Tag: Gavigangadhareshwara Temple

  • ಮಕರ ಸಂಕ್ರಾಂತಿ – ಪಥ ಬದಲಾವಣೆಗೆ ಮಹಾದೇವನ ಅಪ್ಪಣೆ ಕೇಳುವ ಸೂರ್ಯ!

    ಮಕರ ಸಂಕ್ರಾಂತಿ – ಪಥ ಬದಲಾವಣೆಗೆ ಮಹಾದೇವನ ಅಪ್ಪಣೆ ಕೇಳುವ ಸೂರ್ಯ!

    ಹೊಸ ವರ್ಷದ ಮೊದಲ ಹಬ್ಬ ಸಂಕ್ರಾತಿಯನ್ನು ಹಿಂದೂಗಳು ವಿಶೇಷವಾಗಿ ಆಚರಿಸಲಾಗುತ್ತಾರೆ. ಹಿಂದೂಗಳ ಪ್ರಕಾರ ಸೂರ್ಯ ತನ್ನ ಪಥವನ್ನು ಉತ್ತರದತ್ತ ಬದಲಾಯಿಸುವ ದಿನವಿದು. ಇಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ.

    ಕೆಲವು ದೇವಾಲಯಗಳ ಗರ್ಭಗುಡಿಯಲ್ಲಿರುವ ದೇವರ ಮೂರ್ತಿಗೆ ಸೂರ್ಯ ರಶ್ಮಿಯ ಸ್ಪರ್ಶವಾಗುತ್ತದೆ. ಅದರಂತೆ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನ ಹಾಗೂ ಮಂಡ್ಯದ ಕಾಶಿ ಚಂದ್ರಮೌಳೇಶ್ವರ ದೇವಾಲಯದ ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು ಸೂರ್ಯ ರಶ್ಮಿ ಸ್ಪರ್ಶಿಸುತ್ತದೆ. ಈ ಮೂಲಕ ಪಥ ಬದಲಾವಣೆಗೆ ಸೂರ್ಯ ಮಹಾದೇವನ ಅಪ್ಪಣೆ ಕೇಳುತ್ತಾನೆ.

    ದೃಗ್ ಪಂಚಾಂಗದ ಪ್ರಕಾರ ಜನವರಿ 14ರಂದು ಸೂರ್ಯ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಈ ಪುಣ್ಯಕಾಲ ಜ.15ರವರೆಗೆ ಇರುತ್ತದೆ. ಹೀಗಾಗಿ ಈ ಎರಡು ದಿನ ಮಕರ ಸಂಕ್ರಾಂತಿ ಹಬ್ಬ ಆಚರಿಸುವುದು ಅನಾದಿ ಕಾಲದಿಂದ ನಡೆದುಕೊಂಡು ಬಂದ ವಾಡಿಕೆ. ರೈತರಿಗೂ ಸಂಕ್ರಾಂತಿ ಸಮೃದ್ಧಿಯ ಸಂಕೇತ, ವರ್ಷಪೂರ್ತಿ ಬೆಳೆದ ಬೆಳೆಗಳು ಫಸಲಿಗೆ ಬಂದು ಧಾನ್ಯ ಸಂಗ್ರಹಿಸುವ ಸಮಯದಲ್ಲಿ ಈ ಹಬ್ಬ ಬರುತ್ತದೆ. ರಾಗಿ, ಮುಸುಕಿನ ಜೋಳ, ಅವರೆಕಾಳು ಸೇರಿದಂತೆ ಇತರೆ ಧಾನ್ಯಗಳು ಮನೆ ಸೇರುವ ಸಮಯದಲ್ಲಿ ರೈತರು ಅತ್ಯಂತ ಸಂತಸದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ತಾವು ಬೆಳೆದ ಧಾನ್ಯಗಳನ್ನು ಉಪಯೋಗಿಸಿ, ಸಿಹಿ ಪದಾರ್ಥ ಮಾಡಿ, ದೇವರಿಗೆ ನೈವೇದ್ಯ ನೀಡುವ ಜೊತೆಗೆ ಅಕ್ಕ ಪಕ್ಕದವರಿಗೂ ಹಂಚಿ ಸಂಭ್ರಮಿಸುತ್ತಾರೆ,

    ದೇಗುಲಗಳಲ್ಲಿ ವಿಶೇಷ ಪೂಜೆ
    ಮಕರ ಸಂಕ್ರಾಂತಿಯಂದು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಸಂಕ್ರಮಣದಂದು ದೇವರಿಗೆ ಅಭಿಷೇಕ ಮಾಡಿ, ಸೂರ್ಯ ರಶ್ಮಿ ದೇವಾಲಯ ಪ್ರವೇಶ ಮಾಡುವ ಕಾಲಕ್ಕೆ ಪೂಜೆ, ಮಹಾಮಂಗಳಾರತಿ ಮಾಡಲಾಗುತ್ತದೆ. ಹಲವು ದೇವಾಲಯಗಳಲ್ಲಿ ಈ ರೂಢಿ ಇಂದಿಗೂ ಇದೆ.

