Tag: Gavigangadhara Temple

  • ಆಪರೇಷನ್ ಸಿಂಧೂರ ಯಶಸ್ವಿ – ಸೇನೆಯ ಒಳಿತಿಗಾಗಿ ಬೆಂಗಳೂರಿನ ದೇವಾಲಯಗಳಲ್ಲಿ ವಿಶೇಷ ಪೂಜೆ

    ಆಪರೇಷನ್ ಸಿಂಧೂರ ಯಶಸ್ವಿ – ಸೇನೆಯ ಒಳಿತಿಗಾಗಿ ಬೆಂಗಳೂರಿನ ದೇವಾಲಯಗಳಲ್ಲಿ ವಿಶೇಷ ಪೂಜೆ

    – ಗವಿಗಂಗಾಧರ ದೇವಾಲಯದಲ್ಲಿ ವಿಶೇಷ ದುರ್ಗಾ ಹೋಮ

    ಬೆಂಗಳೂರು: ಭಾರತೀಯ ಸೇನೆಯು ಬುಧವಾರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ಯಶಸ್ವಿಯಾಗಿದೆ. ಆಪರೇಷನ್ ಸಿಂಧೂರ ಯಶಸ್ವಿ ದಾಳಿ ಹಿನ್ನೆಲೆ ಬೆಂಗಳೂರಿನ ದೇವಾಲಯಗಳಲ್ಲಿ ಸೇನೆಗೆ ಒಳಿತಾಗಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

    ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆ ಮುಜರಾಯಿ ಇಲಾಖೆಯಡಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಯೋಧರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಕೆಗೆ ಆದೇಶ ನೀಡಲಾಗಿತ್ತು. ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರ ದೇವಾಲಯದಲ್ಲಿ ಸೈನ್ಯದ ಬಲವರ್ಧನೆಗೆ ಸೋಮಸುಂದರ್ ದೀಕ್ಷಿತ್‌ರ ನೇತೃತ್ವದಲ್ಲಿ ವಿಶೇಷ ದುರ್ಗಾ ಹೋಮ ಮಾಡಲಾಯಿತು. ಇದನ್ನೂ ಓದಿ: ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

    ನಾಡಿಗೆ, ನಮ್ಮನ್ನ ರಕ್ಷಿಸುವ ಸೈನ್ಯಕ್ಕೆ ಬಲ ನೀಡು ತಾಯಿ ಎಂದು ದುರ್ಗಾ ಹೋಮ ಮಾಡಲಾಗಿದ್ದು, ದುರ್ಗಾ ಹೋಮದ ಜೊತೆಗೆ ವಿಶೇಷ ಪೂಜೆಗೆ ಸಿದ್ಧತೆ ನಡೆಸಲಾಗಿದೆ. ಈ ವೇಳೆ ಶತ್ರುಗಳ ಸಂಹಾರದ ಜೊತೆಗೆ ಸೈನಿಕರ ಶಕ್ತಿಗಾಗಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಉಗ್ರರು ಅಮಾಯಕರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಆಗಲ್ಲ – ಆಪರೇಷನ್‌ ಸಿಂಧೂರ ಬೆಂಬಲಿಸಿದ ಇಸ್ರೇಲ್‌

    ಸೇನೆಯ ಒಳಿತಿಗಾಗಿ ಮಾಡಲಾದ ಪೂಜೆ, ಹೋಮ ಹವನಗಳ ಕುರಿತು ಗವಿಗಂಗಾಧರ ದೇವಾಲಯದ ಪ್ರಧಾನ ಅರ್ಚಕ ಶ್ರೀ ಸೋಮಸುಂದರ್ ದೀಕ್ಷಿತ್ ಮಾತನಾಡಿದರು, ಶತ್ರು ಸಂಹಾರಕ್ಕಾಗಿ ದುರ್ಗಾ ಹೋಮ ಮಾಡಲಾಗುತ್ತಿದೆ. ಸೈನ್ಯಕ್ಕೆ ಬಲ ಸಿಗಲಿ. ಉಗ್ರರ ಸಂಹಾರ ಆಗಲಿ ಎಂದು ಹೋಮ ಮಾಡಲಾಗುತ್ತಿದೆ. ನಾವು ಹಣೆಗೆ ತಿಲಕ ಸಿಂಧೂರ ಹಚ್ಚುತ್ತೇವೆ. ನಮ್ಮ ಹೆಣ್ಣುಮಕ್ಕಳ ಸಿಂಧೂರ ತೆಗೆಯಲು ಬಂದವರನ್ನು, ನಾಶ ಮಾಡಲು ಬಂದವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಅವರು ಮಹಾಸಂಹಾರಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Operation Sindoor | ಭಾರತದ ದಾಳಿಯಲ್ಲಿ 31 ಮಂದಿ ಹತ್ಯೆ, 46 ಮಂದಿಗೆ ಗಾಯ – ಹೊಣೆ ಹೊತ್ತ ಪಾಕ್‌ ಸೇನೆ

