Tag: Gavaskar

  • ನನ್ನ ಹೆಸರಿಟ್ಟಿದ್ದಕ್ಕೇ ಒಂದೊಂದು ಕಥೆ ಕಟ್ಟಿದ್ದರು ಅಪ್ಪ, ಅಮ್ಮ: ರಾಹುಲ್

    ನನ್ನ ಹೆಸರಿಟ್ಟಿದ್ದಕ್ಕೇ ಒಂದೊಂದು ಕಥೆ ಕಟ್ಟಿದ್ದರು ಅಪ್ಪ, ಅಮ್ಮ: ರಾಹುಲ್

    ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಉಪನಾಯಕನಾಗಿರುವ ಕನ್ನಡಿಗ ಕೆ.ಎಲ್.ರಾಹುಲ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೇ, ಸುಮಾರು ಮೂರು ವರ್ಷ ಕಿಂಗ್ಸ್ ಪಂಜಾಬ್ ತಂಡದ ನಾಯಕನಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸದಾ ಬ್ಯೂಸಿ ಶೆಡ್ಯೂಲ್‌ನಲ್ಲಿರುವ ಕೆ.ಎಲ್.ರಾಹುಲ್ ಬ್ರೇಕ್‌ಫಾಸ್ಟ್ ವಿಥ್ ಚಾಂಪಿಯನ್ಸ್ ಎಂಬ ಟಾಕ್ ಶೋ ನಲ್ಲಿ ತಮ್ಮ ಜೀವನದ ಸಿಹಿ-ಕಹಿ ಅನುಭವಗಳನ್ನು ಹಂಚಿಕೊAಡಿದ್ದಾರೆ. ಕ್ರಿಕೆಟ್ ಜೀವನಕ್ಕೆ ಕಾಲಿಟ್ಟ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಜೀನವದಲ್ಲಿ ನಡೆದ ಇಂಟರೆಸ್ಟಿಂಗ್ ಸಂಗತಿಗಳನ್ನು ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.

    KLR

    ಮಾತನಾಡುತ್ತಾ, ಒಂದೊಮ್ಮೆ ನಾನು ನನ್ನ ಅಮ್ಮನನ್ನು ಕೇಳಿದೆ ನನಗೇಕೆ ರಾಹುಲ್ ಎಂದು ಹೆಸರಿಟ್ಟಿದ್ದು? ಅಂತ, ಅದಕ್ಕೆ ನನ್ನಮ್ಮ ಒಂದು ಕಥೆಯನ್ನೇ ಹೇಳಿಬಿಟ್ಟರು. ಅವರು ಶಾರುಖ್ ಖಾನ್‌ಗೆ ದೊಡ್ಡ ಅಭಿಮಾನಿಯಾಗಿದ್ದರಂತೆ, 90ರ ದಶಕದಲ್ಲಿ ಶಾರುಖ್ ಅವರು ನಟಿಸುವ ಸಿನಿಮಾದ ಪಾತ್ರಗಳಿಗೆಲ್ಲ ರಾಹುಲ್ ಹೆಸರೇ ಬಹುತೇಕವಾಗಿ ಇರುತ್ತಿತ್ತಂತೆ. ಹಾಗಾಗಿ ನನಗೂ ಅದೇ ಹೆಸರು ಇಟ್ಟೆವು ಎಂದು ಹೇಳಿದ್ದರು. ನಾನು ಇದು ವಾಸ್ತವವೇ ಇರಬೇಕೆಂದು ನಂಬಿಕೊಂಡಿದ್ದೆ. ಈ ನಡುವೆ ನನ್ನ ಗೆಳೆಯನೊಬ್ಬ ನನ್ನ ಹೆಸರಿನ ಬಗ್ಗೆ ಕೇಳಿದಾಗ ನಾನೂ ಹೀಗೆ ಹೇಳಿದ್ದೆ. ಅವನು ಸ್ವಲ್ಪ ಶಾರುಖ್ ಖಾನ್ ಸಿನಿಮಾಗಳನ್ನೆಲ್ಲ ನೋಡಿಕೊಂಡಿದ್ದಂತೆ ಕಾಣುತ್ತದೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು

    ತಕ್ಷಣ ರಾಹುಲ್ ಹೆಸರಿನಲ್ಲಿ ಶಾರೂಖ್ ಪಾತ್ರ ಮಾಡಿದ್ದು 1994ರಲ್ಲಿ, ನೀನು ಹುಟ್ಟಿದ್ದು 1992ರಲ್ಲಿ. ಹೀಗಿದ್ದ ಮೇಲೆ ರಾಹುಲ್ ಹೆಸರನ್ನು ನಿನಗೆ ಇಡಲು ಹೇಗೆ ಸಾಧ್ಯವಾಯಿತು? ಎಂದು ಕೇಳಿದ. ನನಗೂ ಅದು ಹೌದೆಂದು ಖಾತ್ರಿಯಾಯಿತು. ಮತ್ತೆ ಅಮ್ಮನಿಗೊಮ್ಮೆ ಕೇಳಿದೆ. ಅದಕ್ಕವರು ಏನೋ ಇರಬಹುದು, ಅದಕ್ಕೆಲ್ಲ ಈಗ ಯಾರು ತಲೆಕೆಡಿಸಿಕೊಳ್ಳುತ್ತಾರೆ? ಎಂದುಬಿಟ್ಟರು. ಇನ್ನು ನಮ್ಮಪ್ಪನಿಗೆ ಕೇಳಿದ್ದಕ್ಕೆ ಅವರು ಇನ್ನೊಂದು ಬ್ರಹ್ಮಾಂಡ ಕಥೆಯನ್ನೇ ಹೇಳಿದರು. ಅವರು ಸುನಿಲ್ ಗಾವಸ್ಕರ್ ಅಭಿಮಾನಿಯಾಗಿದ್ದರಂತೆ. ಗಾವಸ್ಕರ್ ತಮ್ಮ ಪುತ್ರನಿಗೆ ರೋಹನ್ ಎಂದು ಹೆಸರಿಟ್ಟಿದ್ದರು. ಆದ್ದರಿಂದ ನನಗೂ ಅದೇ ಹೆಸರನ್ನಿಡಲು ಅಪ್ಪ ಬಯಸಿದ್ದರಂತೆ. ಆದರೆ ಅವರು ರೋಹನ್ ಹೆಸರನ್ನು ರಾಹುಲ್ ಎಂದು ತಪ್ಪುತಿಳಿದು ಹಾಗೆಯೇ ಇಟ್ಟುಬಿಟ್ಟರಂತೆ ಎಂದು ಮುಗುಳ್ನಕ್ಕರು.

    KL RAhul

    ವಿಜ್ಞಾನ ತೆಗೆದುಕೊಂಡರೆ ಕ್ರಿಕೆಟ್ ಆಡಲು ಕಷ್ಟ
    ನನ್ನ ತಂದೆ-ತಾಯಿ ವೃತ್ತಿಯಲ್ಲಿ ಪ್ರೊಫೆಸರ್. ಸಾಲದ್ದಕ್ಕೆ ಕುಟುಂಬದಲ್ಲಿ ಯಾರನ್ನೇ ನೋಡಿದರೂ ಒಂದು ವೈದ್ಯರು, ಇಲ್ಲವೇ ಎಂಜಿನಿಯರ್‌ಗಳಾಗಿದ್ದರು ಅಥವಾ ದೊಡ್ಡದೊಡ್ಡ ಉದ್ಯೋಗದಲ್ಲಿದ್ದರು. ನಾನು ಸಹ 10ನೇ ತರಗತಿಯವರೆಗೆ ಉತ್ತಮ ವಿದ್ಯಾರ್ಥಿಯೇ ಆಗಿದ್ದೆ. ಅದು ಮುಗಿದ ಕೂಡಲೇ ಮುಂದಿನ ಶಿಕ್ಷಣಕ್ಕೆ ವಿಜ್ಞಾನವೋ, ವಾಣಿಜ್ಯವೋ ಎಂಬ ಗೊಂದಲ ಶುರುವಾಗಿತ್ತು. ನನ್ನ ಕುಟುಂಬದಲ್ಲಿ ಯಾರೂ, ಎಂದೂ ವಾಣಿಜ್ಯಶಾಸ್ತ್ರ  ತೆಗೆದು ಕೊಂಡಿರಲಿಲ್ಲ. ಆ ವಿಷಯ ತೆಗೆದುಕೊಂಡರೆ ಅವಮಾನವೆಂಬಂತೆ ಅವರು ಭಾವಿಸಿದ್ದರು. ಆದರೆ ನಾನು ಮಾತ್ರ ವಿಜ್ಞಾನ ತೆಗೆದುಕೊಂಡು ಜೊತೆಜೊತೆಗೇ ಕ್ರಿಕೆಟ್ ಆಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಅವರು ಅದನ್ನು ಅರ್ಥ ಮಾಡಿಕೊಂಡರು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: IPL ಮೊದಲ ಪಂದ್ಯದಲ್ಲೇ ವಿಲಿಯಮ್ಸನ್‌ಗೆ 12 ಲಕ್ಷ ದಂಡ: ಕಾರಣ ಇಷ್ಟೇ… 