    ಗವಿ ಗಂಗಾಧರೇಶ್ವರ ದೇವಸ್ಥಾನ
    ಬೆಂಗಳೂರಿನ ಗವಿಗಂಗಾಧರೇಶ್ವ ದೇವಸ್ಥಾನ ನಗರದ ಅತ್ಯಂತ ಪ್ರಾಚೀನ ದೇವಾಲಯಗಳಲ್ಲಿ ಒಂದಾಗಿದೆ. ಪ್ರತಿವರ್ಷ ಮಕರ ಸಂಕ್ರಮಣದ ದಿನದಂದು ಸೂರ್ಯ ರಶ್ಮಿಯು ಶಿವನ ವಾಹನವಾದ ನಂದಿಯ ಮೇಲೆ ಬೀಳುತ್ತದೆ. ಬಳಿಕ ಗರ್ಭಗುಡಿಯೊಳಗಿನ ಶಿವಲಿಂಗವನ್ನು ಸ್ಪರ್ಶಿಸುತ್ತದೆ. ನಿರ್ದಿಷ್ಟ ಶಿಲೆಯಿಂದ ನಿರ್ಮಿತವಾಗಿರುವ ಈ ದೇವಸ್ಥಾನದ ಗರ್ಭಗೃಹದೊಳಗೆ ವರ್ಷಪೂರ್ತಿ ಸೂರ್ಯನ ಬೆಳಕು ಪ್ರವೇಶಿಸುವುದಿಲ್ಲ. ಆದರೆ ಮಕರ ಸಂಕ್ರಾಂತಿಯಂದು ಮಾತ್ರ ಪ್ರವೇಶಿಸುವಷ್ಟು ನಿಖರವಾಗಿ ಇಲ್ಲಿನ ದೇವಸ್ಥಾನ ನಿರ್ಮಾಣ ಮಾಡಲಾಗಿದೆ.

    ಕಾಶಿ ಚಂದ್ರಮೌಳೇಶ್ವರನಿಗೆ ಪ್ರಥಮ ಸೂರ್ಯ ರಶ್ಮಿ ಸ್ಪರ್ಶ
    ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿರುವ ಕಾಶಿ ಚಂದ್ರಮೌಳೇಶ್ವರನಿಗೆ ಸೂರ್ಯ ರಶ್ಮಿಯ ಸ್ಪರ್ಶವಾಗುತ್ತದೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ದಕ್ಷಿಣ ಕಾವೇರಿ ನದಿ ತೀರದಲ್ಲಿರುವ ಏಕೈಕ ಶಿವನ ದೇವಾಲಯವಾಗಿರುವ ಪುರಾಣ ಪ್ರಸಿದ್ಧ ಕಾಶಿ ಚಂದ್ರಮೌಳೇಶ್ವರ ದೇವಾಲಯದ ಗರ್ಭಗುಡಿಯ ಲಿಂಗದ ಮೇಲೆ ಸೂರ್ಯನ‌ ಪ್ರಥಮ‌ ರಶ್ಮಿ ಕಿರಣಗಳು ಸ್ಪರ್ಶ ಮಾಡುತ್ತವೆ. ಈ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ.

  • ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಸ್ಮಯ – ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶ

    ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಸ್ಮಯ – ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶ

    ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು (Makar Sankranti) ಬಸವನಗುಡಿಯ (Basavanagudi) ಗವಿಗಂಗಾಧರೇಶ್ವರ ದೇವಾಲಯದಲ್ಲಿ (Gavigangadhareshwara Temple) ಸೂರ್ಯ ರಶ್ಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿದ್ದು, ಈ ವಿಸ್ಮಯ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

    ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯವನ್ನು ನೋಡಲು ಭಕ್ತ ಸಾಗರವೇ ನೆರೆದಿರುತ್ತದೆ. ಸೂರ್ಯ ರಶ್ಮಿ ಸಂಜೆ 4.58ಕ್ಕೆ ಗರ್ಭಗುಡಿಯ ನಂದಿಯ ಬೆನ್ನಿನ ಭಾಗವನ್ನು ಸ್ಪರ್ಶಿಸಿದ್ದು, ಬಳಿಕ ನಂದಿಯ ಕೊಂಬುಗಳ ಮಧ್ಯೆ ಹಾದು ಲಿಂಗವನ್ನು ತಲುಪಿದೆ. ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶಿಸುತ್ತಲೇ ಗಂಗಾಧರನಿಗೆ ದೀಪಾರಾಧನೆ ಪ್ರಾರಂಭವಾಗಿದೆ.