    ಯುದ್ಧ ಕಾಲದಿಂದಲೂ ದುರ್ಗಾ ಹೋಮ ಮಾಡುತ್ತಾ ಬಂದಿದ್ದೇವೆ. ಇಂದು ಸಹ ಹೋಮ ಮಾಡಿ ಶತ್ರು ಸಂಹಾರವಾಗಲಿ ಎಂದು ಪ್ರಾರ್ಥನೆ ಮಾಡಲಾಗಿದೆ. ಅವರು 26 ಜನರ ಸಾಯಿಸಿದ್ದಾರೆ. ಪ್ರಧಾನಿ ಮೋದಿಯವರು ಅದಕ್ಕೆ ತಕ್ಕಂತೆ ಸಿಂಧೂರದ ಹೆಸರಿಂದ ದಾಳಿ ಮಾಡಿದ್ದಾರೆ. ದಸರಾ ನವರಾತ್ರಿಯಲ್ಲಿ ಉಪವಾಸ ಪೂಜೆ ಮಾಡ್ತಾರೆ. ದುರ್ಗಾ ದೇವಿ ಕೃಪೆಯಿಂದ ಶತ್ರುಗಳ ನಾಶ ಮಾಡಲು ಈ ಹೋಮ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

    ಅಲ್ಲದೇ ಮಲ್ಲೇಶ್ವರಂನ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ದೇವರಿಗೆ ಅಭಿಷೇಕ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಶಾಂತಿ ನೆಲೆಸಲಿ ಎಂದು ರುದ್ರಪಾರಾಯಣ ಪೂಜೆ ಸಹ ಮಾಡಲಾಗಿದೆ. ಆಪರೇಷನ್ ಸಿಂಧೂರವು ಯಶಸ್ವಿಯಾದ ಬೆನ್ನಲ್ಲೇ ಭಾರತಕ್ಕೆ ಮತ್ತಷ್ಟು ಯಶಸ್ಸು ಸಿಗಲಿ ಎಂದು ವಿಶೇಷ ಹೋಮ ಮಾಡಲಾಗಿದ್ದು, ಇಂದು ಮಧ್ಯಾಹ್ನದವರೆಗೂ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ.

    ಬೆಂಗಳೂರಿನ ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಯೋಧರ ಹಾಗೂ ದೇಶದ ಒಳಿತಿಗಾಗಿ ಪೂಜೆ ಸಲ್ಲಿಸಲಾಗಿದೆ. ಹಾಗೆಯೇ ಇಂದು ಬೆಳಗ್ಗೆ ಬನಶಂಕರಿ ದೇವಸ್ಥಾನದಲ್ಲಿ ದೇಶ ಕಾಯೋ ಸೈನಿಕರ ಆರೋಗ್ಯಕ್ಕಾಗಿ ವಿಶೇಷ ಪೂಜೆ ಮಾಡಲಾಯಿತು.

  • ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಾನ- ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ʼಭಾಸ್ಕರʼ

    ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಾನ- ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ʼಭಾಸ್ಕರʼ

    ಬೆಂಗಳೂರು: ಇಂದು ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ (Makar Sankranti)ಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅಂತೆಯೇ ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ (Gavi Gangadhareshwara Temple) ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಿದೆ.

