯುತ್ತೇನೆ – ಅಫ್ರಿದಿಗೆ ಗಂಭೀರ್ ಟಾಂಗ್

    ಭಾರತ ಮನೋವೈದ್ಯರ ಬಳಿ ಕರೆದ್ಯೊಯುತ್ತೇನೆ – ಅಫ್ರಿದಿಗೆ ಗಂಭೀರ್ ಟಾಂಗ್

    ನವದೆಹಲಿ: ತಮ್ಮ ಆಟೋಬಯೋಗ್ರಾಫಿಯಲ್ಲಿ ತಮ್ಮ ವಿರುದ್ಧ ಕಿಡಿಕಾರಿದ್ದ ಪಾಕಿಸ್ತಾನ ಮಾಜಿ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿಗೆ ಗೌತಮ್ ಗಂಭೀರ್ ತಿರುಗೇಟು ನೀಡಿದ್ದಾರೆ.

    ಅಫ್ರಿದಿಗೆ ಟ್ವಿಟ್ಟರ್ ಖಾತೆಗೆ ಲಿಂಕ್ ಮಾಡಿ ಟ್ವೀಟ್ ಮಾಡಿರುವ ಗಂಭೀರ್, ಅಫ್ರಿದಿ ನೀನೊಬ್ಬ ವಿಚಿತ್ರ ವ್ಯಕ್ತಿ. ವೈದ್ಯಕೀಯ ಕಾರಣಕ್ಕಾಗಿ ನಾವು ಈಗಲೂ ಪಾಕಿಸ್ತಾನಿಯರಿಗೆ ವೀಸಾ ನೀಡುತ್ತಿದ್ದೇವೆ. ನಿನ್ನನ್ನು ನಾನೇ ಸ್ವತಃ ಮನೋತಜ್ಞರ ಬಳಿ ಕರೆದ್ಯೊಯುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಈ ಹಿಂದೆಯೂ ಕೂಡ ಗಂಭೀರ್ ಹಾಗೂ ಅಫ್ರಿದಿ ನಡುವೆ ಹಲವು ಕಿತ್ತಾಟಗಳು ನಡೆದಿದ್ದು, ಕ್ರೀಡಾಂಗಣದ ಹೊರಗು, ಒಳಗೂ ಈ ಜಗಳಕ್ಕೆ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.

    ಅಫ್ರಿದಿ ಹೇಳಿದ್ದೇನು?
    ಇತ್ತೀಚೆಗೆ ತಮ್ಮ ಆಟೋಬಯೋಗ್ರಾಫಿ ಬಿಡುಗಡೆ ಮಾಡಿದ್ದ ಅಫ್ರಿದಿ, ತಮ್ಮ ಪುಸ್ತಕದಲ್ಲಿ ಗಂಭೀರ್ ಬಗ್ಗೆ ಪ್ರಸ್ತಾಪಿಸಿದ್ದರು. ಗೌತಮ್ ಗಂಭೀರ್ ಹಾಗೂ ನನ್ನ ನಡುವೆ ಹಲವು ಜಗಳಗಳು ಆಗಿದ್ದು, ಕೆಲವು ವೃತ್ತಿಗೆ ಸಂಬಂಧಿಸಿದ್ದರೆ ಕೆಲವು ವೈಯಕ್ತಿಕವಾಗಿತ್ತು. ಕ್ರಿಕೆಟಿನಲ್ಲಿ ಗಂಭೀರ್ ಗೌತಮ್ ಯಾವುದೇ ದಾಖಲೆಗಳನ್ನು ಹೊಂದಿಲ್ಲದಿದ್ದರೂ ಅವರಿಗೆ ಆ್ಯಟಿಟ್ಯೂಡ್ ಸಮಸ್ಯೆ ಇದೆ. ಆತ ತನ್ನನ್ನು ತಾನು ಡಾನ್ ಬ್ರಾಡ್ಮನ್, ಜೇಮ್ಸ್ ಬಾಂಡ್ ಮೀರಿಸುವ ಆಟಗಾರ ಎಂದು ತಿಳಿದುಕೊಂಡಿದ್ದಾರೆ ಎಂದಿದ್ದರು. ಅಲ್ಲದೇ 2007 ರಲ್ಲಿ ನಡೆದ ಜಗಳದ ಕುರಿತು ಪ್ರಸ್ತಾಪ ಮಾಡಿ, ಗೌತಮ್ ರನ್ ಓಡುತ್ತಿದ್ದ ವೇಳೆ ನಡೆದ ಘಟನೆ ನನಗೆ ನೆನಪಿದೆ. ಆತ ತನ್ನ ಒಂಟಿ ರನ್ ಪೂರ್ಣಗೊಳಿಸಲು ನನ್ನ ಮೇಲೆಯೇ ನುಗ್ಗಿ ಬಂದ. ಆ ವೇಳೆ ಅಂಪೈರ್ ನಡುವೆ ಬಂದು ತಿಳಿಸಿಗೊಳಿಸಿದ್ದರು ಎಂದು ಬರೆದುಕೊಂಡಿದ್ದರು.