    ಇದು 30-40 ಸೆಕೆಂಡುಗಳ ಕಾಲ ಮಾತ್ರವೇ ಕಾಣಿಸಿಕೊಳ್ಳುವ ವಿಸ್ಮಯವಾಗಿದೆ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಪಥ ಬದಲಾಯಿಸುತ್ತಿದ್ದಂತೆ ಗವಿಗಂಗಾಧರೇಶ್ವರನ ಮೇಲೆ ಸೂರ್ಯನ ಕಿರಣಗಳು ಬೀಳುತ್ತದೆ. ಇದನ್ನೂ ಓದಿ: ಯೋಗದಲ್ಲಿ ಕರ್ನಾಟಕ ಗಿನ್ನಿಸ್ ದಾಖಲೆ – ಏಕಕಾಲಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಯೋಗಾಭ್ಯಾಸ

    ಈ ವಿಸ್ಮಯ ಕಣ್ತುಂಬಿಸಿಕೊಳ್ಳಲು ದೇವಸ್ಥಾನದ ಹೊರ ಭಾಗದಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ಟೆಂಟ್, ಶಾಮಿಯಾನದ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿತ್ತು. ಇದನ್ನೂ ಓದಿ: ಈ ತಿಂಗಳಾಂತ್ಯಕ್ಕೆ ಮತ್ತೆ ಅಮಿತ್ ಶಾ ಎಂಟ್ರಿ – ಸಂಕ್ರಾಂತಿ ಬಳಿಕ ಕ್ರಾಂತಿಗೆ ವೇದಿಕೆ ಸಿದ್ಧ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ಸಂಜೆ ಗವಿಗಂಗಾಧರೇಶ್ವರನನ್ನ ಸ್ಪರ್ಶಿಸಲಿದ್ದಾನೆ ಭಾಸ್ಕರ

    ಇಂದು ಸಂಜೆ ಗವಿಗಂಗಾಧರೇಶ್ವರನನ್ನ ಸ್ಪರ್ಶಿಸಲಿದ್ದಾನೆ ಭಾಸ್ಕರ

    ಬೆಂಗಳೂರು : ಇಂದು ಮಕರ ಸಂಕ್ರಾಂತಿಯ ಪುಣ್ಯ ದಿನ. ಇವತ್ತು ಸೂರ್ಯ ತನ್ನ ಪಥ ಬದಲಿಸುವ ಹಿನ್ನೆಲೆ ಗುಟ್ಟಳ್ಳಿಯ ಗವಿಗಂಗಾಧರನನ್ನು ಸೂರ್ಯ ರಶ್ಮಿ ಸ್ಪರ್ಶಿಸಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿ ಹಬ್ಬದ ದಿನ ಸೂರ್ಯನ ರಶ್ಮಿ ಸಂಜೆ 5:23 ರಿಂದ 5:35 ರ ಸಮಯದಲ್ಲಿ ದೇವರನ್ನು ಸ್ಪರ್ಶಿಸಲಿದೆ.

    ಈ ಹಿನ್ನೆಲೆ ಗವಿಗಂಗಾಧರ ದೇವಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ಆರಂಭಗೊಂಡಿದೆ. ಶಿವನಿಗೆ ರುದ್ರಾಭಿಷೇಕ ಸೇರಿ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ.

    ಸಂಜೆ ಸೂರ್ಯ ರಶ್ಮಿ ಬೀಳುವ ಸಮಯದಲ್ಲಿ ದೇವರಿಗೆ ಸತತವಾಗಿ ಕ್ಷೀರಾಭಿಷೇಕ ನಡೆಯಲಿದೆ. ನಂತರ ಸೂರ್ಯರಶ್ಮಿಯಿಂದ ಪುಳಕಿನಾದ ಶಿವನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗುತ್ತದೆ. ಅದೇ ರೀತಿ ದೇವರ ಮೇಲೆ ಹೆಚ್ಚು ಕಾಲ ಸೂರ್ಯ ರಶ್ಮಿ ಉಳಿಯಬಾರದು. ಕಳೆದ ವರ್ಷ ಸೂರ್ಯ ರಶ್ಮಿ 1 ನಿಮಿಷ 3 ಸೆಕೆಂಡುಗಳ ಕಾಲ ದೇವರ ಮೇಲೆ ಇತ್ತು. ಅದರ ಪರಿಣಾಮವಾಗಿ ರಾಜ್ಯದಲ್ಲಿ ಅನೇಕ ದುಷ್ಪರಿಣಾಮಗಳು ಸಂಭವಿಸಿದ್ದವು. ಕಳೆದ ಬಾರಿ ಆದ ಅನಾಹುತಗಳು ಈ ಬಾರಿ ಆಗಬಾರದೆಂದು ಪ್ರಾರ್ಥಿಸುತ್ತೇವೆ ಎಂದು ಪ್ರಧಾನ ಅರ್ಚಕರು ಹೇಳುತ್ತಾರೆ.

    ಅದೇ ರೀತಿ ಭಾಸ್ಕರನಿಂದ ಪುಳಕಿತನಾದ ಶಿವನನ್ನ ಕಣ್ತುಂಬಿಕೊಳ್ಳೋಕೆ ಭಕ್ತ ಸಾಗರವೇ ಕಾತುರದಿಂದ ಕಾಯುತ್ತಿದೆ. ಒಟ್ಟಿನಲ್ಲಿ ಸೂರ್ಯರಶ್ಮಿಯಿಂದ ಪುಳಕಿತನಾದ ಪರಮೇಶ್ವರನನ್ನ ಕಣ್ಣು ತುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಲಿದ್ದಾರೆ.