Tag: Gavimath

  • ವೀಡಿಯೋ ಕಾಲ್ ಮಾಡಿ ಕೋವಿಡ್ ಸೋಂಕಿತರೊಂದಿಗೆ ಮಾತನಾಡಿದ ಗವಿಮಠದ ಶ್ರೀಗಳು

    ವೀಡಿಯೋ ಕಾಲ್ ಮಾಡಿ ಕೋವಿಡ್ ಸೋಂಕಿತರೊಂದಿಗೆ ಮಾತನಾಡಿದ ಗವಿಮಠದ ಶ್ರೀಗಳು

    ಕೊಪ್ಪಳ: ಇತ್ತೀಚೆಗಷ್ಟೇ ಗವಿ ಮಠದ ವೃದ್ಧಾಶ್ರಮದಲ್ಲಿ 100 ಬೆಡ್ ಗಳ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ತೆರದ ಬೆನ್ನಲ್ಲೇ ಇದೀಗ ಶ್ರೀಗಳು ಸ್ವತಃ ವೀಡಿಯೋ ಕಾಲ್ ಮಾಡಿ ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ್ದಾರೆ.

    ನಗರದ ಗವಿ ಮಠದ ವೃದ್ಧಾಶ್ರಮದಲ್ಲಿ 100 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ತೆರಯಲಾಗಿದೆ. ಈ ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಾದ ರೋಗಿಗಳಿಗೆ ವೀಡಿಯೋ ಕಾಲ್ ಮಾಡಿ ಶ್ರೀಗಳು ಮಾತನಾಡಿದ್ದಾರೆ. ಆರೋಗ್ಯ ವಿಚಾರಿಸಿ, ಯಾವುದೇ ರೀತಿಯ ಭಯಪಡದಂತೆ ರೋಗಿಗಳಲ್ಲಿ ಧೈರ್ಯ ತುಂಬಿದ್ದಾರೆ. ಕೋವಿಡ್ ಕೇರ್ ಸೆಂಟರ್ ತೆರೆಯುವುದಲ್ಲದೆ, ಸ್ವತಃ ತಾವೇ ರೋಗಿಗಳಿಗೆ ಕರೆ ಮಾಡಿ ಆರೋಗ್ಯ ವಿಚಾರಿಸುವ ಕಾಳಜಿ ತೋರಿದ್ದಾರೆ. ವೀಡಿಯೋ ಕಾಲ್ ಮೂಲಕ ಧೈರ್ಯ ತುಂಬಿದ ಶ್ರೀಗಳ ಮಾತಿಗೆ ಸೋಂಕಿತರು ಕೈ ಮುಗಿದಿದ್ದಾರೆ.

    ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗುತ್ತಿದ್ದಂತೆ ಐತಿಹಾಸಿಕ ಗವಿಮಠದಿಂದ 100 ಬೆಡ್ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದೆ. ಗವಿ ಮಠದ ಸ್ವಾಮೀಜಿ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ. ಗವಿಮಠದ ವೃದ್ಧಾಶ್ರಮದಲ್ಲಿ 100 ಬೆಡ್‍ಗಳ ಆಸ್ಪತ್ರೆ ತಲೆ ಎತ್ತಿದ್ದು, ಕೊಪ್ಪಳ ಜಿಲ್ಲಾಡಳಿತದ ಮನವಿ ಹಿನ್ನೆಲೆ ಗವಿಸಿದ್ದೇಶ್ವರ ಸ್ವಾಮೀಜಿ 100 ಬೆಡ್‍ಗಳ ಆಸ್ಪತ್ರೆ ನಿರ್ಮಾಣ ಮಾಡಿಸಿದ್ದಾರೆ.