    ಹೌದು. ಪ್ರಕೃತಿಯ ವಿಸ್ಮಯಕ್ಕೆ ಸನ್ನಿಧಾನ ಸಾಕ್ಷಿಯಾಗಿದ್ದು, ಸಂಜೆ 5.25ಕ್ಕೆ ಸರಿಯಾಗಿ ಗವಿಗಂಗಾಧರೇಶ್ವರನಿಗೆ ಸೂರ್ಯದೇವ  ಸ್ಪರ್ಶಿಸಿದ. ಈ ವಿದ್ಯಾಮಾನ ಕಣ್ತುಂಬಿಕೊಳ್ಳಲು ಭಕ್ತಗಣ ಸಾಕ್ಷಿಯಾಯಿತು. ಇದನ್ನೂ ಓದಿ: ಅಯೋಧ್ಯೆಯಲ್ಲಿ ನಾಳೆಯಿಂದ್ಲೇ ಪೂರ್ವಭಾವಿ ಪೂಜೆಗಳು ಆರಂಭ: ಚಂಪತ್‌ ರೈ

    ಮೊದಲು ದೇವರ ಅಭಿಷೇಕಕ್ಕೆ ಪೂರ್ಣಕುಂಭ ಕಳಸದೊಂದಿಗೆ ದೇವಸ್ಥಾನಕ್ಕೆ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಆಗಮಿಸಿದರು. ಸೂರ್ಯ ರಶ್ಮಿ ಸ್ಪರ್ಶ ವೇಳೆ ಗವಿಗಂಗಾದರೇಶ್ವರನಿಗೆ ಪೂರ್ಣಕುಂಭ ಅಭಿಷೇಕ ಮಾಡಲಾಯಿತು. ಇದೇ ಸಂದರ್ಭದಲ್ಲಿ ದೇವಾಲಯ ಪ್ರವೇಶ ಮಾಡಿದ ಸೂರ್ಯ ರಶ್ಮಿ ಮೊದಲು ನಂದಿಯನ್ನ ಸ್ಪರ್ಶಿಸಿದ. ದಕ್ಷಿಣಯಾನದಿಂದ ಉತ್ತರಯಾನ ಪಥ ಬದಲಾವಣೆ ಮಾಡುತ್ತಿರೋ ಸೂರ್ಯ ಗರ್ಭ ಗುಡಿಯ ಮುಂಭಾಗದಲ್ಲಿರೋ ಸ್ಪಟಿಕ ಲಿಂಗಕ್ಕೆ ಸ್ಪರ್ಶಿಸಿ ನಂತರ ಶಿವಲಿಂಗ ಪೀಠದ ಸ್ಪರ್ಶ ಮಾಡಿದ. ಬಳಿಕ ಸೂರ್ಯದೇವ ಈಶ್ವರನ ಪಾದ ಸ್ಪರ್ಶ ಮಾಡಿದನು. ಲಿಂಗಭಾಗದಲ್ಲಿ 18 ಸೆಕೆಂಡ್‌ಗಳ ಕಾಲ ಸೂರ್ಯರಶ್ಮಿ ಬಿದ್ದಿದೆ.

    ದೇವಸ್ಥಾನದಲ್ಲಿ ಬೆಳಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ  ಓಪನ್‌ ಮಾಡಲಾಗಿತ್ತು. ಭಕ್ತಾದಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಮಾಡಲಾಗಿದೆ. ದೇವರನ್ನ ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನ ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಪ್ರವೇಶವಿರಲಿಲ್ಲ.

    ಗವಿಗಂಗಾಧರೇಶ್ವರ ದೇವಾಲಯವನ್ನು ಇಂದು ಮಧ್ಯಾಹ್ನ 1.45ಕ್ಕೆ ಅರ್ಚಕ ವೃಂದವು ಸಾರ್ವಜನಿಕ ದರ್ಶನಕ್ಕೆ ಬಂದ್ ಮಾಡಿತ್ತು. ಸೂರ್ಯ ರಶ್ಮಿ ಸ್ಪರ್ಶದ ಬಳಿಕ ಪೂಜೆ ಸಲ್ಲಿಕೆ ಮಾಡಿ ಸಂಜೆ 6 ಗಂಟೆ ನಂತರ ಮತ್ತೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದ್ದು, ರಾತ್ರಿ 11 ರವರೆಗೂ ಭಕ್ತರು ದೇವರ ದರ್ಶನ ಪಡೆಯಬಹುದು.