  • ‘ಗಂಭೀರ್ ತನ್ನನ್ನು ತಾನು ಬ್ರಾಡ್ಮನ್, ಜೇಮ್ಸ್ ಬಾಂಡ್ ಅಂದುಕೊಂಡಿದ್ದಾರೆ’: ಅಫ್ರಿದಿ

    ‘ಗಂಭೀರ್ ತನ್ನನ್ನು ತಾನು ಬ್ರಾಡ್ಮನ್, ಜೇಮ್ಸ್ ಬಾಂಡ್ ಅಂದುಕೊಂಡಿದ್ದಾರೆ’: ಅಫ್ರಿದಿ

    ನವದೆಹಲಿ: ಪಾಕಿಸ್ತಾನ ಮಾಜಿ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ ತಮ್ಮ ಆತ್ಮಕಥೆ ‘ಗೇಮ್ ಚೇಂಜರ್’ ಪುಸ್ತಕವನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಬಗ್ಗೆ ಕಿಡಿಕಾರಿದ್ದಾರೆ.

    ಗೌತಮ್ ಗಂಭೀರ್ ಹಾಗೂ ನನ್ನ ನಡುವೆ ಹಲವು ಜಗಳಗಳು ಆಗಿದ್ದು, ಕೆಲವು ವೃತ್ತಿಗೆ ಸಂಬಂಧಿಸಿದ್ದರೆ ಕೆಲವು ವೈಯಕ್ತಿಕವಾಗಿತ್ತು. ಕ್ರಿಕೆಟಿನಲ್ಲಿ ಗಂಭೀರ್ ಗೌತಮ್ ಯಾವುದೇ ದಾಖಲೆಗಳನ್ನು ಹೊಂದಿಲ್ಲದಿದ್ದರೂ ಅವರಿಗೆ ಆ್ಯಟಿಟ್ಯೂಡ್ ಸಮಸ್ಯೆ ಇದೆ. ಆತ ತನ್ನನ್ನು ತಾನು ಡಾನ್ ಬ್ರಾಡ್ಮನ್, ಜೇಮ್ಸ್ ಬಾಂಡ್ ಮೀರಿಸುವ ಆಟಗಾರ ಎಂದು ತಿಳಿದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

    2007 ರಲ್ಲಿ ನಡೆದ ಜಗಳದ ಕುರಿತು ಪ್ರಸ್ತಾಪ ಮಾಡಿರುವ ಅಫ್ರಿದಿ, ಗೌತಮ್ ರನ್ ಓಡುತ್ತಿದ್ದ ವೇಳೆ ನಡೆದ ಘಟನೆ ನನಗೆ ನೆನಪಿದೆ. ಆತ ತನ್ನ ಒಂಟಿ ರನ್ ಪೂರ್ಣಗೊಳಿಸಲು ನನ್ನ ಮೇಲೆಯೇ ನುಗ್ಗಿ ಬಂದ. ಆ ವೇಳೆ ಅಂಪೈರ್ ನಡುವೆ ಬಂದು ತಿಳಿಸಿಗೊಳಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.

    ಇಬ್ಬರ ನಡುವೆ ಸಾಕಷ್ಟು ವಿಚಾರಗಳಿಗೆ ಜಗಳ ಆಗಿದೆ. ಕರಾಚಿಯಲ್ಲಿ ಇಂತಹ ವ್ಯಕ್ತಿಗಳನ್ನು ‘ಉರ್ಕೊಳ್ಳುವವರು’ ಎಂದು ಕರೆಯುತ್ತೇವೆ. ನನಗೆ ಉತ್ತಮ ನಡವಳಿಕೆ ಹೊಂದಿರುವ ವ್ಯಕ್ತಿಗಳನ್ನು ಕಂಡರೆ ಇಷ್ಟ. ಆದರೆ ಗೌತಮ್ ಯಾವಾಗಲು ನೆಗೆಟಿವ್ ಆಗಿರುತ್ತಿದ್ದರು ಎಂದು ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