    ಒಟ್ಟು 100 ಹಾಸಿಗೆಯಲ್ಲಿ 70 ಆಕ್ಸಿಜನ್ ಬೆಡ್, 20 ಸಾಮಾನ್ಯ ಬೆಡ್ ಮಾಡಲಾಗಿದ್ದು, ಬಾಕಿ 10 ಬೆಡ್ ನಲ್ಲಿ 6 ಎಚ್‍ಎಫ್‍ಎನ್‍ಸಿ ಬೆಡ್ ಮತ್ತು 4 ವೆಂಟಿಲೇಟರ್ ಬೆಡ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಗವಿಮಠದಿಂದ 100 ಬೆಡ್‍ನ ಕೋವಿಡ್ ಆಸ್ಪತ್ರೆ ಸಿದ್ಧ

    ಗವಿಮಠದಿಂದ 100 ಬೆಡ್‍ನ ಕೋವಿಡ್ ಆಸ್ಪತ್ರೆ ಸಿದ್ಧ

    ಕೊಪ್ಪಳ: ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗುತ್ತಿದ್ದಂತೆ ಐತಿಹಾಸಿಕ ಗವಿಮಠದಿಂದ 100 ಬೆಡ್ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದ್ದು, ಗವಿ ಮಠದ ಸ್ವಾಮೀಜಿ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.

    ಗವಿಮಠದ ವೃದ್ಧಾಶ್ರಮದಲ್ಲಿ 100 ಬೆಡ್‍ಗಳ ಆಸ್ಪತ್ರೆ ತಲೆ ಎತ್ತಿದ್ದು, ಕೊಪ್ಪಳ ಜಿಲ್ಲಾಡಳಿತದ ಮನವಿ ಹಿನ್ನೆಲೆ ಗವಿಸಿದ್ದೇಶ್ವರ ಸ್ವಾಮೀಜಿ 100 ಬೆಡ್‍ಗಳ ಆಸ್ಪತ್ರೆ ನಿರ್ಮಾಣ ಮಾಡಿಸಿದ್ದಾರೆ. ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ಸ್ವಾಮೀಜಿಗೆ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.

    ಒಟ್ಟು 100 ಹಾಸಿಗೆಯಲ್ಲಿ 70 ಆಕ್ಸಿಜನ್ ಬೆಡ್, 20 ಸಾಮಾನ್ಯ ಬೆಡ್ ಮಾಡಲಾಗಿದ್ದು, ಬಾಕಿ 10 ಬೆಡ್ ನಲ್ಲಿ 6 ಎಚ್‍ಎಫ್‍ಎನ್‍ಸಿ ಬೆಡ್ ಮತ್ತು 4 ವೆಂಟಿಲೇಟರ್ ಬೆಡ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • 200 ವರ್ಷಗಳಲ್ಲಿ ಮೊದಲ ಬಾರಿ ಬೆಳಗ್ಗೆ ನಡೆದ ಗವಿಸಿದ್ದೇಶ್ವರ ರಥೋತ್ಸವ

    200 ವರ್ಷಗಳಲ್ಲಿ ಮೊದಲ ಬಾರಿ ಬೆಳಗ್ಗೆ ನಡೆದ ಗವಿಸಿದ್ದೇಶ್ವರ ರಥೋತ್ಸವ

    ಕೊಪ್ಪಳ: 200 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗವಿಸಿದ್ದೇಶ್ವರ ರಥೋತ್ಸವ ಬೆಳಗ್ಗೆ ನಡೆಯಿತು. ಇಂದು ಬೆಳಗ್ಗೆ 8.45 ಕ್ಕೆ ಗವಿಸಿದ್ದೇಶ್ವರ ರಥೋತ್ಸವ ಸಂಪನ್ನವಾಗಿದ್ದು, ಕೊರೊನಾ ಹಿನ್ನೆಲೆ ನೂರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಸಲಾಯಿತು. ಅಲ್ಲದೆ ಈ ಬಾರಿ ಕೇವಲ ಮೂರು ದಿನಕ್ಕೆ ಜಾತ್ರೆಯನ್ನ ಸೀಮಿತ ಮಾಡಲಾಗಿದೆ.

    ಕೊರೊನಾ ಗೆದ್ದ ಕುಷ್ಟಗಿ ತಾಲೂಕಿನ ಬಿಜಕಲ್ ನ ಶಿವಲಿಂಗ ಶಿವಾಚಾರ್ಯರು ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದ ಬೀದಿಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಕೆಲವು ಜನರು ಮಾತ್ರ ರಥೋತ್ಸವ ನೆರವೇರಿಸಿದರು. ಕೊರೊನಾ ಹಿನ್ನೆಲೆ ಜಿಲ್ಲಾಡಳಿತ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೂ ಸರಳವಾಗಿ ಜಾತ್ರೆ ಮಾಡಲಾಗಿದ್ದು, ಕೇವಲ ಮೂರು ದಿನಕ್ಕೆ ಸೀಮಿತಗೊಳಿಸಲಾಗಿದೆ.