    rahul

    ಅಮ್ಮ ಈಗಲೂ ಬೈಯುತ್ತಾರೆ
    ನನ್ನಮ್ಮ ಈಗಲೂ ನೀನು ಪದವಿ ಪೂರೈಸಿಲ್ಲ ಎಂದು ಬೈಯ್ಯುತ್ತಾರೆ. ಲಾಕ್‌ಡೌನ್ ಆಗಿದ್ದಾಗಲೂ ನಿನೇಕೆ ಪಟ್ಟು ಹಿಡಿದು ಓದಬಾರದು? 30 ವಿಷಯ ಓದು ಮುಗಿಸಲು ಏನು ಕಷ್ಟ? ಎಂದು ಗರಿದ್ದರು. ಅದಕ್ಕೆ ನಾನು, ಅಮ್ಮ ನಾನು ಕ್ರಿಕೆಟ್ ಆಡುತ್ತಿದ್ದೇನೆ, ಪ್ರದರ್ಶನ ಚೆನ್ನಾಗಿಯೇ ಇದೆ. ಈಗ ನಾನು 30 ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಬರೀಬೇಕಾ? ವಿದ್ಯೆ ನನಗೆ ಅತ್ತುತ್ತಿಲ್ಲ ಏನು ಮಾಡಲಿ ಹೇಳು? ಎಂದು ಪ್ರಶ್ನಿಸಿದ್ದೆ. ಸಹಜವಾಗಿಯೇ ಹೌದೆಂದುಬಿಟ್ಟರು ಅಮ್ಮ. ನಾನು ಭಾರತ ಕ್ರಿಕೆಟ್ ತಂಡಕ್ಕೆ ಸೇರಿದಾಗಲೂ ಅಮ್ಮನಿಗೆ ಹೆಚ್ಚೆನು ಖುಷಿಯಿರಲಿಲ್ಲ. ಅದಾದ 4 ವರ್ಷ ನಾನು ಕ್ರಿಕೆಟ್ ಆಡಿ ಹೆಸರು ಮಾಡಿದ್ದೆ. ಆಮೇಲೆ ನನಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (RBI) ಕೆಲಸ ಸಿಕ್ಕಿತು. ನನಗೆ ಕೇಂದ್ರ ಸರ್ಕಾರದ ನೌಕರಿ ಸಿಕ್ಕಿದ್ದಾಗ ಅವರು ಬಹಳ ಖುಷಿಪಟ್ಟಿದ್ದರು. ಪರ್ವಾಗಿಲ್ಲ ಇನ್ನು ನಿನಗೆ ಒಳ್ಳೆಯ ಸಂಬಳ ಸಿಗುತ್ತದೆ, ಜೀವನದಲ್ಲಿ ಒಂದು ನೆಲೆ ಕಂಡುಕೊಂಡೆ ಎಂಬಂತಿತ್ತು ಅವರ ಭಾವ ಎಂದು ಭಾವುಕರಾದರು.

     

  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

    ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

    ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

    ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆ ಕಂಡುಬಂದರೆ, ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು ಭಾಗ ಮಂಜಿನಿಂದ ಮುಚ್ಚಿಕೊಂಡಿದ್ದು, ಭಾರೀ ಮಳೆಯಿಂದಾಗಿ ತುಂಗಾ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

    ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದರು.

  • ಗಮನಿಸಿ, ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆ!

    ಗಮನಿಸಿ, ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆ!

    ಬೆಂಗಳೂರು: ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಮುಂದಾಗಿದ್ದಾನೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈಗಾಗಲೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ ಮತ್ತು ಬೆಂಗಳೂರು ಸೇರಿದಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಗಾಳಿ ಸಮೇತ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ಥವಾಗಿತ್ತು. ಅನೇಕ ಕಡೆಗಳಲ್ಲಿ ಮರಗಳು, ವಿದ್ಯುತ್ ಕಂಬ ಧರೆಗುರುಳಿದ್ದು, ಮನೆಗಳ ಗೋಡೆಗಳು ಕುಸಿದು ಬಿದ್ದವು. ಅಷ್ಟೇ ಅಲ್ಲದೇ ಕೆಲವು ಸೇತುವೆಗಳು ಬಿರುಕು ಕಂಡಿದ್ದು, ಬಂಟ್ವಾಳ ಮತ್ತು ಮಂಗಳೂರು ಸಂಪರ್ಕ ಕಲ್ಪಿಸುವ ಫಲ್ಗುಣಿ ಸೇತುವೆ ಕುಸಿದು ಬಿದ್ದಿತ್ತು.