    ಕ್ರಿಕೆಟ್ ಮಾತ್ರವಲ್ಲದೇ ವೈಯಕ್ತಿಕ ವಿಚಾರದಲ್ಲಿಯೂ ಗಂಭೀರ್ ಹಾಗೂ ಅಫ್ರಿದಿ ನಡುವೆ ಹಲವು ಭಾರೀ ಸಮರ ನಡೆದಿದೆ. ಭಾರತವನ್ನು ಕೆಣಕಿ ಟ್ವಿಟ್ಟರ್ ನಲ್ಲಿ ಕಾಶ್ಮೀರ ಕುರಿತು `ಯುಎನ್’ (ಯುನೈಟೆಡ್ ನೇಷನ್ಸ್ ಅಥವಾ ವಿಶ್ವಸಂಸ್ಥೆ) ಯಾವ ಕಾರ್ಯ ಮಾಡುತ್ತಿದೆ ಎಂದು ಪ್ರಶ್ನಿಸಿ, ಭಾರತ ಸರ್ಕಾರ ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಅದರೂ ವಿಶ್ವಸಂಸ್ಥೆ ಹಾಗೂ ಇತರೇ ಸಂಸ್ಥೆಗಳು ಯಾವುದೇ ಕ್ರಮಕೈಗೊಳ್ಳದೇ ಸುಮ್ಮನೆ ಕುಳಿತಿರುವುದು ಏಕೆ ಎಂದು ಅಫ್ರಿದಿ ಪ್ರಶ್ನಿಸಿದ್ದರು. ಈ ಟ್ವೀಟ್‍ಗೆ ಗಂಭೀರ್ ವ್ಯಂಗ್ಯವಾಡಿ ಟಾಂಗ್ ನೀಡಿದ್ದರು. ಅಫ್ರಿದಿ ಅವರ ಹಿಂದುಳಿದ ನಿಘಂಟಿನಲ್ಲಿ ಯುಎನ್ ಎಂದರೆ `ಅಂಡರ್ ನೈಂಟೀನ್’ ಎಂಬ ಅರ್ಥವನ್ನು ನೀಡುತ್ತದೆ. ಮಾಧ್ಯಮಗಳು ಈ ವಿಷಯದಿಂದ ವಿಶ್ರಾಂತಿ ಪಡೆಯಬಹುದು. ಅಫ್ರಿದಿ ನೋಬಲ್ ನಲ್ಲಿ ಔಟಾದ ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದ್ದರು.

  • ಆಪ್ ಆರೋಪಕ್ಕೆ ಉತ್ತರ ನೀಡಿದ ಗೌತಮ್ ಗಂಭೀರ್

    ಆಪ್ ಆರೋಪಕ್ಕೆ ಉತ್ತರ ನೀಡಿದ ಗೌತಮ್ ಗಂಭೀರ್

    ನವದೆಹಲಿ: ಆಮ್ ಆದ್ಮಿ ಪಾರ್ಟಿಯ ಆರೋಪಕ್ಕೆ ಬಿಜೆಪಿ ಅಭ್ಯರ್ಥಿ, ಕ್ರಿಕೆಟಿಗ ಗೌತಮ್ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. ಗೌತಮ್ ಗಂಭೀರ್ ಎರಡು ಸ್ಥಳಗಳಲ್ಲಿ ವೋಟರ್ ಐಡಿ ಕಾರ್ಡ್ ಹೊಂದಿದ್ದಾರೆಂದು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಆಪ್ ಅಭ್ಯರ್ಥಿಯಾಗಿರುವ ಅತಿಶಿ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

    ಮಾಧ್ಯಮಗಳ ಜೊತೆ ಮಾತನಾಡಿದ ಗೌತಮ್ ಗಂಭೀರ್, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಆಪ್ ಸರ್ಕಾರ ದೆಹಲಿಯಲ್ಲಿ ಯಾವುದೇ ಕೆಲಸವನ್ನು ಮಾಡಿಲ್ಲ. ಹಾಗಾಗಿ ಆಪ್ ಅಭ್ಯರ್ಥಿ ನನ್ನ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಚುನಾವಣಾ ಆಯೋಗ ಪರಿಶೀಲನೆ ನಡೆಸುತ್ತದೆ. ಮತ ಕೇಳಲು ಯಾವುದೇ ವಿಷಯಗಳು ಇಲ್ಲದಿದ್ದಾಗ ಈ ರೀತಿಯ ಆರೋಪಗಳನ್ನು ಮಾಡುತ್ತಾರೆ. ನಕಾರಾತ್ಮಕ ತಂತ್ರಗಳನ್ನು ಬಳಸುವ ಮೂಲಕ ಚುನಾವಣೆಯನ್ನು ಗೆಲ್ಲಲು ಎದುರಾಳಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಖಡಕ್ ಉತ್ತರ ನೀಡಿದ್ದಾರೆ.

    ಗೌತಮ್ ಗಂಭೀರ್ ಬಳಿ ರಾಜೇಂದ್ರ ನಗರ ಮತ್ತು ಕರೋಲ್ ಭಾಗ್ ನಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂಬುವುದು ಅತಿಶಿಯವರ ಆರೋಪವಾಗಿದೆ. ಇತ್ತೀಚೆಗೆ ಪೂರ್ವಾನುಮತಿ ಪಡೆಯದೇ ರೋಡ್ ಶೋ ನಡೆಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿತ್ತು.