    200 ವರ್ಷಗಳಲ್ಲಿ ಇದೇ ಮೊದಲ ಬಾರಿ ಗವಿಸಿದ್ದೇಶ್ವರ ರಥೋತ್ಸವ ಬೆಳಗ್ಗೆ 8.45 ಕ್ಕೆ ನಡೆಯಿತು. ಪ್ರತಿ ವರ್ಷ ಸುಮಾರು ಐದರಿಂದ ಆರು ಲಕ್ಷ ಜನ ಗವಿ ಸಿದ್ದೇಶ್ವರ ಜಾತ್ರೆಗೆ ಸೇರತ್ತಿದ್ದರು. ಈ ಬಾರಿ ಒಂದು ಲಕ್ಷ ಜನ ರಥೋತ್ಸವಕ್ಕೆ ಬಂದಿದ್ದರು. ಆದರೂ ರಥೋತ್ಸವ ಬೀದಿ ಮಾತ್ರ ಖಾಲಿ ಖಾಲಿ ಕಾಣುತ್ತಿತ್ತು.

    ಗವಿಮಠದ ಜಾತ್ರೆ ಕೇವಲ ಜಾತ್ರೆಯಾಗದೆ, ಪ್ರತಿ ವರ್ಷ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿತ್ತು. ಈ ಬಾರಿ ಮೂರೇ ದಿನಕ್ಕೆ ಜಾತ್ರೆ ಸೀಮಿತವಾಗಿದೆ. ಯಾವುದೇ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮ ಇರಲಿಲ್ಲ. ಸರಳವಾಗಿ ಜಾತ್ರೆ ಆಚರಿಸಲಾಗಿದೆ. ಆದರೆ ಗವಿಮಠ ಹೊಸದೊಂದು ಸಂಕಲ್ಪ ಮಾಡಿದ್ದು, ವಿದ್ಯಾರ್ಥಿಗಳಿಗಾಗಿ 24 ಗಂಟೆ ಗ್ರಂಥಾಲಯ ಆರಂಭಿಸಿದೆ. ಜೊತೆಗೆ ಕೊಪ್ಪಳ ತಾಲೂಕಿನ ಗಿಣಗೇರಿ ಕೆರೆಯ ಸ್ವಚ್ಚತಾ ಸಂಕಲ್ಪ ಮಾಡಿದೆ. ಒಂದು ಗ್ರಾಮವನ್ನು ದತ್ತು ಸ್ವೀಕಾರ ಮಾಡಿ ಮಾದರಿ ಗ್ರಾಮ ಮಾಡಲು ಗವಿ ಮಠ ಮುಂದಾಗಿದೆ.

    ದಕ್ಷಿಣ ಭಾರತದ ಕುಂಭಮೇಳ ಎಂದು ಹೆಸರು ವಾಸಿಯಾದ ಗವಿಮಠ ಜಾತ್ರೆ, ಪ್ರತಿ ವರ್ಷ ಸಾಮಾಜಿಕ ಕಳಕಳಿಯಿಂದ ನಾಡಿನಾದ್ಯಂತ ಹೆಸರು ಗಳಿಸಿದೆ. ಇದೀಗ ಹೊಸ ಆಲೋಚನೆಯನ್ನು ಜಾತ್ರೆಯ ದಿನ ಗವಿಮಠದ ಪೀಠಾಧಿಪತಿಗಳು ಸಂಕಲ್ಪ ಮಾಡಿದ್ದಾರೆ. ಇಂದು ನಡೆದ ಗವಿಮಠದ ಜಾತ್ರೆಯಲ್ಲಿ ಸ್ವಾಮೀಜಿಗಳು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ದಂಪತಿ ಹಾಗೂ ಜಿಲ್ಲೆಯ ಜನ ಪ್ರತಿನಿಧಿಗಳು ಭಾಗಿಯಾಗಿದ್ದರು. ಜನ ದೂರದಿಂದಲೇ ನಿಂತು ರಥೋತ್ಸವಕ್ಕೆ ಹೂ, ಹಣ್ಣು ಎಸೆದು ಭಕ್ತಿ, ಭಾವ ಮೆರೆದರು.