  • ಐತಿಹಾಸಿಕ ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರನ ಸನ್ನಿಧಿ

    ಐತಿಹಾಸಿಕ ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರನ ಸನ್ನಿಧಿ

    ಬೆಂಗಳೂರು: ಇಂದು ಸಂಕ್ರಾತಿಯ ಸುದಿನ. ಉತ್ತರಾಯಣ ಆರಂಭಗೊಳ್ಳುವ ಶುಭ ಘಳಿಗೆ. ಭಾಸ್ಕರ್ ತನ್ನ ಪಥ ಬದಲಿಸೋ ಹಿನ್ನೆಲೆ,ಸೂರ್ಯ ರಶ್ಮಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಲಿದೆ. ಪ್ರತಿವರ್ಷದಂತೆ ಈ ವರ್ಷವೂ, ಮಕರ ಸಂಕ್ರಾಂತಿಯಂದು ಸೂರ್ಯದೇವ, ಪರಶಿವನಿಗೆ ಪೂಜಿಸಲಿದ್ದಾನೆ. ಈ ಐತಿಹಾಸಿಕ ನೆರಳು-ಬೆಳಕಿನಾಟಕ್ಕೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರ ದೇವಾಲಯ ಸಾಕ್ಷಿಯಾಗಲಿದೆ.

    ಇಂದು ಸಂಜೆ 5.14 ರಿಂದ 5.18 ರವಳಗೆ ಸುಮಾರು 30 ಸೆಕೆಂಡ್ ಗಳ ಕಾಲ ಈಶ್ವರನಿಗೆ ಸೂರ್ಯರಶ್ಮಿ ಸ್ಪರ್ಶಿಸಲಿದ್ದು, ಇದು ಅನಾದಿ ಕಾಲದಿಂದಲೂ ನಡೆದು ಬಂದಿರೋ ವೈಶಿಷ್ಟ್ಯವಾಗಿದೆ ಎಂದು ಗವಿಗಂಗಾಧರ ದೇವಾಲಯದ ಪ್ರಧಾನ ಅರ್ಚಕ ಡಾ.ಸೋಮಸುಂದರ್ ದೀಕ್ಷಿತ್ ಹೇಳಿದ್ರು.

    ಈ ಹಿನ್ನೆಲೆ ಗವಿಗಂಗಾಧರ ಸನ್ನಿಧಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಮುಂಜಾನೆಯಿಂದಲೇ ದೇವಾಲಯದಲ್ಲಿ ಶಿವನಿಗೆ ರುದ್ರಾಭಿಷೇಕ ಸೇರಿ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ. ಇನ್ನೂ ಸಂಜೆಯ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ದೇವಸ್ಥಾನದ ಆವರಣದಲ್ಲಿ ಪೆಂಡಲ್ ಹಾಕಿ ಎಲ್‍ಇಡಿ ಟಿವಿ ಅಳವಡಿಸಲಾಗಿದೆ. ಭಕ್ತಾದಿಗಳೆಲ್ಲಾ ಸಹಕರಿಸಿದ್ರೇ ಮೂಲಮೂರ್ತಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

    ಒಂದು ವೇಳೆ ಭಕ್ತಾದಿಗಳು ಸಹಕರಿಸದಿದ್ರೇ ದೇವಸ್ಥಾನ ಕ್ಲೋಸ್ ಮಾಡ್ತೇವೆ. ಸರ್ಕಾರ ಈಗಾಗಲೇ ಹೇಳಿದ್ದಾರೆ ಭಕ್ತಾದಿಗಳಿಗೆ ಒಳಗಡೆ ಬಿಡಬೇಡಿ. ನೂಕು ನುಗ್ಗಲು ಆಗುತ್ತೆ. ಕೊರೋನಾ ಪರಿಸ್ಥಿತಿಗೆ ಅನುಗುಣವಾಗಿ ಈ ಆದೇಶ ಕೊಟ್ಟಿದ್ದಾರೆ. ಆದ್ದರಿಂದ ಭಕ್ತಾದಿಗಳು ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು ಬಂದರೆ ಮೂಲಮೂರ್ತಿಯ ದರ್ಶನಕ್ಕೆ ಅವಕಾಶ ಮಾಡಿಕೊಡ್ತೇವೆ ಅಂತಾ ದೇವಾಲಯದ ಪ್ರಧಾನ ಅರ್ಚಕರಾದ ಸೋಮಸುಂದರ್ ಹೇಳಿದ್ದಾರೆ.