  • ಸಂಕಷ್ಟದಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್

    ಸಂಕಷ್ಟದಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್

    ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕ್ರಿಕೆಟಿಗ ಗೌತಮ್ ಗಂಭೀರ್ ಸಂಕಷ್ಟದಲ್ಲಿ ಸಿಲುಕಿದ್ದಾರೆ.

    ಅನುಮತಿ ಪಡೆಯದೆ ಎರಡು ಕಡೆ ರ್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎಫ್‍ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ. ಚುನಾವಣಾ ಅಧಿಕಾರಿಗಳ ಆದೇಶದ ಮೇರೆಗೆ ದೆಹಲಿ ಪೊಲೀಸರು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

    ಇದಕ್ಕೂ ಮೊದಲು ಗೌತಮ್ ಗಂಭೀರ್ ವಿರುದ್ಧ ಪೂರ್ವ ದೆಹಲಿಯ ಆಪ್ ಅಭ್ಯರ್ಥಿ ಅತಿಶಿ ಮಾರಲೇನಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಗಂಭೀರ್ ಎರಡು ಸ್ಥಳಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಕ್ಷನ್ 155(2) ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಬೇಕೆಂದು ಅತಿಶಿ, ಕೋರ್ಟ್ ಮೊರೆ ಹೋಗಿದ್ದರು.

  • ಗಂಭೀರ್ ವಿಕೆಟ್ ಪಡೆಯಲು ಹೋಗಿ ಬೌಲ್ಡ್ ಆದ ಆಪ್!

    ಗಂಭೀರ್ ವಿಕೆಟ್ ಪಡೆಯಲು ಹೋಗಿ ಬೌಲ್ಡ್ ಆದ ಆಪ್!

    ನವದೆಹಲಿ: ರಾಜಕಿಯದ ಪಿಚ್‍ನಲ್ಲಿ ಕ್ರಿಕೆಟಿಗ ಗಂಭೀರ್ ಅವರ ವಿಕೆಟ್ ಪಡೆಯಲು ಯತ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ ಪಕ್ಷ ತಾನೇ ಬೌಲ್ಡ್ ಔಟ್ ಆಗಿದೆ.

    ಕ್ರಿಕೆಟಿಗ ಗೌತಮ್ ಗಂಭೀರ್ ಚುನಾವಣಾ ಆಖಾಡಕ್ಕೆ ಇಳಿಯುತ್ತಿದ್ದಂತೆ ದೆಹಲಿ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಭೀರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

    ಬಿಜೆಪಿ ಅಭ್ಯರ್ಥಿಯಾಗಿರುವ ಗೌತಮ್ ಗಂಭೀರ್ ಸಲ್ಲಿಸಿರುವ ನಾಮಪತ್ರವನ್ನು ಅಸಿಂಧುಗೊಳಿಸಬೇಕೆಂದು ಆಪ್ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿತ್ತು. ಗಂಭೀರ್ ನಾಮಪತ್ರ ಸಲ್ಲಿಸಿದ ದಾಖಲಾತಿಗಳ ನೋಟರಿ ಸ್ಟಾಂಪ್ ಔಟ್ ಡೇಟ್ ಆಗಿದೆ ಎಂದು ಆಪ್ ಆರೋಪಿಸಿತ್ತು.

    ಆಪ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೌತಮ್ ಗಂಭೀರ್ ಪರ ವಕೀಲ, ನೋಟರಿ ಸ್ಟಾಂಪ್ ಸರಿಯಾಗಿದೆ. ಆಪ್ ರೋಟರಿ ರಿಜಿಸ್ಟರ್ ನಂಬರ್ ನೋಡಿ ಆರೋಪ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೊನೆಗೆ ಗಂಭೀರ್ ಉಮೇದುವಾರಿಕೆಯನ್ನು ಚುನಾವಣಾ ಅಧಿಕಾರಿಗಳು ಸ್ವೀಕಾರ ಮಾಡಿದ್ದಾರೆ.

    ಪೂರ್ವ ದೆಹಲಿಯಲ್ಲಿ ಗೌತಮ್ ಗಂಭೀರ್ ಎದುರಾಳಿಯಾಗಿ ಆಪ್ ನಿಂದ ಅತಿಶ್ ಮರ್ಲೆನಾ ಕಣಕ್ಕಿಳಿದಿದ್ದಾರೆ. ಗೌತಮ್ ಗಂಭೀರ್ ಉಮೇದುವಾರಿಕೆಯಲ್ಲಿ 12 ಕೋಟಿ ರೂ. ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಮಾತನಾಡಿದ್ದ ಗೌತಮ್ ಗಂಭೀರ್, ನಾನು ತುಂಬಾ ಉತ್ಸುಕನಾಗಿದ್ದು, ದೇಶಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ. ದೇಶಕ್ಕಾಗಿ ಒಳ್ಳೆಯದನ್ನು ಮಾಡುವದಕ್ಕಾಗಿ ಬಿಜೆಪಿ ಸೇರಿದ್ದೇನೆ ಎಂದು ಹೇಳಿದ್ದರು.