  • ಅಬ್ಬರಿಸಿದ ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ – ನೆಲಕ್ಕುರುಳಿದ ಮರಗಳು, ನೀರು ತುಂಬಿದ ಬಸ್ ಸ್ಟ್ಯಾಂಡ್

    ಅಬ್ಬರಿಸಿದ ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ – ನೆಲಕ್ಕುರುಳಿದ ಮರಗಳು, ನೀರು ತುಂಬಿದ ಬಸ್ ಸ್ಟ್ಯಾಂಡ್

    ಬೆಂಗಳೂರು: ಬೆಂಗಳೂರಿನ ಹಲವೆಡೆ ಮಂಗಳವಾರ ಮಧ್ಯಾಹ್ನ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರು ಪರದಾಡಿದ್ದಾರೆ.

    ರಾಜಾಜಿನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಯಶವಂತಪುರ, ಗೊರಗುಂಟೆಪಾಳ್ಯ, ಜಾಲಹಳ್ಳಿ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ಸರ್ಕಲ್ ಮಾರಮ್ಮ ಮತ್ತು ಟಾಟಾ ಇನ್ಸ್ ಸ್ಟಿಟ್ಯೂಟ್ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆದ ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ. ಅಷ್ಟೇ ಅಲ್ಲದೇ ರಾಮಯ್ಯ ಕಾಲೇಜು ಮುಂಭಾಗ ಕಾರಿನ ಮೇಲೆ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಲ್ಲೇಶ್ವರಂ 10ನೇ ಕ್ರಾಸ್, ಮಹಾಲಕ್ಷ್ಮಿ ಲೇಔಟ್, ಸದಾಶಿವ ನಗರ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ಮರಗಳು ಬಿದ್ದಿವೆ. ಮೇಖ್ರಿ ಸರ್ಕಲ್, ಮತ್ತು ಎಸ್‍ಎಸ್‍ಎಲ್‍ಸಿ ಬೋರ್ಡ್ ಮುಂಭಾಗ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿದೆ. ಪರಿಣಾಮ ಪ್ಯಾಲೆಸ್ ಗ್ರೌಂಡ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಶವಂತಪುರ ಬಸ್ ಸ್ಟ್ಯಾಂಡ್ ತುಂಬಾ ನೀರು ತುಂಬಿ ಪ್ರಯಾಣಿಕರು ಪರದಾಡುವಂತಾಗಿತ್ತು.

    ಇನ್ನೂ ರಾಮಯ್ಯ ಆಸ್ಪತ್ರೆ ಮುಂದೆ ಪಾರ್ಕಿಂಗ್ ಲಾಟ್ ನಲ್ಲಿದ್ದ ಕಾರು, ಬೈಕ್ ಗಳ ಮೇಲೆ ಮರ ಉರುಳಿದೆ. ಕೂಡಲೇ ಸಾರ್ವಜನಿಕರು ಕಾರಿನಲ್ಲಿದ್ದ ಚಾಲಕನನ್ನ ರಕ್ಷಣೆ ಮಾಡಿದ್ದಾರೆ. ಮರ ಬಿದ್ದ ರಭಸಕ್ಕೆ ಒಲಾ ಕಾರು ಮತ್ತು ಟಿವಿಎಸ್ ಬೈಕ್ ಜಖಂ ಆಗಿದೆ. ಆದರೆ ಮರ ಬಿದ್ದು ಅರ್ಧ ಗಂಟೆ ಆಗಿದ್ದರೂ ಸ್ಥಳಕ್ಕೆ ಬಿಬಿಎಂಪಿ ಸಿಬ್ಬಂದಿ ಬಂದಿರಲಿಲ್ಲ.

    ಪೂರ್ವ ಮುಂಗಾರಿನಲ್ಲಿ ಸಮಯದಲ್ಲಿ ರಾಜ್ಯಾದ್ಯಂತ ಭಾರೀ ಗುಡುಗು ಗಾಳಿ ಸಹಿತ ಆಗಾಗ ಮಳೆಯಾಗುವುದು ಸಹಜ. ಮೇ ತಿಂಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ ಮುಂದುವರೆಯಲಿದೆ. ಮೋಡಗಳ ಸಾಲು ನಿರ್ಮಾಣವಾಗಿರುವ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಹೆಚ್ಚು ಮಳೆಯಾಗುತ್ತಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ವಿಜ್ಞಾನಿ ಗವಾಸ್ಕರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.