  • ಅಂಬಟಿ ರಾಯುಡು ನೋವನ್ನು ನಾನು ಅನುಭವಿಸಿದ್ದೇನೆ: ಗಂಭೀರ್

    ಅಂಬಟಿ ರಾಯುಡು ನೋವನ್ನು ನಾನು ಅನುಭವಿಸಿದ್ದೇನೆ: ಗಂಭೀರ್

    ನವದೆಹಲಿ: ವಿಶ್ವಕಪ್ ಕ್ರಿಕೆಟ್ ತಂಡಕ್ಕೆ ಅಂಬಟಿ ರಾಯುಡು ಅವರನ್ನು ಆಯ್ಕೆ ಮಾಡದಿರುವುದು ತನಗೆ ತೀವ್ರ ನೋವುಂಟು ಮಾಡಿದ್ದು, ನಾನು ಇಂತಹದ್ದೇ ನೋವನ್ನು ಅನುಭವಿಸಿದ್ದೇನೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

    ಕಳೆದ ವರ್ಷ ರಾಯುಡು ಉತ್ತಮವಾಗಿ ಆಡಿದ್ದು, ನಾಯಕ ವಿರಾಟ್ ಕೊಹ್ಲಿ ಕೂಡ ರಾಯುಡು ಆಯ್ಕೆಯನ್ನು ಪರಿಗಣಿಸುವುದಾಗಿ ತಿಳಿಸಿದ್ದರು. ಆದರೆ ಅಚ್ಚರಿ ರೀತಿ ಎಂಬಂತೆ ರಾಯುಡರನ್ನ ಈ ಬಾರಿ ಕೈ ಬಿಡಲಾಗಿತ್ತು.

    ಟೀಂ ಇಂಡಿಯಾಗೆ ಆಯ್ಕೆ ಆಗದ ದೆಹಲಿ ಆಟಗಾರ ಪಂತ್ ಅವರಿಗಿಂತಲೂ ರಾಯುಡು ಆಯ್ಕೆ ಆಗದಿರುವುದು ನೋವು ನೀಡಿದೆ. 33 ವರ್ಷದ ರಾಯುಡು 47ರ ಬ್ಯಾಟಿಂಗ್ ಸರಾಸರಿಯಲ್ಲಿ ರನ್ ಗಳಿಸಿದ ಆಟಗಾರರನ್ನು ಕೈ ಬಿಡಲಾಗಿದೆ. ಆಯ್ಕೆ ಸಮಿತಿ ಮಾಡಿದ ಎಲ್ಲಾ ತೀರ್ಮಾನಗಳಿಗಿಂತ ಇದು ಹೆಚ್ಚು ನೋವು ನೀಡಿದೆ ಎಂದಿದ್ದಾರೆ. ಇದನ್ನು ಓದಿ: ವಿಶ್ವಕಪ್ ವೀಕ್ಷಣೆಗೆ ಈಗಷ್ಟೇ 3ಡಿ ಕನ್ನಡಕ ಆರ್ಡರ್ ಮಾಡಿದ್ದೇನೆ: ರಾಯುಡು ವ್ಯಂಗ್ಯ

    2007 ರಲ್ಲಿ ನನಗೂ ಇದೇ ರೀತಿ ನಡೆದಿತ್ತು. ವಿಶ್ವಕಪ್ ಆಡುವುದು ಪ್ರತಿ ಆಟಗಾರನ ಕನಸಾಗಿರುತ್ತದೆ. ಇಂತಹ ಕನಸು ನನಸು ಆಗದಿದ್ದರೆ ಎಷ್ಟು ನೋವಾಗುತ್ತದೆ ಎಂದು ನನಗೆ ತಿಳಿದಿದೆ. ಸದ್ಯ ಟೆಸ್ಟ್ ನಲ್ಲಿ ರಾಯುಡು ಆಡುತ್ತಿಲ್ಲ. ಆದರೆ ಆಯ್ಕೆ ಸಮಿತಿಯಲ್ಲಿ ರಿಷಬ್ ಪಂತ್ ಆಯ್ಕೆ ಮಾಡದಿರುವುದು ದೊಡ್ಡ ವಿಚಾರವಲ್ಲ. ಪಂತ್ ಯುವ ಆಟಗಾರರ ಆಗಿರುವುದರಿಂದ ಮತ್ತಷ್ಟು ಅವಕಾಶ ಪಡೆಯಬಹುದು. ಕಾರ್ತಿಕ್ ಆಯ್ಕೆ ಉತ್ತಮವಾದರೂ ಸಂಜು ಸ್ಯಾಮ್ಸನ್ ಆಯ್ಕೆ ಆಗಿದ್ದರೆ ಅತ್ಯುತ್ತಮ ಆಗುತಿತ್ತು ಎಂದು ತಿಳಿಸಿದ್ದಾರೆ.

  • 2014ರ ಅಲೆ ಈಗ ಸುನಾಮಿಯಾಗಿದ್ದು, ಕೊಚ್ಚಿ ಹೋಗಲಿದ್ದಾರೆ: ಮುಫ್ತಿಗೆ ಗಂಭೀರ್ ಟಾಂಗ್

    2014ರ ಅಲೆ ಈಗ ಸುನಾಮಿಯಾಗಿದ್ದು, ಕೊಚ್ಚಿ ಹೋಗಲಿದ್ದಾರೆ: ಮುಫ್ತಿಗೆ ಗಂಭೀರ್ ಟಾಂಗ್

    ನವದೆಹಲಿ: ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಅವರನ್ನು ಟ್ವಿಟ್ಟರಿಲ್ಲಿ ಬ್ಲಾಕ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಗಂಭೀರ್, ಮೆಹಬೂಬಾ ಮುಫ್ತಿ ಅವರಿಗೆ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ಮಾತನಾಡಿದ ಗಂಭೀರ್, ಅವರು ನನ್ನನ್ನು ಬ್ಲಾಕ್ ಮಾಡಿರಬಹುದು. ಆದರೆ ಹೀಗೆ ಮಾಡುತ್ತಾ ಹೋದ್ರೆ ದೇಶದ 130 ಕೋಟಿ ಜನರನ್ನು ಕೂಡ ಬ್ಲಾಕ್ ಮಾಡಬೇಕಾಗುತ್ತದೆ. 2014ದಲ್ಲಿ ದೇಶದಲ್ಲಿ ಒಂದು ಅಲೆ ಸೃಷ್ಟಿಯಾಗಿತ್ತು. ಈಗ ಅದು ಸುನಾಮಿಯಾಗಿ ಪರಿವರ್ತನೆಯಾಗಿದ್ದು ಅದರಲ್ಲಿ ಅವರು ಈಜದೇ ಇದ್ದರೆ ಕೊಚ್ಚಿ ಹೋಗಲಿದ್ದಾರೆ ಎಂದು ಹೇಳಿದ್ದಾರೆ.

    ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಸಂವಿಧಾನದ 370 ವಿಧಿ ಮತ್ತು 35 ಎ ಕಲಂಗಳ ಕುರಿತು ಇಬ್ಬರ ನಡುವೆ ಟ್ವಿಟ್ಟರ್ ನಲ್ಲಿ ಚರ್ಚೆ ನಡೆದಿತ್ತು. ಆ ಬಳಿಕ ಮುಫ್ತಿ ಅವರು ಗಂಭೀರ್ ಅವರನ್ನು ಟ್ವಿಟ್ಟರಿನಲ್ಲಿ ಬ್ಲಾಕ್ ಮಾಡಿದ್ದರು.

    ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ಧತಿ ಕುರಿತು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಆದ ಬಳಿಕ ಮುಫ್ತಿ ಅವರು ಕಿಡಿಕಾರಿದ್ದರು. ಅಲ್ಲದೇ ಜಮ್ಮು ಕಾಶ್ಮೀರದ 370ನೇ ಕಲಂನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಟ್ವೀಟ್‍ಗೆ ಆಲಮ್ ಇಕ್ಬಾಲ್‍ರ ಕವಿತೆಯನ್ನು ಬರೆದುಕೊಂಡಿದ್ದರು.

    ಇತ್ತ ಮುಫ್ತಿ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ್ದ ಗಂಭೀರ್, ಭಾರತ ನಿಮ್ಮಂತೆ ಕಲೆಯಲ್ಲ, ಅದನ್ನು ಅಳಿಸಿಹಾಕಲು ಸಾಧ್ಯವಿಲ್ಲ ಎಂದಿದ್ದರು. ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ್ದ ಮುಫ್ತಿ, ಗಂಭೀರ್ ರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿ ನಿಮ್ಮ ರಾಜಕೀಯ ಇನ್ನಿಂಗ್ಸ್ ಕ್ರಿಕೆಟಿನಷ್ಟು ಗಟ್ಟಿಯಾಗಿಲ್ಲ ಎಂದಿದ್ದರು. ಆ ಬಳಿಕವೂ ಇಬ್ಬರ ನಡುವೆ ಪರಸ್ಪರ ಟೀಕೆಗಳು ವ್ಯಕ್ತವಾಗಿದ್ದವು. ಅಂತಿಮವಾಗಿ ಗಂಭೀರ್ ಅವರ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡುತ್ತಿರುವಾಗಿ ತಿಳಿಸಿದ ಮುಫ್ತಿ ಅವರು ತಮ್ಮನ್ನು ಟ್ರೋಲ್ ಮಾಡಲು ಸಲಹೆ ನೀಡಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ನೀಡಿ ಗೌತಮ್ ಗಂಭೀರ್ ಟಾಂಗ್ ನೀಡಿದ್ದಾರೆ.

  • ಕ್ಯಾಪ್ಟನ್ ಕೊಹ್ಲಿ ಕಲಿಯಬೇಕಾದದ್ದು ಸಾಕಷ್ಟಿದೆ – ಮತ್ತೊಮ್ಮೆ ಗಂಭೀರ್ ಟೀಕೆ

    ಕ್ಯಾಪ್ಟನ್ ಕೊಹ್ಲಿ ಕಲಿಯಬೇಕಾದದ್ದು ಸಾಕಷ್ಟಿದೆ – ಮತ್ತೊಮ್ಮೆ ಗಂಭೀರ್ ಟೀಕೆ

    ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಮತ್ತೊಮ್ಮೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಟೀಕೆ ಮಾಡಿದ್ದು, ಕೊಹ್ಲಿ ನಾಯಕರಾಗಿ ಕಲಿಯುವುದು ಸಾಕಷ್ಟಿದೆ ಎಂದಿದ್ದಾರೆ.

    ಬ್ಯಾಟಿಂಗ್ ವಿಚಾರವಾಗಿ ಕೊಹ್ಲಿ ಮಾಸ್ಟರ್ ಆಗಿದ್ದು, ಆದ್ರೆ ನಾಯಕನಾಗಿ ಕಲಿಯಬೇಕಾದದ್ದು ಸಾಕಷ್ಟಿದೆ. ತಂಡದ ಬೌಲರ್ ಗಳನ್ನು ಹೊಣೆ ಮಾಡುವ ಮುನ್ನ ಕೊಹ್ಲಿ ತಮ್ಮನ್ನು ತಾವೇ ಹೊಣೆ ಮಾಡಿಕೊಳ್ಳಬೇಕಿದೆ ಎಂದು ಸಂದರ್ಶನವೊಂದರಲ್ಲಿ ಗಂಭೀರ್ ಅಭಿಪ್ರಾಯ ಪಟ್ಟಿದ್ದಾರೆ.

    ಈ ಹಿಂದೆಯೂ ಕೊಹ್ಲಿ ನಾಯಕತ್ವದ ಕುರಿತು ಟೀಕೆ ಮಾಡಿದ್ದ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಹ್ಲಿರನ್ನು ನಾಯಕರಾಗಿ ಮುಂದುವರಿಸುತ್ತಿರುವುದು ಅಚ್ಚರಿಯಾಗಿದೆ. ಇದುವರೆಗೂ ಐಪಿಎಲ್ ಟೂರ್ನಿಯನ್ನು ಗೆದ್ದಿಲ್ಲ. ಒಬ್ಬ ನಾಯಕ ತನ್ನ ದಾಖಲೆಗಳಂತೆಯೇ ಉತ್ತಮವಾಗಿರಬೇಕು ಎಂದಿದ್ದರು.

    ಬೆಂಗಳೂರು ತಂಡದ ಹರಾಜಿನ ಸಂದರ್ಭದಿಂದ ಆರಂಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲುಂಡ ಪಂದ್ಯದ ವರೆಗೂ ಆರ್ ಸಿಬಿ ಮಾಡಿದ್ದ ತಪ್ಪುಗಳನ್ನು ವಿವರಿಸಿ ಸಲಹೆ ನೀಡಿದ್ದರು. ಉಳಿದಂತೆ ಗಂಭೀರ್ ನಾಯಕತ್ವದಲ್ಲಿ ಕೋಲ್ಕತ್ತಾ ತಂಡದ ಪರ 2 ಬಾರಿ ಐಪಿಎಲ್ ಟೈಟಲ್ ಗೆದ್ದಿದ್ದರು.

    ಇಂದು ನಡೆಯುತ್ತಿರುವ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಗ್ರೀನ್ ಜರ್ಸಿಯಲ್ಲಿ ಕಣಕ್ಕೆ ಇಳಿದಿದ್ದು, ಪ್ಲಾಸ್ಟಿಕ್ ಮರುಬಳಕೆ ಸೇರಿದಂತೆ ಪರಿಸರ ರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಹಸಿರು ಬಣ್ಣದ ಜರ್ಸಿಯನ್ನು ತೊಟ್ಟು ಕಣಕ್ಕೆ ಇಳಿದಿದ್ದಾರೆ.

  • ಗಂಭೀರ್ ಹೇಳಿಕೆಗೆ ವಿರಾಟ್ ಕೊಹ್ಲಿ ಟಾಂಗ್!

    ಗಂಭೀರ್ ಹೇಳಿಕೆಗೆ ವಿರಾಟ್ ಕೊಹ್ಲಿ ಟಾಂಗ್!

    ನವದೆಹಲಿ: ಐಪಿಎಲ್ ಟೈಟಲ್ ಗೆಲುವಿನ ಬಗ್ಗೆ ತಮ್ಮನ್ನು ವಿಶ್ಲೇಷಣೆ ಮಾಡಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿಕೆಗೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿ ಟಾಂಗ್ ನೀಡಿದ್ದಾರೆ.

    ಕೆಲವರು ಮನೆಯಲ್ಲಿಯೇ ಕೂತು ಕ್ರಿಕೆಟ್ ಬಗ್ಗೆ ತಿಳಿಯದವರಂತೆ ಮಾತನಾಡುತ್ತಾರೆ. ನಾನು ಕೂಡ ಟೈಟಲ್ ಗೆಲ್ಲಬೇಕೆಂದೇ ಬಯಸುತ್ತೇನೆ. ಅದಕ್ಕೆ ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಐಪಿಎಲ್ ಟೈಟಲ್ ಗೆದ್ದ ಮಾತ್ರಕ್ಕೆ ಯಾವುದೇ ಆಟಗಾರನ ಸಾಮಥ್ರ್ಯದ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ. ನನ್ನಿಂದ ಸಾಧ್ಯವಾದಷ್ಟು ಟೈಟಲ್ ಗೆಲುವಿಗೆ ಶ್ರಮಿಸುತ್ತೇನೆ. ಕೆಲವು ಬಾರಿ ಅದು ಸಾಧ್ಯವಾಗುವುದಿಲ್ಲ. ಅಂದ ಮಾತ್ರಕ್ಕೆ ನನ್ನ ಬಗ್ಗೆ ಕೆಲವರು ಹೊರಗಡೆ ಕೂತು ಮಾತನಾಡುತ್ತಿದ್ದಾರೆ ಎಂದು ಗಂಭೀರ್ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ನಮ್ಮ ತಂಡ 6 ಬಾರಿ ಟೂರ್ನಿಯಲ್ಲಿ ಸೆಮಿ ಫೈನಲ್ ವರೆಗೂ ಪ್ರವೇಶ ಮಾಡಿದೆ. ಆದರೆ ಕೆಲ ತಪ್ಪುಗಳಿಂದ ಟೈಟಲ್ ಗೆಲ್ಲುವ ಅವಕಾಶವನ್ನು ಮಿಸ್ ಮಾಡಿತ್ತು. ಆದರೆ ನಾವು ಮತ್ತಷ್ಟು ಸಿದ್ಧತೆ ನಡೆಸಿ ಈ ಹಿಂದಿನ ತಪ್ಪುಗಳು ನಡೆಯದಂತೆ ಮುನ್ನಡೆಯುತ್ತೇವೆ. ಉತ್ತಮ ನಿರ್ಧಾರಗಳನ್ನು ಕೈಗೊಂಡರೆ ಹಿಂದಿನ ಪ್ರದರ್ಶನಕ್ಕಿಂತಲೂ ಉತ್ತಮ ಆಟ ಆಡುತ್ತೆವೆ ಎಂದು ಟೈಟಲ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಗಂಭೀರ್ ಏನ್ ಹೇಳಿದ್ದರು..?
    ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗಂಭೀರ್, ಆರ್ ಸಿಬಿ ಐಪಿಎಲ್ ಟೈಟಲ್ ಗೆಲ್ಲದಿರುವ ಬಗ್ಗೆ ಕೊಹ್ಲಿರನ್ನ ಮಾತ್ರವೇ ಹೊಣೆ ಮಾಡುವುದು ಸರಿ ಅಲ್ಲ. ಧೋನಿ, ರೋಹಿತ್ ಶರ್ಮಾ ತಲಾ 3 ಬಾರಿ ತಂಡವನ್ನು ಟೈಟಲ್ ಗೆಲುವಿನವರೆಗೂ ಕೊಂಡೊಯ್ದಿದ್ದಾರೆ. ಇಂತಹ ಸಂದರ್ಭದಲ್ಲಿ ಕೊಹ್ಲಿರನ್ನು ಅವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ಆದರೆ ಕಳೆದ ಏಳೆಂಟು ವರ್ಷದಿಂದ ಆರ್ ಸಿಬಿ ಕಪ್ ಗೆಲ್ಲದಿದ್ದರು ಕೂಡ ತಂಡದ ಫ್ರಾಂಚೈಸಿ ಕೊಹ್ಲಿರನ್ನೇ ನಾಯಕನಾಗಿ ಮುಂದುವರಿಸುವುದು ಅವರ ಅದೃಷ್ಟ. ಇದಕ್ಕೆ ಕೊಹ್ಲಿ ತಂಡಕ್ಕೆ ಧನ್ಯವಾದ ತಿಳಿಸಬೇಕೆಂದಿದ್ದರು.

    12ನೇ ಅವೃತ್ತಿಯ ಐಪಿಎಲ್ ಟೂರ್ನಿ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಆರ್ ಸಿಬಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.